Tempo Accident: ಸೀಮಂತಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿ; ಮಹಿಳೆ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ - Vistara News

ಪ್ರಮುಖ ಸುದ್ದಿ

Tempo Accident: ಸೀಮಂತಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿ; ಮಹಿಳೆ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

Tempo Accident: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಸಮೀಪದ ಚಿನ್ನಿಕಟ್ಟೆ ಬಳಿ ಅಪಘಾತ ನಡೆದಿದೆ.

VISTARANEWS.COM


on

Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಸೀಮಂತಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿಯಾಗಿ ಮಹಿಳೆ ಮೃತಪಟ್ಟು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿಕಾರಿಪುರ ಸಮೀಪದ ಚಿನ್ನಿಕಟ್ಟೆ ಬಳಿ ನಡೆದಿದೆ. ಶಿವಮೊಗ್ಗದಿಂದ ಸಿಮಂತಕ್ಕೆಂದು ಕೊಡಮಗ್ಗಿಗೆ ತೆರಳುತ್ತಿದ್ದ ವೇಳೆ ವಾಹನ ಪಲ್ಟಿಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸ್ಥಳದಲ್ಲೇ ಮೃತಪಟಿದ್ದು, ಗಾಯಾಳುಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Bantwal News: ಗುಡ್ಡದಲ್ಲಿ ಬೆಂಕಿ ನಂದಿಸಲು ಹೋದ ವೃದ್ಧ ದಂಪತಿ ಸಜೀವ ದಹನ

ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಬಿದ್ದು ಮಗು ಸಾವು

ಶಿವಮೊಗ್ಗ: ಪಾರ್ಕ್‌ನಲ್ಲಿ ಸಿಮೆಂಟ್ ಜಿಂಕೆ ಮುರಿದು ಬಿದ್ದು ಮಗು ಮೃತಪಟ್ಟಿರುವ ಘಟನೆ ಶಿವಮೊಗ್ಗದ ಮುದ್ದಿನಕೊಪ್ಪದಲ್ಲಿರುವ ಟ್ರೀ ಪಾರ್ಕ್‌ನಲ್ಲಿ ನಡೆದಿದೆ. ಸಮೀಕ್ಷಾ (6) ಮೃತ ದುರ್ದೈವಿ.

ಭಾನುವಾರವಾಗಿದ್ದರಿಂದ ಆಟವಾಡಲು ಪಾರ್ಕ್‌ಗೆ ಪೋಷಕರ ಜತೆ ಮಗು ತೆರಳಿತ್ತು. ಸಿಮೆಂಟ್‌ ಜಿಂಕೆ ಮೇಲೆ ಕುಳಿತಿದ್ದಾಗ, ಅದು ಮುರಿದು ಬಿದ್ದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡು ಮಗು ಮೃತಪಟ್ಟಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ಯಾಸ್ ಸೋರಿಕೆಯಾಗಿ ಸ್ಫೋಟ; ನಾಲ್ವರಿಗೆ ಗಂಭೀರ ಗಾಯ

ಬೆಳಗಾವಿ: ಗ್ಯಾಸ್ ಸೋರಿಕೆಯಾಗಿ ಸ್ಫೋಟವಾಗಿದ್ದರಿಂದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಬಸವನ ಗಲ್ಲಿಯಲ್ಲಿ ನಡೆದಿದೆ. ಗ್ಯಾಸ್‌ ಸೋರಿಕೆಯಾಗಿರುವುದು ಗೊತ್ತಾಗದೆ ಮಹಿಳೆ ಟೀ ಮಾಡಲು, ಲೈಟರ್ ಆನ್ ಮಾಡುತ್ತಿದ್ದಂತೆ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಲಲಿತಾ ಭಟ್, ಮೋಹನ್ ಭಟ್, ಕಮಲಾಕ್ಷಿ ಭಟ್, ಹೇಮಂತ್ ಭಟ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಬಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Speaker Election: ಲೋಕಸಭೆ ಸ್ಪೀಕರ್ ಚುನಾವಣೆ ಇಂದು; ಆಡಳಿತ ಪಕ್ಷ-ಪ್ರತಿಪಕ್ಷ ಬಲಾಬಲ ಹೀಗಿದೆ

Lok Sabha Speaker Election: ಇಂದು ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ. ಎನ್‌ಡಿಎಯ ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ ಮಧ್ಯೆ ತೀವ್ರ ಪೈಪೋಟಿ ಕಂಡು ಬಂದಿದೆ. ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‌ ತನ್ನ ಸಂಸದರಿಗೆ ವಿಪ್‌ ಜಾರಿ ಮಾಡಿ ಹಾಜರಿರುವಂತೆ ಸೂಚಿಸಿದೆ.

VISTARANEWS.COM


on

Lok Sabha Speaker Election
Koo

ನವದೆಹಲಿ: ನರೇಂದ್ರ ಮೋದಿ (Narendra Modi) ನೇತೃತ್ವದ ಎನ್‌ಡಿಎ 3.0 ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕದ ಮೊದಲ ಅಧಿವೇಶನ (Parliament Session 2024) ಆರಂಭವಾಗಲಿದೆ. ಈಗಾಗಲೇ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದು, ಇಂದು ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ (Lok Sabha Speaker Election). ಎನ್‌ಡಿಎಯಿಂದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಮಂಗಳವಾರ ಲೋಕಸಭಾ ಸ್ಪೀಕರ್ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಬಲಾಬಲ ಹೀಗಿದೆ

ಲೋಕಸಭೆಯಲ್ಲಿ ಬಿಜೆಪಿ ಈಗಾಗಲೇ ತನ್ನದೇ ಸಂಸದರಿಂದ 240 ಮತಗಳನ್ನು ಮತ್ತು ಎನ್‌ಡಿಎ ಪಾಲುದಾರ ಪಕ್ಷಗಳಿಂದ 63 ಮತಗಳನ್ನು ಹೊಂದಿದೆ. ಇದರಲ್ಲಿ ಚಂದ್ರಬಾಬು ನಾಯ್ಡು ಅವರ ಟಿಡಿಪಿಯ 16 ಸಂಸದರು ಮತ್ತು ಪವನ್ ಕಲ್ಯಾಣ್‌ ಅವರ ಜನಸೇನಾ ಪಕ್ಷದ 2 ಸಂಸದರು ಸೇರಿಕೊಂಡಿದ್ದಾರೆ. ಒಟ್ಟು 293 ಸಂಖ್ಯಾಬಲವಿದೆ. ಹೆಚ್ಚುವರಿಯಾಗಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಬಿಜೆಪಿ ಅಭ್ಯರ್ಥಿ ಓಂ ಬಿರ್ಲಾ ಅವರನ್ನು ಬೆಂಬಲಿಸಲಿದೆ ಎನ್ನಲಾಗಿದ್ದು, ಅವರ 4 ಸಂಸದರ ಬಲ ಸೇರಿಸಿದರೆ ಎನ್‌ಡಿಎಗೆ ಒಟ್ಟು 297 ಮತ ದೊರೆಯಲಿದೆ. ಸ್ಥಳೀಯವಾಗಿ ವಿರೋಧ ಇರುವ ಹೊರತಾಗಿಯೂ ಬಿರ್ಲಾ ಅವರನ್ನು ಬೆಂಬಲಿಸಲು ವೈಎಸ್​ಆರ್​ ನಿರ್ಧರಿಸಿದೆ.

ಇನ್ನು ಪ್ರತಿಪಕ್ಷಗಳ ಇಂಡಿ ಬಣ ಲೋಕಸಭೆಯಲ್ಲಿ 232 ಸಂಸದರನ್ನು ಹೊಂದಿದೆ. ಈ ಪೈಕಿ 7 ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ. ಹೀಗಾಗಿ ಅವರಿಗೆ ವೋಟಿಂಗ್‌ ಮಾಡುವ ಅಧಿಕಾರವಿಲ್ಲ. ಇದರಲ್ಲಿ ಕಾಂಗ್ರೆಸ್‌ ಐವರು ಮತ್ತು ತೃಣಮೂಲ ಕಾಂಗ್ರೆಸ್‌ ಇಬ್ಬರು ಸೇರಿದ್ದಾರೆ. ಜತೆಗೆ ಕೆಲವು ಸ್ವತಂತ್ರ ಅಭ್ಯರ್ಥಿಗಳೂ ಪ್ರಮಾಣ ವಚನ ಸ್ವೀಕರಿಸಿಲ್ಲ. ಈ ಕೆಲವು ನಾಯಕರ ಪ್ರಮಾಣ ವಚನ ಸ್ವೀಕಾರ ಏಕೆ ಬಾಕಿ ಉಳಿದಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಅರ್ಹತೆ ಹೊಂದಿರುವ ಸಂಸದರ ಸಂಖ್ಯೆಯನ್ನು ಆಧರಿಸಿ ವೋಟಿಂಗ್‌ ನಡೆಯಲಿದೆ. ಹೀಗಾಗಿ ಬಹುಮತಕ್ಕೆ 269 ಮತಗಳ ಅಗತ್ಯವಿದೆ.

ಶಾಕ್‌ ಕೊಟ್ಟ ಟಿಎಂಸಿ

ಈ ನಡುವೆ ಇಂಡಿ ಬಣ ಅಭ್ಯರ್ಥಿಯಾಗಿ ಕೆ.ಸುರೇಶ್ ಅವರನ್ನು ಆಯ್ಕೆ ಮಾಡುವ ಮುನ್ನ ತಮ್ಮ ಬಳಿ ಸಮಾಲೋಚನೆಯನ್ನೇ ನಡೆಸಿಲ್ಲ ಎಂದು ಟಿಎಂಸಿ ಆರೋಪಿಸಿದೆ. ಕೆ. ಸುರೇಶ್ ಅವರನ್ನು ಇಂಡಿ ಬಣ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ. ದುರದೃಷ್ಟವಶಾತ್ ಇದು ಏಕಪಕ್ಷೀಯ ನಿರ್ಧಾರ ಎಂದು ಟಿಎಂಸಿ ಹೇಳಿದೆ. ಹೀಗಾಗಿ ಟಿಎಂಸಿ ನಡೆ ಕುತೂಹಲ ಮೂಡಿಸಿದೆ.

ಇಂದು ಬೆಳಿಗ್ಗೆ 11 ಗಂಟೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‌ ತನ್ನ ಸಂಸದರಿಗೆ ವಿಪ್‌ ಜಾರಿ ಮಾಡಿ ಹಾಜರಿರುವಂತೆ ಸೂಚಿಸಿದೆ.

ಇದನ್ನೂ ಓದಿ: Parliament Session 2024: ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

Continue Reading

ದೇಶ

Parliament Session 2024: ಇಂದು ಐತಿಹಾಸಿಕ ಲೋಕಸಭಾ ಸ್ಪೀಕರ್‌ ಚುನಾವಣೆ; ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ

Parliament Session 2024: ಲೋಕಸಭಾ ಸ್ಪೀಕರ್‌ ಹುದ್ದೆಗೆ ಎನ್‌ಡಿಎಯಿಂದ ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ ಸ್ಪರ್ಧಿಸುತ್ತಿದ್ದಾರೆ. ಸಾಮಾನ್ಯವಾಗಿ ಸ್ಪೀಕರ್ ಹಾಗೂ ಡೆಪ್ಯುಟಿ ಸ್ಪೀಕರ್ ಆಯ್ಕೆಯು ಸಹಮತದೊಂದಿಗೆ ನಡೆಯುತ್ತದೆ. ಆದರೆ ಈ ಬಾರಿ ಚುನಾವಣೆ ನಡೆಯಲಿದೆ. ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ Live ವೀಕ್ಷಿಸಿ.

VISTARANEWS.COM


on

Parliament Session 2024
Koo

ನವದೆಹಲಿ: ಜಿದ್ದಾಜಿದ್ದಿನ ಲೋಕಸಭಾ ಚುನಾವಣೆಯ ಬಳಿಕ ಇದೀಗ ದೇಶ ಲೋಕಸಭಾ ಸ್ಪೀಕರ್‌ ಆಯ್ಕೆಯ ಚುನಾವಣೆಗೆ ಸಾಕ್ಷಿಯಾಗಲಿದೆ (Lok Sabha Speaker Election). ಲೋಕಸಭಾ ಸ್ಪೀಕರ್‌ ಹುದ್ದೆಗೆ ಎನ್‌ಡಿಎಯಿಂದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಮತ್ತು ಪ್ರತಿಪಕ್ಷಗಳ ಇಂಡಿ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಸ್ಪರ್ಧಿಸುತ್ತಿದ್ದಾರೆ. ಅವಿರೋಧ ಆಯ್ಕೆಗೆ ಒಮ್ಮತ ಮೂಡದ ಹಿನ್ನಲೆಯಲ್ಲಿ ಈ ಇಬ್ಬರು ನಾಯಕರು ಮಂಗಳವಾರ ನಾಮಪತ್ರ ಸಲ್ಲಿಸಿದರು (Parliament Session 2024).

ಸಾಮಾನ್ಯವಾಗಿ ಸ್ಪೀಕರ್ ಹಾಗೂ ಡೆಪ್ಯುಟಿ ಸ್ಪೀಕರ್ ಆಯ್ಕೆಯು ಸಹಮತದೊಂದಿಗೆ ನಡೆಯುತ್ತದೆ. ಹಲವು ವರ್ಷಗಳಿಂದಲೂ ಈ ಸಂಪ್ರದಾಯ ನಡೆದುಕೊಂಡು ಬಂದಿದೆ. ಆದರೆ ಈ ಬಾರಿ ಈ ಸಂಪ್ರದಾಯ ಕೊನೆಯಾಗಿದ್ದು, ಹಲವು ದಶಕಗಳ ಬಳಿಕ ಇದೇ ಮೊದಲ ಸಲ ಸ್ಪೀಕರ್ ಸ್ಥಾನಕ್ಕೆ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಜಿದ್ದಾಜಿದ್ದಿನ ಹೋರಾಟಕ್ಕೆ ಅಣಿಯಾಗಿವೆ.

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ನಾಮಪತ್ರ ಸಲ್ಲಿಸಿದರು.

ಓಂ ಬಿರ್ಲಾ, ಕೆ.ಸುರೇಶ್‌ ಹಿನ್ನೆಲೆ

ರಾಜಸ್ಥಾನದ ಕೋಟಾ ಕ್ಷೇತ್ರವನ್ನು ಪ್ರತಿನಿಧಿಸುವ ಓಂ ಬಿರ್ಲಾ ಅವರು 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕಳೆದ ಬಾರಿಯೂ ಅವರೇ ಸ್ಪೀಕರ್‌ ಆಗಿದ್ದರು. ಹೀಗಾಗಿ ಅವರನ್ನೇ ಸ್ಪೀಕರ್ ಆಗಿ ಮುಂದುವರಿಸಲು ಬಿಜೆಪಿ ಮುಂದಾಗಿದೆ. ಇನ್ನು ಕೆ.ಸುರೇಶ್‌ ಕೇರಳದ ಮಾವೆಲಿಕರಾ ಕ್ಷೇತ್ರದ ಕಾಂಗ್ರೆಸ್ ಸಂಸದ. ಎಂಟು ಬಾರಿ ಗೆದ್ದಿರುವ ಸುರೇಶ್ ಅವರು, 18ನೇ ಲೋಕಸಭೆಯಲ್ಲಿ ಅತ್ಯಂತ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಸಂಸದರೆನಿಸಿದ್ದಾರೆ. ಕಳೆದ 2 ಲೋಕಸಭಾ ಅಧಿವೇಶನಗಳಲ್ಲಿ ಬಿಜೆಪಿಯ ಸುಮಿತ್ರಾ ಮಹಾಜನ್ (2014) ಮತ್ತು ಓಂ ಬಿರ್ಲಾ (2019) ಸ್ಪೀಕರ್‌ಗಳಾಗಿದ್ದರು.

ಚುನಾವಣೆ ಎಷ್ಟು ಗಂಟೆಗೆ?

ಇಂದು ಬೆಳಿಗ್ಗೆ 11 ಗಂಟೆಗೆ ಸ್ಪೀಕರ್ ಆಯ್ಕೆಗೆ ಚುನಾವಣೆ ನಡೆಯಲಿದೆ. 293 ಸಂಸದರ ಬಲ ಹೊಂದಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಸರಳ ಬಹುಮತದೊಂದಿಗೆ ಓಂ ಬಿರ್ಲಾ ಅವರು ಪುನರಾಯ್ಕೆ ಆಗುವ ನಿರೀಕ್ಷೆಯಲ್ಲಿದೆ. ಇಂಡಿ ಮೈತ್ರಿಕೂಟಕ್ಕೆ 232 ಸದಸ್ಯರ ಬಲವಿದೆ. ಈ ಪೈಕಿ 7 ಸಂಸದರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ. ಹೀಗಾಗಿ ಅವರಿಗೆ ವೋಟು ಮಾಡುವ ಅಧಿಕಾರವಿಲ್ಲ. ಜತೆಗೆ ವೈ.ಎಸ್‌.ಜಗಮೋಹನ್‌ ರೆಡ್ಡಿ ಅವರ ವೈಎಸ್‌ಆರ್‌ ಕಾಂಗ್ರೆಸ್‌ನ ನಾಲ್ವರು ಸಂಸದರು ಎನ್‌ಡಿಎಗೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ.

ವಿಪ್‌ ಜಾರಿ

ಲೋಕಸಭಾ ಸ್ಪೀಕರ್ ಹುದ್ದೆಯ ಚುನಾವಣೆಯ ಹಿನ್ನೆಲೆಯಲ್ಲಿ ಬುಧವಾರ ಸದನಕ್ಕೆ ಹಾಜರಾಗುವಂತೆ ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್‌ ತಮ್ಮ ಸಂಸದರಿಗೆ ವಿಪ್‌ (Whip) ಜಾರಿ ಮಾಡಿವೆ. ಎರಡೂ ಪಕ್ಷಗಳು ಬುಧವಾರ ಬೆಳಿಗ್ಗೆ 11 ಗಂಟೆಗೆ ಲೋಕಸಭೆಗೆ ಹಾಜರಾಗುವಂತೆ ಮೂರು ಸಾಲಿನ ವಿಪ್ ಜಾರಿ ಮಾಡಿವೆ.

ಇದನ್ನೂ ಓದಿ: Lok Sabha Speaker Election: ಲೋಕಸಭೆ ಇತಿಹಾಸದಲ್ಲೇ ಮೊದಲ ಬಾರಿ ಸ್ಪೀಕರ್‌ ಹುದ್ದೆಗೆ ನಡೆಯಲಿದೆ ಚುನಾವಣೆ

Continue Reading

ಕ್ರೀಡೆ

IND vs ENG: ಭಾರತ-ಇಂಗ್ಲೆಂಡ್​ ಸೆಮಿ ಕಾದಾಟಕ್ಕೆ ಮೀಸಲು ದಿನ ಇಲ್ಲ; ಪಂದ್ಯ ರದ್ದಾದರೆ ಯಾರಾಗಲಿದ್ದಾರೆ ವಿಜೇತರು?

IND vs ENG: ಭಾರತ-ಇಂಗ್ಲೆಂಡ್​ ನಡುವಿನ 2ನೇ ಸೆಮಿಫೈನಲ್​ ಪಂದ್ಯಕ್ಕೆ ಮೀಸಲು ದಿನವಿಲ್ಲ. ಹೀಗಾಗಿ ಒಂದು ವೇಳೆ ಪಂದ್ಯ ರದ್ದುಗೊಂಡರೆ ಭಾರತ ತಂಡ ಫೈನಲ್​ಗೇರಲಿದೆ. ಏಕೆಂದರೆ ಸೂಪರ್​-8 ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನ ಸಂಪಾದಿಸಿದೆ.

VISTARANEWS.COM


on

IND vs ENG
Koo

ಗಯಾನಾ: ಹಾಲಿ ಆವೃತ್ತಿಯ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಯಲ್ಲಿ ಅಜೇಯ ಗೆಲುವಿನೋಟ ಮುಂದುವರಿಸಿರುವ ಟೀಮ್​ ಇಂಡಿಯಾ ನಾಳೆ(ಗುರುವಾರ) ಪ್ರಾವಿಡೆನ್ಸ್​ ಸ್ಟೇಡಿಯಂನಲ್ಲಿ ನಡೆಯಲಿರುವ 2ನೇ ಸೆಮಿಫೈನಲ್(India vs England semi-final)​ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್(IND vs ENG)​ ತಂಡದ ಸವಾಲು ಎದುರಿಸಲಿದೆ. ಆದರೆ ಈ ಪಂದ್ಯಕ್ಕೆ ಮಳೆ ಅಡಚಣೆ ತರುವ ಭೀತಿ ಎದುರಾಗಿದೆ.

ಹವಾಮಾನ ವರದಿಗಳ ಪ್ರಕಾರ ಭಾರಿ ಮಳೆಯಿಂದಾಗಿ ಪಂದ್ಯ ರದ್ದಾದರೂ ಅಚ್ಚರಿ ಇಲ್ಲ ಎಂದು ಎಚ್ಚರಿಕೆ ನೀಡಿದೆ. ಒಂದೊಮ್ಮೆ ಮಳೆಯಿಂದ ಪಂದ್ಯ ರದ್ದಾದರೆ ವಿಜೇತರನ್ನು ನಿರ್ಧರಿಸುವುದು ಹೇಗೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಅಭಿಮಾನಿಗಳಲ್ಲಿ ಈ ಪ್ರಶ್ನೆ ಕಾಡಲೂ ಕೂಡ ಒಂದು ಕಾರಣವಿದೆ. ದಕ್ಷಿಣ ಆಫ್ರಿಕಾ-ಅಫಘಾನಿಸ್ತಾನ ನಡುವಿನ ಮೊದಲ ಸೆಮಿಫೈನಲ್​ ಪಂದ್ಯಕ್ಕೆ ಮೀಸಲು ದಿನವಿದ್ದರೂ, ಭಾರತ-ಇಂಗ್ಲೆಂಡ್​ ನಡುವಿನ 2ನೇ ಸೆಮಿಫೈನಲ್​ ಪಂದ್ಯಕ್ಕೆ ಮೀಸಲು ದಿನವಿಲ್ಲ. ಹೀಗಾಗಿ ಒಂದು ವೇಳೆ ಪಂದ್ಯ ರದ್ದುಗೊಂಡರೆ ಭಾರತ ತಂಡ ಫೈನಲ್​ಗೇರಲಿದೆ. ಏಕೆಂದರೆ ಸೂಪರ್​-8 ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನ ಸಂಪಾದಿಸಿದೆ. ಇಂಗ್ಲೆಂಡ್​ ಸೂಪರ್​-8 ಅಂಕಪಟ್ಟಿಯಲ್ಲಿ 2ನೇ ಸ್ಥಾನ ಗಳಿಸಿತ್ತು. ಹೀಗಾಗಿ ಈ ಲಾಭ ಭಾರತಕ್ಕೆ ಲಭಿಸಲಿದೆ.

ಶೇ. 88 ರಷ್ಟು ಮಳೆ


ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಪಂದ್ಯದ ಸಮಯದಲ್ಲಿ ಮಳೆ ಸುರಿಯುವ ಸಾಧ್ಯತೆ ಶೇ. 88ರಷ್ಟಿದೆ. ಫೈನಲ್​ ಪಂದ್ಯ ಶನಿವಾರವೇ ನಡೆಯಲಿರುವುದರಿಂದ, 2ನೇ ಸೆಮೀಸ್​ಗೆ ಮೀಸಲು ದಿನವಿಲ್ಲ ಎಂದು ಐಸಿಸಿ ಈ ಮೊದಲೇ ಸ್ಪಷ್ಟಪಡಿಸಿತ್ತು. ಈ ಪಂದ್ಯಕ್ಕೆ ಮೀಸಲು ದಿನ ಇರದಿದ್ದರೂ ಕೂಡ ಪಂದ್ಯ ಮುಗಿಸಲು 250 ನಿಮಿಷಗಳ ಹೆಚ್ಚುವರಿ ಸಮಯವನ್ನು ಐಸಿಸಿ ನೀಡಿದೆ. ಜತೆಗೆ ಸೆಮಿಫೈನಲ್​ನಲ್ಲಿ ಸ್ಪಷ್ಟ ಫಲಿತಾಂಶ ಬರಬೇಕಾದರೆ ಉಭಯ ತಂಡಗಳು ಕನಿಷ್ಠ 10 ಓವರ್​ಗಳ ಪಂದ್ಯ ಆಡಬೇಕಾಗಿದೆ. ಲೀಗ್​, ಸೂಪರ್​-8ನಲ್ಲಿ ಫಲಿತಾಂಶಕ್ಕೆ ಕನಿಷ್ಠ 5 ಓವರ್​ಗಳ ಪಂದ್ಯ ಸಾಕಾಗಿತ್ತು.

ಇದನ್ನೂ ಓದಿ IND vs AUS : ಟಿ20 ವಿಶ್ವ ಕಪ್​ 2024ರಲ್ಲಿ ಗರಿಷ್ಠ ಸ್ಕೋರ್ ಬಾರಿಸಿದ ಭಾರತ ತಂಡ; 5 ವಿಕೆಟ್​ಗೆ 205

ಫೈನಲ್​ಗಿದೆ ಮೀಸಲು ದಿನ


ಮೊದಲ ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಕ್ಕೆ ಮೀಸಲು ದಿನ ಇದೆ. ಜೂನ್​ 29ಕ್ಕೆ ಬ್ರಿಜ್​ಟೌನ್​ನಲ್ಲಿ ಫೈನಲ್​ ಪಂದ್ಯ ನಡೆಯಲಿದೆ. ನಿಗದಿತ ದಿನದಂದು ಪಂದ್ಯ ಪೂರ್ಣಗೊಳ್ಳಲಿದ್ದರೆ. ಪಂದ್ಯ ಎಲ್ಲಿಗೆ ನಿಂತಿರುತ್ತದೆಯೇ ಅಲ್ಲಿಂದಲೇ ಮೀಸಲು ದಿನ ಅಂದರೆ ಜೂನ್​ 30 (ಭಾನುವಾರ) ನಡೆಯಲಿದೆ. ಫೈನಲ್​ನಲ್ಲೂ ಫಲಿತಾಂಶ ನಿರ್ಧಾರಕ್ಕೆ ಉಭಯ ತಂಡಗಳು ಕನಿಷ್ಠ 10 ಓವರ್​ ಆಡಬೇಕು. ಮೀಸಲು ದಿನವೂ ಮಳೆ ಅಡ್ಡಿಪಡಿಸಿದರೆ, ಫೈನಲ್​ಗೇರಿದ ಎರಡೂ ತಂಡಗಳನ್ನು ಜಂಟಿ ಚಾಂಪಿಯನ್​ ಎಂದು ಐಸಿಸಿ ಘೋಷಿಸಲಿದೆ.

Continue Reading

ಪ್ರಮುಖ ಸುದ್ದಿ

David Warner : ವಿಶ್ವ ಕಪ್​ನಿಂದ ಹೊರಬಿದ್ದ ಬೇಸರ; ಬಿಯರ್ ಕುಡಿತಾ ಕುಳಿತ ಆಸ್ಟ್ರೇಲಿಯಾದ ಆಟಗಾರರು

David Warner : ಆಸ್ಟ್ರೇಲಿಯಾ ತಂಡ ಮಿಚೆಲ್ ಮಾರ್ಷ್​ ನೇತೃತ್ವದಲ್ಲಿ ವಿಶ್ವಾಸದಿಂದಲೇ ವೆಸ್ಟ್​ ಇಂಡೀಸ್​ಗೆ ತೆರಳಿತ್ತು. ಆದರೆ, ಅಪಘಾನಿಸ್ತಾನ ವಿರುದ್ಧ ಸೂಪರ್​ ಪಂದ್ಯವನ್ನು ಸೋತ ಬಳಿಕ ನಡುಗಿತು. ಬಳಿಕ ಭಾರತ ವಿರುದ್ಧವೂ ಹೀನಾಯವಾಗಿ ಪರಾಭವಗೊಂಡಿತು.

VISTARANEWS.COM


on

David Warner
Koo

ಬೆಂಗಳೂರು: ದುರಂಹಕಾರಿ ಆಸ್ಟ್ರೇಲಿಯಾ ತಂಡ ವಿಶ್ವ ಕಪ್​ನ ಸೂಪರ್ 8 ಹಂತದಿಂದ ಹೊರಕ್ಕೆ ಬಿದ್ದಿದೆ. ಹೀಗಾಗಿ ಆ ತಂಡಕ್ಕೆ ಆಘಾತವಾಗಿದೆ. 2021ರ ಆವೃತ್ತಿಯ ಚಾಂಪಿಯನ್ ಹಾಗೂ 2023ರ ಏಕ ದಿನ ವಿಶ್ವ ಕಪ್ ಚಾಂಪಿಯನ್ ತಂಡಕ್ಕೆ ಇದು ನಿಜವಾಗಿಯೂ ದುಃಖದ ವಿಚಾರ. ಹೀಗಾಗಿ ಸೋಲಿನ ಬಳಿಕ ಆಟಗಾರರು ಬಿಯರ್​ ಕುಡಿತಾ ಬೇಸರ ಹೊರಹಾಕಿದ್ದಾರೆ ಎಂಬುದಾಗಿ ವರದಿಯಾಗಿದೆ. ಬಿಯರ್ ಅಲ್ಲಿ ಸಾಮಾನ್ಯ ಸಂಸ್ಕೃತಿಯಾಗಿರುವ ಕಾರಣ ಅದು ಎಷ್ಟು ಸತ್ಯ ಎಂಬುದು ಗೊತ್ತಿಲ್ಲ. ಆದರೆ, ಜೇಕ್ ಫ್ರೇಸರ್ ಮೆಗ್​ಕುರ್ಕ್​ ಹಾಗೂ ಡೇವಿಡ್​ ವಾರ್ನರ್ (David Warner ) ಬಿಯರ್​ ಕುಡಿತಾ ಕುಳಿತಿರುವ ಫೋಟೊಗಳನ್ನು ಹಾಕಿಕೊಂಡಿದ್ದಾರೆ.

ಆಸ್ಟ್ರೇಲಿಯಾ ತಂಡ ಮಿಚೆಲ್ ಮಾರ್ಷ್​ ನೇತೃತ್ವದಲ್ಲಿ ವಿಶ್ವಾಸದಿಂದಲೇ ವೆಸ್ಟ್​ ಇಂಡೀಸ್​ಗೆ ತೆರಳಿತ್ತು. ಆದರೆ, ಅಪಘಾನಿಸ್ತಾನ ವಿರುದ್ಧ ಸೂಪರ್​ ಪಂದ್ಯವನ್ನು ಸೋತ ಬಳಿಕ ನಡುಗಿತು. ಬಳಿಕ ಭಾರತ ವಿರುದ್ಧವೂ ಹೀನಾಯವಾಗಿ ಪರಾಭವಗೊಂಡಿತು. ಗೆದ್ದೇ ಗೆಲ್ಲುತ್ತೇವೆ ಎಂಬ ಅತ್ಯುತ್ಸಾಹದಲ್ಲಿ ಸಾಗುವ ಕಾಂಗಾರೂ ಪಡೆಗಳಿಗೆ ಇದು ಸಂಪೂರ್ಣ ನಿರಾಸೆಯ ಸಂಗತಿಯಾಗಿದೆ. ಹೀಗಾಗಿ ಬಿಯರ್​ ಕುಡಿಯದೇ ವಿಧಿಯಿಲ್ಲ

ಮೆಗ್​ಕುರ್ಕ್​ ವಿಶ್ವ ಕಪ್​​ ಆಸ್ಟ್ರೇಲಿಯಾ ತಂಡದ ಪರ ಬ್ಯಾಟಿಂಗ್ ಮಾಡುವ ಮೂಲಕ ಅದ್ಭುತ ಪ್ರದರ್ಶನ ನೀಡಿದ್ದಾರೆ. ಯುವ ಬ್ಯಾಟ್ಸ್ಮನ್ ಅನ್ನು ಆಸ್ಟ್ರೇಲಿಯಾ ತಂಡದ ಮುಂದಿನ ಸಂಭಾವ್ಯ ಆರಂಭಿಕ ಆಟಗಾರ ಎಂದು ಪರಿಗಣಿಸಲಾಗಿದೆ. ಆಸ್ಟ್ರೇಲಿಯಾದ ಮಾಜಿ ಆರಂಭಿಕ ಬ್ಯಾಟರ್​​ ಡೇವಿಡ್ ವಾರ್ನರ್ ಈ ಯುವ ಆಟಗಾರನಿಗೆ ಪ್ರೇರಣೆ.

ವಿಶೇಷವೆಂದರೆ, ಇಬ್ಬರೂ ಕ್ರಿಕೆಟಿಗರು ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಡ್ರೆಸ್ಸಿಂಗ್ ಕೊಠಡಿಯನ್ನು ಹಂಚಿಕೊಂಡಿದ್ದಾರೆ. 2024 ರ ಟಿ 20 ವಿಶ್ವ ಕಪ್​ನಿಂದ ಆಸೀಸ್​ ಬಳಗ ಹೊರಬಿದ್ದ ನಂತರ ಅವರಿಬ್ಬರೂ ಮೈದಾನದಿಂದ ದೂರವಿದ್ದರು. ಅವರಿಬ್ಬರೂ ಜತೆಯಾಗಿ ಬಿಯರ್​ ಕುಡಿದಿದ್ದಾರೆ.

ಮೆಗ್​ಕುರ್ಕ್​ ಒಂದೇ ಒಂದು ಪಂದ್ಯವನ್ನು ಆಡಲು ಸಾಧ್ಯವಾಗದಿದ್ದರೂ ಆಸೀಸ್​ ತಂಡದ ಟ್ರೋಫಿಗೆ ಸವಾಲೊಡ್ಡುವ ವಾತಾವರಣಕ್ಕೆ ಅವರು ತೆರೆದುಕೊಂಡರು. ಡೇವಿಡ್ ವಾರ್ನರ್ ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ಮೆಗ್​ಕುರ್ಕ್​ ಅವರೊಂದಿಗಿನ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇಬ್ಬರೂ ತಮ್ಮ ಕೆರಿಬಿಯನ್ ವಾಸ್ತವ್ಯದ ಮುಕ್ತಾಯದ ನಂತರ ಬಿಯರ್ ಕುಡಿತಾ ಕುಳಿತಿದ್ದರು.

ಮೆಗ್​ಕುರ್ಕ್​ ಪ್ರಶ್ನೆಗಳನ್ನು ಕೇಳುತ್ತಾರೆ : ವಾರ್ನರ್

ಆಸ್ಟ್ರೇಲಿಯಾ ತಂಡದಲ್ಲಿ ಜೇಕ್ ಫ್ರೇಸರ್ ಮೆಕ್ಗುರ್ಕ್ ಅವರ ಸಂಭಾವ್ಯ ಸ್ಥಾನದ ಬಗ್ಗೆ ವಾರ್ನರ್ ಮಾತನಾಡಿದ್ದಾರೆ. ಜಾಗತಿಕ ಟೂರ್ನಿಯಿಂದ ದುರದೃಷ್ಟವಶಾತ್ ನಿರ್ಗಮಿಸಿದ ನಂತರ ಆಸ್ಟ್ರೇಲಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ ಮತ್ತು ಮೆಕ್ಗುರ್ಕ್ ಸ್ಥಾನ ಪಡೆಯುವ ವಿಶ್ವಾಸವನ್ನು ಅವರು ತೋರಿಸಿದ್ದಾರೆ. ಮೆಕ್ಗುರ್ಕ್, ವಿಶೇಷವಾಗಿ, ಡೆಲ್ಲಿ ಕ್ಯಾಪಿಟಲ್ಸ್​ ತಂಡ ಪರವಾಗಿ ಅಸಾಧಾರಣ ಪ್ರದರ್ಶನ ನೀಡಿದ್ದರು. ಅವರನ್ನು ಪಂದ್ಯಾವಳಿಯ ಫೈನಲ್​ ಸ್ಟ್ರೈಕರ್ ಎಂದು ಕರೆಯಲಾಗಿತ್ತು. ಅವರ ಸ್ಟ್ರೈಕ್ ರೇಟ್ 200 ರ ಗಡಿಯನ್ನು ಮೀರಿತ್ತು.

ಇದನ್ನೂ ಓದಿ: Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

” ಮೆಗ್​ಕುರ್ಕ್​ ಅವರ ಅನುಭವವು ಉತ್ತಮವಾಗಿರುತ್ತದೆ. ಅವರು ಆಗಸ್ಟ್ ಅಂತ್ಯದಲ್ಲಿ ಇಂಗ್ಲೆಂಡ್ ಪ್ರವಾಸಕ್ಕೆ ಹೋಗುತ್ತಾರೆ ಎಂದು ನಾನು ಭಾವಿಸುತ್ತೇನೆ. ಚಿಕ್ಕ ಮಗುವಾಗಿ, ಆಟದ ಬಗ್ಗೆ, ತಂಡದ ಆಟಗಾರನಾಗಿ ಗುಂಪಿನ ಸುತ್ತಲೂ ಇರುವುದು ಹೇಗೆ ಎಂಬುದನ್ನು ಅವರು ಅರ್ಥಮಾಡಿಕೊಂಡಿದ್ದಾರೆ. ಅವರು ಸಾಕಷ್ಟು ಪ್ರಶ್ನೆಗಳನ್ನು ಕೇಳುತ್ತಾರೆ ಮತ್ತು ಅವರು ಆಟವನ್ನು ಪ್ರೀತಿಸುತ್ತಾರೆ” ಎಂದು ವಾರ್ನರ್ ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

Continue Reading
Advertisement
Sanjith Hegde Nange Allava song Out
ಸ್ಯಾಂಡಲ್ ವುಡ್9 mins ago

Sanjith Hegde: ಸಂಜನಾ ದಾಸ್‌ಗೆ ʻನೀ ನಂಗೆ ಅಲ್ಲವಾʼ ಎಂದ ಸಂಜಿತ್ ಹೆಗಡೆ!

suraj revanna case 12
ಕ್ರೈಂ18 mins ago

Suraj Revanna Case: ಅಮಾವಾಸ್ಯೆ ದಿನ ಸೂರಜ್‌ ಬಳೆ ತೊಡ್ತಾನೆ, ಸೀರೆ ಉಡ್ತಾನೆ! ಬಯಲು ಮಾಡಿದ ಸಂತ್ರಸ್ತ

Lok Sabha Speaker Election
ದೇಶ20 mins ago

Lok Sabha Speaker Election: ಲೋಕಸಭೆ ಸ್ಪೀಕರ್ ಚುನಾವಣೆ ಇಂದು; ಆಡಳಿತ ಪಕ್ಷ-ಪ್ರತಿಪಕ್ಷ ಬಲಾಬಲ ಹೀಗಿದೆ

Albania vs Spain
ಕ್ರೀಡೆ21 mins ago

Albania vs Spain: ಯುರೋ ಕಪ್​ನಲ್ಲಿ ನಾಕೌಟ್‌ ಹಂತಕ್ಕೇರಿದ ಸ್ಪೇನ್‌

Parliament Session 2024
ದೇಶ27 mins ago

Parliament Session 2024: ಇಂದು ಐತಿಹಾಸಿಕ ಲೋಕಸಭಾ ಸ್ಪೀಕರ್‌ ಚುನಾವಣೆ; ಕ್ಷಣ ಕ್ಷಣದ ಮಾಹಿತಿಗಾಗಿ Live ನೋಡಿ

Pavithra Gowda Cried After In Jail darshan case
ಕ್ರೈಂ34 mins ago

Pavithra Gowda: ನನ್ನನ್ನು ನೋಡಲು ಯಾರೂ ಬರೋದಿಲ್ಲ ಎಂದು ಪವಿತ್ರಾ ಕಣ್ಣೀರು; ʻದಚ್ಚುʼ ನಿರಾಳ!

Sunita Williams
ವಿದೇಶ43 mins ago

Sunita Williams: ತಾಂತ್ರಿಕ ಸಮಸ್ಯೆ- ಎರಡು ವಾರಗಳಿಂದ ಬಾಹ್ಯಾಕಾಶದಲ್ಲೇ ಸಿಲುಕಿದ ಸುನೀತಾ ವಿಲಿಯಮ್ಸ್‌

IND vs ENG
ಕ್ರೀಡೆ48 mins ago

IND vs ENG: ಭಾರತ-ಇಂಗ್ಲೆಂಡ್​ ಸೆಮಿ ಕಾದಾಟಕ್ಕೆ ಮೀಸಲು ದಿನ ಇಲ್ಲ; ಪಂದ್ಯ ರದ್ದಾದರೆ ಯಾರಾಗಲಿದ್ದಾರೆ ವಿಜೇತರು?

Foxconn's Hiring
ಉದ್ಯೋಗ57 mins ago

Foxconn’s Hiring: ವಿವಾಹಿತ ಮಹಿಳೆಯರಿಗೆ ಫಾಕ್ಸ್‌ಕಾನ್‌ ಕಂಪನಿಯಲ್ಲಿ ಕೆಲಸ ಕೊಡುವುದಿಲ್ಲ! ಭುಗಿಲೆದ್ದ ವಿವಾದ

Indian 2 trailer Kamal Haasan as master of disguise
South Cinema1 hour ago

Indian 2 Trailer: `ಇಂಡಿಯನ್‌-2′ ಟ್ರೈಲರ್‌ ಔಟ್‌; ಹಲವು ಗೆಟಪ್​ನಲ್ಲಿ ಗಮನಸೆಳೆದ  ಕಮಲ್ ಹಾಸನ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌