Women's Asia Cup : ಯುಎಇ ವಿರುದ್ಧ ಭಾರತದ ವನಿತೆಯರಿಗೆ ಭರ್ಜರಿ 78 ರನ್ ವಿಜಯ - Vistara News

ಪ್ರಮುಖ ಸುದ್ದಿ

Women’s Asia Cup : ಯುಎಇ ವಿರುದ್ಧ ಭಾರತದ ವನಿತೆಯರಿಗೆ ಭರ್ಜರಿ 78 ರನ್ ವಿಜಯ

Women’s Asia Cup : ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ ನಿಗದಿತ 20 ಓವರ್​​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 201 ರನ್ ಬಾರಿಸಿತು. ಇದು ಭಾರತ ಮಹಿಳೆಯರ ಕ್ರಿಕೆಟ್ ತಂಡದ ಇದುವರೆಗಿನ ಗರಿಷ್ಠ ಸ್ಕೋರ್ ಆಗಿದೆ. ಪ್ರತಿಯಾಗಿ ಬ್ಯಾಟ್ ಮಾಡಿದ ಯುಎಇ ವನಿತೆಯರು ತಮ್ಮ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 123 ರನ್​ ಬಾರಿಸಿ ಹೀನಾಯವಾಗಿ ಸೋಲೊಪ್ಪಿಕೊಂಡರು.

VISTARANEWS.COM


on

Women's Asia Cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡಂಬುಲ್ಲಾ: ಭಾರತದ ಮಹಿಳೆಯರ ಕ್ರಿಕೆಟ್ ತಂಡ ಏಷ್ಯಾ ಕಪ್​ನಲ್ಲಿ (Women’s Asia Cup) ತನ್ನ ಎರಡನೇ ಗೆಲುವು ಸಾಧಿಸಿದೆ. ಈ ಮೂಲಕ ಸೆಮೀಸ್​ ಪ್ರವೇಶವನ್ನು ಸುಲಭಗೊಳಿಸಿದೆ. ಯುಎಇ (UAE Women’s Cricket Team) ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಅಮೋಘ 78 ರನ್​ ಗೆಲುವು ಸಾಧಿಸಿ ಗುಂಪು ಹಂತದಲ್ಲಿ ಒಟ್ಟು 4 ಅಂಕಗಳನ್ನು ಗಳಿಸಿದೆ. ಭಾರತ ತಂಡದ ಆಟಗಾರರು ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಪಾರಮ್ಯ ಸಾಧಿಸಿ ತನ್ನ ಅಜೇಯ ಓಟ ಮುಂದುವರಿಸಿದೆ. ಇತ್ತೀಚಿನ ದಿನಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಭಾರತ ತಂಡ ಮತ್ತೊಂದು ಸ್ಮರಣೀಯ ವಿಜಯವನ್ನು ತನ್ನದಾಗಿಸಿಕೊಂಡಿತು.

ಇಲ್ಲಿನ ರಣಗಿರಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಭಾರತ ತಂಡ ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆಯಿತು. ಅಂತೆಯೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ ನಿಗದಿತ 20 ಓವರ್​​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 201 ರನ್ ಬಾರಿಸಿತು. ಇದು ಭಾರತ ಮಹಿಳೆಯರ ಕ್ರಿಕೆಟ್ ತಂಡದ ಇದುವರೆಗಿನ ಗರಿಷ್ಠ ಸ್ಕೋರ್ ಆಗಿದೆ. ಪ್ರತಿಯಾಗಿ ಬ್ಯಾಟ್ ಮಾಡಿದ ಯುಎಇ ವನಿತೆಯರು ತಮ್ಮ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 123 ರನ್​ ಬಾರಿಸಿ ಹೀನಾಯವಾಗಿ ಸೋಲೊಪ್ಪಿಕೊಂಡರು.

ಮೊದಲು ಬ್ಯಾಟ್ ಮಾಡಿದ ಭಾರತ ತಂಡ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿತು. ಶಫಾಲಿ ವರ್ಮಾ 18 ಎಸೆತಕ್ಕೆ 37 ರನ್ ಬಾರಿಸಿದರೆ ಸ್ಮೃತಿ ಮಂಧಾನಾ 9 ಎಸೆತಕ್ಕೆ 13 ರನ್ ಗಳಿಸಿದರು. ಆದರೆ, ಸ್ಮೃತಿ ಬೇಗ ನಿರ್ಗಮಿಸಿದರು. ಈ ವೇಳೆ ಭಾರತದ ಸ್ಕೋರ್​ 23. ಆದರೆ, ನಂತರ ಬಂದ ದಯಾಳನ್ ಹೇಮಲತಾ 4 ಎಸೆತಗಳನ್ನು ಎದುರಿಸಿ 2 ರನ್ ಬಾರಿಸುವ ಮೂಲಕ ನಿರಾಸೆ ಮೂಡಿಸಿದರು. 52 ರನ್​ಗೆ 2 ವಿಕೆಟ್​ ಕಳೆದುಕೊಂಡ ಹೊರತಾಗಿಯೂ ಭಾರತದ ರನ್​ ಗಳಿಕೆ ವೇಗ ಕಡಿಮೆ ಆಗಲಿಲ್ಲ. ನಾಯಕಿ ಹರ್ಮನ್​ಪ್ರೀತ್ ಕೌರ್​ (66 ರನ್​) ಅರ್ಧ ಶತಕ ಬಾರಿಸಿದರು. ತಾವೆದುರಿಸಿದ 47 ಎಸೆತಗಳಲ್ಲಿ 7 ಫೋರ್ ಹಾಗೂ 1 ಸಿಕ್ಸರ್ ಬಾರಿಸಿದರು. ಹೀಗಾಗಿ ನಾಲ್ಕನೇ ವಿಕೆಟ್ ಪತನಗೊಳ್ಳುವಾಗ ಭಾರತ 104 ರನ್ ಬಾರಿಸಿತು.

ಜೆಮಿಮಾ ರೋಡ್ರಿಗಸ್​ 14 ರನ್​ಗೆ ಸೀಮಿತಗೊಂಡರೆ ಕೊನೆಯಲ್ಲಿ ವಿಕೆಟ್​ ಕೀಪರ್​ ರಿಚಾ ಘೋಷ್​ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೇವಲ 29 ಎಸೆತಗಳನ್ನು ಎದುರಿಸಿದ ಅವರು 12 ಫೋರ್ ಹಾಗೂ 1 ಸಿಕ್ಸರ್ ಮೂಲಕ 64 ರನ್ ಬಾರಿಸಿದರು. ಇವರ ಬ್ಯಾಟಿಂಗ್​ ವೇಗಕ್ಕೆ ಯುಎಇ ಬೌಲರ್​ಗಳು ಸಂಪುರ್ಣವಾಗಿ ಮಂಕಾದರು. ಅಲ್ಲದೆ ಭಾರತ ತಂಡಕ್ಕೆ ದಾಖಲೆಯ 200 ರನ್​ಗಳ ಗುರಿ ದಾಟಲು ನೆರವಾದರು.

ಬೌಲರ್​ಗಳ ಪಾರಮ್ಯ

ದೊಡ್ಡ ಮೊತ್ತವನ್ನು ಬೆನ್ನಟ್ಟಲು ಮುಂದಾದ ಯುಎಇ ತಂಡವೂ ವೇಗದ ಆಟಕ್ಕೆ ಮೊರೆ ಹೋಗುವ ಪ್ರಯತ್ನ ಮಾಡಿತು. ಆದರೆ, ಭಾರತೀಯ ಬೌಲರ್​ಗಳು ಅದಕ್ಕೆ ಸೊಪ್ಪು ಹಾಕಲಿಲ್ಲ. ಆರಂಭಿಕ ಬ್ಯಾಟರ್​ ಇಶ್ ಒಜಾ 3 ರನ್ ಬಾರಿಸಿದ ಹೊರತಾಗಿಯೂ ತೀರ್ಥ ಸತೀಶ್​ (4), ರಿನಿತಾ ರಜಿತ್​ (7 ರನ್​), ಸಮೈರಾ (5 ರನ್​) ಬೇಗನೆ ವಿಕೆಟ್ ಒಪ್ಪಿಸಿದರು. 36ಕ್ಕೆ 3 ವಿಕೆಟ್​ ನಷ್ಟ ಮಾಡಿಕೊಂಡರ ಯುಎಇ ಸಂಕಷ್ಟಕ್ಕೆ ಒಳಗಾಯಿತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಕವಿಶಾ ಎಗೋಡ್ಗೆ 32 ಎಸೆತಕ್ಕೆ 40 ರನ್ ಬಾರಿಸಿ ಮಿಂಚಿದರು. ಆದರೆ, ಉಳಿದವರಿಂದ ಹೆಚ್ಚಿನ ನೆರವು ಸಿಗದ ಕಾರಣ ಅವರಿಗೆ ಪಂದ್ಯ ಗೆಲ್ಲಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ನಲ್ಲಿ ಅತಿ ಹೆಚ್ಚು ಪದಕಗಳನ್ನು ಪಡೆದ ಅಥ್ಲೀಟ್​ ಯಾರು? ಇಲ್ಲಿದೆ ಈ ಶ್ರೇಷ್ಠ ಕ್ರೀಡಾಪಟುವಿನ ವಿವರ

ಎ ಗುಂಪಿನಲ್ಲಿರುವ ಭಾರತ ತಂಡ ತನ್ನ ಮುಂದಿನ ಪಂದ್ಯದಲ್ಲಿ ನೇಪಾಳ ತಂಡವನ್ನು ಎದುರಿಸಲಿದೆ. ಈಗಾಗಲೇ ಎರಡು ಪಂದ್ಯ ಗೆದ್ದಿರುವ ಕಾರಣ ಭಾರತ ಬಹುತೇಕ ಸೆಮಿಫೈನಲ್ ತಲುಪಿದೆ. ಭಾರತ ಹಾಲಿ ಚಾಂಪಿಯನ್ ತಂಡವಾಗಿದ್ದು ಕಪ್ ಉಳಿಸಲು ಯತ್ನಿಸಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mamata Banerjee: ‘ನಾನು ಕಾಫಿರ್‌ ಅಲ್ಲ’ ಎಂದ ಮಮತಾ ಬ್ಯಾನರ್ಜಿಗೆ ಬಿಜೆಪಿ ತಿರುಗೇಟು; ಏನಿದು ವಿವಾದ?

Mamata Banerjee: ಕಾಫಿರ್‌ ಎಂದರೆ ಮುಸ್ಲಿಮೇತರ ಅಥವಾ ಇಸ್ಲಾಂನಲ್ಲಿ ನಂಬಿಕೆ ಇರದವರು ಎಂಬ ಅರ್ಥವಿದೆ. ಹಾಗಾಗಿ, ಮಮತಾ ಬ್ಯಾನರ್ಜಿ ಅವರು ನಾನು ಕಾಫಿರ್‌ ಅಲ್ಲ, ಹೇಡಿ ಅಲ್ಲ ಎಂಬುದಾಗಿ ಹೇಳಿರುವುದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿಯ ಹಲವು ನಾಯಕರು ಮಮತಾ ಬ್ಯಾನರ್ಜಿ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ.

VISTARANEWS.COM


on

Mamata Banerjee
Koo

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ನೀಡಿದ ಒಂದು ಹೇಳಿಕೆ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಇದು ಬಿಜೆಪಿ ಆಕ್ರೋಶಕ್ಕೂ ಗುರಿಯಾಗಿದೆ. “ನಾನು ಕಾಫಿರ್‌ ಅಲ್ಲ” ಎಂದು ಮಮತಾ ಬ್ಯಾನರ್ಜಿ ಅವರು ಹೇಳಿದ್ದು, ಇದಕ್ಕೆ ಬಿಜೆಪಿ ನಾಯಕ ಅಮಿತ್‌ ಮಾಳವಿಯ (Amit Malviya) ಅವರು ತಿರುಗೇಟು ನೀಡಿದ್ದು, “ಸಾಮಾಜಿಕ ಸಾಮರಸ್ಯವನ್ನು ಮಮತಾ ಬ್ಯಾನರ್ಜಿ ಅವರು ಹಾಳು ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಫಿರ್‌ ಎಂದರೆ ಮುಸ್ಲಿಮೇತರ ಅಥವಾ ಇಸ್ಲಾಂನಲ್ಲಿ ನಂಬಿಕೆ ಇರದವರು ಎಂಬ ಅರ್ಥವಿದೆ. ಸಮಾವೇಶವೊಂದರಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, “ಯಾರು ಹೆದರುತ್ತಾರೋ, ಅವರು ಸಾಯುತ್ತಾರೆ. ನಾನು ಕಾಫಿರ್‌ ಅಲ್ಲ. ನಾನು ದೇಶದ್ರೋಹಿ ಅಲ್ಲ” ಎಂಬುದಾಗಿ ಅವರು ಹೇಳಿದ್ದರು. ಅಷ್ಟೇ ಅಲ್ಲ, “ನಾನು ಪಶ್ಚಿಮ ಬಂಗಾಳದ ಸಂಬಂಧವು ಭಾರತದ ಜತೆ ಉತ್ತಮವಾಗಿರಲಿ ಎಂದೇ ಬಯಸುತ್ತೇನೆ. ಅಖಿಲೇಶ್‌ ಯಾದವ್‌ ಅವರು ಇಲ್ಲಿಗೆ ಬಂದರು, ಅವರಿಗೆ ನಾನು ಧನ್ಯವಾದ ತಿಳಿಸುತ್ತೇನೆ” ಎಂದಿದ್ದಾರೆ. ಹಾಗಾಗಿ, “ಪಶ್ಚಿಮ ಬಂಗಾಳವು ಭಾರತದ ಭಾಗವಲ್ಲವೇ? ಅದೊಂದು ಪ್ರತ್ಯೇಕ ದೇಶವೇ” ಎಂಬುದಾಗಿ ಬಿಜೆಪಿಯ ಶೆಹಜಾದ್‌ ಪೂನಾವಾಲಾ ಅವರು ಪ್ರಶ್ನಿಸಿದ್ದಾರೆ.

ಅಮಿತ್‌ ಮಾಳವೀಯ ವಾದ ಹೀಗಿದೆ…

“ನಾನು ಕಾಫಿರ್‌ ಅಲ್ಲ ಎಂಬುದಾಗಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ. ಆ ಮೂಲಕ ಅವರು ಕಾಫಿರರು ಹೇಡಿಗಳು ಎಂಬಂತೆ ಮಮತಾ ಬ್ಯಾನರ್ಜಿ ಬಿಂಬಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅವರು ಕೋಲ್ಕೊತಾ ಮೇಯರ್‌ ಪಕ್ಕದಲ್ಲಿ ಕೂತು, ಎಲ್ಲರೂ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಬೇಕು ಎಂಬುದಾಗಿ ಕರೆ ನೀಡಿದ್ದರು. ಅಷ್ಟೇ ಅಲ್ಲ, ಅವರು ಬಹಿರಂಗವಾಗಿಯೇ ಮುಸ್ಲಿಮೇತರರ ವಿರುದ್ಧ ಮಾತನಾಡುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್‌ ಪಕ್ಷವು ದೇಶದ ಸಾಮಾಜಿಕ ಸಾಮರಸ್ಯವನ್ನೇ ಹಾಳು ಮಾಡುತ್ತಿದೆ” ಎಂದು ಅಮಿತ್‌ ಮಾಳವೀಯ ಹೇಳಿದ್ದಾರೆ.

“ಪಶ್ಚಿಮ ಬಂಗಾಳವು ಭಾರತದ ಅವಿಭಾಜ್ಯ ಅಂಗವಾಗಿದೆ. ಇದನ್ನು ಮಮತಾ ಬ್ಯಾನರ್ಜಿ ಅವರು ಅರ್ಥ ಮಾಡಿಕೊಳ್ಳಬೇಕು. ಲಕ್ಷಾಂತರ ಹಿಂದು ಬೆಂಗಾಲಿಗಳು ತಾಯ್ನಾಡಿಗಾಗಿ ಹೋರಾಟ ಮಾಡಿದ್ದಾರೆ. ಹಾಗಾಗಿ, ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳವನ್ನು, ಆ ರಾಜ್ಯದ ಜನರನ್ನು ಕಡೆಗಣಿಸಿ ಮಾತನಾಡಬಾರದು. ಒಬ್ಬ ಮುಖ್ಯಮಂತ್ರಿಯಾಗಿ ಈ ರೀತಿಯ ದೇಶದ್ರೋಹದ ಮಾತುಗಳನ್ನು ಆಡಬಾರದು. ಇಂತಹ ರಾಜಕೀಯ ಮೇಲಾಟಗಳ ಮೂಲಕ ಅವರು ಗದ್ದುಗೆ ಏರುತ್ತೇನೆ ಎಂಬ ಕನಸು ಕಾಣುತ್ತಿದ್ದಾರೆ. ಆದರೆ ಅದು ಕೈಗೂಡುವುದಿಲ್ಲ” ಎಂದು ಅಮಿತ್‌ ಮಾಳವೀಯ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: Viral Video: ಪ.ಬಂಗಾಳದಲ್ಲಿ ಮತ್ತೊಬ್ಬ ಮಹಿಳೆ ಮೇಲೆ ಬರ್ಬರ ಹಲ್ಲೆ; ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ‌ ಮೇಲೆ ಕಿಡಿಕಾರಿದ ಜನ

Continue Reading

ಪ್ರಮುಖ ಸುದ್ದಿ

Joe Root : ವೆಸ್ಟ್​ ಇಂಡೀಸ್ ವಿರುದ್ಧ ಶತಕ ಬಾರಿಸಿ ಸ್ಟೀವ್​ ವಾ ದಾಖಲೆ ಸರಿಗಟ್ಟಿದ ಜೋ ರೂಟ್​

Joe Root : ಸ್ಟೀವ್ ವಾ ಅವರಲ್ಲದೆ, ಹಾಲಿ ಆಟಗಾರರಾದ ಸ್ಟೀವ್ ಸ್ಮಿತ್ ಮತ್ತು ಕೇನ್ ವಿಲಿಯಮ್ಸನ್ ಅವರೊಂದಿಗೆ ರೂಟ್ ಸಾರ್ವಕಾಲಿಕ ಶತಕಗಳ ಪಟ್ಟಿಯಲ್ಲಿ ಸರಿಗಟ್ಟಿದರು. ಟೆಸ್ಟ್ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ಪರ ಅತಿ ಹೆಚ್ಚು ಶತಕಗಳನ್ನು ಗಳಿಸಿದವರ ಪಟ್ಟಿಯಲ್ಲಿ ಅಲಸ್ಟೇರ್ ಕುಕ್ (33 ಶತಕಗಳು) ಅವರಿಗಿಂತ ಹಿಂದಿದ್ದಾರೆ. ಅಗ್ರಸ್ಥಾನಕ್ಕೆ ಏರಿಸಲು 33 ವರ್ಷದ ಅವರಿಗೆ ಒಂದು ಶತಕ ಬೇಕಾಗಿದೆ.

VISTARANEWS.COM


on

Joe Root
Koo

ಬೆಂಗಳೂರು: ಇಂಗ್ಲೆಂಡ್​​ನ ನಾಟಿಂಗ್ಹಮ್​ ಟ್ರೆಂಟ್ ಬ್ರಿಜ್​​ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಂದು ಇಂಗ್ಲೆಂಡ್​​ನ ಸ್ಟಾರ್ ಬ್ಯಾಟರ್​ ಜೋ ರೂಟ್ (Joe Root ) ತಮ್ಮ 32 ನೇ ಟೆಸ್ಟ್ ಶತಕ ದಾಖಲಿಸಿದ್ದಾರೆ. ಇಂಗ್ಲೆಂಡ್​​ನ ಮಾಜಿ ನಾಯಕ ದಿನದ ಎರಡನೇ ಸೆಷನ್​​ನಲ್ಲಿ ಅವರು ಶತಕ ದಾಖಲಿಸಿದರು. ಈ ಮೂಲಕ ಅವರು ಆಸ್ಟ್ರೇಲಿಯಾದ ಕ್ರಿಕೆಟ್​ ದಿಗ್ಗಜ ಸ್ಟೀವ್​ ವಾ ಅವರ 32ಟೆಸ್ಟ್​ ಶತಕದ ದಾಖಲೆ ಮುರಿದರು.

ಸ್ಟೀವ್ ವಾ ಅವರಲ್ಲದೆ, ಹಾಲಿ ಆಟಗಾರರಾದ ಸ್ಟೀವ್ ಸ್ಮಿತ್ ಮತ್ತು ಕೇನ್ ವಿಲಿಯಮ್ಸನ್ ಅವರೊಂದಿಗೆ ರೂಟ್ ಸಾರ್ವಕಾಲಿಕ ಶತಕಗಳ ಪಟ್ಟಿಯಲ್ಲಿ ಸರಿಗಟ್ಟಿದರು. ಟೆಸ್ಟ್ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ಪರ ಅತಿ ಹೆಚ್ಚು ಶತಕಗಳನ್ನು ಗಳಿಸಿದವರ ಪಟ್ಟಿಯಲ್ಲಿ ಅಲಸ್ಟೇರ್ ಕುಕ್ (33 ಶತಕಗಳು) ಅವರಿಗಿಂತ ಹಿಂದಿದ್ದಾರೆ. ಅಗ್ರಸ್ಥಾನಕ್ಕೆ ಏರಿಸಲು 33 ವರ್ಷದ ಅವರಿಗೆ ಒಂದು ಶತಕ ಬೇಕಾಗಿದೆ.

ಮೂರನೇ ದಿನ ಇಂಗ್ಲೆಂಡ್ 127 ರನ್​​ ಗಳಿಸುವಷ್ಟರಲ್ಲಿ ಒಲಿ ಪೋಪ್ (51 ರನ್​) ಅವರನ್ನು ಕಳೆದುಕೊಂಡ ನಂತರ ಅವರು ಕ್ರೀಸ್​ಗೆ ಬಂದ ರೂಟ್​​ , ಹ್ಯಾರಿ ಬ್ರೂಕ್ ಅವರೊಂದಿಗೆ ನಿರ್ಣಾಯಕ ಜೊತೆಯಾಟದಲ್ಲಿ ಭಾಗಿಯಾಗಿದ್ದರು. ಜೇಡನ್ ಸೀಲ್ಸ್ ಅವರ ಆರನೇ ಎಸೆತದಲ್ಲಿ ಬೌಂಡರಿಯೊಂದಿಗೆ ಇನ್ನಿಂಗ್ಸ್ ಆರಂಭಿಸಿದರು. ನಂತರ ಅವರು ಸ್ಟ್ರೈಕ್ ಅನ್ನು ಬದಲಾಯಿಸುವುದನ್ನು ಮುಂದುವರೆಸಿದರು. ಹ್ಯಾರಿ ಬ್ರೂಕ್ ಅವರೊಂದಿಗೆ ಇಂಗ್ಲೆಂಡ್ ಇನ್ನಿಂಗ್ಸ್ ಅನ್ನು ಸ್ಥಿರಗೊಳಿಸಿದರು. ಇವರಿಬ್ಬರು ಯಾವುದೇ ವಿಕೆಟ್ ಕಳೆದುಕೊಳ್ಳದೆ ದಿನದ ಅಂತ್ಯದ ತನಕ ಆಡಿದರು.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್​ ಸ್ಪರ್ಧೆಗೆ ಹೊರಟಿರುವ ಅಥ್ಲೀಟ್​ಗೆ 8.5 ಕೋಟಿ ರೂ. ಪ್ರೋತ್ಸಾಹಧನ ನೀಡಿದ ಬಿಸಿಸಿಐ

4 ನೇ ದಿನದಂದು, ಅವರು 37 ರನ್​ಗಳಿಂದ ತಮ್ಮ ಇನ್ನಿಂಗ್ಸ್ ಅನ್ನು ಮುಂದುವರಿಸಿದರು. ಅವರು ಮೊದಲ ಸೆಷನ್​ನಲ್ಲಿ 91 ಎಸೆತಗಳಲ್ಲಿ 63 ನೇ ಅರ್ಧಶತಕವನ್ನು ಗಳಿಸಿದರು, ಸಚಿನ್ ತೆಂಡೂಲ್ಕರ್ (68) ಮತ್ತು ಶಿವನಾರಾಯಣ್ ಚಂದ್ರಪಾಲ್ (66) ನಂತರ ಟೆಸ್ಟ್​​ನಲ್ಲಿ ಅತಿ ಹೆಚ್ಚು ಅರ್ಧಶತಕಗಳ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದರು.

ಟೆಸ್ಟ್ ಕ್ರಿಕೆಟ್​​ನಲ್ಲಿ 5ನೇ ಶತಕ ಸಿಡಿಸಿದ ಹ್ಯಾರಿ ಬ್ರೂಕ್

ಟೆಸ್ಟ್ ಕ್ರಿಕೆಟ್​್ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಚಂದ್ರಪಾಲ್ (11,867 ರನ್) ಅವರನ್ನು ಹಿಂದಿಕ್ಕಿದ್ದಾರೆ. ಕುಕ್, ಆಂಡ್ರ್ಯೂ ಸ್ಟ್ರಾಸ್, ಅಲನ್ ಲ್ಯಾಂಬ್ ಮತ್ತು ಕಾಲಿನ್ ಕೌಡ್ರಿ ಅಗ್ರಸ್ಥಾನದಲ್ಲಿದ್ದು, ವೆಸ್ಟ್ ಇಂಡೀಸ್ ವಿರುದ್ಧ ಅವರು ತಮ್ಮ ಆರನೇ ಟೆಸ್ಟ್ ಶತಕ ದಾಖಲಿಸಿದ್ದಾರೆ. ಟ್ರೆಂಟ್ ಬ್ರಿಜ್​​ನಲ್ಲಿ ಮೈಕ್ ಅಥರ್ಟನ್ ಮತ್ತು ಡೆನಿಸ್ ಕಾಂಪ್ಟನ್ ಅವರೊಂದಿಗೆ ಸಮಬಲ ಸಾಧಿಸಿದ ಸ್ಟಾರ್ ಬ್ಯಾಟರ್​​ ಇದು ಐದನೇ ಟೆಸ್ಟ್ ಶತಕ ಇದಾಗಿದೆ.

ರೂಟ್ ಐದನೇ ವಿಕೆಟ್​ಗೆ ಹ್ಯಾರಿ ಬ್ರೂಕ್ ಅವರೊಂದಿಗೆ 189 ರನ್​​ಗಳನ್ನು ಸೇರಿಸಿದರು. ಅವರು ತಮ್ಮ ಐದನೇ ಟೆಸ್ಟ್ ಶತಕ ಬಾರಿಸಿದರು. ಅವರಿಬ್ಬರ ಬೃಹತ್ ಜೊತೆಯಾಟದ ನೆರವಿನಿಂದ ಇಂಗ್ಲೆಂಡ್ ನಾಲ್ಕನೇ ಇನ್ನಿಂಗ್ಸ್​​ನಲ್ಲಿ 350 ರನ್​ಗಳ ಮುನ್ನಡೆ ಪಡೆದಿದೆ.

Continue Reading

ಕರ್ನಾಟಕ

Karnataka Rain: ಮಳೆ ಅನಾಹುತ; ಜೀವ, ಬೆಳೆ ಹಾನಿಯ ವರದಿ ಕೂಡಲೇ ಸಲ್ಲಿಸುವಂತೆ ಸಿಎಂ ಸೂಚನೆ

Karnataka Rain: ಮಳೆ ಅನಾಹುತ ಮತ್ತು‌ ಪ್ರವಾಹದಿಂದ ಆದ ಜೀವಹಾನಿಗೆ ಪರಿಹಾರ ತುರ್ತಾಗಿ ಕೊಡಬೇಕು. ಕೋಸ್ಟಲ್ ಲೈನ್‌ನಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಅಗತ್ಯ ಇರುವ ಕಡೆ ವೈರ್‌ಗಳ ದುರಸ್ತಿ ಮತ್ತು ಬದಲಾವಣೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

VISTARANEWS.COM


on

Koo

ಕಾರವಾರ: ಮಳೆ ಅನಾಹುತರಿಂದ ಉಂಟಾದ ಜೀವ ಹಾನಿ, ಕೃಷಿ ಮತ್ತು ತೋಟಗಾರಿಕೆ ನಷ್ಟಕ್ಕೆ (Karnataka Rain) ಎನ್‌ಡಿಆರ್‌ಎಫ್‌ ಪ್ರಕಾರ ಪರಿಹಾರ ಒಗದಿಸುವ ಕುರಿತಂತೆ ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (Karnataka Rain) ಸೂಚನೆ ನೀಡಿದರು.

ಶಿರೂರು ಗುಡ್ಡ ಕುಸಿತದ ಸ್ಥಳ ಪರಿಶೀಲನೆ ಬಳಿಕ ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆಗಳನ್ನು ನೀಡಿದರು.‌

ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು. ಮಳೆ ಅನಾಹುತ ಮತ್ತು‌ ಪ್ರವಾಹದಿಂದ ಆದ ಜೀವಹಾನಿಗೆ ನೀಡಲಾಗಿರುವ ಪರಿಹಾರದ ಕುರಿತು ಮಾಹಿತಿ ಪಡೆದ ಸಿಎಂ ಉಳಿದವರಿಗೆ ತುರ್ತಾಗಿ ಕೊಡಬೇಕು. ಕೋಸ್ಟಲ್ ಲೈನ್‌ನಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ, ಅಗತ್ಯ ಇರುವ ಕಡೆ ವೈರ್‌ಗಳ ದುರಸ್ತಿ ಮತ್ತು ಬದಲಾವಣೆಗೆ ಸೂಚಿಸಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ,ಶಾಸಕರಾದ ಸತೀಶ್ ಸೈಲ್, ಶಿವರಾಮ ಹೆಬ್ಬಾರ್, ಭೀಮಣ್ಣ ನಾಯ್ಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅತೀಕ್, ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ, ಜಿ.ಪಂ. ಸಿಇಒ ಈಶ್ವರ ಕುಮಾರ್ ಕಾಂದು, ಎಸ್ಪಿ ನಾರಾಯಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ | Karnataka Rain : ಭರ್ತಿಯತ್ತ ಜಲಾಶಯಗಳು; ಪ್ರವಾಹ ಭೀತಿ ಹಿನ್ನೆಲೆ ನದಿ ತೀರದಲ್ಲಿ ಹೈ ಅಲರ್ಟ್

ಶಿರೂರು ಗುಡ್ಡ ಕುಸಿತದ ಸ್ಥಳ ವೀಕ್ಷಿಸಿದ ಸಿಎಂ; NDRF-SDRF ತಂಡಗಳ ಕಾರ್ಯಕ್ಕೆ ಮೆಚ್ಚುಗೆ

ಶಿರೂರು: ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಗುಡ್ಡ ಕುಸಿತ ಸ್ಥಳದಲ್ಲಿ (Karnataka Rain) ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ NDRF, SDRF ತಂಡಗಳ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ಶಿರೂರು ಬಳಿ ಗುಡ್ಡ ಕುಸಿತ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.

ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲ್ಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು, ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ಮಾಡಬೇಕು ಎಂದ ಸಿಎಂ, ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಸೂಚಿಸಿದರು.

ಅಂಕೋಲಾದ ಕಡಲ್ಕೊರೆತದ ಸ್ಥಳಕ್ಕೆ ಭೇಟಿ

ಗುಡ್ಡ ಕುಸಿತ ಸ್ಥಳ ವೀಕ್ಷಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕೋಲಾದ ಕಡಲ್ಕೊರೆತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಸತೀಶ್ ಸೈಲ್ ಮತ್ತು ಅಧಿಕಾರಿಗಳು ಜೊತೆಗಿದ್ದರು.

ಪತ್ರಕರ್ತರಿಗೆ ರೇನ್ ಕೋಟ್ ಕೊಟ್ಟಿದ್ದೀರಾ?

ಒಂದೇ ಸಮನೆ ಸುರಿಯುತ್ತಿದ್ದ ಭೀಕರ ಮಳೆ ನಡುವೆ ಕಾರ್ಯ ನಿರ್ವಹಿಸುತ್ತಿದ್ದ ಪತ್ರಕರ್ತರು ಮತ್ತು ಕ್ಯಾಮೆರಾಮನ್‌ಗಳನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಪತ್ರಕರ್ತರಿಗೆಲ್ಲಾ ರೇನ್ ಕೋಟ್ ಮತ್ತು ರಬ್ಬರ್ ಶೂ ಕೊಟ್ಟಿದ್ದೀರಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಮುಖ್ಯಮಂತ್ರಿಗಳಿಂದ ಈ ಪ್ರಶ್ನೆ ನಿರೀಕ್ಷಿಸಿರದ ಅಧಿಕಾರಿಗಳು ತಬ್ಬಿಬ್ಬಾದರು.

Continue Reading

ದೇಶ

Budget Session 2024: ನಾಳೆಯಿಂದ ಬಜೆಟ್‌ ಅಧಿವೇಶನ; ಕೇಂದ್ರದ ಅಜೆಂಡಾ ಏನು? ಪ್ರತಿಪಕ್ಷಗಳ ತಂತ್ರವೇನು?

Budget Session 2024: ಜುಲೈ 22ರಿಂದ ಆರಂಭವಾಗುವ ಬಜೆಟ್‌ ಅಧಿವೇಶನವು ಆಗಸ್ಟ್‌ 12ರವರೆಗೆ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ. ಅಧಿವೇಶನದಲ್ಲಿ 16 ಕಲಾಪಗಳು ನಡೆಯಲಿವೆ. ಮತ್ತೊಂದೆಡೆ, ಸಾಲು ಸಾಲು ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಇಂಡಿಯಾ ಒಕ್ಕೂಟವು ಸಜ್ಜಾಗಿದೆ.

VISTARANEWS.COM


on

Budget Session 2024
Koo

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನವು (Budget Session 2024) ಸೋಮವಾರದಿಂದ (ಜುಲೈ 22) ಆರಂಭವಾಗಲಿದ್ದು, ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್‌ ಮಂಡಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಸಜ್ಜಾಗಿದ್ದಾರೆ. ಇನ್ನು, ಪ್ರತಿಪಕ್ಷಗಳೂ ಅಷ್ಟೇ, ದೇಶದ ಪ್ರಮುಖ ವಿಷಯಗಳನ್ನು ಇಟ್ಟುಕೊಂಡು ಸಂಸತ್ತಿನಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗಿವೆ. ಹಾಗಾಗಿ, ಬಜೆಟ್‌ ಅಧಿವೇಶನವು ತೀವ್ರ ಕುತೂಹಲ ಕೆರಳಿಸಿದೆ.

ಜುಲೈ 22ರಿಂದ ಆರಂಭವಾಗುವ ಬಜೆಟ್‌ ಅಧಿವೇಶನವು ಆಗಸ್ಟ್‌ 12ರವರೆಗೆ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ. ಅಧಿವೇಶನದಲ್ಲಿ 16 ಕಲಾಪಗಳು ನಡೆಯಲಿವೆ. ಸೋಮವಾರವೇ ಆರ್ಥಿಕ ಸಮೀಕ್ಷೆ ಪ್ರಕಟಿಸಲಾಗುತ್ತದೆ. ಅಧಿವೇಶನದ ವೇಳೆ ಕೇಂದ್ರ ಸರ್ಕಾರವು ವಿಪತ್ತು ನಿರ್ವಹಣಾ (ತಿದ್ದುಪಡಿ) ವಿಧೇಯಕ, ಭಾರತೀಯ ವಾಯುಯಾನ ವಿಧೇಯಕ ಸೇರಿ ಒಟ್ಟು ಆರು ವಿಧೇಯಕಗಳನ್ನು ಮಂಡಿಸಲಿದೆ ಎಂದು ತಿಳಿದುಬಂದಿದೆ.

Union Budget 2024

ಪ್ರತಿಪಕ್ಷಗಳ ಮುಂದಿರುವ ವಿಷಯಗಳು ಯಾವವು?

ಸಾಲು ಸಾಲು ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಇಂಡಿಯಾ ಒಕ್ಕೂಟವು ಸಜ್ಜಾಗಿದೆ. ಅದರಲ್ಲೂ, ಮಣಿಪುರ ಹಿಂಸಾಚಾರ, ನೀಟ್‌ ಪ್ರಶ್ನೆಪತ್ರಿಕೆ ಪ್ರಕರಣ, ಬೆಲೆ ಏರಿಕೆ, ಯುಪಿಎಸ್‌ಸಿ ಅಕ್ರಮ ಸೇರಿ ಹಲವು ವಿಷಯಗಳನ್ನು ಪ್ರತಿಪಕ್ಷಗಳು ಚರ್ಚೆಗೆ ತರಲಿವೆ. ಸರ್ಕಾರಕ್ಕೆ ಚಾಟಿ ಬೀಸಲು ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರೂ ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.

India Bloc Meeting

ಹೊಸ ದಾಖಲೆ ಬರೆಯಲಿದ್ದಾರೆ ನಿರ್ಮಲಾ

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ. ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಫೆಬ್ರವರಿ 1ರಂದು ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಬಜೆಟ್‌ ಮಂಡಿಸಿದ್ದರು. ಇದು ಮಧ್ಯಂತರ ಬಜೆಟ್‌ ಆದ ಕಾರಣ ಮಹತ್ವದ ಘೋಷಣೆಗಳನ್ನು ಮಾಡಿರಲಿಲ್ಲ. ಆದರೆ, ನೂತನ ಸರ್ಕಾರ ರಚನೆಯಾಗಿದ್ದು, ಪೂರ್ಣ ಪ್ರಮಾಣದ ಬಜೆಟ್‌ ಮಂಡಿಸಲಾಗುತ್ತದೆ. ಉದ್ಯೋಗ ಸೃಷ್ಟಿ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೊಡುಗೆ, ತೆರಿಗೆ ಹೊರೆ ಇಳಿಸುವುದು ಸೇರಿ ಹಲವು ಅಂಶಗಳು ಮೂರನೇ ಅವಧಿಯ ಸರ್ಕಾರದ ಮೊದಲ ಬಜೆಟ್‌ನ ಪ್ರಮುಖ ಅಂಶಗಳಾಗಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Union Budget 2024: ಸ್ಟಾಂಡರ್ಡ್‌ ಡಿಡಕ್ಷನ್‌, 80 ಸಿ ಮೊತ್ತ ಹೆಚ್ಚಳ; ಬಜೆಟ್‌ನಲ್ಲಿ ಏನೆಲ್ಲ ತೆರಿಗೆ ರಿಲೀಫ್?

Continue Reading
Advertisement
Mamata Banerjee
ದೇಶ11 mins ago

Mamata Banerjee: ‘ನಾನು ಕಾಫಿರ್‌ ಅಲ್ಲ’ ಎಂದ ಮಮತಾ ಬ್ಯಾನರ್ಜಿಗೆ ಬಿಜೆಪಿ ತಿರುಗೇಟು; ಏನಿದು ವಿವಾದ?

Joe Root
ಪ್ರಮುಖ ಸುದ್ದಿ25 mins ago

Joe Root : ವೆಸ್ಟ್​ ಇಂಡೀಸ್ ವಿರುದ್ಧ ಶತಕ ಬಾರಿಸಿ ಸ್ಟೀವ್​ ವಾ ದಾಖಲೆ ಸರಿಗಟ್ಟಿದ ಜೋ ರೂಟ್​

ಕರ್ನಾಟಕ26 mins ago

Karnataka Rain: ಮಳೆ ಅನಾಹುತ; ಜೀವ, ಬೆಳೆ ಹಾನಿಯ ವರದಿ ಕೂಡಲೇ ಸಲ್ಲಿಸುವಂತೆ ಸಿಎಂ ಸೂಚನೆ

Paris Olympics 2024 :
ಕ್ರೀಡೆ57 mins ago

Paris Olympics 2024 : ಒಲಿಂಪಿಕ್ಸ್​ ಸ್ಪರ್ಧೆಗೆ ಹೊರಟಿರುವ ಅಥ್ಲೀಟ್​ಗೆ 8.5 ಕೋಟಿ ರೂ. ಪ್ರೋತ್ಸಾಹಧನ ನೀಡಿದ ಬಿಸಿಸಿಐ

ಕರ್ನಾಟಕ1 hour ago

Renaming Ramanagara: ರಾಮನಗರದಲ್ಲಿ ಬೆಂಗಳೂರಿನ ಕಸ ಸುರಿಯಲು ಹುನ್ನಾರ: ಎಚ್‌.ಡಿ. ಕುಮಾರಸ್ವಾಮಿ

Budget Session 2024
ದೇಶ1 hour ago

Budget Session 2024: ನಾಳೆಯಿಂದ ಬಜೆಟ್‌ ಅಧಿವೇಶನ; ಕೇಂದ್ರದ ಅಜೆಂಡಾ ಏನು? ಪ್ರತಿಪಕ್ಷಗಳ ತಂತ್ರವೇನು?

Paris Olympics 2024
ಕ್ರಿಕೆಟ್1 hour ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ ಈ ಅಥ್ಲೀಟ್​ಗೆ ಕೇವಲ 11 ವರ್ಷ! ಇಲ್ಲಿದೆ ಆಕೆಯ ವಿವರ

HD Kumaraswamy
ಕರ್ನಾಟಕ2 hours ago

HD Kumaraswamy: ನನ್ನ ಮತ್ತು ದೇವೇಗೌಡರ ಸರ್ಕಾರ ಕೆಡವಿದ್ದು ಯಾರು ಅಂತ ಹೇಳಿ; ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ

Women's Asia Cup 2024
ಪ್ರಮುಖ ಸುದ್ದಿ2 hours ago

Women’s Asia Cup 2024 : ದಾಖಲೆ ಬರೆದ ರಿಚಾ ಘೋಷ್​, ಇತಿಹಾಸ ಸೃಷ್ಟಿಸಿದ ಭಾರತ ತಂಡ

Vande Mataram
ದೇಶ2 hours ago

Vande Mataram: ಸಂಸತ್ತಿನಲ್ಲಿ ವಂದೇ ಮಾತರಂ, ಥ್ಯಾಂಕ್ಸ್‌ ಎಂದು ಹೇಳುವಂತಿಲ್ಲ; ಏಕಿಂಥ ಆದೇಶ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌