Yashasvi Jaiswal : ಚೆನ್ನೈ ಏರ್​ಪೋರ್ಟ್​​ನಲ್ಲಿ ಗೆಳತಿಯೊಂದಿಗೆ ಕಾಣಿಸಿಕೊಂಡ ಯಶಸ್ವಿ ಜೈಸ್ವಾಲ್​; ಇಲ್ಲಿದೆ ವಿಡಿಯೊ - Vistara News

ಪ್ರಮುಖ ಸುದ್ದಿ

Yashasvi Jaiswal : ಚೆನ್ನೈ ಏರ್​ಪೋರ್ಟ್​​ನಲ್ಲಿ ಗೆಳತಿಯೊಂದಿಗೆ ಕಾಣಿಸಿಕೊಂಡ ಯಶಸ್ವಿ ಜೈಸ್ವಾಲ್​; ಇಲ್ಲಿದೆ ವಿಡಿಯೊ

Yashasvi Jaiswal : ಜೈಸ್ವಾಲ್​ ಗೆಳತಿ ಮ್ಯಾಡಿ ಹ್ಯಾಮಿಲ್ಟನ್ ಆಗಾಗೆ ಐಪಿಎಲ್ ಪಂದ್ಯಗಳ ಸ್ಟ್ಯಾಂಡ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತರೆ. ಜೈಸ್ವಾಲ್ ಮತ್ತು ಅವರ ತಂಡವನ್ನು ಹುರಿದುಂಬಿಸುತ್ತಿದ್ದಾರೆ. ಅವರು ಅವರನ್ನು ಬೆಂಬಲಿಸುತ್ತಿರುವುದು ಇದೇ ಮೊದಲಲ್ಲ, ಅವರು ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಸಮಯದಲ್ಲಿಯೂ ಹಾಜರಿದ್ದರು.

VISTARANEWS.COM


on

Yashasvi Jaiswal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಐಪಿಎಲ್​ ಪ್ರಶಸ್ತಿ ಗೆಲ್ಲುವ ರಾಜಸ್ಥಾನ್ ರಾಯಲ್ಸ್ ತಂಡದ ಆಸೆ ಕಮರಿ ಹೋದ ಬಳಿಕ ಆ ತಂಡದ ಆಟಗಾರರು ತಮ್ಮ ತಮ್ಮ ನೆಲೆಗಳಿಗೆ ಹೋರಟು ಹೋಗಿದ್ದಾರೆ. ಅದರಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಮತ್ತು ಸಂಜು ಸ್ಯಾಮ್ಸನ್​ ಟೀಮ್​ ಇಂಡಿಯಾಕ್ಕೆ ಟಿ20 ವಿಶ್ವ ಕಪ್​ಗಾಗಿ ಆಯ್ಕೆಯಾಗಿದ್ದಾರೆ. ಚೆನ್ನೈನಲ್ಲಿ ನಡೆದ ಪ್ಲೇಆಫ್​ 2ನೇ ಪಂದ್ಯದಲ್ಲಿ ಪಂದ್ಯದಲ್ಲಿ ಆರ್​ಆರ್ ತಂಡ ಸೋತ ಬಳಿಕ ಆಟಗಾರರು ಚೆನ್ನೈ ವಿಮಾನ ನಿಲ್ದಾಣದ ಮೂಲಕ ತಮ್ಮ ಊರುಗಳಿಗೆ ತೆರಳಿದ್ದರು. ಅಂತೆಯೇ ಯಶಸ್ವಿ ಜೈಸ್ವಾಲ್​ ಕೂಡ ಅದೇ ನಿಲ್ದಾಣದ ಮೂಲಕ ಹೋಗಿದ್ದರು. ಈ ವೇಳೆ ಅವರ ಜತೆ ಗೆಳತಿಯೂ ಜತೆಗಿದ್ದರು. ಅವರಿಬ್ಬರು ಜತೆಯಾಗಿ ಹೋಗುವ ವಿಡಿಯೊ ವೈರಲ್ ಆಗಿದೆ.

ಜೈಸ್ವಾಲ್​ ಗೆಳತಿ ಮ್ಯಾಡಿ ಹ್ಯಾಮಿಲ್ಟನ್ ಆಗಾಗೆ ಐಪಿಎಲ್ ಪಂದ್ಯಗಳ ಸ್ಟ್ಯಾಂಡ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತರೆ. ಜೈಸ್ವಾಲ್ ಮತ್ತು ಅವರ ತಂಡವನ್ನು ಹುರಿದುಂಬಿಸುತ್ತಿದ್ದಾರೆ. ಅವರು ಅವರನ್ನು ಬೆಂಬಲಿಸುತ್ತಿರುವುದು ಇದೇ ಮೊದಲಲ್ಲ, ಅವರು ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಸಮಯದಲ್ಲಿಯೂ ಹಾಜರಿದ್ದರು. ಹ್ಯಾಮಿಲ್ಟನ್ ಅವರೊಂದಿಗಿನ ಸಂಬಂಧದ ಬಗ್ಗೆ ವದಂತಿಗಳನ್ನು ಜೈಸ್ವಾಲ್ ಇನ್ನೂ ಸಾರ್ವಜನಿಕವಾಗಿ ಹೇಳಿಕೊಳ್ಳದೇ ಹೋದರೂ ಸಾಮಾಜಿಕ ಮಾಧ್ಯಮಗಳು ಹಲವಾರು ಊಹಾಪೋಹಗಳನ್ನು ಸೃಷ್ಟಿಸುತ್ತಿವೆ.

ಇದನ್ನೂ ಓದಿ: Jos Butler: ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಇಂಗ್ಲೆಂಡ್​ ತಂಡದ ನಾಯಕ ಬಟ್ಲರ್​

ಕ್ರಿಕೆಟ್​ ಪ್ರೇಕ್ಷಕರು ಹ್ಯಾಮಿಲ್ಟನ್ ಅವರ ಸೌಂದರ್ಯದ ಬಗ್ಗೆಯೂ ಮೆಚ್ಚುಗೆಯ ಮಾತನಾಡಿದ್ದಾರೆ. ಯುವ ಕ್ರಿಕೆಟಿಗನೊಂದಿಗಿನ ಅವರ ಸಂಪರ್ಕವನ್ನು ಚರ್ಚಿಸುತ್ತಿದ್ದಾರೆ. ಈ ಜೋಡಿ ಮೂರು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವದಂತಿಗಳು ಕೇಳಿ ಬಂದಿವೆ. 22ರ ಹರೆಯದ ಜೈಸ್ವಾಲ್ 15 ಇನ್ನಿಂಗ್ಸ್​ಗಳಲ್ಲಿ ಒಂದು ಶತಕ ಮತ್ತು ಒಂದು ಅರ್ಧಶತಕ ಸೇರಿದಂತೆ 155.91ರ ಸ್ಟ್ರೈಕ್ ರೇಟ್​ನೊಂದಿಗೆ 435 ರನ್ ಗಳಿಸಿದ್ದಾರೆ.

ಜೂನ್ 1 ರಿಂದ ಪ್ರಾರಂಭವಾಗುವ ಮುಂಬರುವ ಟಿ 20 ವಿಶ್ವಕಪ್ 2024 ಗಾಗಿ ಜೈಸ್ವಾಲ್ ಶೀಘ್ರದಲ್ಲೇ ಯುಎಸ್ಎಗೆ ತೆರಳಲಿದ್ದಾರೆ. ಉದ್ಘಾಟನಾ ಪಂದ್ಯದಲ್ಲಿ ಭಾರತ ತಂಡ ಐರ್ಲೆಂಡ್ ವಿರುದ್ಧ ಸೆಣಸಲಿದೆ.

ಕೊಹ್ಲಿಯ ಸಾಧನೆ ಸರಿಗಟ್ಟಿದ ಯಶಸ್ವಿ ಜೈಸ್ವಾಲ್​

ರಾಂಚಿ: ಇಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಗೆಲುವು ಸಾಧಿಸಿದೆ. ಇದರೊಂದಿಗೆ ಸರಣಿ ಭಾರತದ ಕೈವಶವಾಗಿದೆ. 192 ರನ್​​ಗಳ ಸವಾಲಿನ ಗುರಿ ಬೆನ್ನಟ್ಟಿದ ಭಾರತಕ್ಕೆ ಯಶಸ್ವಿ ಜೈಸ್ವಾಲ್ (Yashasvi Jaiswal) ಆರಂಭಿಕರಾಗಿ ಕಣಕ್ಕೆ ಇಳಿದು 44 ರನ್ ಗಳಿಸಿದರು. ರೋಹಿತ್ ಶರ್ಮಾ ಜತೆ ಶಾಂತವಾಗಿ ಆಡಿದ ಅವರು ಆರಂಭಿಕ ವಿಕೆಟ್​ಗೆ 84 ರನ್​ ಬಾರಿಸಿದರು.

ಗೆಲುವಿನಲ್ಲಿ ರೋಹಿತ್ ಶರ್ಮಾ ಅವರ 55 ರನ್​, ಶುಭ್ಮನ್ ಗಿಲ್ ಅವರ ಅಜೇಯ 52 ಮತ್ತು ಧ್ರುವ್ ಜುರೆಲ್ ಅವರ ಉಪಯುಕ್ತ 35 ರನ್​ಗಳಿವೆ. ಇವೆಲ್ಲದರ ನಡುವೆ ಯಶಸ್ವಿ ಜೈಸ್ವಾಲ್​ ಭಾರತ ಪರ ವಿಶೇಷ ಸಾಧನೆ ಮಾಡಿದ್ದಾರೆ. ಈ ಹಾದಿಯಲ್ಲಿ ಅವರು ಮಾಜಿ ನಾಯಕ ವಿರಾಟ್ ಕೊಹ್ಲಿಯ ದಾಖಲೆ ಸರಿಗಟ್ಟಿದ್ದಾರೆ.

ಜೈಸ್ವಾಲ್​ ನಾಲ್ಕು 50+ ಸ್ಕೋರ್ ಮತ್ತು ಎರಡು ದ್ವಿಶತಕಗಳೊಂದಿಗೆ, ಜೈಸ್ವಾಲ್ ಪ್ರಸ್ತುತ ಸರಣಿಯಲ್ಲಿ 93.57 ಸರಾಸರಿಯಲ್ಲಿ 655 ರನ್ ಗಳಿಸಿದ್ದಾರೆ. 2016/17ರಲ್ಲಿ ಇಂಗ್ಲೆಂಡ್ ತಂಡ ಭಾರತ ಪ್ರವಾಸ ಕೈಗೊಂಡಿದ್ದಾಗ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು. ಜೈಸ್ವಾಲ್​ ಸರಣಿಯಲ್ಲಿ ಇನ್ನೂ ಒಂದು ಪಂದ್ಯವನ್ನು ಹೊಂದಿದ್ದಾರೆ. ಅಂದರೆ ಅವರು ವಿರಾಟ್ ಕೊಹ್ಲಿಯನ್ನು ಮೀರಿಸುತ್ತಾರೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ದ್ವಿಪಕ್ಷೀಯ ಸರಣಿಯಲ್ಲಿ ನಿರ್ವಿವಾದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ಅನ್ನು ಮುಗಿಸಲು 15 ವರ್ಷ ತೆಗೆದುಕೊಂಡರು. ಇನ್ನು, ರಾಹುಲ್‌ ಗಾಂಧಿ ಅವರು ಪ್ರತಿಪಕ್ಷಗಳನ್ನು 15 ತಿಂಗಳೊಳಗೇ ಮುಗಿಸಲಿದ್ದಾರೆ ಎಂದು ಕಾಂಗ್ರೆಸ್‌ ಮಾಜಿ ನಾಯಕ ಆಚಾರ ಪ್ರಮೋದ್‌ ಕೃಷ್ಣಂ ಹೇಳಿದರು.

VISTARANEWS.COM


on

Acharya Pramod Krishnam
Koo

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ (Rahul Gandhi) ಗಾಂಧಿ ಅವರು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ಹೊರಹೊಮ್ಮಿದ್ದಾರೆ. ಪ್ರತಿಪಕ್ಷ ನಾಯಕನಾಗಿ ಅವರು ಕಾಂಗ್ರೆಸ್‌ ಜತೆಗೆ ಇಂಡಿಯಾ ಒಕ್ಕೂಟವನ್ನೂ (INDIA Bloc) ಸಂಸತ್‌ನಲ್ಲಿ ಪ್ರತಿನಿಧಿಸಲಿದ್ದಾರೆ. ಇದರ ಬೆನ್ನಲ್ಲೇ, ಕಾಂಗ್ರೆಸ್‌ ಮಾಜಿ ನಾಯಕ ಆಚಾರ್ಯ ಪ್ರಮೋದ್‌ ಕೃಷ್ಣಂ (Acharya Pramod Krishnam) ಅವರು ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಕಾಂಗ್ರೆಸ್‌ನಂತೆ ಪ್ರತಿಪಕ್ಷಗಳನ್ನೂ ರಾಹುಲ್‌ ಗಾಂಧಿ ನಿರ್ನಾಮ ಮಾಡಲಿದ್ದಾರೆ” ಎಂದು ಅವರು ಹೇಳಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಐಎಎನ್‌ಎಸ್‌ ಸುದ್ದಿಸಂಸ್ಥೆಯೊಂದಿಗೆ ಆಚಾರ್ಯ ಪ್ರಮೋದ್‌ ಕೃಷ್ಣಂ ಮಾತನಾಡಿದರು. “ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ಅನ್ನು ಮುಗಿಸಲು 15 ವರ್ಷ ತೆಗೆದುಕೊಂಡರು. ಇನ್ನು, ರಾಹುಲ್‌ ಗಾಂಧಿ ಅವರು ಪ್ರತಿಪಕ್ಷಗಳನ್ನು 15 ತಿಂಗಳೊಳಗೇ ಮುಗಿಸಲಿದ್ದಾರೆ” ಎಂದು ಹೇಳಿದರು. ಸಂಸತ್‌ನಲ್ಲಿ ಪ್ರಮಾಣವಚನ ಸ್ವೀಕರಿಸುವ ವೇಳೆ ಜೈ ಪ್ಯಾಲೆಸ್ತೀನ್‌ ಎಂದು ಅಸಾದುದ್ದೀನ್‌ ಓವೈಸಿ ಘೋಷಣೆ ಕೂಗಿದ ಕುರಿತು ಪ್ರತಿಕ್ರಿಯಿಸಿದ ಅವರು, “ಇದು ಭಾರತ ಸಂಸತ್ತು. ಭಾರತದ ಸಂಸತ್‌ನಲ್ಲಿ ಹಾಗೆ ಘೋಷಣೆ ಕೂಗುವುದು ಸರಿಯಲ್ಲ. ಅವರು ಕೂಡಲೇ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದರು.

ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ಕಾಂಗ್ರೆಸ್‌ ನಾಯಕರೂ ಆಗಿದ್ದರು. ಕಲ್ಕಿ ಧಾಮದ ಪೀಠಾಧೀಶರೂ ಆಗಿರುವ ಇವರನ್ನು ಕೆಲವು ತಿಂಗಳ ಹಿಂದಷ್ಟೇ ಕಾಂಗ್ರೆಸ್‌ ಉಚ್ಚಾಟನೆ ಮಾಡಿದೆ. ಕಲ್ಕಿ ದೇವಾಲಯಕ್ಕೆ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ ಬಳಿಕ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಉಚ್ಚಾಟನೆ ಮಾಡಿತ್ತು. ಇದಾದ ಬಳಿಕ ನರೇಂದ್ರ ಮೋದಿ ಅವರು ಕಲ್ಕಿ ದೇವಾಲಯಕ್ಕೆ ಭೇಟಿ ನೀಡಿ, ಆಚಾರ್ಯ ಪ್ರಮೋದ್‌ ಕೃಷ್ಣಂ ಅವರನ್ನು ಹೊಗಳಿದ್ದರು.

“ಆಚಾರ್ಯ ಪ್ರಮೋದ್‌ ಕೃಷ್ಣಂ ಅವರು ಕಲ್ಕಿ ಧಾಮ ದೇವಾಲಯ ನಿರ್ಮಾಣಕ್ಕಾಗಿ ಹೋರಾಡಿದರು. ಇದಕ್ಕೂ ಮೊದಲಿನ ಸರ್ಕಾರಗಳು ಕಲ್ಕಿ ಧಾಮ ದೇವಾಲಯ ನಿರ್ಮಾಣಕ್ಕೆ ಅವಕಾಶ ಕೊಡಲಿಲ್ಲ. ಕಾನೂನು ಹೋರಾಟವನ್ನೂ ಪ್ರಮೋದ್‌ ಕೃಷ್ಣಂ ಅವರು ಮಾಡಬೇಕಾಯಿತು. ಕಲ್ಕಿ ಮಂದಿರ ನಿರ್ಮಾಣವಾದರೆ ಕಾನೂನು ಸುವ್ಯಸ್ಥೆಗೆ ಧಕ್ಕೆಯುಂಟಾಗುತ್ತದೆ ಎಂದರು. ಆದರೆ, ನಮ್ಮ ಸರ್ಕಾರದ ಅವಧಿಯಲ್ಲಿ ಕಲ್ಕಿ ಮಂದಿರ ನಿರ್ಮಾಣಕ್ಕಶಂಕುಸ್ತಾಪನೆ ನೆರವೇರಿಸಲಾಗುತ್ತದೆ” ಎಂದು ಪ್ರತಿಪಕ್ಷಗಳಿಗೆ ಮೋದಿ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದರು.

ಇದನ್ನೂ ಓದಿ: Parliament Session 2024: ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಹುಲ್‌ ಗಾಂಧಿ ಮಾಡಿದ್ದೇನು ಗೊತ್ತಾ? ವೈರಲಾಯ್ತು ವಿಡಿಯೋ

Continue Reading

Latest

Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Viral Video: ಆನ್‌ಲೈನ್‌ ಮೂಲಕ ಫುಡ್ ತರಿಸಿಕೊಂಡು ತಿನ್ನುವುದು ಈಗ ಸರ್ವೆಸಾಮಾನ್ಯವಾಗಿ ಬಿಟ್ಟಿದೆ. ಫುಡ್ ಡೆಲಿವರಿ ಬಾಯ್ ಮಾಡಿದ ದುಷ್ಕೃತ್ಯದ ವಿಡಿಯೊವೊಂದು ಈಗ ಎಲ್ಲೆಡೆ ವೈರಲ್ ಆಗಿದೆ. ಜೊಮ್ಯಾಟೊ ಡೆಲಿವರಿ ಬಾಯ್ ಆರ್ಡರ್ ಅನ್ನು ಮನೆಗೆ ತಲುಪಿಸಲು ಮನೆಯ ಬಾಗಿಲಿಗೆ ಬಂದಿದ್ದಾನೆ. ನಂತರ ಆತ ಆರ್ಡರ್ ನೀಡಿ ಮರಳುವಾಗ ಮನೆಯ ಬಾಗಿಲಿ ಬಳಿ ಇದ್ದ ಆಹಾರದ ಪ್ಯಾಕೆಟ್ ಒಂದನ್ನು ಗಮನಿಸಿದ್ದಾನೆ. ಮನೆಯವರು ಒಳಗೆ ಹೋದ ತಕ್ಷಣ ಅದನ್ನು ಎತ್ತಿಕೊಂಡು ಹೋಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

VISTARANEWS.COM


on

Viral Video
Koo

ಬೆಂಗಳೂರು: ಯಾವುದೇ ಆನ್‌ಲೈನ್ ಆ್ಯಪ್‌ಗಳಲ್ಲಿ ನೀವು ಯಾವುದೇ ವಸ್ತುಗಳನ್ನು ಆರ್ಡರ್ ಮಾಡಿದರೂ ಅದನ್ನು ಅವರು ಮನೆ ಬಾಗಿಲಿಗೆ ತಂದು ನೀಡುತ್ತಾರೆ ನಿಜ. ಆದರೆ ಕೆಲವೊಮ್ಮೆ ಡೆಲಿವರಿ ಬಾಯ್ಸ್ ನಿಂದ ಕೆಲವು ದುರ್ಘಟನೆಗಳು ನಡೆಯುತ್ತಿರುವುದನ್ನು ನೀವು ಕೇಳಿರಬಹುದು. ಹಾಗಾಗಿ ಡೆಲಿವರಿ ಬಾಯ್ಸ್ ಬಗ್ಗೆ ಎಚ್ಚರಿಕೆಯಿಂದಿರಿ. ಯಾಕೆಂದರೆ ಅಂತಹದೊಂದು ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದೆ. ಜೊಮ್ಯಾಟೊ ಡೆಲಿವರಿ ಬಾಯ್ ಮಾಡಿದ ಕಳ್ಳತನದ ಕೃತ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಜೂನ್ 25ರಂದು ಜೊಮ್ಯಾಟೊ ಡೆಲಿವರಿ ಬಾಯ್ ಆರ್ಡರ್ ಅನ್ನು ಮನೆಗೆ ತಲುಪಿಸಲು ಮನೆಯ ಬಾಗಿಲಿಗೆ ಬಂದಿದ್ದಾನೆ. ನಂತರ ಆತ ಆರ್ಡರ್ ನೀಡಿ ಮರಳುವಾಗ ಮನೆಯ ಬಾಗಿಲಿ ಬಳಿ ಇದ್ದ ಆಹಾರದ ಪ್ಯಾಕೆಟ್ ಒಂದನ್ನು ಗಮನಿಸಿದ್ದಾನೆ. ಮನೆಯವರು ಒಳಗೆ ಹೋದ ತಕ್ಷಣ ಅದನ್ನು ಎತ್ತಿಕೊಂಡು ಹೋಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪತ್ರಕರ್ತ ಆದಿತ್ಯ ಕಾಲ್ರಾ ಎಂಬುವವರು ಇದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅನೇಕರು ಕಾಮೆಂಟ್ ಮಾಡಿದ್ದಾರೆ. ಇದನ್ನು ಗಮನಿಸಿದ ಜೊಮ್ಯಾಟೊ ಕೇರ್ ಈ ಬಗ್ಗೆ ಕ್ಷಮೆ ಯಾಚಿಸಿದೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. “ಇದು ಸಂಭವಿಸಿದ್ದಕ್ಕಾಗಿ ನಾವು ವಿಷಾದಿಸುತ್ತೇವೆ. ಅಂತಹ ವಿಷಯಗಳನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಮತ್ತು ಅಂತಹ ಘಟನೆಗಳಿಗೆ ಕಾರಣವಾದವರ ವಿರುದ್ಧ ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜೊಮ್ಯಾಟೊ ಕೇರ್ ಭರವಸೆ ನೀಡಿದ್ದಾರೆ. ಹಾಗೇ ಇದಕ್ಕೆ ಸಂಬಂಧಪಟ್ಟ ವಿವರಗಳನ್ನು ಕಳುಹಿಸಿ, ಇದರಿಂದ ನಾವು ತ್ವರಿತವಾಗಿ ತನಿಖೆ ಮಾಡಬಹುದು ಎಂಬುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಮುಂದಿನ ಐದು ಸಾಲಿನಲ್ಲಿ ಮಹಿಳೆಯರಿಗೆ ಅವಕಾಶವಿಲ್ಲ! ಇದು ಸ್ವಾಮೀಜಿಯೊಬ್ಬರ ಕಂಡೀಷನ್‌!

Viral Video

ಜೊಮ್ಯಾಟೊ ಡೆಲಿವರಿ ಬಾಯ್ಸ್ ನ ಕಳ್ಳತನದ ಪ್ರಕರಣ ಇದೇ ಮೊದಲಲ್ಲ. ಇದಕ್ಕೂ ಮೊದಲು ಜೊಮ್ಯಾಟೊ ಡೆಲಿವರಿ ಬಾಯ್ ಒಬ್ಬ ಟ್ರಾಫಿಕ್ ಸಿಗ್ನಲ್‌ನಲ್ಲಿ ಕಾಯುತ್ತಿರುವಾಗ ಗ್ರಾಹಕರು ಆರ್ಡರ್ ಮಾಡಿದ ಬಾಕ್ಸ್ ನಿಂದ ಫುಡ್ ತೆಗೆದು ತಿಂದಿದ್ದಾನೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದರಿಂದ ಜೊಮ್ಯಾಟೊ ಆಹಾರ ಸುರಕ್ಷತಾ ಕಾರ್ಯವಿಧಾನಗಳ ಬಗ್ಗೆ ಜನರಿಗೆ ಕಳವಳ ಉಂಟಾಗಿತ್ತು. ಹಾಗಾಗಿ ಜೊಮ್ಯಾಟೊದಿಂದ ವಸ್ತುಗಳನ್ನು ಆರ್ಡರ್ ಮಾಡುವಾಗ ಗ್ರಾಹಕರು ಬಹಳ ಎಚ್ಚರಿಕೆ ಇರುವುದು ಉತ್ತಮ. ಇಲ್ಲವಾದರೆ ಇದರಿಂದ ನೀವು ಸಮಸ್ಯೆ ಎದುರಿಸಬೇಕಾಗುತ್ತದೆ.

Continue Reading

Latest

Viral Video: ಪ್ರೇಯಸಿ ಹೆಜ್ಜೆ ಇರಿಸಲು ಕಂತೆಕಂತೆ ನೋಟಿನ ಮೆಟ್ಟಿಲು! ಪ್ರಿಯತಮನ ಹುಚ್ಚು ಪ್ರೀತಿ ನೋಡಿ!

Viral Video : ಪ್ರೀತಿಸಿದ ಹುಡುಗಿಯ ಮನಮೆಚ್ಚಿಸುವುದಕ್ಕಾಗಿ ಹುಡುಗರು ಏನೆಲ್ಲಾ ಸರ್ಕಸ್ ಮಾಡುತ್ತಾರೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ತನ್ನನ್ನು ನೋಡಲು ಬರುವ ಪ್ರೇಯಸಿಯನ್ನು ಪ್ರಿಯಕರನೊಬ್ಬ ಸ್ವಾಗತಿಸಿದ ಪರಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವಿಡಿಯೊ ನೋಡಿ ಕೆಲ ಹುಡುಗಿಯರು ಮನಸ್ಸಿನಲ್ಲಿಯೇ ʼನನಗೂ ಒಬ್ಬ ಗೆಳೆಯಬೇಕುʼ…. ಎಂಬ ಹಾಡು ಗುನುಗುವಂತೆ ಆಗಿದೆ. ತನ್ನನ್ನು ನೋಡಲ್ಛಿಸಿದ ಪ್ರೇಯಸಿಗಾಗಿ ಶ್ರೀಮಂತ ಉದ್ಯಮಿಯೊಬ್ಬ ಹೆಲಿಕಾಪ್ಟರ್ ಕಳುಹಿಸಿದ್ದು ಅಲ್ಲದೇ, ಆಕೆ ಇಳಿಯಲು ಕಾರ್ಪೆಟ್ ಬದಲು ಹಣದ ನೋಟಿನ ಕಂತಿನ ಮೆಟ್ಟಿಲು ಮಾಡಿದ್ದಾನೆ!

VISTARANEWS.COM


on

Viral Video
Koo

ದುಬೈ: ಹಣ ಜೀವನದಲ್ಲಿ ತುಂಬಾ ಮೌಲ್ಯಯುತವಾದುದು. ಹಾಗಾಗಿ ಹಣವನ್ನು ಖರ್ಚು ಮಾಡಲು ಜನರು ಮೀನಾಮೇಷ ಎಣಿಸುತ್ತಾರೆ. ಆದರೆ ಕೆಲವು ಹುಡುಗರು ಮಾತ್ರ ತಮ್ಮ ಹುಡುಗಿಗಾಗಿ ಏನು ಮಾಡಲು ಕೂಡ ಸಿದ್ಧರಿರುತ್ತಾರೆ. ಇದಕ್ಕೆ ನಿರ್ದಶನ ಎಂಬಂತೆ ಇಲ್ಲೊಂದು ಘಟನೆ ನಡೆದಿದ್ದು, ತನ್ನ ಪ್ರೇಯಸಿಗಾಗಿ ಪ್ರಿಯಕರನೊಬ್ಬ ಹಣದ ಹೊಳೆಯನ್ನೇ ಹರಿಸಿದ್ದಾನೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ವಿಡಿಯೊದಲ್ಲಿ ಶ್ರೀಮಂತ ಉದ್ಯಮಿಯೊಬ್ಬ ಪ್ರೇಯಸಿಯನ್ನು ಹೆಲಿಕಾಪ್ಟರ್ ಮೂಲಕ ಕರೆಸಿಕೊಂಡಿದ್ದಾನೆ. ಅಷ್ಟೇ ಅಲ್ಲದೇ ಆಕೆ ಹೆಲಿಕಾಪ್ಟರ್‌ನಿಂದ ಇಳಿಯಲು ಕಾರ್ಪೆಟ್ ಬದಲು ಹಣದ ನೋಟಿನ ಕಂತಿನ ಮೆಟ್ಟಿಲು ಮಾಡಿದ್ದಾನೆ. ಆ ಯುವತಿ ಹಣದ ಕಂತಿನ ಮೇಲೆ ರಾಣಿಯಂತೆ ಅವನ ಕೈ ಹಿಡಿದುಕೊಂಡು ನಡೆದುಬರುತ್ತಿದ್ದಾಳೆ. ಕಂತೆ ಕಂತೆ ಹಣ ನೋಡಿದರೆ ಯಾರಿಗೆ ತಾನೆ ದಂಗಾವುದಿಲ್ಲ ಹೇಳಿ. ಹಾಗಾಗಿ ಜನರು ಇದನ್ನು ಕಂಡು ಜನರು ಹೌಹಾರಿದ್ದಾರೆ.

ಆ ಐಷರಾಮಿ ಉದ್ಯಮಿ ದುಬೈನ ಸರ್ಗಿ ಕೊಸೆಂಕೋ ಎಂಬುದಾಗಿ ತಿಳಿದುಬಂದಿದೆ. ಈತ ತನ್ನ ಇನ್ ಸ್ಟಾಗ್ರಾಂನಲ್ಲಿ ಇದನ್ನು ಪೋಸ್ಟ್ ಮಾಡಿದ್ದಾನೆ. ಜನರು ಉದ್ಯಮಿಯ ಐಷಾರಾಮಿ ಜೀವನ ಕಂಡು ದಂಗಾಗಿದ್ದಾರೆ. ವರದಿ ಪ್ರಕಾರ, ಯುವತಿ ಹಾಗೂ ಸರ್ಗಿ ಕೊಸೆಂಕೋ ಒಬ್ಬರನೊಬ್ಬರು ಪ್ರೀತಿಸುತ್ತಿದ್ದು, ಯುವತಿಗೆ ತನ್ನ ಪ್ರಿಯತಮನನ್ನು ನೋಡುವ ಆಸೆಯಾಗಿ ಆತನಿಗೆ ಕಾಲ್ ಮಾಡಿ ವಿಚಾರ ತಿಳಿಸಿದ್ದಾಳೆ. ಆಗ ಆತ ಆಕೆಯನ್ನು ಕರೆದುಕೊಂಡು ಬರಲು ತನ್ನ ಹೆಲಿಕಾಪ್ಟರ್ ಕಳುಹಿಸಿದ್ದಲ್ಲದೇ ಮನೆಗೆ ಬಂದ ಆಕೆಗೆ ಹೆಲಿಕಾಪ್ಟರ್ ನಿಂದ ಇಳಿಯಲು ನೋಟಿನ ಕಂತಿನ ಮೆಟ್ಟಿಲು ಮಾಡಿದ್ದಾನೆ. ಅಷ್ಟೇ ಅಲ್ಲದೇ ಈ ಹಣದ ಮೆಟ್ಟಿಲು ಆತನ ಮನೆಯ ತನಕ ಹಾಕಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಸಿಮೆಂಟ್, ಕಲ್ಲಿನಿಂದ ವಾಷಿಂಗ್ ಮೆಷಿನ್ ತಯಾರಿಸಿದ ಮಹಿಳೆ; ಹೇಗೆ ಕೆಲಸ ಮಾಡುತ್ತೆ ನೋಡಿ!

ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಜನರು ಆಶ್ಚರ್ಯಚಕಿತರಾಗಿದ್ದು, ನಮಗೆ ಆ ಕಂತೆ ಕಂತೆ ನೋಟು ಬೇಡ. ಅದರ ಅಕ್ಕಪಕ್ಕ ಬಿದ್ದಿರುವ ನೋಟುಗಳು ಸಿಕ್ಕರೆ ಸಾಕು, ನೆಮ್ಮದಿಯ ಜೀವನ ಕಟ್ಟಿಕೊಳ್ಳುವುದಾಗಿ ಆಸೆ ವ್ಯಕ್ತಪಡಿಸಿದ್ದಾರೆ.

Continue Reading

ವಾಣಿಜ್ಯ

5G Spectrum: 11,300 ಕೋಟಿ ರೂ. ಮೌಲ್ಯದ 5ಜಿ ತರಂಗ ಹರಾಜು; ಭಾರ್ತಿ ಏರ್‌ಟೆಲ್‌ ಮುಂಚೂಣಿ

5G Spectrum: ಭಾರ್ತಿ ಏರ್‌ಟೆಲ್‌ ಕಂಪನಿಯು 97 ಎಂಎಚ್‌ಝಡ್‌ (ಮೆಗಾ ಹರ್ಟ್ಸ್‌) ತರಂಗಗಳನ್ನು 6,857 ಕೋಟಿ ರೂ. ಪಾವತಿಸಿ 20 ವರ್ಷಗಳಿಗಾಗಿ ಖರೀದಿಸಿದೆ. ಇದರೊಂದಿಗೆ 5ಜಿ ತರಂಗಗಳ ಹರಾಜು ಪ್ರಕ್ರಿಯೆ ಬುಧವಾರ ಮುಕ್ತಾಯಗೊಂಡಿದ್ದು, ಸರ್ಕಾರಕ್ಕೆ 11,300 ಕೋಟಿ ರೂ. ಆದಾಯ ಲಭಿಸಿದೆ.

VISTARANEWS.COM


on

5G Spectrum
Koo

ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿದ್ದ 5ಜಿ ತರಂಗಗಳ ಹರಾಜು (5G Spectrum) ಪ್ರಕ್ರಿಯೆ ಭಾನುವಾರ ಮುಕ್ತಾಯಗೊಂಡಿದೆ. ಕೇಂದ್ರ ಸರ್ಕಾರವು (Central Government) 11,300 ಕೋಟಿ ರೂಪಾಯಿಗೆ 5ಜಿ ತರಂಗ ಹರಾಜು ಮಾಡಿದ್ದು, ದೇಶದ ಪ್ರಮುಖ ಖಾಸಗಿ ಟೆಲಾಕಾಂ ಕಂಪನಿಯಾದ ಭಾರ್ತಿ ಏರ್‌ಟೆಲ್‌ (Bharti Airtel) 6,857 ಕೋಟಿ ರೂ.ಗೆ ತರಂಗಗಳನ್ನು ಖರೀದಿಸುವ (5G Spectrum Auctions) ಮೂಲಕ ಹರಾಜಿನಲ್ಲಿ ಬೃಹತ್‌ ಬಿಡ್ಡರ್‌ ಎನಿಸಿದೆ.

ಭಾರ್ತಿ ಏರ್‌ಟೆಲ್‌ ಕಂಪನಿಯು 97 ಎಂಎಚ್‌ಝಡ್‌ (ಮೆಗಾ ಹರ್ಟ್ಸ್‌) ತರಂಗಗಳನ್ನು 6,857 ಕೋಟಿ ರೂ. ಪಾವತಿಸಿ 20 ವರ್ಷಗಳಿಗಾಗಿ ಖರೀದಿಸಿದೆ. “ಗ್ರಾಹಕರಿಗೆ ಅತ್ಯುತ್ತಮ, ಅತ್ಯಾಧುನಿಕ ಹಾಗೂ ಕ್ಷಿಪ್ರಗತಿಯ ಸೇವೆಗಳನ್ನು ಒದಗಿಸುವ ದಿಸೆಯಲ್ಲಿ ಭಾರ್ತಿ ಏರ್‌ಟೆಲ್‌ ಕಂಪನಿಯು 5ಜಿ ತರಂಗಗಳನ್ನು ಖರೀದಿಸಿದೆ. ಇದರಿಂದ ದೇಶದ ಮೂಲೆ ಮೂಲೆಗಳಿಗೂ 5ಜಿ ಸೇವೆಯನ್ನು ವಿಸ್ತರಿಸುವ ನಮ್ಮ ಉದ್ದೇಶಕ್ಕೆ ಈಗ ಬಲ ಬಂದಂತಾಗಿದೆ” ಎಂದು ಹರಾಜು ಪ್ರಕ್ರಿಯೆ ಮುಗಿದ ಬಳಿಕ ಕಂಪನಿಯ ಎಂಡಿ ಹಾಗೂ ಸಿಇಒ ಗೋಪಾಲ್‌ ವಿಠಲ್‌ ಮಾಹಿತಿ ನೀಡಿದ್ದಾರೆ.

ತರಂಗಗಳ ಹರಾಜು ಮೊತ್ತ ಕುಸಿತ

ತರಂಗಗಳ ಹರಾಜು ಪ್ರಕ್ರಿಯೆಗೆ 2022ಕ್ಕೆ ಹೋಲಿಸಿದರೆ ಈ ಬಾರಿ ಕಡಿಮೆ ಮೊತ್ತ ಲಭಿಸಿದೆ. 2022ರಲ್ಲಿ 72,097 ಎಂಎಚ್‌ಝಡ್‌ ರೇಡಿಯೊ ತರಂಗಗಳ ಮಾರಾಟದಿಂದ 1.5 ಲಕ್ಷ ಕೋಟಿ ರೂ. ಆದಾಯ ಲಭಿಸಿತ್ತು. ಆ ವರ್ಷದಲ್ಲಿ ಕೇಂದ್ರ ಸರ್ಕಾರವು ಮೊದಲ ಬಾರಿಗೆ 5ಜಿ ತರಂಗಗಳ ಹರಾಜು ನಡೆಸಿತ್ತು. ಆ ವರ್ಷ ಸರ್ಕಾರವು ತರಂಗಗಳ ಹರಾಜಿನಿಂದ ದಾಖಲೆ ಮೊತ್ತದ ಆದಾಯ ಗಳಿಸಿತ್ತು. ಮುಕೇಶ್‌ ಅಂಬಾನಿ ಅವರ ಜಿಯೋ ಒಂದೇ ಸುಮಾರು 88 ಸಾವಿರ ಕೋಟಿ ರೂ. ಕೊಟ್ಟು 5ಜಿ ತರಂಗಗಳನ್ನು ಖರೀದಿಸಿತ್ತು.

ಎರಡನೇ ದಿನದ (ಬುಧವಾರ-ಜೂನ್‌ 26) ಹರಾಜಿನಲ್ಲಿ ಕೇಂದ್ರ ಸರ್ಕಾರವು ಸುಮಾರು 96,238 ಕೋಟಿ ರೂ. ಮೌಲ್ಯದ ತರಂಗಗಳನ್ನು ಮಾರಾಟ ಮಾಡುವ ಉದ್ದೇಶ ಹೊಂದಿತ್ತು. ಆದರೆ, ಸರ್ಕಾರದ ಗುರಿಯಲ್ಲಿ ಶೇ.12ರಷ್ಟು ಗುರಿ ಮಾತ್ರ ಸಾಧಿಸಲಾಯಿತು ಎಂದು ತಿಳಿದುಬಂದಿದೆ. ದೇಶದಲ್ಲಿ ಜಿಯೋ, ಏರ್‌ಟೆಲ್‌ ಸೇರಿ ಹಲವು ಟೆಲಿಕಾಮ್‌ ಕಂಪನಿಗಳು 5 ಜಿ ಸೇವೆಗಳನ್ನು ಒದಗಿಸುತ್ತಿವೆ. ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ 5ಜಿ ಸೇವೆಯು ಲಭ್ಯವಿದೆ. ಈಗಾಗಲೇ ಕೇಂದ್ರ ಸರ್ಕಾರವು 6ಜಿ ಅಳವಡಿಕೆಗೆ ಚಿಂತನೆ ನಡೆಸಿದೆ.

ಇದನ್ನೂ ಓದಿ: 5G India: ಭಾರತದ 5ಜಿ ವೇಗಕ್ಕೆ ಸಾಟಿ ಇಲ್ಲ; ನಮ್ಮ ಸ್ಪೀಡ್‌ ಮುಂದೆ ಜಪಾನ್‌, ಬ್ರಿಟನ್‌ ಕೂಡ ಹಿಂದೆ!

Continue Reading
Advertisement
Acharya Pramod Krishnam
ದೇಶ12 mins ago

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

Viral Video
Latest25 mins ago

Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Rohit Sharma
ಕ್ರೀಡೆ33 mins ago

Rohit Sharma: ವಿಶ್ವ ದಾಖಲೆ ಮೇಲೆ ಕಣ್ಣಿಟ್ಟ ಹಿಟ್​ಮ್ಯಾನ್​ ರೋಹಿತ್​; ಲಂಕಾ ಆಟಗಾರನಿಗೆ ನಡುಕ

Viral Video
Latest35 mins ago

Viral Video: ಪ್ರೇಯಸಿ ಹೆಜ್ಜೆ ಇರಿಸಲು ಕಂತೆಕಂತೆ ನೋಟಿನ ಮೆಟ್ಟಿಲು! ಪ್ರಿಯತಮನ ಹುಚ್ಚು ಪ್ರೀತಿ ನೋಡಿ!

Arvind Kejriwal
ದೇಶ36 mins ago

Arvind Kejriwal: ಅರೆಸ್ಟ್‌ ಬೆನ್ನಲ್ಲೇ ತಡೆಯಾಜ್ಞೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಕೇಜ್ರಿವಾಲ್‌

Actor Darshan Full aggressive mode while he drunk
ಸ್ಯಾಂಡಲ್ ವುಡ್41 mins ago

Actor Darshan: `ದರ್ಶನ್‌’ ಫುಲ್‌ ಟೈಟ್‌ ಆದಾಗಲೇ ಅಗ್ರೆಸಿವ್‌ ಆಗೋದು‌ ಎಂದ ಭಾವನಾ ಬೆಳಗೆರೆ!

5G Spectrum
ವಾಣಿಜ್ಯ43 mins ago

5G Spectrum: 11,300 ಕೋಟಿ ರೂ. ಮೌಲ್ಯದ 5ಜಿ ತರಂಗ ಹರಾಜು; ಭಾರ್ತಿ ಏರ್‌ಟೆಲ್‌ ಮುಂಚೂಣಿ

Rain News
ಕರ್ನಾಟಕ45 mins ago

Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

Money Guide
ಮನಿ-ಗೈಡ್58 mins ago

Money Guide: ಸಾಲಕ್ಕೆ ಅಪ್ಲೈ ಮಾಡುವ ಮುನ್ನ ಈ ಅಂಶ ನಿಮಗೆ ತಿಳಿದಿರಲೇ ಬೇಕು

Prajwal revanna Case
ಕರ್ನಾಟಕ1 hour ago

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌