ZIM v IND 2024: ಭಾರತ ವಿರುದ್ಧ ಟಿ20 ಸರಣಿಗೆ ಜಿಂಬ್ವಾಬ್ವೆ ತಂಡ ಪ್ರಕಟ, ಸಿಕಂದರ್​ ನಾಯಕ - Vistara News

ಪ್ರಮುಖ ಸುದ್ದಿ

ZIM v IND 2024: ಭಾರತ ವಿರುದ್ಧ ಟಿ20 ಸರಣಿಗೆ ಜಿಂಬ್ವಾಬ್ವೆ ತಂಡ ಪ್ರಕಟ, ಸಿಕಂದರ್​ ನಾಯಕ

ZIM v IND 2024 :ಭಾರತ ವಿರುದ್ಧದ ಸರಣಿಯಲ್ಲಿ ನಖ್ವಿಯ ಭಾಗವಹಿಸುವಿಕೆ ಅವರ ಪೌರತ್ವದ ಸ್ಥಾನಮಾನದ ದೃಢೀಕರಣಕ್ಕೆ ಒಳಪಟ್ಟಿರುತ್ತದೆ ಎಂದು ಜಿಂಬಾಬ್ವೆ ಕ್ರಿಕೆಟ್ ಪ್ರಕಟಣೆಯಲ್ಲಿ ತಿಳಿಸಿದೆ. ಆಸ್ಟ್ರೇಲಿಯಾಕ್ಕೆ ತೆರಳುವ ಮೊದಲು ಬೆಲ್ಜಿಯಂನ ಬ್ರಸೆಲ್​​ನಲ್ಲಿ ಪಾಕಿಸ್ತಾನಿ ಪೋಷಕರಿಗೆ ಜನಿಸಿದ್ದರು ನಖ್ವಿ. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅವರು ಜಿಂಬಾಬ್ವೆಯನ್ನು ಪ್ರತಿನಿಧಿಸುವ ಬಯಕೆ ವ್ಯಕ್ತಪಡಿಸಿದ್ದರು. ಹೀಗಾಗಿ ಅವರನ್ನು ಭಾರತ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗಿತ್ತು.

VISTARANEWS.COM


on

ZIM v IND 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜಿಂಬಾಬ್ವೆಯ ರಾಜಧಾನಿ ಹರಾರೆಯಲ್ಲಿ ಜುಲೈ 6 ರಂದು ಪ್ರಾರಂಭವಾಗಲಿರುವ ವಿಶ್ವ ಚಾಂಪಿಯನ್ ಭಾರತ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಗೆ (ZIM v IND 2024) ಜಿಂಬಾಬ್ವೆ ಕ್ರಿಕೆಟ್​ ಸಂಸ್ಥೆ ಸೋಮವಾರ (ಜುಲೈ 1) ತನ್ನ ತಂಡವನ್ನು ಪ್ರಕಟಿಸಿದೆ. ಅನುಭವಿ ಆಲ್​ರೌಂಡರ್​ ಸಿಕಂದರ್ ರಾಜಾ ಅವರನ್ನು ಜಿಂಬಾಬ್ವೆ ತಂಡದ ನಾಯಕರನ್ನಾಗಿ ಘೋಷಿಸಲಾಗಿದೆ. ತಂಡದಲ್ಲಿ ಬೆಲ್ಜಿಯಂ ಮೂಲದ ಆಟಗಾರ ಅಂಟಮ್ ನಖ್ವಿ ಕೂಡ ಸೇರಿಕೊಂಡಿದ್ದಾರೆ.

ಭಾರತ ವಿರುದ್ಧದ ಸರಣಿಯಲ್ಲಿ ನಖ್ವಿಯ ಭಾಗವಹಿಸುವಿಕೆ ಅವರ ಪೌರತ್ವದ ಸ್ಥಾನಮಾನದ ದೃಢೀಕರಣಕ್ಕೆ ಒಳಪಟ್ಟಿರುತ್ತದೆ ಎಂದು ಜಿಂಬಾಬ್ವೆ ಕ್ರಿಕೆಟ್ ಪ್ರಕಟಣೆಯಲ್ಲಿ ತಿಳಿಸಿದೆ. ಆಸ್ಟ್ರೇಲಿಯಾಕ್ಕೆ ತೆರಳುವ ಮೊದಲು ಬೆಲ್ಜಿಯಂನ ಬ್ರಸೆಲ್​​ನಲ್ಲಿ ಪಾಕಿಸ್ತಾನಿ ಪೋಷಕರಿಗೆ ಜನಿಸಿದ್ದರು ನಖ್ವಿ. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅವರು ಜಿಂಬಾಬ್ವೆಯನ್ನು ಪ್ರತಿನಿಧಿಸುವ ಬಯಕೆ ವ್ಯಕ್ತಪಡಿಸಿದ್ದರು. ಹೀಗಾಗಿ ಅವರನ್ನು ಭಾರತ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗಿತ್ತು.

ಕೆರಿಬಿಯನ್ ಮತ್ತು ಯುಎಸ್ಎಯಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆಯಲು ಜಿಂಬಾಬ್ವೆ ತಂಡ ವಿಫಲಗೊಂಡಿತ್ತು. ಆ ಬಳಿ ಜಿಂಬಾಬ್ವೆ ಹೊಸ ಮುಖ್ಯ ಕೋಚ್ ಜಸ್ಟಿನ್ ಸಮ್ಮನ್ಸ್ ಅವರ ಅಡಿಯಲ್ಲಿ ತಂಡವನ್ನು ಪುನರ್​ರಚನೆ ಮಾಡಲಾಯಿತು. ಇತ್ತೀಚೆಗೆ ಮುಕ್ತಾಯಗೊಂಡ ಟಿ 20 ವಿಶ್ವಕಪ್​ಗೆ ಅರ್ಹತೆ ಪಡೆಯಲು ವಿಫಲವಾದ ನಂತರ ಹೊಸ ಮುಖ್ಯ ಕೋಚ್ ಜಸ್ಟಿನ್ ಸಮ್ಮನ್ಸ್ ಅವರ ಅಡಿಯಲ್ಲಿ ಪುನರ್ನಿರ್ಮಾಣ ಮಾಡುವ ಗುರಿಯನ್ನು ಹೊಂದಿರುವ ಜಿಂಬಾಬ್ವೆ, ರಾಜಾ ನೇತೃತ್ವದ ಯುವ ತಂಡವನ್ನು ಆಯ್ಕೆ ಮಾಡಿದೆ. ಇದು ಭಾರತ ವಿರುದ್ಧ ಆಡಿ ತನ್ನು ಅನುಭವ ಹೆಚ್ಚಿಸಿಕೊಳ್ಳಲಿದೆ.

ಇದನ್ನೂ ಓದಿ: IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್​​ನಲ್ಲಿ ಮಹಿಳೆಯರ ತಂಡಕ್ಕೆ10 ವಿಕೆಟ್​ ಭರ್ಜರಿ ಭರ್ಜರಿ ಜಯ

86 ಟಿ 20 ಪಂದ್ಯಗಳನ್ನು ಹೊಂದಿರುವ ನಾಯಕ ರಾಜಾ ತಂಡದ ಅತ್ಯಂತ ಅನುಭವಿ ಆಟಗಾರ. ಲ್ಯೂಕ್ ಜಾಂಗ್ವೆ ಜಿಂಬಾಬ್ವೆ ಪರ ಚುಟುಕು ಸ್ವರೂಪದಲ್ಲಿ 63 ಪಂದ್ಯಗಳನ್ನು ಆಡಿದ ಇನ್ನೊಬ್ಬ ಆಟಗಾರ. ವೇಗದ ಬೌಲರ್​ಗಳಾದ ರಿಚರ್ಡ್ ಎನ್ಗರವ (52 ಟಿ 20 ಐ) ಮತ್ತು ಬ್ಲೆಸ್ಸಿಂಗ್ ಮುಜರಬಾನಿ (51 ಟಿ 20 ಐ) ತಂಡದಲ್ಲಿರುವ ಇತರ ಅನುಭವಿ ಕ್ರಿಕೆಟಿಗರು. ಅಲ್ಲಿನ ಅನುಭವಿ ಆಟಗಾರರಾದ ಕ್ರೇಗ್ ಎರ್ವಿನ್ ಮತ್ತು ಸೀನ್ ವಿಲಿಯಮ್ಸ್ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ರಿಯಾನ್ ಬರ್ಲ್, ಜಾಯ್ಲಾರ್ಡ್ ಗುಂಬಿ ಮತ್ತು ಐನ್ಸ್ಲೆ ಎನ್ಡ್ಲೋವು ಕೂಡ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.

ಜಿಂಬಾಬ್ವೆ ತಂಡ: ಸಿಕಂದರ್ ರಾಜಾ (ನಾಯಕ), ಅಕ್ರಮ್ ಫರಾಜ್, ಬೆನೆಟ್ ಬ್ರಿಯಾನ್, ಕ್ಯಾಂಪ್ಬೆಲ್ ಜೋನಾಥನ್, ಚಟಾರಾ ತೆಂಡೈ, ಜೊಂಗ್ವೆ ಲ್ಯೂಕ್, ಕೈಯಾ ಇನ್ನೋಸೆಂಟ್, ಮದಂಡೆ ಕ್ಲೈವ್, ಮಡ್ವೆರೆ ವೆಸ್ಲಿ, ಮಾವುಮಣಿ ತಡಿವಾನಾಶೆ, ಮಸಕಡ್ಜಾ ವೆಲ್ಲಿಂಗ್ಟನ್, ಮಾವುಟಾ ಬ್ರಾಂಡನ್, ಮುಜರಬಾನಿ ಬ್ಲೆಸ್ಸಿಂಗ್, ಮೈಯರ್ಸ್ ಡಿಯೋನ್, ನಖ್ವಿ ಅಂಟಮ್, ಎನ್ಗರವಾ ರಿಚರ್ಡ್, ಶುಂಬಾ ಮಿಲ್ಟನ್.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Mangalore News: ಫಲಿಸದ ಸತತ 6-7 ಗಂಟೆ ಕಾರ್ಯಾಚರಣೆ; ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಸಾವು

Mangalore News: ಮಂಗಳೂರಿನ ಬಲ್ಮಠ ರೋಡ್ ಸಮೀಪದ ರೋಹನ್ ಕಾರ್ಪೋರೇಶನ್‌ಗೆ ಸೇರಿದ ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿದು, ಇಬ್ಬರು ಕಾರ್ಮಿಕರು ಸಿಲುಕಿದ್ದರು. ಈ ಪೈಕಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾನೆ.

VISTARANEWS.COM


on

Mangalore News
Koo

ಮಂಗಳೂರು: ನಗರದಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ ಪ್ರಕರಣದಲ್ಲಿ (Mangalore News) ಮಣ್ಣಿನಡಿ ಸಿಲುಕಿದ್ದ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾನೆ. ಮಣ್ಣಿನಡಿ ಸಿಲುಕಿದ್ದ ಇಬ್ಬರ ಪೈಕಿ ಒಬ್ಬ ಕಾರ್ಮಿಕನನ್ನು ಬುಧವಾರ ಸಂಜೆ ರಕ್ಷಣೆ ಮಾಡಲಾಗಿತ್ತು. ಆದರೆ, ಮತ್ತೊಬ್ಬ ಕಾರ್ಮಿಕನ ರಕ್ಷಣೆಗಾಗಿ ಸತತ 6-7 ಗಂಟೆ ನಡೆದ ಕಾರ್ಯಾಚರಣೆ ಫಲ ನೀಡಲಿಲ್ಲ.

ಬಿಹಾರ ಮೂಲದ 30 ವರ್ಷದ ಚಂದನ್ ಮೃತ ಪಟ್ಟಿದ್ದಾನೆ. ಸತತ 6-7 ಗಂಟೆ ಕಾರ್ಯಾಚರಣೆ ನಡೆಸಿ ಕಾರ್ಮಿಕನನ್ನು ರಕ್ಷಿಸಲು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಅಗ್ನಿ ಶಾಮಕ ದಳ ಸಿಬ್ಬಂದಿ ತೀವ್ರ ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ.

ಮಂಗಳೂರಿನ ಬಲ್ಮಠ ರೋಡ್ ಸಮೀಪದ ರೋಹನ್ ಕಾರ್ಪೋರೇಶನ್‌ಗೆ ಸೇರಿದ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಬಿಹಾರ ಮೂಲದ ಚಂದನ್ ಮತ್ತು ರಾಜಕುಮಾರ್ ಸಿಲುಕಿದ್ದರು. ಕಾರ್ಯಾಚರಣೆಯಲ್ಲಿ ಮೊದಲಿಗೆ ರಾಜಕುಮಾರ್‌ನ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಚಂದನ್‌ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿತ್ತು. ಸತತ ಕಾರ್ಯಾಚರಣೆ ಬಳಿಕ ಮಣ್ಣಿನಡಿ ಸಿಲುಕಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಚಂದನ್‌ನನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಕಾರ್ಮಿಕ ಕೊನೆಯುಸಿರೆಳೆದಿದ್ದಾನೆ.

ಎಲ್ಲ ಕಟ್ಟಡ ಕಾಮಗಾರಿಗಳ ಸ್ಥಗಿತಕ್ಕೆ ಪಾಲಿಕೆ ಆದೇಶ

ಮಣ್ಣು ಕುಸಿತ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ನಗರದಾದ್ಯಂತ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಆದೇಶ ಹೊರಡಿಸಿದೆ. ಮಳೆಗಾಲ ಮುಕ್ತಾಯವಾಗುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತ ಮಾಡಲು ಸೂಚಿಸಲಾಗಿದೆ.

ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವಂತೆ ಸೂಚಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಅಳವಡಿಸಿಕೊಂಡು ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ | Mangalore News: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

ಅವೈಜ್ಞಾನಿಕ ಭೂ ಅಗೆತ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಪಾಲಿಕೆ ಕಮಿಷನರ್ ಆದೇಶ ಹೊರಡಿಸಿದ್ದಾರೆ. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆಯನ್ನು ಕಮಿಷನರ್‌ ನೀಡಿದ್ದಾರೆ.

Continue Reading

ದೇಶ

Poverty In India: ಭಾರತದಲ್ಲಿ ಒಂದು ದಶಕದಲ್ಲೇ ಬಡತನ ಪ್ರಮಾಣ 21.2%ರಿಂದ 8.5%ಕ್ಕೆ ಇಳಿಕೆ

Poverty In India: ಎನ್‌ಸಿಎಇಆರ್‌ನ ಸೊನಾಲ್ಡೆ ದೇಸಾಯಿ ಅವರು ಇಂಡಿಯಾ ಹ್ಯುಮನ್‌ ಡೆವಲೆಪ್‌ಮೆಂಟ್‌ ಸರ್ವೇ (IHDS) ಡೇಟಾವನ್ನು ಆಧರಿಸಿ ‘ಬದಲಾಗುತ್ತಿರುವ ಸಮಾಜದಲ್ಲಿ ಸಾಮಾಜಿಕ ಸುರಕ್ಷತಾ ಜಾಲಗಳು’ ಎಂಬ ಶೀರ್ಷಿಕೆ ಅಡಿಯಲ್ಲಿ ವರದಿ ತಯಾರಿಸಿದ್ದು, ಹಲವು ಅಂಶಗಳ ಮೇಲೆ ಬೆಳಕು ಚೆಲ್ಲಿದ್ದಾರೆ. ಇದರಲ್ಲಿ ಭಾರತದ ಬಡತನ ಪ್ರಮಾಣ ಇಳಿಕೆಯಾಗಿರುವುದು ಗಮನಾರ್ಹ ಸಂಗತಿಯಾಗಿದೆ.

VISTARANEWS.COM


on

Poverty In India
Koo

ನವದೆಹಲಿ: ಭಾರತದಲ್ಲಿ ಕೆಲ ವರ್ಷಗಳಿಂದ ತಲಾದಾಯ ಜಾಸ್ತಿಯಾಗುತ್ತಿದ್ದು, ಜನ ಬಡತನದಿಂದ ಹೊರಬರುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಭಾರತದಲ್ಲಿರುವ ಬಡತನ (Poverty In India) ಪ್ರಮಾಣದ ಕುರಿತು ಆರ್ಥಿಕ ಅಂಶಗಳ ಮೇಲೆ ಗಮನ ಇರಿಸುವ ಎನ್‌ಸಿಎಇಆರ್‌ ಸಂಸ್ಥೆಯು(NCAER Report) ನೂತನ ವರದಿಯನ್ನು ಬಿಡುಗಡೆಗೊಳಿಸಿದ್ದು, ಭಾರತದ ಬಡತನ ಪ್ರಮಾಣವು ಒಂದು ದಶಕದಲ್ಲಿ ಶೇ.8.5ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದೆ. 2011-12ನೇ ಸಾಲಿನಲ್ಲಿ ಭಾರತದ ಬಡತನ ಪ್ರಮಾಣವು ಶೇ.21.2ರಷ್ಟು ಇತ್ತು. ಈಗ ಅದು ಶೇ.8.5ಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ.

ಎನ್‌ಸಿಎಇಆರ್‌ನ ಸೊನಾಲ್ಡೆ ದೇಸಾಯಿ ಅವರು ಇಂಡಿಯಾ ಹ್ಯುಮನ್‌ ಡೆವಲೆಪ್‌ಮೆಂಟ್‌ ಸರ್ವೇ (IHDS) ಡೇಟಾವನ್ನು ಆಧರಿಸಿ ‘ಬದಲಾಗುತ್ತಿರುವ ಸಮಾಜದಲ್ಲಿ ಸಾಮಾಜಿಕ ಸುರಕ್ಷತಾ ಜಾಲಗಳು’ ಎಂಬ ಶೀರ್ಷಿಕೆ ಅಡಿಯಲ್ಲಿ ವರದಿ ತಯಾರಿಸಿದ್ದು, ಹಲವು ಅಂಶಗಳ ಮೇಲೆ ಬೆಳಕು ಚೆಲ್ಲಿದ್ದಾರೆ. “ಕೊರೊನಾ ಬಿಕ್ಕಟ್ಟಿನ ಮಧ್ಯೆಯೂ ದೇಶದಲ್ಲಿ ಬಡತನದಿಂದ ಹೊರಬಂದಿರುವವರ ಸಂಖ್ಯೆ ಜಾಸ್ತಿ ಇದೆ” ಎಂಬುದಾಗಿ ವರದಿಯಲ್ಲಿ ಅವರು ಉಲ್ಲೇಖಿಸಿದ್ದಾರೆ.

india poverty

“ಭಾರತದಲ್ಲಿ ಕಳೆದ ಹಲವು ವರ್ಷಗಳಿಂದ ಬಡತನ ರೇಖೆಯಿಂದ ಮೇಲೆ ಬರುತ್ತಿರುವವರ ಪ್ರಮಾಣ ಗಣನೀಯವಾಗಿ ಜಾಸ್ತಿಯಾಗುತ್ತಿದೆ. 2004-05ನೇ ಸಾಲಿನಲ್ಲಿ ಬಡತನ ಪ್ರಮಾಣವು ಶೇ.38.6ರಷ್ಟು ಇತ್ತು. ಇದು 2011-12ರಲ್ಲಿ ಶೇ.21.2ಕ್ಕೆ ಇಳಿಯಿತು. ಇನ್ನು 2022-24ರ ಅವಧಿಯಲ್ಲಿ ಶೇ.8.5ಕ್ಕೆ ಇಳಿಕೆಯಾಗಿರುವುದು ಸಕಾರಾತ್ಮಕ ಸಂಗತಿಯಾಗಿದೆ. ಕೊರೊನಾ ವೈರಸ್‌ ಬಿಕ್ಕಟ್ಟಿನ ಮಧ್ಯೆಯೂ ಬಡತನ ಪ್ರಮಾಣ ಇಳಿದಿರುವುದು ಉತ್ತಮ ಬೆಳವಣಿಗೆಯಾಗಿದೆ” ಎಂದು ವರದಿ ತಿಳಿಸಿದೆ.

24.82 ಕೋಟಿ ಜನ ಬಡತನದಿಂದ ಪಾರು

ಕಳೆದ ಒಂಬತ್ತು ವರ್ಷಗಳಲ್ಲಿ ಭಾರತದಲ್ಲಿ ಒಟ್ಟು 24.82 ಕೋಟಿ ಜನರು ಬಹುಆಯಾಮದ ಬಡತನದಿಂದ ಪಾರಾಗಿದ್ದಾರೆ ಎಂದು ಆರು ತಿಂಗಳ ಹಿಂದೆಯೇ ನೀತಿ ಆಯೋಗದ ವರದಿ ತಿಳಿಸಿತ್ತು. ಭಾರತದಲ್ಲಿ ಬಹುಆಯಾಮದ ಬಡತನವು 2013-14ರಿಂದ 2022-23ರ ಅವಧಿಯಲ್ಲಿ 29.17% ರಿಂದ 11.28% ಕ್ಕೆ ಇಳಿದಿದೆ ಹಾಗೂ 24..82 ಕೋಟಿ ಜನರು ಬಡತನದಿಂದ ಹೊರ ಬಂದಿದ್ದಾರೆ ಎಂದು ತಿಳಿಸಿತ್ತು.

ಉತ್ತರ ಪ್ರದೇಶವು ಕಳೆದ ಒಂಬತ್ತು ವರ್ಷಗಳಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ. 5.94 ಕೋಟಿ ಜನರು ಬಹುಆಯಾಮದ ಬಡತನದಿಂದ ಪಾರಾಗುವುದರೊಂದಿಗೆ ಬಡವರ ಸಂಖ್ಯೆಯಲ್ಲಿ ಅತಿದೊಡ್ಡ ಕುಸಿತವನ್ನು ದಾಖಲಿಸಿದೆ. ನಂತರ ಸ್ಥಾನದಲ್ಲಿ ಬಿಹಾರ ಇದ್ದು, 3.77 ಕೋಟಿ, ಮಧ್ಯಪ್ರದೇಶ 2.30 ಕೋಟಿ ಮತ್ತು ರಾಜಸ್ಥಾನ 1.87 ಕೋಟಿ ಜನರು ಬಡತನದಿಂದ ಪಾರಾಗಿದ್ದಾರೆ ಎಂಬುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇದನ್ನೂ ಓದಿ: Narendra Modi: ಮುಂದಿನ 5 ವರ್ಷ ಬಡತನ ವಿರುದ್ಧದ ಹೋರಾಟಕ್ಕೆ ಮೀಸಲು; ರಾಜ್ಯಸಭೆಯಲ್ಲಿ ಮೋದಿ ಭರವಸೆ

Continue Reading

ಕರ್ನಾಟಕ

Dengue fever: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಿದ ರಾಜ್ಯ ಸರ್ಕಾರ

Dengue fever: ಡೆಂಗ್ಯೂ ಪರೀಕ್ಷೆಗೆ ದುಪ್ಪಟ್ಟು ಹಣ ವಸೂಲಿಯಾಗುತ್ತಿದೆ ಎಂಬ ಬಗ್ಗೆ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ನಿಗದಿಗಿಂತ ಹೆಚ್ಚು ಹಣ ಸ್ವೀಕರಿಸದಂತೆ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

VISTARANEWS.COM


on

Dengue fever
Koo

ಬೆಂಗಳೂರು: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಡೆಂಗ್ಯೂ ಜ್ವರ ಪತ್ತೆಗೆ ಎರಡು ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಈ ಪರೀಕ್ಷೆಗಳಿಗೆ ಒಟ್ಟು 600 ರೂ. ನಿಗದಿಪಡಿಸಲು ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ.

ಡೆಂಗ್ಯೂ ಜ್ವರ ಪತ್ತೆಗೆ ಎರಡು ಮಾದರಿಯ ಪರೀಕ್ಷೆ ನಡೆಸಲಾಗುತ್ತದೆ. ತಲಾ 300 ರೂ.ನಂತೆ ಒಟ್ಟು 600 ರೂ. ದರವನ್ನು ನಿಗದಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಈ ಸಂದರ್ಭವನ್ನು ಬಳಸಿಕೊಂಡು ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ದುಪ್ಪಟ್ಟು ಹಣ ವಸೂಲಿಯಾಗುತ್ತಿದೆ ಎಂಬ ಬಗ್ಗೆ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ರಾಜ್ಯ ಸರ್ಕಾರ ದರ ನಿಗದಿ ಮಾಡಲು ಮುಂದಾಗಿದೆ.

ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ

ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುತ್ತಿಲ್ಲ. ಕೆಪಿಎಂ ಆಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯ. IHIPಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಅಪ್ಲೋಡ್ ಮಾಡುತ್ತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯು ತಪಾಸಣೆಗೆ ದರ ನಿಗದಿ ಮಾಡುವ ಬಗ್ಗೆ ಚರ್ಚೆ ಮಾಡಿಲ್ಲ. ಆ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮಂಗಳವಾರ ತಿಳಿಸಿದ್ದರು.

ನಮ್ಮ ವೆಬ್‌ಸೈಟಿನಲ್ಲಿ ಡೆಂಗ್ಯೂ ಬುಲೆಟಿನ್ ಬಿಡುಗಡೆ ಮಾಡುತ್ತೇವೆ. ಪ್ರತಿ ದಿನ ಎಷ್ಟು ಕೇಸ್ ಬಂದಿದೆ ಎನ್ನುವ ಮಾಹಿತಿ ಹಾಕುತ್ತೇವೆ. ದಿನ ನಿತ್ಯ ಡೆಂಗ್ಯೂ ಬುಲೆಟಿನ್ ಕೊಡಲಾಗುತ್ತದೆ. ಬೆಂಗಳೂರು ನಗರದಲ್ಲಿ ಬಿಬಿಎಂಪಿ ಎಲ್ಲಾ ಮನೆಗಳ ಸರ್ವೆ ಮಾಡುತ್ತಿದೆ. ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲ ಎಲ್ಲಾ ಮನೆಗಳ ಸರ್ವೆ ನಡೆಸಲು ನಾನು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ. ಮನೆ ಮನೆಗೆ ಭೇಟಿ ಕೊಡಲು ಸೂಚಿಸಿದ್ದೇನೆ. ರಾಜ್ಯಾದ್ಯಂತ ಡೆಂಗ್ಯೂ ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ. ಪ್ರತಿ ಶುಕ್ರವಾರ ಡೆಂಗ್ಯೂ ವಿಚಾರದಲ್ಲಿ ಫೀಲ್ಡ್‌ನಲ್ಲಿ ಇದ್ದು, ಮಾನಿಟರ್ ಮಾಡಲು ಸೂಚಿಸಿದ್ದೇನೆ. ಪ್ರತಿ ಶುಕ್ರವಾರ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದರು.

ಇದನ್ನೂ ಓದಿ | Dengue Fever: ಮಳೆಗಾಲ ಬರುತ್ತಿದೆ! ಡೆಂಗ್ಯೂ ಬಗ್ಗೆ ಇರಲಿ ಎಚ್ಚರಿಕೆ!

ಹೊಳೆನರಸೀಪುರದಲ್ಲಿ ಡೆಂಗ್ಯೂ ಜ್ವರದಿಂದ ಬಾಲಕಿ ಸಾವು

ಹಾಸನ: ಮಾರಕ ಡೆಂಗ್ಯೂ ಜ್ವರಕ್ಕೆ ಮತ್ತೊಬ್ಬ ಬಾಲಕಿ ಬಲಿಯಾಗಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ
ತಾಲೂಕಿನ ಗುಡ್ಡೇನಹಳ್ಳಿಯಲ್ಲಿ ನಡೆದಿದೆ. ಕಲಾಶ್ರೀ ಜಿ.ಎಲ್. (11) ಮೃತಪಟ್ಟ ಬಾಲಕಿ.

ಗುಡ್ಡೇನಹಳ್ಳಿ ಗ್ರಾಮದ ಲೋಕೇಶ್ ತನುಜ ದಂಪತಿಗಳ ಪುತ್ರಿ ಕಲಾಶ್ರೀ ಜಿ.ಎಲ್. ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದಳು. ಆಕೆಗೆ ಹೊಳೆನರಸೀಪುರ ಪಟ್ಟಣದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹಿಮ್ಸ್ ಆಸ್ಪತ್ರೆಗೆ ಶನಿವಾರ ಸಂಜೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾಳೆ. ಇದರಿಂದ ಒಂದು ವಾರದಲ್ಲಿ ಡೆಂಗ್ಯೂ ಜ್ವರಕ್ಕೆ ಇಬ್ಬರು ಹೆಣ್ಣುಮಕ್ಕಳು ಬಲಿಯಾದಂತಾಗಿದೆ.

ಇದನ್ನೂ ಓದಿ | Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

ಜೂ.28 ರಂದು ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಗ್ರಾಮದ ಕುಮಾರ್ ಎಂಬುವರ ಪುತ್ರಿ ವರ್ಷಿಕ (8) ಮೃತಪಟ್ಟಿದ್ದಳು. ಅತಿಯಾದ ಜ್ವರದಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವರ್ಷಿಕ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆದಿದ್ದಳು.

Continue Reading

Latest

Viral Video: ಸಾವು ಹೇಗೆಲ್ಲ ಹೊಂಚು ಹಾಕುತ್ತದೆ! ಈ ವಿಡಿಯೊ ನೋಡಿ

ಉತ್ತರ ಪ್ರದೇಶದ ಮಹೋಬಾದಲ್ಲಿ ಸಂಬಂಧಿಕರ ಮನೆಯಲ್ಲಿ ಧಾರ್ಮಿಕ ಸಮಾರಂಭ ನಡೆಯುತ್ತಿದ್ದ ಹಿನ್ನಲೆಯಲ್ಲಿ ಸಮಾರಂಭಕ್ಕೆ ಆಗಮಿಸಿದ್ದ ದೇವೇಂದ್ರ ಎಂಬ ವ್ಯಕ್ತಿ ಆಚರಣೆಯ ಅಂಗವಾಗಿ ಧ್ವಜವನ್ನು ಕಟ್ಟಲು ಬಿದಿರಿನ ಕೋಲನ್ನು ತೆಗೆದುಕೊಂಡು ಬಂದಿದ್ದಾರೆ. ಆಗ ಮನೆಯ ಮೇಲಿದ್ದ ವಿದ್ಯುತ್ ತಂತಿಗೆ ಕೋಲು ತಗುಲಿ ಶಾಕ್ ಹೊಡೆದು ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo

ಹೈ ವೋಲ್ಟೇಜ್ ವಿದ್ಯುತ್ ತಂತಿ ಹಾದುಹೋಗಿರುವ ಕೆಲವೊಂದು ಸ್ಥಳಗಳಲ್ಲಿ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಆ ಸ್ಥಳದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿಗಳ ಸಂಪರ್ಕಕ್ಕೆ ಬರದಂತೆ ನೋಡಿಕೊಂಡು ಕೆಲಸ ಮಾಡಬೇಕು. ಇಲ್ಲವಾದರೆ ಇದರಿಂದ ಜೀವಕ್ಕೇ ಅಪಾಯವಾಗಬಹುದು. ಇದೀಗ ಅಂಹತದೊಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಸಂಬಂಧಿಕರ ಮನೆಯಲ್ಲಿ ಧಾರ್ಮಿಕ ಸಮಾರಂಭ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಸಮಾರಂಭಕ್ಕೆ ಬೇಕಾದ ತಯಾರಿ ಮಾಡಲು ಬಿದಿರಿನ ಕೋಲನ್ನು ಸಾಗಿಸುತ್ತಿದ್ದ ವ್ಯಕ್ತಿ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವಿದ್ಯುತ್ ಶಾಕ್‌ನಿಂದ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮಹೋಬಾದಲ್ಲಿ ನಡೆದಿದ್ದು, ಈ ವೀಡಿಯೊ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್(Viral Video) ಆಗಿದೆ.

ಮೃತ ವ್ಯಕ್ತಿ ಚಂದೋನ್ ಗ್ರಾಮದ ನಿವಾಸಿ 35 ವರ್ಷದ ದೇವೇಂದ್ರ ಎಂದು ಗುರುತಿಸಲಾಗಿದ್ದು, ವರದಿ ಪ್ರಕಾರ ದೇವೇಂದ್ರ ತನ್ನ ಸೋದರ ಸಂಬಂಧಿ ಸುವೇಂದ್ರ ಸಿಂಗ್ ಅವರ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಸೋಡಾ ನಗರಕ್ಕೆ ಬಂದಿದ್ದರು. ಘಟನೆಯ ಸಮಯದಲ್ಲಿ, ಅವರ ಕುಟುಂಬ ಸದಸ್ಯರು ದೇವಾಲಯಕ್ಕೆ ಹೋಗಲು ತಯಾರಿ ನಡೆಸುತ್ತಿದ್ದರು. ಕೆಲವರು ಪ್ರಸಾದ ತಯಾರಿಸುತ್ತಿದ್ದರೆ, ಇತರರು ದೇವಾಲಯದಲ್ಲಿ ಆಚರಣೆಗಳಿಗೆ ಬೇಕಾದ ತಯಾರಿ ನಡೆಸುತ್ತಿದ್ದರು. ಈ ನಡುವೆ, ದೇವೇಂದ್ರ ಆಚರಣೆಯ ಅಂಗವಾಗಿ ಧ್ವಜವನ್ನು ಕಟ್ಟಲು ಬಿದಿರಿನ ಕೋಲನ್ನು ತೆಗೆದುಕೊಂಡು ಬಂದಿದ್ದಾರೆ. ಆಗ ಮನೆಯ ಮೇಲಿದ್ದ ವಿದ್ಯುತ್ ತಂತಿಗೆ ಕೋಲು ತಗುಲಿ ಶಾಕ್ ಹೊಡೆದು ಕೆಳಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ವಿಡಿಯೊದಲ್ಲಿ ದೇವೆಂದ್ರ ಅವರು ತಮ್ಮ ಸಂಬಂಧಿಕರ ಸಮ್ಮುಖದಲ್ಲಿ ಬಿದಿರಿನ ಕೋಲನ್ನು ಹಿಡಿದುಕೊಂಡು ಮನೆಯೊಳಗೆ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ನಂತರ ದೇವೇಂದ್ರ ಬಲವಾದ ಆಘಾತದಿಂದ ಬಿದ್ದಾಗ ಅವರ ತಲೆ ಕಬ್ಬಿಣದ ಗೇಟ್‍ಗೆ ತಗುಲಿದೆ.. ಆಗ ಅವರ ಕುಟುಂಬ ಸದಸ್ಯರು ದೇವೇಂದ್ರ ಅವರ ಕೈ ಮತ್ತು ಕಾಲುಗಳನ್ನು ಮಸಾಜ್ ಮಾಡುವ ಮೂಲಕ ಸಹಾಯ ಮಾಡಿದರು. ಆದರೆ ಕೆಲವೇ ಸೆಕೆಂಡುಗಳಲ್ಲಿ ಅವರು ಸಾವನ್ನಪ್ಪಿದ್ದಾರೆ. ಅವರ ಕುಟುಂಬ ಸದಸ್ಯರು ತಿಳಿಸಿದ ಪ್ರಕಾರ, ಈ ಪ್ರದೇಶದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ, ಬಿದಿರಿನ ಕೋಲು ಒದ್ದೆಯಾಗಿತ್ತು. ಹಾಗಾಗಿ ದೇವೆಂದ್ರ ಅವರಿಗೆ ಕರೆಂಟ್ ಶಾಕ್ ತಗುಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

ದೇವೇಂದ್ರ ಅವರ ಸಂಬಂಧಿಕರು ತಮ್ಮ ಮನೆಯ ಮೇಲೆ ಹೈ ವೋಲ್ಟೇಜ್ ವಿದ್ಯುತ್ ತಂತಿ ಹಾದುಹೋಗಿರುವ ಬಗ್ಗೆ ದೂರು ನೀಡಿದ್ದರೂ ಪ್ರಾಧಿಕಾರವು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ಇಲಾಖೆ ಕ್ರಮ ಕೈಗೊಂಡಿದ್ದರೆ, ತಮ್ಮ ಪ್ರೀತಿಯ ದೇವೇಂದ್ರ ಜೀವಂತವಾಗಿರುತ್ತಿದ್ದರು ಎಂದು ಕುಟುಂಬ ಸದಸ್ಯರು ದುಃಖಿಸಿದ್ದಾರೆ.

Continue Reading
Advertisement
Mangalore News
ಕರ್ನಾಟಕ25 mins ago

Mangalore News: ಫಲಿಸದ ಸತತ 6-7 ಗಂಟೆ ಕಾರ್ಯಾಚರಣೆ; ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಸಾವು

Positive woman drinking water
ಆರೋಗ್ಯ35 mins ago

Drinking Water Tips: ನೀರು ಕುಡಿಯುವುದೇ ನಿಮ್ಮ ಸಮಸ್ಯೆಯೇ? ಇಲ್ಲಿವೆ ಸರಳ ಉಪಾಯಗಳು!

Poverty In India
ದೇಶ39 mins ago

Poverty In India: ಭಾರತದಲ್ಲಿ ಒಂದು ದಶಕದಲ್ಲೇ ಬಡತನ ಪ್ರಮಾಣ 21.2%ರಿಂದ 8.5%ಕ್ಕೆ ಇಳಿಕೆ

Monsoon Jacket Styling Tips
ಫ್ಯಾಷನ್55 mins ago

Monsoon Jacket Styling Tips: ಮಳೆಗಾಲದ ಜಾಕೆಟ್‌ನಲ್ಲೂ ಸ್ಟೈಲಿಶ್‌ ಆಗಿ ಕಾಣಿಸುವುದು ಹೇಗೆ?

Dengue fever
ಕರ್ನಾಟಕ60 mins ago

Dengue fever: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಿದ ರಾಜ್ಯ ಸರ್ಕಾರ

mamatheya thottilu inauguration programme at gangavathi
ಕರ್ನಾಟಕ1 hour ago

Koppala News: ʼಮಮತೆಯ ತೊಟ್ಟಿಲುʼವಿನ 4 ಅನಾಥ ಮಕ್ಕಳು ವಿದೇಶಿ ದಂಪತಿಗಳ ಮಡಿಲಿಗೆ!

Viral Video
Latest1 hour ago

Viral Video: ಸಾವು ಹೇಗೆಲ್ಲ ಹೊಂಚು ಹಾಕುತ್ತದೆ! ಈ ವಿಡಿಯೊ ನೋಡಿ

Viral Video
ವೈರಲ್ ನ್ಯೂಸ್1 hour ago

Viral Video: ವಿಮಾನದಲ್ಲಿ ದಢೂತಿ ಹೆಂಗಸಿನ ಡ್ಯಾನ್ಸ್‌! ನಗಲಾರದೆ ಅಳಲಾರದೆ ತೊಳಲಾಡಿದ ಪ್ರಯಾಣಿಕರು!

OTT Releases
ಸಿನಿಮಾ1 hour ago

OTT Releases: ಒಟಿಟಿಯಲ್ಲಿ ಈ ವಾರ ಮಿರ್ಜಾಪುರ ಸೀಸನ್ 3 ಸೇರಿದಂತೆ ಹಲವು ಸಿನಿಮಾ, ಸಿರೀಸ್‌ಗಳು!

Sexual Harassment
Latest2 hours ago

Sexual Harassment: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಅಶ್ಲೀಲ ವಿಡಿಯೊ ತೋರಿಸಿ ಲೈಂಗಿಕ ಕಿರುಕುಳ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌