Site icon Vistara News

Karnataka Weather: ಉತ್ತರ ಕರ್ನಾಟಕದಲ್ಲಿ ಭಾರಿ ಚಳಿ; ಉಳಿದೆಡೆ ಹೇಗಿದೆ ವಾತಾವರಣ?

North Karnataka Weather and fire camp

ಬೆಂಗಳೂರು: ಮುಂದಿನ 24 ಗಂಟೆ ರಾಜ್ಯದ ಅಲ್ಲಲ್ಲಿ ಚಳಿಯ ವಾತಾವರಣ ಇರಲಿದೆ. ಕನಿಷ್ಠ ತಾಪಮಾನದಲ್ಲೂ ಇಳಿಕೆ ಕಾಣಲಿದೆ. ಉತ್ತರ ಕರ್ನಾಟಕ ಭಾಗದ ಕೆಲವು ಕಡೆ ಭಾರಿ ಪ್ರಮಾಣದಲ್ಲಿ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ತನ್ನ ಮುನ್ಸೂಚನಾ ವರದಿಯಲ್ಲಿ ಹೇಳಿದೆ. ಇದಲ್ಲದೆ, ದಕ್ಷಿಣ ಒಳನಾಡು (South Inland), ಕರಾವಳಿ (Coastal Karnataka) ಮತ್ತು ಮಲೆನಾಡು (Malnad Karnataka) ಜಿಲ್ಲೆಗಳಲ್ಲಿ ಒಣ ಹವೆಯ ಜತೆಗೆ ಕೆಲವು ಕಡೆ ಚಳಿ ತನ್ನ ಪ್ರದರ್ಶನವನ್ನು ಮುಂದುವರಿಸಲಿದೆ.

ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಈಗಿರುವ ತಾಪಮಾನಕ್ಕಿಂತ ಕನಿಷ್ಠ ಉಷ್ಣಾಂಶವು 4 ಡಿಗ್ರಿ ಸೆಲ್ಸಿಯಸ್‌ನಿಂದ 2 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿತ ಕಾಣುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದೇ ವೇಳೆ ದಕ್ಷಿಣ, ಉತ್ತರ ಒಳನಾಡುಗಳು ಸೇರಿದಂತೆ ಕರಾವಳಿ ಪ್ರದೇಶಗಳ ಕೆಲವು ಕಡೆ 3 ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಳ ಕಾಣಲಿದೆ.

ಬೆಂಗಳೂರು ವೆದರ್‌ ಹೇಗಿದೆ?

ಬೆಂಗಳೂರಲ್ಲಿ ಗುರುವಾರ ಬೆಳಗ್ಗೆ ಹಾಗೂ ಮಧ್ಯಾಹ್ನ ಬಿಸಿಲಿನ ವಾತಾವರಣ ಇದ್ದು, ಸಂಜೆ ವೇಳೆಗೆ ತಂಪಾಗುತ್ತಾ ಸಾಗಿದೆ. ಆದರೆ, ಗುರುವಾರ ರಾತ್ರಿ ಹಾಗೂ ಶುಕ್ರವಾರ ಮುಂಜಾನೆ ಚಳಿಯ ವಾತಾವರಣ ಇರಲಿದೆ. ಕೆಲವು ಕಡೆ ಬೆಳಗಿನ ಜಾವದವರೆಗೆ ಮಂಜಿನ ವಾತಾವರಣ ಇರಲಿದೆ. ಗುರುವಾರ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇದೆ. ಅದೇ ಶುಕ್ರವಾರ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: Star Fashion: ಬೆಂಗಳೂರಿನ ಚುಮು ಚುಮು ಚಳಿಗೆ ಬದಲಾಯಿತು ನಟ ಶೈನ್‌ ಶೆಟ್ಟಿ ವಿಂಟರ್‌ ಫ್ಯಾಷನ್‌!

ಶಿವಮೊಗ್ಗ ಹಾಗೂ ಚಿಕ್ಕಮಗಳೂರಲ್ಲಿ ಭಯಂಕರ ಚಳಿ

ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಚಳಿ ಜೋರಿದೆ. ಶಿವಮೊಗ್ಗದಲ್ಲಿ ಗುರುವಾರ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್‌ ಇದ್ದರೆ, 17 ಡಿಗ್ರಿ ಸೆಲ್ಸಿಯಸ್‌ ಇದೆ. ಶುಕ್ರವಾರ ತಲಾ 1 ಡಿಗ್ರಿ ಸೆಲ್ಸಿಯಸ್‌ ಏರಿಕೆ ಕಾಣಲಿದೆ. ಚಿಕ್ಕಮಗಳೂರಿನಲ್ಲಿ ಇನ್ನೆರಡು ದಿನ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಅದೇ ಶನಿವಾರ ಮತ್ತು ಭಾನುವಾರ 15ರಿಂದ 14 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಯಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಹಾಗೂ ಉಡುಪಿಯಲ್ಲೂ ಚಳಿ ಪ್ರಮಾಣ ಕಡಿಮೆ ಇದ್ದು, ಬೆಳಗ್ಗೆ ಬಿಸಿಲಿನ ತೀವ್ರತೆ ಇರಲಿದೆ.

ಉತ್ತರ ಒಳನಾಡಿನಲ್ಲಿ ಒಣ ಹವೆ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ ಮುಂದುವರಿಯಲಿದೆ. ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Ear Pain During Winter: ಚಳಿಗೆ ಕಿವಿನೋವೇ? ಇಲ್ಲಿ ಕೇಳಿ!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ -18 ಡಿ.ಸೆ
ಮಂಗಳೂರು: 32 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 17 ಡಿ.ಸೆ
ಗದಗ: 32 ಡಿ.ಸೆ – 15 ಡಿ.ಸೆ
ಹೊನ್ನಾವರ: 31 ಡಿ.ಸೆ- 18 ಡಿ.ಸೆ
ಕಲಬುರಗಿ: 33 ಡಿ.ಸೆ – 20 ಡಿ.ಸೆ
ಬೆಳಗಾವಿ: 31 ಡಿ.ಸೆ – 11 ಡಿ.ಸೆ
ಕಾರವಾರ: 33 ಡಿ.ಸೆ – 18 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version