Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ - Vistara News

ಮಳೆ

Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

Karnataka Rain : ನಿನ್ನೆ ಮಧ್ಯರಾತ್ರಿ ಸುರಿದ ಮಳೆಗೆ (Bengaluru Rain) ನಾನಾ ಅವಾಂತರವೇ ಸೃಷ್ಟಿಯಾಗಿದೆ. ಬೆಂಗಳೂರು-ಹೊಸೂರು ಹೆದ್ದಾರಿ ಹಾಗೂ ಡ್ಯಾಡಿಸ್ ಗಾರ್ಡನ್ ಲೇಔಟ್‌ ಜಲಾವೃತಗೊಂಡಿದೆ. ಜನರು ಹೊರಬರಲು ಆಗದೆ ಸಂಕಷ್ಟ ಎದುರಿಸುತ್ತಿದ್ದಾರೆ.

VISTARANEWS.COM


on

karnataka rain weather forecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು ಗ್ರಾಮಾಂತರ: ಕಳೆದ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ (Karnataka Rain) ಬೆಂಗಳೂರು ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ. ನಾಲ್ಕೈದು ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಗೆ (Bengaluru rain) ಬೆಂಗಳೂರು-ಹೊಸೂರು ಹೈವೆ ಕೆರೆಯಂತಾಗಿದೆ. ಬೆಂಗಳೂರು ಹೊಸೂರು ಹೆದ್ದಾರಿಯ ಸಿಲ್ಕ್ ಬೊರ್ಡ್ ಜಂಕ್ಷನ್‌ನಲ್ಲಿ ಮೂರ್ನಾಲ್ಕು ಅಡಿಗಳಷ್ಟು ಮಳೆ ನೀರು ನಿಂತಿದೆ.

ಜಲಾವೃತಗೊಂಡ ರಸ್ತೆಯ ನೀರಿನಲ್ಲಿಯೇ ಜನರು ಓಡಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಹೆದ್ದಾರಿ ಜಲಾವೃತದಿಂದಾಗಿ ಸೋಮವಾರ ಬೆಳಗ್ಗೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಜಾಮ್‌ ಜತೆಗೆ ಕೆರೆಯಂತಾದ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು. ಮೆಟ್ರೋ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಳೆ ನೀರು ಹೊರಹೋಗಲು ಯಾವುದೇ ಸೂಕ್ತ ವ್ಯವಸ್ಥೆ ಇಲ್ಲ. ಇದರಿಂದಾಗಿ ರಸ್ತೆಯೆಲ್ಲ ಜಲಾವೃತಗೊಂಡಿತ್ತು. ಪ್ರತಿ ಬಾರಿ ಮಳೆ ಬಂದಾಗ ಸಿಲ್ಕ್ ಬೋರ್ಡ್ ಜಂಕ್ಷನ್‌ ಜಲಾವೃತಗೊಳ್ಳಲಿದೆ.

ಇದನ್ನೂ ಓದಿ: Heavy Rain: ಸಿಲಿಕಾನ್‌ ಸಿಟಿಯಲ್ಲಿ ಮಳೆಯ ಅಬ್ಬರ; ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ

ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

ಭಾರಿ ಮಳೆಗೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಹೆಬ್ಬಗೋಡಿಯ ಕಮ್ಮಸಂದ್ರದ ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ ಹಾಕಲಾಗಿದೆ. ಕಳೆದ ರಾತ್ರಿಯಿಂದ ಸುರಿದ ಧಾರಾಕಾರ ಮಳೆಗೆ ಬಡಾವಣೆ ಸಂಪೂರ್ಣ ಜಲಾವೃತಗೊಂಡಿದೆ. ಮನೆಯಿಂದ ಹೊರಬರಲಾಗದೆ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಾರು ಮನೆಗಳಿರುವ ಡ್ಯಾಡಿಸ್ ಗಾರ್ಡನ್ ಲೇಔಟ್‌ನಲ್ಲಿ ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದೆ ಅವಾಂತರವೇ ಸೃಷ್ಟಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ತಂಡ ದೌಡಾಯಿಸಿದ್ದು, ನಿವಾಸಿಗಳನ್ನು ಸುರಕ್ಷಿತವಾಗಿ ಮನೆಯಿಂದ ಹೊರಕರೆತರುತ್ತಿದ್ದಾರೆ.

ಕಾಲೇಜು ಆವರಣದಲ್ಲಿ ಜಲಾವೃತ

ಬೆಂಗಳೂರು ಗ್ರಾಮಾಂತರದ ಆನೇಕಲ್ ಪಟ್ಟಣದ ಗೋಪಾಲರಾಜು ಕಾಲೇಜು ಜಲಾವೃತಗೊಂಡಿದೆ. ಬೆಳಗಿನ ಜಾವ ಕಾಲೇಜಿಗೆ ಬಂದ ವಿದ್ಯಾರ್ಥಿಗಳು ಪರದಾಡಿದರು. ಆನೇಕಲ್ ಪಟ್ಟಣದ ಏಕೈಕ ಸರ್ಕಾರಿ ಡಿಗ್ರಿ ಕಾಲೇಜು ಇದಾಗಿದ್ದು, ಮಳೆಗೆ ಕಾಲೇಜು ಒಳಗಡೆ ಹೋಗಲು ಆಗದೆ ವಿದ್ಯಾರ್ಥಿಗಳು ಸಂಕಷ್ಟ ಎದುರಿಸಿದ್ದರು. ಪುರಸಭೆ ಅಧಿಕಾರಿಗಳು ಸರಿಪಡಿಸಿ ಕೊಡುವಂತೆ ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Bengaluru Rains : ಬೃಹತ್‌ ಗಾತ್ರದ ಮರದ ಕೊಂಬೆಗಳು ಬಿದ್ದು 6 ಮಂದಿಗೆ ಗಾಯ; ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್

Bengaluru Rains: ರಸ್ತೆ ಬದಿಯಲ್ಲಿ ನಡೆದುಹೋಗುತ್ತಿದ್ದವರ ಮೇಲೆ ದಿಢೀರ್‌ ಬೃಹತ್‌ ಮರದ ಕೊಂಬೆ ಬಿದ್ದು ಮಕ್ಕಳು ಸೇರಿ ಹಲವರು ಗಾಯಗೊಂಡಿದ್ದಾರೆ. ಬುಡ ಸಮೇತ ಮರ ಧರೆಗುರುಳಿದ್ದು, ಕಾರು ಜಖಂಗೊಂಡಿದೆ. ಶಿಶುವಿಹಾರ ಕಾಂಪೌಂಡ್‌ ಕುಸಿದು ಮಕ್ಕಳು ಕೂದಳೆಲೆ ಅಂತರದಲ್ಲಿ ಪಾರಾಗಿದ್ದಾರೆ.

VISTARANEWS.COM


on

By

Bengaluru rain
Koo

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಗೆ (Bengaluru rains) ಮರ ಬಿದ್ದು (Tree Fall) ಅನಾಹುತವೇ ಸೃಷ್ಟಿಯಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಬೃಹತ್ ಮರದ ಕೊಂಬೆಗಳು ಬಿದ್ದಿದೆ. ಬೆಂಗಳೂರಿನ ಮಾರುತಿ ಸೇವಾನಗರದಲ್ಲಿ ಸೋಮವಾರ ಬೆಳಗ್ಗೆ 7ರ ಸುಮಾರಿಗೆ ಘಟನೆ ನಡೆದಿದೆ. ಬೈಕ್‌ನಲ್ಲಿ ಮತ್ತು ನಡೆದುಕೊಂಡು ಹೋಗುವವರ ಮೇಲೆ ಮರ ಬಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಸ್ಥಳೀಯರು ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬಾಣಸವಾಡಿಯ ಖಾಸಗಿ ಆಸ್ಪತ್ರೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ ನೀಡಿದರು. ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿ ಧೈರ್ಯ ತುಂಬಿದರು.

ಎರಡು ತಿಂಗಳಿಂದ ಮರ ತೆರವಿಗೆ ಸ್ಥಳೀಯರು ಮನವಿ ಮಾಡಿದ್ದರು. ಮರ ಸಂಪೂರ್ಣವಾಗಿ ಒಣಗಿದ್ದು, ತೆರವು ಮಾಡಿಸಿ ಎಂದು ಸ್ಥಳೀಯ ಶಾಸಕ ಸಚಿವ ಕೆಜೆ ಜಾರ್ಜ್ ಅವರಿಗೆ ಮನವಿ ಪತ್ರ ನೀಡಿದ್ದರು. ಮರವನ್ನು ತೆರವು ಮಾಡಿದ್ದರೆ ಇಂದು ನಾಲ್ವರು ಆಸ್ಪತ್ರೆಗೆ ಸೇರಿಸುವ ಅಗತ್ಯ ಬೀಳುತ್ತಿರಲಿಲ್ಲ ಎಂದು ಕಿಡಿಕಾರಿದ್ದಾರೆ.

ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್‌ ಮಳೆ ಬಂದಾಗ ನಾನು ಒಂದು ಗಮನಿಸಿದ್ದೀನಿ. ಬೆಂಗಳೂರಿನಲ್ಲಿ ಎಷ್ಟೇ ರಸ್ತೆ ಗುಂಡಿ ಮುಚ್ಚಿದ್ದರೂ ಮತ್ತೆ ಸೃಷ್ಟಿ ಆಗುತ್ತಲೇ ಇರುತ್ತದೆ. ರಸ್ತೆ ಬದಿಗಳಲ್ಲಿ ಇರುವ ರೀಟೈನಿಂಗ್ ವಾಲ್‌ಗಳನ್ನು ಸರಿ ಮಾಡಿಸಲು ತಿಳಿಸಿದ್ದೀನಿ. ರಸ್ತೆ ಪಕ್ಕ ಫುಟ್‌ಪಾತ್‌ಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಮರ ತೆರವಿಗೆ ಸ್ಥಳೀಯರು ಮನವಿ ಮಾಡಿದ್ದರೂ ತೆರವು ಮಾಡಲಿಲ್ಲ ಎನ್ನುವ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಈ ವಿಚಾರ ಗಮನಕ್ಕೆ ಬಂದಿದೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕ್ರಮ ಜರುಗಿಸುತ್ತೇವೆ. ಗಾಯಾಳುಗಳ ಎಲ್ಲ ಖರ್ಚು ವೆಚ್ಚಗಳನ್ನು ಬಿಬಿಎಂಪಿ ನಿರ್ವಹಿಸಲಿದೆ ಎಂದರು.

ಈ ಅವಘಡದಲ್ಲಿ ಮೂವರು ಶಾಲಾ ಮಕ್ಕಳ ಸೇರಿ ಒಟ್ಟು ಆರು ಜನರಿಗೆ ಮರ ಬಿದ್ದು ಗಾಯಗೋಮಡಿದ್ದಾರೆ. ಒಬ್ಬ ವ್ಯಕ್ತಿಯ ಪರಿಸ್ಥಿತಿ ಗಂಭೀರವಾಗಿದ್ದು, ಎದೆ ಭಾಗಕ್ಕೆ ತೀವ್ರವಾಗಿ ಪೆಟ್ಟು ಬಿದ್ದಿದೆ ಎನ್ನಲಾಗಿದೆ. ಒರ್ವ ಮಹಿಳೆಯ ಕಾಲು ಮುರಿದಿದು ಹೋಗಿದೆ. ಸುಬ್ಬಯನ ಪಾಳ್ಯದಲ್ಲಿ ವಾಸವಾಗಿದ್ದ ವಿಶಾಲಾಕ್ಷಿ ಹಾಗೂ ಶಾಂತಕುಮಾರ್ ದಂಪತಿಯ ಇಬ್ಬರು ಮಕ್ಕಳಿಗೂ ಸಣ್ಣಪುಟ್ಟ ಗಾಯವಾಗಿದೆ. ಹಲಸೂರಿನ ಖಾಸಗಿ ಶಾಲೆಯಲ್ಲಿ ಪರಿಣಿತ ಮತ್ತು ಪ್ರಣತಿ ಶ್ರೀ ಇಬ್ಬರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಶಾಲೆಗೆ ಹೋಗುವಾಗ ಮರ ಬಿದ್ದು ಗಾಯಗೊಂಡಿದ್ದಾರೆ.

ಸದ್ಯಕ್ಕೆ ನಾಲ್ವರು ಮಕ್ಕಳು ಆರೋಗ್ಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ವೈದ್ಯೆ ತ್ರಿಜಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. ತಾಯಿ ವಿಶಾಲಾಕ್ಷಿಗೆ ಕಾಲಿನ ಮೂಳೆ ಮುರಿದಿದೆ. ಶಸ್ತ್ರಚಿಕಿತ್ಸೆ ಮಾಡಬೇಕಿದೆ. ಮಣಿಕ್ಯವೇಲ್ ಅವರಿಗೆ ಎದೆ ಹಾಗೂ ಬೆನ್ನಿನ ಮೂಳೆ ಮುರಿದಿದ್ದು, ಗಂಭೀರ ಗಾಯವಾಗಿದ್ದು, ಅವರಿಗೂ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ. ಸದ್ಯಕ್ಕೆ ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದರು.

ಘಟನೆಯಲ್ಲಿ ಕಾಲು ಮುರಿದುಕೊಂಡು ಗಾಯಗೊಂಡ ವಿಶಾಲಕ್ಷಿ ಮಾತನಾಡಿದ್ದಾರೆ. ಇಬ್ಬರು ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದೆ. ಮರದ ಕೊಂಬೆ ದಿಢೀರ್‌ ಆಗಿ ಬಿತ್ತು. ಮರದ ಕೊಂಬೆ ಬಿದ್ದು ಕಾಲಿಗೆ ತುಂಬ ಪೆಟ್ಟು ಬಿದ್ದಿದೆ. ಇಬ್ಬರು ಮಕ್ಕಳು ಸಹ ಇದ್ದರೂ, ಯಾವುದೇ ದೊಡ್ಡ ತೊಂದರೆ ಆಗಿಲ್ಲ. ಘಟನೆ ಆದಾಗ ಆಂಬ್ಯುಲೇನ್ಸ್ ಕೂಡ ಲೇಟ್ ಆಗಿ ಬಂತು ಅಂತ ಬೇಸರವನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಕೆರೆಯಂತಾದ ಬೆಂಗಳೂರು-ಹೊಸೂರು ಹೈವೆ; ಡ್ಯಾಡಿಸ್ ಗಾರ್ಡನ್ ಲೇಔಟ್‌ಗೆ ಜಲದಿಗ್ಬಂದನ

ಬುಡ ಸಮೇತ ಧರೆಗುರುಳಿದ ಮರ, ಕಾರು ಜಖಂ

ಮಳೆಯಾ ಆರ್ಭಟಕ್ಕೆ ಮರವೊಂದು ಧರೆಗುರುಳಿದೆ. ಬೆಂಗಳೂರಿನ ಸದಾಶಿವ ನಗರದಲ್ಲಿ ಬುಡ ಸಹಿತ ಬೃಹಾತಕಾರದ ಮರ ಧರೆಗುರುಳಿದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಗಾಳಿ -ಮಳೆಗೆ ಕುಮಾರಕೃಪಾ ವೆಸ್ಟ್‌ನ ಸುಬ್ರಮಣ್ಯ ದೇವಸ್ಥಾನದ ಬಳಿ ಮರ ಬಿದ್ದು, ಕಾರೊಂದು ಜಖಂಗೊಂಡಿತ್ತು. ರಸ್ತೆಗೆ ಅಡ್ಡವಾಗಿ ಬಿದ್ದ ಮರವನ್ನು ಬಿಬಿಎಂಪಿ ಅರಣ್ಯ ವಿಭಾಗದ ಸಿಬ್ಬಂದಿ ತೆರವು ಮಾಡಿದ್ದರು.

ಬೆಂಗಳೂರಿನ ಅಮೃತಹಳ್ಳಿಯ ಮುನಿಸ್ವಾಮಪ್ಪ ಲೇಔಟ್‌ನಲ್ಲಿ ಮನೆಗಳಿಗೆ ನೀರು ನುಗ್ಗಿದ್ದರಿಂದ ರಾತ್ರಿಯಿಡಿ ನಿವಾಸಿಗಳು ಜಾಗರಣೆ ಮಾಡಿದರು. ಮನೆ ಸಾಮಗ್ರಿಗಳನ್ನು ನೀರುಪಾಲಾಗದಂತೆ ರಕ್ಷಿಸಿಕೊಳ್ಳಲು ಜನರು ಪರದಾಡಿದರು. ಅತ್ತ ಮಳೆ ನಿಂತರೂ ಮನೆಯಲ್ಲ ಕೆಸರುಮಯವಾಗಿತ್ತು.

ಇನ್ನೂ ನಿನ್ನೆ ಸುರಿದ ಮಳೆಗೆ ಯಲಹಂಕದ ಅಪಾರ್ಟ್‌ಮೆಂಟ್‌ಗೆ ಕಾಲುವೆ ನೀರು ನುಗ್ಗಿತ್ತು. ರಮಣಶ್ರೀ ಕ್ಯಾಲಿಫೋರ್ನಿಯಾ ಗಾರ್ಡನ್ ಯಲಹಂಕದಲ್ಲಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿತ್ತು. ಕಳೆದ ಬಾರಿ ಯಲಹಂಕ ನಾರ್ಥ್ ವುಡ್ ವಿಲ್ಲಾಗಳಿಗೆ ನೀರು ನುಗ್ಗಿತ್ತು. ಈಗ ಮತ್ತದೇ ಕಾಲುವೆಯಿಂದ ಸಂಕಷ್ಟ ಎದುರಾಗಿದೆ. ಡಿಸಿಎಂ ವಿಸಿಟ್ ಮಾಡಿ ಸಮ್ಯಸೆ ಪರಿಹಾರಕ್ಕೆ ಅಸ್ತು ಅಂದಿದ್ದರು. ಆದರೆ ಮಳೆ‌ ಬಂದರೆ ಅಪಾರ್ಟ್‌ಮೆಂಟ್ ನಿವಾಸಿಗಳು , ವಿಲ್ಲಾ ನಿವಾಸಿಗಳು ಪರದಾಡುವಂತಾಗಿದೆ. ಜಯದೇವ ಅಂಡರ್ ಪಾಸ್‌ ಮುಳುಗಡೆಯಾಗಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ನೀರು ಹೊರ ಹಾಕುತ್ತಿರುವ ದೃಶ್ಯ ಕಂಡು ಬಂತು. ಬನ್ನೇರುಘಟ್ಟ ರಸ್ತೆ ಸಂಪೂರ್ಣ ಟ್ರಾಫಿಕ್ ಜಾಮ್‌ ಆಗಿದೆ.

ಸಿಲ್ಕ್ ಬೋರ್ಡ್‌ನಲ್ಲಿ ಫಿಶಿಂಗ್

ಭಾರಿ ಮಳೆಗೆ ಸಿಲ್ಕ್‌ ಬೋರ್ಡ್‌ ಜಲಾವೃತಗೊಂಡಿದೆ. ರಸ್ತೆ ಮೇಲೆ ಮೀನುಗಳು ಬಂದಿದ್ದು, ಜನರು ಮೀನು ಹಿಡಿಯುತ್ತಿರುವ ದೃಶ್ಯವು ಕಂಡು ಬಂತು. ಇತ್ತ ಮಳೆಯಿಂದಾಗಿ ಹೆಬ್ಬಾಳ ಫ್ಲೈ ಓವರ್ ಸಂಪೂರ್ಣ ಟ್ರಾಫಿಕ್‌ ಜಾಮ್‌ ಆಗಿತ್ತು. ವರ್ತುರು ವಾರ್ಡ್‌ನಲ್ಲಿ ರಸ್ತೆಗಳೆಲ್ಲ ಮಳೆಯ ನೀರಿನಿಂದ ಆವೃತವಾಗಿತ್ತು.

ಶಿಶುವಿಹಾರ ಕಾಂಪೌಂಡ್‌ ಕುಸಿತ

ಬೆಂಗಳೂರಿನ ಮಾಗಡಿ ರಸ್ತೆಯ ಕೆ.ಪಿ ಅಗ್ರಹಾರ ಶಿಶುವಿಹಾರ ಕಾಂಪೌಂಡ್ ಕುಸಿದು ಬಿದ್ದಿದೆ. ಸ್ವಲ್ಪದರಲ್ಲೇ ಮಕ್ಕಳು ಪಾರಾಗಿದ್ದಾರೆ. ಶಿಶುವಿಹಾರದ ಕಾಂಪೌಂಡ್ ಸಂಪೂರ್ಣವಾಗಿ ಶಿಥಿಲಗೊಂಡಿದೆ. ಶಿಕ್ಷಕಿಯರು ಆತಂಕದಲ್ಲೇ ಶಿಶುವಿಹಾರವನ್ನು ನಡೆಸುತ್ತಿದ್ದಾರೆ.

ನಗರದಲ್ಲಿ ಎಲ್ಲೆಲ್ಲಿ ಎಷ್ಟು ಮಳೆ

ಕೊಡಿಗೇಹಳ್ಳಿ – 61 ಮಿಮೀ
ವಿವಿಪುರಂ – 57 ಮಿಮೀ
ವಿದ್ಯಾಪೀಠ – 56 ಮಿಮೀ
ಹಗದೂರು – 54 ಮಿಮೀ
ಯಲಹಂಕ – 51 ಮಿಮೀ
ಆರ್ ಆರ್ ನಗರ – 50 ಮಿಮೀ
ವಿ ನಾಗೇನಹಳ್ಳಿ – 50 ಮಿಮೀ
ಪುಲಿಕೇಶಿ ನಗರ – 49 ಮಿಮೀ
ಅರೆಕರೆ – 48 ಮಿಮೀ
ಹೆಚ್ ಎಸ್ ಆರ್ ಲೇಔಟ್ -45 ಮಿಮೀ
ನಾಗಪುರ – 44 ಮಿಮೀ
ಕಾಟನ್ ಪೇಟೆ – 43 ಮಿಮೀ
ಚಾಮರಾಜಪೇಟೆ – 43 ಮಿಮೀ
ಬಿಟಿಎಂ ಲೇಔಟ್ – 41 ಮಿಮಿ
ಹೂಡಿ – 40 ಮಿಮೀ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Heavy Rain: ಸಿಲಿಕಾನ್‌ ಸಿಟಿಯಲ್ಲಿ ಮಳೆಯ ಅಬ್ಬರ; ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ

Heavy Rain: ಬೆಂಗಳೂರಿನಲ್ಲಿ ಬಿಡುವು ಪಡೆದುಕೊಂಡಿದ್ದ ಮಳೆ ಮತ್ತೆ ಅಬ್ಬರಿಸತೊಡಗಿದೆ. ಮಧ್ಯರಾತ್ರಿಯಿಂದಲೇ ಧಾರಾಕಾರವಾಗಿ ಸುರಿದ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಮೆಜೆಸ್ಟಿಕ್​​, ಓಕಳಿಪುರ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್​​ ಸರ್ಕಲ್, ಟೌನ್​ಹಾಲ್, ಕೆ.ಆರ್​.ಮಾರ್ಕೆಟ್​​, ತ್ಯಾಗರಾಜನಗರ, ಜಯನಗರ, ಹನುಮಂತನಗರ, ಶ್ರೀನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಮಾಗಡಿ ರಸ್ತೆ, ವಿಜಯನಗರ, ಕೆಂಗೇರಿ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್​​, ಹೆಬ್ಬಾಳ, ಯಲಹಂಕ, ಕೆ.ಆರ್​.ಪುರಂ ಸೇರಿದಂತೆ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ರಸ್ತೆಗಳು ಜಲಾವೃತಗೊಂಡಿವೆ.

VISTARANEWS.COM


on

Heavy Rain
Koo

ಬೆಂಗಳೂರು: ಕೆಲವು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಡುವು ಪಡೆದುಕೊಂಡಿದ್ದ ಮಳೆ ಮತ್ತೆ ಅಬ್ಬರಿಸತೊಡಗಿದೆ. ಮಧ್ಯರಾತ್ರಿಯಿಂದಲೇ ಧಾರಾಕಾರವಾಗಿ ಸುರಿದ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ (Heavy Rain).

ಮೆಜೆಸ್ಟಿಕ್​​, ಓಕಳಿಪುರ, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್​​ ಸರ್ಕಲ್, ಟೌನ್​ಹಾಲ್, ಕೆ.ಆರ್​.ಮಾರ್ಕೆಟ್​​, ತ್ಯಾಗರಾಜನಗರ, ಜಯನಗರ, ಹನುಮಂತನಗರ, ಶ್ರೀನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಮಾಗಡಿ ರಸ್ತೆ, ವಿಜಯನಗರ, ಕೆಂಗೇರಿ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್​​, ಹೆಬ್ಬಾಳ, ಯಲಹಂಕ, ಕೆ.ಆರ್​.ಪುರಂ ಸೇರಿದಂತೆ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ರಸ್ತೆಗಳು ಜಲಾವೃತಗೊಂಡಿವೆ. ಜತೆಗೆ ಅಲ್ಲಲ್ಲಿ ಅವಾಂತರವೂ ಸೃಷ್ಟಿಯಾಗಿದೆ. ವಾಹನ ಸವಾರರು ಪರದಾಡುವಂತಾಗಿದೆ.

ಮ್ಯಾನ್ ಹೋಲ್‌ಗೆ ಬಿದ್ದ ಕಾರುಗಳು

ಸಿಲ್ಕ್ ಬೋರ್ಡ್ ಸಿಗ್ನಲ್ ಬಳಿ ಭಾರಿ ಮಳೆಯಿಂದ ತೆರೆದುಕೊಂಡಿದ್ದ ಮ್ಯಾನ್‌ಹೋಲ್‌ಗೆ ಎರಡು ಕಾರುಗಳು ಬಿದ್ದಿದ್ದು, ಸ್ವಲ್ಪದರಲ್ಲಿ ಭಾರಿ ಅನಾಹುತ ತಪ್ಪಿದೆ. ಕಾರಿನಲ್ಲಿ ಇರಬ್ಬರನ್ನು ರಕ್ಷಿಸಲಾಗಿದೆ.

ಓಕಳಿಪುರಂ ಅಂಡರ್‌ಪಾಸ್‌ನಲ್ಲಿ ನೀರು ತುಂಬಿದ ಹಿನ್ನೆಲೆಯಲ್ಲಿ ವಾಹನ ಸವಾರರ ಪರದಾಡಿದರು. ನೀರಿನಲ್ಲಿ ಆ್ಯಂಬುಲೆನ್ಸ್, ವ್ಯಾನ್, ಆಟೋ ಸಿಲುಕಿ ಹಾಕಿಕೊಂಡಿತ್ತು. ದಿಢೀರ್ ‌ಮಳೆಯಿಂದಾಗಿ‌ ನಗರದ ಬಹುತೇಕ ರಸ್ತೆಗಳು ಕೆರೆಯಾಗಿ ಪರಿವರ್ತನೆಯಾಗಿದೆ. ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ‌ಮುಂಭಾಗದ ರಸ್ತೆ ‌ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದ್ದು, ಸುಮಾರು ‌ಎರಡು ಅಡಿಯಷ್ಟು ನೀರು ನಿಂತಿದೆ. ನೀರು ಸರಾಗವಾಗಿ ಹರಿದು ಹೋಗದೇ ವಾಹನ ಸವಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಜಲ ದಿಗ್ಬಂಧನ

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ನೀರು ತುಂಬಿ ದಿಗ್ಬಂಧನ ಪರಿಸ್ಥಿತಿ ಏರ್ಪಟ್ಟಿದೆ. ಚಿಕ್ಕಪೇಟೆ, ಸುಲ್ತಾನ್ ಪೇಟೆ, ಬಳೇ ಪೇಟೆ, ಕಾಟನ್ ಪೇಟೆ ರಸ್ತೆ ಸಂಪೂರ್ಣ ಜಾಲವೃತವಾಗಿದೆ. ಸುಲ್ತಾನ್ ಪೇಟೆ ಮುಖ್ಯ ರಸ್ತೆ ಸಂಪೂರ್ಣ ರಸ್ತೆ ಬಂದ್ ಆಗಿದ್ದು, ಅಂಗಡಿ ಮುಗ್ಗಟ್ಟುಗಳಿಗೆ ನೀರು ನುಗ್ಗಿದೆ. ಪುಲಕೇಶಿ‌ ನಗರದ ಎನ್.ಸಿ. ಕಾಲೋನಿಯಲ್ಲಿ ಮನೆಗಳು ಜಲಾವೃತಗೊಂಡಿವೆ. ಮೂವತ್ತು ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ.

ಮಾರತಹಳ್ಳಿ ಬಳಿ ಅಪಾರ್ಟ್‌ಮೆಂಟ್‌ನ ಬೇಸ್‌ಮೆಂಟ್‌ನ ಗೋಡೆ ಒಡೆದಿದ್ದು, ಕೂದಲೆಳೆಯ ಅಂತರದಲ್ಲಿ‌ ಮನೆ ಮಂದಿ ಪಾರಾಗಿದ್ದಾರೆ. ಇತ್ತ ಕೆ.ಆರ್​.ಮಾರ್ಕೆಟ್​ನ ರಸ್ತೆಗಳೂ ಕೆಸರಿನಿಂದ ಕೂಡಿದ್ದು, ವ್ಯಾಪಾರ ವಹಿವಾಟಿಗೆ ತೊಂದರೆ ಎದುರಾಗಿದೆ.

ಭಾರಿ ಮಳೆಯ ಮುನ್ಸೂಚನೆ

ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಯಚೂರು, ಚಿಕ್ಕಬಳ್ಳಾಪುರ, ಮೈಸೂರು ರಾಮನಗರ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಗುಡುಗು ಸಹಿತ ಮಳೆ ಬರುವ ಸಾಧ್ಯತೆ ಇದೆ. ಬೆಂಗಳೂರು ವ್ಯಾಪ್ತಿಯಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Karnataka weather : ಬೆಂಗಳೂರಿಗೆ ಭಾರಿ ಮಳೆ ಎಚ್ಚರಿಕೆ; ಚಾಮರಾಜನಗರ, ರಾಮನಗರಕ್ಕೆ ಯೆಲ್ಲೋ ಅಲರ್ಟ್‌

Continue Reading

ದೇಶ

Panjab Flood: ಪಂಜಾಬ್‌ನಲ್ಲೂ ಪ್ರವಾಹ ಸ್ಥಿತಿ; ಒಂದೇ ಕುಟುಂಬದ 8 ಮಂದಿ ಸೇರಿ 9 ಜನ ನೀರುಪಾಲು

Panjab Flood: ಜೈಜೋನ್ ಚೋ ನದಿ ಉಕ್ಕಿ ಹರಿದಿದ್ದು, ಪ್ರವಾಹಕ್ಕೆ ಅನೇಕ ವಾಹನಗಳು ಕೊಚ್ಚಿ ಹೋಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯ ಮಹಿಲ್‌ಪುರ್ ಬ್ಲಾಕ್‌ನಲ್ಲಿ SUV ವಾಹನ ನದಿಯಲ್ಲಿ ಕೊಚ್ಚಿಹೋಗಿದೆ. ಪಂಜಾಬ್‌ನ ಹಲವಾರು ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ನದಿ ಉಕ್ಕಿ ಹರಿಯುತ್ತಿದೆ.

VISTARANEWS.COM


on

Panjab Flood
Koo

ಚಂಡೀಗಡ: ಪಂಜಾಬ್‌ನಲ್ಲಿ ಭಾರೀ ಮಳೆ(Heavy Rainfall)ಗೆ ಪ್ರವಾಹ(Panjab Flood) ಸ್ಥಿತಿ ನಿರ್ಮಾಣವಾಗಿದ್ದು, ಹಿಮಾಚಲ ಪ್ರದೇಶದ ಒಂದೇ ಕುಟುಂಬದ ಎಂಟು ಜನ ಸೇರಿದಂತೆ ಒಂಬತ್ತು ಮಂದಿ ಕೊಚ್ಚಿ ಹೋಗಿದ್ದಾರೆ. ಇನ್ನು ದುರ್ಘಟನೆಯಲ್ಲಿ ಇಬ್ಬರು ಕಣ್ಮರೆಯಾಗಿದ್ದಾರೆ. ಜೈಜೋನ್ ಚೋ ನದಿ ಉಕ್ಕಿ ಹರಿದಿದ್ದು, ಪ್ರವಾಹಕ್ಕೆ ಅನೇಕ ವಾಹನಗಳು ಕೊಚ್ಚಿ ಹೋಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯ ಮಹಿಲ್‌ಪುರ್ ಬ್ಲಾಕ್‌ನಲ್ಲಿ SUV ವಾಹನ ನದಿಯಲ್ಲಿ ಕೊಚ್ಚಿಹೋಗಿದೆ. ಪಂಜಾಬ್‌ನ ಹಲವಾರು ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ನದಿ ಉಕ್ಕಿ ಹರಿಯುತ್ತಿದೆ.

ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಮೆಹತ್‌ಪುರ ಬಳಿಯ ಡೆಹ್ರಾದಿಂದ ಪಂಜಾಬ್‌ನ ಎಸ್‌ಬಿಎಸ್ ನಗರ ಜಿಲ್ಲೆಯ ಮೆಹ್ರೋವಾಲ್ ಗ್ರಾಮಕ್ಕೆ ಮದುವೆಗೆ ಹಾಜರಾಗಲು ಚಾಲಕನ ಸಮೇತ ಕುಟುಂಬದ 11 ಸದಸ್ಯರು ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

10 ವರ್ಷದ ಮಗುವನ್ನು ಸ್ಥಳೀಯ ಗ್ರಾಮಸ್ಥರು ರಕ್ಷಿಸಿದ್ದಾರೆ. ಪಂಜಾಬ್‌ನ ನವನ್‌ಶಹರ್‌ನಲ್ಲಿ ನಡೆದ ಮದುವೆಯಲ್ಲಿ ಪಾಲ್ಗೊಂಡು 11 ಮಂದಿ ಎಸ್‌ಯುವಿಯಲ್ಲಿ ಪ್ರಯಾಣಿಸಿ ತಮ್ಮ ನಿವಾಸಕ್ಕೆ ಮರಳುತ್ತಿದ್ದರು. ಪೋಲೀಸರ ಪ್ರಕಾರ, ಕುಟುಂಬವು ಮದುವೆ ಮುಗಿಸಿಕೊಂಡು ವಿಹಾರಕ್ಕೆ ಹೋಗುತ್ತಿದ್ದಾಗ ಪ್ರವಾಹದ ನೀರಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಎನ್ನಲಾಗಿದೆ. ಇನ್ನು ಮೃತರನ್ನು ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಮೆಹತ್‌ಪುರ ಸಮೀಪದ ಡೆಹ್ಲಾನ್ ಗ್ರಾಮದ ನಿವಾಸಿ ದೀಪಕ್ ಭಾಟಿಯಾ ಎಂದು ಗುರುತಿಸಲಾಗಿದ್ದು, ಅವರ ತಂದೆ ಸುರ್ಜಿತ್ ಭಾಟಿಯಾ, ತಾಯಿ ಪರಮ್‌ಜೀತ್ ಕೌರ್, ಚಿಕ್ಕಪ್ಪ ಸರೂಪ್ ಚಂದ್, ಚಿಕ್ಕಮ್ಮ ಬಂಡಾರ್ ಮತ್ತು ಶಿನೋ, ಪುತ್ರಿಯರಾದ ಭಾವನಾ ಮತ್ತು ಅಂಕು ಮೃತಪಟ್ಟಿದ್ದಾರೆ.

ಸಿಎಂ ಸಂತಾಪ

ಇನ್ನು ಘಟನೆಗೆ ಸಂತಾಪ ವ್ಯಕ್ತಪಡಿಸಿರುವ ಹಿಮಾಚಲ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ಒಂಬತ್ತು ಜನರ ಸಾವಿನ ಸುದ್ದಿ ದುಃಖಕರವಾಗಿದೆ. “ನಾನು ಸ್ಥಳೀಯ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇನೆ. ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಸೂಚನೆಗಳನ್ನು ನೀಡಲಾಗಿದೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

Continue Reading

ಮಳೆ

Karnataka weather : ಬೆಂಗಳೂರಿಗೆ ಭಾರಿ ಮಳೆ ಎಚ್ಚರಿಕೆ; ಚಾಮರಾಜನಗರ, ರಾಮನಗರಕ್ಕೆ ಯೆಲ್ಲೋ ಅಲರ್ಟ್‌

Karnataka Weather Forecast : ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಸಕ್ರಿಯಗೊಂಡಿದ್ದು, ಭಾರಿ ಮಳೆಯಾಗುವ (Heavy Rain alert) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕ್‌ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

By

Karnataka Weather forecast
Koo

ಬೆಂಗಳೂರು: ದಕ್ಷಿಣ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣದೊಂದಿಗೆ ಭಾರೀ ಮಳೆಯಾಗುವ (Heavy Rain alert) ಸಾಧ್ಯತೆ ಇದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Assault Case : ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಅಪರಿಚಿತರು

ಬೆಂಗಳೂರಿನಲ್ಲಿ ಭಾರಿ ಮಳೆ ಎಚ್ಚರ

ಬೆಂಗಳೂರು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌

ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
bengaluru power cut
ಬೆಂಗಳೂರು26 mins ago

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಪವರ್‌ ಕಟ್‌

Human-Elephant Conflict
ಕರ್ನಾಟಕ1 hour ago

Human-Elephant Conflict: ಮಾನವ-ಆನೆ ಸಂಘರ್ಷ ತಡೆಗೆ ಸರ್ಕಾರ ಬದ್ಧವಾಗಿದೆ: ಸಿಎಂ ಸಿದ್ದರಾಮಯ್ಯ

Bengaluru rain
ಮಳೆ1 hour ago

Bengaluru Rains : ಬೃಹತ್‌ ಗಾತ್ರದ ಮರದ ಕೊಂಬೆಗಳು ಬಿದ್ದು 6 ಮಂದಿಗೆ ಗಾಯ; ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್

Palika Bazar
ವಾಣಿಜ್ಯ1 hour ago

Palika Bazar: ಬೆಂಗಳೂರಿನಲ್ಲೂ ದೆಹಲಿಯಂತಹ ʼಪಾಲಿಕಾ ಬಜಾರ್ʼ; ಎಲ್ಲಿ ನಿರ್ಮಾಣ? ಯಾವಾಗ ಆರಂಭ?

Viral Video
Latest1 hour ago

Viral Video: ಕಂಠ ಪೂರ್ತಿ ಕುಡಿದ ಪಿಯು ಹುಡುಗನ ಕಾರು ಚಾಲನೆ; ಜೀವ ಕಳೆದುಕೊಂಡ ಅಮಾಯಕ

Self Harming
Latest1 hour ago

Self Harming: ಶಿಕ್ಷಕಿ, ಸಹಪಾಠಿಗಳ ಕಿರುಕುಳ ತಾಳಲಾರದೆ ನೇಣಿಗೆ ಶರಣಾದ ಬಾಲಕ

Mahesh Babu’s new look goes viral ahead of SSMB29
ಟಾಲಿವುಡ್1 hour ago

Mahesh Babu: ಮಹೇಶ್ ಬಾಬು ಲುಕ್‌ಗೆ ಫ್ಯಾನ್ಸ್‌ ಫಿದಾ; ಫೋಟೊ ವೈರಲ್‌!

Channaptna By Election
ರಾಜಕೀಯ2 hours ago

Channaptna By Election: ಚನ್ನಪಟ್ಟಣ ಉಪಚುನಾವಣೆ: ಮೈತ್ರಿ ಪಕ್ಷದ ಅಭ್ಯರ್ಥಿ ಆಗದಿದ್ದರೆ ಸ್ವತಂತ್ರ ಸ್ಪರ್ಧೆ ಎಂದ ಯೋಗೇಶ್ವರ್

submarines
ದೇಶ2 hours ago

Submarines: ಎರಡು ಪರಮಾಣು ಜಲಾಂತರ್ಗಾಮಿ ನೌಕೆಗಳಿಗಾಗಿ ಕೇಂದ್ರಕ್ಕೆ ಭಾರತೀಯ ನೌಕಾಪಡೆ ಮನವಿ

Urfi Javed 'LED Display Top' On Mumbai Streets
ಬಾಲಿವುಡ್2 hours ago

Urfi Javed: ಎಲ್ಇಡಿ ಡಿಸ್ಪ್ಲೇ ಇಂದ ಮಾನ ಮುಚ್ಚಿಕೊಂಡು ಬಂದ ಉರ್ಫಿ ಜಾವೇದ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು6 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ6 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌