Karnataka Rain : ಗಾಳಿ-ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಜಾನುವಾರುಗಳು ಸಾವು; ಮತ್ತೆ ಮುಳುಗಡೆಯಾದ ತ್ರಿವೇಣಿ ಸಂಗಮ - Vistara News

ಮಳೆ

Karnataka Rain : ಗಾಳಿ-ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಜಾನುವಾರುಗಳು ಸಾವು; ಮತ್ತೆ ಮುಳುಗಡೆಯಾದ ತ್ರಿವೇಣಿ ಸಂಗಮ

Karnataka Rain : ಭಾರಿ ಮಳೆಗೆ ನಾನಾ ಅವಾಂತರವೇ ಸೃಷ್ಟಿಯಾಗಿದೆ. ಕೊಡಗಿನಲ್ಲಿ ತುಂಡಾಗಿ ಬಿದ್ದ ವಿದ್ಯುತ್‌ ತಂತಿ ತುಳಿದು ಜಾನುವಾರು ಮೃತಪಟ್ಟರೆ, ಹಾಸನದಲ್ಲಿ ಗರ್ಭಗುಡಿಯ ಎದುರು ನಾಗರಹಾವು ಪ್ರತ್ಯಕ್ಷಗೊಂಡಿತ್ತು. ಮತ್ತೆ ತ್ರಿವೇಣಿ ಸಂಗಮ ಮುಳುಗಡೆಯಾಗಿದ್ದು, ಭದ್ರಾ ನದಿ ಅಬ್ಬರಕ್ಕೆ 8 ಗ್ರಾಮಗಳಿಗೆ ಜಲ ದಿಗ್ಬಂಧನ ಹಾಕಲಾಗಿದೆ.

VISTARANEWS.COM


on

karnataka Rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಡಗು: ಕೊಡಗು‌ ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಭಾರಿ ಮಳೆಗೆ (Karnataka Rain) ವಿದ್ಯುತ್ ತಂತಿ ತುಂಡಾಗಿ ಬಿದ್ದು 6 ಜಾನುವಾರು ಮೃತಪಟ್ಟಿವೆ. ಗ್ರಾಮದ ರೈತ ಬೊಜ್ಜoಗಡ ನಟರಾಜ್ ಅವರಿಗೆ ಸೇರಿದ ಜಾನುವಾರು ಮೃತಪಟ್ಟಿವೆ. ಭಾರಿ ಮಳೆಗೆ 11 ಕೆವಿ ವಿದ್ಯುತ್ ತಂತಿ ರಸ್ತೆಗೆ ತುಂಡಾಗಿ ಬಿದ್ದಿತ್ತು. ಗದ್ದೆಯಿಂದ ಕೊಟ್ಟಿಗೆಗೆ ಸಾಲಾಗಿ ಬರುತ್ತಿದ್ದಾಗ ಕರೆಂಟ್‌ ಶಾಕ್‌ ಹೊಡೆದು, ಒಂದರ ಹಿಂದೆ ಒಂದು ಜಾನುವಾರುಗಳು ದುರ್ಮರಣ ಹೊಂದಿವೆ.

Karnataka Rain
Karnataka Rain

ಹೇಮಾವತಿ ಜಲಾಶಯಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ಹಾಸನ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟಕ್ಕೆ ಹೇಮಾವತಿ ಜಲಾಶಯದಲ್ಲಿ ಒಳಹರಿವು ಏರಿಕೆಯಾಗುತ್ತಲೇ ಇದೆ. ಹೇಮಾವತಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೇಮಾವತಿ ಜಲಾಶಯದಿಂದ ಹೊರಬಿಡುತ್ತಿರುವ ನೀರು ಧುಮ್ಮಿಕ್ಕುವುದನ್ನು ಕಣ್ತುಂಬಿಕೊಳ್ಳಲು ನೂರಾರು ಮಂದಿ ಬರುತ್ತಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹಾಸನದ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.

ಹಾಸನದಲ್ಲಿ ಗರ್ಭಗುಡಿಯ ಎದುರು ಹೆಡೆ ಎತ್ತಿ ಕುಳಿತ ನಾಗರಹಾವು

ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿರುವ ಹೊಳೆಮಲ್ಲೇಶ್ವರ ದೇವಾಲಯದಲ್ಲಿ ಬೆಳ್ಳಂಬೆಳಿಗ್ಗೆ ನಾಗರಹಾವು ಪ್ರತ್ಯಕ್ಷಗೊಂಡಿದೆ. ಹೇಮಾವತಿ ನದಿ ದಡದಲ್ಲೆ ಇರುವ ಹೊಳೆಮಲ್ಲೇಶ್ವರ ದೇವಾಲಯವು ನದಿ ನೀರಿನಿಂದ ಜಲಾವೃತವಾಗಿದೆ. ಮಂಗಳವಾರ ದೇವಾಲಯದೊಳಗೆ ನಾಗರಹಾವು ಕಾಣಿಸಿಕೊಂಡಿದೆ. ಗರ್ಭಗುಡಿಯ ಎದುರು ಹೆಡೆ ಎತ್ತಿ ಕುಳಿತ ನಾಗರಹಾವು ಕಂಡು ಜನರು ಆತಂಕಗೊಂಡಿದ್ದರು. ಹೇಮಾವತಿ ನದಿ ನೀರು ನುಗ್ಗಿರುವುದರಿಂದ ಗರ್ಭಗುಡಿ ಬಾಗಿಲು ಮುಚ್ಚಿತ್ತು.

ಮತ್ತೆ ತ್ರಿವೇಣಿ ಸಂಗಮ ಮುಳುಗಡೆ

ಬಿಟ್ಟು ಬಿಟ್ಟು ಮಳೆ ಸುರಿಯುತ್ತಿರುವುದರಿಂದ ಆತಂಕ ಹೆಚ್ಚಾಗಿದೆ. ಅಲ್ಲಲ್ಲಿ ಗುಡ್ಡದ ಸಣ್ಣ ಪ್ರಮಾಣದ ಮಣ್ಣು ಕುಸಿಯುತ್ತಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ ನದಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಇದೆ. ಇತ್ತ ಕೊಡಗಿನ ಭಾಗಮಂಡಲದ ತ್ರಿವೇಣಿ ಸಂಗಮ ಕ್ಷೇತ್ರ ಮತ್ತೆ ಭರ್ತಿಯಾಗಿದೆ. ಮತ್ತೊಮ್ಮೆ ಭಗಂಡೇಶ್ವರ ದೇಗುಲದ ಮೆಟ್ಟಿಲವರೆಗೂ ನೀರು ಬಂದಿದೆ. ಗಾಳಿ ಮಳೆಗೆ ವಿದ್ಯುತ್ ಕಂಬಗಳು ಧರಾಶಾಹಿಯಾಗುತ್ತಿದೆ. ವಿದ್ಯುತ್ ಸಂಪರ್ಕ‌ ಕಲ್ಪಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಭದ್ರಾ ನದಿ ಅಬ್ಬರಕ್ಕೆ 8 ಗ್ರಾಮಗಳಿಗೆ ಜಲ ದಿಗ್ಬಂಧನ

ಚಿಕ್ಕಮಗಳೂರಿನಲ್ಲಿ ಭದ್ರಾ ನದಿ ಅಬ್ಬರಕ್ಕೆ 8 ಗ್ರಾಮಗಳಿಗೆ ಜಲ ದಿಗ್ಬಂಧನ ಹಾಕಲಾಗಿದೆ. ಭದ್ರಾ ನದಿಯ ಪ್ರವಾಹಕ್ಕೆ ರಸ್ತೆ ಮುಳುಗಿದ್ದು, ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 8 ಗ್ರಾಮಗಳು ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಮೇಲೆ 8-10 ಅಡಿ ನೀರು ನಿಂತಿದೆ. ಇತ್ತ ಕಳಸ-ಹೊರನಾಡು-ಕೊಟ್ಟಿಗೆಹಾರ ಮಾರ್ಗವು ಸಂಪೂರ್ಣ ಬಂದ್ ಆಗಿದೆ. ಭದ್ರೆಯ ಅಬ್ಬರಕ್ಕೆ 20 ಮನೆಯ ಕುಗ್ರಾಮಕ್ಕೆ ಜಲದಿಗ್ಬಂಧನ ಹಾಕಲಾಗಿದೆ. ಹಳ್ಳಿಯಿಂದ ಹೊರಬರಲು ಯಾವುದೇ ಮಾರ್ಗ ಇಲ್ಲದೆ ಪರದಾಟ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ: UGCET 2024 : ಯುಜಿಸಿಇಟಿ ಆಪ್ಶನ್ ದಾಖಲಿಸಲು ಮತ್ತಷ್ಟು ದಿನ ಅವಕಾಶ

ಬೆಳಗಾವಿಯಲ್ಲಿ ದನ ಮೇಯಿಸುವಾಗ ಕರಡಿ ದಾಳಿ

ಮನೆಗೆ ಮರಳುತ್ತಿದ್ದ ವ್ಯಕ್ತಿಯ ಮೇಲೆ ಕರಡಿಯೊಂದು ದಾಳಿ ಮಾಡಿದೆ. ದನ ಮೇಯಿಸುವ ವ್ಯಕ್ತಿಯ ಮೇಲೆ ಏಕಾಏಕಿ ದಾಳಿ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ‌ಖಾನಾಪುರ ತಾಲೂಕಿನ ದೇವರಾಯಿ ಗ್ರಾಮದ ಬಳಿ ನಡೆದಿದೆ. ನಾರಾಯಣ ಚೌರಿ (65) ಕರಡಿ ದಾಳಿಗೆ ಒಳಗಾದವರು. ಕರಡಿ ದಾಳಿ ಮಾಡುತ್ತಿದ್ದಂತೆ ನಾರಾಯಣ ಚೌರಿ ಚಿರಾಡಿದ್ದಾರೆ. ಚಿರಾಟ ಕೇಳಿ ಓಡಿ ಬಂದಿದ್ದ ಅಕ್ಕ ಪಕ್ಕದ ಜನ ಓಡಿಸಿದ್ದಾರೆ. ನಾರಾಯಚ ಚೌರಿ ಬೆನ್ನು ಮೈಮೇಲೆ ಪರಚಿ ದಾಳಿ ಮಾಡಿದೆ. ಗಾಯಗೊಂಡ ನಾರಾಯಣ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಜಯಪುರದಲ್ಲಿ ಜಾನುವಾರು ಕೊಂದ ಕಾಡು ಪ್ರಾಣಿ

ವಿಜಯಪುರದ ಕಂದಗನೂರ ಗ್ರಾಮದ ರೈತರು ಕಾಡು ಪ್ರಾಣಿಯ ಕಾಟಕ್ಕೆ ಆತಂಕಕ್ಕೆ ಒಳಗಾಗಿದ್ದಾರೆ. ಸಿದ್ರಾಮಪ್ಪ ಬೂಲಿ ಎಂಬ ರೈತನ ತೋಟದಲ್ಲಿದ್ದ ಆಕಳು ಕರು ಹಾಗೂ ಎಮ್ಮೆ ಕರುವನ್ನು ಕಾಡು ಪ್ರಾಣಿ ಕೊಂದು ಹಾಕಿದೆ. ಚಿರತೆ ಕೊಂದಿರಬಹುದೆಮದು ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕಂದಗನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕಾಡು ಪ್ರಾಣಿ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು. ಬೋನ್ ಹಾಕಿದ್ದಾರೆ. ಇನ್ನೂ ಜಾನುವಾರಗಳ ಮೇಲೆ ಚಿರತೆ ಅಲ್ಲ ಕತ್ತೆಕಿರುಬ ಇರಬಹುದು ಎಂದು ಸಂಶಯ ವ್ಯಕ್ತ ಪಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka rain : ಚಿಕ್ಕಮಗಳೂರಿನ ಭದ್ರಾ ನದಿಯ ಅಬ್ಬರಕ್ಕೆ ಮತ್ತೊಂದು ಹಸು ಕೊಚ್ಚಿ ಹೋದರೆ, ಬೈಂದೂರಿನಲ್ಲಿ ಬೃಹತ್‌ ಗಾತ್ರದ ಮೊಸಳೆ ಪ್ರತ್ಯಕ್ಷಗೊಂಡಿದೆ. ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ಇದ್ದರೆ, ನೇತ್ರಾವತಿ ಅಬ್ಬರಕ್ಕೆ ಮನೆಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka Rain
Koo

ಚಿಕ್ಕಮಗಳೂರು: ಭಾರಿ ಮಳೆಗೆ (Karnataka rain) ಚಿಕ್ಕಮಗಳೂರಿನಲ್ಲಿ ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಮತ್ತೊಂದು ಹಸು ಬಲಿಯಾಗಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಬಳಿ ಘಟನೆ ನಡೆದಿದೆ. ಹೆಬ್ಬಾಳ ಸೇತುವೆ ಮೇಲೆ 5-6 ಅಡಿ ನೀರು ಹರಿಯುತ್ತಿದ್ದು, ಸೇತುವೆ ತುದಿಯಲ್ಲಿದ್ದ ಹಸು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕಳೆದ ವಾರವೂ ಹಸುವೊಂದು ಇದೇ ಸೇತುವೆ ಮೇಲೆ ಕೊಚ್ಚಿ ಹೋಗಿತ್ತು. ಇದೀಗ ಮತ್ತೊಂದು ಹಸು ನೋಡನೋಡುತ್ತಿದ್ದಂತೆ ಕೊಚ್ಚಿ ಹೋಗಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ.

ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ

ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೊಣ್ಣೂರ ಬಳಿಯ ಹಳೆಯ ಸೇತುವೆ ಮುಳುಗಡೆಯಾಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿಯ ಸೇತುವೆ ಮುಳುಗಡೆಯಾಗಿದೆ. ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸುವ ಹಳೆಯ ಸೇತುವೆ ಇದಾಗಿದ್ದು, ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಹೊಸ ಸೇತುವೆ ಮೇಲೆ ಮಾತ್ರ ವಾಹನಗಳು ಸಂಚಾರಿಸುತ್ತಿವೆ. ಮಲಪ್ರಭಾ ನದಿಗೆ 5,000 ಹೆಚ್ಚು ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಕೊಣ್ಣೂರು, ವಾಸನ, ಲಖಮಾಪುರ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.

ಇದನ್ನೂ ಓದಿ: Yakshagana Artist: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣು

ನೇತ್ರಾವತಿ ಅಬ್ಬರಕ್ಕೆ ಮನೆಗಳು ಜಲಾವೃತ

ಕ್ಷಣ ಕ್ಷಣಕ್ಕೂ ನೇತ್ರಾವತಿ ನದಿ ನೀರಿನ ಹರಿವು ಏರಿಕೆ ಆಗುತ್ತಿದ್ದು, ಬಂಟ್ವಾಳದ ಮಣಿಹಳ್ಳದ ಕಡವಿನಬಾಗಿಲು ಬಳಿ ಏಳು ಮನೆಗಳು ಜಲಾವೃತಗೊಂಡಿದೆ. ನದಿ ನೆರೆ ನೀರಿನಿಂದ ಮನೆಗಳು ಮುಳುಗಿದೆ. ಅಪಾಯದ ಮಟ್ಟವನ್ನು ಮೀರಿ ನೇತ್ರಾವತಿ ನದಿ ಹರಿಯುತ್ತಿದ್ದು, ಮನೆಗಳು ಕುಸಿಯುವ ಭೀತಿ ಇದೆ. ಮನೆಯಂಗಳದಲ್ಲಿ ಎದೆ ಮಟ್ಟದಲ್ಲಿ ಹರಿಯುತ್ತಿದೆ. ಬಂಟ್ವಾಳದ ಹಲವು ಭಾಗಗಳಲ್ಲಿ ಭಾರೀ ನೆರೆ ಸೃಷ್ಟಿಯಾಗಿದೆ. ಶಂಭೂರು ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾಗುತ್ತಿದೆ. ಸ್ಥಳೀಯ ನಿವಾಸಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಬೈಂದೂರಿನಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಮೊಸಳೆ

ಉಡುಪಿಯ ಬೈಂದೂರು ತಾಲೂಕಿನ ನಾಗೂರು ಉಡುಪರ ಹಿತ್ತಲಿನಲ್ಲಿ ಬೃಹತ್‌ ಗಾತ್ರದ ಮೊಸಳೆ ಪತ್ತೆಯಾಗಿದೆ. ತೋಟದಲ್ಲಿ ಸಿಹಿ ನೀರಿನ ಬಾವಿಯಲ್ಲಿ ಮೊಸಳೆ ತೇಲಾಡುತ್ತಿತ್ತು. ಮೊಸಳೆ ನೋಡಿ ಹೌಹಾರಿದ ಸ್ಥಳೀಯರು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ ಮೊಸಳೆಗಳು ಕಾಣ ಸಿಗುವುದೇ ಅಪರೂಪ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ನಾಗೂರಿನ ರತ್ನಾಕರ ಉಡುಪ ಎನ್ನುವವರ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಕೋಳಿ ಮಾಂಸ ಹಾಕಿ ಮೊಸಳೆ ಹಿಡಿಯುವ ಯತ್ನದಲ್ಲಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಮೊಸಳೆ ತೇಲಿ ಬಂದಿರುವ ಶಂಕೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Shiradi Landslide: ಕೇರಳದ ಬೆನ್ನಿಗೇ ಶಿರಾಡಿ ಘಾಟಿಯಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ ಸಿಲುಕಿದ ಕಾರುಗಳು, ಟ್ಯಾಂಕರ್‌

Shiradi Landslide: ಬೆಂಗಳೂರು- ಮಂಗಳೂರು ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಮತ್ತೆ ಬೃಹತ್‌ ಭೂಕುಸಿತವಾಗಿದೆ. ಕನಿಷ್ಠ ಎರಡು ಕಾರುಗಳು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಇದರಡಿ ಸಿಲುಕಿಕೊಂಡಿವೆ.

VISTARANEWS.COM


on

Shiradi Landslide
Koo

ಹಾಸನ: ಕೇರಳದ ವಯನಾಡಿನಲ್ಲಿ (Wayanad Landslide) ಬೃಹತ್ ಭೂಕುಸಿತ ಸಂಭವಿಸಿ 70ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ ಘಟನೆಯ ಬೆನ್ನಿನಲ್ಲಿಯೇ, ಹಾಸನದ ಶಿರಾಡಿ ಘಾಟಿಯಲ್ಲಿಯೂ ರಸ್ತೆಯ ಮೇಲೆ ಭಾರೀ ಭೂಕುಸಿತ (Shiradi Landslide) ಸಂಭವಿಸಿದೆ. ಮಣ್ಣಿನಡಿ ಹಲವು ವಾಹನಗಳು ಸಿಲುಕಿಕೊಂಡಿದ್ದು, ಇನ್ನಷ್ಟು ಕುಸಿತದ ಆತಂಕ ಎದುರಾಗಿದೆ. ಘಾಟಿಯಲ್ಲಿ ವಾಹನ ಸಂಚಾರ ಪೂರ್ತಿ ರದ್ದುಗೊಳಿಸಲಾಗಿದೆ.

ಬೆಂಗಳೂರು- ಮಂಗಳೂರು ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಮತ್ತೆ ಬೃಹತ್‌ ಭೂಕುಸಿತವಾಗಿದೆ. ಕನಿಷ್ಠ ಎರಡು ಕಾರುಗಳು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಇದರಡಿ ಸಿಲುಕಿಕೊಂಡಿವೆ. ತಕ್ಷಣ ಸ್ಥಳದಲ್ಲಿದ್ದವರು ವಾಹನಗಳಲ್ಲಿ ಇದ್ದವರನ್ನು ಹೊರಗೆ ಎಳೆತಂದಿದ್ದಾರೆ. ಮಣ್ಣಿನಡಿ ಇನ್ನೂ ವ್ಯಕ್ತಿಗಳು ಸಿಲುಕಿಕೊಂಡಿದ್ದಾರೆಯೇ ಎಂಬುದು ಗೊತ್ತಾಗಿಲ್ಲ.

ಸತತ ಮಳೆಯಿಂದ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲೆ ಬಳಿ ಕಳೆದ ವಾರವೂ ಭೂಕುಸಿತವಾಗಿತ್ತು. ಕಳೆದ ಹದಿನೈದು ದಿನಗಳಿಂದ ಇಲ್ಲಿ ಮಣ್ಣಿನ ರಾಶಿ ಕುಸಿಯುತ್ತಿದೆ. ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ರಸ್ತೆಗೆ ಕುಸಿದಿದೆ. ಹಲವು ಪ್ರಯಾಣಿಕರು ಕಾರಿನಲ್ಲೇ ಸಿಲುಕಿದ್ದಾರೆ. ಕಾರ್ಯಾಚರಣಾ ಸಿಬ್ಬಂದಿ ಜೆಸಿಬಿ ಮೂಲಕ‌ ಮಣ್ಣು ತೆರವು ಮಾಡುತ್ತಿದ್ದು, ಸ್ಥಳದಲ್ಲಿ ಆತಂಕ ಹೆಚ್ಚಿದೆ. ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ನಡೆಯುವ ಭೀತಿಯಿದೆ. ಸಾಗರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನ ನಡೆಯುತ್ತಿದೆ.

ಕಳೆದ ತಿಂಗಳು ಉತ್ತರ ಕನ್ನಡದ ಅಂಕೋಲಾ ಶಿರೂರಿನಲ್ಲಿ ಗುಡ್ಡ ಕುಸಿದು ಹಲವಾರು ವಾಲಹನಗಳು ಹಾಗೂ ಜನರು ಜಲಸಮಾಧಿಯಾಗಿದ್ದರು. 11 ಜನ ಸತ್ತಿದ್ದು, ಇವರಲ್ಲಿ 8 ಜನರ ದೇಹಗಳು ದೊರೆತಿವೆ. ಇನ್ನೂ ಮೂವರು ದೇಹಗಳು ದೊರೆತಿಲ್ಲ. ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ದೇವರನಾಡು ಕೇರಳ (Kerala) ದಲ್ಲಿ ಭಾರೀ ಮಳೆಗೆ ಭೂಕುಸಿತಕ್ಕೆ (Kerala Landslide) ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 70ಕ್ಕೆ ಏರಿಕೆ ಆಗಿದ್ದು, ನೂರಾರು ಮಂದಿ ಅವಶೇಷದಡಿಯಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಮೆಪ್ಪಡಿ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಭೀತಿ ಎದುರಾಗಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಫೈರ್‌ಫೋರ್ಸ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಪೀಡಿತ ಪ್ರದೇಶಕ್ಕೆ ಸಜ್ಜುಗೊಳಿಸಿದ್ದು, ನೂರಾರು ಮಂದಿ ಸಿಲುಕಿರುವ ಶಂಕೆ ಇದೆ. ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳೊಂದಿಗೆ ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ಕೂಡ ಸಹಾಯಕ್ಕೆ ತೆರಳುತ್ತಿದೆ.

ಕರ್ನಾಟಕದ ಕೊಡಗು ಭಾಗ, ಹಾಸನ, ಚಿಕ್ಕಮಗಳೂರು ಭಾಘದ ಹಲವು ಕಡೆಗಳಲ್ಲಿ ಭೂಕುಸಿತದ ವರದಿಯಾಗುತ್ತಿದೆ. 2018ರಲ್ಲಿ ಕೊಡಗಿನಲ್ಲಿ ಭಾರೀ ಭೂಕುಸಿತ ಸಂಭವಿಸಿ ನೂರಾರು ಜನರು ಸತ್ತಿದ್ದರು. ಕೋಟ್ಯಂತರ ಆಸ್ತಿಪಾಸ್ತಿ ನಷ್ಟವಾಗಿತ್ತು. ಸಾವಿರಾರು ಜನ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದರು. ಅದೇ ವರ್ಷ ಕೇರಳದಲ್ಲಿಯೂ ಜಲಪ್ರಳಯ ನಡೆದಿತ್ತು.

ಇದನ್ನೂ ಓದಿ: Wayanad Landslide: ಎಲ್ಲೆಂದರಲ್ಲಿ ಮಣ್ಣಿನ ರಾಶಿ: ಕೊಚ್ಚಿ ಹೋದ ಸೇತುವೆ, ರಸ್ತೆ: ವಯನಾಡಿನಲ್ಲಿ ಮೃತರ ಸಂಖ್ಯೆ 70ಕ್ಕೆ ಏರಿಕೆ

Continue Reading

ಮಳೆ

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Karnataka Rain : ಕೆಲವೆಡೆ ಬಿಡುವು ನೀಡಿದ್ದ ಮಳೆಯು ಮತ್ತೆ ಅಬ್ಬರಿಸುತ್ತಿದೆ. ಚಿಕ್ಕಮಗಳೂರಿನಲ್ಲಿ ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ಚಿಕ್ಕೋಡಿಯಲ್ಲಿ ಹೆಸ್ಕಾಂ ಸಿಬ್ಬಂದಿ ನೀರಿಗೆ ಜಿಗಿದು ವಿದ್ಯುತ್‌ ಸರಿಪಡಿಸಿದ್ದಾರೆ. ಹಾಸನದಲ್ಲಿ ಶಾಲೆ ಜಲಾವೃತಗೊಂಡಿದೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲೂ ಮಳೆಯ ( Karnataka Rain) ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ದೋಬಿ ಹಳ್ಳ ಪ್ರವಾಹಕ್ಕೆ ತಗ್ಗು ಪ್ರದೇಶದ ಮನೆಗಳು ಮುಳುಗಡೆಯಾಗಿವೆ. ಮನೆಯಿಂದ ಹೊರಬರಲು ಆಗದೆ ಸಣ್ಣ ಬೋಟ್ ಬಳಸಿ ನೆರೆಯಲ್ಲಿ ಸಿಲುಕಿದ್ದ ಜನರನ್ನು ರಕ್ಷಣೆ ಮಾಡಲಾಗಿದೆ. ಶಾಲೆ, ಮದರಸ, ಸಂತೆ ಮಾರುಕಟ್ಟೆ, ಮನೆಗಳು ಜಲಾವೃತಗೊಂಡಿದೆ. ಸದ್ಯ ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಬೋಟ್ ಬಳಕೆ ಮಾಡುವಂತಾಗಿದೆ.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹೇರೂರು ಸಮೀಪದ ದೇವಗೋಡು ಗ್ರಾಮದಲ್ಲಿ ಸುಮಾರು ಎರಡು ಎಕರೆ ವಿಸ್ತೀರ್ಣದ ಕೆರೆಯು ಕೋಡಿ ಹೊಡೆದಿದೆ. ಪರಿಣಾಮ ಭತ್ತ ನಾಟಿ ಮಾಡಿದ್ದ ಜಮೀನು ಜಲಾವೃತಗೊಂಡಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಚನ್ನಹಡ್ಲು ಗ್ರಾಮದಲ್ಲಿ ಭೂ ಕುಸಿದಿದೆ. ಮಲ್ಲೇಶ್ವರ ಗುಡ್ಡದಲ್ಲಿ ಭಾರಿ ಪ್ರಮಾಣದ ಧರೆ ಕುಸಿದು, ರಸ್ತೆಯ ಅರ್ಧ ಭಾಗಕ್ಕೆ ಗುಡ್ಡದ ಮಣ್ಣು ಬಂದಿದೆ. 2019ರಲ್ಲಿ ಕುಸಿತ ಕಂಡಿದ್ದ ಸ್ಥಳದ ಸಮೀಪವೇ ಧರೆ ಕುಸಿದಿದೆ. ಬಾಳೆಹೊಳೆ, ಚನ್ನಹಡ್ಲು, ಬಾಳೆಹೊನ್ನೂರು ರಸ್ತೆಯಲ್ಲಿ ಘಟನೆ ನಡೆದಿದೆ.

ತುಂಗಾ ನದಿಯ ಅಬ್ಬರ ಶೃಂಗೇರಿ ಪಟ್ಟಣದ ಗಾಂಧಿ ಮೈದಾನ ಜಲಾವೃತವಾಗಿದ್ದು, ಅಂಗಡಿ ಮಳಿಗಗಳು, ಭಾರತಿ ತೀರ್ಥ ರಸ್ತೆಯೂ ಮುಳುಗಡೆಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನದಿಯತ್ತ ಜನರ ಓಡಾಟಕ್ಕೆ ನಿಷೇಧ ಹೇರಲಾಗಿದೆ. ತಾತ್ಕಾಲಿಕವಾಗಿ ಸುಮಾರು 20ಕ್ಕೂ ಹೆಚ್ಚು ಅಂಗಡಿ ಮಳಿಗೆಗಳು ಕ್ಲೋಸ್ ಆಗಿವೆ. ಇನ್ನೂ ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಸೇತುವೆ ಮುಳುಗಡೆಯಾಗಿದ್ದು, ಬಾಳೆಹೊನ್ನೂರು-ಕಳಸ ಮಾರ್ಗ ಸಂಪೂರ್ಣ ಬಂದ್ ಆಗಿದೆ.

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ರಾ.ಹೆ.173ರ ಚಾರ್ಮಾಡಿ ಘಾಟಿಯಲ್ಲಿ ಬೃಹತ್ ಮರವೊಂದು ರಸ್ತೆಗುರುಳಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ಚಿಕ್ಕಮಗಳೂರು-ಮಂಗಳೂರು ಮಾರ್ಗ ಸಂಪೂರ್ಣ ಬಂದ್ ಆಗಿದ್ದರಿಂದ ಕೊಟ್ಟಿಗೆಹಾರದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.

ಕಳೆದ ಮೂರು ದಿನದಿಂದ ಸಂಪೂರ್ಣ ಬಿಡುವು ನೀಡಿದ್ದ ವರುಣ ಸೋಮವಾರ ರಾತ್ರಿಯಿಡೀ ಭಾರೀ ಮಳೆಗೆ ತತ್ತರಿಸಿ ಹೋಗಿದ್ದಾರೆ. ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 169 ಬಂದ್ ಆಗಿದೆ. ಶೃಂಗೇರಿಯ ನೆಮ್ಮಾರು ಬಳಿ ರಸ್ತೆ ಮೇಲೆ ಹರಿಯುತ್ತಿರೋ ನೀರಿನಿಂದಾಗಿ ರಾಷ್ಟ್ರೀಯ ಹೆದ್ದಾರಿ ಸೇತುವೆ ಜಲಾವೃತವಾಗಿದೆ. ಟಿಪ್ಪರ್ ಲಾರಿ ಚಾಲಕ ಸೇತುವೆ ಮೇಲೆ ಸಂಚರಿಸಲು ಹೋಗಿ ಭಯಗೊಂಡು ವಾಪಾಸ್‌ ಆಗಿದ್ದಾರೆ. ಶೃಂಗೇರಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ.

karnataka Rain
karnataka Rain

ಇದನ್ನೂ ಓದಿ: Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ನೀರಿಗೆ ಜಿಗಿದು ವಿದ್ಯುತ್‌ ಸರಿಪಡಿಸಿದ ಹೆಸ್ಕಾಂ ಸಿಬ್ಬಂದಿ

ಮಹಾರಾಷ್ಟ್ರದಲ್ಲಿ ಮಳೆ ಅಬ್ಬರಕ್ಕೆ ಚಿಕ್ಕೋಡಿ ಉಪವಿಭಾಗದ ನದಿಗಳು ಸಮುದ್ರದಂತಾಗಿದೆ. ಪ್ರವಾಹ ಸಮಯದಲ್ಲಿ ಹೆಸ್ಕಾಂ ಸಿಬ್ಬಂದಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜೂಗುಳ ಗ್ರಾಮದಲ್ಲಿ ನೀರಿನಲ್ಲಿ ಧುಮುಕಿ ವಿದ್ಯುತ್ ಸರಿಪಡಿಸಿದ್ದಾರೆ. ಆನಂದ ಹೆರವಾಡಿ ಹೆಸ್ಕಾಂ ಸಿಬ್ಬಂದಿ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಬಳಿ ಇರುವ ಸೇತುವೆ ಜಲಾವೃತಗೊಂಡಿದೆ. ಅಥಣಿ ಗೋಕಾಕ್ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ಕೃಷ್ಣಾ ನದಿ ದಂಡೆಯ 20 ಗ್ರಾಮಗಳಿಗೆ ನದಿ ನೀರು ಕಂಟಕ ಎದುರಾಗಿದೆ.

ಹಾಸನದಲ್ಲಿ ಶಾಲೆ ಜಲಾವೃತ

ಹಾಸನದಲ್ಲಿ ಮಳೆಯ ಅವಾಂತರ ಮುಂದುವರಿದಿದೆ. ಅರಕಲಗೂಡು ತಾಲೂಕಿನ ಯಗಟಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯು ಸಂಪೂರ್ಣ ಜಲಾವೃತಗೊಂಡಿತ್ತು. ಭಾರಿ ಮಳೆಗೆ ಸೇತುವೆ ಮೇಲೆ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದು, ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸಕಲೇಶಪುರ ತಾಲೂಕಿನ ಮಠಸಾಗರ ಗ್ರಾಮದಲ್ಲಿ ಘಟನೆ ನಡೆದಿದೆ. ಮಠಸಾಗದ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತ ಗೊಂಡಿರುವುದರಿಂದ ಜನರು ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಮಠಸಾಗರ-ಕೃಷ್ಣಾಪುರ-ಸಕಲೇಶಪುರ ರಸ್ತೆ ಮುಳುಗಡೆಯಿಂದಾಗಿ ರಸ್ತೆ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳು, ಗ್ರಾಮಸ್ಥರ ಪರದಾಡಿದರು.

ಬೇಲೂರು ತಾಲೂಕಿನ ಸುಳ್ಳಕ್ಕಿ ಗ್ರಾಮದಲ್ಲಿ ಭಾರಿ ಮಳೆಗೆ ರಸ್ತೆಯು ಕೊಚ್ಚಿ ಹೋಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಸುಳ್ಳಕ್ಕಿ-ಮೈಲಹಳ್ಳಿ-ಆಲೂರು-ಬೇಲೂರು-ಕೋನೇರ್ಲು ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಟ್ ಆಗಿದೆ. ನೂರಾರು ಎಕರೆ ಭತ್ತದ ಗದ್ದೆಗಳು ಜಲಾವೃತಗೊಂಡಿದೆ.

ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಬೆಟ್ಟಿಗೇರಿ ಪಂಚಾಯಿತಿ ವ್ಯಾಪ್ತಿಯಲ್ಲಿ ಬರೆ ಜರಿದು ಕಾಂಕ್ರೀಟ್ ರಸ್ತೆ ಕುಸಿದು ಬೀಳುವ ಹಂತದಲ್ಲಿದೆ. ಶ್ರೀರಾಮ ಮತ್ತು ಶ್ರೀದೇವಿ ದೇವಸ್ಥಾನದ ರಸ್ತೆಯ ಸಮೀಪ ಬರೆ ಕುಸಿದು ಮಣ್ಣೆಲ್ಲ ಕೆಳಭಾಗದ ಗದ್ದೆಗೆ ಬಂದು ನಿಂತಿದೆ. ನಾಟಿಗೆ ತಯಾರಾಗಿದ್ದ ಭತ್ತದ ಗದ್ದೆಗೆ ಮಣ್ಣು, ನೀರು ನುಗ್ಗಿ ಅಪಾರ ಹಾನಿಯಾಗಿದೆ. 30 ಮನೆಗಳಿರುವ ಗ್ರಾಮಕ್ಕೆ ತೆರಳುವ ರಸ್ತೆ ಇದೀಗ ಅಪಾಯದಲ್ಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Wayanad Landslide: ಎಲ್ಲೆಂದರಲ್ಲಿ ಮಣ್ಣಿನ ರಾಶಿ: ಕೊಚ್ಚಿ ಹೋದ ಸೇತುವೆ, ರಸ್ತೆ: ವಯನಾಡಿನಲ್ಲಿ ಮೃತರ ಸಂಖ್ಯೆ 70ಕ್ಕೆ ಏರಿಕೆ

Wayanad Landslide: ದೇವರನಾಡು ಕೇರಳ ಮತ್ತೊಮ್ಮೆ ಭಾರಿ ಮಳೆಯ ಹೊಡೆತಕ್ಕೆ ಸಿಲುಕಿ ನಲುಗಿದೆ. ಅದರಲ್ಲಿಯೂ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಮೃತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಮೆಪ್ಪಡಿ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಭೀತಿ ಎದುರಾಗಿದೆ.

VISTARANEWS.COM


on

Koo

ವಯನಾಡ್‌: ದೇವರನಾಡು ಕೇರಳ (Kerala) ಮತ್ತೊಮ್ಮೆ ಭಾರಿ ಮಳೆಯ ಹೊಡೆತಕ್ಕೆ ಸಿಲುಕಿ ನಲುಗಿದೆ. ಅದರಲ್ಲಿಯೂ ವಯನಾಡಿನಲ್ಲಿ ಭೀಕರ ಭೂಕುಸಿತ (Wayanad Landslide) ಸಂಭವಿಸಿದ್ದು, ಮೃತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ನೂರಾರು ಮಂದಿ ಅವಶೇಷದಡಿಯಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಮೆಪ್ಪಡಿ (Meppadi) ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಭೀತಿ ಎದುರಾಗಿದೆ. ಇದೀಗ ಎಲ್ಲಿ ನೋಡಿದರೂ ಮಣ್ಣಿನ ರಾಶಿಯೇ ಕಂಡು ಬಂದಿದ್ದು, ರಸ್ತೆ, ಸೇತುವೆ, ಮನೆಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿವೆ.

ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ಸಿಬ್ಬಂದಿ, ಸರ್ಕಾರಿ ಸಂಸ್ಥೆ ಸಿಬ್ಬಂದಿ ಸೇರಿದಂತೆ ಮತ್ತು ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸಹಾಯ ಮಾಡಲು 43 ಭಾರತೀಯ ಸೇನಾ ಸಿಬ್ಬಂದಿಯ ತಂಡವನ್ನು ಸಹ ಸಜ್ಜುಗೊಳಿಸಲಾಗಿದೆ. ಇದೇ ವೇಳೆ ಸೇತುವೆ ಕುಸಿದಿರುವುದು ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿ ಪರಿಣಮಿಸಿದೆ. ಸರ್ಕಾರಿ ಮೂಲಗಳ ಪ್ರಕಾರ, ಈವರೆಗೆ ಗುಡ್ಡಗಾಡು ಪ್ರದೇಶಗಳಿಂದ 250 ಜನರನ್ನು ರಕ್ಷಿಸಲಾಗಿದೆ.

ಮಂಗಳವಾರ ಮುಂಜಾನೆ 2ರಿಂದ4 ಗಂಟೆಯ ನಡುವೆ ಸಂಭವಿಸಿದ ಭೂಕುಸಿತದಿಂದ ಮುಂಡಕೈ ಮತ್ತು ಚೂರಲ್‌ಮಾಲಾ ಪ್ರದೇಶದಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಕುಸಿದ ಸೇತುವೆ, ಕೊಚ್ಚಿ ಹೋದ ರಸ್ತೆ ಮುಂಡಕೈಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿ ಪರಿಣಮಿಸಿದೆ. ಚೂರಲ್‌ಮಾಲಾದಲ್ಲಿ ಒಟ್ಟು 250 ಸಿಬ್ಬಂದಿ ಕಾರ್ಯ ಪ್ರವೃತ್ತರಾಗಿದ್ದಾರೆ.

ಸಂಪರ್ಕ ಕಡಿತ

ಮುಂಡಕೈ, ಚೂರಲ್‌ಮಾಲಾ, ಅಟ್ಟಮಾಲಾ ಮತ್ತು ನೂಲ್ಪುಳ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ  ಭೂಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಎಲ್ಲರೊಂದಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ. ಪರಿಸ್ಥಿತಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದಾರೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.

ವಯನಾಡ್‌ ಮಾಜಿ ಸಂಸದ ರಾಹುಲ್ ಗಾಂಧಿ ತೀವ್ರ ಸಂತಾಪ ಸೂಚಿಸಿದ್ದಾರೆ. ವಯನಾಡಿನ ಮೆಪ್ಪಡಿ ಬಳಿ ಸಂಭವಿಸಿದ ಭಾರೀ ಭೂಕುಸಿತದಿಂದ ನಾನು ತೀವ್ರ ನೊಂದಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಘಟನೆಯಲ್ಲಿ ಸಿಲುಕಿಕೊಂಡವರನ್ನು ಶೀಘ್ರದಲ್ಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ನಾನು ಕೇಂದ್ರ ಸಚಿವರೊಂದಿಗೆ ಮಾತನಾಡಿ ವಯನಾಡಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ವಯನಾಡ್‌ನಲ್ಲಿ ರಕ್ಷಣಾ ಕಾರ್ಯಾಚರಣೆಗೆ ಎಲ್ಲ ಏಜೆನ್ಸಿಗಳು ಕೈಜೋಡಿಸಿವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ರಾಜ್ಯ ಸಚಿವರು ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ), ಫೈರ್‌ಫೋರ್ಸ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್)ಗಳ ಜತೆಗೆ ಸೇನೆ ರಕ್ಷಣಾ ಕಾರ್ಯಪ್ರವೃತ್ತವಾಗಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Kerala Landslide: ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

Continue Reading
Advertisement
Custard Apple Benefits
Latest25 mins ago

Custard Apple Benefits: ಕ್ಯಾನ್ಸರ್‌ ಸೇರಿದಂತೆ ಹಲವು ರೋಗಗಳನ್ನು ತಡೆಯುವ ಶಕ್ತಿ ಸೀತಾಫಲಕ್ಕಿದೆ!

namma Metro
ಬೆಂಗಳೂರು31 mins ago

Namma Metro : ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ದೋಷ; ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ

Martin Movie
ಕರ್ನಾಟಕ40 mins ago

Martin Movie: ಆ.4ಕ್ಕೆ ಮಾರ್ಟಿನ್ ಚಿತ್ರದ ಟ್ರೈಲರ್‌ 1 ರಿಲೀಸ್‌; ವಿಎಫ್‌ಎಕ್ಸ್‌ ವಂಚನೆ ಬಗ್ಗೆ ನಿರ್ಮಾಪಕ ಹೇಳಿದ್ದೇನು?

Neeraj Chopra
ಪ್ರಮುಖ ಸುದ್ದಿ43 mins ago

Neeraj Chopra : ನಮಸ್ಕಾರ ಪ್ಯಾರಿಸ್​​; ಒಲಿಂಪಿಕ್ಸ್​ ಕ್ರೀಡಾಗ್ರಾಮ ತಲುಪಿದ ಚಿನ್ನದ ಹುಡುಗ ನೀರಜ್ ಚೋಪ್ರಾ

Nirmala Sitharaman
ದೇಶ52 mins ago

Nirmala Sitharaman: ಕಾಂಗ್ರೆಸ್‌ ಅವಧಿ ಬಜೆಟ್‌ನಲ್ಲಿ 26 ರಾಜ್ಯಗಳ ಹೆಸರೇ ಇರಲಿಲ್ಲ; ನಿರ್ಮಲಾ ಸೀತಾರಾಮನ್‌ ಟಾಂಗ್

Paris Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : 7 ತಿಂಗಳ ಗರ್ಭಿಣಿಯಾಗಿದ್ದರೂ ಒಲಿಂಪಿಕ್ಸ್​ ಫೆನ್ಸಿಂಗ್​ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಪಂದ್ಯ ಗೆದ್ದ ಈಜಿಫ್ಟ್​​ನ ನಾದಾ ಹಫೀಜ್​

karnataka Rain
ಮಳೆ1 hour ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Actor Shahrukh Khan
ಸಿನಿಮಾ2 hours ago

Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

Girl
ದೇಶ2 hours ago

ಜಾಬ್‌ ಸಿಕ್ಕಿದೆ ಎಂದು ಗೆಳೆಯರಿಗೆ ಪಾರ್ಟಿ ಕೊಟ್ಟ ಯುವತಿ; ಕುಡಿದ ಸ್ನೇಹಿತರು ಆಕೆಯನ್ನೇ ರೇಪ್ ಮಾಡಿದರು!

Sarabjot Singh
ಪ್ರಮುಖ ಸುದ್ದಿ2 hours ago

Sarabjot Singh : ಭಾರತಕ್ಕೆ 2ನೇ ಒಲಿಂಪಿಕ್ಸ್ ಪದಕ ತಂದುಕೊಟ್ಟ ಮನು ಭಾಕರ್ ಶೂಟಿಂಗ್ ಪಾಲುದಾರ ಸರಬ್ಜೋತ್ ಸಿಂಗ್​ ಹಿನ್ನೆಲೆ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌