Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ - Vistara News

ಮಳೆ

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka rain : ಚಿಕ್ಕಮಗಳೂರಿನ ಭದ್ರಾ ನದಿಯ ಅಬ್ಬರಕ್ಕೆ ಮತ್ತೊಂದು ಹಸು ಕೊಚ್ಚಿ ಹೋದರೆ, ಬೈಂದೂರಿನಲ್ಲಿ ಬೃಹತ್‌ ಗಾತ್ರದ ಮೊಸಳೆ ಪ್ರತ್ಯಕ್ಷಗೊಂಡಿದೆ. ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ಇದ್ದರೆ, ನೇತ್ರಾವತಿ ಅಬ್ಬರಕ್ಕೆ ಮನೆಗಳು ಜಲಾವೃತಗೊಂಡಿದೆ.

VISTARANEWS.COM


on

karnataka Rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಮಗಳೂರು: ಭಾರಿ ಮಳೆಗೆ (Karnataka rain) ಚಿಕ್ಕಮಗಳೂರಿನಲ್ಲಿ ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಮತ್ತೊಂದು ಹಸು ಬಲಿಯಾಗಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಬಳಿ ಘಟನೆ ನಡೆದಿದೆ. ಹೆಬ್ಬಾಳ ಸೇತುವೆ ಮೇಲೆ 5-6 ಅಡಿ ನೀರು ಹರಿಯುತ್ತಿದ್ದು, ಸೇತುವೆ ತುದಿಯಲ್ಲಿದ್ದ ಹಸು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕಳೆದ ವಾರವೂ ಹಸುವೊಂದು ಇದೇ ಸೇತುವೆ ಮೇಲೆ ಕೊಚ್ಚಿ ಹೋಗಿತ್ತು. ಇದೀಗ ಮತ್ತೊಂದು ಹಸು ನೋಡನೋಡುತ್ತಿದ್ದಂತೆ ಕೊಚ್ಚಿ ಹೋಗಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ.

ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ

ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೊಣ್ಣೂರ ಬಳಿಯ ಹಳೆಯ ಸೇತುವೆ ಮುಳುಗಡೆಯಾಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿಯ ಸೇತುವೆ ಮುಳುಗಡೆಯಾಗಿದೆ. ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸುವ ಹಳೆಯ ಸೇತುವೆ ಇದಾಗಿದ್ದು, ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಹೊಸ ಸೇತುವೆ ಮೇಲೆ ಮಾತ್ರ ವಾಹನಗಳು ಸಂಚಾರಿಸುತ್ತಿವೆ. ಮಲಪ್ರಭಾ ನದಿಗೆ 5,000 ಹೆಚ್ಚು ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಕೊಣ್ಣೂರು, ವಾಸನ, ಲಖಮಾಪುರ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.

ಇದನ್ನೂ ಓದಿ: Yakshagana Artist: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣು

ನೇತ್ರಾವತಿ ಅಬ್ಬರಕ್ಕೆ ಮನೆಗಳು ಜಲಾವೃತ

ಕ್ಷಣ ಕ್ಷಣಕ್ಕೂ ನೇತ್ರಾವತಿ ನದಿ ನೀರಿನ ಹರಿವು ಏರಿಕೆ ಆಗುತ್ತಿದ್ದು, ಬಂಟ್ವಾಳದ ಮಣಿಹಳ್ಳದ ಕಡವಿನಬಾಗಿಲು ಬಳಿ ಏಳು ಮನೆಗಳು ಜಲಾವೃತಗೊಂಡಿದೆ. ನದಿ ನೆರೆ ನೀರಿನಿಂದ ಮನೆಗಳು ಮುಳುಗಿದೆ. ಅಪಾಯದ ಮಟ್ಟವನ್ನು ಮೀರಿ ನೇತ್ರಾವತಿ ನದಿ ಹರಿಯುತ್ತಿದ್ದು, ಮನೆಗಳು ಕುಸಿಯುವ ಭೀತಿ ಇದೆ. ಮನೆಯಂಗಳದಲ್ಲಿ ಎದೆ ಮಟ್ಟದಲ್ಲಿ ಹರಿಯುತ್ತಿದೆ. ಬಂಟ್ವಾಳದ ಹಲವು ಭಾಗಗಳಲ್ಲಿ ಭಾರೀ ನೆರೆ ಸೃಷ್ಟಿಯಾಗಿದೆ. ಶಂಭೂರು ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾಗುತ್ತಿದೆ. ಸ್ಥಳೀಯ ನಿವಾಸಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಬೈಂದೂರಿನಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಮೊಸಳೆ

ಉಡುಪಿಯ ಬೈಂದೂರು ತಾಲೂಕಿನ ನಾಗೂರು ಉಡುಪರ ಹಿತ್ತಲಿನಲ್ಲಿ ಬೃಹತ್‌ ಗಾತ್ರದ ಮೊಸಳೆ ಪತ್ತೆಯಾಗಿದೆ. ತೋಟದಲ್ಲಿ ಸಿಹಿ ನೀರಿನ ಬಾವಿಯಲ್ಲಿ ಮೊಸಳೆ ತೇಲಾಡುತ್ತಿತ್ತು. ಮೊಸಳೆ ನೋಡಿ ಹೌಹಾರಿದ ಸ್ಥಳೀಯರು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ ಮೊಸಳೆಗಳು ಕಾಣ ಸಿಗುವುದೇ ಅಪರೂಪ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ನಾಗೂರಿನ ರತ್ನಾಕರ ಉಡುಪ ಎನ್ನುವವರ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಕೋಳಿ ಮಾಂಸ ಹಾಕಿ ಮೊಸಳೆ ಹಿಡಿಯುವ ಯತ್ನದಲ್ಲಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಮೊಸಳೆ ತೇಲಿ ಬಂದಿರುವ ಶಂಕೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ; ಮಲೆನಾಡಿನ ಶಾಲಾ-ಕಾಲೇಜು ರಜೆ

Karnataka Weather Forecast : ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮಲೆನಾಡಿನ ಚಿಕ್ಕಮಗಳೂರು, ಕೊಡುಗು ಭಾಗದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ (School Holiday) ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಚಿಕ್ಕಮಗಳೂರು/ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಳಗಿನಿಂದಲೂ ಮೋಡ ಕವಿದ ವಾತಾವರಣ ಇತ್ತು. ಸಂಜೆ ಆಗುತ್ತಿದ್ದಂತೆ ಹಲವೆಡೆ (Rain News) ಮಳೆಯಾಗಿದೆ. ಆನಂದ್‌ ರಾವ್‌ ಸರ್ಕಲ್‌, ಶಿವಾಜಿನಗರ, ವಿಧಾನಸೌಧ, ಮೆಜೆಸ್ಟಿಕ್‌ ಸುತ್ತಮುತ್ತ ಮಳೆಯಾಗಿದೆ. ಇನ್ನೂ ಮಲೆನಾಡಿನ ಚಿಕ್ಕಮಗಳೂರಿನಲ್ಲಿ ಧಾರಾಕಾರ (Karnataka Weather Forecast) ಮ‌ಳೆ‌ಯಾಗುತ್ತಿದೆ. ಜು.31ರಂದು ಚಿಕ್ಕಮಗಳೂರಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಲೆನಾಡು ಭಾಗದ ಆರು ತಾಲೂಕಿನ ಅಂಗನವಾಡಿ, ಶಾಲಾ ಕಾಲೇಜು, ಪದವಿ ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ‌‌ ಘೋಷಣೆ ಮಾಡಲಾಗಿದೆ.

ಮುಖ್ಯವಾಗಿ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಚಿಕ್ಕಮಗಳೂರು, ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ‌ರಜೆ‌ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಇನ್ನೂ ಬಯಲುಸೀಮೆ ತಾಲೂಕುಗಳಾದ ಕಡೂರು, ತರೀಕೆರೆ, ಅಜ್ಜಂಪುರಕ್ಕೆ ರಜೆ ಇಲ್ಲ.

ಇತ್ತ ಕೊಡಗಿನಲ್ಲೂ ಭಾರಿ ಗಾಳಿ-ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರ ಒಂದು ದಿನ ಜಿಲ್ಲೆಯಾದ್ಯಂತ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನು ಹೊರತು ಪಡಿಸಿ, ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ನೀಡಿ, ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ.

ಧಾರಾಕಾರ ಮಳೆಗೆ ಐತಿಹಾಸಿಕ ರಾಮ ಮಂಟಪ ಮುಳುಗಡೆ

ಶಿವಮೊಗ್ಗದಲ್ಲೂ ಎಡಬಿಡದೆ ವ್ಯಾಪಕ ಮಳೆಯಾಗುತ್ತಿದ್ದು, ಐತಿಹಾಸಿಕ ರಾಮ ಮಂಟಪ ಮುಳುಗಡೆಯಾಗಿದೆ. ತೀರ್ಥಹಳ್ಳಿಯ ತುಂಗಾ ನದಿಯಲ್ಲಿರುವ ರಾಮ ಮಂಟಪ ಮುಳುಗಡೆಯಾಗಿದ್ದು, ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ಇನ್ನೂ ಲಿಂಗನಮಕ್ಕಿ ಜಲಾಶಯ ಭರ್ತಿಗೆ ಕ್ಷಣಗಣನೆ ಶುರುವಾಗಿದೆ. ನದಿ ಪಾತ್ರದ ಜನರಿಗೆ ಜಲಾಶಯದ ಅಧಿಕಾರಿಗಳು ಎಚ್ಚರಿಕೆಯಿಂದ ಇರುವಂತೆ ಸೂಚಿಸುತ್ತಿದ್ದಾರೆ. ಲಿಂಗನಮಕ್ಕಿ ಮಲೆನಾಡಿನ ಅತಿದೊಡ್ಡ ಜಲಾಶಯವಾಗಿದೆ. ನದಿಪಾತ್ರದ ಜನರಿಗೆ ಕಟ್ಟೇಚ್ಚರ ಘೋಷಣೆ ಮಾಡಲಾಗಿದೆ. ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ನದಿಪಾತ್ರದ ಹಳ್ಳಿಗಳಿಗೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ:Namma Metro : ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ದೋಷ; ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ

ನಾಳೆಗೂ ಮಳೆ ಅಬ್ಬರ

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಮತ್ತು ಹಾಸನ ಜಿಲ್ಲೆಗಳ ಪ್ರತ್ಯೇಕ ಕಡೆ ಗಾಳಿಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಬೆಳಗಾವಿ ಮತ್ತು ಮೈಸೂರಿನಲ್ಲೂ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Wayanad Landslide: ಕೇರಳ ಭೂ ಕುಸಿತ; ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

Wayanad Landslide: ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತಿ ಅಪಾಯದ ಸ್ಥಿತಿ ಇದೆ. ಅನೇಕ ಕಡೆ ರೆಟ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ತುರ್ತು ಕ್ರಮ ಕೈಗೊಳ್ಳಬೇಕು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

VISTARANEWS.COM


on

Koo

ಬೆಂಗಳೂರು: ನೆರೆಯ ಕೇರಳದಲ್ಲಿ ಸಂಭವಿಸಿರುವ ಭಾರೀ ಭೂ ಕುಸಿತದಿಂದ (Wayanad Landslide) ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ. ಅಪಾಯದ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಎಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲಾ ಕೇಂದ್ರಗಳಲ್ಲಿ ಮೊಕ್ಕಾಂ ಹೂಡಲು ನಿರ್ದೇಶಿಸಬೇಕು. ಜಿಲ್ಲಾಧಿಕಾರಿಗಳು ಸೇರಿ ಎಲ್ಲಾ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ 24/7 ಸನ್ನದ್ಧವಾಗಿರಬೇಕು. ಅಪಾಯದ ಸ್ಥಳಗಳಿಂದ ಜನರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಕೊಡಗು ಜಿಲ್ಲೆಯು ದುರಂತ ಸ್ಥಳ ವಯನಾಡಿನ ಪಕ್ಕದಲ್ಲೇ ಇದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತಿ ಅಪಾಯದ ಸ್ಥಿತಿ ಇದೆ. ಅನೇಕ ಕಡೆ ರೆಟ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ಇದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ ಕೆಲ ಜಿಲ್ಲೆಗಳಲ್ಲಿ ನಿರಂತರವಾಗಿ ಭೂ ಕುಸಿತ ಸಂಭವಿಸುತ್ತಿದೆ. ನೆರೆ ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಅಲ್ಲಿನ ಅಣೆಕಟ್ಟೆಗಳಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು, ರಾಜ್ಯಕ್ಕೆ ಅಪಾರ ನೆರೆ ನೀರು ಹರಿದು ಬರುತ್ತಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಅಪಾಯದ ಮಟ್ಟ ಮೀರಿ ನೂರಾರು ಗ್ರಾಮಗಳಿಗೆ ನುಗ್ಗಿದೆ, ಅಪಾರ ಬೆಳೆ ನಾಶವಾಗಿದೆ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಜನರ ಜತೆಯಲ್ಲಿರಬೇಕು ಎಂದು ಸಚಿವರು ಹೇಳಿದ್ದಾರೆ.

ಸರ್ಕಾರ, ಸಚಿವರು, ಶಾಸಕರು, ಅಧಿಕಾರಿಗಳಿಗೆ ನನ್ನ ಕಳಕಳಿಯ ಸಲಹೆ ಇಷ್ಟೇ. ಇಂಥ ದುರಿತ ಪರಿಸ್ಥಿತಿಯಲ್ಲಿ ಇಡೀ ಆಡಳಿತ ವ್ಯವಸ್ಥೆ ಜನರ ಹತ್ತಿರದಲ್ಲಿರಬೇಕು. ರೈತರೊಂದಿಗೆ ನೇರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿರಬೇಕು. ಪ್ರಕೃತಿ ವಿಕೋಪ ಯಾವುದೇ ಕ್ಷಣದಲ್ಲಿ ಬಂದೆರಗುವ ಅಪಾಯವನ್ನು ನಿರ್ಲಕ್ಷಿಸಬಾರದು ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ | Kodi Mutt Swamiji: ಕೆಟ್ಟದ್ದೇ ಜಾಸ್ತಿ, ಪ್ರಕೃತಿ ವಿಕೋಪಗಳು ಮುಂದುವರಿಯುತ್ತವೆ: ಭಯಾನಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕೂಡಲೇ ಎಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲಾ ಕೇಂದ್ರಗಳಲ್ಲಿ ಮೊಕ್ಕಾಂ ಹೂಡಲು ನಿರ್ದೇಶಿಸಬೇಕು. ಜಿಲ್ಲಾಧಿಕಾರಿಗಳು ಸೇರಿ ಎಲ್ಲಾ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ 24/7 ಸನ್ನದ್ಧವಾಗಿರಬೇಕು. ಅಪಾಯದ ಸ್ಥಳಗಳಿಂದ ಜನರನ್ನು ತಕ್ಷಣವೇ ಸುರಕ್ಷತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಸಚಿವರು ಕೋರಿದ್ದಾರೆ.

ಕೇರಳದ ಭೂಕುಸಿತ ದುರಂತಕ್ಕೆ ಶೋಕ ವ್ಯಕ್ತಪಡಿಸಿದ ಕೇಂದ್ರ ಸಚಿವ ಎಚ್‌ಡಿಕೆ

ಬೆಂಗಳೂರು: ಕೇರಳದ (Kerala Landslide) ವೈನಾಡಿನಲ್ಲಿ ಸಂಭವಿಸಿದ ಭಾರಿ ಭೂಕುಸಿತ (Wayanad Landslide) ಹಾಗೂ ಜೀವಹಾನಿಯ ಕುರಿತು ಟ್ವೀಟ್‌ ಮಾಡಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು, ದುರಂತ ಸಾವುಗಳಿಗಾಗಿ ಶೋಕ ವ್ಯಕ್ತಪಡಿಸಿದ್ದಾರೆ.

ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ (Wayanad Landslide) ಅನೇಕರು ದಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. ಗೌರವಾನ್ವಿತ ಪ್ರಧಾನಿ ಮೋದಿ ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಸಿಎಂ ಜತೆ ಮಾತನಾಡಿ ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಮಾನ್ಯ ಪ್ರಧಾನಿಗಳನ್ನು ನಾನು ಅಭಿನಂದಿಸುತ್ತೇನೆ. ಈ ದುರಂತದಲ್ಲಿ ಸಾವನ್ನಪ್ಪಿದವರಿಗೆ ಚಿರಶಾಂತಿ ಸಿಗಲಿ. ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಎಲ್ಲಾ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಕೇರಳ ಸೇರಿ ದೇಶದೆಲ್ಲೆಡೆ ಭಾರೀ ಮಳೆ ಆಗುತ್ತಿದ್ದು ಭೂಕುಸಿತ, ನೆರೆ ಉಂಟಾಗಿದೆ. ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು. ರಾಜ್ಯ ಸರಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಕೇಂದ್ರ ಸಚಿವರು ಟ್ವೀಟ್‌ ಮಾಡಿದ್ದಾರೆ.

Continue Reading

ಮಳೆ

Karnataka Rain : ಗಾಳಿ-ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಜಾನುವಾರುಗಳು ಸಾವು; ಮತ್ತೆ ಮುಳುಗಡೆಯಾದ ತ್ರಿವೇಣಿ ಸಂಗಮ

Karnataka Rain : ಭಾರಿ ಮಳೆಗೆ ನಾನಾ ಅವಾಂತರವೇ ಸೃಷ್ಟಿಯಾಗಿದೆ. ಕೊಡಗಿನಲ್ಲಿ ತುಂಡಾಗಿ ಬಿದ್ದ ವಿದ್ಯುತ್‌ ತಂತಿ ತುಳಿದು ಜಾನುವಾರು ಮೃತಪಟ್ಟರೆ, ಹಾಸನದಲ್ಲಿ ಗರ್ಭಗುಡಿಯ ಎದುರು ನಾಗರಹಾವು ಪ್ರತ್ಯಕ್ಷಗೊಂಡಿತ್ತು. ಮತ್ತೆ ತ್ರಿವೇಣಿ ಸಂಗಮ ಮುಳುಗಡೆಯಾಗಿದ್ದು, ಭದ್ರಾ ನದಿ ಅಬ್ಬರಕ್ಕೆ 8 ಗ್ರಾಮಗಳಿಗೆ ಜಲ ದಿಗ್ಬಂಧನ ಹಾಕಲಾಗಿದೆ.

VISTARANEWS.COM


on

By

karnataka Rain
Koo

ಕೊಡಗು: ಕೊಡಗು‌ ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಭಾರಿ ಮಳೆಗೆ (Karnataka Rain) ವಿದ್ಯುತ್ ತಂತಿ ತುಂಡಾಗಿ ಬಿದ್ದು 6 ಜಾನುವಾರು ಮೃತಪಟ್ಟಿವೆ. ಗ್ರಾಮದ ರೈತ ಬೊಜ್ಜoಗಡ ನಟರಾಜ್ ಅವರಿಗೆ ಸೇರಿದ ಜಾನುವಾರು ಮೃತಪಟ್ಟಿವೆ. ಭಾರಿ ಮಳೆಗೆ 11 ಕೆವಿ ವಿದ್ಯುತ್ ತಂತಿ ರಸ್ತೆಗೆ ತುಂಡಾಗಿ ಬಿದ್ದಿತ್ತು. ಗದ್ದೆಯಿಂದ ಕೊಟ್ಟಿಗೆಗೆ ಸಾಲಾಗಿ ಬರುತ್ತಿದ್ದಾಗ ಕರೆಂಟ್‌ ಶಾಕ್‌ ಹೊಡೆದು, ಒಂದರ ಹಿಂದೆ ಒಂದು ಜಾನುವಾರುಗಳು ದುರ್ಮರಣ ಹೊಂದಿವೆ.

Karnataka Rain
Karnataka Rain

ಹೇಮಾವತಿ ಜಲಾಶಯಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ಹಾಸನ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಆರ್ಭಟಕ್ಕೆ ಹೇಮಾವತಿ ಜಲಾಶಯದಲ್ಲಿ ಒಳಹರಿವು ಏರಿಕೆಯಾಗುತ್ತಲೇ ಇದೆ. ಹೇಮಾವತಿ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೇಮಾವತಿ ಜಲಾಶಯದಿಂದ ಹೊರಬಿಡುತ್ತಿರುವ ನೀರು ಧುಮ್ಮಿಕ್ಕುವುದನ್ನು ಕಣ್ತುಂಬಿಕೊಳ್ಳಲು ನೂರಾರು ಮಂದಿ ಬರುತ್ತಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹಾಸನದ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ.

ಹಾಸನದಲ್ಲಿ ಗರ್ಭಗುಡಿಯ ಎದುರು ಹೆಡೆ ಎತ್ತಿ ಕುಳಿತ ನಾಗರಹಾವು

ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿರುವ ಹೊಳೆಮಲ್ಲೇಶ್ವರ ದೇವಾಲಯದಲ್ಲಿ ಬೆಳ್ಳಂಬೆಳಿಗ್ಗೆ ನಾಗರಹಾವು ಪ್ರತ್ಯಕ್ಷಗೊಂಡಿದೆ. ಹೇಮಾವತಿ ನದಿ ದಡದಲ್ಲೆ ಇರುವ ಹೊಳೆಮಲ್ಲೇಶ್ವರ ದೇವಾಲಯವು ನದಿ ನೀರಿನಿಂದ ಜಲಾವೃತವಾಗಿದೆ. ಮಂಗಳವಾರ ದೇವಾಲಯದೊಳಗೆ ನಾಗರಹಾವು ಕಾಣಿಸಿಕೊಂಡಿದೆ. ಗರ್ಭಗುಡಿಯ ಎದುರು ಹೆಡೆ ಎತ್ತಿ ಕುಳಿತ ನಾಗರಹಾವು ಕಂಡು ಜನರು ಆತಂಕಗೊಂಡಿದ್ದರು. ಹೇಮಾವತಿ ನದಿ ನೀರು ನುಗ್ಗಿರುವುದರಿಂದ ಗರ್ಭಗುಡಿ ಬಾಗಿಲು ಮುಚ್ಚಿತ್ತು.

ಮತ್ತೆ ತ್ರಿವೇಣಿ ಸಂಗಮ ಮುಳುಗಡೆ

ಬಿಟ್ಟು ಬಿಟ್ಟು ಮಳೆ ಸುರಿಯುತ್ತಿರುವುದರಿಂದ ಆತಂಕ ಹೆಚ್ಚಾಗಿದೆ. ಅಲ್ಲಲ್ಲಿ ಗುಡ್ಡದ ಸಣ್ಣ ಪ್ರಮಾಣದ ಮಣ್ಣು ಕುಸಿಯುತ್ತಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ ನದಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ಇದೆ. ಇತ್ತ ಕೊಡಗಿನ ಭಾಗಮಂಡಲದ ತ್ರಿವೇಣಿ ಸಂಗಮ ಕ್ಷೇತ್ರ ಮತ್ತೆ ಭರ್ತಿಯಾಗಿದೆ. ಮತ್ತೊಮ್ಮೆ ಭಗಂಡೇಶ್ವರ ದೇಗುಲದ ಮೆಟ್ಟಿಲವರೆಗೂ ನೀರು ಬಂದಿದೆ. ಗಾಳಿ ಮಳೆಗೆ ವಿದ್ಯುತ್ ಕಂಬಗಳು ಧರಾಶಾಹಿಯಾಗುತ್ತಿದೆ. ವಿದ್ಯುತ್ ಸಂಪರ್ಕ‌ ಕಲ್ಪಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಭದ್ರಾ ನದಿ ಅಬ್ಬರಕ್ಕೆ 8 ಗ್ರಾಮಗಳಿಗೆ ಜಲ ದಿಗ್ಬಂಧನ

ಚಿಕ್ಕಮಗಳೂರಿನಲ್ಲಿ ಭದ್ರಾ ನದಿ ಅಬ್ಬರಕ್ಕೆ 8 ಗ್ರಾಮಗಳಿಗೆ ಜಲ ದಿಗ್ಬಂಧನ ಹಾಕಲಾಗಿದೆ. ಭದ್ರಾ ನದಿಯ ಪ್ರವಾಹಕ್ಕೆ ರಸ್ತೆ ಮುಳುಗಿದ್ದು, ಹುಯಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 8 ಗ್ರಾಮಗಳು ಸಂಪರ್ಕ ಕಡಿತಗೊಂಡಿದೆ. ರಸ್ತೆಯ ಮೇಲೆ 8-10 ಅಡಿ ನೀರು ನಿಂತಿದೆ. ಇತ್ತ ಕಳಸ-ಹೊರನಾಡು-ಕೊಟ್ಟಿಗೆಹಾರ ಮಾರ್ಗವು ಸಂಪೂರ್ಣ ಬಂದ್ ಆಗಿದೆ. ಭದ್ರೆಯ ಅಬ್ಬರಕ್ಕೆ 20 ಮನೆಯ ಕುಗ್ರಾಮಕ್ಕೆ ಜಲದಿಗ್ಬಂಧನ ಹಾಕಲಾಗಿದೆ. ಹಳ್ಳಿಯಿಂದ ಹೊರಬರಲು ಯಾವುದೇ ಮಾರ್ಗ ಇಲ್ಲದೆ ಪರದಾಟ ಅನುಭವಿಸುತ್ತಿದ್ದಾರೆ.

ಇದನ್ನೂ ಓದಿ: UGCET 2024 : ಯುಜಿಸಿಇಟಿ ಆಪ್ಶನ್ ದಾಖಲಿಸಲು ಮತ್ತಷ್ಟು ದಿನ ಅವಕಾಶ

ಬೆಳಗಾವಿಯಲ್ಲಿ ದನ ಮೇಯಿಸುವಾಗ ಕರಡಿ ದಾಳಿ

ಮನೆಗೆ ಮರಳುತ್ತಿದ್ದ ವ್ಯಕ್ತಿಯ ಮೇಲೆ ಕರಡಿಯೊಂದು ದಾಳಿ ಮಾಡಿದೆ. ದನ ಮೇಯಿಸುವ ವ್ಯಕ್ತಿಯ ಮೇಲೆ ಏಕಾಏಕಿ ದಾಳಿ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ‌ಖಾನಾಪುರ ತಾಲೂಕಿನ ದೇವರಾಯಿ ಗ್ರಾಮದ ಬಳಿ ನಡೆದಿದೆ. ನಾರಾಯಣ ಚೌರಿ (65) ಕರಡಿ ದಾಳಿಗೆ ಒಳಗಾದವರು. ಕರಡಿ ದಾಳಿ ಮಾಡುತ್ತಿದ್ದಂತೆ ನಾರಾಯಣ ಚೌರಿ ಚಿರಾಡಿದ್ದಾರೆ. ಚಿರಾಟ ಕೇಳಿ ಓಡಿ ಬಂದಿದ್ದ ಅಕ್ಕ ಪಕ್ಕದ ಜನ ಓಡಿಸಿದ್ದಾರೆ. ನಾರಾಯಚ ಚೌರಿ ಬೆನ್ನು ಮೈಮೇಲೆ ಪರಚಿ ದಾಳಿ ಮಾಡಿದೆ. ಗಾಯಗೊಂಡ ನಾರಾಯಣ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಜಯಪುರದಲ್ಲಿ ಜಾನುವಾರು ಕೊಂದ ಕಾಡು ಪ್ರಾಣಿ

ವಿಜಯಪುರದ ಕಂದಗನೂರ ಗ್ರಾಮದ ರೈತರು ಕಾಡು ಪ್ರಾಣಿಯ ಕಾಟಕ್ಕೆ ಆತಂಕಕ್ಕೆ ಒಳಗಾಗಿದ್ದಾರೆ. ಸಿದ್ರಾಮಪ್ಪ ಬೂಲಿ ಎಂಬ ರೈತನ ತೋಟದಲ್ಲಿದ್ದ ಆಕಳು ಕರು ಹಾಗೂ ಎಮ್ಮೆ ಕರುವನ್ನು ಕಾಡು ಪ್ರಾಣಿ ಕೊಂದು ಹಾಕಿದೆ. ಚಿರತೆ ಕೊಂದಿರಬಹುದೆಮದು ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕಂದಗನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕಾಡು ಪ್ರಾಣಿ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು. ಬೋನ್ ಹಾಕಿದ್ದಾರೆ. ಇನ್ನೂ ಜಾನುವಾರಗಳ ಮೇಲೆ ಚಿರತೆ ಅಲ್ಲ ಕತ್ತೆಕಿರುಬ ಇರಬಹುದು ಎಂದು ಸಂಶಯ ವ್ಯಕ್ತ ಪಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Shiradi Landslide: ಕೇರಳದ ಬೆನ್ನಿಗೇ ಶಿರಾಡಿ ಘಾಟಿಯಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ ಸಿಲುಕಿದ ಕಾರುಗಳು, ಟ್ಯಾಂಕರ್‌

Shiradi Landslide: ಬೆಂಗಳೂರು- ಮಂಗಳೂರು ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಮತ್ತೆ ಬೃಹತ್‌ ಭೂಕುಸಿತವಾಗಿದೆ. ಕನಿಷ್ಠ ಎರಡು ಕಾರುಗಳು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಇದರಡಿ ಸಿಲುಕಿಕೊಂಡಿವೆ.

VISTARANEWS.COM


on

Shiradi Landslide
Koo

ಹಾಸನ: ಕೇರಳದ ವಯನಾಡಿನಲ್ಲಿ (Wayanad Landslide) ಬೃಹತ್ ಭೂಕುಸಿತ ಸಂಭವಿಸಿ 70ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ ಘಟನೆಯ ಬೆನ್ನಿನಲ್ಲಿಯೇ, ಹಾಸನದ ಶಿರಾಡಿ ಘಾಟಿಯಲ್ಲಿಯೂ ರಸ್ತೆಯ ಮೇಲೆ ಭಾರೀ ಭೂಕುಸಿತ (Shiradi Landslide) ಸಂಭವಿಸಿದೆ. ಮಣ್ಣಿನಡಿ ಹಲವು ವಾಹನಗಳು ಸಿಲುಕಿಕೊಂಡಿದ್ದು, ಇನ್ನಷ್ಟು ಕುಸಿತದ ಆತಂಕ ಎದುರಾಗಿದೆ. ಘಾಟಿಯಲ್ಲಿ ವಾಹನ ಸಂಚಾರ ಪೂರ್ತಿ ರದ್ದುಗೊಳಿಸಲಾಗಿದೆ.

ಬೆಂಗಳೂರು- ಮಂಗಳೂರು ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಮತ್ತೆ ಬೃಹತ್‌ ಭೂಕುಸಿತವಾಗಿದೆ. ಕನಿಷ್ಠ ಎರಡು ಕಾರುಗಳು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಇದರಡಿ ಸಿಲುಕಿಕೊಂಡಿವೆ. ತಕ್ಷಣ ಸ್ಥಳದಲ್ಲಿದ್ದವರು ವಾಹನಗಳಲ್ಲಿ ಇದ್ದವರನ್ನು ಹೊರಗೆ ಎಳೆತಂದಿದ್ದಾರೆ. ಮಣ್ಣಿನಡಿ ಇನ್ನೂ ವ್ಯಕ್ತಿಗಳು ಸಿಲುಕಿಕೊಂಡಿದ್ದಾರೆಯೇ ಎಂಬುದು ಗೊತ್ತಾಗಿಲ್ಲ.

ಸತತ ಮಳೆಯಿಂದ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲೆ ಬಳಿ ಕಳೆದ ವಾರವೂ ಭೂಕುಸಿತವಾಗಿತ್ತು. ಕಳೆದ ಹದಿನೈದು ದಿನಗಳಿಂದ ಇಲ್ಲಿ ಮಣ್ಣಿನ ರಾಶಿ ಕುಸಿಯುತ್ತಿದೆ. ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ರಸ್ತೆಗೆ ಕುಸಿದಿದೆ. ಹಲವು ಪ್ರಯಾಣಿಕರು ಕಾರಿನಲ್ಲೇ ಸಿಲುಕಿದ್ದಾರೆ. ಕಾರ್ಯಾಚರಣಾ ಸಿಬ್ಬಂದಿ ಜೆಸಿಬಿ ಮೂಲಕ‌ ಮಣ್ಣು ತೆರವು ಮಾಡುತ್ತಿದ್ದು, ಸ್ಥಳದಲ್ಲಿ ಆತಂಕ ಹೆಚ್ಚಿದೆ. ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ನಡೆಯುವ ಭೀತಿಯಿದೆ. ಸಾಗರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನ ನಡೆಯುತ್ತಿದೆ.

ಕಳೆದ ತಿಂಗಳು ಉತ್ತರ ಕನ್ನಡದ ಅಂಕೋಲಾ ಶಿರೂರಿನಲ್ಲಿ ಗುಡ್ಡ ಕುಸಿದು ಹಲವಾರು ವಾಲಹನಗಳು ಹಾಗೂ ಜನರು ಜಲಸಮಾಧಿಯಾಗಿದ್ದರು. 11 ಜನ ಸತ್ತಿದ್ದು, ಇವರಲ್ಲಿ 8 ಜನರ ದೇಹಗಳು ದೊರೆತಿವೆ. ಇನ್ನೂ ಮೂವರು ದೇಹಗಳು ದೊರೆತಿಲ್ಲ. ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ದೇವರನಾಡು ಕೇರಳ (Kerala) ದಲ್ಲಿ ಭಾರೀ ಮಳೆಗೆ ಭೂಕುಸಿತಕ್ಕೆ (Kerala Landslide) ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 70ಕ್ಕೆ ಏರಿಕೆ ಆಗಿದ್ದು, ನೂರಾರು ಮಂದಿ ಅವಶೇಷದಡಿಯಲ್ಲಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಮೆಪ್ಪಡಿ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಭೀತಿ ಎದುರಾಗಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಫೈರ್‌ಫೋರ್ಸ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಪೀಡಿತ ಪ್ರದೇಶಕ್ಕೆ ಸಜ್ಜುಗೊಳಿಸಿದ್ದು, ನೂರಾರು ಮಂದಿ ಸಿಲುಕಿರುವ ಶಂಕೆ ಇದೆ. ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳೊಂದಿಗೆ ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ಕೂಡ ಸಹಾಯಕ್ಕೆ ತೆರಳುತ್ತಿದೆ.

ಕರ್ನಾಟಕದ ಕೊಡಗು ಭಾಗ, ಹಾಸನ, ಚಿಕ್ಕಮಗಳೂರು ಭಾಘದ ಹಲವು ಕಡೆಗಳಲ್ಲಿ ಭೂಕುಸಿತದ ವರದಿಯಾಗುತ್ತಿದೆ. 2018ರಲ್ಲಿ ಕೊಡಗಿನಲ್ಲಿ ಭಾರೀ ಭೂಕುಸಿತ ಸಂಭವಿಸಿ ನೂರಾರು ಜನರು ಸತ್ತಿದ್ದರು. ಕೋಟ್ಯಂತರ ಆಸ್ತಿಪಾಸ್ತಿ ನಷ್ಟವಾಗಿತ್ತು. ಸಾವಿರಾರು ಜನ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದರು. ಅದೇ ವರ್ಷ ಕೇರಳದಲ್ಲಿಯೂ ಜಲಪ್ರಳಯ ನಡೆದಿತ್ತು.

ಇದನ್ನೂ ಓದಿ: Wayanad Landslide: ಎಲ್ಲೆಂದರಲ್ಲಿ ಮಣ್ಣಿನ ರಾಶಿ: ಕೊಚ್ಚಿ ಹೋದ ಸೇತುವೆ, ರಸ್ತೆ: ವಯನಾಡಿನಲ್ಲಿ ಮೃತರ ಸಂಖ್ಯೆ 70ಕ್ಕೆ ಏರಿಕೆ

Continue Reading
Advertisement
Kenchanala Marikamba Jatra
ಶಿವಮೊಗ್ಗ25 seconds ago

Shivamogga News: ವಿಜೃಂಭಣೆಯಿಂದ ನಡೆದ ಕೆಂಚನಾಲ ಮಾರಿಕಾಂಬಾ ಜಾತ್ರೆ

Aryan Khan
ಸಿನಿಮಾ5 mins ago

Aryan Khan: ದಿಲ್ಲಿಯ ಸಣ್ಣ ಮನೆಯಲ್ಲಿದ್ದ ಶಾರುಖ್‌ ದಂಪತಿ; ಅಲ್ಲಿನ ಬಂಗಲೆಯನ್ನು 37 ಕೋಟಿ ರೂ.ಗೆ ಖರೀದಿಸಿದ ಪುತ್ರ!

IND vs SL
ಪ್ರಮುಖ ಸುದ್ದಿ9 mins ago

IND vs SL : ಭಾರತ ವಿರುದ್ಧದ ಏಕ ದಿನ ಸರಣಿಗೆ ಶ್ರೀಲಂಕಾ ತಂಡ ಪ್ರಕಟ; ಹೊಸ ನಾಯಕನ ಘೋಷಣೆ

ಪ್ರಮುಖ ಸುದ್ದಿ13 mins ago

Wayanad Landslide: ಕೇರಳದಲ್ಲಿ ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ

Star Saree Styling Tips
ಫ್ಯಾಷನ್13 mins ago

Star Saree Styling Tips: ಎಂಬ್ರಾಯ್ಡರಿ ಸೀರೆಯಲ್ಲಿ ನಟಿ ರಶ್ಮಿಕಾ ಮಂದಣ್ಣರಂತೆ ಕಾಣಿಸಬೇಕೇ? ಈ 5 ಟಿಪ್ಸ್ ಫಾಲೋ ಮಾಡಿ

karnataka Weather Forecast
ಮಳೆ15 mins ago

Karnataka Weather : ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ; ಮಲೆನಾಡಿನ ಶಾಲಾ-ಕಾಲೇಜು ರಜೆ

Love Jihad
ದೇಶ27 mins ago

Love Jihad: ಲವ್‌ ಜಿಹಾದ್‌ ವಿರುದ್ಧ ಯೋಗಿ ದಿಟ್ಟ ಕ್ರಮ; ಇನ್ನು ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಗ್ಯಾರಂಟಿ!

Tata Motors launched two programs Vidyadhana and Utkarsha to facilitate higher education of technician children
ವಾಣಿಜ್ಯ28 mins ago

Tata Motors: ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಟಾಟಾ ಮೋಟಾರ್ಸ್‌ನಿಂದ ‘ವಿದ್ಯಾಧನ’, ‘ಉತ್ಕರ್ಷ’ ಯೋಜನೆ

ಕರ್ನಾಟಕ36 mins ago

Wayanad Landslide: ಕೇರಳ ಭೂ ಕುಸಿತ; ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

Custard Apple Benefits
Latest1 hour ago

Custard Apple Benefits: ಕ್ಯಾನ್ಸರ್‌ ಸೇರಿದಂತೆ ಹಲವು ರೋಗಗಳನ್ನು ತಡೆಯುವ ಶಕ್ತಿ ಸೀತಾಫಲಕ್ಕಿದೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ7 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌