Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ - Vistara News

ಮಳೆ

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

Karnataka Rain : ಭಾರಿ ಮಳೆಯಿಂದಾಗಿ (Heavy Rain) ಕಪಿಲಾ ನದಿ (Kapila River) ತೀರದಲ್ಲೀಗ ಪ್ರವಾಹ ಭೀತಿ ಎದುರಾಗಿದೆ. ಜತೆಗೆ ಹಾರಂಗಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದ್ದು, ನದಿ ಪಾತ್ರದ ಜನರಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ.

VISTARANEWS.COM


on

karnataka Rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು/ಕೊಡಗು: ಕಪಿಲಾ ನದಿ (Kapila River) ತೀರದಲ್ಲೀಗ ಪ್ರವಾಹದ ಭೀತಿ ಎದುರಾಗಿದೆ. ಕಬಿನಿ ಜಲಾನಯನ ಪ್ರದೇಶದಲ್ಲಿ ಭರ್ಜರಿ (Karnataka Rain) ಮಳೆಯಾಗುತ್ತಿದ್ದು, ವಾಡಿಕೆಗಿಂತ ಕಬಿನಿ ಜಲಾಶಯವು ಬಹುಬೇಗ ಭರ್ತಿಯಾಗಿದೆ. ಮೈಸೂರಿನ ಎಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದಿಂದ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದೆ.

ಕೇರಳದ ವೈನಾಡಿನಲ್ಲೂ ಉತ್ತಮ ಮಳೆಯಾದ ಪರಿಣಾಮ ಒಳಹರಿವಿನಲ್ಲಿ ಗಣನೀಯ ಏರಿಕೆಯಾಗಿದೆ. ಹೀಗಾಗಿ ಸುಮಾರು 20ಸಾವಿರಕ್ಕೂ ಕ್ಯುಸೆಕ್ ನೀರು ನದಿಗೆ ಬಿಡುಗಡೆ ಮಾಡಲಿದ್ದಾರೆ. ಹೀಗಾಗಿ ಧ್ವನಿ ವರ್ಧಕಗಳ ಮೂಲಕ ನದಿ ಪಾತ್ರದ ಜನರಿಗೆ ಎಚ್ಚರಿಕೆಯ ಸಂದೇಶವನ್ನು ರವಾನೆ ಮಾಡಲಾಗುತ್ತಿದೆ.

ಹುಲ್ಲಹಳ್ಳಿ ಗ್ರಾ.ಪಂ ಕಾರ್ಯಾಲಯ ವತಿಯಿಂದ ಪ್ರಚಾರ ಕಾರ್ಯ ನಡೆಯುತ್ತಿದೆ. ಗ್ರಾ.ಪಂ. ಸಿಬ್ಬಂದಿ ನದಿ ಪಾತ್ರದಲ್ಲಿರುವ ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ನದಿ ತೀರಕ್ಕೆ ಹೋಗದಂತೆ, ಜನ ಜಾನುವಾರುಗಳ ಸುರಕ್ಷಿತವಾಗಿಸಲು ಸೂಚನೆ ನೀಡಲಾಗಿದೆ. ಕಪಿಲಾ ನದಿ ಪ್ರವಾಹಕ್ಕೆ ಸಿಲುಕುವ ನಂಜನಗೂಡು ತಾಲೂಕಿನ ಹೆಜ್ಜಿಗೆ, ಬೊಕ್ಕಹಳ್ಳಿ, ಸುತ್ತೂರು, ಹೊಸಕೋಟೆ ಗ್ರಾಮಗಳಿಗೆ ಟಾಂಟಾಂ ಮೂಲಕವೂ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.

ಇದನ್ನೂ ಓದಿ: Rain News: ಭಾರಿ ಮಳೆಯಿಂದ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತ

ಕೊಡಗಿನಲ್ಲೂ ಉಕ್ಕಿ ಹರಿಯುತ್ತಿರುವ ಹಳ್ಳ-ಕೊಳ್ಳಗಳು

ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ತೀವ್ರಗೊಂಡಿದೆ. ಮಳೆಯಿಂದ ನದಿ,‌ ತೊರೆ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದೆ. ಹಾರಂಗಿ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ. ಒಳಹರಿವಿನ ಪ್ರಮಾಣ 9600 ಕ್ಯೂಸೆಕ್ಸ್‌ಗೆ ಏರಿಕೆ ಹಿನ್ನೆಲೆ ಜಲಾಶಯದಿಂದ ನದಿಗೆ ನೀರು ಹರಿಸಲು ಕಾವೇರಿ ನೀರಾವರಿ ನಿಗಮ ಮುಂದಾಗಿದೆ. ಹೀಗಾಗಿ ಹಾರಂಗಿ ಹಾಗೂ ಕಾವೇರಿ ಜಲಾನಯನ ಪ್ರದೇಶದ ಜನರಿಗೆ ಮುನ್ನೆಚ್ಚರಿಕೆ ಮುನ್ಸೂಚನೆ ನೀಡಲಾಗಿದೆ. ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸುವ ಹಿನ್ನೆಲೆಯಲ್ಲಿ ನದಿ ಪಾತ್ರಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ ಮಾಹಿತಿ ನೀಡಿದ್ದಾರೆ.

ಕಾರವಾರದಲ್ಲಿ ನೆರೆ ಪರಿಸ್ಥಿತಿ

ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮಳೆಯಿಂದಾಗಿ ಕಾರವಾರ ತಾಲೂಕಿ‌ನ ಚೆಂಡಿಯಾ ಗ್ರಾಮದ ವ್ಯಾಪ್ತಿಯಲ್ಲಿ ನೆರೆ ಪರಿಸ್ಥಿತಿ ಉಂಟಾಗಿದೆ. ಶನಿವಾರ ತಡರಾತ್ರಿಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ನೆರೆ ಪರಿಸ್ಥಿತಿ ಇದೆ. ಚೆಂಡಿಯಾ, ಪೋಸ್ಟ್ ಚೆಂಡಿಯಾ, ಇಳಸೂರು ಭಾಗದಲ್ಲಿ ಮನೆಗಳು, ರಸ್ತೆಗಳು ಜಲಾವೃತಗೊಂಡಿದೆ.

ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಗ್ರಾಮದ ಸಂಪರ್ಕ ರಸ್ತೆಯು ಮುಳುಗಡೆಯಾಗಿದೆ. ಕಳೆದ 4 ದಿನದ ಹಿಂದೆ ಇದೇ ರೀತಿ ಜಲಾವೃತವಾಗಿ ನಿವಾಸಿಗಳು ಸಮಸ್ಯೆ ಅನುಭವಿಸಿದ್ದರು, ಇದೀಗ ಕಾರವಾರ ತಾಲ್ಲೂಕಿನಾದ್ಯಂತ ಮಳೆ ಹೆಚ್ಚಾದ ಪರಿಣಾಮ ಮನೆಗಳಿಗೆ ನೀರು‌ ನುಗ್ಗುತ್ತಿದೆ.

ಚಿಕ್ಕಮಗಳೂರಲ್ಲಿ ಪ್ರವಾಸಿಗರ ಮೇಲೆ ಸ್ಥಳೀಯ ಬಾಡಿಗೆ ಜೀಪ್ ಚಾಲಕರ ದರ್ಪ

ಪೊಲೀಸರ ಖಡಕ್ ಎಚ್ಚರಿಕೆ ನಡುವೆಯೂ ಚಿಕ್ಕಮಗಳೂರಲ್ಲಿ ಪುಂಡರ ಪುಂಡಾಟ ನಿಂತಿಲ್ಲ. ಪ್ರವಾಸಿಗರ ಮೇಲೆ ಸ್ಥಳೀಯ ಬಾಡಿಗೆ ಜೀಪ್ ಚಾಲಕರು ದರ್ಪ ತೋರುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಕುಡಿದು ವಾಹನ ಚಲಾಯಿಸಿದ್ದಲ್ಲದೇ ಬೆಂಗಳೂರಿನಿಂದ ಬಂದ ಪ್ರವಾಸಿಗರ ಕಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಪ್ರವಾಸಿಗರ ಕಾರು ಜಖಂಗೊಂಡಿದೆ. ಈ ಬಗ್ಗೆ ಪ್ರಶ್ನಿಸಿದ್ದರೆ ಅಶ್ಲೀಲ, ಅವಾಚ್ಯ ಶಬ್ಧಗಳಿಂದ ಕೆಲ ಜೀಪು ಚಾಲಕರು ನಿಂದಿಸುತ್ತಿದ್ದಾರೆ. ನಾವು ಲೋಕಲ್ ಏನು ಮಾಡೋಕೆ ಆಗೋಲ್ಲ ಹೋಗು ಎಂದು ಆವಾಜ್ ಹಾಕ್ತಾರೆ ಎಂದು ಸ್ಥಳೀಯ ಜೀಪು ಚಾಲಕರ ವರ್ತನೆಗೆ ಪ್ರವಾಸಿಗರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಅಬ್ಬರಿಸುತ್ತಿರುವ ಮುಂಗಾರು; ಕರಾವಳಿ, ಮಲೆನಾಡಿನಲ್ಲಿ ಇಂದು ಸಹ ಜೋರು ಮಳೆ

Karnataka Weather Forecast : ಭಾರಿ ಮಳೆಯಾಗುವ (Heavy Rain alert) ಎಚ್ಚರಿಕೆಯನ್ನೂ ನೀಡಲಾಗಿದ್ದು, ಇಂದು ಕರಾವಳಿ, ಮಲೆನಾಡಿಗೆ ರೆಡ್‌ ಅಲರ್ಟ್‌ ಹಾಗೂ ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಮಂಗಳವಾರದಂದು ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗುವ (Heavy rain Alert) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇನ್ನೂ ಮಲೆನಾಡು ಸುತ್ತಮುತ್ತ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಒಳನಾಡಿನದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಮತ್ತು ಬೀದರ್ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿ ಗಾಳಿ ಜತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ಮುಂದುವರಿದ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Rain : ಚಿಕ್ಕಮಗಳೂರಲ್ಲಿ ಮಳೆಗೆ ಕರೆಂಟ್‌ ಕಟ್‌; ಕೊಡಗು, ದಾವಣಗೆರೆಯ‌ಲ್ಲೂ ಅವಾಂತರ

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯಾದ್ಯಂತ ಮಳೆಯು (Heavy rain alert) ಅಬ್ಬರಿಸುತ್ತಿದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಣೆ (Holiday For schools) ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ರೆಡ್‌ ಅಲರ್ಟ್‌ (Karnataka Weather Forecast) ಘೋಷಣೆ ಮಾಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜು.16ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ರಜೆ ಘೋಷಣೆ ಮಾಡಿದ್ದಾರೆ. ಇತ್ತ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು, ಸಕಲೇಶಪುರ, ಆಲೂರು, ಬೇಲೂರು, ಹಾಸನ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಅನುಮತಿ ಪಡೆದು, ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಾಂಡು ಆದೇಶ ಹೊರಡಿಸಿದ್ದಾರೆ. ಸರ್ಕಾರಿ,‌ ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಜುಲೈ 20 ರಂದು ಸರಿದೂಗಿಸುಂತೆ ಆದೇಶಿಸಿದ್ದಾರೆ.

ಕೊಡಗಿನಲ್ಲಿ ಮುಂದುವರೆದ ಭಾರಿ ಗಾಳಿ ಮಳೆ ಹಿನ್ನೆಲೆಯಲ್ಲಿ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿ ರಜೆ ಘೋಷಣೆ ಮಾಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಮಂಗಳವಾರ ಒಂದು ದಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara kannada News: ಪ್ರವಾಹ ಪೀಡಿತ ಪ್ರದೇಶಕ್ಕೆ ಮಾಜಿ ಶಾಸಕಿ ರೂಪಾಲಿ ನಾಯ್ಕ ಭೇಟಿ

Uttara kannada News: ಮಾಜಿ ಶಾಸಕಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ, ಕಾರವಾರ ತಾಲೂಕಿನ ಚೆಂಡಿಯಾ‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಗಾ, ಐಸ್‌‌ಫ್ಯಾಕ್ಟರಿ ಚೆಂಡಿಯಾ, ಪೋಸ್ಟ್‌ ಚೆಂಡಿಯಾ, ಇಡೂರು ಸೇರಿದಂತೆ‌ ವಿವಿಧ ಭಾಗದ ಜಲಾವೃತವಾಗಿ ತೊಂದರೆಗೊಳಗಾದ ಜನತೆಯ ಅಹವಾಲನ್ನು ಆಲಿಸಿದರು. ಜನತೆಯೊಂದಿಗೆ ತಾವಿರುವುದಾಗಿ ಭರವಸೆ ನೀಡಿದರು.

VISTARANEWS.COM


on

Former MLA Rupali Naika visited the flood affected area of Karwar taluk
Koo

ಕಾರವಾರ: ಕಾರವಾರ ತಾಲೂಕಿನ ಜಲಾವೃತ ಪ್ರದೇಶಗಳಿಗೆ ಮಾಜಿ ಶಾಸಕಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ಎಸ್.ನಾಯ್ಕ, ಭೇಟಿ ನೀಡಿ, ಜನತೆಯ ಅಹವಾಲನ್ನು (Uttara kannada News) ಆಲಿಸಿದರು.

ಕಾರವಾರ ತಾಲೂಕಿನ ಚೆಂಡಿಯಾ‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಗಾ, ಐಸ್‌‌ಫ್ಯಾಕ್ಟರಿ ಚೆಂಡಿಯಾ, ಪೋಸ್ಟ್‌ ಚೆಂಡಿಯಾ, ಇಡೂರು ಸೇರಿದಂತೆ‌ ವಿವಿಧ ಭಾಗದ ಜಲಾವೃತವಾಗಿ ತೊಂದರೆಗೊಳಗಾದ ಜನತೆಯ ಅಹವಾಲನ್ನು ಆಲಿಸಿದರು. ಜನತೆಯೊಂದಿಗೆ ತಾವಿರುವುದಾಗಿ ಭರವಸೆ ನೀಡಿದರು.

ಚತುಷ್ಪಥ ಹೆದ್ದಾರಿ ಅಗಲೀಕರಣ ಕಾಮಗಾರಿ ನಿರ್ವಹಿಸುತ್ತಿರುವ ಐಆರ್‌ಬಿ ಕಂಪನಿಯು ಅವೈಜ್ಞಾನಿಕ ಕಾಮಗಾರಿ ಹಾಗೂ ನೌಕಾನೆಲೆ ಕಾಮಗಾರಿಗಳಿಂದ ಸಮುದ್ರಕ್ಕೆ ಸೇರುವ ನೀರಿಗೆ ತಡೆಯಾಗುತ್ತಿರುವುದರಿಂದ ಇಂತಹ ಸಮಸ್ಯೆಗಳು ಮರುಕಳಿಸುತ್ತಿದೆ ಎಂದು ತಿಳಿಸಿದ ರೂಪಾಲಿ ಎಸ್. ನಾಯ್ಕ, ನೌಕಾನೆಲೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು. ಈ ಹಿಂದೆ ತಾವು ಶಾಸಕರಾಗಿರುವಾಗಲೂ ನೀರು ಹರಿದುಹೋಗಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೆ. ಆದರೆ ಅಗತ್ಯ ಕ್ರಮ ಕೈಗೊಳ್ಳದೇ ಇರುವುದರಿಂದ ಎಲ್ಲೆಡೆ ನೀರು ತುಂಬುತ್ತಿದೆ. ಜನತೆ ಮೇಲಿಂದ ಮೇಲೆ ತೊಂದರೆ ಅನುಭವಿಸುವಂತಾಗಿದೆ ಎಂದರು.

ಇದನ್ನೂ ಓದಿ: KSRTC Package Tour: ಜೋಗ ಜಲಪಾತ ವೀಕ್ಷಣೆಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌!

ಇಲ್ಲಿನ ಜನತೆ ನೌಕಾನೆಲೆಗಾಗಿ, ರಾಷ್ಟ್ರಕ್ಕಾಗಿ ಮನೆ, ಆಸ್ತಿ ಪಾಸ್ತಿ ಎಲ್ಲವನ್ನೂ ತ್ಯಾಗ ಮಾಡಿದ್ದಾರೆ. ಹೀಗಿದ್ದರೂ ಅವರಿಗೆ ನೌಕಾನೆಲೆ ಸಹಕರಿಸದೇ ಇದ್ದರೆ ಹೇಗೆ. ನೀರು ತುಂಬದಂತೆ ನೋಡಿಕೊಳ್ಳಬೇಕಾದ ಹೊಣೆಗಾರಿಕೆ ನಿಮ್ಮ ಮೇಲಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. ನೀರು ಸರಾಗವಾಗಿ ಹರಿದುಹೋಗಲು ಇರುವ ಅಡ್ಡಿಯನ್ನು ನಿವಾರಿಸಿ ಶಾಶ್ವತ ಕ್ರಮ ಕೈಗೊಳ್ಳುವಂತೆ ನೌಕಾನೆಲೆ ಅಧಿಕಾರಿಗಳಿಗೆ ತಾಕೀತು ಪಡಿಸಿದರು. ನಂತರ ನೀರು ಹರಿದು ಹೋಗಲು ತಡೆಯಾಗುತ್ತಿದ್ದ ಜಾಗಗಳನ್ನು ನೌಕಾನೆಲೆ ಅಧಿಕಾರಿಗಳಿಗೆ ತಿಳಿಸಲಾಯಿತು. ನೀರಿನ ಹರಿವಿಗೆ ಆಗಿರುವ ಅಡ್ಡಿಯನ್ನು ತೆರವುಗೊಳಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನ ಸ್ಪರ್ಧಾ ಪಟ್ಟಿಯಲ್ಲಿರುವ ಕ್ರೀಡೆಗಳು ಯಾವುವು? ಇವುಗಳಲ್ಲಿ ಅತ್ಯಂತ ಪ್ರಾಚೀನ ಕ್ರೀಡೆಗಳು ಯಾವುದೆಲ್ಲ?

ಸುರಿಯುತ್ತಿರುವ ಮಳೆಯ ನಡುವೆಯೇ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಜಲಾವೃತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಅಲ್ಲದೇ ಶೀಘ್ರದಲ್ಲಿ ಸಮಸ್ಯೆಯನ್ನು ಬಗೆಹರಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರೊಂದಿಗೆ ಚರ್ಚಿಸಿ, ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ.

Continue Reading

ಮಳೆ

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Karnataka Weather Forecast : ಶಿವಮೊಗ್ಗ ಹಾಗೂ ಹಾಸನ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ (Heavy rain alert) ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಶಿವಮೊಗ್ಗ/ಕಾರವಾರ: ರಾಜ್ಯಾದ್ಯಂತ ಮಳೆಯು (Heavy rain alert) ಅಬ್ಬರಿಸುತ್ತಿದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ (Holiday For schools) ಮಾಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಿಗೆ ರೆಡ್‌ ಅಲರ್ಟ್‌ (Karnataka Weather Forecast) ಘೋಷಣೆ ಮಾಡಲಾಗಿದೆ. ಹೀಗಾಗಿ ಜು.16ಕ್ಕೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ರಜೆ ಘೋಷಣೆ ಮಾಡಿದ್ದಾರೆ. ಇತ್ತ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲೂ ನಿರಂತರ ಮಳೆಯಾಗುತ್ತಿದ್ದು, ಸಕಲೇಶಪುರ, ಆಲೂರು, ಬೇಲೂರು, ಹಾಸನ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಅನುಮತಿ ಪಡೆದು, ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಾಂಡು ಆದೇಶ ಹೊರಡಿಸಿದ್ದಾರೆ. ಸರ್ಕಾರಿ,‌ ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದು, ಜುಲೈ 20 ರಂದು ಸರಿದೂಗಿಸುಂತೆ ಆದೇಶಿಸಿದ್ದಾರೆ.

ಎಮರ್ಜೆನ್ಸಿ ಆಪರೇಷನ್ ಸೆಂಟರ್ ತೆರೆದ ಜಿಲ್ಲಾಡಳಿತ

ಉತ್ತರಕನ್ನಡ ಜಿಲ್ಲೆಗೆ ಮುಂದಿನ‌ 3 ದಿನ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ತುರ್ತು ಪರಿಸ್ಥಿತಿ ನಿರ್ವಹಣೆಗೆ ಡಿಸ್ಟ್ರಿಕ್ಟ್ ಎಮರ್ಜೆನ್ಸಿ ಆಪರೇಷನ್ ಸೆಂಟರ್ ತೆರೆದಿದೆ. ಈ ಕುರಿತು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ ಮಾಹಿತಿ ನೀಡಿದ್ದಾರೆ. ಡಿಸಿ ಕಚೇರಿಯನ್ನೇ ಕಂಟ್ರೋಲ್ ರೂಮ್‌ ಆಗಿ ಎಮರ್ಜೆನ್ಸಿ ಆಪರೇಷನ್ ಸೆಂಟರ್ ಆಗಿ ಮಾರ್ಪಾಡು ಮಾಡಲಾಗಿದೆ.

ವಿಪತ್ತು ನಿರ್ವಹಣೆ, ಪೊಲೀಸ್, ಅರಣ್ಯ, ಅಗ್ನಿಶಾಮಕ, ಹೆಸ್ಕಾಂ ಇಲಾಖೆಯಿಂದ ಒಬ್ಬೊಬ್ಬ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಎಲ್ಲಾ ಇಲಾಖೆಯೊಂದಿಗೆ ಸಂಪರ್ಕ ಸಾಧಿಸಲು ಎಮರ್ಜೆನ್ಸಿ ಆಪರೇಷನ್ ಸೆಂಟರ್ ಮಾಡಲಾಗಿದೆ. ಎಲ್ಲೇ ಸಹಾಯ ಅಗತ್ಯವಿದ್ದರೂ ತುರ್ತು ಸ್ಪಂದನೆಗೆ ಕ್ರಮವಹಿಸಲಾಗುತ್ತದೆ. ಎಲ್ಲಾ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೂ ಕೇಂದ್ರಸ್ಥಾನ ಬಿಡದಂತೆ ಸೂಚನೆ ನೀಡಲಾಗಿದೆ. ನೆರೆ ಪರಿಸ್ಥಿತಿಯ ಸ್ಥಳಗಳಲ್ಲಿ ಕಾಳಜಿ ಕೇಂದ್ರ ಸ್ಥಾಪನೆಗೆ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದ್ದು ಜತೆಗೆ ಮನೆ, ಬೆಳೆ ಹಾನಿ ಕುರಿತಾಗಿಯೂ ಶೀಘ್ರದಲ್ಲಿ ಪರಿಶೀಲಿಸಿ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

ಇನ್ನೂ ನೌಕಾನೆಲೆ ಕಾಂಪೌಂಡ್‌ನಿಂದ ಕಾರವಾರದ ಚೆಂಡಿಯಾ ಭಾಗದಲ್ಲಿ ನೆರೆ ಪರಿಸ್ಥಿತಿ ನಿರ್ಮಾಣ ವಿಚಾರವಾಗಿಯೂ ಭೇಟಿ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಪರಿಶೀಲಿಸಿದರು. ನೌಕಾನೆಲೆಯ ಎರಡು ಕಡೆ ಕಾಮಗಾರಿ ಪ್ರದೇಶದಲ್ಲಿ ನೀರು ಹರಿದುಹೋಗಲು ಅಡ್ಡಿಯಾಗಿದೆ. ನೀರು ಹರಿದುಹೋಗಲು ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು.

ಇದನ್ನೂ ಓದಿ: Karnataka Rain : ಚಿಕ್ಕಮಗಳೂರಲ್ಲಿ ಮಳೆಗೆ ಕರೆಂಟ್‌ ಕಟ್‌; ಕೊಡಗು, ದಾವಣಗೆರೆಯ‌ಲ್ಲೂ ಅವಾಂತರ

ಗಾಳಿ ಮಳೆಗೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಗಾಳಿ-ಮಳೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪಾರಾಗಿದ್ದಾರೆ. ಕೊಪ್ಪ ತಾಲೂಕಿನ ಹೆಗ್ಗಾರು ಕುಡಿಗೆ ಸಮೀಪ ಘಟನೆ ನಡೆದಿದೆ. ಶೃಂಗೇರಿ ಹಾಗೂ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಇದಾಗಿದ್ದು, ಎರಡು ಗಂಟೆಗೂ ಹೆಚ್ಚು ಸಮಯ ಮರ ತೆರವುಗೊಳಿಸಲು ಹರಸಾಹಸ ಪಡೆಬೇಕಾಯಿತು.
ಶೃಂಗೇರಿಯಿಂದ ಹೊರನಾಡಿಗೆ ಹೋಗುವ ಪ್ರವಾಸಿಗರು, ಸ್ಥಳೀಯರು ಪರದಾಟ ಅನುಭವಿಸಿದರು. ಅರಣ್ಯ ಸಿಬ್ಬಂದಿ, ಸ್ಥಳೀಯ ಮೆಸ್ಕಾಂ ಸಿಬ್ಬಂದಿಯಿಂದ ತೆರವು ಕಾರ್ಯಾಚರಣೆ ನಡೆಸಲಾಯಿತು. ಇತ್ತ ಭಾರಿ ಗಾಳಿ ಮಳೆಗೆ ಮಲೆನಾಡಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಡಿತ್ತು.

ಪ್ರವಾಸಿಗರ ಹುಚ್ಚಾಟಕ್ಕೆ ಸ್ಥಳೀಯರು ಬೇಸರ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಹೊಸಳ್ಳಿ ಬೆಟ್ಟದಲ್ಲಿ ಪ್ರವಾಸಿಗರು ಹುಚ್ಚಾಟ ಮೆರೆದಿದ್ದಾರೆ. ಹಸಿರಿನಿಂದ ಕಂಗೊಳಿಸುತ್ತಿರುವ ಬೆಟ್ಟದ ಮೇಲೆ ವಾಹನಗಳ ಪ್ರವೇಶ ನಿಷೇಧವಿದ್ದರೂ ಮನಬಂದಂತೆ ವಾಹನಗಳನ್ನು ಚಲಾಯಿಸಿದ್ದಾರೆ. ಅಕ್ರಮವಾಗಿ ಪ್ರವೇಶ ಮಾಡಿರುವ ಕೆಲ ಯುವಕರು, ಹಸಿರು ಹುಲ್ಲಿನ ಮೇಲೆ ಡರ್ಟ್ ರೈಡ್ ಮಾಡಿ ಕೆಸರು ಗದ್ದೆಯಂತೆ ಮಾಡಿದ್ದಾರೆ. ಹೊಸಳ್ಳಿ ಬೆಟ್ಟ ಹಾಳು ಮಾಡಿರುವವರ ವಿರುದ್ಧ ಸ್ಥಳೀಯರು ಹಾಗೂ ಪರಿಸರವಾದಿಗಳು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ತುಂಗಭದ್ರ ಡ್ಯಾಂ ಹಿನ್ನಿರಿನಲ್ಲಿ ಪ್ರವಾಸಿಗರ ಹುಚ್ಚಾಟ

ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿ ಇರುವ ತುಂಗಾಭದ್ರ ಡ್ಯಾಂ ಹಿನ್ನಿರಿಗೆ ಪ್ರವಾಸಿಗರು ಆಗಮಿಸುತ್ತಿದ್ದಾರೆ. ನೀರಿನ ಅಲೆಗಳ ಜತೆ ಫೋಟೊ ಕ್ಲಿಕ್ಕಿಸಿಕೊಳ್ಳುವ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರೇಮಿಗಳು , ಕಾಲೇಜು ವಿಧ್ಯಾರ್ಥಿಗಳು ಡ್ಯಾಂ ಹಿನ್ನಿರಿಗೆ ಇಳಿದು ಹುಚ್ಚಾಟ ಮೆರೆದಿದ್ದಾರೆ. ನೀರಿನ ಅಲೆಗಳ ಜತೆ ಎಂಜಾಯ್ ಮಾಡಲು ಹೋಗಿ ತಮ್ಮ ಪ್ರಾಣಕ್ಕೆ ಸಂಚಕಾರ ತಂದುಕೊಳ್ಳುತ್ತಿದ್ದಾರೆ.

ಕುಡಿದು ಸಮುದ್ರಕ್ಕೆ ಇಳಿದ ಯುವಕರು

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೇ ಬೀಚ್‌ನಲ್ಲಿ ಮದ್ಯಪಾನ ಮಾಡಿ ಅಪಾಯ ಲೆಕ್ಕಿಸದೇ ಪ್ರವಾಸಿಗರು ಈಜಲು ಸಮುದ್ರಕ್ಕೆ ಇಳಿದ ಘಟನೆ ನಡೆದಿದೆ. ಸಮುದ್ರದಲ್ಲಿ 40-50 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಅಷ್ಟಾದರೂ ಸೂಚನೆಗಳನ್ನು ನಿರ್ಲಕ್ಷ್ಯಿಸಿ ಕಡಲಿಗೆ ಇಳಿಯುತ್ತಿದ್ದಾರೆ.

ಜೋಗ್‌ಫಾಲ್ಸ್‌ಗೆ ಹರಿದು ಬಂದ ಜನಸಾಗರ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ನಿನ್ನೆ ಭಾನುವಾರ ಒಂದೇ ದಿನ 50 ಸಾವಿರ ಪ್ರವಾಸಿಗರು ಭೇಟಿ ನೀಡಿದ್ದಾರೆ. ಶರಾವತಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗಿದ್ದು, ಜೋಗ ಜಲಪಾತದ ರಾಜ, ರಾಣಿ, ರೋರರ್, ರಾಕೇಟ್ ಕವಲುಗಳು ಧುಮ್ಮಿಕ್ಕಿ ಹರಿಯುತ್ತಿದೆ. ಜೋಗ ಜಲಪಾತದ ನಯನ ಮನೋಹರ ದೃಶ್ಯ ಪ್ರವಾಸಿಗರು ಕಣ್ತುಂಬಿಕೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಚಿಕ್ಕಮಗಳೂರಲ್ಲಿ ಮಳೆಗೆ ಕರೆಂಟ್‌ ಕಟ್‌; ಕೊಡಗು, ದಾವಣಗೆರೆಯ‌ಲ್ಲೂ ಅವಾಂತರ

Karnataka Rain : ರಾಜ್ಯದ ನಾನಾ ಕಡೆಗಳಲ್ಲಿ ಮಳೆಯು ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ಚಿಕ್ಕಮಗಳೂರಲ್ಲಿ ಮಳೆಗೆ ಕರೆಂಟ್‌ ಕಟ್‌ ಆಗಿದೆ. ದಾವಣಗೆರೆಯಲ್ಲಿ ಮರದ ಕೊಂಬೆಗಳು ಬಿದ್ದು, ವಿದ್ಯುತ್‌ ಕಂಬಗಳು ಜಖಂಗೊಂಡಿವೆ.

VISTARANEWS.COM


on

By

karnataka Rain
Koo

ಚಿಕ್ಕಮಗಳೂರು/ದಾವಣಗೆರೆ: ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಜನಜೀವನ (Karnataka Rain) ಅಸ್ತವ್ಯಸ್ತವಾಗಿದೆ. ಮೂಡಿಗೆರೆ, ಚಾರ್ಮಾಡಿ ಕೊಟ್ಟಿಗೆಹಾರ, ಚಿಕ್ಕಮಗಳೂರು ನಗರ, ಕೊಪ್ಪ, ಎನ್ಆರ್ ಪುರ ಭಾಗಗಳಲ್ಲಿ ಬೆಳಗ್ಗೆಯಿಂದಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಭಾರಿ- ಗಾಳಿಯಿಂದಾಗಿ ಮೂಡಿಗೆರೆ, ಕೊಪ್ಪ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮಲೆನಾಡಿನ ಹಲವೆಡೆ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿದೆ.

ದಾವಣಗೆರೆಯಲ್ಲಿ ಮಳೆಗೆ ಮನೆಗಳ ಮುಂದೆ ನಿಂತ ಕೊಳಚೆ ನೀರು

ದಾವಣಗೆರೆ ಜಿಲ್ಲೆಯಲ್ಲಿ ರಾತ್ರಿ ಇಡೀ ಸುರಿದ ಜಡಿ ಮಳೆಗೆ ಅವಾಂತರವೇ ಸೃಷ್ಟಿಯಾಗಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದ ಮನೆಗಳ ಮುಂದೆ ಕೊಳಚೆ ನೀರು ನಿಂತಿದೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದೇ ಇದಕ್ಕೆಲ್ಲ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇತ್ತ ಕೊಳಚೆ ನೀರಿನಿಂದ ಸಾಂಕ್ರಾಮಿಕ ರೋಗದ ಭೀತಿಯು ಹೆಚ್ಚಾಗಿದೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿಯ ಪ್ಲಾಟ್‌ನಲ್ಲಿ ಘಟನೆ ನಡೆದಿದೆ.

ಸತತ ಮಳೆಯಿಂದ ಬೃಹತ್ ಮರದ ಕೊಂಬೆಗಳು ನೆಲಕ್ಕುರುಳಿದೆ. ದಾವಣಗೆರೆಯ ತರಳುಬಾಳು ಬಡಾವಣೆಯಲ್ಲಿ ಘಟನೆ ನಡೆದಿದೆ. ಮರದ ಕೊಂಬೆ ಮುರಿದು, ವಿದ್ಯುತ್ ಕಂಬದ ಮೇಲೆ ಬಿದ್ದಿದ್ದರಿಂದ 3 ವಿದ್ಯುತ್ ಕಂಬ ಜಖಂಗೊಂಡಿತ್ತು. ಜತೆಗೆ ಕಾರಿನ ಮೇಲೂ ಮರದ ಕೊಂಬೆಗಳು ಬಿದ್ದು ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹಲವು ಬಾರಿ ಅಧಿಕಾರಿಗಳಿಗೆ ಹಳೆ ಮರಗಳನ್ನು ತೆರವುಗೊಳಿಸುವಂತೆ ಮನವಿ ಮಾಡಿದ್ದರೂ, ಸಾಬೂಬು ಹೇಳಿ ವಿಳಂಬ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ: Accident News : ದ್ವಾರಬಾಗಿಲಿನ ಕಲ್ಲು ಬಿದ್ದು ಮಹಿಳೆ ಸಾವು; ನೀರಿನಲ್ಲಿ ಕೊಚ್ಚಿ ಹೋದ ಯುವಕ

ಚಿಕ್ಕಮಗಳೂರಿನಲ್ಲಿ ನಿಲ್ಲದ ಪ್ರವಾಸಿಗರ ಹುಚ್ಚಾಟ

ಚಾರ್ಮಾಡಿ ಘಾಟ್, ದೇವರಮನೆಗುಡ್ಡ, ರಾಣಿಝರಿ ಬಳಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ರಾಣಿಝರಿ ಬಳಿ ಮಂಗಳೂರು ಬೈಕ್ ಸವಾರರು ಕಿರಿಕ್‌ ಮಾಡಿದ್ದಾರೆ. 5 ಕಿ.ಮೀ‌. ರಸ್ತೆಯಲ್ಲಿ ನೂರಕ್ಕೂ ಹೆಚ್ಚು ಬಾರಿ ಬೈಕಿನ ಎಕ್ಸಲೇಟರ್ ರೈಜ್ ಮಾಡಿಕೊಂಡು ಕರ್ಕಶ ಶದ್ಧದೊಂದಿಗೆ ರಸ್ತೆ ಮಧ್ಯೆ ಹುಚ್ಚಾಟ ಮೆರೆಯುತ್ತಿದ್ದಾರೆ. ಮದ್ಯ ಸೇವಿಸಿ ಒಬ್ಬರಾದ ಮೇಲೊಬ್ಬರು ಮೋಜಿನ ಬೈಕ್ ರೈಡಿಂಗ್‌ ಮಾಡುತ್ತಿದ್ದಾರೆ. ರೀಲ್ಸ್ ಹುಚ್ಚಿಗೆ ರಾಣಿಝರಿ ರಸ್ತೆಯು ಸಂಪೂರ್ಣ ಕೆಸರುಗದ್ದೆಯಂತಾಗಿದೆ.

ಇನ್ನೂ ಪೊಲೀಸರ ಎಚ್ಚರಿಕೆ ನಡುವೆಯೂ ಫಾಲ್ಸ್ ಬಳಿ ಸ್ನಾನ ಮಾಡುತ್ತಿದ್ದ 6 ಪ್ರವಾಸಿಗರ ಮೇಲೆ ಕೇಸ್‌ ದಾಖಲಾಗಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಾಳೂರೂ ಮೈದಾಡಿ ಫಾಲ್ಸ್ ಬಳಿ ಕೂಗಾಡುತ್ತಾ ಹುಚ್ಚಾಟ ಮಾಡುತ್ತಿದ್ದರು. ಪ್ರವಾಸಿಗರನ್ನು ಠಾಣೆಗೆ ಕರೆದೊಯ್ದು ದೂರು ದಾಖಲಿಸಿದ್ದಾರೆ.

ಕೊಡಗಿನಲ್ಲಿ ಕುಸಿದು ಬಿದ್ದ ವಾಸದ ಮನೆ

ಕೊಡಗಿನಲ್ಲಿ ಮುಂದುವರೆದ ಮಳೆ ಆರ್ಭಟಕ್ಕೆ ವಾಸದ ಮನೆಯು ಧರೆಗುರುಳಿದೆ. ಮರಗೋಡು ಸಮೀಪದ ಹೂಗುಚ್ಚ ಪೈಸಾರಿಯಲ್ಲಿ ಅಣ್ಣು ಎಂಬುವವರಿಗೆ ಸೇರಿದ ವಾಸದ ಮನೆಗೆ ಹಾನಿಯಾಗಿದೆ. ನಿನ್ನೆ ರಾತ್ರಿ ಸುರಿದ ಗಾಳಿ ಮಳೆಗೆ ಮನೆಯ ಮುಂಭಾಗ ಕುಸಿದಿದೆ. ಕೊಡಗು ಜಿಲ್ಲೆ ಮಡಿಕೇರಿ ಮರಗೋಡು ಸಮೀಪದ ತಾಲ್ಲೂಕಿನ ಹೂಗುಚ್ಚ ಪೈಸಾರಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Char Dham Yatra 2024
ಪ್ರವಾಸ35 mins ago

Char Dham Yatra 2024: ಚಾರ್‌ಧಾಮ್‌, ಕೇದಾರನಾಥನ ದರ್ಶನ ಮಾಡುವ ಆಸೆ ಇದೆಯೆ? ಈ ಮಹತ್ವದ ಸಂಗತಿಗಳನ್ನು ತಿಳಿದುಕೊಂಡಿರಿ

karnataka weather Forecast
ಮಳೆ35 mins ago

Karnataka Weather : ಅಬ್ಬರಿಸುತ್ತಿರುವ ಮುಂಗಾರು; ಕರಾವಳಿ, ಮಲೆನಾಡಿನಲ್ಲಿ ಇಂದು ಸಹ ಜೋರು ಮಳೆ

Vastu Tips
ಧಾರ್ಮಿಕ35 mins ago

Vastu Tips: ವಾಸ್ತು ಪ್ರಕಾರ ಮಕ್ಕಳ ಅಧ್ಯಯನ ಕೊಠಡಿ ಹೀಗಿರಬೇಕು

Mosquito Repellent Plants
ಆರೋಗ್ಯ1 hour ago

Mosquito Repellent Plants: ನಿಮಗೆ ಗೊತ್ತೆ? ಈ 5 ಬಗೆಯ ಗಿಡಗಳು ಸೊಳ್ಳೆಗಳನ್ನು ಓಡಿಸುತ್ತವೆ!

Somanathapura Talakadu Madhyaranga Bharachukki Gaganachukki KSRTC Package Tour from Bengaluru
ಕರ್ನಾಟಕ1 hour ago

KSRTC Package Tour: ಸೋಮನಾಥಪುರ, ತಲಕಾಡು, ಮಧ್ಯರಂಗ, ಭರಚುಕ್ಕಿ, ಗಗನಚುಕ್ಕಿಗೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್‌ ಟೂರ್‌; ದರವೆಷ್ಟು?

dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು

Virat Kohli
ಪ್ರಮುಖ ಸುದ್ದಿ7 hours ago

Virat Kohli : ಹಣ, ಹೆಸರು ಬಂದ ತಕ್ಷಣ ಕೊಹ್ಲಿಗೆ ಅಹಂಕಾರ ಬಂತು; ಮಾಜಿ ಆಟಗಾರನ ಅರೋಪ

Smriti Singh
ದೇಶ7 hours ago

Smriti Singh: ಹುತಾತ್ಮ ಯೋಧನ 1 ಕೋಟಿ ರೂಪಾಯಿಯಲ್ಲಿ ಪೋಷಕರಿಗೆ 50%, ಪತ್ನಿಗೆ 50%; ಕೊನೆಗೂ ಸಿಕ್ಕಿತು ನ್ಯಾಯ

7th Pay Commission
ಕರ್ನಾಟಕ8 hours ago

7th Pay Commission: ವೇತನ ಏರಿಕೆಗೆ ಒಪ್ಪಿಗೆ; ಒಪಿಎಸ್, ಆರೋಗ್ಯ ಯೋಜನೆ ಬೇಡಿಕೆ ಬಾಕಿ; ನೌಕರರ ಸಂಘದ ಮುಂದಿನ ನಿರ್ಧಾರ ಏನು?

Viral Video
ವೈರಲ್ ನ್ಯೂಸ್8 hours ago

Viral Video: ಚಲಿಸುತ್ತಿರುವ ರೈಲಿನಲ್ಲಿ ಅಪಾಯಕಾರಿ ಸಾಹಸ! ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ13 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ20 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌