Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು - Vistara News

ಮಳೆ

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

Karnataka Rain news : ಒಂದು ಸಣ್ಣ ಮಳೆ ಬಂದರೂ ಅವಾಂತರವೇ (Karnataka Weather forecast) ಸೃಷ್ಟಿಯಾಗುತ್ತದೆ. ವಿಜಯನಗರದಲ್ಲಿ ಸ್ಮಶಾನಕ್ಕೆ ಮೃತದೇಹವನ್ನು ಸಾಗಿಸಲು ಗ್ರಾಮಸ್ಥರು ಪರದಾಡಿದರೆ ಇತ್ತ ಚಿಕ್ಕಮಗಳೂರಿನಲ್ಲಿ ಕಂದಕ ಸೃಷ್ಟಿಯಾಗಿದ್ದು, ಅಡಿಕೆ ತೋಟಗಳು ಭೂಮಿ ಪಾಲಾಗುತ್ತಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ವಿಜಯನಗರ: ವಿಜಯನಗರ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ( karnataka Rain news) ಮಳೆಯಿಂದಾಗಿ (Karnataka Weather Forecast) ಹಳ್ಳ – ಕೊಳ್ಳಗಳು ತುಂಬಿ ಹರಿಯುತ್ತಿವೆ. ಹೊಸಪೇಟೆ ತಾಲೂಕಿನ ಜಿ.ನಾಗಲಾಪೂರ ಗ್ರಾಮದಲ್ಲಿ ಹಳ್ಳ ತುಂಬಿ ಹರಿಯುತ್ತಿರುವುದರಿಂದ ಹೆಣ ಹೂಳಲು ಸಹ ಹೆಣಗಾಡಬೇಕಾಯಿತು.

ಗ್ರಾಮಕ್ಕೆ ಮೀಸಲಿಟ್ಟ ಸ್ಮಶಾನಕ್ಕೆ ಹೋಗಲು ರಸ್ತೆಯೇ ಇಲ್ಲ. ಅಕ್ಕ – ಪಕ್ಕದವರ ಜಮೀನಿನ ಪಕ್ಕದಲ್ಲಿ ಹೋದರೆ ಕಿರಿಕಿರಿ ಮಾಡುತ್ತಾರೆ. ಹೀಗಾಗಿ ಹರಿಯುವ ಹಳ್ಳದಲ್ಲೇ ಹೆಣ ಹೊತ್ತು ಗ್ರಾಮಸ್ಥರು ಸಾಗಿದ್ದರು. ಹೆಣ ಹೊತ್ತು ಸಾಗುವ ವೇಳೆ ನೀರಿನ ರಭಸ ಹೆಚ್ಚಾದರೆ ಹೆಣ ಸಮೇತ ಕೊಚ್ಚಿಹೋಗುವ ಆತಂಕ ಇದೆ.

ಹೆಣ ಹೂಳುವ ಜಾಗ ಗ್ರಾಮದಿಂದ ಒಂದೂವರೆ ಕಿ.ಮೀ ದೂರದಲ್ಲಿದೆ. ಶವ ಸಂಸ್ಕಾರಕ್ಕೆ ಹೋಗಲು ಸೂಕ್ತ ರಸ್ತೆ ಮಾಡಿಕೊಡದೇ ಜಿಲ್ಲಾಡಳಿತ, ಕಂದಾಯ ಇಲಾಖೆ ದಿವ್ಯ ನಿರ್ಲಕ್ಷ್ಯ ವಹಿಸಿದೆ. ಕೆಲವು ದಿನಗಳ ಹಿಂದೆ ಐತಿಹಾಸಿಕ ಒಪ್ಪತ್ತೇಶ್ವರ ರಥೋತ್ಸವ ಇದೇ ಹಳ್ಳದಲ್ಲಿ ಸಾಗಿತ್ತು. ಸ್ಮಶಾನಕ್ಕೆ, ಜಮೀನುಗಳಿಗೆ ಹೋಗಲು ಸೇತುವೆ ನಿರ್ಮಿಸಿ ಕೊಡಲು ಹತ್ತಾರು ಬಾರಿ ಮನವಿ ಮಾಡಿದ್ದಾರೆ. ಆದರೂ ಗ್ರಾಮಸ್ಥರ ಮನವಿಗೆ ಕ್ಯಾರೇ ಎನ್ನದೇ ಶಾಸಕರು, ಸಚಿವರು, ಅಧಿಕಾರಿಗಳ ಧೋರಣೆಗೆ ಕಿಡಿಕಾರಿದ್ದಾರೆ.

ಭಾರಿ ಮಳೆಗೆ ಅಡಿಕೆ ತೋಟದಲ್ಲಿ ಕಂದಕ ಸೃಷ್ಟಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರಿದಿದೆ. ಇದ್ದಕ್ಕಿದ್ದ ಹಾಗೆ ಸ್ವಲ್ಪ ಸ್ವಲ್ಪವೇ ಅಡಿಕೆ ತೋಟ ಕುಸಿಯುತ್ತಿದೆ. ತೋಟದಲ್ಲಿ 10-15 ಅಡಿ ಕಂದಕ ಸೃಷ್ಟಿಯಾಗಿದೆ. ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ದೂಪದ ಖಾನ್ ಗ್ರಾಮದಲ್ಲಿ ಘಟನೆ ನಡೆದಿದೆ.

ಭೂಮಿ ಕುಸಿತದಿಂದ ನೂರಾರು ಅಡಿಕೆ ಮರಗಳು ನೆಲಕ್ಕುರುಳಿದೆ. ಗ್ರಾಮದ ಆಶಾ ಕೃಷ್ಣ ಎಂಬುವರಿಗೆ ಸೇರಿದ ಅಡಿಕೆ ತೋಟ ನಾಶವಾಗಿದೆ. ಜೀವನಕ್ಕೆ ಆಧಾರವಾಗಿದ್ದ ತೋಟ ನಾಶವಾಗುತ್ತಿರುವುದರಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಮಳೆ ಬೀಳುತ್ತಿದ್ದಂತೆ ಮತ್ತೆ ಮತ್ತೆ ತೋಟ ಕುಸಿಯುತ್ತಿದೆ.

ಇದನ್ನೂ ಓದಿ: KEA : ಕೆಯುಡಬ್ಲ್ಯೂಎಸ್‌ಡಿಬಿ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿ ಪ್ರಕಟ; ಆ.27ರವರೆಗೆ ಆಕ್ಷೇಪಣೆಗೆ ಅವಕಾಶ

ವಿಕೆಂಡ್‌ ಮಸ್ತಿಗೆ ಮಳೆ ಅಡ್ಡಿ

ನೈರುತ್ಯ ಮಾನ್ಸೂನ್‌ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿದ್ದರೆ, ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕಲಬುರಗಿಯ ಚಿಂಚೋಳಿಯಲ್ಲಿ 7 ಸೆಂ.ಮೀ ಮಳೆಯಾಗಿದೆ. ನಾಳೆ ಭಾನುವಾರ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದ್ದು, ಕೆಲವೊಮ್ಮೆ ಗುಡುಗು ಇರಲಿದೆ. ನಿರಂತರ ಗಾಳಿ ಗಂಟೆಗೆ 40-50 ಕಿ.ಮೀ ತಲುಪಲಿದೆ. ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಗಂಟೆಗೆ 40-50 ಕಿ.ಮೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
Latest4 hours ago

ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್‌ ಕಡ್ಡಿ ಪತ್ತೆ

ಚಿತ್ರದುರ್ಗ5 hours ago

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

Latest7 hours ago

ಸಿಎಂ ವಿಜಯ್‌ ಮೊದಲ ಭಾಷಣ : “8 ಕೋಟಿ ಜನರೂ ನನ್ನವರೇ” ಎಂದ ವಿಜಯ್‌

Latest8 hours ago

ತಮಿಳುನಾಡು ಸಿಎಂ ಆಗಿ ವಿಜಯ್‌ ಪದಗ್ರಹಣ

ಪ್ರಮುಖ ಸುದ್ದಿ23 hours ago

ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ವಿಜಯ್‌ : ನಾಳೆಯೇ ಪ್ರಮಾಣವಚನ ಸಾಧ್ಯತೆ

Latest1 day ago

ರಾಜ್ಯಪಾಲರ ಭೇಟಿಗೆ ವಿಜಯ್‌ :ವಿಸಿಕೆ ಬೆಂಬಲ ಬಹುತೇಕ ಫೈನಲ್‌?

Latest1 day ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ2 days ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ2 days ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ2 days ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌