Karnataka Rain : ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಕೊಚ್ಚಿ ಹೋದ ಕಾರ್ಮಿಕ; ಮನೆಯ ಗೋಡೆ ಕುಸಿದು ಗೃಹಿಣಿ ಸಾವು - Vistara News

ಮಳೆ

Karnataka Rain : ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಕೊಚ್ಚಿ ಹೋದ ಕಾರ್ಮಿಕ; ಮನೆಯ ಗೋಡೆ ಕುಸಿದು ಗೃಹಿಣಿ ಸಾವು

Karnataka Rain : ಹಾಸನದಲ್ಲಿ ಉಕ್ಕಿ ಹರಿಯುತ್ತಿದ್ದ ಹೊಳೆ ದಾಟಲು ಹೋದ ಕೂಲಿ ಕಾರ್ಮಿಕ ಕೊಚ್ಚಿ ಹೋಗಿದ್ದರೆ, ಇತ್ತ ಮೈಸೂರಿನಲ್ಲಿ ಮಳೆಗೆ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

VISTARANEWS.COM


on

Karnataka Rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ/ಮೈಸೂರು: ಭಾರಿ ಮಳೆಗೆ (Karnataka Rain) ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಕೂಲಿಕಾರ್ಮಿಕ ಕೊಚ್ಚಿ ಹೋಗಿದ್ದಾರೆ. ಉಡುಪಿಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಚಿರೋಳ್ಳಿ ಎಂಬಲ್ಲಿ ಘಟನೆ ನಡೆದಿದೆ. ತುಮಕೂರು ಮೂಲದ ಆನಂದ್ (45) ನೀರು ಪಾಲಾದವರು. ಕೆಲಸಕ್ಕೆ ತೆರಳಲು ಸೀತ ನದಿಯ ಉಪನದಿಯನ್ನು ದಾಟುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಕಾಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಹಗ್ಗದ ಸಹಾಯದಿಂದ ಹೊಳೆ ದಾಟುವಾಗ ಹಗ್ಗ ತುಂಡಾಗಿದೆ. ಪರಿಣಾಮ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ನಾಡ್ಪಾಲಿನ ಮನೋರಮ ಹೆಗ್ಡೆ ಎಂಬುವರ ತೋಟದಲ್ಲಿ ಕೂಲಿಕಾರ್ಮಿಕರಾಗಿ ದುಡಿಯುತ್ತಿದ್ದರು. ಘಟನಾ ಸ್ಥಳಕ್ಕೆ ಹೆಬ್ರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಮಳೆಗೆ ಮೊದಲ ಬಲಿ

ಮೈಸೂರು ಜಿಲ್ಲೆಯಲ್ಲಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ನಿರಂತರ ಮಳೆಗೆ ಮನೆಯ ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹೇಮಲತಾ (22) ಮೃತ ದುರ್ದೈವಿ. ಅವಘಡದಲ್ಲಿ ತಾಯಿ ಮೃತಪಟ್ಟರೆ ಜತೆಗಿದ್ದ ಮಗುವನ್ನು ರಕ್ಷಣೆ ಮಾಡಲಾಗಿದೆ. ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಮನೆ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲಿ ಭಾರಿ ಗಾಳಿ ಮಳೆಗೆ ಮನೆ ನೆಲಸಮ

ಚಿಕ್ಕಮಗಳೂರಿನಲ್ಲಿ ಅವಾಂತರಗಳು ಮುಂದುವರಿದಿದ್ದು, ಭಾರಿ ಗಾಳಿ ಮಳೆಗೆ ಮನೆಯೊಂದು ನೆಲಸಮವಾಗಿದೆ. ಗೋಡೆ ಕುಸಿದು ಮನೆಯ ಚಾವಣಿ ಧ್ವಂಸಗೊಂಡಿದೆ. ಮೂಡಿಗೆರೆ ತಾಲೂಕಿನ ಬೆಟ್ಟಿಗೆರಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಸುಂದರ್ ಎಂಬುವವರ ಮನೆಗೆ ಹಾನಿಯಾಗಿದ್ದು, ಮನೆಯಲ್ಲಿದ್ದ ಪೀಠೋಪಕರಣಗಳು, ಆಹಾರ ಪದಾರ್ಥ ನಾಶವಾಗಿವೆ. ಮನೆಯ ಗೋಡೆ ಕುಸಿದು ಸ್ವಲ್ಪದರಲ್ಲೇ ಕುಟುಂಬ ಸದಸ್ಯರು ಪಾರಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹಿರೇಕೊಳಲೆ, ಒಡೆಯರ ಪುರ ಗ್ರಾಮದಲ್ಲಿ ಗ್ರಾಮದ ದ್ಯಾವಯ್ಯ, ಲಕ್ಷ್ಮಮ್ಮ ಎಂಬುವರಿಗೆ ಸೇರಿದ ಮನೆಗೂ ಹಾನಿಯಾಗಿದೆ. ಜಿಲ್ಲೆಯಾದ್ಯಂತ ಮಳೆಗೆ 190ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಹಾಸನದಲ್ಲೂ ಕುಸಿದು ಬಿದ್ದ ಮನೆ ಗೋಡೆ

ಇತ್ತ ಹಾಸನ ಜಿಲ್ಲೆಯಲ್ಲೂ ಮಳೆ ಅಬ್ಬರಕ್ಕೆ ಜನರು ನಲುಗಿ ಹೋಗಿದ್ದಾರೆ. ವ್ಯಾಪಕವಾಗಿ ಸುರಿದ ಮಳೆಗೆ ಮನೆಯ ಗೋಡೆಯು ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ವಿಶೇಷ ಚೇತನ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಕಲೇಶಪುರ ತಾಲೂಕಿನ ಚಂಗಡಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ನಂದೀಶ್ ಮನೆಯಲ್ಲಿ ಒಬ್ಬರೇ ಇದ್ದಾಗ ಈ ಅವಘಡ ನಡೆದಿದೆ. ಮನೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದ್ದು, ವಾಸದ ಮನೆ ಕಳೆದುಕೊಂಡು ನಂದೀಶ್‌ ಕಂಗಾಲಾಗಿದ್ದಾರೆ.

ಇದನ್ನೂ ಓದಿ: Dengue Fever : ಡೆಂಗ್ಯೂ ಭೀತಿ- ಸೊಳ್ಳೆಗಳ ನಾಶಕ್ಕೆ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಹೆದ್ದಾರಿ ಮಧ್ಯೆ ನೆಲ ಕಚ್ಚಿದ ಬೃಹತ್‌ ಮರ

ರಾಜ್ಯ ಹೆದ್ದಾರಿಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದ್ದು, ಸೊರಬ – ಆನವಟ್ಟಿ – ಶಿರಸಿ ಸಂಚಾರ ವ್ಯತ್ಯಯವಾಗಿದೆ. ಒಂದು ಗಂಟೆಗೂ ಹೆಚ್ಚು ಕಾಲ ವಾಹನಗಳು ನಿಂತಲೇ ನಿಲ್ಲುವಂತಾಯಿತು. ಸ್ಥಳಕ್ಕೆ ಅರಣ್ಯಾಧಿಕಾರಿ ತಂಡ ಭೇಟಿ ನೀಡಿ ಮರ ತೆರವು ಮಾಡಿದ್ದಾರೆ. ಶಿವಮೊಗ್ಗದಲ್ಲಿ ಮಳೆಯು ಅಬ್ಬರಿಸುತ್ತಿದ್ದು, ತುಂಗಾ ನದಿ ಉಕ್ಕಿ ಹರಿಯುತ್ತಿದೆ. ಅಪಾಯ ಮಟ್ಟ ಮೀರಿ ನೀರು ಹರಿಯುತ್ತಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಹೆಚ್ಚಿಸಿದೆ. ಕ್ಷಣ ಕ್ಷಣಕ್ಕೂ ತುಂಗಾ ನದಿಯ ಹರಿವಿನ ಮಟ್ಟ ಏರಿಕೆ ಆಗುತ್ತಿದ್ದು, ಶಿವಮೊಗ್ಗ ನಗರದ ರಾಜೀವ್ ಗಾಂಧಿ ಬಡಾವಣೆ ಜನರು ಆತಂಕದಲ್ಲೇ ದಿನಕಳೆಯುವಂತಾಗಿದೆ.

ಅದ್ಯಪಾಡಿಯಲ್ಲಿ ನೆರೆ ಸೃಷ್ಟಿ

ದಕ್ಷಿಣ ಕನ್ನಡದ ಮಂಗಳೂರಿನ ಅದ್ಯಪಾಡಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಫಲ್ಗುಣಿ ನದಿಯಲ್ಲಿ ನೆರೆ ಬಂದು ಗ್ರಾಮಕ್ಕೆ ನೀರು ನುಗ್ಗಿದ್ದು, ಅದ್ಯಪಾಡಿಯಲ್ಲಿ 35 ಮನೆಗಳಿಗೆ ಜಲ ದಿಗ್ಬಂಧನ ಹಾಕಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಂತ್ರಸ್ತರ ಮನೆಗಳಿಗೆ ದೋಣಿಯಲ್ಲಿ ತೆರಳಿ ಪರಿಶೀಲನೆ ನಡೆಸಿದ್ದರು. ನೆರೆ ನೀರಿನಿಂದ ಸಂತ್ರಸ್ತರಾಗಿರುವ 80 ಮಂದಿಯ ಸ್ಥಳಾಂತರಕ್ಕೆ ಸೂಚನೆ ನೀಡಿದರು.

ನದಿ ದಾಟಲು ಎಮ್ಮೆ ಬಾಲವೇ ಆಸರೆ

ನದಿ ದಾಟಲು ಎಮ್ಮೆ ಬಾಲವೇ ರೈತರಿಗೆ ಆಸರೆಯಾಗಿದ್ದು, ಈ ದೃಶ್ಯ ಎದೆ ಝೆಲ್ ಎನಿಸುತ್ತದೆ. ಜೀವ ಪಣಕ್ಕಿಟ್ಟು ರೈತರು ಮಲಪ್ರಭಾ ನದಿ ದಾಟುತ್ತಿದ್ದಾರೆ. ಹತ್ತು ಸಾವಿರ ಕ್ಯೂಸೆಕ್‌ನಷ್ಟು ನೀರಿನ ಹರಿವಿನಲ್ಲಿ ನದಿ ದಾಟುತ್ತಿದ್ದು, ಬೆಳಗಾವಿಯ ಹುಣಶೀಕಟ್ಟಿ ಗ್ರಾಮದ ರೈತರು ಗೋಳಾಟ ಹೇಳತಿರದು. ದಿನವೂ ಪ್ರಾಣ ಕೈಯಲ್ಲಿ ಹಿಡಿದುಕೊಂಡು ನದಿ ದಾಟಿ ಜಮೀನಿಗೆ ಹೋಗುವ ಪರಿಸ್ಥಿತಿ ಇದೆ.

ಯುವಕರು ಎಮ್ಮೆಯೊಟ್ಟಿಗೆ ಈಜಿ ದಡ ಸೇರಿ ಜಮೀನಿನಲ್ಲಿ ಕೆಲಸ ಮಾಡಿದರೆ, ಮಹಿಳೆಯರು ತೆಪ್ಪದಲ್ಲಿ ನದಿ ದಾಟಿ ಜಮೀನಿಗೆ ಹೋಗುತ್ತಾರೆ. ಕಾರವಾರದಿಂದ ಈಗಾಗಲೇ ಒಂದು ಬೋಟ್ ನೀಡಿದರೂ ಪ್ರಯೋಜನವಾಗಿಲ್ಲ. ಬೋಟ್ ನಿರ್ವಹಣೆ ಮತ್ತು ಸಿಬ್ಬಂದಿಗೆ ಸಂಬಳ ಕೊಡಲು ಆಗದೇ ಸ್ಥಗಿತಗೊಂಡಿದೆ. ಹೊಲಗದ್ದಗಳಿಗೆ ಹೋಗುವುದಕ್ಕೆ ಇಲ್ಲಿ ತೆಪ್ಪವೇ ಆಸರೆಯಾಗಿದೆ. ಡಿಸೇಲ್ ಬೋಟ್ ಇದ್ದರೂ ಪ್ರಯೋಜನವಿಲ್ಲ. ಹೀಗಾಗಿ ಅನಿವಾರ್ಯವಾಗಿ ತೆಪ್ಪದಲ್ಲಿಯೇ ಹೊಲಗದ್ದೆಗಳಿಗೆ ತೆರಳುವಂತಾಗಿದೆ.

ಕುಮಟಾದಲ್ಲೂ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯಾಟಕ್ಕೆ ಈಗಾಗಲೇ ಶಿರೂರು ಗುಡ್ಡ ಕುಸಿದಿದೆ. ಇದೀಗ ಕುಮಟಾ ಭಾಗದಲ್ಲೂ ಗುಡ್ಡ ಕುಸಿದಿದೆ. ಕುಮಟಾ-ಸಿದ್ದಾಪುರ ಹೆದ್ದಾರಿಯ ಉಳ್ಳೂರುಮಠ ರಸ್ತೆಗೆ ಧರೆ ಕುಸಿದಿದೆ. ನೂರು ಮೀಟರ್ ಎತ್ತರದಿಂದ ಗುಡ್ಡದ ಮಣ್ಣು, ಮರವು ಕುಸಿದು ಹೆದ್ದಾರಿಗೆ ಬಿದ್ದಿದೆ. ಹೀಗಾಗಿ ಕುಮಟಾ-ಸಿದ್ದಾಪುರ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ವಾರಾಂತ್ಯದಲ್ಲಿ ಭಾರಿ ಮಳೆ ಎಚ್ಚರಿಕೆ, ಶಾಲೆಗಳಿಗೆ ರಜೆ ಘೋಷಣೆ

Karnataka Weather Forecast : ವಾಯುಭಾರ ಕುಸಿತದಿಂದಾಗಿ ವಾರಾಂತ್ಯದಲ್ಲಿ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಶನಿವಾರ ಹಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಟ್ರಫ್ ಹಾಗೂ ವಾಯುಭಾರ ಉಂಟಾಗಿರುವ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast ) ಮುನ್ಸೂಚನೆಯನ್ನು ನೀಡಿದೆ. ಮಳೆಯೊಂದಿಗೆ ಗಾಳಿ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಶನಿವಾರದಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ.

ಇನ್ನೂ ಹಾಸನ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು (40-50 kmph) ತಲುಪುವ ಸಾಧ್ಯತೆಯಿದೆ ಹಾಗೊ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇನ್ನೂ ಭಾನುವಾರದಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯ ವೇಗವು (30-40 ಕಿಮೀ) ವಿಪರೀತ ಮಳೆಯಾಗಲಿದೆ. ಒಳನಾಡಿನ ಬೆಳಗಾವಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು 35-45 ಕಿ.ಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ಮತ್ತು 20 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Rain : ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಕೊಚ್ಚಿ ಹೋದ ಕಾರ್ಮಿಕ; ಮನೆಯ ಗೋಡೆ ಕುಸಿದು ಗೃಹಿಣಿ ಸಾವು

ಶನಿವಾರ ಹಾಸನದ ಕೆಲವುಶಾಲೆಗಳಿಗೆ ರಜೆ ಘೋಷಣೆ

ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಆರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕಿನ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ನೀಡಲಾಗಿದೆ. ಅಂಗನವಾಡಿ, ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ಎಚ್ ಕೆ ಪಾಂಡು ಆದೇಶ ಹೊರಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain : ಬೆಳಗಾವಿಯಲ್ಲೂ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮಳೆಗೆ ಮನೆ ಬಿದ್ದು ತುಂಬು ಗರ್ಭಿಣಿ ಹೈರಣಾದ ದುರಂತ ನಡೆದಿದೆ. ಬೆಳಗಾವಿಯಲ್ಲಿ ಸೇತುವೆಗಳು ಮುಳುಗಡೆಯಾಗಿ, ಕೊಡಗಿನಲ್ಲಿ ಕೆರೆ ಕೋಡಿ ಬಿದ್ದು ರಸ್ತೆಗಳೆಲ್ಲವೂ ಜಲಾವೃತಗೊಂಡಿದೆ.

VISTARANEWS.COM


on

By

karnataka Rain
Koo

ಬೆಳಗಾವಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು (Karnataka Rain) ಜನರ ಬದುಕನ್ನೇ ಬೀದಿಗೆ ತರುತ್ತಿದೆ. ರಾತೋರಾತ್ರಿ ಸುರಿದ ಮಳೆಗೆ, ಮನೆ ಕುಸಿದು ಬಿದ್ದು, 9 ತಿಂಗಳ ತುಂಬು ಗರ್ಭಿಣಿ ಹೈರಾಣಾದರು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಗಿ ಗ್ರಾಮದಲ್ಲಿ ಘಟನೆ ನಡೆದಿದೆ.

ನಿರಂತರ ಮಳೆಗೆ ಸಾವಂತ್ ತೇಗೂರು ಎಂಬುವವರ ಮನೆ ಕುಸಿದು ಬಿದ್ದಿದೆ. ಸಾವಂತ್‌ ಅವರು ಮಗಳನ್ನು ಹೆರಿಗೆಗೆ ಎಂದು ಮನೆಗೆ ಕರೆತಂದಿದ್ದರು. ಹೆರಿಗೆಗೆ 4 ದಿನ ಇರುವಾಗಲೇ ಮಳೆಗೆ ಮನೆಯು ಕುಸಿದಿದೆ. ಮಗಳ ಹೆರಿಗೆಯ ನಿರೀಕ್ಷೆಯಲ್ಲಿದ್ದ ಅಪ್ಪ- ಅಮ್ಮನಿಗೆ ಬರಸಿಡಿಲು ಬಡಿದಂತಾಗಿದೆ. ತುರ್ತಾಗಿ ಬೇರೆಲ್ಲೂ ಮನೆ ಸಿಗದೇ ಇರುವುದರಿಂದ ತುಂಬು ಗರ್ಭಿಣಿ ಜತೆಗೆ ಕುಸಿದು ಬಿದ್ದಿರುವ ಮನೆಯಲ್ಲಿಯೇ ವಾಸಿಸುವ ದುಸ್ಥಿತಿ ನಿರ್ಮಾಣವಾಗಿದೆ.

ಬೆಳಗಾವಿಯಲ್ಲಿ ಸೇತುವೆಗಳು ಮುಳುಗಡೆ

ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ಮುಂದುವರೆದ ಮಳೆ ಅಬ್ಬರಕ್ಕೆ ಅಪಾಯದ ಮಟ್ಟ ಮೀರಿ ವೇದಗಂಗಾ ನದಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಜತ್ರಾಟ-ಭೀವಶಿ ಸೇತುವೆ ಜಲಾವೃತಗೊಂಡಿದೆ. ಸೇತುವೆ ಎರಡು ಬದಿಯಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರ ನಿಷೇಧಿಸಲಾಗಿದೆ. ಅಕ್ಕಪಕ್ಕದ ಜಮೀನುಗಳಿಗೂ ನೀರು ನುಗ್ಗಿದೆ.

ಇತ್ತ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮತ್ತೆರಡು ಸೇತುವೆ ಮುಳುಗಡೆಯಾಗಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿದ ಅಕ್ಕೋಳ-ಸಿದ್ನಾಳ ಮತ್ತು ಜತ್ರಾಟ-ಭೀವಶಿ ನಡುವಿನ ಸೇತುವೆ ಜಲಾವೃತಗೊಂಡಿದೆ. ಈವರೆಗೂ ಐದು ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಬೆಳಗಾವಿಯ ಖಾನಾಪುರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅಪಾಯದ ಮಟ್ಟ ಮೀರಿ ಸಾತ್ನಳ್ಳಿ ಹಳ್ಳ ಹರಿಯುತ್ತಿದೆ. ಸಂಜೆ ಏಕಾಏಕಿ ಹಳ್ಳ ಬಂದು ಶಾಲಾ ಮಕ್ಕಳ ಪರದಾಡಬೇಕಾಯಿತು. ಈ ವೇಳೆ ಮಕ್ಕಳನ್ನು ಹೊತ್ತುಕೊಂಡು ಹಳ್ಳ ದಾಟಿಸಬೇಕಾಯಿತು.

ನಿರಂತರ ಮಳೆಗೆ ಬೆಳಗಾವಿಯಲ್ಲಿ ಮನೆ ಕುಸಿತ ಪ್ರಕರಣಗಳು ಮುಂದುವರಿದಿದೆ. ಭೂರಣಕಿ ಗ್ರಾಮದಲ್ಲಿ ಮತ್ತೊಂದು ಮನೆ ಕುಸಿದಿದ್ದು, ಅದೃಷ್ಟವಷಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದ ಪರಶುರಾಮ್ ನಾರಾಯಣ ರಾಮಗಾನ್ ಎಂಬುವವರ ಮನೆ ಕುಸಿದು ಬಿದ್ದಿದೆ. ಕಳೆದ ರಾತ್ರಿ ಮನೆಯ ಸದಸ್ಯರು ಮನೆಯಲ್ಲಿರುವಾಗಲೇ ಗೋಡೆ ಕುಸಿದಿದೆ. ಈ ವೇಳೆ ಎಲ್ಲರೂ ಹೊರಗಡೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ.

ಇದನ್ನೂ ಓದಿ: Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

ಕೊಡಗಿನಲ್ಲಿ ಕೆರೆ ಕೋಡಿ ಬಿದ್ದು ಅವಾಂತರ

ಕೊಡಗು ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಕೊಡಗಿನ ಕುಶಾಲನಗರದ ರೊಂಡೆ ಕೆರೆ ಕೋಡಿ ಬಿದ್ದಿದೆ. ಪರಿಣಾಮ ಕೆರೆಯ ನೀರು ನುಗ್ಗಿ ಬಡಾವಣೆಯ ಕೆಲ ಮನೆಗಳು ಜಲಾವೃತಗೊಂಡಿದೆ. ಕುಶಾಲನಗರ ಬಳಿಯ ಗೊಂದಿಬಸವನಹಳ್ಳಿಯಲ್ಲಿ ಘಟನೆ ನಡೆದಿದೆ. ಜನವಸತಿ ಪ್ರದೇಶ ಅಲ್ಲದೆ ಕೃಷಿ ಪ್ರದೇಶಕ್ಕೂ ನೀರು ಹರಿದು ಅವಾಂತರವೇ ಸೃಷ್ಟಿಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ – ಚೆಟ್ಟಳ್ಳಿ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಇದರಿಂದಾಗಿ ಮಡಿಕೇರಿ – ಚೆಟ್ಟಳ್ಳಿ ಗ್ರಾಮೀಣ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಸಣ್ಣ ಪ್ರಮಾಣದ ಗುಡ್ಡ ಕುಸಿತ ಹಿನ್ನಲೆ ಅನಾಹುತ ತಪ್ಪಿದೆ. ಮಣ್ಣು ತೆರವು ಬಳಿಕವಷ್ಟೇ ವಾಹನ ಸಂಚಾರ ಸಾಧ್ಯ. ಹೀಗಾಗಿ ಮಣ್ಣು ತೆರವು ಕಾರ್ಯ ಮುಂದುವರಿದಿದೆ.

ಮಳೆಗೆ ಸೋರುತ್ತಿದೆ ಐತಿಹಾಸಿಕ ಮಧುಕೇಶ್ವರ ದೇವಸ್ಥಾ‌ನ

ಭಾರಿ ಮಳೆ ಐತಿಹಾಸಿಕ ಮಧುಕೇಶ್ವರ ದೇವಸ್ಥಾ‌ನದ ಚಾವಣಿ ಸೋರುತ್ತಿದೆ. ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕದಂಬರ ರಾಜಧಾನಿ ಬನವಾಸಿಯ ಶ್ರೀ ಮಧುಕೇಶ್ವರ ದೇವಸ್ಥಾನವು ಭಾರೀ ಮಳೆಗೆ ಸೋರುತ್ತಿದೆ. ಹೀಗಾಗಿ ದೇವಸ್ಥಾನದ ಮೇಲ್ಭಾಗಕ್ಕೆ ಟಾರ್ಪಲ್ ಅಳವಡಿಕೆ ಮಾಡಲಾಗಿದೆ. ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ಮಧುಕೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರು, ಪ್ರವಾಸಿಗರಿಗೆ ತೊಂದರೆ ಆಗುತ್ತಿದೆ.

ಧಾರಾಕಾರ ಮಳೆಗೆ ಶಿರಸಿಯ ಗುಡ್ನಾಪುರ ಬಂಗಾರೇಶ್ವರ ದೇವಸ್ಥಾನ ಜಲಾವೃತಗೊಂಡಿತ್ತು. ನಿರಂತರ ಮಳೆಯಿಂದಾಗಿ ಮೈದುಂಬಿಕೊಂಡ ಗುಡ್ನಾಪುರ ಕೆರೆಗೆ ಹೊಂದಿಕೊಂಡೇ ಇರುವ ಬಂಗಾರೇಶ್ವರ ದೇವಸ್ಥಾನದ ಸುತ್ತ ನೀರು ಆವರಿಸಿಕೊಂಡಿತ್ತು. ನೀರಲ್ಲಿ ತೆರಳಿ ಬಂಗಾರೇಶ್ವರನಿಗೆ ಜನರು ಪೂಜೆ ಸಲ್ಲಿಸಿದರು.

ಹೆದ್ದಾರಿ ಬಂದ್‌

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರು ಬಳಿ ಗುಡ್ಡ ಕುಸಿತ ಹಿನ್ನೆಲೆಯಲ್ಲಿ ಹೆದ್ದಾರಿ ಬಂದ್ ಮಾಡಲಾಗಿದೆ. ಹೀಗಾಗಿ ಮಂಗಳೂರಿನಿಂದ ಧಾರವಾಡಕ್ಕೆ ತೆರಳಬೇಕಾದ ಟ್ಯಾಂಕರ್ ಟ್ರಕ್‌ಗಳು ಟೋಲ್ ಗೇಟ್‌ನಲ್ಲೇ ಉಳಿಯುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ 66 ಬೈಂದೂರು ತಾಲೂಕಿನ ಶಿರೂರು ಐಆರ್‌ಬಿ ಟೋಲ್ ಗೇಟ್ ಬಳಿ ಮೊಕ್ಕಾಂ ಹೂಡಿದ್ದಾರೆ.

ಕಳೆದ ಮೂರು ದಿನಗಳಿಂದ ಟ್ರಕ್ ಚಾಲಕರು ಇಲ್ಲಿಯೇ ಕಾಯುತ್ತಿದ್ದು, ಟ್ರಕ್‌ನಲ್ಲಿರುವ ರೇಷನ್ ಬಳಸಿ ಅಡುಗೆ ತಯಾರಿಸುತ್ತಿದ್ದಾರೆ. ಶೌಚ ಮತ್ತು ಸ್ನಾನಕ್ಕೆ ವ್ಯವಸ್ಥೆ ಸರಿಯಾಗಿಲ್ಲದೆ ದಿನದೂಡುತ್ತಿದ್ದಾರೆ. ಕೇವಲ ಎರಡು ದಿನಗಳಿಗೆ ಆಗುವಷ್ಟು ರೇಷನ್ ತಂದಿದ್ದರು. ಮಂಗಳೂರಿನಿಂದ ಎಲ್‌ಪಿಜಿ ಗ್ಯಾಸ್ ತುಂಬಿಸಿಕೊಂಡು ಅಂಕೋಲ ಮಾರ್ಗವಾಗಿ ಧಾರವಾಡ ತಲುಪ ಬೇಕಾಗಿರುವ ಟ್ಯಾಂಕರ್‌ಗಳು ನಿಂತಲ್ಲೇ ನಿಲ್ಲುವಂತಾಗಿದೆ. ಅಂಕೋಲಾ ಗುಡ್ಡ ಕುಸಿತ ಹಿನ್ನೆಲೆಯಲ್ಲಿ ಮುಖ್ಯ ಹೆದ್ದಾರಿ ಸಂಪೂರ್ಣ ಬಂದ್‌ ಆಗಿದೆ.

ಬಂಟ್ವಾಳ-ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆ ಸ್ಥಗಿತ

ದಕ್ಷಿಣ ಕನ್ನಡದ ಬಂಟ್ವಾಳದ ಅಜಿಲಮೊಗರು ಬಳಿ ನೇತ್ರಾವತಿ ನದಿ ಉಕ್ಕಿ ಹರಿದು ಮುಖ್ಯ ರಸ್ತೆಗೆ ಹರಿದು ಬಂದಿದೆ. ಅಜಿಲಮೊಗರು ಬಳಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸಂಚಾರ ಬಂದ್ ಆಗಿದೆ. ಹೀಗಾಗಿ ಬಂಟ್ವಾಳ-ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain : ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಜನರು ಕಂಗಲಾಗಿದ್ದಾರೆ. ಚಿಕ್ಕಮಗಳೂರಲ್ಲಿ ಮನೆ ಮುಂಭಾಗ ಕಂದಕ ನಿರ್ಮಾಣವಾಗಿದೆ. ಬೃಹತ್‌ ಮರಗಳು ಧರೆಗುರುಳಿದ್ದು, ಮನೆಯ ಚಾವಣಿಗಳು ಕುಸಿದು ಬಿದ್ದಿವೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಮಲೆನಾಡಿನ ಚಿಕ್ಕಮಗಳೂರು ಸೇರಿ ರಾಜ್ಯಾದ್ಯಂತ ಭಾರಿ (Karnataka Rain) ಮಳೆಯಾಗುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕವೊಂದು ಸೃಷ್ಟಿಯಾಗಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮೇಗೂರು ಗ್ರಾಮದಲ್ಲಿ ಮನೆಯ ಮುಂಭಾಗವೇ 30 ಅಡಿ ಆಳದ ಕಂದಕ ಸೃಷ್ಟಿಯಾಗಿದೆ. ಗ್ರಾಮದ ಪ್ರೇಮ ಬಾಬು ಗೌಡ ಎಂಬುವವರ ಮನೆ ಮುಂದೆ ಕಂದಕ ಸೃಷ್ಟಿಯಾಗಿದ್ದು, ವಿಚಿತ್ರ ಕಂದಕ ಕಂಡು ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ. ಕಂದಕದ ಒಳಗಿಂದ ಭೂಮಿ ಒಳಗೆ ನೀರಿನ ಬುಗ್ಗೆ ಹರಿಯುತ್ತಿದೆ. ಬಾವಿ ಆಕಾರದಲ್ಲಿ ಕಂದಕ ಸೃಷ್ಟಿಯಾಗಿದೆ.

ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜನ-ಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಅಬ್ಬರಕ್ಕೆ ಮನೆಯ ಹಿಂಭಾಗದಲ್ಲಿ ಭೂ ಕುಸಿತ ಉಂಟಾಗಿದೆ. ಕಳಸ ತಾಲೂಕಿನ ಮಾವಿನಕೆರೆ ಕಲ್ಲಾನೆಯಲ್ಲಿ ಘಟನೆ ನಡೆದಿದೆ. ಕಲ್ಲಾನೆಯ ಬಾಸ್ಕರ್ ಪೂಜಾರಿ ಎಂಬುವವರು ಕಂಗಲಾಗಿದ್ದಾರೆ. ಮಳೆ ಹೆಚ್ಚಾದಂತೆ ಸ್ವಲ್ಪ ಸ್ವಲ್ಪವೇ ಭೂಮಿ ಕುಸಿಯುತ್ತಿದೆ.

ಪ್ರಪಾತಕ್ಕೆ ಬಿದ್ದ ಲಾರಿ, ಚಾಲಕ ಗ್ರೇಟ್‌ ಎಸ್ಕೇಪ್‌

ಚಿಕ್ಕಮಗಳೂರಿನಲ್ಲಿ ಲಾರಿ ಚಾಲಕರೊಬ್ಬರು ಗ್ರೇಟ್ ಎಸ್ಕೇಪ್ ಆಗಿದ್ದಾರೆ. ಲಾರಿ ಪ್ರಪಾತಕ್ಕೆ ಬಿದ್ದರೂ ಅದೃಷ್ಟವಶಾತ್ ಚಾಲಕ ಬದುಕುಳಿದಿದ್ದಾರೆ. ನಿರಂತರ ಮಳೆಗೆ ನೆಮ್ಮಾರು ಸಮೀಪದ ರಸ್ತೆ ಕುಸಿದು, ಲಾರಿಯೊಂದು ಸುಮಾರು 50 ಅಡಿ ಆಳದಲ್ಲಿ ಬಿದ್ದಿದೆ. ಲಾರಿ ಸಂಪೂರ್ಣ ನಜ್ಜು-ಗುಜ್ಜಾಗಿದ್ದು, ಚಾಲಕ ಪವಾಡ ಸದೃಶ ಪಾರಾಗಿದ್ದಾರೆ. ಶೃಂಗೇರಿ ನೆಮ್ಮಾರು ಬಳಿ ರಸ್ತೆ ಕುಸಿದ ಪರಿಣಾಮ ಲಾರಿಯು ಪ್ರಪಾತಕ್ಕೆ ಬಿದ್ದಿದೆ. ನೆಮ್ಮಾರು ವ್ಯಾಪ್ತಿಯ ಹೊಸದೇವರಹಡ್ಳು ಸಮೀಪದಲ್ಲಿ ಘಟನೆ ನಡೆದಿದೆ.

ನಿದ್ರೆಗೆ ಜಾರಿದಾಗ ಮನೆ ಮೇಲೆ ಬಿದ್ದ ಬೃಹತ್‌ ಮರ

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರಿಕಟ್ಟೆ ಸುತ್ತಮುತ್ತ ಅಪಾಯದ ಮಟ್ಟ ಮೀರಿ ಹಳ್ಳ ಕೊಳ್ಳಗಳು ಹರಿಯುತ್ತಿದ್ದು, ಬಸರಿ ಕಟ್ಟೆ -ಬಿಲಾಳು ಕೊಪ್ಪ ರಸ್ತೆಯು ಜಲಾವೃತಗೊಂಡಿದೆ. ಇತ್ತ ಅಜ್ಜಂಪುರ ತಾಲೂಕಿನ ಗುಡ್ಡದಹಳ್ಳಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಕುಟುಂಬಸ್ಥರು ಮನೆಯಿಂದ ಎದ್ದು ಓಡಿದ್ದಾರೆ. ಕುಟುಂಬಸ್ಥರು ನಿದ್ದೆಯಲ್ಲಿದ್ದಾಗ ಏಕಾಏಕಿ ಮರ ಬಿದ್ದು, ಚಾವಣಿ ಸಂಪೂರ್ಣ ಹಾನಿಯಾಗಿದೆ. ಗ್ರಾಮದ ರವಿ ಎಂಬುವರಿಗೆ ಸೇರಿದ ಮನೆಯವರು ಪಾರಾಗಿದ್ದಾರೆ.

ಕೊಚ್ಚಿ ಹೋದ ಅಡಿಕೆ ತೋಟ

ಭದ್ರಾ ನದಿ ಪ್ರವಾಹದಿಂದ ತೋಟ-ಗೆದ್ದೆಗಳು ಜಲಾವೃತಗೊಂಡಿದೆ. ಮಹಾಮಳೆಗೆ ಅರ್ಧ ಎಕರೆ ಅಡಿಕೆ‌ ತೋಟ ಕೊಚ್ಚಿ ಹೋಗಿದೆ. ಕಳಸ ತಾಲೂಕಿನ ಮಕ್ಕಿಮನೆಯ ನಾಗೇಂದ್ರ ಎಂಬುವರಿಗೆ ಸೇರಿದ ತೋಟದಲ್ಲಿ ಮಣ್ಣು ಕುಸಿತವಾಗಿ ಅರ್ಧ ಎಕರೆ ಅಡಿಕೆ ಗಿಡಗಳು ಮಣ್ಣುಪಾಲಾಗಿದೆ. ನಡ್ಲುಮನೆಯ ವರ್ಧಮಾನಯ್ಯ ಎಂಬುವವರ 3 ಎಕರೆ ನಾಟಿ ಮಾಡಿದ ಭತ್ತದ ಗದ್ದೆ ಜಲಾವೃತವಾಗಿದೆ.

ಇದನ್ನೂ ಓದಿ: Kannada Actress: `ಬ್ಯಾಕ್‍ ಬೆಂಚರ್ಸ್’ ಬಿಡುಗಡೆಗೂ ಮುನ್ನವೇ ಹಲವು ಅವಕಾಶಗಳು ಈ ನಟಿಗೆ!

ಕೊಡಗಿನಲ್ಲಿ ಗುಡ್ಡ ಕುಸಿತ ಭೀತಿ; ರಾತ್ರಿ ಸಂಚಾರ ಬಂದ್‌

ಕೊಡಗಿನಲ್ಲಿ ಮಳೆ ತಗ್ಗಿದರೂ ಪ್ರವಾಹದ ಪರಿಸ್ಥಿತಿ ತಗ್ಗಿಲ್ಲ. ಕುಶಾಲನಗರದ ಸಾಯಿ ಬಡಾವಣೆಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಸುಮಾರು 25ಕ್ಕೂ ಅಧಿಕ ಮನೆಗಳಿರುವ ಸಾಯಿ ಬಡಾವಣೆಯೊಳಗೆ ಕಾವೇರಿ ನದಿ ನೀರು ನುಗ್ಗಿ‌ ಜಲಾವೃತಗೊಂಡಿದೆ. ಹೀಗಾಗಿ ನಿವಾಸಿಗಳು ಮನೆಗಳನ್ನು ತೊರೆಯುತ್ತಿದ್ದಾರೆ. ಮಳೆ ಹೆಚ್ಚಾದರೇ ಬಡಾವಣೆಯೇ ಮುಳುಗುವ ಆತಂಕವಿದೆ. ಸಾಯಿ ಬಡಾವಣೆ ಜತೆಗೆ ಕುವೆಂಪು ಬಡಾವಣೆಗೂ ಜಲ ಕಂಟಕವಿದೆ.

ಕೊಡಗು ಜಿಲ್ಲೆಯ ಮಡಿಕೇರಿ ಮಂಗಳೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಬಳಿ ಗುಡ್ಡ ಕುಸಿಯುವ ಭೀತಿ ಇದೆ. ಹೀಗಾಗಿ ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಿ ಕೊಡಗು ಡಿಸಿ ಆದೇಶ ಹೊರಡಿಸಿದ್ದಾರೆ. ಗುಡ್ಡದ ಕೆಳಭಾಗದಲ್ಲಿ ಸ್ವಲ್ಪ ಮಣ್ಣು ಜರಿದಿದ್ದು, ಬಿರುಕು ಮೂಡುವ ಸಾಧ್ಯತೆ ಇದೆ.

ಮೈಸೂರಿನಲ್ಲಿ ಜೋರು ಮಳೆಗೆ ಕುಸಿದು ಬಿದ್ದ ಮನೆ

ಕರಾವಳಿ, ಮಲೆನಾಡು ಮಾತ್ರವಲ್ಲದೇ ಒಳನಾಡು ಭಾಗದಲ್ಲೂ ಮಳೆಯು ಅಬ್ಬರಿಸುತ್ತಿದೆ. ಮೈಸೂರಿನಲ್ಲಿ ವರುಣನ ಆರ್ಭಟಕ್ಕೆ ಮನೆಯೊಂದು ಕುಸಿದು ಬಿದ್ದಿದೆ. ಮೈಸೂರಿನ ಸಾಲಿಗ್ರಾಮ ತಾಲೂಕಿನ ಚಿಕ್ಕಕೊಪ್ಪಲು ಗ್ರಾಮದಲ್ಲಿ ಸರೋಜಮ್ಮ ದೇವೇಗೌಡ ಎಂಬುವರಿಗೆ ಸೇರಿದ ಮನೆ ಕುಸಿದು ಬಿದ್ದಿದೆ. ಮನೆಯಲ್ಲಿದ್ದ ಪಾತ್ರೆಗಳು, ದಿನಸಿ ಸಾಮಗ್ರಿಗಳು, ಬಟ್ಟೆ ಬರೆ ಎಲ್ಲವೂ ಹಾನಿಯಾಗಿದೆ. ಮನೆಯವರು ಕೆಲಸ ನಿಮಿತ್ತ ಹೊರಗಡೆ ಹೋದಾಗ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಮಳೆಯಿಂದ ವಾಸದ ಮನೆ ಕಳೆದುಕೊಂಡ ಸರೋಜಮ್ಮ, ದೇವೇಗೌಡ ಕಂಗಲಾಗಿದ್ದಾರೆ. ಸಾಲಿಗ್ರಾಮ ತಾಲೂಕು ಆಡಳಿತ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಜೋರಾಗಿ ಬೀಸಿದ ಗಾಳಿಗೆ ನೆಲಕ್ಕುರುಳಿದ ಟವರ್‌

ಭಾರಿ ಗಾಳಿ- ಮಳೆಗೆ ಬೃಹತ್ ಗಾತ್ರದ ಟವರ್ ನೆಲಕ್ಕೆ ಉರುಳಿ ಬಿದ್ದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ದರೂರು ಗ್ರಾಮದಲ್ಲಿ ಘಟನೆ ನಡೆದಿದೆ. ಏಕಾಏಕಿ ಬೀಸಿದ ಭಾರೀ ಗಾಳಿಗೆ ಬೃಹತ್ ಟವರ್ ನೆಲಕ್ಕುರುಳಿದ ಪರಿಣಾಮ ಅಂಗಡಿ ಮುಂಗಟ್ಟು, ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ: Donald Trump: ಅಮೆರಿಕವೂ ಐರನ್ ಡೋಮ್ ಕ್ಷಿಪಣಿ ತಯಾರಿಸಲಿದೆ; ಡೊನಾಲ್ಡ್‌ ಟ್ರಂಪ್‌ ಸೂಚನೆ

ಹಾಸನದಲ್ಲಿ ಸೇತುವೆ ಮುಳುಗಡೆ, ಹೊಳೆಮಲ್ಲೇಶ್ವರ ದೇಗುಲ ಜಲಾವೃತ

ಹಾಸನ ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರಿದಿದೆ. ಭಾರಿ ಮಳೆಯಿಂದಾಗಿ ಬಾಣಗೇರಿ ಹೊಳೆ ನೀರು ಉಕ್ಕಿ ಹರಿಯುತ್ತಿದೆ. ಮಾಗೇರಿ ಗ್ರಾಮದ ಸೇತುವೆ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಸಕಲೇಶಪುರ ತಾಲೂಕಿನ ಮಾಗೇರಿ ಗ್ರಾಮದ ಸೇತುವೆ ಮುಳುಗಡೆಗೊಂಡಿದೆ. ಇದರಿಂದಾಗಿ ಸಕಲೇಶಪುರ-ಮಾಗೇರಿ-ಸೋಮವಾರಪೇಟೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ಹರಿಯುತ್ತಿರುವ ನೀರಿನಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ.

ಇನ್ನೂ ಸಕಲೇಶಪುರ, ಮೂಡಿಗೆರೆ ಭಾಗದಲ್ಲಿ ಮಳೆ ಮುಂದುವರಿದಿದ್ದು, ಹೇಮಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿಯ ಅಕ್ಕ-ಪಕ್ಕ ಹಾಗೂ ತಗ್ಗು ಪ್ರದೇಶಕ್ಕೂ ನೀರು ನುಗ್ಗಿದೆ. ಹೇಮಾವತಿ ನದಿ ದಂಡೆಯಲ್ಲಿರುವ ಸಕಲೇಶಪುರದ ಹೊಳೆಮಲ್ಲೇಶ್ವರ ದೇಗುಲದ ಮೆಟ್ಟಿಲು ಜಲಾವೃತಗೊಂಡಿದೆ. ಮಳೆ ಹೀಗೆ ಮುಂದುವರೆದರೆ ದೇಗುಲವೂ ಜಲಾವೃತವಾಗುವ ಸಾಧ್ಯತೆ ಇದೆ.

ಉಡುಪಿಯ ಆತ್ರಾಡಿಯಲ್ಲಿ ಕೃತಕ ನೆರೆ

ಉಡುಪಿಯ ಮಲ್ಪೆ- ಮೊಳಕಾಲ್ಮೂರು ಹೆದ್ದಾರಿ ಅವ್ಯವಸ್ಥೆಯಿಂದಾಗಿ ಆತ್ರಾಡಿ ಬಳಿ ಕೃತಕ ನೆರೆ ಸೃಷ್ಟಿಯಾಗಿದೆ. ಮಲ್ಪೆಯಿಂದ ಉಡುಪಿ ಮೂಲಕ ಮಣಿಪಾಲದ ಮೇಲೆ ಹಾದು ಹೋಗುವ ಹೆದ್ದಾರಿಯಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಆತ್ರಾಡಿಯ ಮನೆಗಳಿಗೆ ನೀರು ನುಗ್ಗಿದೆ. ಸರಿಯಾದ ಒಳಚರಂಡಿ ವ್ಯವಸ್ಥೆ ನಿರ್ಮಿಸಿದ ಹಿನ್ನೆಲೆಯಲ್ಲಿ ಚರಂಡಿ ನೀರು ನುಗ್ಗಿ ಈ ಸಮಸ್ಯೆ ಸೃಷ್ಟಿಯಾಗಿದೆ.

ಶಿರೂರು ಗುಡ್ಡ ಕುಸಿತ; ನಿಂತಲ್ಲೇ ನಿಂತ ಟ್ರಕ್‌ಗಳು

ಅಂಕೋಲಾ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಹಿನ್ನೆಲೆ, ಟ್ರಕ್ ಚಾಲಕರು ಕಂಗಾಲಾಗಿದ್ದಾರೆ. ಉಡುಪಿ ಜಿಲ್ಲೆಯ ಶಿರೂರು ಟೋಲ್ ಗೇಟ್‌ನಲ್ಲಿ ಕಳೆದ ಮೂರು ದಿನಗಳಿಂದ ಟ್ರಕ್‌ಗಳು ನಿಂತಲ್ಲೇ ನಿಲ್ಲುವಂತಾಗಿದೆ. ಹೆದ್ದಾರಿ ಮೇಲೆ ಬಿದ್ದಿರುವ ಮಣ್ಣು ತೆರವಾಗದ ಕಾರಣ ಸಂಪರ್ಕ ಬಂದ್ ಆಗಿದೆ. ಮಂಗಳೂರಿನಿಂದ ಎಲ್‌ಪಿಜಿ ಸಾಗಿಸುತ್ತಿದ್ದ ಟ್ಯಾಂಕರ್‌ಗಳು ಶಿರೂರು ಟೋಲ್ ನಲ್ಲಿಯೇ ಸ್ಟ್ರಕ್ ಆಗಿವೆ. ಸುಮಾರು 120 ಅಧಿಕ ಸರಕು ಮತ್ತು ಗ್ಯಾಸ್ ಟ್ಯಾಂಕರ್‌ಗಳು ಟೋಲ್ ಬಳಿ ಮೊಕ್ಕಾಂ ಹೂಡಿವೆ. ಮೂರು ದಿನಗಳಿಂದ ಟ್ರಕ್‌ಗಳಲ್ಲೆ ಅಡುಗೆ ಮನೆ ಮಾಡಿಕೊಂಡು, ಅಲ್ಲೆ ಊಟ ಅಲ್ಲೆ ನಿದ್ರೆ ಮಾಡುತ್ತಿದ್ದಾರೆ. ಹೆದ್ದಾರಿ ಮೇಲೆ ಬಿದ್ದಿರುವ ಮಣ್ಣು ತೆರವಾಗದೆ ಇಲ್ಲಿಂದ ತೆರಳಾಗದ ಸ್ಥಿತಿಯಲ್ಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain News: ಮಳೆ ಅನಾಹುತ; ಮನೆಗೋಡೆ ಕುಸಿದು ಇಬ್ಬರು ಕಂದಮ್ಮಗಳು ಸೇರಿ 3 ಸಾವು

Karnataka Rain News: ಅಮೂಲ್ಯ ಹಾಗೂ ಅನನ್ಯ ಮೃತಪಟ್ಟ ಎರಡು 2 ವರ್ಷದ ಅವಳಿಜವಳಿ ಕಂದಮ್ಮಗಳಾಗಿವೆ. ಇನ್ನೊಬ್ಬ ಮಹಿಳೆ ಚೆನ್ನಮ್ಮ (30) ಕೂಡ ಮೃತಪಟ್ಟಿದ್ದಾರೆ. ಮನೆಯೊಳಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

VISTARANEWS.COM


on

haveri karnataka rain news
Koo

ಹಾವೇರಿ: ರಾಜ್ಯದಲ್ಲಿ ಮಳೆ ಅನಾಹುತ (Karnataka Rain News) ಸೃಷ್ಟಿಸುತ್ತಿದೆ. ಹಾವೇರಿಯಲ್ಲಿ (Haveri news) ಮಳೆಗೆ ಒದ್ದೆಯಾದ ಮನೆಗೋಡೆ ಕುಸಿದು (Home collapse) ಎರಡು ಕಂದಮ್ಮಗಳು ಹಾಗೂ ಒಬ್ಬ ಮಹಿಳೆ (Rain deaths) ಸಾವಿಗೀಡಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ದುರಂತ ಸಂಭವಿಸಿದೆ.

ಅಮೂಲ್ಯ ಹಾಗೂ ಅನನ್ಯ ಮೃತಪಟ್ಟ ಎರಡು 2 ವರ್ಷದ ಅವಳಿಜವಳಿ ಕಂದಮ್ಮಗಳಾಗಿವೆ. ಇನ್ನೊಬ್ಬ ಮಹಿಳೆ ಚೆನ್ನಮ್ಮ (30) ಕೂಡ ಮೃತಪಟ್ಟಿದ್ದಾರೆ. ಮನೆಯೊಳಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ರಕ್ಷಣೆಗೆ ಧಾವಿಸಿದ್ದು, ಮೃತ ದೇಹಗಳನ್ನ ಹೊರ ತೆಗೆದು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಗಾಯಾಳುಗಳು ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಭೂಕುಸಿತ; ಶಿರಾಡಿ ಘಾಟ್​ನಲ್ಲಿ ಸಂಚಾರ ನಿಷೇಧ ​; ಬೆಂಗಳೂರು- ಮಂಗಳೂರು ಸಂಪರ್ಕ ಬಹುತೇಕ ಕಟ್​

ಹಾಸನ: ಹಾಸನ ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಘಾಟ್​ ಪ್ರದೇಶದ ಹಲವಡೆ ಗುಡ್ಡ ಕುಸಿತದ ಪ್ರಕಣಗಳು ಉಂಟಾಗುತ್ತಿವೆ. ಅಂತೆಯೇ ಶಿರಾಡಿ ಘಾಟ್​ನಲ್ಲಿ (Shiradi Ghat) ಗುಡ್ಡ ಕುಸಿತ ಸಂಭವಿಸಲಿದೆ ಎಂಬ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಮೂಲಕ ಪ್ರಯಾಣವನ್ನು ನಿಷೇಧ ಮಾಡ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದನ್ನು ಹೊರತುಪಡಿಸಿದರೆ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 278ರಲ್ಲಿ ರಾತ್ರಿ ವೇಳೆ ವಾಹನಗಳು ಸಾಗದಂತೆ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಡಿಕೇರಿ ಮೂಲಕ ಸಾಗುವ ಈ ರಸ್ತೆಯೂ ಬಂದ್ ಆಗಿರುವ ಕಾರಣ ಮಂಗಳೂರು ಮತ್ತು ಬೆಂಗಳೂರು (Bangalore To Mangalore) ನಡುವಿನ ಸಂಪರ್ಕ ಬಹುತೇಕ ಕಡಿತಗೊಂಡಿದೆ. ಇನ್ನು ಚಾರ್ಮಾಡಿ ಘಾಟ್ ಒಂದೇ ಉಳಿದಿದ್ದು ಅದರ ಮೇಲೆ ವಾಹನ ದಟ್ಟಣೆ ಜಾಸ್ತಿಯಾಗಲಿದೆ. ಆ ರಸ್ತೆಯಲ್ಲೂ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕಣಗಳು ಸಂಭವಿಸುತ್ತಿರುವುದರಿಂದ ಸಂಚಾರ ಸುರಕ್ಷಿತವಲ್ಲ.

ಶಿರಾಡಿಘಾಟ್ ನ ದೊಡ್ಡತಪ್ಪು ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿತ್ತು. ಅಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆಗಳಿವೆ. ಜುಲೈ 18ರಿಂದ ಅನ್ವಯವಾಗುವಂತೆ ಈ ರಸ್ತೆಯ ಮೂಲಕ ಪ್ರಯಾಣ ಮಾಡದಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ರಸ್ತೆ ದುರಸ್ತಿ ಆಗುವ ತನಕ ಎಲ್ಲ ರೀತಿಯ ವಾಹನ ಸಂಚಾರ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಿರಂತರ ಮಳೆ ಸುರಿಯುತ್ತಿರುವ ಕಾರಣ ಮತ್ತಷ್ಟು ಭೂ ಕುಸಿತದ ಉಂಟಾಗುವ ಸಾಧ್ಯತೆಗಳಿವೆ. ಮುಂಜಾಗ್ರತಾ ಕ್ರಮವಾಗಿ ಸಂಚಾರ ನಿಷೇಧಿಸಿ ಡಿಸಿ ಸಿ ಸತ್ಯಭಾಮ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಿಂದ -ಮಂಗಳೂರಿಗೆ ತೆರಳುವ ವಾಹನಗಳು ಚಾರ್ಮಾಡಿ ಘಾಟ್ ಮೂಲಕ ಅವರ ಸೂಚನೆ ನೀಡಿದ್ದಾರೆ.

ಸಂಪಾಜೆ ಘಾಟಿಯೂ ಬಂದ್‌

ಮಡಿಕೇರಿ: ಕೊಡಗು ಸೇರಿದಂತೆ ರಾಜ್ಯದ ಎಲ್ಲೆಡೆ ಸತತ ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದೆ (Rain News). ಹೀಗಾಗಿ ಘಟ್ಟ ಪ್ರದೇಶಗಳಲ್ಲಿ ಗುಡ್ಡ ಕುಸಿತ ಪ್ರಕರಣಗಳು ಸಂಭವಿಸುತ್ತಿವೆ. ಗುಡ್ಡದ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳ ಆತಂಕ ಇದರಿಂದಾಗಿ ಹೆಚ್ಚಾಗಿದೆ. ಇದೇ ವೇಳೆ ಕರ್ನಾಟಕದ ಪ್ರಮುಖ ಘಾಟಿಗಳಲ್ಲಿ ಹಾದು ಹೋಗಿರುವ ರಸ್ತೆ ಇಕ್ಕೆಲಗಳಲ್ಲಿ ಮಣ್ಣು ಕುಸಿತ ಉಂಟಾಗುತ್ತಿರುವ ಕಾರಣ ಮಡಿಕೇರಿ ಮೂಲಕ ಮಂಗಳೂರಿಗೆ ಸಂಪರ್ಕ ಕಲ್ಪಿಸುವ 275 ಬಂದ್ ಮಾಡಲಾಗಿದೆ.

ಮಡಿಕೇರಿ ಮಂಗಳೂರು ರಸ್ತೆಯ ಕರ್ತೋಜಿ ಬಳಿ ಗುಡ್ಡ ಕುಸಿಯುವ ಭೀತಿ ಉಂಟಾಗಿದ್ದು, ಯಾವುದೇ ಕ್ಷಣದಲ್ಲಿ ಗುಡ್ಡ ಜಾರಿ ರಸ್ತೆಗೆ ಬರುವ ಸಾಧ್ಯತೆಗಳಿವೆ. ಹೀಗಾಗಿ ಜುಲೈ 18ರಿಂದ 22ರವರೆಗೆ ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿ 275 ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಗುರುವಾರದಿಂದ 5 ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6 ಗಂಟೆವರೆಗೆ ಅಧಿಕಾರಿಗಳು ರಸ್ತೆ ಪ್ರಯಾಣಕ್ಕೆ ನಿರ್ಬಂಧ ಹೇರಿದ್ದಾರೆ ಕರ್ತವ್ಯ ನಿರತ ಅಧಿಕಾರಿಗಳ ವಾಹನ ಹೊರತುಪಡಿಸಿ ಉಳಿದ ವಾಹನ ಸಂಚಾರ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
Sexual Abuse
Latest5 mins ago

Sexual Abuse: ಬಾಲಕಿ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ; ವಿಡಿಯೊ ಮನೆಗೇ ಕಳಿಸಿದ ದುಷ್ಟರು

Actor Darshan
ಕರ್ನಾಟಕ50 mins ago

Actor Darshan: ದರ್ಶನ್‌ಗಿಲ್ಲ ಮನೆಯೂಟ ತಿನ್ನೋ ಭಾಗ್ಯ; ಅರ್ಜಿ ವಿಚಾರಣೆ ಜು.29ಕ್ಕೆ ಮುಂದೂಡಿಕೆ

Keshav Prasad Maurya
ದೇಶ60 mins ago

Keshav Prasad Maurya: ʼಮಾನ್ಸೂನ್‌ ಆಫರ್‌ʼ ಕೊಟ್ಟ ಅಖಿಲೇಶ್‌ ಯಾದವ್‌ಗೆ ಬಿಜೆಪಿ ಟಾಂಗ್‌

karnataka Weather Forecast
ಮಳೆ1 hour ago

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ವಾರಾಂತ್ಯದಲ್ಲಿ ಭಾರಿ ಮಳೆ ಎಚ್ಚರಿಕೆ, ಶಾಲೆಗಳಿಗೆ ರಜೆ ಘೋಷಣೆ

Salman Khan-Akshay Kumar
Latest1 hour ago

Salman Khan-Akshay Kumar: ಸಲ್ಮಾನ್ ಖಾನ್ – ಅಕ್ಷಯ್ ಕುಮಾರ್ ಜೋಡಿಯಾಗಿ ನಟಿಸಿದ 4 ಅತ್ಯುತ್ತಮ ಚಿತ್ರಗಳಿವು!

Bengaluru power cut July 20th power outage in many parts of Bengaluru
ಬೆಂಗಳೂರು1 hour ago

Bengaluru Power Cut: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ!

Congress creates colorful stories only during elections Minister Pralhad Joshi alleges
ಕರ್ನಾಟಕ1 hour ago

Pralhad Joshi: ಚುನಾವಣೆ ವೇಳೆ ಮಾತ್ರ ಕಾಂಗ್ರೆಸ್ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ: ಪ್ರಲ್ಹಾದ್‌ ಜೋಶಿ

Natasha ponawala jeweled kurta
ಫ್ಯಾಷನ್1 hour ago

Natasha ponawala jewelled kurta: ರಿಯಲ್‌ ಜ್ಯುವೆಲ್ಡ್ ಕುರ್ತಾ ಧರಿಸಿದ್ದ ಏಕೈಕ ಫ್ಯಾಷನ್‌ ಐಕಾನ್‌ ನತಾಶಾರ ‘ಮೊಗಲ್‌ ರಾಣಿ’ ಲುಕ್‌!

Kubusa Kannada film release on 26th July
ಕರ್ನಾಟಕ1 hour ago

Kannada New Movie: ಜು.26ರಂದು ’ಕುಬುಸʼ ಚಿತ್ರ ರಾಜ್ಯಾದ್ಯಂತ ಬಿಡುಗಡೆ

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ 117 ಭಾರತೀಯ ಕ್ರೀಡಾಪಟುಗಳ ಸಂಪೂರ್ಣ ವಿವರ ಇಲ್ಲಿದೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ7 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌