Karnataka Rain : ಭಾರಿ ಮಳೆಗೆ ಮುಂದುವರಿದ ಸಾವು-ನೋವು; ಮನೆ ಗೋಡೆ ಕುಸಿದು ವ್ಯಕ್ತಿ ಸಾವು - Vistara News

ಮಳೆ

Karnataka Rain : ಭಾರಿ ಮಳೆಗೆ ಮುಂದುವರಿದ ಸಾವು-ನೋವು; ಮನೆ ಗೋಡೆ ಕುಸಿದು ವ್ಯಕ್ತಿ ಸಾವು

Karnataka Rain : ವ್ಯಾಪಕ ಮಳೆಯಿಂದ ಸಾವು-ನೋವು ಮುಂದುವರಿದಿದ್ದು, ಚಿಕ್ಕೋಡಿಯಲ್ಲಿ ಮನೆ ಗೋಡೆ ಕುಸಿದು ವ್ಯಕ್ತಿಯೊರ್ವ ಮೃತಪಟ್ಟಿದ್ದಾರೆ. ಹಾಗಾದರೆ ಯಾವ್ಯಾವ ಜಿಲ್ಲೆಯಲ್ಲಿ ಏನೇನು ಅನಾಹುತ ಸಂಭವಿಸಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

karnataka Rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕೋಡಿ: ಶನಿವಾರ ರಾತ್ರಿಯಿಡಿ ಸುರಿದ ಭಾರಿ ಮಳೆಗೆ (Karnataka Rain) ಮನೆ ಗೋಡೆ ಕುಸಿದು ವ್ಯಕ್ತಿಯೊರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕೋಡಿಯ ನಿಪ್ಪಾಣಿ ನಗರದ ಜತ್ರಾಟ್ ವೇಸ್‌ನಲ್ಲಿ ಗೋಡೆ ಕುಸಿದು ತಿರುಪತಿ ಹತ್ಕರ (45) ಎಂಬುವವರು ಮೃತಪಟ್ಟಿದ್ದಾರೆ.

ತಿರುಪತಿ ತಗಡಿನ ಶೆಡ್‌ನಲ್ಲಿ ವಾಸವಾಗಿದ್ದರು. ಊಟ ಮುಗಿಸಿ ನಿದ್ರೆ ಜಾರಿದಾಗ ತಡರಾತ್ರಿ 2:30ರ ಸುಮಾರು ಪಕ್ಕದ ಗೋಡೆ ಕುಸಿದಿದೆ. ಈ ವೇಳೆ ಗಂಭೀರ ಗಾಯಗೊಂಡ ತಿರುಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ತಹಸೀಲ್ದಾರ್‌, ಉಪ ವಿಭಾಗಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಪ್ಪಾಣಿ ಬಸವೇಶ್ವರ ಚೌಕ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

ಹಾವೇರಿಯಲ್ಲೂ ಕುಸಿದು ಬಿದ್ದ ಮನೆ

ಹಾವೇರಿ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮನೆಯೊಂದು ಕುಸಿದು ಬಿದ್ದಿದೆ. ರಾಣೇಬೆನ್ನೂರ ತಾಲೂಕಿನ ನೂಕಾಪುರ ಗ್ರಾಮದಲ್ಲಿ ರುದ್ರಪ್ಪ ಚೌವ್ಹಾಣ್ ಎನ್ನುವವರಿಗೆ ಸೇರಿದ ಮನೆ ಕುಸಿದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನೂ ರುದ್ರಪ್ಪ ಮನೆ ಕಳೆದುಕೊಂಡು ಕಂಗಲಾಗಿದ್ದಾರೆ.

ಚಿಕ್ಕಮಗಳೂರಲ್ಲಿ ನೆಲಕಚ್ಚುತ್ತಿವೆ ಮನೆಗಳು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಮನೆಗಳು ಕುಸಿಯುತ್ತಿವೆ. ಭಾರೀ ಗಾಳಿ, ಮಳೆಗೆ ಮನೆ ಗೋಡೆ ಕುಸಿದು, ಚಾವಣೆ ನೆಲಕ್ಕೆ ಕುಸಿಯುತ್ತಿದೆ. ದಿನ್ಯನಿತ್ಯ ಬಳಸುವ ಅಗತ್ಯವಸ್ತುಗಳು ಮಣ್ಣು ಪಾಲಾಗುತ್ತಿವೆ. ಹಳುವಳ್ಳಿ ಗ್ರಾಮದ ತಾರಿಕೊಂಡ ಉಮಾ ರಮೇಶ್ ಎಂಬುವವರ ಮನೆಗೆ ಹಾನಿಯಾಗಿದೆ. ಮನೆ‌ ಕುಸಿತದಿಂದ ಕಂಗಾಲಾಗಿರುವ ಉಮಾ ರಮೇಶ್ ಕುಟುಂಬದವರು ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸದ್ಯ ಮನೆ ಇಲ್ಲದೆ ಕೊಟ್ಟಿಗೆಯಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: Drowned in water : ಉಕ್ಕಿ ಹರಿಯುತ್ತಿದ್ದ ತುಂಗಭದ್ರ ನದಿಯಲ್ಲಿ ಕೊಚ್ಚಿ ಹೋದ ಯುವಕ

ಪ್ರವಾಹದ ಎಚ್ಚರಿಕೆ

ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಂದ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕೆ.ಆರ್.ಎಸ್ ಜಲಾಶಯದಿಂದ 50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ನದಿಯ ತಗ್ಗು ಪ್ರದೇಶ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಾನಗಳಿಗೆ ತೆರಳಲು ಸೂಚನೆ ನೀಡಿದ್ದಾರೆ.

ಮೈದುಂಬಿ ಹರಿಯುತ್ತಿರುವ ತುಂಗಾಭದ್ರಾ

ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದಾಗಿ ದಾವಣಗೆರೆಯ ಹರಿಹರದ ಬಳಿ ತುಂಗಾಭದ್ರ ನದಿ ಮೈದುಂಬಿ ಹರಿಯುತ್ತಿದೆ. ತುಂಗಾ ಜಲಾಶಯದಿಂದ 70 ಸಾವಿರ ಕ್ಯೂಸೆಕ್ ನೀರು ಹೊರಬಿಟ್ಟ ಹಿನ್ನೆಲೆಯಲ್ಲಿ ಹರಿಹರ ಭಾಗದಲ್ಲಿ ಮೈದುಂಬಿ ಹರಿಯುತ್ತಿದೆ. ತುಂಗಾ ಆರತಿ ಮಂಟಪದ ಮೆಟ್ಟಿಲು ಸಂಪೂರ್ಣ ಜಲಾವೃತಗೊಂಡಿದೆ. ನೀರಿನ ಮಟ್ಟ 12 ರಿಂದ 13 ಮೀಟರ್ ಏರಿಕೆಯಾದರೆ ಜಿಲ್ಲೆಯ 38 ಗ್ರಾಮಗಳು ಮುಳುಗಡೆ ಆಗುವ ಸಾಧ್ಯತೆ ದೆ. ಹೀಗಾಗಿ ಜಿಲ್ಲೆಯ ಹೊನ್ನಾಳಿಯ ಬಾಲರಾಜ್ ಘಾಟ್, ಹರಿಹರದ ಗಂಗಾ ನಗರದಲ್ಲಿ ಆರೈಕೆ ಕೇಂದ್ರ ತೆರೆಯಲು ಜಿಲ್ಲಾಡಳಿತದಿಂದ ಸೂಚನೆ ನೀಡಿದೆ. ರಾಘವೇಂದ್ರ ಮಠದ ಹಿಂಬದಿಯ ಪೂಜಾ ಮಂಟಪ ಜಲಾವೃತವಾಗುವ ಸಾಧ್ಯತೆ ಇದೆ. ಇನ್ನೂ ಮಹಿಳೆಯರು ತುಂಗಭದ್ರಾ ನದಿಗೆ ಗಂಗಾ ಪೂಜಾ ಮಾಡುತ್ತಿದ್ದಾರೆ. ಈಗಾಗಲೇ ಹರಿಹರದ ಗಂಗಾ ನಗರದ ಮೂವತ್ತಕ್ಕೂ ಅಧಿಕ ಮನೆಗಳು ಮುಳುಗಡೆ ಆಗುವ ಸಾಧ್ಯತೆ ಇದ್ದು, ಗಂಗಾ ನಗರ ನಿವಾಸಿಗಳಿಗೆ ಕಾಳಜಿ ಕೇಂದ್ರವನ್ನು ತೆರೆಯಲಾಗಿದೆ.

ಜಮೀನಿಗೆ ನುಗ್ಗಿದ ನೀರು

ಕಾಲುವೆ ನೀರು ಜಮೀನಿಗೆ ನುಗ್ಗಿ ಬೆಳೆ ಜಲಾವೃತಗೊಂಡಿದೆ. ಕಾಲುವೆ ಸಮರ್ಪಕವಾಗಿ ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ ಕಾಲುವೆಗೆ ನೀರು ಬಿಟ್ಟಿರುವ ವೇಳೆ ಜಮೀನಿಗೆ ನುಗ್ಗಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದ ನಾಗಯ್ಯ ಹಿರೇಮಠ ಎಂಬುವರ ಜಮೀನಿಗೆ ಕಾಲುವೆ ನೀರು ನುಗ್ಗಿದೆ. 8 ಎಕರೆ ಜಮೀನಿನಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಿದ್ದ ರೈತ ಕಂಗಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಹಾಸನ

HD Kumaraswamy: ಸಮಯ ಬಂದಾಗ ಮಿಲಿಟರಿಯನ್ನೂ ಕರೆ ತರುತ್ತೇವೆ; ಡಿಕೆಶಿಗೆ ತಿರುಗೇಟು ಕೊಟ್ಟ ಎಚ್‌ಡಿಕೆ

HD Kumaraswamy: ʼʼನಾನು ಅಂಕೋಲಾಕ್ಕೆ ಭೇಟಿ ನೀಡಿದ ವಿಚಾರ ಮುಂದಿಟ್ಟುಕೊಂಡು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರು, ಕುಮಾರಸ್ವಾಮಿ ಇಲ್ಲಿ ಏಕೆ ಬರ್ತಾರೆ, ಮಿಲಿಟರಿ ಕರೆದುಕೊಂಡು ಬಂದಿದ್ದಾರಾ? ಎಂದು ಪ್ರಶ್ನಿಸಿದ್ದಾರೆ. ಅವರು ಏಕೆ ಆ ರೀತಿ ಹೇಳಿಕೆ ಕೊಟ್ಟರು ಅಂತ ಯೋಚನೆ ಮಾಡಿದೆ. ಈ ರಾಜ್ಯದಲ್ಲಿ ನಡೆಯುತ್ತಿರುವ ದರೋಡೆಯನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎಂದಿದ್ದಾರೆ. ಅದಕ್ಕೊಂದು ಕಾಲ ಬರುತ್ತೆ, ಆಗ ಕರೆದುಕೊಂಡು ಬರೋಣʼʼ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದರು.

VISTARANEWS.COM


on

HD Kumaraswamy
Koo

ಹಾಸನ: ʼʼನಾನು ಅಂಕೋಲಾಕ್ಕೆ ಭೇಟಿ ನೀಡಿದ ವಿಚಾರ ಮುಂದಿಟ್ಟುಕೊಂಡು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರು, ಕುಮಾರಸ್ವಾಮಿ ಇಲ್ಲಿ ಏಕೆ ಬರ್ತಾರೆ, ಮಿಲಿಟರಿ ಕರೆದುಕೊಂಡು ಬಂದಿದ್ದಾರಾ? ಎಂದು ಪ್ರಶ್ನಿಸಿದ್ದಾರೆ. ಅವರು ಏಕೆ ಆ ರೀತಿ ಹೇಳಿಕೆ ಕೊಟ್ಟರು ಅಂತ ಯೋಚನೆ ಮಾಡಿದೆ. ಈ ರಾಜ್ಯದಲ್ಲಿ ನಡೆಯುತ್ತಿರುವ ದರೋಡೆಯನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎಂದಿದ್ದಾರೆ. ಅದಕ್ಕೊಂದು ಕಾಲ ಬರುತ್ತೆ, ಆಗ ಕರೆದುಕೊಂಡು ಬರೋಣʼʼ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ತಿರುಗೇಟು ನೀಡಿದರು.

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆಗೆ ಹಾಸಕ್ಕೆ ಆಗಮಿಸಿದ ಅವರು ಕಾಂಗ್ರೆಸ್‌ ಮತ್ತು ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದರು. ಶನಿವಾರ ಅಂಕೋಲಾಕ್ಕೆ ಎಚ್.ಡಿ ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಡಿಕೆಶಿ, ʼʼಮಿಲಿಟರಿ ಕರೆದುಕೊಂಡು ಇಳಿದಿದ್ದರೆ ಎಚ್‌ಡಿಕೆ ಫೀಲ್ಡಿಗೆ ಬಂದಿದ್ದಾರೆ ಅಂತ ಹೇಳಬಹುದು. ಸುಮ್ಮನೇ ವಿಸಿಟ್ ಮಾಡಿ ಬಂದರೆ ಏನಾದ್ರೂ ಆಗುತ್ತಾ? ಒಂದೇ ಗಂಟೆಯಲ್ಲಿ ನಮ್ಮ ಕ್ಯಾಬಿನೆಟ್ ಸಚಿವರನ್ನು ಅಲ್ಲಿಗೆ‌ ಓಡಿಸಿದ್ದೇವೆ. ಮಂಕಾಳ್ ವೈದ್ಯ, ಕೃಷ್ಣಬೈರೇಗೌಡ ಅಲ್ಲಿಗೆ ಹೋಗಿದ್ದರು. ಏನೇನು ಮಾಡಬೇಕೊ ಅದನ್ನು ಮಾಡಿದ್ದಾರೆ, ಅಧಿಕಾರಿಗಳಿಗೆ ಸೂಚನೆ‌ ಕೊಟ್ಟಿದ್ದಾರೆ. ನಮ್ಮ ಸರ್ಕಾರ ಏನು ಮಾಡಬೇಕೋ ಅದನ್ನು ಮಾಡುತ್ತದೆ. ಈಗ ರಾಜಕಾರಣ ಬೇಡ, ಜನರನ್ನು ಉಳಿಸಿಕೊಳ್ಳುವ ಕೆಲಸ ಮಾಡೋಣʼʼ ಎಂದು ತಿಳಿಸಿದ್ದರು.

ಎಚ್‌ಡಿಕೆ ಹೇಳಿದ್ದೇನು?

ʼʼಡಿಕೆಶಿ ಪಾಪ ಕನಕಪುರದವರು. ಬ್ರ್ಯಾಂಡ್‌ ಬೆಂಗಳೂರು ಮಾಡುತ್ತೇನೆ ಎಂದು ಹೇಳುತ್ತಾರೆ. ಇನ್ನು ಕುಮಾರಸ್ವಾಮಿ 39 ಸೀಟ್ ಗೆದ್ದರೂ ಮುಖ್ಯಮಂತ್ರಿ ಮಾಡಿದ್ವಿ, ದೇವೇಗೌಡರು 16 ಸೀಟ್ ಗೆದ್ದರು ಪ್ರಧಾನಮಂತ್ರಿ ಮಾಡಿದ್ವು ಎಂದು ಕಾಂಗ್ರೆಸ್‌ನವರು ಹೇಳುತ್ತಾರೆ. ಅದರ ಜತೆಗೆ ಸರ್ಕಾರವನ್ನು ತೆಗೆದವರು ಯಾರು ಎನ್ನುವುದನ್ನೂ ಹೇಳಬೇಕಲ್ವಾ?ಕಾಂಗ್ರೆಸ್‌ ಮನೆ ಬಾಗಿಲಿಗೆ ನಾನು, ದೇವೇಗೌಡರು ಬಂದಿದ್ವಾ? ಅದೂ ಅಲ್ಲದೆ ದೇವೇಗೌಡರನ್ನು ಪ್ರಧಾನಮಂತ್ರಿ ಮಾಡಿದ್ದು ಕಮ್ಯೂನಿಸ್ಟ್‌ ಹಾಗೂ ಇತರರು. ಒಬ್ಬ ಕನ್ನಡಿಗನನ್ನು ತೆಗೆದವರು ಯಾರು? ನಾನು ಏನು ತಪ್ಪು ಮಾಡಿದೆ ಅಂತ ಸರ್ಕಾರ ತೆಗೆದರು?ʼʼ ಎಂದು ಎಚ್‌ಡಿಕೆ ಕಾಂಗ್ರೆಸ್‌ ಅನ್ನು ತರಾಟೆಗೆ ತೆಗೆದುಕೊಂಡರು.

ʼʼದಲಿತರು ಅಂತ ಕರೆಯಬೇಡಿ ಎಂದು ಚರ್ಚೆ ನಡೆದಿದೆ. ಅಹಿಂದ ಅಂತಾ ಎಷ್ಟು ವರ್ಷದಿಂದ ಹೆಸರು ಇಟ್ಟುಕೊಂಡಿದ್ದೀರಾ? ಅಹಿಂದ ಹೆಸರು ಇಟ್ಟುಕೊಂಡು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಅವಮಾನ ಮಾಡುತ್ತಿದ್ದೀರ. ಅವರಿಗೆ ಮೀಸಲಿಟ್ಟಿದ್ದ ಹಣ ಉಪಯೋಗಿಸಿಕೊಂಡಿದ್ದೀರಿʼʼ ಎಂದು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.

ಸಚಿವ ಮಂಕಾಳ ವೈದ್ಯಗೆ ತಿರುಗೇಟು

ಯಾವ ಸರ್ಕಾರವೂ ಹತ್ತು ಲಕ್ಷ ರೂ. ಪರಿಹಾರ ನೀಡಲು ಸಾಧ್ಯವೇ ಇಲ್ಲ ಎಂಬ ಸಚಿವ ಮಂಕಾಳ ವೈದ್ಯ ಅವರ ಹೇಳಿಕೆಗೆ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದರು. ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿ ಮಾತನಾಡಿದ ಅವರು, ʼʼಮಂಕಾಳ ವೈದ್ಯ ಅವರಿಗೆ ಸಮಯ ಸಿಕ್ಕಿದರೆ ಕೊಡುಗಿಗೆ ಭೇಟಿ ನೀಡಲಿ. ನನ್ನ ಕಾಲದಲ್ಲಿ ಹತ್ತು ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿದ್ದೇವೆ. ಒಂದು ಲಕ್ಷ ರೂ. ಪರಿಹಾರ ಕೊಟ್ಟಿದ್ದೇವೆ. ಪದಾರ್ಥ ಕೊಳ್ಳಲು ಐವತ್ತು ಸಾವಿರ ರೂ. ಕೊಟ್ಟಿದ್ದೇವೆ. ಗೊತ್ತಿಲ್ಲದೆ ಹೋದರೆ ಹೋಗಿ ನೋಡಿಕೊಂಡು ಬರಲಿʼʼ ಎಂದು ತಿಳಿಸಿದರು.

ʼʼನಾನು ಮತ್ತು ಬಿಜೆಪಿ ಅಶೋಕ್ ಒಟ್ಟಿಗೆ ಬಂದಿದ್ದೇವೆ. ಇಲ್ಲಿ ಜಿಲ್ಲಾಡಳಿತ ಸೂಕ್ಷ್ಮವಾಗಿ ನೋಡಲು ಸ್ವಲ್ಪ ಸಹಕಾರ ಕೊಟ್ಟಿದೆ. ನಾನು ಯಾರನ್ನು ಟೀಕೆ ಮಾಡಲು ಹೋಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಸ್ಪರ ವಿಶ್ವಾಸದಲ್ಲಿ ಕೆಲಸ ಮಾಡಬೇಕು. ಟೆರರಿಸ್ಟ್ ಚಟುವಟಿಕೆಗಳಿಗಿಂತಲೂ ಇಲ್ಲಿ ದರೋಡೆ ಚೆನ್ನಾಗಿ ನಡೆಯುತ್ತಿದೆ. ಇದನ್ನು ನಿಲ್ಲಿಸಲು ಮಿಲಿಟರಿ ಕರೆ ತರಲು ಡಿಕೆಶಿ ಹೇಳಿದ್ದಾರೆʼʼ ಎಂದರು.

ʼʼನನ್ನನ್ನು ನೋಡಿದರೆ ಡಿಫ್ರೆಷನ್‌ನಲ್ಲಿ‌ ಇರುವವನ ತರ ಕಾಣುತ್ತೇನಾ? ಕರ್ನಾಟಕಕ್ಕೆ ನಾನು ಬರುವುದನ್ನೇ ಸಹಿಸಲ್ಲ ಅಂದರೆ ನನ್ನಿಂದ ಏನು ನಿರೀಕ್ಷೆ ಮಾಡ್ತಾರೆ? ನಾನು ಬರಲೇಬಾರದು ಎನ್ನುವ ರೀತಿ ಹೇಳಿಕೆ ನೀಡುತ್ತಿದ್ದಾರೆ. ಸ್ಥಳ ಪರಿಶೀಲನೆ ಮಾಡುವುದು ಜನಪ್ರತಿನಿಧಿಯಾಗಿ ನನ್ನ ಧರ್ಮ. ಮಂಡ್ಯಗೆ ಹೋದರು ಬೇಡ ಅಂತಾರೆ, ಉತ್ತರ ಕರ್ನಾಟಕ ಹೋಗ್ತಿನಿ ಅಂದರೆ ಅಲ್ಲಿಗೂ ಬೇಡ ಅಂತಾರೆ. ಸದ್ಯ ಹಾಸನಕ್ಕೆ ಬರಬೇಡಿ ಅನ್ನಲಿಲ್ಲ. ನಾನು ಕರ್ನಾಟಕಕ್ಕೆ ಬರ್ತಿನಿ ಎಂದರೆ ಅವರಿಗೆ ಕೈಕಾಲು ನಡುಗುತ್ತೆʼʼ ಎಂದು ಎಚ್‌ಡಿಕೆ ವ್ಯಂಗ್ಯವಾಡಿದರು.

ಇದನ್ನೂ ಓದಿ: DK Shivakumar: ನಮ್ಮ ಅಧಿಕಾರಿಗಳು ಬಹಳ ಖದೀಮರಿದ್ದಾರೆ, ಡಿ ಗ್ರೇಡ್ ಕ್ಲರ್ಕ್‌ಗಳೆಲ್ಲಾ ಅಧೀಕ್ಷಕ, ಎಂಡಿಗಳಾಗಿದ್ದಾರೆ ಎಂದ ಡಿಕೆಶಿ

Continue Reading

ಹಾಸನ

HD Kumaraswamy: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌ಡಿಕೆ ಭೇಟಿ; ಮಳೆಯಿಂದ ಹಾನಿಯಾದ ಪ್ರದೇಶಗಳ ಪರಿಶೀಲನೆ

HD Kumaraswamy: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಎಚ್‌.ಡಿ.ಕುಮಾರಸ್ವಾಮಿ ಅವರು ಮಳೆಯಿಂದ ಹಾನಿಯಾದ ವಿವಿಧ ಪ್ರದೇಶಗಳಿಗೆ ನೀಡಿ ನೀಡಿದರು. ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಬಳಿ ಕುಸಿದಿದ್ದ ರಾಷ್ಟ್ರೀಯ ಹೆದ್ದಾರಿಯನ್ನು ಪರಿಶೀಲಿಸಿದ ಅವರು ಜತೆಗಿದ್ದ ಜಿಲ್ಲಾಧಿಕಾರಿ, ಎಸ್‌ಪಿ ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

VISTARANEWS.COM


on

HD Kumaraswamy
Koo

ಹಾಸನ: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಎಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ಮಳೆಯಿಂದ ಹಾನಿಯಾದ ವಿವಿಧ ಪ್ರದೇಶಗಳಿಗೆ ನೀಡಿ ನೀಡಿದರು. ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಬಳಿ ಕುಸಿದಿದ್ದ ರಾಷ್ಟ್ರೀಯ ಹೆದ್ದಾರಿಯನ್ನು ಪರಿಶೀಲಿಸಿದ ಅವರು ಜತೆಗಿದ್ದ ಜಿಲ್ಲಾಧಿಕಾರಿ, ಎಸ್‌ಪಿ ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

ಕುಮಾರಸ್ವಾಮಿ ಹೇಳಿದ್ದೇನು?

ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಕುಮಾರಸ್ವಾಮಿ ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ʼʼಕಳೆದ ನಾಲ್ಕೈದು ದಿನಗಳಿಂದ ಧಾರಾಕಾರವಾಗಿ ಸುರಿದ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಸಕಲೇಶಪುರದ ಜತೆಗೆ ಶಿರಾಡಿಘಾಟ್ ರಸ್ತೆಯಲ್ಲಿ ಭೂ ಕುಸಿತವಾಗಿದೆ. ಕಳಪೆ, ಅವೈಜ್ಞಾನಿಕ ಕಾಮಗಾರಿ ನಡೆದಿದೆ ಎನ್ನುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಈ ಬಗ್ಗೆ ಪರಿಶೀಲಿಸಲಾಗುವುದುʼʼ ಎಂದು ಅವರು ತಿಳಿಸಿದರು.

ʼʼಕಳೆದ ಲೋಕಸಭಾ ‌ಚುನಾವಣೆ ನಂತರ ಪ್ರಥಮ ಬಾರಿಗೆ ಹಾಸನ ಜಿಲ್ಲೆಯಲ್ಲಿ ಆಗಿರುವ ಅನಾಹುತ ನೋಡಲು ಬಂದಿದ್ದೇನೆ. ಚುನಾವಣೆ ಆಸುಪಾಸಿನಲ್ಲಿ ನಡೆದ ಕೆಲವು ಅಹಿತರಕರ ಘಟನೆಗಳಿಂದ‌ ಪಕ್ಷದ ಕಾರ್ಯಕರ್ತರಲ್ಲಿ, ಮುಖಂಡರಲ್ಲಿ ನಿರಾಸೆ ಮೂಡಿಸಿದೆ. ಹಾಸನ ಜಿಲ್ಲೆಯ ಜನತೆ ದೇವೇಗೌಡರಿಗೆ ಕೆಂಪುಕೋಟೆ ಮೇಲೆ ಬಾವುಟ ಹಾರಿಸುವ ಶಕ್ತಿ‌ ಕೊಟ್ಟಿದ್ದಾರೆ. ಅರವತ್ತು ವರ್ಷಗಳ ಏಳುಬೀಳುಗಳಲ್ಲಿ ಅವರ ರಾಜಕೀಯ ಬೆಳವಣಿಗೆಗೆ ಪ್ರಮುಖ ಪಾತ್ರ ವಹಿಸಿರುವುದು ಹಾಸನ ಜಿಲ್ಲೆಯ ಜನ. ನಮ್ಮ ಬದುಕು ಇರುವವರೆಗೂ ನಾವು ಇದನ್ನು ಮರೆಯುವುದಿಲ್ಲʼʼ ಎಂದು ಎಚ್‌ಡಿಕೆ ಭರವಸೆ ನೀಡಿದರು.

ʼʼನಾನು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ್ದೇನೆ. ಎಲ್ಲ ಮಾಹಿತಿಯನ್ನು ಕೇಂದ್ರಕ್ಕೆ ನೀಡುತ್ತೇನೆ. ಬಹಳ ದಿನಗಳಿಂದ ಈ ರಸ್ತೆಯಲ್ಲಿ ಸುರಂಗ ಮಾರ್ಗ ಆಗಬೇಕು ಎನ್ನುವ ಚರ್ಚೆಗಳಿವೆ. ಇದಕ್ಕೆ ಅರಣ್ಯ ಇಲಾಖೆಯ ತೊಡಕುಗಳಿವೆ. ಎಲ್ಲವನ್ನೂ ನಾನು ಚರ್ಚೆ ಮಾಡುತ್ತೇನೆ. ಮುಂದೆ ಹಾಸನ ಜಿಲ್ಲೆಯ ಕಾರ್ಯಕರ್ತರಿಗೆ ನೈತಿಕ ಸ್ಥೈರ್ಯ ತುಂಬಲು ಬರುತ್ತೇನೆʼʼ ಎಂದು ಕುಮಾರಸ್ವಾಮಿ ತಿಳಿಸಿದರು.

ʼʼಹಾಸನದಲ್ಲಿ ಬೃಹತ್ ಸಮಾವೇಶ ಮಾಡುವಂತೆ ಆಗ್ರಹ ಕೇಳಿ ಬಂದಿದೆ. ಕಲಾಪ ಮುಗಿದ ನಂತರ ಹಾಸನದಲ್ಲಿ ಬೃಹತ್ ಸಮಾವೇಶ ಮಾಡಲು ಯೋಚಿಸಿದ್ದೇನೆ. ರೇವಣ್ಣ ಅವರ ನೇತೃತ್ವದಲ್ಲೇ ಬೃಹತ್ ಸಮಾವೇಶ ಮಾಡುತ್ತೇವೆ. ಅವರ ಕುಟುಂಬದಲ್ಲಿ ಕೆಲವು ಸಮಸ್ಯೆಗಳಿವೆ. ಆದರೆ ರೇವಣ್ಣ ಅವರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಯಾರು ಮರೆಯುವಂತಿಲ್ಲ. ಎಲ್ಲರಿಗಿಂತ ಒಂದು ಹೆಜ್ಜೆ ಹೆಚ್ಚೇ ಅಭಿವೃದ್ಧಿ ಮಾಡಿದ್ದಾರೆ. ಬೆಂಗಳೂರಿನ ಮದರ್ ಡೈರಿ ಮೀರಿಸುವ ರೀತಿಯಲ್ಲಿ ಹಾಸನದಲ್ಲಿ ಮೆಗಾ ಡೈರಿ ನಿರ್ಮಾಣ ಮಾಡುತ್ತಿದ್ದಾರೆ. ಇಲ್ಲಿನ ರೈತರಿಗೆ ಆರ್ಥಿಕ ಶಕ್ತಿ ತುಂಬಲು ಮೆಗಾ ಡೈರಿ ಮಾಡುತ್ತಿದ್ದಾರೆ. ರೇವಣ್ಣ ಅವರ ನೇತೃತ್ವದಲ್ಲಿ ಶಾಸಕರುಗಳನ್ನೊಳಗೊಂಡು ನಾನು ಸೇರಿ ಪಕ್ಷ ಸಂಘಟನೆ ಮಾಡುತ್ತೇವೆ. ಈ ಮೂಲಕ ಜಿಲ್ಲೆಯ ಜನರ ಋಣವನ್ನು ತೀರಿಸುತ್ತೇವೆʼʼ ಎಂದು ಹೇಳಿದರು.

ಇದನ್ನೂ ಓದಿ: HD Kumaraswamy: ಪರಿಹಾರ ಕಾರ್ಯದಲ್ಲಿ ರಾಜಕಾರಣ ಮಾಡಬಾರದು; ಕುಮಾರಸ್ವಾಮಿ ಸಲಹೆ

ʼʼನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರುವ ಸಿದ್ಧತೆ ನಡೆಯುತ್ತಿದೆ. ನನಗೂ ಸಹ ಜವಾಬ್ದಾರಿ ನೀಡಿದ್ದಾರೆ. ಎರಡು ಜವಾಬ್ದಾರಿ, ಎರಡು ಸಮಿತಿ ಜತೆಗೆ ದೇಶದ ಅಭಿವೃದ್ಧಿಗೆ ಕೆಲಸ ಮಾಡುವ ಶಕ್ತಿ ಕೊಟ್ಟಿದ್ದಾರೆ. ಆದ್ದರಿಂದ ದೇಶದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆʼʼ ಎಂದು ಎಚ್‌ಡಿಕೆ ತಿಳಿಸಿದರು.

Continue Reading

ದಕ್ಷಿಣ ಕನ್ನಡ

Dinesh Gundu Rao: ಸಚಿವ ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ರದ್ದು

Dinesh Gundu Rao: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಮಂಗಳೂರು ಭೇಟಿ ರದ್ದಾಗಿದೆ. ಅವರು ಇಂದು (ಜುಲೈ 21) ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಬೇಕಿತ್ತು. ಬೆಂಗಳೂರು ಏರ್‌ಪೋರ್ಟ್‌ ರೋಡ್ ಬ್ಲಾಕ್ ಆದ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಅವರ ಜಿಲ್ಲಾ ಭೇಟಿ ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Dinesh Gundu Rao
Koo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರ ಮಂಗಳೂರು ಭೇಟಿ ರದ್ದಾಗಿದೆ. ಅವರು ಇಂದು (ಜುಲೈ 21) ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಪ್ರವಾಸ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆ (Karnataka Rain).

ಬೆಂಗಳೂರು ಏರ್‌ಪೋರ್ಟ್‌ ರೋಡ್ ಬ್ಲಾಕ್ ಆದ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಅವರ ಜಿಲ್ಲಾ ಭೇಟಿ ರದ್ದುಗೊಳಿಸಲಾಗಿದೆ. ಅವರು ಇಂದು ಅದ್ಯಪಾಡಿ, ಕೆತ್ತಿಕಲ್, ಪಾಣೆಮಂಗಳೂರು ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲನೆ ನಡೆಸಬೇಕಿತ್ತು. ಮಳೆ ಹಾನಿ, ಪರಿಹಾರ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಿಗದಿಯಾಗಿತ್ತು. ಇದಕ್ಕಾಗಿ ಸಿದ್ಧತೆಯನ್ನೂ ಕೈಗೊಳ್ಳಲಾಗಿತ್ತು. ಆದರೆ ಇದೀಗ ಡಿಢೀರ್‌ ಆಗಿ ಭೇಟಿ ರದ್ದಾಗಿದೆ.

ಉಡುಪಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಉಡುಪಿ: ಜಿಲ್ಲೆಗೆ ಕೊನೆಗೂ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗಮಿಸಿದ್ದಾರೆ. ಎರಡು ವಾರಗಳಿಂದ ಭಾರೀ ಮಳೆಗೆ ತುತ್ತಾಗಿದ್ದ ಉಡುಪಿ ಜಿಲ್ಲೆಯಲ್ಲಿ ಸದ್ಯ ಮಳೆಗೆ ಕೊಂಚ ವಿರಾಮ ಸಿಕ್ಕಿದೆ. ಎರಡು ವಾರಗಳಿಂದ ಭಾರಿ ಮಳೆಗೆ ತುತ್ತಾಗಿದ್ದ ಜಿಲ್ಲೆಗೆ ಸಚಿವೆ ಆಗಮಿಸದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ನೆರೆ, ಪ್ರವಾಹ ಕಡಿಮೆ ಆಗುತ್ತಲೇ‌ ಉಡುಪಿಗೆ ಸಚಿವೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟುನಿಟ್ಟಿನ ಸೂಚನೆ ಬೆನ್ನಲ್ಲೇ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ. ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಡುಪಿ ನಗರ ಸೇರಿದಂತೆ ಹಲವೆಡೆ ಹಾನಿಯಾಗಿವೆ. ಬೈಂದೂರು ತಾಲೂಕಿನಲ್ಲಿ ಸಾವಿರಕ್ಕೂ ಅಧಿಕ ಮರಗಳು ಧರಶಾಹಿಯಾಗಿವೆ. ನದಿಗಳು ಅಪಾಯ ಮಟ್ಟವನ್ನು ಮೀರಿ ಕೃತಕ ನೆರೆ ಸೃಷ್ಟಿಯಾಗಿದೆ. ಕಡಲ್ಕೊರೆತವೂ ತೀವ್ರವಾಗಿದೆ. ಇದರಿಂದ ನೂರಾರು ಮಂದಿ ತೊಂದರೆಗೆ ಒಳಗಾಗಿದ್ದಾರೆ.

ಬೈಂದೂರು ಭಾಗದಲ್ಲಿ ಸೇತುವೆಗಳಿಲ್ಲದೇ ಹಲವು ರೀತಿಯ ಸಂಕಷ್ಟ ಎದುರಾಗಿದೆ. ಪಡುಬಿದ್ರಿ, ಮಲ್ಪೆ ಕಡಲ್ಕೊರೆತಕ್ಕೆ ಸಿಕ್ಕಿ ಅಪಾರ ಪ್ರಮಾಣದಲ್ಲಿ ಹಾನಿಗೊಳಗಾಗಿದೆ. ಇಷ್ಟಾಗಿಯೂ ಉಸ್ತುವಾರಿ ಸಚಿವೆ ಭೇಟಿಯಾಗದಿರುವ ಬಗ್ಗೆ ಭಾರಿ ವಿರೋಧ ಕೇಳಿ ಬಂದಿತ್ತು. ಇದೀಗ ಕೊನೆಗೂ ಇಂದು ಉಡುಪಿ ಜಿಲ್ಲೆಗೆ ಸಚಿವೆ ಆಗಮಿಸಿದ್ದಾರೆ.

ಕೃಷಿ ಭೂಮಿಗೆ ಹಾನಿ

ವಾರಗಳ ಕಾಲ ನಿರಂತರವಾಗಿ ಸುರಿದ ಭಾರಿ ಮಳೆ ಹಿನ್ನೆಲೆಯಲ್ಲಿ ಬ್ರಹ್ಮಾವರ ತಾಲೂಕಿನ ಕೃಷಿ ಭೂಮಿಗಳು ಜಲಾವೃತಗೊಂಡಿವೆ. ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಭತ್ತದ ಗದ್ದೆಗಳು ನೀರಿನಲ್ಲಿ ಕೊಳೆಯುತ್ತಿವೆ. ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ, ಪಾರಂಪಳ್ಳಿ, ಗುಂಡ್ಮಿ ಭಾಗದಲ್ಲಿ ನೆರೆ ಕಾಣಿಸಿಕೊಂಡಿದೆ. ಸದ್ಯ ಮಳೆ ಕಡಿಮೆಯಾಗಿರುವ ಹಿನ್ನಲೆಯಲ್ಲಿ ನೀರಿನ ಮಟ್ಟ ನಿಧಾನವಾಗಿ ಇಳಿಯುತ್ತಿರುವುದು ಸ್ಥಳೀಯರಿಗೆ ಸಮಾಧಾನ ತಂದಿತ್ತಿದೆ.

ಶಿರೂರು ಗುಡ್ಡಕುಸಿತ ಪ್ರಕರಣ; ಇಂದು ಮುಖ್ಯಮಂತ್ರಿ ಭೇಟಿ

ಕಾರವಾರ: ಅಂಕೋಲಾ ಶಿರೂರು ಗುಡ್ಡ ಕುಸಿದ ಜಾಗಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಭೂ ಕುಸಿತದಿಂದ ದುರಂತ ಸಂಭವಿಸಿದ ಸ್ಥಳ ಪರಿಶೀಲನೆ ನಡೆಸಲಿರುವ ಸಿದ್ಧರಾಮಯ್ಯ, ಮೃತಪಟ್ಟ ಸಂತ್ರಸ್ತರ ಕುಟುಂಬಗಳನ್ನ ಭೇಟಿಯಾಗಲಿದ್ದಾರೆ. ಸದ್ಯ 6ನೇ ದಿನಕ್ಕೆ ಮಣ್ಣು ತೆರವು ಕಾರ್ಯ ಕಾಲಿಟ್ಟಿದೆ. ಮಳೆ ಕೊಂಚ ಕಡಿಮೆಯಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಭರದಿಂದ ಸಾಗಿದೆ. 6 ಹಿಟಾಚಿಗಳ ಮೂಲಕ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ಒಂದು ಬದಿ ರಸ್ತೆ ಮಣ್ಣು ತೆರವು ಕಾರ್ಯ ಬಹುತೇಕ ಪೂರ್ಣಗೊಂಡಿದೆ.

ಇದನ್ನೂ ಓದಿ: Karnataka Rain: ರಾಜ್ಯದ ವಿವಿಧೆಡೆ ಮುಂದುವರಿದ ಮಳೆಯ ಅಬ್ಬರ; ಮನೆ ಕುಸಿದು ಬಿದ್ದು ನಾಲ್ವರಿಗೆ ಗಾಯ

Continue Reading

ಮಳೆ

Karnataka Rain: ರಾಜ್ಯದ ವಿವಿಧೆಡೆ ಮುಂದುವರಿದ ಮಳೆಯ ಅಬ್ಬರ; ಮನೆ ಕುಸಿದು ಬಿದ್ದು ನಾಲ್ವರಿಗೆ ಗಾಯ

Karnataka Rain: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದೆ. ಜತೆಗೆ ಅಲ್ಲಲ್ಲಿ ಅವಾಂತರವೂ ಸೃಷ್ಟಿಯಾಗಿದೆ. ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಿವಮೊಗ್ಗದ ಶಿಕಾರಿಪುರದಲ್ಲಿ ಮನೆ ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.

VISTARANEWS.COM


on

Karnataka Rain
Koo

ಶಿವಮೊಗ್ಗ: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದೆ. ಜತೆಗೆ ಅಲ್ಲಲ್ಲಿ ಅವಾಂತರವೂ ಸೃಷ್ಟಿಯಾಗಿದೆ. ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಿವಮೊಗ್ಗದ ಶಿಕಾರಿಪುರದಲ್ಲಿ ಮನೆ ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ (Karnataka Rain).

ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಮಳೆಯಿಂದಾಗಿ ಶಿವಮೂರ್ತಿ ಎಂಬುವರಿಗೆ ಸೇರಿದ ಮನೆ ಕುಸಿದು ಬಿದ್ದು ನಾಲ್ಕು ಮಂದಿಗೆಗೆ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೂರ್ತಿ, ಪತ್ನಿ ಸೇರಿ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬಿ.ವೈ.ರಾಘವೇಂದ್ರ ಆರೋಗ್ಯ ವಿಚಾರಿಸಿದ್ದಾರೆ.

ಹಾಸನಕ್ಕೆ ಇಂದು ಕುಮಾರಸ್ವಾಮಿ, ಆರ್‌.ಅಶೋಕ್‌ ಭೇಟಿ

ಹಾಸನ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇಂದು (ಜುಲೈ 21) ಹಾಸನಕ್ಕೆ ಭೇಟಿ ನೀಡಿ ಮಳೆ ಹಾನಿಯನ್ನು ಪರಿಶೀಲಿಸಲಿದ್ದಾರೆ. ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌.ಡಿ.ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಲೋಕಸಭಾ ಚುನಾವಣೆ ನಂತರ‌ ಮೊದಲ ಬಾರಿಗೆ‌ ಎಚ್‌ಡಿಕೆ ತವರಿಗೆ ಆಗಮಿಸಲಿದ್ದು, ಸಕಲೇಶಪುರ‌ ತಾಲೂಕಿನ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಮಳೆಯಿಂದ ರಸ್ತೆ ಕುಸಿದಿರುವ, ಹಾನಿಯಾಗಿರುವ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ.

ಎಲ್ಲಿಗೆಲ್ಲ ಭೇಟಿ?

ಸಕಲೇಶಪುರ ತಾಲೂಕಿನ‌ ಕೊಲ್ಲಹಳ್ಳಿ, ದೊಡ್ಡತಪ್ಲು‌ ಸೇರಿದಂತೆ ಅನೇಕ ಭಾಗಗಳಿಗೆ ಎಚ್‌ಡಿಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರೀಯ ‌ಹೆದ್ದಾರಿ 75ರಲ್ಲಿ ಆಗಿರೋ ಅವಾಂತರ, ಶಿರಾಡಿ ಘಾಟ್‌ನಲ್ಲಾದ ಹಾನಿಯನ್ನು ವೀಕ್ಷಿಸಲಿದ್ದಾರೆ. ಬಳಿಕ ಮಳೆ‌ ಅನಾಹುತದ ಸಂಕಷ್ಟದಲ್ಲಿರೋ ರೈತರ ಸಮಸ್ಯೆ ಆಲಿಸಲಿದ್ದಾರೆ. ಜಿಲ್ಲೆಗೆ ಆಗಮಿಸಲಿರು ತಮ್ಮ ನಾಯಕನ್ನು ಸ್ವಾಗತಿಸಲು ಜೆಡಿಎಸ್ ಕಾರ್ಯಕರ್ತರು ಸಜ್ಜಾಗಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಆರ್.ಅಶೋಕ್ ಪ್ರವಾಸ

ಹಾಸನ ಜಿಲ್ಲೆಯಲ್ಲಿ ಇಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ಕೂಡ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಹಾಸನ ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸಕಲೇಶಪುರ ತಾಲೂಕಿನ‌ ಹಲವು ಪ್ರದೇಶಗಳಿಗೆ ತೆರಳಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಪರಿಹಾರ ಕ್ರಮದ ಬಗ್ಗೆ ಚರ್ಚಿಸಲಿರುವ ಅಶೋಕ್ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿರೋ‌ ಸ್ಥಳಗಳ ಪರಿಶೀಲನೆ ನಡೆಸಲಿದ್ದಾರೆ.

ರಸ್ತೆ ಪಕ್ಕದಲ್ಲಿಯೇ ನಿಂತ ನೂರಾರು ಲಾರಿಗಳು

ಬೆಳಗಾವಿ: ಪಶ್ಚಿಮ‌ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಶಿಥಿಲವಾಗಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಬಳಿ ಲಾರಿಗಳನ್ನು ತಡೆದು ನಿಲ್ಲಿಸಲಾಗಿದೆ. ಚೋರ್ಲಾ ಮಾರ್ಗವಾಗಿ ಬೆಳಗಾವಿಗೆ ಬರುವ ವಾಹನಗಳನ್ನು ಅಧಿಕಾರಿಗಳು ತಡೆದಿದ್ದು, ಇದರಿಂದ ಕಳೆದ 24 ಗಂಟೆಗಳಿಂದ ಸರಕು ಹೊತ್ತು ನೂರಾರು ಲಾರಿಗಳು ನಿಂತಲ್ಲಿಯೇ ನಿಂತಿವೆ. ಏಕಾಏಕಿ ಭಾರಿ ವಾಹನಗಳನ್ನು ತಡೆದಿದ್ದರಿಂದ ಲಾರಿ ಚಾಲಕರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಸ್ತೆ ಬಂದ್ ಮಾಡುವುದನ್ನು ಅಧಿಕಾರಿಗಳು ಮೊದಲೇ ಹೇಳಬೇಕಿತ್ತು. ಏಕಾಏಕಿ ಬಂದ್ ಮಾಡಿದರೆ ನಾವು ಎಲ್ಲಿಗೆ ಹೋಗಬೇಕು ಎಂದು ಚಾಲಕರು ಪ್ರಶ್ನಿಸಿದ್ದಾರೆ. ಲಾರಿಯಲ್ಲಿರುವ ಸರಕೆಲ್ಲ ಮಳೆಯಲ್ಲಿ ನೆನೆದು ಹೋಗುವ ಭೀತಿಯೂ ಚಾಲಕರನ್ನು ಕಾಡುತ್ತಿದೆ.

ಇದನ್ನೂ ಓದಿ: Karnataka Rain : ಗುಡ್ಡ ಕುಸಿತದಿಂದ ಅಂಕೋಲಾ ಹೆದ್ದಾರಿ ಬಂದ್‌; ಕೊಂಕಣ ರೈಲ್ವೆಯಿಂದ ರೈಲು ವ್ಯವಸ್ಥೆ

Continue Reading
Advertisement
IPL 2025
ಕ್ರೀಡೆ11 mins ago

IPL 2025: ರಾಹುಲ್​ ಆರ್​ಸಿಬಿಗೆ, ಪಂತ್​ ಸಿಎಸ್​ಕೆ ಸೇರ್ಪಡೆ ಖಚಿತ

nipah virus
ದೇಶ38 mins ago

Nipah Virus: ಕೇರಳದಲ್ಲಿ ನಿಫಾ ವೈರಸ್‌ ತಗುಲಿದ್ದ ಬಾಲಕ ಸಾವು

HD Kumaraswamy
ಹಾಸನ49 mins ago

HD Kumaraswamy: ಸಮಯ ಬಂದಾಗ ಮಿಲಿಟರಿಯನ್ನೂ ಕರೆ ತರುತ್ತೇವೆ; ಡಿಕೆಶಿಗೆ ತಿರುಗೇಟು ಕೊಟ್ಟ ಎಚ್‌ಡಿಕೆ

Police viral video
ಕರ್ನಾಟಕ50 mins ago

Police viral video: ಫುಲ್ ಟೈಟ್ ಆಗಿ ಬೈಕ್ ಎತ್ತೋಕೆ ಪೊಲೀಸಪ್ಪ ಒದ್ದಾಟ! ವಿಡಿಯೊ ನೋಡಿ

kalaburagi News
ಕಲಬುರಗಿ57 mins ago

Kalaburagi News : ಕಾಮಗಾರಿ ವೇಳೆ ಕಟ್ಟಡದ ಮೇಲಿಂದ ಬಿದ್ದು ಕಾರ್ಮಿಕ ಸಾವು

Guru Purnima 2024
ಕ್ರೀಡೆ1 hour ago

Guru Purnima 2024: ಭಾರತದ ಮಹೋನ್ನತ ಕ್ರೀಡಾ ತಾರೆಗಳನ್ನು ಸೃಷ್ಟಿಸಿದ 6 ‘ಗುರು’ಗಳಿವರು

Divya Vasanthamother requests darshan fans not get troll her daughter
ಸಿನಿಮಾ1 hour ago

Divya Vasantha: ನನ್ನ ಮಗಳ ಬಗ್ಗೆ ಕೆಟ್ಟದ್ದಾಗಿ ಮಾತನಾಡಿರುವುದು ದರ್ಶನ್‌ ಫ್ಯಾನ್ಸ್‌ ಎಂದು ಕಣ್ಣೀರಿಟ್ಟ ದಿವ್ಯಾ ವಸಂತ ಅಮ್ಮ!

Kedarnath Landslide
ದೇಶ2 hours ago

Kedarnath Landslide: ಕೇದಾರನಾಥದಲ್ಲಿ ಭೀಕರ ಭೂಕುಸಿತ; ಮೂವರು ಯಾತ್ರಿಕರು ದುರ್ಮರಣ

HD Kumaraswamy
ಹಾಸನ2 hours ago

HD Kumaraswamy: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌ಡಿಕೆ ಭೇಟಿ; ಮಳೆಯಿಂದ ಹಾನಿಯಾದ ಪ್ರದೇಶಗಳ ಪರಿಶೀಲನೆ

assault Case
ಬೆಂಗಳೂರು ಗ್ರಾಮಾಂತರ2 hours ago

Assault Case : ಬೈಕ್ ಗುದ್ದಿದ್ದನ್ನು ಪ್ರಶ್ನಿಸಿದಕ್ಕೆ ಡ್ರ್ಯಾಗರ್‌ನಿಂದ ಅಟ್ಯಾಕ್ ಮಾಡಿದ ಪುಡಿರೌಡಿಗಳು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌