Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು - Vistara News

ಮಳೆ

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Karnataka Rain : ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯು (Rain Effect) ಅವಾಂತವರವೇ ಸೃಷ್ಟಿಸಿದೆ. ಕಾರವಾರ ಸಮೀಪ ಮಳೆಗೆ ಮನೆಗಳಿಗೆ ಹಾವುಗಳು (snake) ನುಗ್ಗುತ್ತಿವೆ. ಮತ್ತೊಂದು ಕಡೆ ಹೊನ್ನಾವಾರ-ಬೆಂಗಳೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಗಳು ಮುಂದುವರಿದಿದೆ.

VISTARANEWS.COM


on

karnataka rain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ/ಉಡುಪಿ: ಕರ್ನಾಟಕ ಕರಾವಳಿ ಭಾಗದಲ್ಲಿ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮಳೆಯಿಂದಾಗಿ ಕಾಡಿನಿಂದ ಮನೆಗಳತ್ತ ಹಾವುಗಳು ಬರುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡ ಎಂಬಾಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿತ್ತು. ಸುಮಾರು 12 ಅಡಿ ಉದ್ದದ ಹೆಬ್ಬಾವು ಕಂಡು ಸ್ಥಳೀಯರು ಆತಂಕಕ್ಕೊಳಗಾಗಿದ್ದರು.

ಅರಣ್ಯ ಪ್ರದೇಶದ ಸಮೀಪದಲ್ಲಿ ಇದ್ದು, ಮಳೆ ನೀರಿನಲ್ಲಿ ಹರಿದು ಬಂದು ಮನೆಯ ಮೇಲೆ ಹೆಬ್ಬಾವು ಸೇರಿಕೊಂಡಿದೆ. ಬಳಿಕ ಸ್ಥಳಕ್ಕಾಗಮಿಸಿದ ಉರಗ ಪ್ರೇಮಿ ಗೋಪಾಲ್ ಸುಮಾರು ಒಂದು ಗಂಟೆ ಕಾಲ‌ ಕಾರ್ಯಾಚರಣೆ ನಡೆಸಿ ಹಾವು ಹಿಡಿದು ರಕ್ಷಣೆ ಮಾಡಿದ್ದಾರೆ.

ಭಾರಿ ಮಳೆ-ಗಾಳಿಗೆ ಕುಸಿದು ಬಿದ್ದ ಮನೆ

ಇತ್ತ ಭಾರೀ ಗಾಳಿ ಮಳೆಗೆ ಮನೆಯೊಂದು ಭಾಗಶಃ ಕುಸಿದು ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ದೊಡ್ನಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಳೆದೊಂದು ವಾರದಿಂದ ಶಿರಸಿ ಭಾಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ. ಸಂತೋಷ ಜೋಗಿ ಎಂಬುವವರ ಮನೆಯ ಮಣ್ಣಿನ ಗೋಡೆ ನೆನೆದು ಭಾಗಶಃ ಕುಸಿದು ಬಿದ್ದಿದೆ. ಪರಿಹಾರಕ್ಕಾಗಿ ಸರ್ಕಾರಕ್ಕೆ ಅಂಗಲಾಚಿದ್ದಾರೆ. ಸ್ಥಳಕ್ಕೆ ಪಿಡಿಓ ಪ್ರೀತಿ ಶೆಟ್ಟಿ, ಶಾನುಭೋಗ ಸುಕನ್ಯಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರಾವಳಿಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಭಟ್ಕಳ ತಾಲೂಕುಗಳಲ್ಲಿ ವರುಣಾರ್ಭಟ ಜೋರಾಗಿದೆ. ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಳೆ ಹೆಚ್ಚಾದರೆ ಕಾರವಾರದ ಕದ್ರಾ ಜಲಾಶಯದಿಂದ ನೀರು ಹೊರ ಬರಲಿದೆ. ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಕದ್ರಾ ಜಲಾಶಯದಲ್ಲಿ ಸುರಕ್ಷಿತ ಮಟ್ಟ ಕಾಯ್ದುಕೊಳ್ಳಲು ಒಳಹರಿವು ಆಧರಿಸಿ ನೀರು ಬಿಡುಗಡೆಗೆ ನಿರ್ಧರಿಸಲಾಗಿದೆ.

ಇದನ್ನೂ ಓದಿ: Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

ಬೆಳಗಾವಿಯ ಸಪ್ತನದಿಗಳಿಗೆ ಜೀವ ಕಳೆ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರದಿಂದಾಗಿ ಬೆಳಗಾವಿಯ ಸಪ್ತನದಿಗಳಿಗೆ ಜೀವ ಕಳೆ ಬಂದಿದೆ. ಘಟಪ್ರಭಾ ನದಿಗೆ ಒಳಹರಿವು ಹೆಚ್ಚಳದಿಂದಾಗಿ ಐತಿಹಾಸಿಕ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭತ ಸೃಷ್ಟಿಯಾಗಿದೆ. ಭಾರತದ ನಯಾಗಾರ ಫಾಲ್ಸ್ ಎಂದೇ‌ ಖ್ಯಾತವಾಗಿರುವ ಗೋಕಾಕ್ ಜಲಪಾತ, 180 ಅಡಿ ಮೇಲಿಂದ ಧುಮ್ಮಿಕ್ಕುವ ನೀರು, ಜಲಪಾತದ ರಮಣೀಯ ದೃಶ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ. ಇನ್ನೂ ಸೆಲ್ಫಿ, ಜಲಪಾತದ ಫೋಟೊ ತೆಗೆಯಲು ಜಲಪಾತದ ತುದಿಗೆ ಹೋಗಿ ಪ್ರವಾಸಿಗರು ಹುಚ್ಚಾಟದ ಕಾರಣಕ್ಕೆ ನಿಗಾ ಇಡಲು ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿ ‌ನಿಯೋಜನೆ ಮಾಡಲಾಗಿದೆ.

ತುಂಬಿ ಹರಿದ ವಾರಾಹಿ ಮತ್ತು ಕುಬ್ಬಾ ನದಿ

ಪಶ್ಚಿಮಘಟ್ಟದ ತಪ್ಪಲಲ್ಲಿ ಸುರಿದ ಭಾರೀ ಮಳೆ ಎಫೆಕ್ಟ್‌ನಿಂದಾಗಿ ಉಡುಪಿಯ ವಾರಾಹಿ ಮತ್ತು ಕುಬ್ಬಾ ನದಿ ತುಂಬಿ ಹರಿದಿದೆ. ನದಿ ತಟ ಕಂಡ್ಲೂರಿನಲ್ಲಿ ಲಂಗರು ಹಾಕಿದ್ದ ಆರು ನಾಡದೋಣಿಗಳು ನೀರುಪಾಲಾಗಿವೆ. ಹೊಳೆಯ ರಭಸಕ್ಕೆ ಎಲ್ಲಾ ನಾಡದೋಣಿಗಳು ಕೊಚ್ಚಿ ಹೋಗಿವೆ. ಮೀನುಗಾರರು ಕಳೆದ ಎರಡು ದಿನಗಳಿಂದ ಹುಡುಕಾಡುತ್ತಿದ್ದಾರೆ.

ಉಡುಪಿಯ ಈ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ ಜಿಲ್ಲೆಯಲ್ಲಿ ಮೂರನೇ ದಿನಕ್ಕೆ ಮುಂದುವರಿದ ಭಾರಿ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಮೂರು ತಾಲೂಕುಗಳ ಶಾಲಾ- ಕಾಲೇಜು ರಜೆ ನೀಡಲಾಗಿದೆ. ಬೈಂದೂರು ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕು ಶಾಲಾ-ಕಾಲೇಜು ಶುಕ್ರವಾರ ರಜೆ ನೀಡಲಾಗಿತ್ತು.

ಬೈಂದೂರು ತಾಲೂಕು, ಮರವಂತೆ ಬೀಚಿನಲ್ಲಿ ಭಾರಿ ಗಾತ್ರದ ಅಲೆಗಳು ಅಪ್ಪಳಿಸುತ್ತಿದೆ. ಹೀಗಾಗಿ ಮಳೆಗಾಲ ಮುಗಿಯುವವರೆಗೂ ಮುನ್ನೆಚ್ಚರಿಕೆ ಕ್ರಮವಾಗಿ ಬೀಚ್ ಬಂದ್ ಮಾಡಲಾಗಿದೆ. ಸೌಪರ್ಣಿಕ ನದಿ ಅರಬ್ಬಿ ಸಮುದ್ರ ಮಧ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸುಮಾರು ಒಂದುವರೆ ಕಿಲೋಮೀಟರ್ ಉದ್ದವಿದ್ದು, ಯಾವುದೇ ತಡೆ ಬೇಲಿ ಇಲ್ಲ. ಈ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ತೆರಳುವ ಬಹುತೇಕರು ಕಡಲಿಗೆ ಇಳಿಯುವ ಸಾಧ್ಯತೆ ಇದೆ. ಮುಂಜಾಗ್ರತೆ ಕ್ರಮವಾಗಿ ಜಿಲ್ಲಾಡಳಿತ ಬೀಚ್ ಕಾವಲು ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

ಇಳಿಮುಖವಾದ ನೆರೆ

ಉಡುಪಿಯ ಬೈಂದೂರು ತಾಲೂಕು ನಾವುಂದದಲ್ಲಿ ನೆರೆ ಸಂಪೂರ್ಣ ಇಳಿಮುಖವಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಸೌಪರ್ಣಿಕಾ ನದಿ ಉಕ್ಕಿ ಹರಿದಿತ್ತು. ಇದರಿಂದಾಗಿ 150 ಎಕರೆ ಮುಳುಗಡೆಯಾಗಿ ಕೃಷಿ ಭೂಮಿಯಲ್ಲಿ ಬೆಳೆದ ಭತ್ತ ನಾಶವಾಗಿತ್ತು. ಸದ್ಯ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ನೆರೆ ಸಂಪೂರ್ಣ ಇಳಿಮುಖವಾಗಿದೆ. ಒಮ್ಮೆ ಭತ್ತದ ನಾಟಿ ಮುಗಿಸಿದ್ದ ರೈತರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಳೆ ನಿಂತಿರುವುದರಿಂದ ಬಡಾಕೆರೆ ಕೃಷಿಕರು ಮತ್ತೆ ಬತ್ತದ ನಾಟಿ ಮಾಡುತ್ತಿದ್ದಾರೆ.

ಗುಡ್ಡ ಕುಸಿತ; ಮಣ್ಣು ತೆರವು ಕಾರ್ಯಾಚರಣೆ ಆರಂಭ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಹೊನ್ನಾವರ-ಬೆಂಗಳೂರು ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿದಿದೆ. ಹೊನ್ನಾವರದ ವರ್ನಕೇರಿ ಬಳಿ ನಿನ್ನೆ ಗುರುವಾರ ಮರ ಸಹಿತ ಗುಡ್ಡ ಕುಸಿದಿತ್ತು. ಇದರಿಂದಾಗಿ ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ, ಬೆಂಗಳೂರು ಮಾರ್ಗದ ಸಂಚಾರಕ್ಕೆ ಅಡ್ಡಿಯಾಗಿದ್ದರಿಂದ ಏಕಮುಖ ಸಂಚಾರಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಿತ್ತು.

ಇಂದು ಶುಕ್ರವಾರ ಕಲ್ಲುಬಂಡೆ ಸಹಿತ ಕುಸಿತ ಗುಡ್ಡ ರಸ್ತೆಗೆ ಬಿದ್ದಿದೆ. ಹೀಗಾಗಿ ಹಿಟಾಚಿ ಮೂಲಕ ಗುಡ್ಡದ ಮಣ್ಣು ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ. ಮಣ್ಣು ತೆಗೆದರೂ ಮತ್ತೆ ಗುಡ್ಡ ಕುಸಿಯುತ್ತಿದ್ದು, ಹೊನ್ನಾವರ -ಬೆಂಗಳೂರು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಅವೈಜ್ಞಾನಿಕ ಕಾಮಗಾರಿಯಿಂದ ಮನೆಗಳು ಜಲಾವೃತ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿ ಹಲವು ಮನೆಗಳು ಜಲಾವೃತಗೊಂಡಿದೆ. ನೌಕಾನೆಲೆ ಕಾಂಪೌಂಡ್‌, ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ನೀರು ಹರಿದುಹೋಗದೇ ಜಲಾವೃತಗೊಂಡಿದೆ. ಸಮುದ್ರಕ್ಕೆ ನೀರು ಸರಾಗವಾಗಿ ಹರಿದುಹೋಗದ ಪರಿಣಾಮ ಅರಗಾ ಗ್ರಾಮದ ನಿವಾಸಿಗಳು ಆತಂಕಗೊಂಡಿದ್ದಾರೆ. ಮಹಿಳೆಯರು, ಮಕ್ಕಳನ್ನು ಇಟ್ಟುಕೊಂಡು ಆತಂಕದಲ್ಲೇ ಕಾಲಕಳೆಯುವ ಪರಿಸ್ಥಿತಿ ಎದುರಾಗಿದೆ. ಮಳೆ ಹೆಚ್ಚಾದಲ್ಲಿ ಮನೆಗಳಿಗೆ ನೀರು ನುಗ್ಗುವ ಆತಂಕ ಇದೆ. ಪ್ರತಿವರ್ಷ ಮಳೆಗಾಲದಲ್ಲಿ ನೆರೆ ಪರಿಸ್ಥಿತಿಯನ್ನು ಅರಗಾ ಗ್ರಾಮಸ್ಥರು ಎದುರಿಸುತ್ತಿದ್ದಾರೆ. ನೀರು ಹರಿದುಹೋಗಲು ಸೂಕ್ತ ವ್ಯವಸ್ಥೆ ಇಲ್ಲದೇ ಅವ್ಯವಸ್ಥೆ ನಿರ್ಮಾಣವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ ಮುಂದುವರಿಕೆ

Rain News: ಬೆಂಗಳೂರಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕ ಕರಾವಳಿಯಲ್ಲಿ ಮಧ್ಯಮದಿಂದ ಭಾರಿ ಮಳೆಯಾಗಲಿದ್ದು, ಪ್ರತ್ಯೇಕದಿಂದ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಭಾಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮಂಡ್ಯ, ರಾಮನಗರ, ಮೈಸೂರು ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲಿ ಮಧ್ಯಮ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

ಇಂದು ಕರಾವಳಿ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿಯ ಉತ್ತರಕನ್ನಡದಲ್ಲಿ ಧಾರಾಕಾರ ಮಳೆ‌‌ಯಾಗಲಿದ್ದು, ಶಾಲಾ- ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ. ರಿಂದ ರಜೆ ಆದೇಶ ಹೊರಡಿಸಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast : ಕರಾವಳಿಯಲ್ಲಿ ಸೋಮವಾರ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಹಲವು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು/ಕಾರವಾರ: ಕರಾವಳಿ ಭಾಗದಲ್ಲಿ ಮಳೆಯು ಅಬ್ಬರಿಸುತ್ತಿದ್ದು, ಜು.8ಕ್ಕೂ ವ್ಯಾಪಕ ಮಳೆಯಾಗುವ (Heavy rain Alert) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಕರಾವಳಿಯ ಉತ್ತರಕನ್ನಡದಲ್ಲಿ ನಾಳೆಯೂ ಧಾರಾಕಾರ ಮಳೆ‌‌ಯಾಗಲಿದ್ದು, ಶಾಲಾ- ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ. ರಿಂದ ರಜೆ ಆದೇಶ ಹೊರಡಿಸಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ.

ಬೆಂಗಳೂರಲ್ಲಿ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಇದನ್ನೂ ಓದಿ: Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

ಮಳೆಗೆ ಕುಸಿದು ಬಿದ್ದ ಮನೆ ಗೋಡೆ

ಭಾರೀ ಗಾಳಿ ಮಳೆಗೆ ಗೋಡೆ ಬಿದ್ದು ಮನೆಗೆ ಹಾನಿಯಾಗಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ಕುಮಟಾ ವಾಲಗಳ್ಳಿ ಗ್ರಾ.ಪಂ ವ್ಯಾಪ್ತಿಯ ಕೋಟೆಗುಡ್ಡದಲ್ಲಿ ಘಟನೆ ನಡೆದಿದೆ. ಕೋಟೆಗುಡ್ಡದ ರಘು ಹಮ್ಮು ಮುಕ್ರಿ ಎಂಬುವವರ ಮನೆ ಕುಸಿದು ಬಿದ್ದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುಸಿದು ಪರಿಣಾಮ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಪಕ್ಕದ ವಿಷ್ಣು ಹಮ್ಮು ಮುಕ್ರಿ ಅವರ ಮನೆಯ ಗೋಡೆಯು ಕುಸಿದು ಹಾನಿಯಾಗಿದೆ. ಮನೆ ಕಳೆದುಕೊಂಡ ಕುಟುಂಬಸ್ಥರಿಗೆ ಕೋಟೆಗುಡ್ಡದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಶ್ರಯ ನೀಡಲಾಗಿದೆ. ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷೆ ಶಾಂತಿ ಮಡಿವಾಳ, ಕಂದಾಯ ಅಧಿಕಾರಿಗಳು, ನೋಡಲ್ ಅಧಿಕಾರಿ ವಿನಾಯಕ ವೈದ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ವಸ್ತುಗಳು ಮಣ್ಣಿನಡಿ ಸಿಲುಕಿ ಹಾನಿಯಾಗಿದೆ. ಮನೆ ಕಳೆದುಕೊಂಡು ರಘು, ವಿಷ್ಣು ಕುಟುಂಬಸ್ಥರು ಕಂಗಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

No Rain : ಚನ್ನಗಿರಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಮಳೆ ಇಲ್ಲದೆ ಜನರಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ಮುನಿಸಿಕೊಂಡಿರುವ ವರುಣ ದೇವನಿಗಾಗಿ ಕಂತೆ ಭಿಕ್ಷೆ (Davanagere News ) ಎತ್ತುತ್ತಿದ್ದಾರೆ.

VISTARANEWS.COM


on

By

Davanagere news
Koo

ದಾವಣಗೆರೆ: ರಾಜ್ಯಾದ್ಯಂತ ಮಳೆಯು (Karnataka Rain) ಅಬ್ಬರಿಸುತ್ತಿದ್ದರೂ, ಅದೊಂದು ಗ್ರಾಮಕ್ಕೆ ಮಾತ್ರ ಈವರೆಗೆ ಮಳೆಯೇ (No Rain) ಆಗಿಲ್ಲ. ಮುಂಗಾರು ಸಂಪೂರ್ಣವಾಗಿ ಆವರಿಸಿದ್ದರೂ, ದಾವಣಗೆರೆಯ ಆ ಗ್ರಾಮದಲ್ಲಿ (Davanagere News ) ಮಳೆ ಇಲ್ಲದೇ ಬರೆ ಎಳದಂತಾಗಿದೆ. ಮಳೆ ಇಲ್ಲದೆ ಜನರಲ್ಲಿ ಆತಂಕ ಶುರುವಾಗಿದ್ದು, ಇದೀಗ ಮುನಿಸಿಕೊಂಡಿರುವ ವರುಣ ದೇವನಿಗಾಗಿ ಕಂತೆ ಭಿಕ್ಷೆ ಎತ್ತುತ್ತಿದ್ದಾರೆ.

ಮಳೆ ಬಾರದೆ ಇದ್ದಾಗ ಹಿಂದಿನ ಕಾಲದಿಂದಲೂ ಈ ಪದ್ಧತಿ ನಡೆದುಕೊಂಡು ಬಂದಿದೆ. ದಾವಣಗೆರೆಯ ಚನ್ನಗಿರಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಮಳೆರಾಯ ನಾಪತ್ತೆಯಾಗಿದ್ದಾನೆ. ಹೀಗಾಗಿ ಮಳೆಗಾಗಿ ಕಂತೆ ಭಿಕ್ಷೆ ಎತ್ತುತ್ತಿದ್ದಾರೆ. ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಮಳೆ ಬರುತ್ತಿದ್ದರೆ, ಈ ಗ್ರಾಮದಲ್ಲಿ ಮಳೆಯೇ ಆಗುತ್ತಿಲ್ಲ. ಬಾರದ ಮಳೆಯಿಂದಾಗಿ ರೈತರು ಸೇರಿ ಗ್ರಾಮದ ಜನರು ಕಂಗಲಾಗಿದ್ದಾರೆ.

ಮಳೆಗಾಗಿ ದೇವರ ಮೊರೆ ಹೋಗಿರುವ ಗ್ರಾಮಸ್ಥರು ಕಂತೆ ಭಿಕ್ಷೆ ಎತ್ತುತ್ತಿದ್ದಾರೆ. ಮನೆ ಮನೆಗೆ ತೆರಳಿ ಕಂತೆ ಭಿಕ್ಷೆ ಬೇಡಿ ಸಾಮೂಹಿಕ ಪ್ರಸಾದ ಮಾಡಲಿದ್ದಾರೆ. ಗ್ರಾಮದಿಂದ ದೀಕ್ಷೆ ಪಡೆದ ಮುರುಘಾಸ್ವಾಮಿಗಳ ನೇತೃತ್ವದಲ್ಲಿ ಸತತ ಐದು ದಿನಗಳ ಕಾಲ ಭಿಕ್ಷಾಟನೆ ಮಾಡಲಾಗುತ್ತದೆ. ನಂತರ ಸಾಮೂಹಿಕ ಪ್ರಸಾದ ಸೇವನೆ ಮಾಡಲಾಗುತ್ತದೆ. ಈ ರೀತಿ ಆಚರಣೆಯಿಂದ ಮಳೆ ಬರುತ್ತೆ ಎನ್ನುವ ನಂಬಿಕೆ ಇದೆ.

ಇದನ್ನೂ ಓದಿ: Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

ಸಮುದ್ರಕ್ಕೆ ಇಳಿಯದಂತೆ ಸೂಚನೆ

ಉಡುಪಿ: ಜಿಲ್ಲೆಯಲ್ಲಿ 3 ದಿನ ನಿರಂತರವಾಗಿ ಸುರಿದ ಮಳೆಗೆ ಇಂದು ಕೊಂಚ ಬಿಡುವು ಸಿಕ್ಕಿದೆ. ಹೀಗಾಗಿ ವೀಕೆಂಡ್ ಎಂಜಾಯ್ ಮಾಡಲು ಪ್ರವಾಸಿಗರರ ದಂಡು ಬೀಚ್‌ ಕಡೆಗೆ ಮುಖ ಮಾಡಿದೆ. ಆದರೆ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಉಡುಪಿ ಜಿಲ್ಲೆಯ ಕಾಪು ಬೀಚ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಸಮುದ್ರ ದಡದಲ್ಲಿಯೇ ಸೆಲ್ಫಿ ತೆಗೆದು ಸಮಾಧಾನಪಟ್ಟುಕೊಳ್ಳುತ್ತಿದ್ದಾರೆ. ಪ್ರವಾಸಿಗರಿಗೆ ಸಮುದ್ರಕ್ಕೆ ಇಳಿಯದಂತೆ ಲೈಫ್ ಗಾರ್ಡ್ಸ್ ಎಚ್ಚರಿಕೆ ನೀಡುತ್ತಿದ್ದು, ಬೀಚ್‌ ಉದ್ದಕ್ಕೂ ಕಣ್ಗಾವಲು ಇಟ್ಟಿದ್ದಾರೆ. ಹೀಗಾಗಿ ಪ್ರವಾಸಿಗರು ದೂರದಲ್ಲಿಯೇ ನಿಂತು ಕಡಲಬ್ಬರವನ್ನು ವೀಕ್ಷಿಸುತ್ತಿದ್ದಾರೆ. ಮಳೆ ನಿಂತ ಹಿನ್ನೆಲೆಯಲ್ಲಿ ಬೀಚ್‌ನಲ್ಲಿ ಸಮಯ ಕಳೆಯುವ ಉದ್ದೇಶದಿಂದ ಆಗಮಿಸಿದ ಪ್ರವಾಸಿಗರು ನಿರಾಸೆಯಿಂದ ವಾಪಸಾಗುತ್ತಿದ್ದಾರೆ.

ಸಮುದ್ರ ಪಾಲಾಗುತ್ತಿರುವ ಮೀನುಗಾರಿಕ ರಸ್ತೆ

ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಕಡಲು ಪ್ರಕ್ಷಬ್ಧಗೊಂಡಿದ್ದು, ಪಡುಕರೆ ಬೀಚ್‌ನಲ್ಲಿ ಅಬ್ಬರಿಸುತ್ತಿರುವ ರಕ್ಕಸಗಾತ್ರದ ಅಲೆಗಳಿಂದಾಗಿ ಮೀನುಗಾರಿಕ ರಸ್ತೆ ಸಮುದ್ರ ಪಾಲಾಗುತ್ತಿದೆ. ಸಮುದ್ರದ ಅಲೆಗಳ ಅಬ್ಬರ ಜಾಸ್ತಿಯಾದರೆ ರಸ್ತೆ ಸಂಪರ್ಕ ಕಡಿತವಾಗುವ ಭೀತಿ ಎದುರಾಗಿದೆ. ಗಾಳಿ ಮಳೆಯಿಂದಾಗಿ ಅರಬ್ಬಿ ಸಮುದ್ರ ಅಬ್ಬರಿಸುತ್ತಿದೆ. ಈಗಾಗಲೇ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Rain News: ಭಾರಿ ಮಳೆ ಹಿನ್ನೆಲೆ, ಜಲಪಾತ ವೀಕ್ಷಣೆ- ಟ್ರೆಕ್ಕಿಂಗ್‌ಗೆ ನಿರ್ಬಂಧ; ಈ ತಾಣಗಳಿಗೆ ಹೋಗಬೇಡಿ!

ಕಲಬುರಗಿಯಲ್ಲೂ ಮಳೆಯ ಅಬ್ಬರ

ಇನ್ನು ಕಲಬುರಗಿಯಲ್ಲಿ ಶನಿವಾರ ರಾತ್ರಿಯಿಡಿ ವರ್ಷಧಾರೆಯಾಗಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಫಜಲಪುರ ತಾಲೂಕಿನಲ್ಲಿ ಸಿದ್ದನೂರ್‌ನಿಂದ ರೆವೂರ್‌ಗೆ ಹೋಗುವ ಮಾರ್ಗದ ಬಳಿ ಇರುವ ಹಳ್ಳದಲ್ಲಿ ನೀರಿನ ಪ್ರಮಾನ ಹೆಚ್ಚಾಗಿದ್ದು, ಪ್ರಯಾಣಿಕರ ಪರದಾಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

Karnataka Rain : ಬೆಂಗಳೂರು, ಧಾರವಾಡ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ (Heavy Rain Effect) ಮಳೆಯಾಗಿದ್ದು, ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಮಳೆಗೆ ಮರಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಈ ಮಧ್ಯೆ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು/ಕಾರವಾರ: ಭಾನುವಾರವೂ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಕೆಲವೆಡೆ ಮಳೆಯು (Heavy Rain) ಅಬ್ಬರಿಸಿತ್ತು. ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣ (Karnataka Rain) ಇತ್ತು.. ಸಂಜೆ ಆಗುತ್ತಿದ್ದಂತೆ ಮೆಜೆಸ್ಟಿಕ್‌, ಕಾಟನ್‌ಪೇಟೆ, ಕೆಆರ್‌ ಮಾರ್ಕೆಟ್‌ ,ಟೌನ್ ಹಾಲ್, ಶಿವಾನಂದ ಸರ್ಕಲ್, ಮೈಸೂರು ಸರ್ಕಲ್ ಸುತ್ತಮುತ್ತ ಮಳೆಯಾಗಿದೆ. ಜಿಟಿ ಜಿಟಿಯಾಗಿ ಶುರುವಾದ ಮಳೆಯು ನಂತರ ಕೆಲ ಕಾಲ ಅಬ್ಬರಿಸಿತ್ತು. ಇತ್ತ ಧಾರವಾಡ ನಗರದಲ್ಲೂ ನಿರಂತರ ಮಳೆಯಾಗಿದೆ. ಬೆಳಗ್ಗೆಯಿಂದಲ್ಲೂ ಬಿಟ್ಟು ಬಿಡದೆ ಸುರಿಯುತ್ತಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಿಂದಾಗಿ ಸವಾರರು ಪರದಾಡಿದರು. ಧಾರವಾಡ ಗ್ರಾಮೀಣ ಕೆಲ ಭಾಗಗಳಲ್ಲಿ ಹೊರತುಪಡಿಸಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ.

ನಿರಂತರ ಮಳೆಗೆ ಗುಡ್ಡ ಕುಸಿತ

ಚಿಕ್ಕಮಗಳೂರಿನಲ್ಲಿ ಬಿಟ್ಟುಬಿಡದೆ ಮಳೆಯು ಸುರಿಯುತ್ತಿದ್ದು, ರಸ್ತೆ ಬದಿ ಗುಡ್ಡ ಕುಸಿತ ಹೆಚ್ಚಾಗುತ್ತಿದೆ. ಶೃಂಗೇರಿ ತಾಲೂಕಿನ ಕೂತು ಗೋಡು ಗ್ರಾಮದ ಬಳಿ ಘಟನೆ ನಡೆದಿದೆ. ಗುಡ್ಡ ಕುಸಿತದಿಂದಾಗಿ ಹಲವು ಗಂಟೆಗಳ ಕಾಲ ಸಂಚಾರ ಬಂದ್ ಆಗಿತ್ತು. ಅಧಿಕಾರಿಗಳು ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯದಲ್ಲಿ ತೊಡಗಿದ್ದರು. ಕಳೆದ ಏಳೆಂಟು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪದೆಪದೇ ಗುಡ್ಡದ ಮಣ್ಣು ಕುಸಿಯುತ್ತಿದೆ. ಹೀಗಾಗಿ ತಾಲೂಕು ಆಡಳಿತವು ಗುಡ್ಡಗಾಡು ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಅಂಕೋಲಾ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಗೆ ಮರವೊಂದು ಅಡ್ಡಲಾಗಿ ಬಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡಿತ್ತು. ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಇತ್ತ ಹೆದ್ದಾರಿ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆವರೆಗೆ ವಾಹನಗಳು ಹೆದ್ದಾರಿಯ ಮತ್ತೊಂದು ಬದಿಯಿಂದ ಸಂಚರಿಸುತ್ತಿದ್ದವು.

ಮುಂದುವರಿದ ಪ್ರವಾಸಿಗರ ಹುಚ್ಚಾಟ

ಬೆಳಗಾವಿಯ ಗೋಕಾಕ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ನೀರು ರಭಸವಾಗಿ ಧುಮ್ಮಿಕ್ಕುವ ಸ್ಥಳಗಳಲ್ಲಿ ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಜತೆಗೆ ಕೆಲವರು ಬಂಡೆಗಲ್ಲುಗಳ‌ ಮೇಲೆ ಕುಳಿತು ಊಟ ಮಾಡುತ್ತಿರುವುದು ಕಂಡು ಬಂದಿದೆ. ಜಲಪಾತಕ್ಕೆ ಭದ್ರತೆ ‌ಒದಗಿಸದೆ ಪೊಲೀಸರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಚೂರು ಆಯ ತಪ್ಪಿದರೂ ಸಹ ಅಪಾಯ ಗ್ಯಾರಂಟಿ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಮಳೆಯಲ್ಲೇ ಟ್ರಾಫಿಕ್‌ಗೆ ಸಿಲುಕಿದ ಪ್ರವಾಸಿಗರು

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಿತಾಣಕ್ಕೆ ಪ್ರವಾಸಿಗರ ದಂಡು ಹರಿದುಬರುತ್ತಿದ್ದು, ಮಳೆಯಲ್ಲೇ ಟ್ರಾಫಿಕ್‌ನಲ್ಲಿ ಸಿಲುಕಿದರು. ಸುಮಾರು ಎರಡು ಗಂಟೆ ಕಾಲ ನಿಂತಲ್ಲೇ ನಿಲ್ಲುಂತಾಯಿತು. ವೀಕೆಂಡ್ ಹಿನ್ನೆಲೆಯಲ್ಲಿ ಸಾವಿರಾರು ಟೂರಿಸ್ಟ್‌ಗಳು ಆಗಮಿಸಿದ್ದರು.

ಇದನ್ನೂ ಓದಿ: Rain News: ಕರಾವಳಿಯಲ್ಲಿ ಮುಂದುವರಿದ ವರುಣನ ಅಬ್ಬರ; ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ

ಮಳೆಗೆ ಜಲಾಶಯಗಳು ಭರ್ತಿ!

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ರಾಜ್ಯದ ಹಲವೆಡೆ ಜಲಾಶಯಗಳು ಭರ್ತಿಯಾಗುತ್ತಿವೆ. ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯ ಭರ್ತಿಗೆ ಎರಡು ಅಡಿ ಬಾಕಿ‌ ಇದೆ. ಕೇರಳದ ವೈನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ಒಳಹರಿವು ಗಣನೀಯವಾಗಿ ಏರಿಕೆ ಆಗುತ್ತಿದೆ. ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಅಣೆಕಟ್ಟಾಗಿದೆ.

ಇತ್ತ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳಗೊಂಡಿದೆ. ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರೀ ಪ್ರಮಾಣ ಹೆಚ್ಚಳವಾಗುತ್ತಿದ್ದು, 24 ಗಂಟೆಗಳಲ್ಲಿ ಬರೋಬ್ಬರಿ 5 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ನಿನ್ನೆ ಶನಿವಾರ 13.90 ಟಿಎಂಸಿ ಇದ್ದ ನೀರಿನ ಸಂಗ್ರಹ ಇಂದು ಭಾನುವಾರ 18. 24 ಗೆ ಏರಿಕೆ ಆಗಿದೆ.

ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳ ಹರಿವು ಇರುವುದರಿಂದ ರೈತರಲ್ಲಿ ಸಂತಸ ಹೆಚ್ಚಿಸಿದೆ. ತುಂಗಭದ್ರಾ ಜಲಾಶಯ ಕರ್ನಾಟಕ, ಆಂಧ್ರ ತೆಲಂಗಾಣ ರಾಜ್ಯಗಳ ರೈತರ ಜೀವನಾಡಿ ಆಗಿದೆ. ಇದೇ ರೀತಿ ಒಳ ಹರಿವು ಹೆಚ್ಚಾದರೆ 10 ರಿಂದ 15 ದಿನದಲ್ಲಿ ಜಲಾಶಯ ಭರ್ತಿ ಆಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor Darshan Will Attend The Court Hearing From Online
ಕ್ರೈಂ1 min ago

Actor Darshan: ಆರೋಪಿಗಳಿಗೆ ಗಂಟಲು ಮುಳ್ಳಾದ ಗುರುತು ಪತ್ತೆ ಪರೇಡ್‌, ಬೆಟ್ಟು ಮಾಡಿ ತೋರಿಸಿದ ಸಾಕ್ಷಿಗಳು

Vicky Pedia I love you sanjana song trend
ವೈರಲ್ ನ್ಯೂಸ್4 mins ago

Vicky Pedia: ಸಂಜನಾ..ಸಂಜನಾ …`I Love You’ ಸಂಜನಾ; ಬಾಲಕನ ಹಾಡಿಗೆ ಹೊಸ ಟಚ್ ಕೊಟ್ಟ ವಿಕಾಸ್ ವಿಕ್ಕಿಪಿಡಿಯ! 

Murder case
ಬೆಂಗಳೂರು12 mins ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Poonam Pandey bold photo with shadow and light
ಬಾಲಿವುಡ್36 mins ago

Poonam Pandey: ಕತ್ತಲೆಯಲ್ಲಿ ಬೆತ್ತಲೆಯಾಗಿ ಮೈಮಾಟ ಪ್ರದರ್ಶಿಸಿ, ಫ್ಯಾನ್ಸ್‌ಗೆ ಕಚಗುಳಿ ಇಟ್ಟ ಪೂನಂ ಪಾಂಡೆ!

Bus Accident
ಪ್ರಮುಖ ಸುದ್ದಿ40 mins ago

Bus Accident : ಶಾಲಾ ಬಸ್​ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ

Student death Nursing college student commits suicide in Bengaluru
ಬೆಂಗಳೂರು45 mins ago

Student Death : ಬೆಂಗಳೂರಿನಲ್ಲಿ ನರ್ಸಿಂಗ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Pakistan
ವಿದೇಶ57 mins ago

Pakistan: ಛೇ..ಇವನೆಂಥಾ ಪಾಪಿ ತಂದೆ! ಚಿಕಿತ್ಸೆಗೆ ಹಣ ಇಲ್ಲವೆಂದು 15 ದಿನದ ಹಸುಳೆಯ ಜೀವಂತ ಸಮಾಧಿ

Kalki 2898 AD box office collection weekend 2
ಟಾಲಿವುಡ್58 mins ago

Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ʻಕಲ್ಕಿ 2898 ಎಡಿʼಸಿನಿಮಾ!

Viral Video
Latest58 mins ago

Viral Video: ಸ್ವಾಗತಿಸಲು ಖುಷಿಯಿಂದ ಕಾಯುತ್ತಿದ್ದ ಕಪ್ಪು ವರ್ಣದ ಮಹಿಳೆಗೆ ಜೋ ಬೈಡನ್ ಅವಮಾನ; ನಾಚಿಕೆಯಾಗಬೇಕು ಅಮೆರಿಕಕ್ಕೆ!

murder case hosakote
ಕ್ರೈಂ59 mins ago

Murder Case: ‌ಹಳೇ ವೈಷಮ್ಯದಿಂದ ಗ್ರಾಮ ಪಂಚಾಯಿತಿ ಸದಸ್ಯನ ಕೊಚ್ಚಿ ಕೊಲೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ16 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ18 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ19 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌