Karnataka weather : ರಾಜ್ಯದಲ್ಲಿ ಇನ್ನೊಂದು ವಾರ ಬಿಸಿಲು- ಚಳಿಯ ಜಂಟಿ ಆಟ - Vistara News

ಮಳೆ

Karnataka weather : ರಾಜ್ಯದಲ್ಲಿ ಇನ್ನೊಂದು ವಾರ ಬಿಸಿಲು- ಚಳಿಯ ಜಂಟಿ ಆಟ

Karnataka weather Forecast : ರಾಜ್ಯಾದ್ಯಂತ ಚಳಿ ನಡುವೆಯು ಶುಷ್ಕ ವಾತಾವರಣವು (Dry weather) ಮೇಲುಗೈ ಸಾಧಿಸಿದೆ. ಇನ್ನೊಂದು ವಾರವೂ ಇದೇ ಹವಾಮಾನ ಮುಂದುವರಿಯಲಿದೆ ಎಂದು ತಜ್ಞರು ಸೂಚನೆ ನೀಡಿದ್ದಾರೆ.

VISTARANEWS.COM


on

Another week of sunny and cold weather conditions in the state
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಬಿಸಿಲು ಹಾಗೂ ಚಳಿಯ ಜಂಟಿ ಆಟ (Dry Weather) ಮುಂದುವರಿದಿದೆ. ಕರಾವಳಿ ಹಾಗೂ ಉತ್ತರ ಒಳನಾಡಲ್ಲಿ ಬಿಸಿಲ ತಾಪಮಾನ ಹೆಚ್ಚಿದ್ದರೆ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಚಳಿಯು ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather) ತಿಳಿಸಿದೆ.

ಬೆಂಗಳೂರಲ್ಲಿ ರಾತ್ರಿ ಚಳಿ

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲಿನ ವಾತಾವರಣ ಇರಲಿದೆ. ಸಂಜೆಯಾಗುತ್ತಿದ್ದಂತೆ ಗಾಳಿಯು ವೇಗವನ್ನು ಪಡೆದುಕೊಳ್ಳಲಿದೆ. ಅಲ್ಲದೆ, ರಾತ್ರಿ ವೇಳೆ ಚಳಿಯು ಹೆಚ್ಚಾಗಲಿದೆ. ಸೋಮವಾರ ಮುಂಜಾನೆ ಕೆಲವು ಕಡೆ ದಟ್ಟ ಮಂಜು ಆವರಿಸಿತ್ತು. ಗರಿಷ್ಠ ಉಷ್ಣಾಂಶವು 29 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶ 17 ಡಿ.ಸೆ. ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ ಉಲ್ಲೇಖಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಚಳಿಯೂ ಹೆಚ್ಚು

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬೆಳಗ್ಗೆ ಹೊತ್ತು ಬಿಸಿಲು ಹೇಗಿರಲಿದೆಯೋ? ರಾತ್ರಿಯಾಗುತ್ತಿದ್ದಂತೆ ಚಳಿಯೂ ಹಾಗೆಯೇ ಇರಲಿದೆ. ಈ ಭಾಗದಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Winter Hair Care Tips: ಚಳಿಗಾಲದಲ್ಲಿ ನಿಮ್ಮ ಕೂದಲು ಚೆನ್ನಾಗಿರಬೇಕೆ? “ಎಣ್ಣೆʼಯನ್ನು ಮರೆಯಬೇಡಿ!

ಮಲೆನಾಡಿನಲ್ಲಿ ಮಂಜು ಮುಸುಕುವ ವಾತಾವರಣ

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಬೆಳಗ್ಗೆ ಬಿಸಿಲಿನ ವಾತಾವರಣ ಇರಲಿದೆ. ರಾತ್ರಿ ಹಾಗೂ ಬೆಳಗಿನ ಜಾವ ಸ್ವಲ್ಪ ಚಳಿ ಜಾಸ್ತಿಯೇ ಇರಲಿದೆ. ಜತೆಗೆ ಮುಂಜಾನೆ ಮಂಜು ಮುಸುಕುವ ಸಾಧ್ಯತೆ ಇದೆ.

ಶುಷ್ಕ ವಾತಾವರಣ

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ಮೈಸೂರು, ರಾಮನಗರ, ಮಂಡ್ಯ, ತುಮಕೂರು, ಬಳ್ಳಾರಿ, ವಿಜಯನಗರದಲ್ಲೂ ಶುಷ್ಕ ವಾತಾವರಣ ಇರಲಿದೆ. ಕೆಲವು ಕಡೆ ಮಾತ್ರ ಚಳಿಯ ವಾತಾವರಣ ಇರಲಿದ್ದು, ರಾತ್ರಿ ವೇಳೆ ಬೀಸುವ ಗಾಳಿಗೆ ಮೈಯೊಡ್ಡುವುದು ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳಿದ್ದಾರೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ -17 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 17 ಡಿ.ಸೆ
ಗದಗ: 32 ಡಿ.ಸೆ – 15 ಡಿ.ಸೆ
ಹೊನ್ನಾವರ: 35 ಡಿ.ಸೆ- 19 ಡಿ.ಸೆ
ಕಲಬುರಗಿ: 33ಡಿ.ಸೆ- 20ಡಿ.ಸೆ
ಬೆಳಗಾವಿ: 31 ಡಿ.ಸೆ- 15 ಡಿ.ಸೆ
ಕಾರವಾರ: 34 ಡಿ.ಸೆ-20 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ ಮುಂದುವರಿಕೆ

Rain News: ಬೆಂಗಳೂರಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕ ಕರಾವಳಿಯಲ್ಲಿ ಮಧ್ಯಮದಿಂದ ಭಾರಿ ಮಳೆಯಾಗಲಿದ್ದು, ಪ್ರತ್ಯೇಕದಿಂದ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಭಾಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮಂಡ್ಯ, ರಾಮನಗರ, ಮೈಸೂರು ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲಿ ಮಧ್ಯಮ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

ಇಂದು ಕರಾವಳಿ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿಯ ಉತ್ತರಕನ್ನಡದಲ್ಲಿ ಧಾರಾಕಾರ ಮಳೆ‌‌ಯಾಗಲಿದ್ದು, ಶಾಲಾ- ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ. ರಿಂದ ರಜೆ ಆದೇಶ ಹೊರಡಿಸಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast : ಕರಾವಳಿಯಲ್ಲಿ ಸೋಮವಾರ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಹಲವು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು/ಕಾರವಾರ: ಕರಾವಳಿ ಭಾಗದಲ್ಲಿ ಮಳೆಯು ಅಬ್ಬರಿಸುತ್ತಿದ್ದು, ಜು.8ಕ್ಕೂ ವ್ಯಾಪಕ ಮಳೆಯಾಗುವ (Heavy rain Alert) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಕರಾವಳಿಯ ಉತ್ತರಕನ್ನಡದಲ್ಲಿ ನಾಳೆಯೂ ಧಾರಾಕಾರ ಮಳೆ‌‌ಯಾಗಲಿದ್ದು, ಶಾಲಾ- ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ. ರಿಂದ ರಜೆ ಆದೇಶ ಹೊರಡಿಸಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ.

ಬೆಂಗಳೂರಲ್ಲಿ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಇದನ್ನೂ ಓದಿ: Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

ಮಳೆಗೆ ಕುಸಿದು ಬಿದ್ದ ಮನೆ ಗೋಡೆ

ಭಾರೀ ಗಾಳಿ ಮಳೆಗೆ ಗೋಡೆ ಬಿದ್ದು ಮನೆಗೆ ಹಾನಿಯಾಗಿದೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ಕುಮಟಾ ವಾಲಗಳ್ಳಿ ಗ್ರಾ.ಪಂ ವ್ಯಾಪ್ತಿಯ ಕೋಟೆಗುಡ್ಡದಲ್ಲಿ ಘಟನೆ ನಡೆದಿದೆ. ಕೋಟೆಗುಡ್ಡದ ರಘು ಹಮ್ಮು ಮುಕ್ರಿ ಎಂಬುವವರ ಮನೆ ಕುಸಿದು ಬಿದ್ದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುಸಿದು ಪರಿಣಾಮ ಯಾವುದೇ ಸಾವು-ನೋವು ಸಂಭವಿಸಿಲ್ಲ.

ಪಕ್ಕದ ವಿಷ್ಣು ಹಮ್ಮು ಮುಕ್ರಿ ಅವರ ಮನೆಯ ಗೋಡೆಯು ಕುಸಿದು ಹಾನಿಯಾಗಿದೆ. ಮನೆ ಕಳೆದುಕೊಂಡ ಕುಟುಂಬಸ್ಥರಿಗೆ ಕೋಟೆಗುಡ್ಡದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಶ್ರಯ ನೀಡಲಾಗಿದೆ. ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷೆ ಶಾಂತಿ ಮಡಿವಾಳ, ಕಂದಾಯ ಅಧಿಕಾರಿಗಳು, ನೋಡಲ್ ಅಧಿಕಾರಿ ವಿನಾಯಕ ವೈದ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ವಸ್ತುಗಳು ಮಣ್ಣಿನಡಿ ಸಿಲುಕಿ ಹಾನಿಯಾಗಿದೆ. ಮನೆ ಕಳೆದುಕೊಂಡು ರಘು, ವಿಷ್ಣು ಕುಟುಂಬಸ್ಥರು ಕಂಗಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

No Rain : ಚನ್ನಗಿರಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಮಳೆ ಇಲ್ಲದೆ ಜನರಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ಮುನಿಸಿಕೊಂಡಿರುವ ವರುಣ ದೇವನಿಗಾಗಿ ಕಂತೆ ಭಿಕ್ಷೆ (Davanagere News ) ಎತ್ತುತ್ತಿದ್ದಾರೆ.

VISTARANEWS.COM


on

By

Davanagere news
Koo

ದಾವಣಗೆರೆ: ರಾಜ್ಯಾದ್ಯಂತ ಮಳೆಯು (Karnataka Rain) ಅಬ್ಬರಿಸುತ್ತಿದ್ದರೂ, ಅದೊಂದು ಗ್ರಾಮಕ್ಕೆ ಮಾತ್ರ ಈವರೆಗೆ ಮಳೆಯೇ (No Rain) ಆಗಿಲ್ಲ. ಮುಂಗಾರು ಸಂಪೂರ್ಣವಾಗಿ ಆವರಿಸಿದ್ದರೂ, ದಾವಣಗೆರೆಯ ಆ ಗ್ರಾಮದಲ್ಲಿ (Davanagere News ) ಮಳೆ ಇಲ್ಲದೇ ಬರೆ ಎಳದಂತಾಗಿದೆ. ಮಳೆ ಇಲ್ಲದೆ ಜನರಲ್ಲಿ ಆತಂಕ ಶುರುವಾಗಿದ್ದು, ಇದೀಗ ಮುನಿಸಿಕೊಂಡಿರುವ ವರುಣ ದೇವನಿಗಾಗಿ ಕಂತೆ ಭಿಕ್ಷೆ ಎತ್ತುತ್ತಿದ್ದಾರೆ.

ಮಳೆ ಬಾರದೆ ಇದ್ದಾಗ ಹಿಂದಿನ ಕಾಲದಿಂದಲೂ ಈ ಪದ್ಧತಿ ನಡೆದುಕೊಂಡು ಬಂದಿದೆ. ದಾವಣಗೆರೆಯ ಚನ್ನಗಿರಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಮಳೆರಾಯ ನಾಪತ್ತೆಯಾಗಿದ್ದಾನೆ. ಹೀಗಾಗಿ ಮಳೆಗಾಗಿ ಕಂತೆ ಭಿಕ್ಷೆ ಎತ್ತುತ್ತಿದ್ದಾರೆ. ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಮಳೆ ಬರುತ್ತಿದ್ದರೆ, ಈ ಗ್ರಾಮದಲ್ಲಿ ಮಳೆಯೇ ಆಗುತ್ತಿಲ್ಲ. ಬಾರದ ಮಳೆಯಿಂದಾಗಿ ರೈತರು ಸೇರಿ ಗ್ರಾಮದ ಜನರು ಕಂಗಲಾಗಿದ್ದಾರೆ.

ಮಳೆಗಾಗಿ ದೇವರ ಮೊರೆ ಹೋಗಿರುವ ಗ್ರಾಮಸ್ಥರು ಕಂತೆ ಭಿಕ್ಷೆ ಎತ್ತುತ್ತಿದ್ದಾರೆ. ಮನೆ ಮನೆಗೆ ತೆರಳಿ ಕಂತೆ ಭಿಕ್ಷೆ ಬೇಡಿ ಸಾಮೂಹಿಕ ಪ್ರಸಾದ ಮಾಡಲಿದ್ದಾರೆ. ಗ್ರಾಮದಿಂದ ದೀಕ್ಷೆ ಪಡೆದ ಮುರುಘಾಸ್ವಾಮಿಗಳ ನೇತೃತ್ವದಲ್ಲಿ ಸತತ ಐದು ದಿನಗಳ ಕಾಲ ಭಿಕ್ಷಾಟನೆ ಮಾಡಲಾಗುತ್ತದೆ. ನಂತರ ಸಾಮೂಹಿಕ ಪ್ರಸಾದ ಸೇವನೆ ಮಾಡಲಾಗುತ್ತದೆ. ಈ ರೀತಿ ಆಚರಣೆಯಿಂದ ಮಳೆ ಬರುತ್ತೆ ಎನ್ನುವ ನಂಬಿಕೆ ಇದೆ.

ಇದನ್ನೂ ಓದಿ: Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

ಸಮುದ್ರಕ್ಕೆ ಇಳಿಯದಂತೆ ಸೂಚನೆ

ಉಡುಪಿ: ಜಿಲ್ಲೆಯಲ್ಲಿ 3 ದಿನ ನಿರಂತರವಾಗಿ ಸುರಿದ ಮಳೆಗೆ ಇಂದು ಕೊಂಚ ಬಿಡುವು ಸಿಕ್ಕಿದೆ. ಹೀಗಾಗಿ ವೀಕೆಂಡ್ ಎಂಜಾಯ್ ಮಾಡಲು ಪ್ರವಾಸಿಗರರ ದಂಡು ಬೀಚ್‌ ಕಡೆಗೆ ಮುಖ ಮಾಡಿದೆ. ಆದರೆ ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವುದರಿಂದ ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಉಡುಪಿ ಜಿಲ್ಲೆಯ ಕಾಪು ಬೀಚ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಸಮುದ್ರ ದಡದಲ್ಲಿಯೇ ಸೆಲ್ಫಿ ತೆಗೆದು ಸಮಾಧಾನಪಟ್ಟುಕೊಳ್ಳುತ್ತಿದ್ದಾರೆ. ಪ್ರವಾಸಿಗರಿಗೆ ಸಮುದ್ರಕ್ಕೆ ಇಳಿಯದಂತೆ ಲೈಫ್ ಗಾರ್ಡ್ಸ್ ಎಚ್ಚರಿಕೆ ನೀಡುತ್ತಿದ್ದು, ಬೀಚ್‌ ಉದ್ದಕ್ಕೂ ಕಣ್ಗಾವಲು ಇಟ್ಟಿದ್ದಾರೆ. ಹೀಗಾಗಿ ಪ್ರವಾಸಿಗರು ದೂರದಲ್ಲಿಯೇ ನಿಂತು ಕಡಲಬ್ಬರವನ್ನು ವೀಕ್ಷಿಸುತ್ತಿದ್ದಾರೆ. ಮಳೆ ನಿಂತ ಹಿನ್ನೆಲೆಯಲ್ಲಿ ಬೀಚ್‌ನಲ್ಲಿ ಸಮಯ ಕಳೆಯುವ ಉದ್ದೇಶದಿಂದ ಆಗಮಿಸಿದ ಪ್ರವಾಸಿಗರು ನಿರಾಸೆಯಿಂದ ವಾಪಸಾಗುತ್ತಿದ್ದಾರೆ.

ಸಮುದ್ರ ಪಾಲಾಗುತ್ತಿರುವ ಮೀನುಗಾರಿಕ ರಸ್ತೆ

ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಕಡಲು ಪ್ರಕ್ಷಬ್ಧಗೊಂಡಿದ್ದು, ಪಡುಕರೆ ಬೀಚ್‌ನಲ್ಲಿ ಅಬ್ಬರಿಸುತ್ತಿರುವ ರಕ್ಕಸಗಾತ್ರದ ಅಲೆಗಳಿಂದಾಗಿ ಮೀನುಗಾರಿಕ ರಸ್ತೆ ಸಮುದ್ರ ಪಾಲಾಗುತ್ತಿದೆ. ಸಮುದ್ರದ ಅಲೆಗಳ ಅಬ್ಬರ ಜಾಸ್ತಿಯಾದರೆ ರಸ್ತೆ ಸಂಪರ್ಕ ಕಡಿತವಾಗುವ ಭೀತಿ ಎದುರಾಗಿದೆ. ಗಾಳಿ ಮಳೆಯಿಂದಾಗಿ ಅರಬ್ಬಿ ಸಮುದ್ರ ಅಬ್ಬರಿಸುತ್ತಿದೆ. ಈಗಾಗಲೇ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Rain News: ಭಾರಿ ಮಳೆ ಹಿನ್ನೆಲೆ, ಜಲಪಾತ ವೀಕ್ಷಣೆ- ಟ್ರೆಕ್ಕಿಂಗ್‌ಗೆ ನಿರ್ಬಂಧ; ಈ ತಾಣಗಳಿಗೆ ಹೋಗಬೇಡಿ!

ಕಲಬುರಗಿಯಲ್ಲೂ ಮಳೆಯ ಅಬ್ಬರ

ಇನ್ನು ಕಲಬುರಗಿಯಲ್ಲಿ ಶನಿವಾರ ರಾತ್ರಿಯಿಡಿ ವರ್ಷಧಾರೆಯಾಗಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಫಜಲಪುರ ತಾಲೂಕಿನಲ್ಲಿ ಸಿದ್ದನೂರ್‌ನಿಂದ ರೆವೂರ್‌ಗೆ ಹೋಗುವ ಮಾರ್ಗದ ಬಳಿ ಇರುವ ಹಳ್ಳದಲ್ಲಿ ನೀರಿನ ಪ್ರಮಾನ ಹೆಚ್ಚಾಗಿದ್ದು, ಪ್ರಯಾಣಿಕರ ಪರದಾಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

Karnataka Rain : ಬೆಂಗಳೂರು, ಧಾರವಾಡ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ (Heavy Rain Effect) ಮಳೆಯಾಗಿದ್ದು, ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಮಳೆಗೆ ಮರಗಳು ರಸ್ತೆಗೆ ಉರುಳಿ ಬೀಳುತ್ತಿವೆ. ಈ ಮಧ್ಯೆ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು/ಕಾರವಾರ: ಭಾನುವಾರವೂ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಕೆಲವೆಡೆ ಮಳೆಯು (Heavy Rain) ಅಬ್ಬರಿಸಿತ್ತು. ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೂ ಮೋಡ ಕವಿದ ವಾತಾವರಣ (Karnataka Rain) ಇತ್ತು.. ಸಂಜೆ ಆಗುತ್ತಿದ್ದಂತೆ ಮೆಜೆಸ್ಟಿಕ್‌, ಕಾಟನ್‌ಪೇಟೆ, ಕೆಆರ್‌ ಮಾರ್ಕೆಟ್‌ ,ಟೌನ್ ಹಾಲ್, ಶಿವಾನಂದ ಸರ್ಕಲ್, ಮೈಸೂರು ಸರ್ಕಲ್ ಸುತ್ತಮುತ್ತ ಮಳೆಯಾಗಿದೆ. ಜಿಟಿ ಜಿಟಿಯಾಗಿ ಶುರುವಾದ ಮಳೆಯು ನಂತರ ಕೆಲ ಕಾಲ ಅಬ್ಬರಿಸಿತ್ತು. ಇತ್ತ ಧಾರವಾಡ ನಗರದಲ್ಲೂ ನಿರಂತರ ಮಳೆಯಾಗಿದೆ. ಬೆಳಗ್ಗೆಯಿಂದಲ್ಲೂ ಬಿಟ್ಟು ಬಿಡದೆ ಸುರಿಯುತ್ತಿದೆ. ಕೆಲವೆಡೆ ಜಿಟಿ ಜಿಟಿ ಮಳೆಯಿಂದಾಗಿ ಸವಾರರು ಪರದಾಡಿದರು. ಧಾರವಾಡ ಗ್ರಾಮೀಣ ಕೆಲ ಭಾಗಗಳಲ್ಲಿ ಹೊರತುಪಡಿಸಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ.

ನಿರಂತರ ಮಳೆಗೆ ಗುಡ್ಡ ಕುಸಿತ

ಚಿಕ್ಕಮಗಳೂರಿನಲ್ಲಿ ಬಿಟ್ಟುಬಿಡದೆ ಮಳೆಯು ಸುರಿಯುತ್ತಿದ್ದು, ರಸ್ತೆ ಬದಿ ಗುಡ್ಡ ಕುಸಿತ ಹೆಚ್ಚಾಗುತ್ತಿದೆ. ಶೃಂಗೇರಿ ತಾಲೂಕಿನ ಕೂತು ಗೋಡು ಗ್ರಾಮದ ಬಳಿ ಘಟನೆ ನಡೆದಿದೆ. ಗುಡ್ಡ ಕುಸಿತದಿಂದಾಗಿ ಹಲವು ಗಂಟೆಗಳ ಕಾಲ ಸಂಚಾರ ಬಂದ್ ಆಗಿತ್ತು. ಅಧಿಕಾರಿಗಳು ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯದಲ್ಲಿ ತೊಡಗಿದ್ದರು. ಕಳೆದ ಏಳೆಂಟು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪದೆಪದೇ ಗುಡ್ಡದ ಮಣ್ಣು ಕುಸಿಯುತ್ತಿದೆ. ಹೀಗಾಗಿ ತಾಲೂಕು ಆಡಳಿತವು ಗುಡ್ಡಗಾಡು ಗ್ರಾಮಗಳ ಜನರಿಗೆ ಎಚ್ಚರಿಕೆ ನೀಡಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಅಂಕೋಲಾ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಗೆ ಮರವೊಂದು ಅಡ್ಡಲಾಗಿ ಬಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡಿತ್ತು. ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತವಾಗಿತ್ತು. ಇತ್ತ ಹೆದ್ದಾರಿ ಸಿಬ್ಬಂದಿಯಿಂದ ಮರ ತೆರವು ಕಾರ್ಯಾಚರಣೆವರೆಗೆ ವಾಹನಗಳು ಹೆದ್ದಾರಿಯ ಮತ್ತೊಂದು ಬದಿಯಿಂದ ಸಂಚರಿಸುತ್ತಿದ್ದವು.

ಮುಂದುವರಿದ ಪ್ರವಾಸಿಗರ ಹುಚ್ಚಾಟ

ಬೆಳಗಾವಿಯ ಗೋಕಾಕ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದೆ. ನೀರು ರಭಸವಾಗಿ ಧುಮ್ಮಿಕ್ಕುವ ಸ್ಥಳಗಳಲ್ಲಿ ಪ್ರವಾಸಿಗರು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದಾರೆ. ಜತೆಗೆ ಕೆಲವರು ಬಂಡೆಗಲ್ಲುಗಳ‌ ಮೇಲೆ ಕುಳಿತು ಊಟ ಮಾಡುತ್ತಿರುವುದು ಕಂಡು ಬಂದಿದೆ. ಜಲಪಾತಕ್ಕೆ ಭದ್ರತೆ ‌ಒದಗಿಸದೆ ಪೊಲೀಸರು ನಿರ್ಲಕ್ಷ್ಯವಹಿಸುತ್ತಿದ್ದಾರೆ. ಚೂರು ಆಯ ತಪ್ಪಿದರೂ ಸಹ ಅಪಾಯ ಗ್ಯಾರಂಟಿ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

ಮಳೆಯಲ್ಲೇ ಟ್ರಾಫಿಕ್‌ಗೆ ಸಿಲುಕಿದ ಪ್ರವಾಸಿಗರು

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಿತಾಣಕ್ಕೆ ಪ್ರವಾಸಿಗರ ದಂಡು ಹರಿದುಬರುತ್ತಿದ್ದು, ಮಳೆಯಲ್ಲೇ ಟ್ರಾಫಿಕ್‌ನಲ್ಲಿ ಸಿಲುಕಿದರು. ಸುಮಾರು ಎರಡು ಗಂಟೆ ಕಾಲ ನಿಂತಲ್ಲೇ ನಿಲ್ಲುಂತಾಯಿತು. ವೀಕೆಂಡ್ ಹಿನ್ನೆಲೆಯಲ್ಲಿ ಸಾವಿರಾರು ಟೂರಿಸ್ಟ್‌ಗಳು ಆಗಮಿಸಿದ್ದರು.

ಇದನ್ನೂ ಓದಿ: Rain News: ಕರಾವಳಿಯಲ್ಲಿ ಮುಂದುವರಿದ ವರುಣನ ಅಬ್ಬರ; ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ

ಮಳೆಗೆ ಜಲಾಶಯಗಳು ಭರ್ತಿ!

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ರಾಜ್ಯದ ಹಲವೆಡೆ ಜಲಾಶಯಗಳು ಭರ್ತಿಯಾಗುತ್ತಿವೆ. ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯ ಭರ್ತಿಗೆ ಎರಡು ಅಡಿ ಬಾಕಿ‌ ಇದೆ. ಕೇರಳದ ವೈನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದ ಒಳಹರಿವು ಗಣನೀಯವಾಗಿ ಏರಿಕೆ ಆಗುತ್ತಿದೆ. ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಅಣೆಕಟ್ಟಾಗಿದೆ.

ಇತ್ತ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳಗೊಂಡಿದೆ. ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಭಾರೀ ಪ್ರಮಾಣ ಹೆಚ್ಚಳವಾಗುತ್ತಿದ್ದು, 24 ಗಂಟೆಗಳಲ್ಲಿ ಬರೋಬ್ಬರಿ 5 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ನಿನ್ನೆ ಶನಿವಾರ 13.90 ಟಿಎಂಸಿ ಇದ್ದ ನೀರಿನ ಸಂಗ್ರಹ ಇಂದು ಭಾನುವಾರ 18. 24 ಗೆ ಏರಿಕೆ ಆಗಿದೆ.

ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಒಳ ಹರಿವು ಇರುವುದರಿಂದ ರೈತರಲ್ಲಿ ಸಂತಸ ಹೆಚ್ಚಿಸಿದೆ. ತುಂಗಭದ್ರಾ ಜಲಾಶಯ ಕರ್ನಾಟಕ, ಆಂಧ್ರ ತೆಲಂಗಾಣ ರಾಜ್ಯಗಳ ರೈತರ ಜೀವನಾಡಿ ಆಗಿದೆ. ಇದೇ ರೀತಿ ಒಳ ಹರಿವು ಹೆಚ್ಚಾದರೆ 10 ರಿಂದ 15 ದಿನದಲ್ಲಿ ಜಲಾಶಯ ಭರ್ತಿ ಆಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Ghee benefits
ಲೈಫ್‌ಸ್ಟೈಲ್2 mins ago

How to spot fake ghee: ನಾವು ಖರೀದಿಸಿದ ತುಪ್ಪ ಶುದ್ಧವೋ ಕಲಬೆರಕೆಯೋ ಪರೀಕ್ಷಿಸುವುದು ಹೇಗೆ?

ರಾಜಮಾರ್ಗ ಅಂಕಣ bola akshta pujari
ಅಂಕಣ2 mins ago

ರಾಜಮಾರ್ಗ ಅಂಕಣ: ದಕ್ಷಿಣ ಆಫ್ರಿಕಾದಲ್ಲಿ ಚಿನ್ನದ ಪದಕ ಗೆದ್ದ ಕಾರ್ಕಳದ ಬೋಳ ಅಕ್ಷತಾ ಪೂಜಾರಿ

karnataka weather Forecast
ಮಳೆ32 mins ago

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ ಮುಂದುವರಿಕೆ

Vastu Tips
ಧಾರ್ಮಿಕ1 hour ago

Vastu Tips: ಮನೆಯಲ್ಲಿ ನೆಮ್ಮದಿ ನೆಲೆಸಬೇಕೆ? ಹಾಗಿದ್ದರೆ ಅಡುಗೆ ಒಲೆಯ ದಿಕ್ಕು ಸರಿಯಾಗಿರಲಿ!

dina Bhavishya
ಭವಿಷ್ಯ2 hours ago

Dina Bhavishya : ಇತರರ ವಿರುದ್ಧ ದ್ವೇಷ ಕಾರುತ್ತಾ ಹೋದರೆ ಹೆಚ್ಚಾಗುತ್ತೆ ಈ ರಾಶಿಯವರ ಮಾನಸಿಕ ಒತ್ತಡ

School Principal
ದೇಶ7 hours ago

School Principal: ಶಾಲೆಯಲ್ಲೇ ಮಹಿಳಾ ಟೀಚರ್‌ ಜತೆ ಪ್ರಿನ್ಸಿಪಾಲ್‌ ರೊಮ್ಯಾನ್ಸ್;‌ ವೈರಲ್‌ ಫೋಟೊ ಇಲ್ಲಿದೆ

WCPL 2024
ಪ್ರಮುಖ ಸುದ್ದಿ7 hours ago

WCPL 2024 : ಸಿಪಿಎಲ್​​ನ ಟ್ರಿನ್​ಬ್ಯಾಗೊ ರೈಡರ್ಸ್​ ತಂಡಕ್ಕೆ ಜೆಮಿಮಾ, ಶಿಖಾ ಸೇರ್ಪಡೆ

KRS Inflow
ದೇಶ7 hours ago

KRS Inflow: ಕೆಆರ್‌ಎಸ್‌ಗೆ ದಾಖಲೆಯ 11 ಸಾವಿರ ಕ್ಯುಸೆಕ್‌ ನೀರು ಒಳಹರಿವು; ಸೋಮವಾರದಿಂದ ನಾಲೆಗಳಿಗೆ ನೀರು

Abhishek Sharma
ಕ್ರೀಡೆ8 hours ago

Abhishek Sharma : 47 ಎಸೆತಕ್ಕೆ ಶತಕ ಬಾರಿಸಿ ಹಲವಾರು ದಾಖಲೆ ಮುರಿದಿ ಅಭಿಷೇಕ್​ ಶರ್ಮಾ

Dengue Scare
ಕರ್ನಾಟಕ8 hours ago

Dengue Scare: ಸರ್ಕಾರದಿಂದಲೇ ಉಚಿತವಾಗಿ ಡೆಂಗ್ಯೂ ಪರೀಕ್ಷೆ ಮಾಡಿಸಲಿ; ಆರ್.‌ ಅಶೋಕ್‌ ಆಗ್ರಹ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ11 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ14 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ14 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ2 days ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ2 days ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

ಟ್ರೆಂಡಿಂಗ್‌