Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ - Vistara News

ಮಳೆ

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast : ಕರಾವಳಿಯಲ್ಲಿ ಮಳೆಯು (Rain news) ಅಬ್ಬರಿಸುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಶುಕ್ರವಾರವೂ ಹಲವೆಡೆ ಮಳೆಯಾಗಿದ್ದು, ಸಂರ್ಪಕ ಕಲ್ಪಿಸುವ ಸೇತುವೆಗಳು ಮುಳುಗಡೆಯಾಗಿವೆ. ಮತ್ತೆ ಕೆಲವೆಡೆ ಗುಡ್ಡ ಕುಸಿತದ ಭೀತಿ ಹೆಚ್ಚಾಗಿದೆ.

VISTARANEWS.COM


on

karnataka Weather Forecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಒಳನಾಡು ಸೇರಿ ಮಲೆನಾಡು, ಕರಾವಳಿಯಲ್ಲಿ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಶುಕ್ರವಾರವೂ ಹಲವೆಡೆ ಮಳೆಯಾಗಿದೆ. ಧಾರವಾಡದಲ್ಲಿ ಕಳೆದ ಅರ್ಧ ಗಂಟೆಗೂ ಹೆಚ್ಚು ಸಮಯ (Rain News) ಮಳೆಯಾಗಿದೆ. ಕಳೆದ ಒಂದು ವಾರದಿಂದ ನಗರದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ಧಾರವಾಡ ಗ್ರಾಮೀಣ ಭಾಗದಲ್ಲೂ ಮಳೆಯು ಅಬ್ಬರಿಸಿದೆ. ಇತ್ತ ಕೊಡಗಿನಲ್ಲಿ ಮತ್ತೆ ಮಳೆಯು ವ್ಯಾಪಿಸಿದೆ. ಎರಡು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆಯು, ಶುಕ್ರವಾರ ಮಧ್ಯಾಹ್ನದ ನಂತರ ಜಿಲ್ಲೆಯಾದ್ಯಂತ ಅಬ್ಬರಿಸಿದೆ. ಮಳೆಗೆ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ಹಾರಂಗಿ ಜಲಾಶಕ್ಕೆ ಹೆಚ್ಚಾದ ಒಳ ಹರಿವಿನ ಪ್ರಮಾಣ ಹೆಚ್ಚಳಗೊಂಡಿದೆ.

ಜುಲೈ 6ಕ್ಕೂ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿಯಲ್ಲಿ ಭಾರೀ ಮಳೆ ಅಬ್ಬರ ಹಿನ್ನೆಲೆಯಲ್ಲಿ ಜುಲೈ 6 ರಂದು ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌ರಿಂದ ಆದೇಶ ಹೊರಡಿಸಲಾಗಿದೆ. ಪದವಿ ಕಾಲೇಜು ಹೊರತುಪಡಿಸಿ ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಧಾರಾಕಾರ ಮಳೆಗೆ ಸೇತುವೆಗಳು ಮುಳುಗಡೆ

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಎರಡು ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಕೃಷ್ಣಾ ವೇದಗಂಗಾ ಹಾಗೂ ದೂದಗಂಗಾ ನದಿ ಮೈದುಂಬಿ ಹರಿಯುತ್ತಿದ್ದು, ನಿಪ್ಪಾಣಿ ತಾಲೂಕಿನ ಬಾರವಾಡ-ಕುನ್ನೂರ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ.

ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮುಳುಗಡೆಯಾಗಿದೆ. ದೂದಗಂಗಾ ನದಿಯಿಂದ ಕಾರದಗಾ-ಭೋಜ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ಕೃಷ್ಣಾ ನದಿಗೆ ಸುಮಾರು 50 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ನದಿ ಪಾತ್ರದ ಜನರಿಗೆ ಸೂಚನೆ ನೀಡಿದೆ. ಆದರೆ ಜಿಲ್ಲಾಡಳಿತದ ಮನವಿಗೆ ಕ್ಯಾರೇ ಎನ್ನದ ಜನರು ನದಿಯಲ್ಲಿ ಇಳಿದು ಅಪಾಯಮಟ್ಟ ಮೀರಿ ಹರಿಯುತ್ತಿರುವ ನದಿಯಲ್ಲಿ ಮೀನು ಹಿಡಿಯಲು ಮುಂದಾಗಿದ್ದಾರೆ. ಹೀಗಾಗಿ ನದಿ ಬಳಿ ಬಂದೋಬಸ್ತ್ ಸಲುವಾಗಿ ಜಿಲ್ಲಾಡಳಿತದಿಂದ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

karnataka Weather Forecast

ಶಿರೂರು ಸಮೀಪ ಗುಡ್ಡ ಕುಸಿಯುವ ಭೀತಿ

ಉಡುಪಿಯ ಶಿರೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿಯುವ ಭೀತಿ ಹೆಚ್ಚಾಗಿದೆ. ಬೈಂದೂರು ತಾಲೂಕು, ಶಿರೂರು ಸಮೀಪದಲ್ಲಿ ಗುಡ್ಡ ಜರಿಯುವ ಸಾಧ್ಯತೆ ಇದೆ. ಐಆರ್‌ಬಿ ಸಂಸ್ಥೆಯಿಂದ ರಾಷ್ಟ್ರೀಯ ಹೆದ್ದಾರಿ ಶತಶಪಥ ಕಾಮಗಾರಿಯ ವೇಳೆ ಗುಡ್ಡ ಕೊರೆಯಲಾಗಿತ್ತು. ಅವೈಜ್ಞಾನಿಕ ಕಾಮಗಾರಿ ಹಿನ್ನೆಲೆಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಗುಡ್ಡ ಜರಿಯುವ ಭೀತಿ ಇದೆ.

ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಒತ್ತಿನಣೆಯಲ್ಲಿ ನಿಧಾನವಾಗಿ ಜರಿದು ಗುಡ್ಡ ಬೀಳುತ್ತಿದೆ. ಮಳೆ ಮುಂದುವರೆದರೆ ಸಂಪೂರ್ಣ ಗುಡ್ಡ, ಹೆದ್ದಾರಿ ಮೇಲೆ ಕುಸಿಯುವ ಭೀತಿ ಇದೆ. ಒಂದು ವೇಳೆ ಗುಡ್ಡ ಜರಿದರೆ ಉತ್ತರ ಕನ್ನಡ, ಉಡುಪಿ ಜಿಲ್ಲೆಗೆ ಸಂಪರ್ಕ ಬಂದ್ ಆಗಲಿದೆ.

ಚಿತ್ರದುರ್ಗದಲ್ಲಿ ಶಾಲೆಗೆ ನುಗ್ಗಿದ ನೀರು

ಚಿತ್ರದುರ್ಗ ಜಿಲ್ಲೆಯಲ್ಲಿ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಕಳ್ಳಿಹಟ್ಟಿ ಗೊಲ್ಲರಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರು ನುಗ್ಗಿದೆ. ಜತೆಗೆ ಶಾಲಾ ಕೊಠಡಿಯಲ್ಲಿ ನೀರು ಸೋರುತ್ತಿದೆ. ಹೀಗಾಗಿ ಶಿಕ್ಷಕರು ಮಕ್ಕಳನ್ನು ಒಂದು ಮೂಲೆಗೆ ಕೂರಿಸಿದ್ದಾರೆ. ನೂತನ ಕಟ್ಟಡ ಅಥವಾ ಬೇರೊಂದು ಕಟ್ಟಡ ಕಟ್ಟಿಸಿಕೊಡುವಂತೆ ಹಲವು ಬಾರಿ ಶಾಲಾ ಸಿಬ್ಬಂದಿ ಮನವಿ ಮಾಡಿದ್ದಾರೆ. ಆದರೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮೌನಕ್ಕೆ ಜಾರಿದ್ದಾರೆ.

ಒತ್ತಿನೆಣೆ ಬೀಚ್‌ನಲ್ಲಿ ಪ್ರವಾಸಿಗರ ಹುಚ್ಚಾಟ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಪ್ರವಾಸಿ ತಾಣ ಒತ್ತಿನೆಣೆ ಬೀಚ್‌ನಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಪ್ರವಾಸಿಗರ ಹುಚ್ಚಾಟ ಮಿತಿಮೀರಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬಹುತೇಕ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾಡಳಿತ ನಿಷೇಧ ಹೇರಿದೆ. ಅದರಲ್ಲೂ ಎಲ್ಲಾ ಬೀಚ್‌ಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಾಚ್ ಗಾರ್ಡ್ ಸಿಬ್ಬಂದಿ ಕಣ್ಗಾವಲು ಇದೆ. ಆದರೂ ಅಪ್ಪಳಿಸಿ ಬರುವ ಅಲೆಗಳ ಮುಂದೆ ಸೆಲ್ಫಿ ತೆಗೆಯಲು ಪ್ರವಾಸಿಗರು ಯತ್ನಿಸುತ್ತಿದ್ದಾರೆ.

ಅಪಾಯದಲ್ಲಿರುವ ಬಳ್ಕುಂಜೆ -ಪಲಿಮಾರು ಸಂಪರ್ಕ ಸೇತುವೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಮುಲ್ಕಿ ಸಮೀಪದ ಬಳ್ಕುಂಜೆ -ಪಲಿಮಾರು ಸಂಪರ್ಕ ಸೇತುವೆ ಅಪಾಯದಲ್ಲಿದೆ. ಸ್ಥಳೀಯರ ದೂರಿನಂತೆ ಜಿಲ್ಲಾಡಳಿತವು ಘನ ವಾಹನ ಸಂಚಾರ ನಿಷೇಧಿಸಿದೆ. ಸೇತುವೆಯ ಅಡಿ ಭಾಗದಲ್ಲಿ ತುಂಡು ತುಂಡಾಗಿ ಬೀಮ್‌ಗಳ ಸಿಮೆಂಟ್‌ಗಳು ಬೀಳುತ್ತಿವೆ. ನಿರಂತರ ಅಕ್ರಮ ಮರುಳು ಸಾಗಾಟವೇ ಇದಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಈ ಭಾಗದಲ್ಲಿ ಪೋಲಿಸ್ ಚೆಕ್ ಪೋಸ್ಟ್ ಇಲ್ಲದಿರುವುದು ಮರಳು ದಂದೆಕೋರರಿಗೆ ವರದಾನವಾಗಿದೆ ಎಂದು ಕಿಡಿಕಾರಿದ್ದಾರೆ. ಬಳ್ಕುಂಜೆ ಭಾಗದಿಂದ ಪಲಿಮಾರು, ಉಡುಪಿ, ನಿಟ್ಟೆ, ಬೆಳ್ಮಣ್, ಕುದುರೆಮುಖ, ಹೆಬ್ರಿ, ಸಾಗರ ಮೊದಲಾದ ಕಡೆಗೆ ಸಂಪರ್ಕಿಸುವ ರಸ್ತೆ ಇದಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain : ರಾಜ್ಯದಲ್ಲಿ ಮಳೆ ಅವಾಂತರ ಮುಂದುವರಿದ್ದು, ಹಾಸನದಲ್ಲಿ ಕಾರೊಂದರ ಮೇಲೆ ಬೃಹತ್‌ ಗಾತ್ರ ಮರ ಬಿದ್ದು ಜಖಂಗೊಂಡರೆ, ಪಾವಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ತಡೆಗೋಡೆ ಕುಸಿದು ಬಿದ್ದಿದೆ. ಚಿಕ್ಕೋಡಿಯಲ್ಲಿ ಬಾಬಾ ದರ್ಗಾ ಜಲಾವೃತಗೊಂಡಿದೆ.

VISTARANEWS.COM


on

By

Karnataka Rain Effect
Koo

ಹಾಸನ: ಭಾರಿ ಮಳೆ-ಗಾಳಿಗೆ (Karnataka Rain Effect) ಬೃಹತ್ ಗಾತ್ರದ ಮರವೊಂದು (Tree fall) ಧರೆಗುರುಳಿದೆ. ಬಿದ್ದ ರಭಸಕ್ಕೆ ಮನೆಯ ಮುಂದೆ ನಿಲ್ಲಿಸಿದ್ದ ಕಾರು ಸಂಪೂರ್ಣ ಜಖಂಗೊಂಡಿದೆ. ಹಾಸನದ ಕುವೆಂಪುನಗರದಲ್ಲಿ ಘಟನೆ ನಡೆದಿದೆ. ರಾಕೇಶ್ ಎಂಬುವವರು ತಮ್ಮ ಕಾರನ್ನು ಮರದ ಕೆಳಗೆ ನಿಲ್ಲಿಸಿದ್ದರು.

karnataka rain effect

ನೋಡನೋಡುತ್ತಿದ್ದಂತೆ ಮರವು ಕಾರಿನ ಮೇಲೆ ಬಿದ್ದು ಪೂರ್ತಿ ಜಖಂಗೊಂಡಿದೆ. ಅದೃಷ್ಟವಶಾತ್‌ ಕಾರಿನೊಳಗೆ ಯಾರು ಇಲ್ಲದೆ ಇರುವುದರಿಂದ ಅನಾಹುತವೊಂದು ತಪ್ಪಿದೆ. ಸ್ಥಳಕ್ಕೆ ನಗರಸಭೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ರಸ್ತೆಗೆ ಅಡ್ಡಲಾಗಿ, ಕಾರಿನ ಮೇಲೆ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು. ಇತ್ತ ಕೊಪ್ಪಳದಲ್ಲಿ ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ, ಸೋಮವಾರ ಮಧ್ಯಾಹ್ನದ ಸುಮಾರು ಅರ್ಧಗಂಟೆಗೂ ಹೆಚ್ಚು ಸಮಯ ಅಬ್ಬರಿಸಿದ್ದ.

ದೇವಸ್ಥಾನ ತಡೆಗೋಡೆ ಕುಸಿತ

ಮಂಗಳೂರಿನಲ್ಲಿ ಭಾರೀ ಮಳೆಗೆ ಮತ್ತೊಂದು ಅವಘಡ ಸಂಭವಿಸಿದೆ. ನಿರಂತರ ಮಳೆಗೆ ಪ್ರಸಿದ್ಧ ಧಾರ್ಮಿಕ ಕ್ಷೇತ್ರದ ತಡೆಗೋಡೆ ಕುಸಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಾವಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ತಡೆಗೋಡೆ ಬಿದ್ದಿದೆ.

ಭಾರೀ ಗಾಳಿ ಮತ್ತು ಮಳೆಗೆ ತೆಂಗಿನ ಗಿಡದ ಬುಡದ ಮಣ್ಣು ಸಡಿಲಗೊಂಡಿದೆ. ಪರಿಣಾಮ ಕೆಂಪು ಕಲ್ಲಿನ ಐದಾರು ಅಡಿ ಎತ್ತರದ ತಡೆಗೋಡೆ ಕುಸಿದಿದೆ. ಪರಿಣಾಮ ವಿದ್ಯುತ್ ಕಂಬ, ಬಾವಿ ಹಾಗೂ ದೇವಸ್ಥಾನದ ಪಾರ್ಕಿಂಗ್ ಜಾಗಕ್ಕೆ ಹಾನಿಯಾಗಿದೆ. ಯಾವುದೇ ವಾಹನ ಪಾರ್ಕ್ ಮಾಡದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ. ಸದ್ಯ ಮಣ್ಣು ತೆಗೆದು ಪ್ಲಾಸ್ಟಿಕ್ ಟರ್ಪಾಲ್ ಹಾಕಿ ಮುನ್ನೆಚ್ಚರಿಕೆ ವಹಿಸಲಾಗಿದೆ.

ಚಿಕ್ಕೋಡಿಯಲ್ಲಿ ಬಾಬಾ ದರ್ಗಾಕ್ಕೆ ನುಗ್ಗಿದ ನೀರು

ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಪ್ರವಾಹ ಭೀತಿ ಶುರುವಾಗಿದೆ. ದೂದಗಂಗಾ ನದಿಯು ಉಕ್ಕಿ ಹರಿದಿದ್ದು, ಯಕ್ಸಂಬಾ ಬಳಿಯ ಮುಲ್ಕಾನಿ ಬಾಬಾ ದರ್ಗಾಕ್ಕೆ ನೀರು ನುಗ್ಗಿ ಜಲಾವೃತಗೊಂಡಿದೆ. ನದಿಯಲ್ಲಿ ಇನ್ನೂ ಆರು ಅಡಿ ನೀರು ಬಂದರೆ ಹಲವು ಗ್ರಾಮಕ್ಕೆ ನೀರು ನುಗ್ಗುವ ಭೀತಿ ಇದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

ಹಾಸನದಲ್ಲೂ ಅಬ್ಬರಿಸುತ್ತಿರುವ ಮಳೆ

ಹಾಸನ ಜಿಲ್ಲೆಯ ವಿವಿಧೆಡೆ ಸೋಮವಾರ ಭಾರಿ ಮಳೆಯಾಗಿದೆ. ಮಲೆನಾಡು ಭಾಗವಾದ ಸಕಲೇಶಪುರ, ಆಲೂರು, ಬೇಲೂರಿನಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ವಾಹನ ಸವಾರರು, ವಿದ್ಯಾರ್ಥಿಗಳು ಪರದಾಡಿದರು. ಇನ್ನೂ ಚಿಕ್ಕಮಗಳೂರು ಭಾಗದಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನದ ಗೊರೂರಿನಲ್ಲಿರುವ ಜೀವನದಿ ಹೇಮಾವತಿ ನದಿಗೆ ಒಳಹರಿವಿನಲ್ಲಿ ಹೆಚ್ಚಳವಾಗಿದೆ.

ಕಾರವಾರದ‌ ಕದ್ರಾ ಜಲಾಶಯದಿಂದ ನೀರು ಬಿಡುಗಡೆ

ಉತ್ತರ ಕನ್ನಡದ ಕಾರವಾರದ‌ ಕದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ವಿದ್ಯುತ್ ಉತ್ಪಾದನೆ ಹಾಗೂ ಕ್ರಸ್ಟ್ ಗೇಟ್ ಸೇರಿ 31,000 ಕ್ಯೂಸೆಕ್ಸ್‌ಗೂ ಅಧಿಕ ನೀರು ಬಿಡುಗಡೆ ಮಾಡಲಾಗಿದೆ. 34.50 ಮೀ ಗರಿಷ್ಠ ಸಾಮರ್ಥ್ಯದ ಕದ್ರಾ ಜಲಾಶಯದಿಂದ 4 ಗೇಟ್‌ಗಳಿಂದ 10,600 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ.

karnataka rain Kadhra dam

ಸದ್ಯ ಜಲಾಶಯದಲ್ಲಿ 31 ಮೀ ನೀರಿನ ಸಂಗ್ರಹ ತಲುಪಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತವು ಜಲಾಶಯದಲ್ಲಿ 30 ಮೀ ನೀರು ಸಂಗ್ರಹಕ್ಕೆ ನಿಗಧಿಪಡಿಸಿದೆ. ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಿಂದ ಜಲಾಶಯದ ಒಳಹರಿವು ಹೆಚ್ಚಿದ್ದು,22,000 ಕ್ಯೂಸೆಕ್ಸ್ ನೀರು ಜಲಾಶಯಕ್ಕೆ ಹರಿದುಬರುತ್ತಿದೆ. ಜಲಾಶಯದಿಂದ ವಿದ್ಯುತ್ ಉತ್ಪಾದಿಸಿ 21,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗುತ್ತದೆ. ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ನಿವಾಸಿಗಳನ್ನು ಸ್ಥಳಾಂತರಗೊಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka Rain : ಸತತ ಮಳೆಯಿಂದಾಗಿ ಕರಾವಳಿ ಹಾಗೂ ಮಲೆನಾಡು ಭಾಗದ ಜನರು ಕಂಗಲಾಗಿದ್ದಾರೆ. ಉಡುಪಿಯಲ್ಲಿ ನೆರೆಹಾವಳಿಯಿಂದ ಮಕ್ಕಳು ಶಾಲೆಗೆ ಹೋಗಲು ಆಗದೆ ಪರದಾಡುತ್ತಿದ್ದಾರೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಮತ್ತೊಂದು ಸೇತುವೆಯೂ ಮುಳುಗಡೆಯಾಗಿದೆ. ಹಿರೇಕೊಳಲೆ ಕೆರೆ ಭರ್ತಿಯಾಗಿದ್ದು, ಗಾಳಿಗೆ ವಿದ್ಯುತ್‌ ತಂತಿ ಮೇಲೆ ಮರ ಬಾಗಿ ಸಮಸ್ಯೆ (Rain Effect) ಸೃಷ್ಟಿಯಾಗಿದೆ.

VISTARANEWS.COM


on

By

Karnataka Rain
Koo

ಉಡುಪಿ: ಉಡುಪಿಯ ಬೈಂದೂರಿನಲ್ಲಿ ಮಳೆಗಾಲದ (Karnataka Rain) ಗೋಳು ಮುಗಿಯುವುದಿಲ್ಲ. ಮಳೆ (Rain News) ಬಂದರೆ ಶಾಲೆಗೆ ರಜೆ ಯಾಕೆ ಎನ್ನುವವರು ಈ ಸುದ್ದಿಯನ್ನು ಓದಲೇಬೇಕು. ಇಲ್ಲಿ ಜೋರಾಗಿ ಮಳೆ ಬಂದರೆ ಮಕ್ಕಳು ಶಾಲೆಗೆ ಗೈರು ಹಾಜರಾತಿಯೇ ಗತಿ. ಯಾಕಂದರೆ ಮಳೆ ಬಂದು ಹೋದ ಮೇಲೆ ನೆರೆಯಿಂದಾಗಿ ಹಳ್ಳ ದಾಟಿಕೊಂಡು ಶಾಲೆಗಳಿಗೆ ಹೋಗಲು ಮಕ್ಕಳು ಪರದಾಡಬೇಕಾಗುತ್ತದೆ.

ಉಡುಪಿಯ ಕುಂದಾಪುರ ತಾಲೂಕಿನ ಆಜ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಬ್ಬಾರ್ ತಡಿಯಲ್ಲಿ 25 ಮನೆಗಳಿದ್ದು, ಮಳೆ ಬಂದರೆ ಮನೆಯಲ್ಲೇ ಲಾಕ್‌ ಆಗಬೇಕಾಗುತ್ತದೆ. ಮುಖ್ಯಪೇಟೆ ಸಿದ್ದಾಪುರಕ್ಕೆ ತೆರಳಬೇಕಾದರೂ ಸಂಕಷ್ಟ ಎದುರಾಗುತ್ತದೆ. ನೀರಿನ ಪ್ರಮಾಣ ಇಳಿಕೆ ಅದರಷ್ಟೇ ಹಳ್ಳ ದಾಟಿ ಶಾಲೆಗೆ ಹೋಗಬೇಕಾಗುತ್ತದೆ.

ಇತ್ತ ಬೆಳಗ್ಗೆ ನೀರು ಇಳಿಕೆ ಆದರೆ ಸಂಜೆಗೆ ಏರಿಕೆ ಆಗುವ ಆತಂಕ ಇದೆ. ಹೀಗಾಗಿ ಶಾಲೆಗೆ ಕಳುಹಿಸಲು ಪೋಷಕರು ಮೀನಾಮೇಷ ಎಣಿಸುತ್ತಾರೆ. ಮಳೆ ಬಂದರೆ ರಜೆ ನೀಡಿ ಎನ್ನುತ್ತಿದ್ದಾರೆ. ನೌಕರಿಗೆ ತೆರಳುವವರಿಗೂ ಈ ಹಳ್ಳದ್ದೇ ಸಮಸ್ಯೆ ಇದೆ. ಇದುವರೆಗೂ ಕಿರು ಸೇತುವೆ ನಿರ್ಮಿಸಲು ಸಾಧ್ಯವಾಗಿಲ್ಲ.

ಮಳೆಗೆ ಸೇತುವೆ ಮುಳುಗಡೆ

ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಮತ್ತೊಂದು ಸೇತುವೆಯೂ ಮುಳುಗಡೆಯಾಗಿದೆ. ದೂದಗಂಗಾ ನದಿಯ ಚಿಕ್ಕೋಡಿ ತಾಲೂಕಿನ ಮಲ್ಲಿಕವಾಡ-ದತ್ತವಾಡ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಮೊದಲೇ ನಾಲ್ಕು ಕೆಳ ಹಂತದ ಸೇತುವೆಗಳು ಮುಳುಗಡೆಯಾಗಿದೆ.

ನಿಪ್ಪಾಣಿ ತಾಲೂಕಿನ ಕುನ್ನೂರ-ಬಾರವಾಡ ಸಂಪರ್ಕಿಸುವ ಸೇತುವೆ ಜಲಾವೃತಗೊಂಡಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಇರುವ ಕೆಳ ಹಂತದ ಸೇತುವೆ, ದೂದಗಂಗಾ ನದಿಯ ಕಾರದಗಾ-ಬೋಜ್, ಕುನ್ನೂರ-ಭೋಜವಾಡಿ ಸಂಪರ್ಕಿಸುವ ಸೇತುವೆ ಸೇರಿ ಕೃಷ್ಣಾ ನದಿಗೆ ಅಡ್ಡಲಾಗಿರುವ ಮಾಂಜರಿ – ಭಾವನ ಸೌಂದತ್ತಿ ಸೇತುವೆಯೂ ಮುಳುಗಡೆಯಾಗಿದೆ. ಹೀಗಾಗಿ ಪರ್ಯಾಯ ಮಾರ್ಗಗಳ ಮೂಲಕ ಜನರು ಸಂಚಾರಿಸುವಂತಾಗಿದೆ. ಕೃಷ್ಣಾ ನದಿಗೆ ಸುಮಾರು 63 ಸಾವಿರ ಕ್ಯೂಸೆಕ್‌ಗೂ ಹೆಚ್ಚು ನೀರಿನ ಒಳಹರಿವು ಬೀಡಲಾಗಿದೆ. ಹೀಗಾಗಿ ನದಿಗೆ ಇಳಿಯದಂತೆ ಬೆಳಗಾವಿ ಜಿಲ್ಲಾಡಳಿತದಿಂದ ನದಿ ಪಾತ್ರದ ಜನರಿಗೆ ಮನವಿ ಮಾಡಿದೆ.

ಹಿರೇಕೊಳಲೆ ಕೆರೆ ಭರ್ತಿ! ವಿದ್ಯುತ್‌ ತಂತಿ ಮೇಲೆ ಬಾಗಿದ ಮರ

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆಯಿಂದಾಗಿ ಹಿರೇ ಕೊಳಲೆ ಕೆರೆ ತುಂಬುವ ಹಂತಕ್ಕೆ ತಲುಪಿದೆ. ಚಿಕ್ಕಮಗಳೂರು ನಗರಕ್ಕೆ ನೀರು ಪೂರೈಸುವ ಬೃಹತ್ ಕೆರೆ ಇದಾಗಿದ್ದು, ಕೆರೆಗೆ ಬಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಇತ್ತ ವೀಕ್ಷಣಾ ಗೋಪುರ ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವೀಕ್ಷಣ ಗೋಪುರದ ಬಳಿ ಪ್ರವಾಸಗರಿಗೆ ನಿಷೇಧ ಹೇರಲಾಗಿದೆ. ಪೊಲೀಸರು ಗೋಪುರದ ಹಾದಿಗೆ ಅಡ್ಡಲಾಗಿ ಬೇಲಿ ಹಾಕಿದ್ದಾರೆ. ಕೆರೆ ಕೋಡಿ ಬೀಳಲು ಕೇವಲ ಮೂರು ಅಡಿ ಮಾತ್ರ ಬಾಕಿ ಇದೆ.

ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ-ಮಳೆಗೆ ಅಡಿಕೆ ಮರಗಳು ರಾಷ್ಟ್ರೀಯ ಹೆದ್ದಾರಿ ಪಕ್ಕದ ವಿದ್ಯುತ್ ತಂತಿಯ ಮೇಲೆ ಬಾಗಿವೆ. ಪರಿಣಾಮ ವಿದ್ಯುತ್ ತಂತಿಗೆ ಹಾನಿಯಾಗಿವೆ. ಮೂಡಿಗೆರೆ ತಾಲೂಕಿನ ಫಲ್ಗುಣಿ ಗ್ರಾಮದ ಬಳಿ ಘಟನೆ ನಡೆದಿದೆ. ಮತ್ತಷ್ಟು ಅಡಿಕೆ ಮರಗಳು ವಿದ್ಯುತ್ ತಂತಿಯ ಮೇಲೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Karnataka Rain : ಸಮುದ್ರಕ್ಕೆ ಇಳಿಯದಂತೆ ಕಡಲತೀರದಲ್ಲಿ ರೆಡ್ ಫ್ಲ್ಯಾಗ್ ಅಳವಡಿಸಿದರೂ ಹುಚ್ಚಾಟ ತೋರಿದ ಪ್ರವಾಸಿಗರಿಗೆ ಲೈಫ್‌ಗಾರ್ಡ್‌ಗಳು ಬಿಸಿ ಮುಟ್ಟಿಸಿದ್ದಾರೆ. ಅಪಾಯವನ್ನು ಲೆಕ್ಕಿಸದೇ ಈಜುತ್ತಿದ್ದವರನ್ನು ದಡಕ್ಕೆ ಎಳೆದು ತಂದು ಥಳಿಸಿದ್ದಾರೆ.

VISTARANEWS.COM


on

By

Karnataka weather Forecast
Koo

ಕಾರವಾರ: ಭಾರಿ ಮಳೆ (Karnataka Rain) ನಡುವೆ ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರನ್ನು ದರದರನೇ ಎಳೆದುತಂದು ಲೈಫ್‌ಗಾರ್ಡ್‌ ಸಿಬ್ಬಂದಿ ಥಳಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ರವೀಂದ್ರನಾಥ ಟಾಗೋರ್ ಕಡಲತೀರದಲ್ಲಿ ಘಟನೆ ನಡೆದಿದೆ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಅಬ್ಬರ ಒಂದೆಡೆ ಸಮುದ್ರತೀರದಲ್ಲಿ ಪ್ರವಾಸಿಗರ ಹುಚ್ಚಾಟ ಮಿತಿಮೀರಿದೆ. ಅಪಾಯದ ಎಚ್ಚರಿಕೆಯನ್ನು ನಿರ್ಲಕ್ಷಿಸಿದ ಕೆಲ ಪ್ರವಾಸಿಗರು ಸಮುದ್ರಕ್ಕಿಳಿದು, ಈಜುತ್ತಿದ್ದರು. ಅಪಾಯಕಾರಿ ರೀತಿಯಲ್ಲಿ ಅಲೆಗಳು ಅಪ್ಪಳಿಸುತ್ತಿದ್ದರೂ ಲೆಕ್ಕಿಸದೇ ಮೋಜು ಮಸ್ತಿ ಮಾಡುತ್ತಿದ್ದರು.

ಹೀಗಾಗಿ ನೀರಲ್ಲಿ ಈಜಲು ತೆರಳಿದ್ದ ಪ್ರವಾಸಿಗರಿಗೆ ಥಳಿಸಿ ಲೈಫ್‌ಗಾರ್ಡ್‌ಗಳು ದಡಕ್ಕೆ ಕರೆತಂದಿದ್ದಾರೆ. ಬಳಿಕ ಸೂಚನೆಯನ್ನು ನಿರ್ಲಕ್ಷ್ಯಿಸಿ ನೀರಿಗಿಳಿದಿದ್ದಕ್ಕೆ ಹೊಡೆದು ಬುದ್ಧಿ ಹೇಳಿದ್ದಾರೆ. ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜತೆಗೆ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿಯೇ ನೀರಿಗಿಳಿಯದಂತೆ ಕಡಲತೀರದಲ್ಲಿ ರೆಡ್ ಫ್ಲ್ಯಾಗ್ ಅಳವಡಿಸಿದರೂ ಹುಚ್ಚಾಟ ತೋರಿದ ಪ್ರವಾಸಿಗರಿಗೆ ಬಿಸಿ ಮುಟ್ಟಿಸಲಾಗಿದೆ.

ನಿರಂತರ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ ಅಧೋಗತಿ

ಚಿಕ್ಕಮಗಳೂರಿನಲ್ಲಿ ರಣಮಳೆಗೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಮಳೆಯ ಅಬ್ಬರಕ್ಕೆ ಚಾರ್ಮಾಡಿ, ಕೊಟ್ಟಿಗೆಹಾರದಲ್ಲಿ ಕೇವಲ 7 ದಿನಕ್ಕೆ 96 ಇಂಚು ಪ್ರಮಾಣದ ಮಳೆ ದಾಖಲಾಗಿದೆ. ಇತ್ತ ನಿರಂತರ ಮಳೆಯಿಂದಾಗಿ ಚಾರ್ಮಾಡಿ ಹೆದ್ದಾರಿ ಸಂಚಾರ ಅಧೋಗತಿ ತಲುಪಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಲ್ಲಿ ವಾಹನ ಚಲಾಯಿಸಲು ಚಾಲಕರು ಪರದಾಡುತ್ತಿದ್ದಾರೆ. ಮಂಜು ಮಿಶ್ರಿತ ಮಳೆಯಿಂದಾಗಿ ಸಂಚಾರಕ್ಕೆ ಅಡೆತಡೆಯಾಗಿದ್ದು ಜತೆಗೆ ಗುಡ್ಡ ಕುಸಿತದ ಆತಂಕವು ಹೆಚ್ಚಿದೆ. ಕಳೆದ ಭಾನುವಾರ ರಾತ್ರಿ ಚಾರ್ಮಾಡಿಯ ಆಲೆಖಾನ್ ಬಳಿ ಗುಡ್ಡ ಕುಸಿದಿತ್ತು.

ಇದನ್ನೂ ಓದಿ: Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

ಮನೆಗಳಿಗೆ ನುಗ್ಗುತ್ತಿರುವ ನೀರು, ಕೆರೆಯಂತಾದ ಜಮೀನು

ಉತ್ತರಕನ್ನಡ ಜಿಲ್ಲೆಯಲ್ಲಿ ನಿಲ್ಲದ ಮಳೆ ಅಬ್ಬರಕ್ಕೆ ಹಲವೆಡೆ ಮನೆಗಳಿಗೆ ನೀರು ನುಗ್ಗುತ್ತಿದೆ. ಅಂಕೋಲಾ ತಾಲ್ಲೂಕಿನ ಅವರ್ಸಾದಲ್ಲಿ ಹೆದ್ದಾರಿ ಪಕ್ಕದ ಜಮೀನು ಕೆರೆಯಂತಾಗಿತ್ತು. ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಗುಡ್ಡ ಕುಸಿಯುವ ಭೀತಿಯಲ್ಲಿ ಜನರು ಕಾಲಕಳೆಯುತ್ತಿದ್ದಾರೆ. ಕಾರವಾರ, ಅಂಕೋಲಾ ಭಾಗದಲ್ಲಿ ಸಮುದ್ರಕ್ಕೆ ನೀರು ಹರಿದುಹೋಗದೇ ಹಲವೆಡೆ ಅವಾಂತರವೇ ಸೃಷ್ಟಿಯಾಗಿದೆ.

ಇನ್ನೂ ಉತ್ತರಕನ್ನಡದಲ್ಲಿ ಭಾರೀ ಮಳೆಯಿಂದಾಗಿ ಜಲಾಶಯಗಳಿಗೆ ನೀರು ಹರಿದುಬರುತ್ತಿದೆ. ಸೂಪಾ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಿದೆ. ಜೋಯಿಡಾದ ಗಣೇಶಗುಡಿಯಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೂಪಾ ಜಲಾಶಯದ ಗರಿಷ್ಠ 564 ಮೀ ಸಾಮರ್ಥ್ಯ ಇದ್ದು, ಸದ್ಯ ಜಲಾಶಯದಲ್ಲಿ 532.32 ಮೀ ನೀರು ಸಂಗ್ರಹವಾಗಿದೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಗುಂಡಬಾಳ ನದಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನದಿ ತೀರ ಪ್ರದೇಶದ ತೋಟ, ಮನೆಗಳಿಗೆ ನೀರು ನುಗ್ಗಿದೆ. ನೆರೆಯಿಂದಾಗಿ ಗ್ರಾಮದ ಜನರು ಸಂತ್ರಸ್ತರಾಗುವ ಆತಂಕ ಎದುರಾಗಿದೆ. ಮಲೆನಾಡಿನಲ್ಲಿ ಹೆಚ್ಚು ಮಳೆಯಾದ ಕಾರಣ ಗುಂಡಬಾಳ ನದಿ ನೀರಿನಮಟ್ಟ ಏರಿಕೆ ಆಗಿದೆ. ನದಿ ಪಾತ್ರದ ನಿವಾಸಿಗಳನ್ನು ಎತ್ತರದ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸ್ಥಳೀಯಾಡಳಿತದಿಂದ ಸೂಚನೆ ನೀಡಿದೆ.

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶ, ಗದ್ದೆ ಸಾಲುಗಳಿಗೆ ಭಾರೀ ಪ್ರಮಾಣದ ನೀರು ಹರಿದುಹೋಗುತ್ತಿದೆ. ಜನವಸತಿ ಪ್ರದೇಶಗಳತ್ತ ನೀರು ನುಗ್ಗಿ, ರಸ್ತೆಯಲ್ಲಿ ನದಿಯಂತೆ ಹರಿಯುತ್ತಿದೆ. ಸಗ್ರಿ, ಗುಂಡಿಬೈಲು, ಚಕ್ರತೀರ್ಥ ಪ್ರದೇಶದಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

ಜತೆಗೆ ಬೈಲಕೆರೆ, ಕಲ್ಸಂಕ ಮಠದಬೆಟ್ಟು ಜಲಾವೃತಗೊಂಡಿದೆ. ಬೈಲಕೆರೆ ಸಮೀಪ ಮನೆಗಳಿಗೆ ನೀರು ನುಗ್ಗಿ ನೆರೆ ಸೃಷ್ಟಿಯಾಗಿತ್ತು. ಹೀಗಾಗಿ ಗುಂಡಿಬೈಲು ಸಮೀಪ ಐದಾರು ಕುಟುಂಬಗಳ ಸದಸ್ಯರನ್ನು ಅಗ್ನಿಶಾಮಕ ದಳದಿಂದ ರಕ್ಷಣೆ ಮಾಡಲಾಗಿದೆ. ಒಂದು ಮನೆಯ ಮೂವರನ್ನು ರಕ್ಷಣೆ ಮಾಡಿ, ಪಾಡಿಗಾರು ಸಮೀಪ ನಾಲ್ಕು ಮನೆಗಳ ಜನರನ್ನು ಎತ್ತರ ಪ್ರದೇಶಕ್ಕೆ ಶಿಫ್ಟ್ ಮಾಡಿದ್ದಾರೆ. ಉಡುಪಿ ಅಂಬಾಗಿಲು ಕಲ್ಸಂಕ ರಸ್ತೆಯಲ್ಲಿ ಸಂಪೂರ್ಣ ನೆರೆಯಾಗಿದೆ. ಉಡುಪಿ ನಗರಕ್ಕೆ ಸಂಪರ್ಕ ಕಲ್ಪಿಸುವ ಬಹುಮುಖ್ಯ ರಸ್ತೆಯಲ್ಲಿ ನೀರು ನಿಂತಿದ್ದು, ನಗರದ ಗುಂಡಿಬೈಲು ವಾಹನ ಸಂಚಾರ ದುಸ್ತರ ಪರಿಸ್ಥಿತಿಯಲ್ಲಿ ಇದೆ.

ರಾಷ್ಟ್ರೀಯ ಹೆದ್ದಾರಿ 66ರ ಅಂಡರ್ ಪಾಸ್ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ಸಮಸ್ಯೆಯಾಗಿದೆ. ಸರ್ವಿಸ್ ರಸ್ತೆಯಲ್ಲಿ ನೀರು ನಿಂತು ದಿನವು ಇಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಅಂಡರ್ ಪಾಸ್ ಕಾಮಗಾರಿ ವೇಳೆ ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಸರ್ವಿಸ್ ರಸ್ತೆ ಬ್ಲಾಕ್ ಆಗಿದೆ ಎಂದು ಸ್ಥಳೀಯರು ಕಿಡಿಕಾರಿದರು. ಸ್ಥಳೀಯರ ದೂರಿನ ಹಿನ್ನೆಲೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಪರಿಸ್ಥಿತಿ ಅವಲೋಕಿಸಿದರು. ತಕ್ಷಣ ಈ ಸಮಸ್ಯೆಗೆ ತುರ್ತು ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು. ಸರ್ವಿಸ್ ರಸ್ತೆ ಪಕ್ಕದಲ್ಲಿರುವ ಚರಂಡಿ ವ್ಯವಸ್ಥೆ, ಸರಿ ಮಾಡುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಸಂಸರಿಗೆ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಾಥ್‌ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಲ್ಲಿ ಗುಡುಗು ಸಹಿತ ಮಳೆ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ ಮುಂದುವರಿಕೆ

Rain News: ಬೆಂಗಳೂರಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕ ಕರಾವಳಿಯಲ್ಲಿ ಮಧ್ಯಮದಿಂದ ಭಾರಿ ಮಳೆಯಾಗಲಿದ್ದು, ಪ್ರತ್ಯೇಕದಿಂದ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಭಾಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮಂಡ್ಯ, ರಾಮನಗರ, ಮೈಸೂರು ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲಿ ಮಧ್ಯಮ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Leopard Attack : ದಾಳಿ ಮಾಡಿದ ಚಿರತೆಯನ್ನು ಹೊಡೆದು ಕೊಂದು ಆಂಬ್ಯುಲೆನ್ಸ್‌ಗೆ ಹಾಕಿದ ಗ್ರಾಮಸ್ಥರು

ಇಂದು ಕರಾವಳಿ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ

ಕರಾವಳಿಯ ಉತ್ತರಕನ್ನಡದಲ್ಲಿ ಧಾರಾಕಾರ ಮಳೆ‌‌ಯಾಗಲಿದ್ದು, ಶಾಲಾ- ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ. ರಿಂದ ರಜೆ ಆದೇಶ ಹೊರಡಿಸಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇನ್ನೂ ಘಟ್ಟದ ಮೇಲಿನ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Dengue Cases
ರಾಜಕೀಯ2 mins ago

Dengue Cases: ಕಲುಷಿತ ನೀರು ಪೂರೈಕೆಯಾದ್ರೆ ಅಧಿಕಾರಿಗಳೇ ಹೊಣೆ; 15 ದಿನಕ್ಕೊಮ್ಮೆ ಕ್ವಾಲಿಟಿ ಟೆಸ್ಟ್ ಮಾಡಿ ಎಂದ ಸಿಎಂ

Mahanati Show bindu honnali not selected
ಕಿರುತೆರೆ7 mins ago

Mahanati Show: ಫಿನಾಲೆಗೆ ಆಯ್ಕೆಯಾಗಿಲ್ಲ ದಾವಣಗೆರೆ ಟೀಚರ್; ಕೋಪಗೊಂಡ ನೆಟ್ಟಿಗರು!

PGET 2024 Online application for PGET can be submitted till July 10
ಶಿಕ್ಷಣ28 mins ago

PGET 2024 : ಪಿಜಿಇಟಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 10ರವರೆಗೆ ಅವಕಾಶ

Suryakumar Yadav
ಕ್ರೀಡೆ30 mins ago

Suryakumar Yadav: 8 ವರ್ಷಗಳ ಹಿಂದೆಯೇ ಅದ್ಭುತ ಕ್ಯಾಚ್​ ಹಿಡಿದೆ ಎಂದು ವಿವಾಹ ವಾರ್ಷಿಕೋತ್ಸವ ಆಚರಿಸಿದ ಸೂರ್ಯಕುಮಾರ್

Rahul Gandhi
ದೇಶ36 mins ago

Rahul Gandhi: ಹಿಂದುಗಳಿಗೆ ಅವಮಾನ ಖಂಡಿಸಿ ದೇಗುಲದ ಡೋರ್‌ಮ್ಯಾಟ್‌ಗೆ ರಾಹುಲ್‌ ಗಾಂಧಿ ಫೋಟೊ; ಇಲ್ಲಿದೆ Video

Manvita Kamath Honeymoon in baali
ಸ್ಯಾಂಡಲ್ ವುಡ್42 mins ago

Manvita Kamath: ಪತಿ ಅರುಣ್ ಜತೆ ಬಾಲಿಯಲ್ಲಿ ಸಖತ್‌ ಎಂಜಾಯ್‌ ಮಾಡುತ್ತಿರುವ ಮಾನ್ವಿತಾ ಕಾಮತ್!

NEET UG 2024
ದೇಶ54 mins ago

NEET UG 2024: ನೀಟ್‌ ಅಕ್ರಮ ಮೇಲ್ನೋಟಕ್ಕೆ ಸಾಬೀತು ಎಂದ ಸುಪ್ರೀಂ; ಎನ್‌ಟಿಎ, ಸಿಬಿಐಗೆ ಖಡಕ್ ಸೂಚನೆ!

OPS News
ಕರ್ನಾಟಕ54 mins ago

OPS News: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಅರ್ಹರಿಗೆ ಒಪಿಎಸ್‌, ಪ್ರಸ್ತಾವನೆ ಸಲ್ಲಿಕೆಗೆ ಆದೇಶ

ಕ್ರೀಡೆ1 hour ago

Paris 2024 Olympics Athletics: ವಿಶ್ವ ರ್‍ಯಾಂಕಿಂಗ್‌ ಆಧಾರದಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಜೆಸ್ವಿನ್‌, ಅಂಕಿತಾ ಧ್ಯಾನಿ

First Night Video
Latest1 hour ago

First Night Video: ಫಸ್ಟ್‌ ನೈಟ್‌ ವಿಡಿಯೊ ಹಂಚಿಕೊಂಡ ನವ ದಂಪತಿ! ಇನ್ನೇನು ಬಾಕಿ ಉಳಿದಿದೆ ಎಂದ ನೆಟ್ಟಿಗರು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain Effect
ಮಳೆ2 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ4 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು6 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ21 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ24 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ1 day ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

ಟ್ರೆಂಡಿಂಗ್‌