Site icon Vistara News

Karnataka Weather : ಕರಾವಳಿ ಹಾಗೂ ಉತ್ತರ ಒಳನಾಡಲ್ಲಿ ದುಪ್ಪಟ್ಟಾಗಲಿದೆ ತಾಪಮಾನ

Dry weather prevailed and Rising temperatures in coastal and north interior Karnataka

ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ಒಣ ಹವೆ (Dry weather) ಮುಂದುವರಿಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯ ಕೆಲವೆಡೆ ಗರಿಷ್ಠ ತಾಪಮಾನವು 3-4 ಡಿ.ಸೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (karnataka Weather Forecast) ನೀಡಿದೆ.

ಉತ್ತರ ಒಳನಾಡಿನ ಬೀದರ್‌, ಬಾಗಲಕೋಟೆ, ವಿಜಯಪುರ, ಕಲಬುರಗಿ ಹಾಗೂ ಬೆಳಗಾವಿ, ರಾಯಚೂರು, ಧಾರವಾಡ, ಗದಗ, ಹಾವೇರಿ ಸೇರಿದಂತೆ ಕೊಪ್ಪಳ, ಯಾದಗಿರಿನ ಹಲವೆಡೆ 2-3 ಡಿ.ಸೆ ಹೆಚ್ಚಾಗಲಿದ್ದು, ಬಿಸಿಲ ಝಳ ಇರಲಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿರಲಿದೆ.

ಬೆಂಗಳೂರಲ್ಲಿ ಮಂಜಿನ ವಾತಾವರಣ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Child Marriage : ಮಗ- ಸೊಸೆಗೆ ತಿಳಿಯದಂತೆ ಮನೆಗೆ ಬಂದ ಮೊಮ್ಮಗಳಿಗೆ ಗುಟ್ಟಾಗಿ ಮದುವೆ ಮಾಡಿಸಿದ ಅಜ್ಜಿ!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ -17 ಡಿ.ಸೆ
ಮಂಗಳೂರು: 35 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 33 ಡಿ.ಸೆ – 18 ಡಿ.ಸೆ
ಗದಗ: 35 ಡಿ.ಸೆ – 20 ಡಿ.ಸೆ
ಹೊನ್ನಾವರ: 35 ಡಿ.ಸೆ- 20 ಡಿ.ಸೆ
ಕಲಬುರಗಿ: 36 ಡಿ.ಸೆ – 21 ಡಿ.ಸೆ
ಬೆಳಗಾವಿ: 34 ಡಿ.ಸೆ – 17 ಡಿ.ಸೆ
ಕಾರವಾರ: 36 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version