Site icon Vistara News

Karnataka Weather : ಬೆಂಗಳೂರು ಸೇರಿ ಐದು ಕಡೆ ಮಂಜಿನ ವಾತಾವರಣ; ಉಳಿದೆಡೆ ಹೇಗೆ?

Foggy conditions prevail at five places including Bengaluru

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣವು (Dry Weather) ಮುಂದುವರಿಯಲಿದೆ. ಉತ್ತರ ಒಳನಾಡಿನ ಕೆಲವೆಡೆ ಕನಿಷ್ಠ ಉಷ್ಣಾಂಶ ಇಳಿಕೆ ಕಂಡರೆ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಏರಿಕೆ ಆಗಲಿದೆ. ಬೆಂಗಳೂರು ಸೇರಿ ಮಲೆನಾಡಿನ ಭಾಗದಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ (Karnataka Weather Forecast) ಇರಲಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರಿಯಲಿದ್ದು, ಪ್ರತ್ಯೇಕ ಕಡೆಗಳಲ್ಲಿ ಕನಿಷ್ಠ ಉಷ್ಣಾಂಶ ಏರಿಕೆ ಆಗಲಿದೆ. ಇದರಿಂದಾಗಿ ಧಗೆ ವಾತಾವರಣ ಇರಲಿದೆ. ಇನ್ನು ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಯಲ್ಲಿ ಮುಂಜಾನೆ ಮಂಜು ಮುಸುಕವ ಸಾಧ್ಯತೆ ಇದೆ. ಉಳಿದಂತೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರ, ರಾಮನಗರ ಸೇರಿದಂತೆ ವಿಜಯನಗರ, ಚಾಮರಾಜನಗರ, ತುಮಕೂರು, ಚಿತ್ರದುರ್ಗದಲ್ಲಿ ಒಣಹವೆ ಇರಲಿದೆ. ಕೆಲವೊಮ್ಮೆ ಈ ಜಿಲ್ಲೆಗಳ ಪ್ರತ್ಯೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಶುಷ್ಕ ವಾತಾವರಣ ಇರಲಿದೆ. ಜತೆಗೆ ಹಗಲಿರುಳು ಚಳಿ ವಾತಾವರಣ ಇರಲಿದೆ.

ಇದನ್ನೂ ಓದಿ: Drone Pratap : ಲೈಸೆನ್ಸ್‌ ಪಡೆಯದೆ ಡ್ರೋನ್‌ ಹಾರಾಟ-ಮಾರಾಟ; ಡ್ರೋನ್‌ ಪ್ರತಾಪ್‌ ವಿರುದ್ಧ ಮತ್ತೊಂದು ದೂರು

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ -18 ಡಿ.ಸೆ
ಮಂಗಳೂರು: 34 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 14 ಡಿ.ಸೆ
ಗದಗ: 31 ಡಿ.ಸೆ – 15 ಡಿ.ಸೆ
ಹೊನ್ನಾವರ: 34 ಡಿ.ಸೆ- 19 ಡಿ.ಸೆ
ಕಲಬುರಗಿ: 33 ಡಿ.ಸೆ – 20 ಡಿ.ಸೆ
ಬೆಳಗಾವಿ: 31 ಡಿ.ಸೆ – 12 ಡಿ.ಸೆ
ಕಾರವಾರ: 34 ಡಿ.ಸೆ – 20 ಡಿ.ಸೆ

ಬೆಂಗಳೂರು, ಮಂಗಳೂರು, ಚಿತ್ರದುರ್ಗ, ಕಲಬುರಗಿ, ಬೆಳಗಾವಿಯಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಉಳಿದಂತೆ ಗದಗ, ಹೊನ್ನಾವರ, ಕಾರವಾರದಲ್ಲಿ ಆಕಾಶವು ನಿರ್ಮಲವಾಗಿರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version