Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ - Vistara News

ಮಳೆ

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Karnataka weather Forecast : ಭಾರಿ ಮಳೆಯೊಂದಿಗೆ (Rain News) ಬಿರುಗಾಳಿಯು ಗಂಟೆಗೆ 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (karnataka Weather Forecast) ಸಾಮಾನ್ಯವಾಗಿದ್ದು, ಕರಾವಳಿ ಹಾಗೂ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುವ (Rain News) ನಿರೀಕ್ಷೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಸುತ್ತಮುತ್ತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹಾಸನದಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ಗಾಳಿಯ ವೇಗವು 40-50 ಕಿ.ಮೀ ತಲುಪಲಿದೆ.

ಇನ್ನೂ ದಕ್ಷಿಣ ಒಳನಾಡಿನ ಹಲವೆಡೆ ಗಾಳಿಯ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ ಕೋಲಾರದಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ರಾಯಚೂರು ಮತ್ತು ಕಲಬುರಗಿ , ಬೆಳಗಾವಿ, ರಾಯಚೂರು, ಬೀದರ್, ಬಾಗಲಕೋಟೆ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಸಮುದ್ರಕ್ಕಿಳಿಯುವ ಮುನ್ನ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Assault Case : ಹೋಮ್‌ ವರ್ಕ್‌ ಮಾಡದ್ದಕ್ಕೆ ಬಾಲಕಿಗೆ ಬಾಸುಂಡೆ ಬರುವಂತೆ ಬಾರಿಸಿದ ಮುಖ್ಯ ಶಿಕ್ಷಕಿ

ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ

ಉಡುಪಿ: ಉಡುಪಿಯ (Udupi News ) ಬೈಂದೂರು ಕ್ಷೇತ್ರದ ಯಡಮೊಗೆಯಲ್ಲಿ ಹೊಸ ಪ್ರಯೋಗ ಮಾಡಲಾಗಿದೆ. ಮಳೆಗಾಲದಲ್ಲಿ (Karnataka Rain) ಕಿರು ಸೇತುವೆ ಇಲ್ಲದೆ ಕಂಗಾಲಾಗಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ತಮ್ಮ ಕ್ಷೇತ್ರದ ಜನರಿಗೆ ನೆರವು ನೀಡುವ ಉದ್ದೇಶಕ್ಕೆ ಕ್ರೌಡ್‌ ಫಂಡಿಂಗ್ ಮೂಲಕ ಅತ್ಯಂತ ಕಡಿಮೆ ವೆಚ್ಚದಲ್ಲಿ ಸೇತುವೆ ನಿರ್ಮಿಸಿದ್ದಾರೆ. ಅದು ಕೂಡ ಹಳೆ ಲಾರಿಯ ಚಾಸ್ಸಿ ಬಳಸಿ ಕಿರು ಸೇತುವೆಯನ್ನು ನಿರ್ಮಿಸಲಾಗಿದೆ.

ಕಳೆದ ಬಾರಿ ಸಮರ್ಪಕ ಕಿರು ಸೇತುವೆ ಇಲ್ಲದೆ ಶಾಲಾ ಬಾಲಕಿ ನೀರು ಪಾಲಾಗಿದ್ದಳು. ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಆಗುವ ಸಾವು- ನೋವು ತಪ್ಪಿಸಲು ಸಮೃದ್ಧ ಬೈಂದೂರು ಮತ್ತು ಅರುಣಾಚಲ ಟ್ರಸ್ಟ್ ಸಹಭಾಗಿತ್ವದಲ್ಲಿ ಸೇತುವೆ ನಿರ್ಮಿಸಲಾಗಿದೆ.

ಮಳೆಗಾಲದಲ್ಲಿ ಸುಮಾರು 30 ಮನೆಗಳಿಗೆ ಸಂಪರ್ಕವೇ ಇಲ್ಲದೇ ಕಂಗಲಾಗಿದ್ದರು. ಮೂರು ಲಾರಿಗಳ ಹಳೆಯ ಚಾಸ್ಸಿ ಬಳಸಿ ಕಿರು ಸೇತುವೆಯನ್ನು ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಕಡಿಮೆ ಖರ್ಚಿನಲ್ಲಿ ಲಾರಿಯ ಚಾಸ್ಸಿ, ಬೋರ್ ವೇಲ್ ಪೈಪ್, ಜಿಎ ಪೈಟ್, ಕಬ್ಬಿಣ ತಗಡು ಬಳಸಿ ಸೇತುವೆ ನಿರ್ಮಿಸಲಾಗಿದೆ. ಅಂದಾಜು 2 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಕಿರು ಸೇತುವೆ ನಿರ್ಮಿಸಲಾಗಿದೆ.

udupi news
udupi news

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Karnataka Weather Forecast : ಮಳೆಯ ಅವಾಂತರಕ್ಕೆ (Rain News) ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದ ಹಲವೆಡೆ ಮಳೆಗೆ ಮರ ಬಿದ್ದು, ಗುಡ್ಡ ಕುಸಿದು, ಅಪಘಾತಗಳು ಸಂಭವಿಸಿದೆ. ಬುಧವಾರಕ್ಕೂ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಹಾವೇರಿ/ಬೆಂಗಳೂರು: ರಾಜ್ಯದಲ್ಲಿ ಮಳೆ ಅವಾಂತರ (Karnataka Weather Forecast) ಮುಂದುವರಿದಿದ್ದು, ನಾಳೆಯೂ ವರುಣನ ಅಬ್ಬರವು ಮುಂದುವರಿಯಲಿದೆ. ಸತತ ಮಳೆಗೆ (Rain News) ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಸಮ್ಮಸಗಿ ಬಳಿ ಗುಡ್ಡ ಕುಸಿದಿದೆ. ಹೆದ್ದಾರಿ ಮೇಲೆ ಗುಡ್ಡ ಕುಸಿದ ಪರಿಣಾಮ ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಬೇಕಾಯಿತು.

ಎಕ್ಕುಂಬಿ-ಮೊಳಕಾಲ್ಮುರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆ ಮಂದಗತಿಯಲ್ಲಿ ಸಾಗುತ್ತಿದ್ದ ಕಾರಣಕ್ಕೆ ಕೆಲವು ಹೊತ್ತು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಹಾವೇರಿ – ಶಿರಸಿ ಸಂಪರ್ಕ ಕಲ್ಪಿಸುವ ಹೆದ್ದಾರಿ ಇದಾಗಿದ್ದು, ಮಣ್ಣು ತೆರವುಗೊಳಿಸಿದ ಬಳಿಕ‌ ವಾಹನ ಸಂಚಾರ ಆರಂಭವಾಗಿತ್ತು.

ಮಳೆಯಿಂದಾಗಿ 526 ಮನೆಗಳಿಗೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ 526 ಮನೆಗಳಿಗೆ ಹಾನಿಯಾಗಿದೆ. ಮಳೆಯಿಂದಾಗಿ ಈವರೆಗೂ ಐವರು ಮೃತಪಟ್ಟಿದ್ದರು, ನಾಲ್ವರು ಗಾಯಗೊಂಡಿದ್ದಾರೆ. ಎರಡು ಜಾನುವಾರುಗಳು ಸಾವನ್ನಪ್ಪಿವೆ. ಜತೆಗೆ ವರದಾ, ತುಂಗಭದ್ರಾ, ಕುಮದ್ವತಿ, ನದಿ ಅಬ್ವರಕ್ಕೆ 12 ಸೇತುವೆಗಳು ಮುಳುಗಡೆ ಆಗಿ ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. 49 ರೈತರ 31.27 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿಯಾಗಿದೆ. ಮೆಣಸಿನಕಾಯಿ 17.25 ಹೆಕ್ಟೇರ್ ಬೆಳೆ, ಬೆಳ್ಳುಳ್ಳಿ ಹಾಗಲಕಾಯಿ,ಕ್ಯಾಬಿಜ್ ಸೇರಿದಂತೆ ತರಕಾರಿ ಬೆಳೆಗಳು ನೀರುಪಾಲಾಗಿದೆ.

ಚಿಕ್ಕಮಗಳೂರಿನಲ್ಲಿ ಗ್ರಾಮಸ್ಥರಿಗೆ ಕಣ್ಣೀರು ತರಿಸಿದ ವರುಣ

ಚಿಕ್ಕಮಗಳೂರಿನಲ್ಲಿ ಭಾರೀ ಗಾಳಿ-ಮಳೆಗೆ ಮನೆ ಮೇಲೆ ಮರ ಬಿದ್ದಿದೆ. ಪರಿಣಾಮ ಮನೆಯೊಳಗೆ ಇದ್ದ ವೃದ್ಧೆ ಗಂಭೀರ ಗಾಯಗೊಂಡರು. ಮಳೆಯ ನಡುವೆ ರಸ್ತೆಯೇ ಇಲ್ಲದೆ ಮನೆಯಿಂದ ಜೋಳಿಗೆಯಲ್ಲಿ ಹಳ್ಳದಾಟಿಸಿ ಕಳಸ ಆಸ್ಪತ್ರೆಗೆ ದಾಖಲು ಮಾಡಿದರು. ಕಳಸ ತಾಲೂಕಿನ ಕಳಗೋಡೆ ಗ್ರಾಮದ ಕಾರ್ಲೆಯಲ್ಲಿ ಘಟನೆ ನಡೆದಿದೆ.

ಹೆದ್ದಾರಿಯಲ್ಲಿ ಮಣ್ಣು ಕುಸಿತ

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಣ್ಣು ಕುಸಿದಿದೆ. ಮಣ್ಣು ಕುಸಿದಿದ್ದರಿಂದ ರಸ್ತೆ ಹದಗೆಟ್ಟಿತ್ತು. ಶಿರಾಡಿಘಾಟ್ ರಸ್ತೆಯ ತಿರುವಿನಲ್ಲಿ ಬರುವಾಗ ಕಂಟೇನರ್‌ ಉರುಳಿಬಿದ್ದಿದೆ. ಸಕಲೇಶಪುರ ತಾಲೂಕಿನ ಕೆಸಗಾನಹಳ್ಳಿ ಬಳಿ ಘಟನೆ ನಡೆದಿದೆ. ಭಾರಿ ಮಳೆಗೆ ಶಿರಾಡಿಘಾಟ್ ರಸ್ತೆಯಲ್ಲಿ ಮಣ್ಣು ಕುಸಿಯುತ್ತಲೆ ಇದೆ. ಕಂಟೇನರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಪಾತಕ್ಕೆ ಕಂಟೇನರ್ ಬೀಳುವುದು ಕೂದಲೆಳೆ ಅಂತರದಲ್ಲಿ ಮಿಸ್‌ ಆಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಮಳೆಯ ಅಬ್ಬರಕ್ಕೆ ಕುಸಿದ ಸರ್ಕಾರಿ ಶಾಲೆ ಗೋಡೆ

ಶಿವಮೊಗ್ಗದಲ್ಲಿ ಮಳೆಗೆ ಸರ್ಕಾರಿ ಶಾಲೆಯ ಗೋಡೆಯು ಕುಸಿದಿದೆ. ಮಂಗಳವಾರ ಮಧ್ಯಾಹ್ನ ಅನವಟ್ಟಿಯ ಉರ್ದು ಸರ್ಕಾರಿ ಶಾಲೆಯ ಗೋಡೆ ಕುಸಿದಿದೆ. ವಿದ್ಯಾರ್ಥಿಗಳು ಊಟಕ್ಕೆ ತೆರಳಿದ್ದ ಸಮಯದಲ್ಲಿ ಗೋಡೆ ಕುಸಿದಿದೆ. ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದೆ.

karnataka weather Forecast
karnataka weather Forecast

ಇದನ್ನೂ ಓದಿ: Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

ಕರಾವಳಿಯಲ್ಲಿ ಮಳೆಯಾಟ ಮುಂದುವರಿಕೆ

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಸುತ್ತಮುತ್ತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗವು 40-50 ಕಿ.ಮೀ ತಲುಪಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಗಾಳಿಯ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲೂ ಹಗುರದಿಂದ ಕೂಡಿದ ಮಳೆಯಾಗಲಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿಗ್ರಿ ಸೆಲಿಯಸ್ಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

Udupi News : ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಪರಿಕಲ್ಪನೆಯಲ್ಲಿ ಹಳೆ ಲಾರಿ ಚಾಸ್ಸಿಯನ್ನು ಕಿರು ಸೇತುವೆ ನಿರ್ಮಾಣ ಮಾಡಲಾಗಿದೆ. ಈ ಮೂಲಕ ಮಳೆಗಾಲದಲ್ಲಿ ಸುಮಾರು 30 ಮನೆಗಳಿಗೆ ಸಂಪರ್ಕವೇ ಇಲ್ಲದೇ ಕಂಗಲಾಗಿದ್ದವರು ಖುಷಿಗೊಂಡಿದ್ದಾರೆ.

VISTARANEWS.COM


on

By

Udupi News
Koo

ಉಡುಪಿ: ಉಡುಪಿಯ (Udupi News ) ಬೈಂದೂರು ಕ್ಷೇತ್ರದ ಯಡಮೊಗೆಯಲ್ಲಿ ಹೊಸ ಪ್ರಯೋಗ ಮಾಡಲಾಗಿದೆ. ಮಳೆಗಾಲದಲ್ಲಿ (Karnataka Rain) ಕಿರು ಸೇತುವೆ ಇಲ್ಲದೆ ಕಂಗಾಲಾಗಿದ್ದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ತಮ್ಮ ಕ್ಷೇತ್ರದ ಜನರಿಗೆ ನೆರವು ನೀಡುವ ಉದ್ದೇಶಕ್ಕೆ ಕ್ರೌಡ್‌ ಫಂಡಿಂಗ್ ಮೂಲಕ ಅತ್ಯಂತ ಕಡಿಮೆ ವೆಚ್ಚದಲ್ಲಿ ಸೇತುವೆ ನಿರ್ಮಿಸಿದ್ದಾರೆ. ಅದು ಕೂಡ ಹಳೆ ಲಾರಿಯ ಚಾಸ್ಸಿ ಬಳಸಿ ಕಿರು ಸೇತುವೆಯನ್ನು ನಿರ್ಮಿಸಲಾಗಿದೆ.

ಕಳೆದ ಬಾರಿ ಸಮರ್ಪಕ ಕಿರು ಸೇತುವೆ ಇಲ್ಲದೆ ಶಾಲಾ ಬಾಲಕಿ ನೀರು ಪಾಲಾಗಿದ್ದಳು. ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಆಗುವ ಸಾವು- ನೋವು ತಪ್ಪಿಸಲು ಸಮೃದ್ಧ ಬೈಂದೂರು ಮತ್ತು ಅರುಣಾಚಲ ಟ್ರಸ್ಟ್ ಸಹಭಾಗಿತ್ವದಲ್ಲಿ ಸೇತುವೆ ನಿರ್ಮಿಸಲಾಗಿದೆ.

ಮಳೆಗಾಲದಲ್ಲಿ ಸುಮಾರು 30 ಮನೆಗಳಿಗೆ ಸಂಪರ್ಕವೇ ಇಲ್ಲದೇ ಕಂಗಲಾಗಿದ್ದರು. ಮೂರು ಲಾರಿಗಳ ಹಳೆಯ ಚಾಸ್ಸಿ ಬಳಸಿ ಕಿರು ಸೇತುವೆಯನ್ನು ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಕಡಿಮೆ ಖರ್ಚಿನಲ್ಲಿ ಲಾರಿಯ ಚಾಸ್ಸಿ, ಬೋರ್ ವೇಲ್ ಪೈಪ್, ಜಿಎ ಪೈಟ್, ಕಬ್ಬಿಣ ತಗಡು ಬಳಸಿ ಸೇತುವೆ ನಿರ್ಮಿಸಲಾಗಿದೆ. ಅಂದಾಜು 2 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಕಿರು ಸೇತುವೆ ನಿರ್ಮಿಸಲಾಗಿದೆ.

udupi news
udupi news

ಇದನ್ನೂ ಓದಿ: Self Harming : ಅನಾರೋಗ್ಯದಿಂದ ಬೇಸತ್ತು ಕ್ರಿಮಿನಾಶಕ ಸೇವಿಸಿ ದಂಪತಿ ಆತ್ಮಹತ್ಯೆ; ಸಾಲಗಾರರ ಕಾಟಕ್ಕೆ ಹೆದರಿ ವ್ಯಕ್ತಿ ನಾಪತ್ತೆ

ಮಹಾರಾಷ್ಟ್ರ- ಕರ್ನಾಟಕ‌ ಸಂಪರ್ಕ‌ ಸೇತುವೆ ಬಂದ್

ಮಹಾರಾಷ್ಟ್ರ- ಕರ್ನಾಟಕಕ್ಕೆ ಸಂಪರ್ಕವಾಗಿದ್ದ ಕುಡಚಿಯ ಬೃಹತ್ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಉಗಾರ್ ಸಂಪರ್ಕ ಸೇತುವೆಯು ಕರ್ನಾಟಕ ಮತ್ತು ಮಹಾರಾಷ್ಟ್ರದ ಸಂಪರ್ಕ ಕೊಂಡಿಯಾಗಿದೆ. ಕೃಷ್ಣಾ ನದಿಯ ಅಬ್ಬರಕ್ಕೆ ಸೇತುವೆ ಮೇಲೆ ನದಿ‌ ನೀರು ಹರಿದಿದೆ. ಸೇತುವೆ ಮುಳುಗಡೆಯಾಗಿದ್ದರಿಂದ ಸಂಚಾರವನ್ನು ಬಂದ್‌ ಮಾಡಲಾಗಿದೆ. ಕುಡಚಿ ಠಾಣಾ ಪೊಲೀಸರಿಂದ ಸೇತುವೆಗೆ ಬ್ಯಾರಿಕೇಡ್‌ ಅಳವಡಿಸಲಾಗಿದೆ.

ಇತ್ತ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ‌ ಕಲ್ಳೋಳ ಗ್ರಾಮದಲ್ಲಿ ಕೃಷ್ಟೆಯ ಅಬ್ಬರಕ್ಕೆ ಮಂದಿರ ಜಲಾವೃತಗೊಂಡಿದೆ. ಅತ್ತ ಜಮಖಂಡಿ ಮೀರಜ್ ಸೇತುವೆ ಸಂಪೂರ್ಣ ಮುಳುಗಡೆಯಿಂದಾಗಿ ವಾಹನ ಸವಾರರು ಪರದಾಡಿದ್ದಾರೆ. ಕುಡಚಿ- ಉಗಾರ ಸೇತುವೆಯು ಜಲಾವೃತವಾಗಿದ್ದು, ಮಹಾರಾಷ್ಟ್ರ ರಾಜ್ಯ ಸಾಂಗ್ಲಿ ಬಾಗಲಕೋಟೆ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗ ಕಡಿತವಾಗಿದೆ. ಸೇತುವೆ ಮೇಲೆ ಮೂರು ಅಡಿಯಷ್ಟು ನೀರು ನಿಂತು ಅವಾಂತರವೇ ಸೃಷ್ಟಿಯಾಗಿದೆ. ಇನ್ನೂ ಅಥಣಿಯಲ್ಲಿ ಜಮೀನುಗಳಿಗೆ ಕೃಷ್ಣಾ ನದಿ ನೀರು ನುಗ್ಗಿದೆ. ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದ ಬಳಿ ನೀರು ನುಗ್ಗಿ ಈಗಾಗಲೇ ಎರಡು ಸಾವಿರ ಹೆಕ್ಟರ್‌ಕ್ಕಿಂತಲೂ ಅಧಿಕ ಪ್ರದೇಶಕ್ಕೆ ಹಾನಿಯಾಗಿದೆ. ನದಿಗೆ ಇಳಿಯದಂತೆ ನದಿಪಾತ್ರದ ಜನರಿಗೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಅಡಿಕೆ ತೋಟ ನೀರುಪಾಲು

ಶಿವಮೊಗ್ಗದ ಹೊಸನಗರದ ಹೆದ್ದಾರಿಪುರ ಗ್ರಾ.ಪಂ.ವ್ಯಾಪ್ತಿಯ ವಡಾಹೊಸಳ್ಳಿ ಗ್ರಾಮದಲ್ಲಿ ಹಳ್ಳದ ದಂಡೆ ಒಡೆದು ಅಡಿಕೆ ತೋಟಕ್ಕೆ ಹಾನಿಯಾಗಿದೆ. ಗ್ರಾಮದ ಕಮಲಾಕ್ಷ ಎಂಬುವರ ಕೃಷಿ ಜಮೀನು ಜಲಾವೃತಗೊಂಡಿದೆ. ಕಳೆದ ವಾರ ಸುರಿದ ಧಾರಾಕಾರ ಮಳೆಗೆ ಹಳ್ಳದ ನೀರು ಉಕ್ಕಿ ಹರಿದಿದೆ. ಪರಿಣಾಮ ಅಪಾರ ಪ್ರಮಾಣದ ನೀರು ತೋಟಕ್ಕೆ ನುಗ್ಗಿದೆ. ನೂರಾರು ಅಡಿಕೆ ಸಸಿಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಹಾವೇರಿಯಲ್ಲಿ ಮಳೆಯಾರ್ಭಟಕ್ಕೆ ಮರ ಬಿದ್ದು ಬಲಿಯಾದ ಹಸು; ಮಹಾರಾಷ್ಟ್ರ- ಕರ್ನಾಟಕ‌ ಸಂಪರ್ಕ‌ ಸೇತುವೆ ಬಂದ್

Karnataka Rain : ಮಳೆಯಿಂದಾಗಿ ಸಾವು-ನೋವು ಮುಂದುವರಿದಿದೆ. ಹಾವೇರಿಯಲ್ಲಿ ಮಳೆಗೆ ಬೃಹತ್‌ ಮರ ಬಿದ್ದು ಹಸುವೊಂದು ಮೃತಪಟ್ಟಿದೆ. ಇತ್ತ ಬೆಳಗಾವಿಯಲ್ಲಿ ಹಲವು ಸೇತುವೆಗಳು ಮುಳುಗಡೆಯಾಗಿದೆ.

VISTARANEWS.COM


on

By

karnataka rain
Koo

ಹಾವೇರಿ/ಬೆಳಗಾವಿ: ಹಾವೇರಿ ಜಿಲ್ಲೆಯಲ್ಲಿ ಮಳೆಯಾರ್ಭಟ (Karnataka Rain) ಮುಂದುವರಿದಿದೆ. ಸತತ ಮಳೆಯಿಂದಾಗಿ ಮರದ ಬುಡ ಸಡಿಲಗೊಂಡು ಕುಸಿದು ಬಿದ್ದಿದೆ. ಮರದಡಿ ನಿಂತಿದ್ದ ಹಸುವಿನ ಮೇಲೆ ಮರದ ತುಂಡು ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಜಾನುವಾರು ಸಾವನ್ನಪ್ಪಿದೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ನಾಗಪ್ಪ ಗಿರಿಯಪ್ಪನವರು ಎಂಬುವವರಿಗೆ ಸೇರಿದ ಹಸು ಮೃತಪಟ್ಟಿದೆ.

ಮಳೆ ಅಬ್ಬರಕ್ಕೆ ಥಂಡಾ ಹೊಡೆದ ಬೆಳಗಾವಿ

ಮಹಾರಾಷ್ಟ್ರ ಮಳೆಗೆ ಕೃಷ್ಣಾ, ದೂದಗಂಗಾ, ವೇದಗಂಗಾ ನದಿಯ ಒಳ ಹರಿವಿನಲ್ಲಿ ಮತ್ತೆ ಹೆಚ್ಚಳಗೊಂಡಿದೆ. ಕೃಷ್ಣಾ ನದಿಗೆ ಒಟ್ಟು 1, 52,000 ಕ್ಯೂಸೇಕ್ ನೀರಿನ ಒಳ ಹರಿವು ಹೆಚ್ಚಳಗೊಂಡಿದೆ. ದೂದಗಂಗಾ ನದಿಯಲ್ಲಿ ನೀರು ಹೆಚ್ಚಳ ಹಿನ್ನೆಲೆಯಲ್ಲಿ ಬೆಳಗಾವಿಯ ಸದಲಗಾ-ಬೋರಗಾವ ರಸ್ತೆ ಸಂಪರ್ಕ ಕಡಿತಗೊಂಡಿದೆ. ನದಿ ಹಿನ್ನಿರು ರಸ್ತೆಗೆ ಆವರಿಸಿ ರಸ್ತೆ ಸಂಚಾರ ಬಂದ್‌ ಆಗಿದೆ. ಸದಲಗಾ ಪಟ್ಟಣದ ಹೊರ ವಲಯದ ಲಕ್ಷ್ಮಿ ದೇವಸ್ಥಾನ ಬಳಿ ನೀರು ಆವರಿಸಿ ರಸ್ತೆ ಬಂದ್ ಆಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ-ಬೋರಗಾವ ಗ್ರಾಮದಲ್ಲಿ ಘಟನೆ ನಡೆದಿದೆ. ನೀರು ಹೆಚ್ಚಳದಿಂದಾಗಿ ತೋಟದ ಮನೆಯಿಂದ ಜಾನುವಾರುಗಳನ್ನು ಸ್ಥಳಾಂತರ ಮಾಡಿದ್ದಾರೆ.

ಇದನ್ನೂ ಓದಿ: Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

ಮಹಾರಾಷ್ಟ್ರ- ಕರ್ನಾಟಕ‌ ಸಂಪರ್ಕ‌ ಸೇತುವೆ ಬಂದ್

ಮಹಾರಾಷ್ಟ್ರ- ಕರ್ನಾಟಕಕ್ಕೆ ಸಂಪರ್ಕವಾಗಿದ್ದ ಕುಡಚಿಯ ಬೃಹತ್ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಉಗಾರ್ ಸಂಪರ್ಕ ಸೇತುವೆಯು ಕರ್ನಾಟಕ ಮತ್ತು ಮಹಾರಾಷ್ಟ್ರದ ಸಂಪರ್ಕ ಕೊಂಡಿಯಾಗಿದೆ. ಕೃಷ್ಣಾ ನದಿಯ ಅಬ್ಬರಕ್ಕೆ ಸೇತುವೆ ಮೇಲೆ ನದಿ‌ ನೀರು ಹರಿದಿದೆ. ಸೇತುವೆ ಮುಳುಗಡೆಯಾಗಿದ್ದರಿಂದ ಸಂಚಾರವನ್ನು ಬಂದ್‌ ಮಾಡಲಾಗಿದೆ. ಕುಡಚಿ ಠಾಣಾ ಪೊಲೀಸರಿಂದ ಸೇತುವೆಗೆ ಬ್ಯಾರಿಕೇಡ್‌ ಅಳವಡಿಸಲಾಗಿದೆ.

ಇತ್ತ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ‌ ಕಲ್ಳೋಳ ಗ್ರಾಮದಲ್ಲಿ ಕೃಷ್ಟೆಯ ಅಬ್ಬರಕ್ಕೆ ಮಂದಿರ ಜಲಾವೃತಗೊಂಡಿದೆ. ಅತ್ತ ಜಮಖಂಡಿ ಮೀರಜ್ ಸೇತುವೆ ಸಂಪೂರ್ಣ ಮುಳುಗಡೆಯಿಂದಾಗಿ ವಾಹನ ಸವಾರರು ಪರದಾಡಿದ್ದಾರೆ. ಕುಡಚಿ- ಉಗಾರ ಸೇತುವೆಯು ಜಲಾವೃತವಾಗಿದ್ದು, ಮಹಾರಾಷ್ಟ್ರ ರಾಜ್ಯ ಸಾಂಗ್ಲಿ ಬಾಗಲಕೋಟೆ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗ ಕಡಿತವಾಗಿದೆ. ಸೇತುವೆ ಮೇಲೆ ಮೂರು ಅಡಿಯಷ್ಟು ನೀರು ನಿಂತು ಅವಾಂತರವೇ ಸೃಷ್ಟಿಯಾಗಿದೆ. ಇನ್ನೂ ಅಥಣಿಯಲ್ಲಿ ಜಮೀನುಗಳಿಗೆ ಕೃಷ್ಣಾ ನದಿ ನೀರು ನುಗ್ಗಿದೆ. ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದ ಬಳಿ ನೀರು ನುಗ್ಗಿ ಈಗಾಗಲೇ ಎರಡು ಸಾವಿರ ಹೆಕ್ಟರ್‌ಕ್ಕಿಂತಲೂ ಅಧಿಕ ಪ್ರದೇಶಕ್ಕೆ ಹಾನಿಯಾಗಿದೆ. ನದಿಗೆ ಇಳಿಯದಂತೆ ನದಿಪಾತ್ರದ ಜನರಿಗೆ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಅಡಿಕೆ ತೋಟ ನೀರುಪಾಲು

ಶಿವಮೊಗ್ಗದ ಹೊಸನಗರದ ಹೆದ್ದಾರಿಪುರ ಗ್ರಾ.ಪಂ.ವ್ಯಾಪ್ತಿಯ ವಡಾಹೊಸಳ್ಳಿ ಗ್ರಾಮದಲ್ಲಿ ಹಳ್ಳದ ದಂಡೆ ಒಡೆದು ಅಡಿಕೆ ತೋಟಕ್ಕೆ ಹಾನಿಯಾಗಿದೆ. ಗ್ರಾಮದ ಕಮಲಾಕ್ಷ ಎಂಬುವರ ಕೃಷಿ ಜಮೀನು ಜಲಾವೃತಗೊಂಡಿದೆ. ಕಳೆದ ವಾರ ಸುರಿದ ಧಾರಾಕಾರ ಮಳೆಗೆ ಹಳ್ಳದ ನೀರು ಉಕ್ಕಿ ಹರಿದಿದೆ. ಪರಿಣಾಮ ಅಪಾರ ಪ್ರಮಾಣದ ನೀರು ತೋಟಕ್ಕೆ ನುಗ್ಗಿದೆ. ನೂರಾರು ಅಡಿಕೆ ಸಸಿಗಳಿಗೆ ಹಾನಿಯಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಸವೇಶ್ವರ ದೇಗುಲ ಜಲಾವೃತ

ಘಟಪ್ರಭಾ ನದಿ ನೀರು ಹರಿವಿನಲ್ಲಿ ಹೆಚ್ಚಳದಿಂದಾಗಿ ಬಾಗಲಕೋಟೆಯ ಮುಧೋಳದ ಮಾಚಕನೂರು ಗ್ರಾಮದ ಹೊಳೆ ಬಸವೇಶ್ವರ ದೇಗುಲ ಜಲಾವೃತಗೊಂಡಿದೆ. ಪಶ್ಚಿಮ ಘಟ್ಟ ಹಾಗೂ ಬೆಳಗಾವಿ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಘಟಪ್ರಭಾ ನದಿಗೆ 27 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಮುಧೋಳ ತಾಲೂಕಿನ 12 ಸಣ್ಣ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತಗೊಂಡಿದೆ. ಘಟಪ್ರಭಾ ನದಿ ಪಾತ್ರದ 21 ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ: ಮುಂದುವರಿದ ಕಾರ್ಯಾಚರಣೆ; ಮಹಿಳೆಯ ಶವ ಪತ್ತೆ

Ankola landslide: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ-ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಹೆದ್ದಾರಿಯ ಮೇಲೆ ಬಿದ್ದಿರುವ ಮಣ್ಣು ತೆಗೆಯುವ ಕಾರ್ಯಾಚರಣೆ 8ನೇ ದಿನಕ್ಕೆ ಕಾಲಿಟ್ಟಿದ್ದು, ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಇಂದು ಸಣ್ಣಿ ಹನ್ಮಂತ ಗೌಡ (57) ಅವರ ಮೃತದೇಹ ಕಂಡು ಬಂದಿದೆ. ಇನ್ನೂ ಉಳಿದವರಿಗಾಗಿ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಮತ್ತು ಮಿಲಿಟರಿ ಕಾರ್ಯಪಡೆ ಶೋಧ ಕಾರ್ಯ ಮುಂದುವರಿಸಿದೆ.

VISTARANEWS.COM


on

Ankola landslide
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Uttara Kannada Landslide) ಅಂಕೋಲಾ-ಶಿರೂರು ಗುಡ್ಡ ಕುಸಿತ (Ankola landslide) ಪ್ರಕರಣದಲ್ಲಿ ಹೆದ್ದಾರಿಯ ಮೇಲೆ ಬಿದ್ದಿರುವ ಮಣ್ಣು ತೆಗೆಯುವ ಕಾರ್ಯಾಚರಣೆ 8ನೇ ದಿನಕ್ಕೆ ಕಾಲಿಟ್ಟಿದ್ದು, ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ದುರಂತದಲ್ಲಿ ಒಟ್ಟು 10 ಮಂದಿ ನಾಪತ್ತೆಯಾಗಿದ್ದು, ಇದುವರೆಗೆ 8 ಮಂದಿಯ ಶವ ಪತ್ತೆಯಾಗಿದೆ. ಇನ್ನುಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಇಂದು ಸಣ್ಣಿ ಹನ್ಮಂತ ಗೌಡ (57) ಅವರ ಮೃತದೇಹ ಕಂಡು ಬಂದಿದೆ.

ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಹಠಾತ್ ನೆರೆಯಲ್ಲಿ ಕಾಣಿಸಿಕೊಂಡು ಸಣ್ಣಿ ಹನ್ಮಂತ ಗೌಡ ನಾಪತ್ತೆಯಾಗಿದ್ದರು. ಇದೀಗ ಘಟನೆ ನಡೆದು 8 ದಿನಗಳ ಬಳಿಕ ಅವರ ಮೃತದೇಹವನ್ನು ಹೊರಗೆ ತೆಗೆಯಲಾಗಿದೆ. ಇನ್ನೂ ಉಳಿದವರಿಗಾಗಿ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಮತ್ತು ಮಿಲಿಟರಿ ಕಾರ್ಯಪಡೆ ಶೋಧ ಕಾರ್ಯ ಮುಂದುವರಿಸಿದೆ.

ಪತ್ತೆಯಾಗಬೇಕಾದವರು

ಜಗನ್ನಾಥ ನಾಯ್ಕ, ಅರ್ಜುನ್, ಲೋಕೇಶ ಇನ್ನೂ ಕಂಡು ಬಂದಿಲ್ಲ. ಟೀ ಅಂಗಡಿ ಮಾಲೀಕ ಜಗನ್ನಾಥ ನಾಯ್ಕ ಮತ್ತು ಲೋಕೇಶ ಗೌಡ ಸಂಬಂಧಿಕರು. ಅರ್ಜುನ್ ಕೇರಳ ಮೂಲದ ಬೆಂಜ್ ಲಾರಿಯ ಚಾಲಕ. ಗಂಗೆಕೊಳ್ಳದ ನಿವಾಸಿ ಲೋಕೇಶ ಗುಡ್ಡ ಕುಸಿದ ಸಂದರ್ಭದಲ್ಲಿ ಹೊಟೇಲ್‌ನಲ್ಲಿದ್ದರು. ಟೀ ಅಂಗಡಿ ಇದ್ದ ಸ್ಥಳದಲ್ಲಿ ಶೋಧ ನಡೆಸಲು ಮಣ್ಣು ತೆರವು ಕಾರ್ಯ ಆರಂಭಗೊಂಡಿದೆ.

ಟೀ ಅಂಗಡಿ ಇದ್ದ ಸ್ಥಳದಲ್ಲಿ ನಾಪತ್ತೆಯಾದವರಿಗಾಗಿ ಶೋಧ ಮುಂದುವರಿದಿದೆ. ಗುಡ್ಡಕುಸಿತ ಪ್ರದೇಶದಲ್ಲಿ ಇಲ್ಲಿಯವರೆಗೆ ಬೆಂಜ್ ಲಾರಿಗಾಗಿ ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ಸಿಕ್ಕಿಲ್ಲ. ಜಿಪಿಎಸ್, ಸೋನಾರ್ ತಂತ್ರಜ್ಞಾನ ಬಳಸಿ ತಂಡಗಳು ಶೋಧ ನಡೆಸುತ್ತಿವೆ. ಇಂದು ನದಿಯಲ್ಲಿ ಸೇನಾ ಸಿಬ್ಬಂದಿ ಶೋಧ ಕಾರ್ಯ ನಡೆಸಲಿದೆ. ಮೆಟಲ್ ಡಿಟೆಕ್ಟರ್ ಬಳಸಿ ಕಾರ್ಯಾಚರಣೆ ನಡೆಯಲಿದೆ. ಮಣ್ಣು ಸಂಗ್ರಹವಾಗಿರುವ ನದಿ ಪಾತ್ರದಲ್ಲಿ ತಂಡ ಪರಿಶೀಲಿಸಲಿದೆ.

ಸ್ಥಳಕ್ಕೆ ಕೇರಳದ ಮಂಜೇಶ್ವರ ಶಾಸಕ ಭೇಟಿ

ಗುಡ್ಡ ಕುಸಿತದಿಂದ ಮಣ್ಣಿನ ಅಡಿಯಲ್ಲಿ ಕೇರಳ ಮೂಲದ ಲಾರಿ ಚಾಲಕ ಸಿಲುಕಿಕೊಂಡಿದ್ದು, ಸ್ಥಳಕ್ಕೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಶಾಸಕ ಕೆ.ಎಂ.ಆಶ್ರಫ್ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ. ʼʼಗುಡ್ಡ ಕುಸಿತದಲ್ಲಿ ಕಾಣೆಯಾದವರಿಗಾಗಿ ಶೋಧಕಾರ್ಯ ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಂದಾಗ ಅರ್ಜುನ್ ನಾಪತ್ತೆ ಕುರಿತು ಗಮನಕ್ಕೆ ತಂದಿದ್ದೇನೆ. ಸ್ಥಳೀಯ ಶಾಸಕ ಸತೀಶ್ ಸೈಲ್ ಜತೆ ಸಂಪರ್ಕದಲ್ಲಿದ್ದು ಶೋಧಕಾರ್ಯ ಕೈಗೊಳ್ಳಲು ಸೂಚಿಸಿದ್ದಾರೆ. ಅರ್ಜುನ್ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ ಪ್ರದೇಶದಲ್ಲಿ ಶೋಧ ಕಾರ್ಯ ಕೈಗೊಳ್ಳಲಾಗಿದ್ದು, ಜಿಪಿಎಸ್ ಸಿಗ್ನಲ್ ಕೊನೆಯದಾಗಿ ಸಿಕ್ಕ ಸ್ಥಳದಲ್ಲೂ ಹುಡುಕಾಟ ನಡೆಸಲಾಗಿದೆ. ಅರ್ಜುನ್ ಬದುಕಿ ಬರಲಿ ಎನ್ನುವುದು ನಮ್ಮೆಲ್ಲರ ಪ್ರಾರ್ಥನೆʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Ankola landslide: ಅಂಕೋಲಾ- ಶಿರೂರು ಗುಡ್ಡ ಕುಸಿತ; 7ನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆಗೆ ಸೇನಾ ಪಡೆ ಸಾಥ್

ಕೇರಳ ಮಾಧ್ಯಮಗಳಲ್ಲಿ ಶೋಧಕಾರ್ಯ ವಿಳಂಬವಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿರುವ ಕುರಿತು ಪ್ರತಿಕ್ರಿಯಿಸಿದ ಅವರು, ʼʼದುರ್ಘಟನೆಯಲ್ಲಿ ಕಾಣೆಯಾದವರು ಮೊದಲು ಸಿಗಬೇಕು. ಖುದ್ದು ಮುಖ್ಯಮಂತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳೀಯ ಶಾಸಕರು ವಿಧಾಸಭೆಗೂ ತೆರಳದೇ ಕಾರ್ಯಾಚರಣೆ ನೋಡಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಸಂದರ್ಭದಲ್ಲಿ ಆ ರೀತಿಯ ಟೀಕೆಗಳು ಬೇಡ. ಕಾಣೆಯಾದವರು ಶೀಘ್ರದಲ್ಲಿ ಸಿಗಲಿ ಎನ್ನುವುದಷ್ಟೇ ನಮ್ಮ ಹಾರೈಕೆʼʼ ಎಂದು ವಿಸ್ತಾರ ನ್ಯೂಸ್‌ಗೆ ತಿಳಿಸಿದ್ದಾರೆ.

Continue Reading
Advertisement
Mock demonstration by SDRF team on flood protection in Honnali
ದಾವಣಗೆರೆ5 mins ago

Davanagere News: ಹೊನ್ನಾಳಿಯಲ್ಲಿ ನೆರೆಹಾವಳಿ ರಕ್ಷಣೆ ಬಗ್ಗೆ ಎಸ್‌ಡಿಆರ್‌ಎಫ್ ತಂಡದಿಂದ ಅಣಕು ಪ್ರದರ್ಶನ

DK Shivakumar
ಕರ್ನಾಟಕ5 mins ago

DK Shivakumar: ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿ.ಕೆ. ಶಿವಕುಮಾರ್

Greater Bengaluru Governance Bill 2024
ಬೆಂಗಳೂರು11 mins ago

Greater Bengaluru Governance Bill 2024: ಗ್ರೇಟರ್ ಬೆಂಗಳೂರಿನಲ್ಲಿ ಯಾವ್ಯಾವ ಏರಿಯಾಗಳು ಸೇರಬಹುದು? ಇದರ ಉದ್ದೇಶ ಏನು?

Cat kidnaping Case
ಕರ್ನಾಟಕ20 mins ago

Cat Kidnaping Case: ಬೆಕ್ಕು ಅಪಹರಣ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ತೀರ್ಪು

Bitcoin Scam
ಕರ್ನಾಟಕ25 mins ago

Bitcoin Scam: ಬಿಟ್‌‌ ಕಾಯಿನ್ ಹಗರಣ; ಆರೋಪಿಗಳಾದ ಶ್ರೀಕಿ, ಖಂಡೇಲ್ ವಾಲಾ ಜೈಲಿನಿಂದ ಬಿಡುಗಡೆ

No Makeup For Kids
ಲೈಫ್‌ಸ್ಟೈಲ್32 mins ago

No Makeup For Kids: ನಿಮ್ಮ ಮಕ್ಕಳ ಮೇಕಪ್‌ ಕ್ರೇಜ್‌ಗೆ NO ಹೇಳಿ!

Union Budget 2024
ದೇಶ55 mins ago

Union Budget 2024: ಬಜೆಟ್‌ನಲ್ಲಿ ಕಸ್ಟಮ್ಸ್‌ ಸುಂಕ ಇಳಿಕೆ; ಚಿನ್ನದ ಮೇಲಿನ ಹೂಡಿಕೆಗೆ ಇದು ಸಕಾಲವೇ? ತಜ್ಞರು ಹೇಳೋದಿಷ್ಟು

Salman Khan
ಸಿನಿಮಾ1 hour ago

Salman Khan: “ನನ್ನನ್ನು ಕೊಲ್ಲಲು ಬಿಷ್ಣೋಯಿ ಗ್ಯಾಂಗ್‌ ಯತ್ನಿಸುತ್ತಿದೆ”-ಗುಂಡಿನ ದಾಳಿ ಬಗ್ಗೆ ಸಲ್ಮಾನ್‌ ಖಾನ್‌ ಹೇಳಿಕೆ ದಾಖಲು

Viral Video
Latest1 hour ago

Viral Video: ದೆಹಲಿ ಬೀದಿಯಲ್ಲಿ ಈ ಹುಡುಗಿಯ ಪರೋಟಾ ತಿನ್ನಲು ಕ್ಯೂ! ವಿಡಿಯೊ ನೋಡಿ

Sandalwood Star Fashion
ಫ್ಯಾಷನ್2 hours ago

Sandalwood Star Fashion: ಮಾನ್ಸೂನ್‌ನಲ್ಲಿ ಮಾಲಾಶ್ರೀ ಮಗಳ ಗ್ಲಾಮರಸ್‌ ಫ್ಯಾಷನ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ14 hours ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ1 day ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ1 day ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ1 day ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ5 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌