Karnataka Weather :‌ ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ 8 ಜಿಲ್ಲೆಗಳಲ್ಲಿ ರಣಮಳೆ ಫಿಕ್ಸ್! - Vistara News

ಮಳೆ

Karnataka Weather :‌ ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿ 8 ಜಿಲ್ಲೆಗಳಲ್ಲಿ ರಣಮಳೆ ಫಿಕ್ಸ್!

Karnataka Weather Forecast : ಇಂದು ಕರಾವಳಿ, ಮಲೆನಾಡು ಸುತ್ತಮುತ್ತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಹೀಗಾಗಿ ಹಲವು ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

karnataka weather Forecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜೂ.22ರಂದು ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ (Karnataka Weather Forecast) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಸಾಕಷ್ಟು ವ್ಯಾಪಕವಾದ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದು, ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಇನ್ನೂ ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಪ್ರತ್ಯೇಕವಾಗಿ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಹಗುರ ಮಳೆ

ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೋ ಅಲರ್ಟ್‌

ಗುಡುಗು, ಮಿಂಚು ಸಹಿತ ಭಾರೀ ಮಳೆಯೊಂದಿಗೆ ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಐಎಂಡಿ ರೆಡ್ ಹಾಗೂ ಆರೆಂಜ್‌ ಅಲರ್ಟ್ ಘೋಷಿಸಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕರಾವಳಿಯಲ್ಲಿ ಬಿರುಗಾಳಿ ಬೀಸುವ ಕಾರಣಕ್ಕೆ ಜೂನ್‌ 24ರವರೆಗೆ ಮೀನುಗಾರಿಕೆಗೆ ಹೋಗದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Lokayukta Raid : ಹಲಸಿನ ಮರ ತೆರವಿಗೂ ಕೊಡಬೇಕು ಗರಿ ಗರಿ ನೋಟು; ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ಲಂಚಕೋರರು

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ಸೀಬೆಕಾಯಿ ತಿನ್ನಿ!

ಸೀಬೆಕಾಯಿಗೆ ಸಾಮಾನ್ಯವಾಗಿ ಎರಡು ಋತುಗಳಿವೆ. ಅಂದರೆ ವರ್ಷಕ್ಕೆರಡು ಬಾರಿ ಇದು ದೊರೆಯುತ್ತದೆ. ಮಕ್ಕಳಿಂದ ವೃದ್ಧರಾದಿಯಾಗಿ ಕರೆದು ಕೊಟ್ಟರೂ, ಸೀಬೆಯನ್ನು ಕದ್ದು ತಿನ್ನುವುದೇ ಪ್ರಿಯವಾದ್ದರಿಂದ ಹೀಗೆ ಒಂದಕ್ಕಿಂತ ಹೆಚ್ಚಿನ ಬೆಳೆಗಳನ್ನು ಸೃಷ್ಟಿಯೇ ನೀಡಿರಬಹುದು ಇದಕ್ಕೆ. ಎಳೆ ಮಿಡಿ, ಕಾಯಿ, ಹಣ್ಣು ಮುಂತಾದ ಯಾವುದೇ ಭೇದವಿಲ್ಲದೆ ಇದನ್ನು ಖಾಲಿ ಮಾಡುವವರಿದ್ದಾರೆ. ಬಾಯಿ ರುಚಿಗಷ್ಟೇ ಇದನ್ನು ತಿನ್ನುವುದಲ್ಲ, ಸೀಬೆ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ರೀತಿಯಲ್ಲಿ (Benefits Of Eating Guava) ಪ್ರಯೋಜನಗಳಿವೆ.

Crop woman with halves of guava

ಸತ್ವಗಳು

ಇದರಲ್ಲಿ ವಿಟಮಿನ್‌ ಎ, ಸಿ, ನಾರು ಮತ್ತು ಪೊಟಾಶಿಯಂನಂಥ ಖನಿಜಗಳು ಸಾಕಷ್ಟಿವೆ. ಜೊತೆಗೆ ಉತ್ಕರ್ಷಣ ನಿರೋಧಕಗಳು ಹೇರಳವಾಗಿ ಇರುವುದರಿಂದ ದೇಹಕ್ಕೆ ಹಲವು ರೀತಿಯಲ್ಲಿ ಪ್ರಯೋಜನಗಳನ್ನು ಒದಗಿಸಬಲ್ಲದು ಈ ಹಣ್ಣು. ಬಿಳಿ ಪೇರಲೆ, ಹಳದಿ ಬಣ್ಣದ್ದು, ಕೆಂಪು ಬಣ್ಣದ್ದು- ಹೀಗೆ ಯಾವುದೇ ಆದರೂ ಅವೆಲ್ಲವೂ ಆರೋಗ್ಯಕ್ಕೆ ಒಳ್ಳೆಯವೇ.

guava fruits

ವಿಟಮಿನ್‌ ಸಿ

ಒಂದು ದೊಡ್ಡ ಸೀಬೆ ಹಣ್ಣಿನಲ್ಲಿ ಎರಡು ಕಿತ್ತಳೆ ಹಣ್ಣುಗಳಲ್ಲಿ ಇರುವಷ್ಟು ಸಿ ಜೀವಸತ್ವ ಇದೆಯೆಂಬುದು ಗೊತ್ತೇ? ಇದರಿಂದ ರೋಗ ನಿರೋಧಕ ಶಕ್ತಿ ಬಲವಾಗುವುದಲ್ಲದೆ, ಕಬ್ಬಿಣದ ಅಂಶ ದೇಹದೊಳಗೆ ಚೆನ್ನಾಗಿ ಹೀರಲ್ಪಡುತ್ತದೆ. ಮಾತ್ರವಲ್ಲ, ಕೊಲಾಜಿನ್‌ ಉತ್ಪಾದನೆ ಹೆಚ್ಚಾಗಿ, ಕೂದಲು ಮತ್ತು ಚರ್ಮದ ಆರೋಗ್ಯವೂ ಸುಧಾರಿಸುತ್ತದೆ.

heart attack and Diabetes control

ಮಧುಮೇಹಿಗಳಿಗೆ ಸೂಕ್ತ

ಇದು ಹಣ್ಣಾದಾಗ ರುಚಿ ಸಿಹಿಯೇ ಇದ್ದರೂ, ಇದರ ಗ್ಲೈಸೆಮಿಕ್‌ ಸೂಚಿ ಕಡಿಮೆ. ಪೇರಲೆಯ ಎಲೆಯ ಕಷಾಯಗಳನ್ನು ಸಕ್ಕರೆ ಕಾಯಿಲೆಯ ನಿಯಂತ್ರಣಕ್ಕೆ ಬಳಸುವ ಪದ್ಧತಿ ಪರಂಪರಾಗತ ಔಷಧಕ್ರಮದಲ್ಲಿ ಇದೆ. ನಾರಿನಂಶ ಹೇರಳವಾಗಿ ಇರುವುದರಿಂದ, ದೀರ್ಘ ಕಾಲದವರೆಗೆ ಹೊಟ್ಟೆ ತುಂಬಿದ ಅನುಭವವನ್ನೇ ನೀಡುತ್ತದೆ. ಜೊತೆಗೆ, ಗ್ಲೂಕೋಸ್‌ ಅಂಶ ದಿಢೀರನೆ ರಕ್ತ ಸೇರದಂತೆ ತಡೆಯುವ ಗುಣವಿದೆ ಇದಕ್ಕೆ.

fresh guava fruit

ಕ್ಯಾಲರಿ ಕಡಿಮೆ

ದೇಹಕ್ಕೆ ಅಗತ್ಯವಾದ ಶಕ್ತಿಯನ್ನು ಒದಗಿಸುವ ಈ ಹಣ್ಣಿನಲ್ಲಿ ಕ್ಯಾಲರಿ ಕಡಿಮೆ, ಕೊಬ್ಬು ಬಹುತೇಕ ಇಲ್ಲವೇ ಇಲ್ಲ. ಇದರಲ್ಲಿ ಅಗತ್ಯ ಪ್ರಮಾಣದ ನಾರು ಇರುವುದರಿಂದ ಹೊಟ್ಟೆ ತುಂಬಿದ ಅನುಭವ ನೀಡಿ, ಕಳ್ಳ ಹಸಿವೆಯನ್ನು ನೀಗಿಸುತ್ತದೆ. ಹೆಚ್ಚು ಕಾಲದವರೆಗೆ ಹಸಿವಾಗದಂತೆ ತಡೆಯುತ್ತದೆ. ಬಾಯಾಡುವುದಕ್ಕೆ ಇನ್ನೇನಿದೆ ಎಂದು ತಡಕುವುದನ್ನು ತಡೆಯುತ್ತದೆ. ಜೊತೆಗೆ, ದೇಹಕ್ಕೆ ಅಗತ್ಯವಾದ ಖನಿಜಗಳು, ವಿಟಮಿನ್‌ ಸಿ ಮತ್ತಿತರ ಉತ್ಕರ್ಷಣ ನಿರೋಧಕಗಳನ್ನು ಒದಗಿಸುತ್ತದೆ. ಹಾಗಾಗಿ ತೂಕ ಇಳಿಸುವ ಯೋಜನೆಯಿದ್ದರೆ ಪೇರಲೆ ಹಣ್ಣನ್ನು ಸಂತೋಷದಿಂದ ನಿಮ್ಮ ಆಹಾರಯೋಜನೆಯಲ್ಲಿ ಸೇರಿಸಿಕೊಳ್ಳಿ. ಆದರೆ ಇದನ್ನು ಆಹಾರದ ಭಾಗವಾಗಿ ಬಳಸಿಕೊಳ್ಳುವುದು ಹೇಗೆ? ಪೇರಲೆಯನ್ನು ಕಚ್ಚಿ ತಿನ್ನುವುದು ಮಾತ್ರವೇ ಎಲ್ಲರಿಗೂ ಪರಿಚಿತವಾದದ್ದು. ಹೀಗೆ ಎಷ್ಟು ತಿನ್ನಲು ಸಾಧ್ಯ? ದಿನವೂ ಅದನ್ನೇ ಮಾಡಿದರೆ ಬೋರಾಗುವುದಿಲ್ಲವೇ? ಇಲ್ಲಿದೆ ಪರಿಹಾರ.

Guava smoothie

ಸೀಬೆ ಸ್ಮೂದಿ

ತೂಕ ಇಳಿಸುವವರಿಗೆ ಸ್ಮೂದಿ ಉತ್ತಮ ಆಹಾರ. ಯಾವುದೇ ಹಣ್ಣುಗಳನ್ನು ಇಡಿಯಾಗಿ ಅಥವಾ ಉಳಿದೆಲ್ಲ ಹಣ್ಣುಗಳ ಜೊತೆಯಾಗಿ ಹಾಕಿ ಸ್ಮೂದಿ ಮಾಡಿಕೊಳ್ಳಬಹುದು. ಇದಕ್ಕೆ ಪೇರಲೆಯನ್ನೂ ಸೇರಿಸಿದರೆ ಉತ್ತಮ. ಇದು ಸ್ಮೂದಿಯ ರುಚಿ ಮತ್ತು ಘಮವನ್ನು ಇಮ್ಮಡಿಗೊಳಿಸುತ್ತದೆ. ಮಾತ್ರವಲ್ಲ, ಪೌಷ್ಟಿಕಾಂಶವನ್ನೂ ಹೆಚ್ಚಿಸುತ್ತದೆ. ಬಾಳೆಹಣ್ಣು, ಬೆರ್ರಿಗಳು ಮುಂತಾದ ನಿಮ್ಮ ಆಯ್ಕೆಯ ಹಣ್ಣುಗಳ ಜೊತೆಗೆ ಸೀಬೆಯನ್ನೂ ಸೇರಿಸಿ. ಜೊತೆಗೆ ಹಾಲು ಅಥವಾ ಮೊಸರು- ಯಾವುದು ಸರಿ ಹೊಂದುತ್ತದೆ ಎಂಬುದೂ ನಿಮ್ಮದೇ ಆಯ್ಕೆ. ಇದರ ಮೇಲೆ ಚಿಯಾ, ಅಗಸೆ ಮುಂತಾದ ಬೀಜಗಳನ್ನು ಉದುರಿಸಿದರೆ ಸತ್ವಯುತ ಸ್ಮೂದಿ ಸಿದ್ಧ.

ಸೀಬೆ ಸಲಾಡ್

ತೂಕ ಇಳಿಸುವವರಿಗೆ ಸಲಾಡ್‌ ಇಲ್ಲದೆ ಮುಂದೆ ಹೋಗುವುದೇ ಇಲ್ಲ. ಕಡಿಮೆ ಕೊಬ್ಬಿರುವ ಅಗತ್ಯ ಸತ್ವಗಳನ್ನು ಹೊಂದಿರುವ ಸಲಾಡ್‌ಗಳು ದೇಹಕ್ಕೆ ಚೈತನ್ಯ ನೀಡುವುದರ ಜೊತೆಗೆ ಕೊಬ್ಬು ಕರಗಿಸಲು ನೆರವಾಗುತ್ತವೆ. ಇಂಥ ಯಾವುದೇ ಸಲಾಡ್‌ಗೂ ಪೇರಲೆಯನ್ನು ಸೇರಿಸಬಹುದು. ತರಕಾರಿ ಸಲಾಡ್‌, ಹಣ್ಣುಗಳ ಸಲಾಡ್‌ ಎರಡಕ್ಕೂ ಪೇರಲೆಯ ರುಚಿ ಮತ್ತು ಪರಿಮಳ ಹೊಂದಿಕೊಳ್ಳುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

Karnataka Weather : ಗುಡುಗು ಸಹಿತ ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

VISTARANEWS.COM


on

By

Karnataka Weather Forecast
Koo

ಮಂಗಳೂರು/ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ (Rain news) ಸುರಿಯುತ್ತಿರುವ ಹಿನ್ನೆಲೆ ಜೂ.28ರಂದು ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ (Karnataka weather Forecast) ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸುವಂತೆ ತಿಳಿಸಲಾಗಿದೆ.

ನಿರಂತರ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರ

ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ ಮಳೆಯೊಂದಿಗೆ 40-50ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾದರೆ, ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ರಭಸವಾಗಿ ಗಾಳಿ ಬೀಸಲಿದೆ.

ಕಾರವಾರದಲ್ಲಿ ಕಾಟೇಜ್‌ಗಳು ನೆಲಸಮ

ಭಾರಿ ಗಾಳಿ ಮಳೆಗೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ದೇವಭಾಗದಲ್ಲಿ ಕಡಲಕೊರೆತ ಜೋರಾಗಿದೆ. ಜಂಗಲ್ ಲಾಡ್ಜಸ್‌‌ಗೆ ಸೇರಿದ ದೇವಭಾಗ ಬೀಚ್ ರೆಸಾರ್ಟ್ಸ್‌ನ 4 ಕಾಟೇಜ್‌ಗಳಿಗೆ ಹಾನಿಯಾಗಿದೆ. 18 ಕಾಟೇಜ್‌ಗಳಿದ್ದ ದೇವಭಾಗ್ ಬೀಚ್ ರೆಸಾರ್ಟ್‌ನಲ್ಲಿ ಮೂರ್ನಾಲ್ಕು ದಿನಗಳ ಅಂತರದಲ್ಲೇ 4 ಕಾಟೇಜ್‌ಗಳು ನೆಲಸಮವಾಗಿದೆ. ದಡಕ್ಕೆ ಅಪ್ಪಳಿಸುತ್ತಿರುವ ಆಳೆತ್ತರದ ಅಲೆಗಳಿಂದಾಗಿ ಕಾಟೇಜ್‌ಗಳು ಸಮುದ್ರಪಾಲಾದ ಪರಿಣಾಮ 1 ಕೋಟಿಗೂ ಅಧಿಕ ಹಾನಿಯಾಗಿದೆ. ಕಡಲ ತೀರಪ್ರದೇಶಕ್ಕೆ ಹೊಂದಿಕೊಂಡಿದ್ದ ಕಾಟೇಜ್‌ಗಳಿಗೆ ಹಾನಿಯಾಗಿದ್ದು, ಅರಣ್ಯ ಇಲಾಖೆಯ ನೂರಾರು ಮರಗಳು ನೆಲಕ್ಕುರುಳಿವೆ.

ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಭಾಸ್ಕೇರಿ ಬಳಿ ಬುಧವಾರ ರಾತ್ರಿ ಗುಡ್ಡ ಕುಸಿದಿತ್ತು. ಗುಡ್ಡ ಕುಸಿತದಿಂದ ಹೊನ್ನಾವರ ಬೆಂಗಳೂರು ನಡುವಿನ ಸಂಚಾರ ಅಸ್ತವ್ಯಸ್ಥವಾಗಿತ್ತು. ಇದೀಗ ಸ್ಥಳೀಯರ ಸಹಾಯದಿಂದ ಗುಡ್ಡದ ಮಣ್ಣನ್ನು ತಾಲೂಕು ಆಡಳಿತ ತೆರವು ಮಾಡಿದೆ.

ಕೊಡಗಿನಲ್ಲಿ ಕುಸಿದು ಬಿದ್ದ ತಡೆಗೋಡೆ

ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಬುಧವಾರ ಸುರಿದ ಗಾಳಿ‌ ಮಳೆಗೆ ತಡರಾತ್ರಿ ತಡೆಗೋಡೆ ಕುಸಿದಿದೆ. ಮಡಿಕೇರಿಯ ತ್ಯಾಗರಾಜ ಕಾಲೋನಿಯಲ್ಲಿ ಘಟನೆ ನಡೆದಿದೆ. ಮನೆಗಳ ರಕ್ಷಣೆಗಾಗಿ ನಿರ್ಮಿಸಿದ ತಡೆಗೋಡೆ ಕುಸಿದ ಹಿನ್ನೆಲೆಯಲ್ಲಿ ಹಿಂಬದಿಯ ಮನೆಗಳಿಗೆ ಅಪಾಯ ಕಾಡುತ್ತಿದೆ. ತಡೆಗೋಡೆ ಕುಸಿತ ಹಿನ್ನೆಲೆಯಲ್ಲಿ ಮನೆಯ ಮುಂಭಾಗಕ್ಕೆ ಟಾರ್ಪಲ್ ಹೊದಿಕೆ ಹಾಕಲಾಗಿದೆ. ಸ್ಥಳಕ್ಕೆ ಮಡಿಕೇರಿ ನಗರಸಭೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಡಗು ಜಿಲ್ಲೆಯ ಸಂಪಾಜೆ ಸಮೀಪದ ಕೊಯ್ನಾಡಿನಲ್ಲಿ ಭಾರಿ ಗಾಳಿ ಮಳೆಗೆ ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದಿದೆ. ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದು ಗೋಡೆ, ಕಿಟಕಿ ಜಖಂಗೊಂಡಿದೆ. ಶಾಲೆಗೆ ರಜೆ ಇದ್ದಿದ್ದರಿಂದ ಅನಾಹುತ ತಪ್ಪಿದೆ. ಸುಮಾರು 80 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಳೆದ ಬಾರಿ ಮಳೆಗಾಲದಲ್ಲಿ ಇದೇ ಸಮಸ್ಯೆ ಎದುರಾಗಿತ್ತು.

ಮಳೆ ನಿಂತರೂ ನಿಲ್ಲದ ನೆರೆಹಾವಳಿ

ಉಡುಪಿ ನಗರದ ಹಲವೆಡೆ ಮಳೆ ನಿಂತರೂ ನೆರೆಹಾವಳಿ ಕಡಿಮೆ ಆಗಿಲ್ಲ. ಮೂಡನಿಡಂಬೂರು ಪರಿಸರದಲ್ಲಿ ನೀರಿನ ಮಟ್ಟ ಹೆಚ್ಚಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಮನೆ ದೇವಾಲಯಗಳಿಗೆ ನೀರು ನುಗ್ಗಿದೆ. ದೈವಾರಾದನೆ ನಡೆಯುವ ಮೂಡನಿಡಂಬೂರು ಗರಡಿಯು ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿದ ಭಾರಿ ಮಳೆ ಹಿನ್ನೆಲೆ ವಿಶ್ವ ಪ್ರಸಿದ್ಧ ಮರವಂತೆ ಬೀಚ್ ಬಳಿ ಸಮುದ್ರದ ರುದ್ರನರ್ತನ ಜೋರಾಗಿದೆ. ತೀರದಲ್ಲಿ ಹಾಕಲಾಗಿರುವ ಟೆಟ್ರಾ ಪಾರ್ಟ್ಸ್ ಗೆ ಬಂದು ಅಲೆಗಳು ಬಡಿಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು, ಪ್ರವಾಸಿಗರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉಡುಪಿಯ ಕಲ್ಸಂಕದ ಹೋಟೆಲ್- ಲಾಡ್ಜ್ ಗೆ ಮಳೆ ನೀರು ನುಗ್ಗಿದ್ದು, ಎರಡು ಪಂಪ್ ಇಟ್ಟು ನೀರು ಖಾಲಿ ಮಾಡಲಾಗಿದೆ. ಕೃಷ್ಣಮಠ, ಕಲ್ಸಂಕ, ಬೈಲಕೆರೆ ಭಾಗದ ಕೆಲ ಮನೆ ಕಟ್ಟಡಗಳಿಗೆ ನೀರು ನುಗ್ಗಿದೆ. ಲಾಡ್ಜ್, ಹೋಟೆಲ್‌ನ ಬೇಸ್ ಮೆಂಟ್‌ಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಇಂದ್ರಾಣಿ ನದಿ ತುಂಬಿ ಹರಿದ ಪರಿಣಾಮ ಸುತ್ತಮುತ್ತ ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ ಬಳಿ ಕೃತಕ ನೆರೆ ಸೃಷ್ಟಿಯಾಗಿದೆ. ಯಡ್ತರೆ ಗ್ರಾಮದ ಬಂಕೇಶ್ವರ ಅಂಗನವಾಡಿ ಕೇಂದ್ರಕ್ಕೆ ನೀರು ನುಗಿದ್ದು, ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಪಟ್ಟಣಪಂಚಾಯತ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ತರಾಟೆಗೆ ತೆಗೆದುಕೊಂಡರು. ಅಂಗನವಾಡಿಯ ಆಹಾರ ಸಾಮಾಗ್ರಿ ದಾಸ್ತಾನ ನೀರುಲಾಗಿತ್ತು. ಎರಡು ದಿನದಲ್ಲಿ ಒಳಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಲಾಗಿದೆ.

Continue Reading

ಮಳೆ

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Karnataka Weather Forecast : ಮಂಗಳೂರಲ್ಲಿ ಭಾರಿ ಮಳೆಗೆ (Rain News) ಸೇತುವೆಯಿಂದ ಹಾರಿ ಕಾರೊಂದು ಹೊಳೆಗೆ ಬಿದ್ದು, ಇಬ್ಬರು ಪವಾಡದಂತೆ ಪಾರಾಗಿದ್ದಾರೆ. ಇತ್ತ ಚಿಕ್ಕಮಗಳೂರಿನಲ್ಲಿ ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಬಾಲಕನಿಗೆ ಶಾಕ್‌ ಹೊಡೆದಿದ್ದು, ಗಾಯಗೊಂಡಿದ್ದಾನೆ.

VISTARANEWS.COM


on

By

karnataka Weather Forecast
Koo

ಮಂಗಳೂರು/ಚಿಕ್ಕಮಗಳೂರು: ಕರಾವಳಿ ಭಾಗದಲ್ಲಿ ಭಾರೀ (Karnataka weather Forecast) ಮಳೆಯಾಗುತ್ತಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಮಂಗಳೂರಿನ ಗಡಿಭಾಗ ಕಾಸರಗೋಡಿನಲ್ಲಿ ಕಾರೊಂದು ಹೊಳೆಗೆ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರ ರಕ್ಷಣೆ ಮಾಡಲಾಗಿದ್ದು, ಕಾರು ನೀರುಪಾಲಾಗಿದೆ. ಕಾಸರಗೋಡಿನ ಪಳ್ಳಂಜಿ-ಪಾಂಡ್ಯ ರಸ್ತೆಯಲ್ಲಿ ಘಟನೆ (Heavy rain) ನಡೆದಿದೆ.

ರಶೀದ್, ತಸ್ರೀಫ್ ಎಂಬುವವರು ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ತಡೆಬೇಲಿ ಇಲ್ಲದ ಕಾರಣ, ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಹೊಳೆಗೆ ಬಿದ್ದಿದೆ. ತುಂಬಿ ಹರಿಯುತ್ತಿದ್ದ ಹೊಳೆಯಲ್ಲೇ ಮರವನ್ನು ಹಿಡಿದು ಇಬ್ಬರು ಪ್ರಾಣ ಉಳಿಸಿಕೊಂಡಿದ್ದಾರೆ.

ಬಾಲಕನಿಗೆ ಕರೆಂಟ್‌ ಶಾಕ್‌

ಗಾಳಿ ಮಳೆಗೆ ರಸ್ತೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಬಾಲಕನಿಗೆ ಶಾಕ್‌ ಹೊಡೆದಿದೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಎಚ್ ಹೊಸೂರು ಗ್ರಾಮದಲ್ಲಿ ಘಟನೆ ನಡೆದಿದೆ. ಎರಡನೇ ತರಗತಿ ವಿದ್ಯಾರ್ಥಿ ಶಾಲೆ ಮುಗಿಸಿ ಮನೆಗೆ ಹೋಗುತ್ತಿದ್ದ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗಲೇ ಏಕಾಏಕಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದೆ. ಇದನ್ನೂ ಗಮನಿಸಿದೇ ವಿದ್ಯುತ್‌ ತಂತಿ ತುಳಿದು ಕೆಳಗೆ ಬಿದ್ದಿದ್ದಾನೆ. ಸದ್ಯ ಬಾಲಕನಿಗೆ ಕೈ, ಬೆನ್ನು, ಕಾಲಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾನೆ. ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಬಾಲಕನಿಗೆ ಕೊಪ್ಪ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಕಾರವಾರದಲ್ಲಿ ಕಾಟೇಜ್‌ಗಳು ನೆಲಸಮ

ಭಾರಿ ಗಾಳಿ ಮಳೆಗೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ದೇವಭಾಗದಲ್ಲಿ ಕಡಲಕೊರೆತ ಜೋರಾಗಿದೆ. ಜಂಗಲ್ ಲಾಡ್ಜಸ್‌‌ಗೆ ಸೇರಿದ ದೇವಭಾಗ ಬೀಚ್ ರೆಸಾರ್ಟ್ಸ್‌ನ 4 ಕಾಟೇಜ್‌ಗಳಿಗೆ ಹಾನಿಯಾಗಿದೆ. 18 ಕಾಟೇಜ್‌ಗಳಿದ್ದ ದೇವಭಾಗ್ ಬೀಚ್ ರೆಸಾರ್ಟ್‌ನಲ್ಲಿ ಮೂರ್ನಾಲ್ಕು ದಿನಗಳ ಅಂತರದಲ್ಲೇ 4 ಕಾಟೇಜ್‌ಗಳು ನೆಲಸಮವಾಗಿದೆ. ದಡಕ್ಕೆ ಅಪ್ಪಳಿಸುತ್ತಿರುವ ಆಳೆತ್ತರದ ಅಲೆಗಳಿಂದಾಗಿ ಕಾಟೇಜ್‌ಗಳು ಸಮುದ್ರಪಾಲಾದ ಪರಿಣಾಮ 1 ಕೋಟಿಗೂ ಅಧಿಕ ಹಾನಿಯಾಗಿದೆ. ಕಡಲ ತೀರಪ್ರದೇಶಕ್ಕೆ ಹೊಂದಿಕೊಂಡಿದ್ದ ಕಾಟೇಜ್‌ಗಳಿಗೆ ಹಾನಿಯಾಗಿದ್ದು, ಅರಣ್ಯ ಇಲಾಖೆಯ ನೂರಾರು ಮರಗಳು ನೆಲಕ್ಕುರುಳಿವೆ.

ಹೆದ್ದಾರಿಯಲ್ಲಿ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಭಾಸ್ಕೇರಿ ಬಳಿ ಬುಧವಾರ ರಾತ್ರಿ ಗುಡ್ಡ ಕುಸಿದಿತ್ತು. ಗುಡ್ಡ ಕುಸಿತದಿಂದ ಹೊನ್ನಾವರ ಬೆಂಗಳೂರು ನಡುವಿನ ಸಂಚಾರ ಅಸ್ತವ್ಯಸ್ಥವಾಗಿತ್ತು. ಇದೀಗ ಸ್ಥಳೀಯರ ಸಹಾಯದಿಂದ ಗುಡ್ಡದ ಮಣ್ಣನ್ನು ತಾಲೂಕು ಆಡಳಿತ ತೆರವು ಮಾಡಿದೆ.

ಕೊಡಗಿನಲ್ಲಿ ಕುಸಿದು ಬಿದ್ದ ತಡೆಗೋಡೆ

ಕೊಡಗು ಜಿಲ್ಲೆಯಲ್ಲಿ ವರುಣಾರ್ಭಟ ಮುಂದುವರಿದಿದ್ದು, ಬುಧವಾರ ಸುರಿದ ಗಾಳಿ‌ ಮಳೆಗೆ ತಡರಾತ್ರಿ ತಡೆಗೋಡೆ ಕುಸಿದಿದೆ. ಮಡಿಕೇರಿಯ ತ್ಯಾಗರಾಜ ಕಾಲೋನಿಯಲ್ಲಿ ಘಟನೆ ನಡೆದಿದೆ. ಮನೆಗಳ ರಕ್ಷಣೆಗಾಗಿ ನಿರ್ಮಿಸಿದ ತಡೆಗೋಡೆ ಕುಸಿದ ಹಿನ್ನೆಲೆಯಲ್ಲಿ ಹಿಂಬದಿಯ ಮನೆಗಳಿಗೆ ಅಪಾಯ ಕಾಡುತ್ತಿದೆ. ತಡೆಗೋಡೆ ಕುಸಿತ ಹಿನ್ನೆಲೆಯಲ್ಲಿ ಮನೆಯ ಮುಂಭಾಗಕ್ಕೆ ಟಾರ್ಪಲ್ ಹೊದಿಕೆ ಹಾಕಲಾಗಿದೆ. ಸ್ಥಳಕ್ಕೆ ಮಡಿಕೇರಿ ನಗರಸಭೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಡಗು ಜಿಲ್ಲೆಯ ಸಂಪಾಜೆ ಸಮೀಪದ ಕೊಯ್ನಾಡಿನಲ್ಲಿ ಭಾರಿ ಗಾಳಿ ಮಳೆಗೆ ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದಿದೆ. ಶಾಲಾ ಕೊಠಡಿಯ ಮೇಲೆ ಗುಡ್ಡ ಕುಸಿದು ಗೋಡೆ, ಕಿಟಕಿ ಜಖಂಗೊಂಡಿದೆ. ಶಾಲೆಗೆ ರಜೆ ಇದ್ದಿದ್ದರಿಂದ ಅನಾಹುತ ತಪ್ಪಿದೆ. ಸುಮಾರು 80 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕಳೆದ ಬಾರಿ ಮಳೆಗಾಲದಲ್ಲಿ ಇದೇ ಸಮಸ್ಯೆ ಎದುರಾಗಿತ್ತು.

ಮಳೆ ನಿಂತರೂ ನಿಲ್ಲದ ನೆರೆಹಾವಳಿ

ಉಡುಪಿ ನಗರದ ಹಲವೆಡೆ ಮಳೆ ನಿಂತರೂ ನೆರೆಹಾವಳಿ ಕಡಿಮೆ ಆಗಿಲ್ಲ. ಮೂಡನಿಡಂಬೂರು ಪರಿಸರದಲ್ಲಿ ನೀರಿನ ಮಟ್ಟ ಹೆಚ್ಚಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಮನೆ ದೇವಾಲಯಗಳಿಗೆ ನೀರು ನುಗ್ಗಿದೆ. ದೈವಾರಾದನೆ ನಡೆಯುವ ಮೂಡನಿಡಂಬೂರು ಗರಡಿಯು ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯಲ್ಲಿ ಎರಡು ದಿನಗಳಿಂದ ಸುರಿದ ಭಾರಿ ಮಳೆ ಹಿನ್ನೆಲೆ ವಿಶ್ವ ಪ್ರಸಿದ್ಧ ಮರವಂತೆ ಬೀಚ್ ಬಳಿ ಸಮುದ್ರದ ರುದ್ರನರ್ತನ ಜೋರಾಗಿದೆ. ತೀರದಲ್ಲಿ ಹಾಕಲಾಗಿರುವ ಟೆಟ್ರಾ ಪಾರ್ಟ್ಸ್ ಗೆ ಬಂದು ಅಲೆಗಳು ಬಡಿಯುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು, ಪ್ರವಾಸಿಗರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉಡುಪಿಯ ಕಲ್ಸಂಕದ ಹೋಟೆಲ್- ಲಾಡ್ಜ್ ಗೆ ಮಳೆ ನೀರು ನುಗ್ಗಿದ್ದು, ಎರಡು ಪಂಪ್ ಇಟ್ಟು ನೀರು ಖಾಲಿ ಮಾಡಲಾಗಿದೆ. ಕೃಷ್ಣಮಠ, ಕಲ್ಸಂಕ, ಬೈಲಕೆರೆ ಭಾಗದ ಕೆಲ ಮನೆ ಕಟ್ಟಡಗಳಿಗೆ ನೀರು ನುಗ್ಗಿದೆ. ಲಾಡ್ಜ್, ಹೋಟೆಲ್‌ನ ಬೇಸ್ ಮೆಂಟ್‌ಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಇಂದ್ರಾಣಿ ನದಿ ತುಂಬಿ ಹರಿದ ಪರಿಣಾಮ ಸುತ್ತಮುತ್ತ ಜಲಾವೃತಗೊಂಡಿದೆ.

ಉಡುಪಿ ಜಿಲ್ಲೆಯ ಬೈಂದೂರು ಪಟ್ಟಣ ಪಂಚಾಯತ್ ಬಳಿ ಕೃತಕ ನೆರೆ ಸೃಷ್ಟಿಯಾಗಿದೆ. ಯಡ್ತರೆ ಗ್ರಾಮದ ಬಂಕೇಶ್ವರ ಅಂಗನವಾಡಿ ಕೇಂದ್ರಕ್ಕೆ ನೀರು ನುಗಿದ್ದು, ಮಕ್ಕಳಿಗೆ ರಜೆ ಘೋಷಿಸಲಾಗಿದೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಪಟ್ಟಣಪಂಚಾಯತ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ತರಾಟೆಗೆ ತೆಗೆದುಕೊಂಡರು. ಅಂಗನವಾಡಿಯ ಆಹಾರ ಸಾಮಾಗ್ರಿ ದಾಸ್ತಾನ ನೀರುಲಾಗಿತ್ತು. ಎರಡು ದಿನದಲ್ಲಿ ಒಳಚರಂಡಿ ವ್ಯವಸ್ಥೆ ಸರಿಪಡಿಸುವಂತೆ ಸೂಚನೆ ನೀಡಲಾಗಿದೆ.

ನಿರಂತರ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರ

ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಭಾರೀ ಮಳೆಯೊಂದಿಗೆ 40-50ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾದರೆ, ಕರ್ನಾಟಕದ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ರಭಸವಾಗಿ ಗಾಳಿ ಬೀಸಲಿದೆ.

ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಜೂ.28ರಂದು ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸುವಂತೆ ತಿಳಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

Karnataka Rain : ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುತ್ತಿದೆ. ಈ ಮಧ್ಯೆ ಗುಡ್ಡ ಕುಸಿತ ಹೆಚ್ಚಾಗುತ್ತಿದ್ದು, ಹಲವೆಡೆ ಮನೆಗಳ ಕಾಂಪೌಂಡ್‌ಗೆ ಹಾನಿಯಾಗಿದೆ. ಮನೆ ಮೇಲೆ ಧರೆ ಕುಸಿದಿದ್ದು, ಮಕ್ಕಳಿಬ್ಬರು ಮಣ್ಣಿನಡಿ ಸಿಲುಕಿದ ಘಟನೆಯೂ ನಡೆದಿದೆ.

VISTARANEWS.COM


on

By

karnataka Rains Effected
Koo

ಕಾರವಾರ/ಮಂಗಳೂರು: ಉತ್ತರಕನ್ನಡ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣಾರ್ಭಟ (Karnataka Rain) ಜೋರಾಗಿದೆ. ಸಿದ್ದಾಪುರ ತಾಲೂಕಿನ ಹಸ್ವಿಗುಳಿಯಲ್ಲಿ ಧಾರಾಕಾರ ಮಳೆಗೆ (Rain News) ಗುಡ್ಡಗಳು ಸಡಿಲಗೊಂಡು ಕುಸಿಯುತ್ತಿದೆ. ಹಸ್ವಿಗುಳಿಯ ವೆಂಕಟರಮಣ ತಿಮ್ಮ ನಾಯ್ಕ, ಸದಾನಂದ ತಿಮ್ಮ ನಾಯ್ಕ ಹಾಗೂ ಪಾರ್ವತಿ ತಿಮ್ಮ ನಾಯ್ಕ ಅವರ ಮನೆಯ ಹಿಂಬದಿಯಲ್ಲಿ ಗುಡ್ಡ ಕುಸಿಯುತ್ತಿದೆ. ಅತಿಯಾದ ಮಳೆಯಿಂದ (Karnataka Weather Forecast) ಗುಡ್ಡ ಕುಸಿಯುತ್ತಿದ್ದು, ಮನೆಗಳಿಗೂ ಹಾನಿಯಾಗುವ ಆತಂಕ ಎದುರಾಗಿದೆ. ಗುಡ್ಡಕುಸಿತದ ಆತಂಕವಿರುವ ಮನೆಗಳ ಹಿಂಭಾಗದಲ್ಲಿ ಯಾರೂ ಓಡಾಡದಂತೆ ತಾಲೂಕಾ ಆಡಳಿತದಿಂದ ಎಚ್ಚರಿಕೆಯನ್ನೂ ನೀಡಿದೆ. ಈಗಾಗಲೇ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಗುಡ್ಡ ಕುಸಿತದ ಮುನ್ಸೂಚನೆ ನೀಡಿದೆ.

ಇತ್ತ ಗಾಳಿ ಮಳೆಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು, ಮನೆ, ಬೈಕ್ ಸೇರಿ 8ಕ್ಕೂ ಅಧಿಕ ವಿದ್ಯುತ್ ಕಂಬಗಳು ಜಖಂಗೊಂಡಿವೆ. ಉತ್ತರ ಕನ್ನಡದ ಶಿರಸಿಯ ಟಿಪ್ಪು ನಗರದಲ್ಲಿ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಮೌಲಾನಾ ಎಂಬುವವರಿಗೆ ಸೇರಿದ ಮನೆಗೆ ಹಾನಿಯಾಗಿದೆ. ಕುಟುಂಬದವರು ಮನೆಯಲ್ಲಿದ್ದ ಸಂದರ್ಭದಲ್ಲೇ ಮಧ್ಯರಾತ್ರಿ ಸುಮಾರು 12 ಗಂಟೆ ಸುಮಾರಿಗೆ ಮರ ಧರೆಗುರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರು ಸೇರಿ ಮರ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಧರೆ ಕುಸಿದು ಮಣ್ಣಿನಡಿ ಸಿಲುಕಿದ ಮಕ್ಕಳು

ಮಂಗಳೂರಿನ ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದಾಗ ಮನೆ ಮೇಲೆ ಧರೆ ಕುಸಿದಿದೆ. ಕೂಡಲೇ ಪೋಷಕರು ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿಯಾಗಿದೆ.

ತಂದೆ ಮಜೀದ್ ಮತ್ತು ಅವರಿಬ್ಬರು ಮಕ್ಕಳು ಮಲಗಿದ್ದ ಕೊಠಡಿ ಮೇಲೆ ಮಣ್ಣು ಕುಸಿದಿದೆ. ತಕ್ಷಣ ಎಚ್ಚೆತ್ತ ಮಜೀದ್‌ ಮಣ್ಣಿನಡಿ ಇದ್ದ ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ. ಮನೆ ಪಕ್ಕದ ಧರೆಯೊಂದು ಸಡಿಲಗೊಂಡು ಮನೆ ಮೇಲೆ ಬಿದ್ದು ಹಾನಿಯಾಗಿದೆ. ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರಸಭೆ ಮತ್ತು ಸ್ಥಳೀಯರಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಗೆ ಕಾಂಪೌಂಡ್ ಕುಸಿದು ಎರಡು ಮನೆಗಳಿಗೆ ಅಪಾಯ ಎದುರಾಗಿರದೆ. ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಹೊಸ್ಮಾರ್ ಎಂಬಲ್ಲಿ ಘಟನೆ ನಡೆದಿದೆ. ಅಶೋಕ್ ಪೂಜಾರಿ ಮತ್ತು ಗಣೇಶ್ ಪೂಜಾರಿ ಎಂಬುವವರ ಮನೆ ಅಪಾಯದಲ್ಲಿದ್ದು, ಮನೆ ಮಂದಿಯನ್ನು ಸಂಬಂಧಿಕರ ಮನೆಗೆ ಸ್ಥಳಾಂತರ ಮಾಡಲಾಗಿದೆ. ಮಣ್ಣು ಮತ್ತೆ ಕುಸಿಯದಂತೆ ತುರ್ತು ತಡೆಗೋಡೆ ನಿರ್ಮಾಣಕ್ಕೆ ಸೂಚನೆ ನೀಡಲಾಗಿದೆ. ಇನ್ನೂ ಕಾಂಪೌಂಡ್ ಕುಸಿದು ಬೀಳುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Yelahanka Railway : ರೈಲು ಬೋಗಿಯ ಕಸದ ಬುಟ್ಟಿಯಲ್ಲಿತ್ತು ನವಜಾತ ಶಿಶು; ನರಳಾಡಿ ಪ್ರಾಣಬಿಟ್ಟ ಕಂದ

ಮಳೆ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇವಸ್ಥಾನ ಜಲಾವೃತ

ಮಂಗಳೂರು ಗಡಿಭಾಗ ಕಾಸರಗೋಡಿನಲ್ಲೂ ಭಾರೀ ಮಳೆಯಾಗುತ್ತಿದೆ. ಮಳೆ ಅಬ್ಬರಕ್ಕೆ ಇತಿಹಾಸ ಪ್ರಸಿದ್ದ ಮಧೂರು ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನ ಜಲಾವೃತಗೊಂಡಿದೆ. ಮಧುವಾಹಿನಿ ನದಿ ತುಂಬಿ ತುಳುಕುತ್ತಿದ್ದು, ದೇವಸ್ಥಾನದ ಒಳಭಾಗದಲ್ಲಿ ನಾಲ್ಕೈದು ಅಡಿ ನೀರು ನಿಂತಿದೆ. ದೇವಸ್ಥಾನ ಸುತ್ತಮುತ್ತಲ ಪ್ರದೇಶ ಜಲಾವೃತವಾಗಿ ದ್ವೀಪದಂತೆ ಗೋಚರಿಸುತ್ತಿದೆ.

ಬ್ರಹ್ಮಗಿರಿ ತಪ್ಪಲಿನಲ್ಲೂ ನಿರಂತರ ಮಳೆ

ಕೊಡಗಿನ ಹಲವೆಡೆ ಮಳೆ ಅಬ್ಬರ ಮುಂದುವರಿದಿದ್ದು, ನದಿ, ತೊರೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲೂ ನಿರಂತರ ಮಳೆಯಿಂದಾಗಿ ಕಾವೇರಿ ನದಿ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆ ಕಂಡಿದೆ. ಭಾಗಮಂಡಲ ತ್ರಿವೇಣಿ ಸಂಗಮದ ಸ್ಥಾನಘಟ ಮುಳುಗಡೆಯಾಗಿದೆ. ಮಳೆ ಇದೇ ರೀತಿ ಮುಂದುವರೆದಲ್ಲಿ ಮಡಿಕೇರಿ- ಭಾಗಮಂಡಲ, ನಾಪೋಕ್ಲು-ಭಾಗಮಂಡಲ ರಸ್ತೆ ಜಲಾವೃತವಾಗುವ ಸಾಧ್ಯತೆ ಇದೆ. ಈಗಾಗಲೇ ಕೊಡಗಿನ ಮಡಿಕೇರಿ, ವಿರಾಜಪೇಟೆ ಪೊನ್ನಂಪೇಟೆ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕೃಷ್ಣ ಮಠದ ಅಕ್ಕಪಕ್ಕ ನುಗ್ಗಿದ ನೀರು

ಉಡುಪಿ ಜಿಲ್ಲೆಯಲ್ಲಿ ರಾತ್ರಿಯಿಡಿ ಸುರಿದ ಭಾರಿ ಮಳೆಯಿಂದಾಗಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ನೀರು ನುಗ್ಗಿಯಾಗಿದೆ. ಕೃಷ್ಣ ಮಠದ ಪಕ್ಕದ ಜನವಸತಿ ಪ್ರದೇಶಗಳಲ್ಲಿ ನೆರೆಯಿಂದ ಮುಳುಗಡೆಯಾಗಿದೆ. ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ವರ್ಷವೂ ಇದೇ ಪರಿಸ್ಥಿತಿ ಎದುರಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಾತ್ರಿಯೇ ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ. ಗಾಳಿ ಸಹಿತ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಅಲ್ಲಲ್ಲಿ ಮರಗಳು ಧರೆಗುರುಳಿದೆ. ನಗರದ ಇಂದ್ರಾಣಿ ಒಳ ರಸ್ತೆಯಲ್ಲಿ ಬೃಹತ್ ಗಾತ್ರದ ಮರ ಧರಾಶಾಹಿಯಾಗಿದ್ದು, ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಚಿಕ್ಕಮಗಳೂರಲ್ಲೂ ನಿರಂತರ ಮಳೆ

ಚಿಕ್ಕಮಗಳೂರಿನಲ್ಲಿ ಗುರುವಾರ ಬೆಳಗ್ಗೆಯಿಂದಲೂ ಬಿಟ್ಟು-ಬಿಟ್ಟು ಧಾರಾಕಾರ ಮಳೆ ಸುರಿಯುತ್ತಿದೆ. ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ, ಕಳಸ ಸೇರಿದಂತೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಸುತ್ತ ಭಾರೀ ಮಳೆಯೊಂದಿಗೆ ಗಾಳಿ ಬೀಸುತ್ತಿದೆ. ಗಾಳಿ-ಮಳೆ ಮಧ್ಯೆ ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರು ಪರದಾಡುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka Weather: ಇಂದು ಕೊಡಗು, ಹಾಸನ, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ; ಹಲವೆಡೆ ಶಾಲೆಗಳಿಗೆ ರಜೆ!

Karnataka Weather: ಭಾರಿ ಮಳೆ ಹಿನ್ನೆಲೆಯಲ್ಲಿ ಇಂದು (ಜೂನ್‌ 26) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಕೊಡಗಿನ ವಿರಾಜಪೇಟೆ ತಾಲೂಕು, ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

VISTARANEWS.COM


on

Karnataka Weather
ಬುಧವಾರ ಸುರಿದ ಮಳೆಗೆ ಮಂಗಳೂರಿನ ಪಡೀಲು ರೈಲ್ವೆ ಅಂಡರ್‌ ಪಾಸ್ ಜಲಾವೃತವಾಗಿರುವುದು.
Koo

ಬೆಂಗಳೂರು: ರಾಜ್ಯದಲ್ಲಿ ಇಂದು (ಜೂನ್‌ 27) ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ (Rain News) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಕೊಡಗು ಜಿಲ್ಲೆಯ ಎರಡು ತಾಲೂಕುಗಳಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಗುರುವಾರ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಮೇಲೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (45-55 kmph) ಸಂಭವಿಸುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ದ.ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆಯಲ್ಲಿ ಇಂದು(ಜೂ.27) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.

ಇನ್ನು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಮಾಹಿತಿ ನೀಡಲಾಗಿದೆ. ದ.ಕ‌ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಕೊಡಗಿನ 2 ತಾಲೂಕುಗಳಲ್ಲಿ ರಜೆ

ಕೊಡಗು: ಜಿಲ್ಲೆಯಲ್ಲಿ ಹಲವೆಡೆ ವರುಣಾರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ವಿರಾಜಪೇಟೆ ತಾಲೂಕು ಮತ್ತು ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು (ಗುರುವಾರ) ರಜೆ ಘೋಷಿಸಲಾಗಿದೆ.

ಇನ್ನು ಜೂನ್ 28ರಂದು ಕೂಡ ಕರಾವಳಿ ಜಿಲ್ಲೆಗಳ ಪ್ರತ್ಯೇಕ ಕಡೆ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆ ಭಾರಿ ಮಳೆ ಸಾಧ್ಯತೆಯಿದೆ. ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳು. ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ನಿರಂತರ ಗಾಳಿಯ ವೇಗ (45-55 kmph) ಆಗುವ ಸಾಧ್ಯತೆಯಿದೆ. ಜೂನ್‌ 30ರವರೆಗೆ ಇದೇ ರೀತಿಯ ಸ್ಥಿತಿ ಕರಾವಳಿ ಜಿಲ್ಲೆಗಳಲ್ಲಿ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗುರುವಾರ ತೀವ್ರ ಬಿರುಗಾಳಿ (ಗಂಟೆಗೆ 35ರಿಂದ 55 ಮಿ.ಮೀ ವೇಗ) ಬೀಸುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡದ ಮುಲ್ಕಿಯಿಂದ ಮಂಗಳೂರಿನವರೆಗೆ ಬೆಳಗ್ಗೆ 8:30ರಿಂದ ರಾತ್ರಿ 11.30ರವರೆಗೆ 3.4 ರಿಂದ 3.5 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗುವ ಸಾಧ್ಯತೆ ಇದೆ.

ಉಡುಪಿ ಹೈ ವೇವ್ ಎಚ್ಚರಿಕೆ: ಬೈಂದೂರಿನಿಂದ ಕಾಪುವರೆಗಿನ ಕರಾವಳಿಯಲ್ಲಿ ಸಂಜೆ 5.30ರಿಂದ ರಾತ್ರಿ 11:30 ಗಂಟೆಗಳವರೆಗೆ 3.5 ರಿಂದ 3.7 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಉಂಟಾಗಲಿವೆ.

ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ ಸಂಜೆ 5.30ರಿಂದ ರಾತ್ರಿ 11.30ರವರೆಗೆ 3.7ರಿಂದ 3.9 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ಹೀಗಾಗಿ ಸಣ್ಣ ಹಡಗುಗಳು ಸಂಚರಿಸದಂತೆ ಹಾಗೂ ಮನರಂಜನಾ ಚಟುವಟಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ | Rain News: ಕೊಡಗು, ಚಿಕ್ಕಮಗಳೂರು, ಕಾರವಾರದಲ್ಲಿ ವರುಣಾರ್ಭಟ; ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಮಳೆ!

ಬೆಂಗಳೂರು ಮತ್ತು ಸುತಮುತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ (30-40 kmph) ತುಂಬಾ ಸಾಧ್ಯತೆ, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 C ಮತ್ತು 21C ಇರಲಿದೆ.

Continue Reading
Advertisement
IND vs ENG Semi Final
ಕ್ರೀಡೆ49 mins ago

IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

Abhyas Trial
ದೇಶ3 hours ago

Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Congress Protest
ಕರ್ನಾಟಕ3 hours ago

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

NEET Aspirant
ದೇಶ3 hours ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Tata Motors has taken the lead in the SUV market with Nexon Punch
ಕರ್ನಾಟಕ4 hours ago

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Rohit Sharma
ಕ್ರೀಡೆ4 hours ago

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

virat kohli
ಕ್ರೀಡೆ4 hours ago

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

DCM DK Shivakumar latest statement about CM change issue
ಪ್ರಮುಖ ಸುದ್ದಿ4 hours ago

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

roopantara Movie First Look Poster released
ಕರ್ನಾಟಕ5 hours ago

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Hosur Airport
ಪ್ರಮುಖ ಸುದ್ದಿ5 hours ago

Hosur Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದ ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ9 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು10 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ14 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌