Karnataka Weather : ಕರಾವಳಿ, ಮಲೆನಾಡು ಸೇರಿ ಒಳನಾಡಲ್ಲಿ ಭಾರಿ ಮಳೆ; ಗಾಳಿಯ ಶರವೇಗ 50 ಕಿ.ಮೀ! - Vistara News

ಮಳೆ

Karnataka Weather : ಕರಾವಳಿ, ಮಲೆನಾಡು ಸೇರಿ ಒಳನಾಡಲ್ಲಿ ಭಾರಿ ಮಳೆ; ಗಾಳಿಯ ಶರವೇಗ 50 ಕಿ.ಮೀ!

Karnataka Weather Forecast : ರಾಜ್ಯದಲ್ಲಿ ಈ ವಾರ ಪೂರ್ತಿ ಮಳೆಯು (Karnataka Rain) ಅಬ್ಬರಿಸಲಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದ್ದು, ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

VISTARANEWS.COM


on

karnataka Weather Forecast
ಭಾರಿ ಮಳೆಗೆ ಶಿರಸಿಯ ಚೌಡೇಶ್ವರಿ ಕಾಲೋನಿಯಲ್ಲಿ ನೀರು ನಿಂತ ಪರಿಣಾಮ ಮನೆಯಲ್ಲೇ ಲಾಕ್‌ ಆದ ಮಂದಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜನ-ಜೀವನ (Karnataka Weather Forecast) ಅಸ್ತವ್ಯಸ್ತಗೊಂಡಿದೆ. ಶುಕ್ರವಾರವೂ ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮಲೆನಾಡು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭರ್ಜರಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಕಡೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ

ಇದನ್ನೂ ಓದಿ: Kiccha Sudeep: ಸೆಲ್ಫಿಗಾಗಿ 2 ಗಂಟೆ ಕಾದ ಅಭಿಮಾನಿಗೆ ಕಿಚ್ಚ ಸುದೀಪ್ ಅವಮಾನ! ವಿಡಿಯೊ ನೋಡಿ

karnataka weather Forecast
ಭಾರಿ ಮಳೆಗೆ ಶಿರಸಿಯ ಬಡಾವಣೆಯೊಂದರಲ್ಲಿ ನೀರು ನಿಂತ ದೃಶ್ಯ

ಬೆಳಗಾವಿಯಲ್ಲಿ ಭಾರಿ ಮಳೆ ಎಚ್ಚರಿಕೆ

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಬೆಳಗಾವಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸುತ್ತಮುತ್ತ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಿಗೆ ಮುನ್ನೆಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿಗೆ 40-50 ಕಿ.ಮೀ ತಲುಪಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain News: ಮಳೆ ಅನಾಹುತ; ಮನೆಗೋಡೆ ಕುಸಿದು ಇಬ್ಬರು ಕಂದಮ್ಮಗಳು ಸೇರಿ 3 ಸಾವು

Karnataka Rain News: ಅಮೂಲ್ಯ ಹಾಗೂ ಅನನ್ಯ ಮೃತಪಟ್ಟ ಎರಡು 2 ವರ್ಷದ ಅವಳಿಜವಳಿ ಕಂದಮ್ಮಗಳಾಗಿವೆ. ಇನ್ನೊಬ್ಬ ಮಹಿಳೆ ಚೆನ್ನಮ್ಮ (30) ಕೂಡ ಮೃತಪಟ್ಟಿದ್ದಾರೆ. ಮನೆಯೊಳಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

VISTARANEWS.COM


on

haveri karnataka rain news
Koo

ಹಾವೇರಿ: ರಾಜ್ಯದಲ್ಲಿ ಮಳೆ ಅನಾಹುತ (Karnataka Rain News) ಸೃಷ್ಟಿಸುತ್ತಿದೆ. ಹಾವೇರಿಯಲ್ಲಿ (Haveri news) ಮಳೆಗೆ ಒದ್ದೆಯಾದ ಮನೆಗೋಡೆ ಕುಸಿದು (Home collapse) ಎರಡು ಕಂದಮ್ಮಗಳು ಹಾಗೂ ಒಬ್ಬ ಮಹಿಳೆ (Rain deaths) ಸಾವಿಗೀಡಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ದುರಂತ ಸಂಭವಿಸಿದೆ.

ಅಮೂಲ್ಯ ಹಾಗೂ ಅನನ್ಯ ಮೃತಪಟ್ಟ ಎರಡು 2 ವರ್ಷದ ಅವಳಿಜವಳಿ ಕಂದಮ್ಮಗಳಾಗಿವೆ. ಇನ್ನೊಬ್ಬ ಮಹಿಳೆ ಚೆನ್ನಮ್ಮ (30) ಕೂಡ ಮೃತಪಟ್ಟಿದ್ದಾರೆ. ಮನೆಯೊಳಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ರಕ್ಷಣೆಗೆ ಧಾವಿಸಿದ್ದು, ಮೃತ ದೇಹಗಳನ್ನ ಹೊರ ತೆಗೆದು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಗಾಯಾಳುಗಳು ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಭೂಕುಸಿತ; ಶಿರಾಡಿ ಘಾಟ್​ನಲ್ಲಿ ಸಂಚಾರ ನಿಷೇಧ ​; ಬೆಂಗಳೂರು- ಮಂಗಳೂರು ಸಂಪರ್ಕ ಬಹುತೇಕ ಕಟ್​

ಹಾಸನ: ಹಾಸನ ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಘಾಟ್​ ಪ್ರದೇಶದ ಹಲವಡೆ ಗುಡ್ಡ ಕುಸಿತದ ಪ್ರಕಣಗಳು ಉಂಟಾಗುತ್ತಿವೆ. ಅಂತೆಯೇ ಶಿರಾಡಿ ಘಾಟ್​ನಲ್ಲಿ (Shiradi Ghat) ಗುಡ್ಡ ಕುಸಿತ ಸಂಭವಿಸಲಿದೆ ಎಂಬ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ಮೂಲಕ ಪ್ರಯಾಣವನ್ನು ನಿಷೇಧ ಮಾಡ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇದನ್ನು ಹೊರತುಪಡಿಸಿದರೆ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 278ರಲ್ಲಿ ರಾತ್ರಿ ವೇಳೆ ವಾಹನಗಳು ಸಾಗದಂತೆ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮಡಿಕೇರಿ ಮೂಲಕ ಸಾಗುವ ಈ ರಸ್ತೆಯೂ ಬಂದ್ ಆಗಿರುವ ಕಾರಣ ಮಂಗಳೂರು ಮತ್ತು ಬೆಂಗಳೂರು (Bangalore To Mangalore) ನಡುವಿನ ಸಂಪರ್ಕ ಬಹುತೇಕ ಕಡಿತಗೊಂಡಿದೆ. ಇನ್ನು ಚಾರ್ಮಾಡಿ ಘಾಟ್ ಒಂದೇ ಉಳಿದಿದ್ದು ಅದರ ಮೇಲೆ ವಾಹನ ದಟ್ಟಣೆ ಜಾಸ್ತಿಯಾಗಲಿದೆ. ಆ ರಸ್ತೆಯಲ್ಲೂ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕಣಗಳು ಸಂಭವಿಸುತ್ತಿರುವುದರಿಂದ ಸಂಚಾರ ಸುರಕ್ಷಿತವಲ್ಲ.

ಶಿರಾಡಿಘಾಟ್ ನ ದೊಡ್ಡತಪ್ಪು ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿತ್ತು. ಅಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆಗಳಿವೆ. ಜುಲೈ 18ರಿಂದ ಅನ್ವಯವಾಗುವಂತೆ ಈ ರಸ್ತೆಯ ಮೂಲಕ ಪ್ರಯಾಣ ಮಾಡದಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ರಸ್ತೆ ದುರಸ್ತಿ ಆಗುವ ತನಕ ಎಲ್ಲ ರೀತಿಯ ವಾಹನ ಸಂಚಾರ ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಿರಂತರ ಮಳೆ ಸುರಿಯುತ್ತಿರುವ ಕಾರಣ ಮತ್ತಷ್ಟು ಭೂ ಕುಸಿತದ ಉಂಟಾಗುವ ಸಾಧ್ಯತೆಗಳಿವೆ. ಮುಂಜಾಗ್ರತಾ ಕ್ರಮವಾಗಿ ಸಂಚಾರ ನಿಷೇಧಿಸಿ ಡಿಸಿ ಸಿ ಸತ್ಯಭಾಮ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಿಂದ -ಮಂಗಳೂರಿಗೆ ತೆರಳುವ ವಾಹನಗಳು ಚಾರ್ಮಾಡಿ ಘಾಟ್ ಮೂಲಕ ಅವರ ಸೂಚನೆ ನೀಡಿದ್ದಾರೆ.

ಸಂಪಾಜೆ ಘಾಟಿಯೂ ಬಂದ್‌

ಮಡಿಕೇರಿ: ಕೊಡಗು ಸೇರಿದಂತೆ ರಾಜ್ಯದ ಎಲ್ಲೆಡೆ ಸತತ ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದೆ (Rain News). ಹೀಗಾಗಿ ಘಟ್ಟ ಪ್ರದೇಶಗಳಲ್ಲಿ ಗುಡ್ಡ ಕುಸಿತ ಪ್ರಕರಣಗಳು ಸಂಭವಿಸುತ್ತಿವೆ. ಗುಡ್ಡದ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳ ಆತಂಕ ಇದರಿಂದಾಗಿ ಹೆಚ್ಚಾಗಿದೆ. ಇದೇ ವೇಳೆ ಕರ್ನಾಟಕದ ಪ್ರಮುಖ ಘಾಟಿಗಳಲ್ಲಿ ಹಾದು ಹೋಗಿರುವ ರಸ್ತೆ ಇಕ್ಕೆಲಗಳಲ್ಲಿ ಮಣ್ಣು ಕುಸಿತ ಉಂಟಾಗುತ್ತಿರುವ ಕಾರಣ ಮಡಿಕೇರಿ ಮೂಲಕ ಮಂಗಳೂರಿಗೆ ಸಂಪರ್ಕ ಕಲ್ಪಿಸುವ 275 ಬಂದ್ ಮಾಡಲಾಗಿದೆ.

ಮಡಿಕೇರಿ ಮಂಗಳೂರು ರಸ್ತೆಯ ಕರ್ತೋಜಿ ಬಳಿ ಗುಡ್ಡ ಕುಸಿಯುವ ಭೀತಿ ಉಂಟಾಗಿದ್ದು, ಯಾವುದೇ ಕ್ಷಣದಲ್ಲಿ ಗುಡ್ಡ ಜಾರಿ ರಸ್ತೆಗೆ ಬರುವ ಸಾಧ್ಯತೆಗಳಿವೆ. ಹೀಗಾಗಿ ಜುಲೈ 18ರಿಂದ 22ರವರೆಗೆ ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿ 275 ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಗುರುವಾರದಿಂದ 5 ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6 ಗಂಟೆವರೆಗೆ ಅಧಿಕಾರಿಗಳು ರಸ್ತೆ ಪ್ರಯಾಣಕ್ಕೆ ನಿರ್ಬಂಧ ಹೇರಿದ್ದಾರೆ ಕರ್ತವ್ಯ ನಿರತ ಅಧಿಕಾರಿಗಳ ವಾಹನ ಹೊರತುಪಡಿಸಿ ಉಳಿದ ವಾಹನ ಸಂಚಾರ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Continue Reading

ಶಿವಮೊಗ್ಗ

Shivamogga News: ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಲು ಸಂಸದ ಬಿ.ವೈ. ರಾಘವೇಂದ್ರ ಮನವಿ

Shivamogga News: ಪ್ರಸಕ್ತ ಸಾಲಿನಲ್ಲಿ ಅಧಿಕ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಈ ಕಾರಣದಿಂದ ನದಿಪಾತ್ರದ ಜಮೀನುಗಳಿಗೆ ಪ್ರವಾಹ ಎದುರಾಗಿದ್ದು, ರೈತ ಸಮೂಹ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಆದ್ದರಿಂದ ಬೆಳೆ ವಿಮೆ ಮಾಡಿಸದ ರೈತರು ಕೂಡಲೇ ಬೆಳೆ ವಿಮೆಗೆ ಮುಂದಾಗಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

VISTARANEWS.COM


on

Farmers should get crop insurance immediately says MP BY Raghavendra
Koo

ಸೊರಬ: ಪ್ರಸಕ್ತ ಸಾಲಿನಲ್ಲಿ ಅಧಿಕ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಈ ಕಾರಣದಿಂದ ನದಿಪಾತ್ರದ ಜಮೀನುಗಳಿಗೆ ಪ್ರವಾಹ ಎದುರಾಗಿದ್ದು, ರೈತ ಸಮೂಹ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಆದ್ದರಿಂದ ಬೆಳೆ ವಿಮೆ ಮಾಡಿಸದ ರೈತರು ಕೂಡಲೇ ಬೆಳೆ ವಿಮೆಗೆ ಮುಂದಾಗಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ (Shivamogga News) ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಮಳೆ ಹಾನಿ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆ ಕಳೆದ ಬಾರಿ ಬರಗಾಲ ಪರಿಸ್ಥಿತಿಯನ್ನು ಎದುರಿಸುವಂತಾಗಿತ್ತು. ಆದರೆ ಈ ಬಾರಿ ಮುಂಗಾರು ತಡವಾಗಿ ಪ್ರಾರಂಭವಾದರೂ ಉತ್ತಮ ಮಳೆಯಾಗುತ್ತಿದೆ. ಜಿಲ್ಲೆಯ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ ಎಂದರು.

ಇದನ್ನೂ ಓದಿ: Uttara Kannada News: ಗೋಕರ್ಣದ ʼಅಶೋಕೆʼಯಲ್ಲಿ ಜು. 21ರಿಂದ ರಾಘವೇಶ್ವರಶ್ರೀ ಚಾತುರ್ಮಾಸ್ಯ

ತಾಲೂಕಿನ ದಂಡಾವತಿ ಮತ್ತು ವರದಾ ನದಿಗಳು ಈಗಾಗಲೇ ತುಂಬಿ ಹರಿಯುತ್ತಿದ್ದು, ಅಪಾಯದ ಮಟ್ಟ ತಲುಪಿವೆ. ವಿಶೇಷವಾಗಿ ವರದಾ ನದಿ ಪ್ರವಾಹದಿಂದ ತಾಲೂಕಿನ ಅಬಸೆ, ಕಡಸೂರು, ಹೊಳೆಜೋಳದಗುಡ್ಡೆ, ತಟ್ಟಿಕೆರೆ, ಹೆಚ್ಚೆ, ಹಿರೇನೆಲ್ಲೂರು, ಸೈದೂರು, ತಾಳಗುಪ್ಪ ಗ್ರಾಮಗಳ ರೈತರ ಜಮೀನುಗಳು ಜಲಾವೃತವಾಗಿವೆ. ಸುಮಾರು 650 ಹೆಕ್ಟೇರ್ ಭತ್ತ ಮುಳುಗಡೆಯಾಗಿದೆ ಎಂದು ಹೇಳಿದರು.

ಇನ್ನೂ ಬೆಳೆ ವಿಮೆ ಮಾಡಿಸದ ರೈತರಿಗೆ ಜುಲೈ 31 ರವರೆಗೆ ಅವಕಾಶವಿದೆ. ರೈತರು ಇದರ ಸದುಪಯೋಗ ಪಡೆಯಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಹಾನಿಯಾದ ವರದಿ ಸರ್ಕಾರಕ್ಕೆ ಸಲ್ಲಿಸಿ

ಜಿಲ್ಲೆಯಲ್ಲಿ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ. 36ರಷ್ಟು ಮಳೆ ಕೊರತೆ ಎದುರಾಗಿತ್ತು. ಜುಲೈ ತಿಂಗಳ ವಾಡಿಕೆ ಮಳೆ 423 ಮಿ.ಮೀ. ಆದರೆ 577 ಮಿ.ಮೀ. ಮಳೆಯಾಗಿದ್ದು, ಶೇ. 36ರಷ್ಟು ಅಧಿಕ ಮಳೆಯಾಗಿದೆ. ತಾಲೂಕಿನಾದ್ಯಂತ 21 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 2 ಎಮ್ಮೆ, 1 ಹಸು ಮೃತಪಟ್ಟಿವೆ. ಈ ಕಾರಣ ತಹಸೀಲ್ದಾರ್ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ನೆರೆ ಪ್ರದೇಶದ ಗ್ರಾಮ ಮತ್ತು ಜಮೀನುಗಳಿಗೆ ಭೇಟಿ ನೀಡಿ ಮಳೆಯಿಂದ ಹಾನಿಯಾದ ಬಗ್ಗೆ ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ ಎಂದರು.

ಮಳೆಯಿಂದ ಮನೆಯ ಒಂದು ಭಾಗದ ಗೋಡೆ ಬಿದ್ದರೆ ಇಡೀ ಮನೆಗೆ ಹಾನಿಯಾದಂತೆ. ಹಾಗಾಗಿ ಅಧಿಕಾರಿಗಳು ಸಂಪೂರ್ಣ ಪರಿಹಾರಕ್ಕೆ ಇಂತಹ ಮನೆಗಳನ್ನೂ ಪರಿಗಣಿಸಬೇಕು ಎಂದ ಅವರು, ರಸ್ತೆಗಳಲ್ಲಿ ಸರಾಗವಾಗಿ ನೀರು ಹರಿಯದೇ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ಜಿ.ಪಂ. ಮತ್ತು ಪಿ.ಡಬ್ಲ್ಯೂ.ಡಿ. ಇಲಾಖೆ ಹೆಚ್ಚಿನ ಗಮನ ಹರಿಸಿ, ರಸ್ತೆಯ ಎರಡೂ ಬದಿಗಳಲ್ಲಿ ಕಾಲುವೆ ನಿರ್ಮಿಸುವ ಮೂಲಕ ನೀರು ಸರಾಗವಾಗಿ ಹರಿಯಲು ಹೆಚ್ಚಿನ ನಿಗಾ ವಹಿಸಬೇಕು ಎಂದರು.

ಇದನ್ನೂ ಓದಿ: Kannada New Movie: ಹಾರರ್ ಜಾನರ್‌ನ ʼಹಗ್ಗʼ ಚಿತ್ರದ ಟೀಸರ್ ಅನಾವರಣ

ಸುದ್ದಿಗೋಷ್ಠಿಯಲ್ಲಿ ತಹಸೀಲ್ದಾರ್ ಮಂಜುಳಾ ಹೆಗಡಾಳ್, ಕೃಷಿ ಸಹಾಯಕ ನಿರ್ದೇಶಕ ಕೆ.ಜಿ. ಕುಮಾರ್ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಮತ್ತು ಮಾಜಿ ಶಾಸಕ ಕುಮಾರ ಬಂಗಾರಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲುಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಜಿಲ್ಲಾ ಕಾರ್ಯದರ್ಶಿ ದೇವೇಂದ್ರಪ್ಪ ಚನ್ನಾಪುರ, ಮುಖಂಡರಾದ ಗುರುಕುಮಾರ ಪಾಟೀಲ್, ಪ್ರಕಾಶ್ ಅಗಸನಹಳ್ಳಿ ಹಾಗೂ ಇತರರು ಇದ್ದರು.

Continue Reading

ಶಿವಮೊಗ್ಗ

Shivamogga News: ಸೊರಬದ ವಿವಿಧೆಡೆ ಮಳೆಯಿಂದ ಅಪಾರ ಹಾನಿ; ಸಂಸದ ಬಿ.ವೈ.ರಾಘವೇಂದ್ರ ಭೇಟಿ

Shivamogga News: ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೋಳದ ಗುಡ್ಡ, ಹೆಚ್ಚೆ, ಕಡಸೂರು, ತಟ್ಟಿಕೆರೆ, ಹಿರೇನಲ್ಲೂರು, ಸೈದೂರು, ಮಂಡಗಳಲೇ ಮತ್ತು ತಾಳಗುಪ್ಪ ಭಾಗಗಳಲ್ಲಿ ವ್ಯಾಪಕ ಮಳೆಯಿಂದ ಗ್ರಾಮದ ತಗ್ಗು ಪ್ರದೇಶಗಳಿಗೆ ಹಾಗೂ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಪ್ರದೇಶಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ, ಪರಿಶೀಲಿಸಿದರು.

VISTARANEWS.COM


on

Immense damage due to rain in various parts of Soraba Taluk MP BY Raghavendra visited and inspected
Koo

ಸೊರಬ: ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೋಳದ ಗುಡ್ಡ, ಹೆಚ್ಚೆ, ಕಡಸೂರು, ತಟ್ಟಿಕೆರೆ, ಹಿರೇನಲ್ಲೂರು, ಸೈದೂರು, ಮಂಡಗಳಲೇ ಮತ್ತು ತಾಳಗುಪ್ಪ ಭಾಗಗಳಲ್ಲಿ ವ್ಯಾಪಕ ಮಳೆಯಿಂದ ಗ್ರಾಮದ ತಗ್ಗು ಪ್ರದೇಶಗಳಿಗೆ ಹಾಗೂ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಪ್ರದೇಶಗಳಿಗೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ ನೀಡಿ, (Shivamogga News) ಪರಿಶೀಲಿಸಿದರು.

ಹಾನಿಗೊಳಗಾದವರಿಗೆ ತಕ್ಷಣವೇ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿ ರಾಜ್ಯ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: Ratna Bhandar: ಒಂದೇ ವಾರದಲ್ಲಿ ಎರಡನೇ ಬಾರಿ ತೆರೆದ ಪುರಿ ಜಗನ್ನಾಥನ ʼರತ್ನ ಭಂಡಾರʼ

ಈ ಸಂದರ್ಭದಲ್ಲಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಹಕ್ಕರೆ ಮಲ್ಲಿಕಾರ್ಜುನ್, ದೇವೇಂದ್ರಪ್ಪ, ಮಲ್ಲಿಕಾರ್ಜುನ್, ಆಗಸಹಳ್ಳಿ ಪ್ರಕಾಶ್, ಗುರುಕುಮಾರ ಪಾಟೀಲ್, ಈಶ್ವರಪ್ಪ ಚನ್ನಪಟ್ಟಣ, ಹೊಳಿಯಮ್ಮ ಹಾಗೂ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

ಸೊರಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ಜು.19 ರಂದು ರಜೆ ಘೋಷಣೆ

ಸೊರಬ ಪಟ್ಟಣ ಸೇರಿ ತಾಲೂಕಿನಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಹಿತ ದೃಷ್ಠಿಯಿಂದ ಅಂಗನವಾಡಿ ಕೇಂದ್ರಗಳು ಹಾಗೂ ಶಾಲಾ- ಕಾಲೇಜುಗಳಿಗೆ ಜು. 19ರಂದು ರಜೆ ಘೋಷಣೆ ಮಾಡಿರುವುದಾಗಿ ತಹಸೀಲ್ದಾರ್ ಮಂಜುಳಾ ಹೆಗಡಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಮಳೆ

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Karnataka Rain : ಭಾರಿ ಮಳೆಗೆ (Heavy Rain Alert) ಉಕ್ಕಿ ಹರಿಯುತ್ತಿದ್ದ ಸೇತುವೆ ಮೇಲೆ ಹೋದ ರಾಸುವೊಂದು ನೀರಿನಲ್ಲಿ ಕೊಚ್ಚಿ ಹೋಗಿದೆ. ಮತ್ತೊಂದು ಕಡೆ ಮನೆಯೊಂದು ನೆಲಸಮವಾಗಿದೆ. ಮನೆಗಳಿಗೆ ನೀರು ನುಗ್ಗಿದ್ದರೆ, ಮರಗಳು ಧರೆಗುರುಳಿವೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಭಾರಿ ಮಳೆಯು (Karnataka Rain) ಸಾವು-ನೋವಿಗೆ ಕಾರಣವಾಗುತ್ತಿದೆ. ಅಬ್ಬರಿಸುತ್ತಿರುವ ಮಳೆಗೆ ಸೇತುವೆಗಳು ಮುಳುಗಡೆಯಾಗಿವೆ. ಚಿಕ್ಕಮಗಳೂರಿನ ಹೆಬ್ಬಾಳೆ ಸೇತುವೆ ಮೇಲೆ ಒಂದು ದಡದಿಂದ ಮತ್ತೊಂದು ದಡಕ್ಕೆ ಹೋಗುವಾಗ ರಾಸುವೊಂದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಹೆಬ್ಬಾಳೆ ಸೇತುವೆ ಮೇಲೆ 2-3 ಅಡಿ ಎತ್ತರದಲ್ಲಿ ನೀರು ಹರಿಯುತ್ತಿದ್ದು, ದಡ ತುಸು ದೂರದಲ್ಲೇ ಇದ್ದಾಗ ನದಿಗೆ ದನವೊಂದು ಬಿದ್ದಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನಿಂದ ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆಯಲ್ಲಿ, ಜನರ ಕಣ್ಣೇದುರೇ ಭದ್ರೆಯ ಒಡಲಲ್ಲಿ ರಾಸು ಕೊಚ್ಚಿ ಹೋಗಿದೆ.

ರಸ್ತೆಗೆ ಬಿದ್ದ ಬೃಹತ್‌ ಮರ

ಪ್ರವಾಸಿಗರ ನಿಷೇಧದಿಂದ ಭಾರೀ ಅನಾಹುತವೊಂದು ತಪ್ಪಿದೆ. ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ರಸ್ತೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಮುಳ್ಳಯ್ಯನಗಿರಿ ರಸ್ತೆಯ ಮೂರನೇ ತಿರುವಿನಲ್ಲಿ ಘಟನೆ ನಡೆದಿದೆ. ವಾಹನಗಳು ಇಲ್ಲದಿದ್ದರಿಂದ ಅನಾಹುತ ತಪ್ಪಿದೆ. ಗುಡ್ಡದ ಮಣ್ಣಿನ ಸಮೇತ ಮರ ಬಿದ್ದು, ಸ್ಥಳೀಯ ಗ್ರಾಮಸ್ಥರು ಓಡಾಡಲು ಪರದಾಟ ಅನುಭವಿಸಿದರು. ಸ್ಥಳಕ್ಕೆ ಅರಣ್ಯ ಸಿಬ್ಬಂದಿ ಮರ ತೆರವು ಮಾಡಲಾಯಿತು.

ಇನ್ನೂ ಕೊಡಗು ಜಿಲ್ಲೆಯಾದ್ಯಂತ ಮಳೆಯು ಆರ್ಭಟಿಸುತ್ತಿದ್ದು ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಾವೇರಿಯ ಉಪ ನದಿಗಳ ನೀರಿನ ಮಟ್ಟ ಏರಿಕೆಯಿಂದಾಗಿ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಭರ್ತಿ‌ಯಾಗಿದೆ. ಭಗಂಡೇಶ್ವರ ಸನ್ನಿದಿಯ ಮೆಟ್ಟಿಲವರೆಗೂ ನೀರು ನಿಂತಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಗುಡ್ಡ ಕುಸಿತ ಉಂಟಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಗಣನೀಯ ಏರಿಕೆಯಾಗುತ್ತಿದ್ದು, ಭಾಗಮಂಡಲ-ನಾಪೋಕ್ಲು ರಸ್ತೆಯು 3ನೇ ಬಾರಿಗೆ ಬಂದ್ ಆಗುತ್ತಿದೆ.

ಮಂಗಳೂರಲ್ಲಿ 12 ಮನೆಗಳಿಗೆ ನುಗ್ಗಿದ ನೇತ್ರಾವತಿ

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಮಳೆ ಸುರಿಯುತ್ತಿದ್ದು, ಬಂಟ್ವಾಳದಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಬಂಟ್ವಾಳದ ಪಾಣೆಮಂಗಳೂರು ಆಲಡ್ಕದಲ್ಲಿ ಸುಮಾರು 12 ಮನೆಗಳಿಗೆ ನೀರು ನುಗ್ಗಿದೆ. ಅಪಾಯದಲ್ಲಿದ್ದ 12 ಮನೆಗಳ ಜನರನ್ನು ಜಿಲ್ಲಾಡಳಿತ ಸ್ಥಳಾಂತರ ಮಾಡಿದೆ. ಮಂಗಳೂರಲ್ಲಿ ನೇತ್ರಾವತಿ ಅಬ್ಬರ

ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಳದಿಂದಾಗಿ ಬೋಳಿಯಾರ್ ಗ್ರಾಮದ ಅಮ್ಮೆಂಬಳದಲ್ಲಿ ಸಂಪರ್ಕ ಕಡಿತಗೊಂಡಿದೆ. ಅಮ್ಮೆಂಬಳ-ಜಾರದಗುಡ್ಡೆ ಸಂಪರ್ಕ ಕಡಿತವಾಗಿದೆ. ನೇತ್ರಾವತಿ ನದಿ ನೀರು ಗದ್ದೆ ಪೂರ್ತಿ ಆವರಿಸಿದೆ. ಸುಮಾರು ನೂರ ಎಪ್ಪತ್ತೈದುಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ನೆರೆ ನೀರು ಆವರಿಸಿದೆ. ಈ ಹಿನ್ನೆಲೆಯಲ್ಲಿ 7 ಕಿ.ಮೀ ಸುತ್ತುಬಳಸಿ ಹೋಗಬೇಕಿದೆ. ರಸ್ತೆ ನಿರ್ಮಾಣ ಮಾಡುವಂತೆ ಹಲವು ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಇದನ್ನೂ ಓದಿ: Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಉಡುಪಿಯಲ್ಲಿ ಮನೆ ನೆಲಸಮ, ಸೋಮೇಶ್ವರದಲ್ಲಿ ಗುಡ್ಡ ಕುಸಿತ

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಕಟ್ಟೆಗುಡ್ಡೆ ಎಂಬಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಕಡೆಕಾರು ಪಂಚಾಯತ್‌ನ ಶಾರದ ಪೂಜಾರ್ತಿ ಎಂಬುವವರ ಮನೆ ನೆಲಸಮವಾಗಿದೆ. ಸುಮಾರು 30 ವರ್ಷ ಹಳೆಯದಾದ ಮನೆಯಲ್ಲಿ ಒಟ್ಟು 10 ಮಂದಿ ವಾಸಿಸುತ್ತಿದ್ದರು. ಮಣ್ಣಿನ ಗಾರೆ ಮಾಡಿ ಮನೆ ನಿರ್ಮಾಣ ಮಾಡಿದ್ದು, ಮನೆ ಕುಸಿಯುವ ಮೊದಲೇ ಓಡಿ ಹೋಗಿದ್ದರಿಂದ ಅಪಾಯ ತಪ್ಪಿದೆ. ಮನೆ ಬೀಳುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಉಡುಪಿಯ ಬೈಂದೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಕ್ಕೆ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಭಾರಿ ಮಳೆಯಿಂದಾಗಿ ಬೈಂದೂರು ತಾಲೂಕಿನ ಪಡುವರಿ ಗ್ರಾಮ ಪಂಚಾಯತ್ ಸೋಮೇಶ್ವರ ಗುಡ್ಡ ಕುಸಿಯುತ್ತಿದೆ. ಗುಡ್ಡದ ಮೇಲೆ ಖಾಸಗಿಯವರ ಅನಧೀಕೃತ ಕಟ್ಟಡ ನಿರ್ಮಾಣವಾಗಿದೆ. ಕಟ್ಟಡಕ್ಕೆ ಸಂಪರ್ಕ ಕಲ್ಪಿಸಲು ಗುಡ್ಡ ಕೊರೆದು ರಸ್ತೆ ನಿರ್ಮಿಸಿದ್ದಾರೆ. ಯಾವುದೇ ಸ್ಥಳೀಯ ಪರವಾನಿಗೆ ಇಲ್ಲದೆ ಕಟ್ಟಡ ನಿರ್ಮಾಣ ಮಾಡಿರುವ ಆರೋಪವಿದೆ. ನಿರಂತರ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಬಳಿ ಗುಡ್ಡ ಕುಸಿತ ಉಂಟಾಗಿದೆ. ಹೀಗಾಗಿ ಸೋಮೇಶ್ವರ ಬೀಚ್ ರಸ್ತೆ ಬಂದ್ ಮಾಡಿದ್ದಾರೆ. ಸುಮಾರು 30 ಮನೆಗಳಿಗೆ ಸಂಪರ್ಕವೇ ಇಲ್ಲದಂತಾಗಿದೆ. ಗುಡ್ಡ ಸಂಪೂರ್ಣ ಕುಸಿದರೆ ಬೈಂದೂರು ಪ್ರಸಿದ್ಧ ಪ್ರವಾಸಿ ತಾಣ ಕಣ್ಮರೆಯಾಗಲಿದೆ.

ಪಶ್ಚಿಮ ಘಟ್ಟದಲ್ಲೂ ಮಳೆ ಅಬ್ಬರ

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಬೆಳಗಾವಿ ಜಿಲ್ಲೆಯ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಖಾನಾಪುರ ತಾಲೂಕಿನ ಹೆಮ್ಮಡಗಾ ಬಳಿ ಅಪಾಯದ ಮಟ್ಟ ಮೀರಿ ಹಾಲತ್ರಿ ಹಳ್ಳ ಹರಿಯುತ್ತಿದೆ. ಸೇತುವೆ ಬಂದ್‌ ಆಗಿದ್ದರಿಂದ ಇಪ್ಪತ್ತೈದು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಸೇತುವೆಗೆ ತಡೆಗೋಡೆ ಇಲ್ಲದೇ ಜೀವ ಕೈಯಲ್ಲಿ ಹಿಡಿದು ಸಾಗುವಂತಾಗಿದೆ. ರಾತ್ರಿ ವೇಳೆ ಸ್ವಲ್ಪ ನೀರು ಸೇತುವೆ ಮೇಲಿದ್ದರೂ ಹಳ್ಳಕ್ಕೆ ಬೀಳುವ ಸಾಧ್ಯತೆ ಇದೆ.

ಸುತ್ತೂರು ಸೇತುವೆ ಮುಳುಗಡೆ

ಮೈಸೂರು – ಸುತ್ತೂರು ಗ್ರಾಮಕ್ಕೆ ಸಂಪರ್ಕ ಕೇಂದ್ರವಾಗಿದ್ದ ಸೇತುವೆ ಮುಳುಗಡೆ ಆಗಿದೆ. ಬೀಚನಹಳ್ಳಿಯ ಕಬಿನಿ ಡ್ಯಾಂ ಭರ್ತಿಯಾದ ಹಿನ್ನೆಲೆಯಲ್ಲಿ 70 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. ಹೀಗಾಗಿ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದ ಸೇತುವೆ ಮುಳುಗಡೆಯಾಗಿ, ಸುತ್ತೂರು ಮಾರ್ಗವಾಗಿ ಮೈಸೂರಿಗೆ ಸಂಪರ್ಕ ಸ್ಥಗಿತಗೊಂಡಿದೆ. ಸೇತುವೆ ಮೇಲೆ ಕಪಿಲಾ ನದಿ ಉಕ್ಕಿ ಹರಿಯುತ್ತಿದೆ.

ಮರ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ

ಶಿವಮೊಗ್ಗದ ಹೊಸನಗರ ತಾಲೂಕಿನ ಅರಸಾಳು ಬಟಾಣಿಜೆಡ್ಡು ಬಳಿ ಮರ ಬಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ಭಾರಿ ಮಳೆಗೆ ಬೃಹತ್ ಮರವೊಂದು ರೈಲ್ವೆ ಹಳಿಗಳ ಮೇಲೆ ಬಿದ್ದಿದೆ. ಜತೆಗೆ ವಿದ್ಯುತ್ ತಂತಿಗಳಿಗೂ ಸಹ ಹಾನಿಯಾಗಿದೆ. ಇದರಿಂದಾಗಿ ತಾಳಗುಪ್ಪದಿಂದ ಬೆಂಗಳೂರಿಗೆ ಹೊರಟಿದ್ದ ರೈಲು ಮರಬಿದ್ದ ಕಾರಣ ಅರಸಾಳು ಬಳಿಯ ಬಟಾಣಿಜೆಡ್ಡು ಬಳಿ ನಿಲ್ಲುವಂತಾಯಿತು. 7.15ಕ್ಕೆ ಶಿವಮೊಗ್ಗ ತಲುಪಬೇಕಿದ್ದ ರೈಲು 9 ಗಂಟೆಗೆ ಆಗಮಿಸಿತು. ಸುಮಾರು ಎರಡು ತಾಸು ಕಾದ ಪ್ರಯಾಣಿಕರು ಹೈರಾಣಾದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Narendra Modi
ರಾಜಕೀಯ7 mins ago

Narendra Modi: ಬಿಜೆಪಿ ಕಾರ್ಯಕರ್ತರೊಂದಿಗೆ ಮೋದಿ ಸ್ನೇಹ ಮಿಲನ; ನಾವೆಲ್ಲರೂ ಒಂದೇ ಕುಟುಂಬ ಎಂದು ಬಣ್ಣಿಸಿದ ಪ್ರಧಾನಿ

Hardik Pandya
ಕ್ರೀಡೆ9 mins ago

Hardik Pandya: ವಿಚ್ಛೇದಿತ ಪತ್ನಿ ನತಾಶಾಗೆ ಶೇ.70ರಷ್ಟು ಜೀವನಾಂಶ ನೀಡಲಿದ್ದಾರಾ ಹಾರ್ದಿಕ್​ ಪಾಂಡ್ಯ?

Doda Attack
ಪ್ರಮುಖ ಸುದ್ದಿ26 mins ago

Doda Attack: ಯೋಧನ ಶಿರಚ್ಛೇದಕ್ಕೆ ಯತ್ನಿಸಿದ ವಿಡಿಯೊ ಬಿಡುಗಡೆ ಮಾಡಿದ ಭಯೋತ್ಪಾದಕರು

Urvashi Rautela Conversation With Manager 'Leaked',
ಬಾಲಿವುಡ್48 mins ago

Urvashi Rautela: ಊರ್ವಶಿ ರೌಟೇಲಾ ಸ್ನಾನ ಮಾಡುವ ವಿಡಿಯೊ ಲೀಕ್‌ ಆದ ಬೆನ್ನಲ್ಲೇ ಮ್ಯಾನೇಜರ್‌ ಜತೆಗಿನ ಆಡಿಯೋನೂ ಬಹಿರಂಗ!

Kannadiga quota
ಕ್ರಿಕೆಟ್50 mins ago

Kannadiga quota: ಆರ್​ಸಿಬಿ ತಂಡದಲ್ಲೂ ಕನ್ನಡಿಗರಿಗೆ ಮೀಸಲಾತಿ ನೀಡಿ; ಅಭಿಮಾನಿಗಳಿಂದ ಆಗ್ರಹ

CM Siddaramaiah and R Ashok karnataka assembly live
ಪ್ರಮುಖ ಸುದ್ದಿ58 mins ago

Karnataka Assembly Live: 4ನೇ ದಿನದ ವಿಧಾನಮಂಡಲ ಕಲಾಪದಲ್ಲೂ ವಾಲ್ಮೀಕಿ ಹಗರಣದ ಕರಿನೆರಳು ನಿರೀಕ್ಷೆ; ಅಸೆಂಬ್ಲಿ ಲೈವ್‌ ಇಲ್ಲಿದೆ ನೋಡಿ

Mohan Bhagwat
ದೇಶ1 hour ago

Mohan Bhagwat: ಕೆಲವರು ದೇವರಾಗಲು ಬಯಸುತ್ತಾರೆ; ಪರೋಕ್ಷವಾಗಿ ಮೋದಿಗೆ ತಿವಿದ್ರಾ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್?

Womens Asia Cup 2024
ಕ್ರೀಡೆ1 hour ago

Womens Asia Cup 2024: ಇಂದು ಭಾರತ-ಪಾಕ್​ ಹೈವೋಲ್ಟೇಜ್ ಪಂದ್ಯ

railway track horrible accident
ಕ್ರೈಂ2 hours ago

Horrible Accident: ಮದ್ಯ ಸೇವಿಸಿ ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದ ರೈಲು, ಮೂವರು ಯುವಕರ ಸಾವು

Janhvi Kapoor hospitalised due to food poisoning
ಬಾಲಿವುಡ್2 hours ago

Janhvi Kapoor: ಅಂಬಾನಿ ಮದುವೆ ಬಳಿಕ ಆಸ್ಪತ್ರೆಗೆ ದಾಖಲಾದ ಜಾಹ್ನವಿ ಕಪೂರ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ19 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ5 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ5 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌