Karnataka Weather : ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್‌ ಘೋಷಣೆ - Vistara News

ಮಳೆ

Karnataka Weather : ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಕರಾವಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಉತ್ತರ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

VISTARANEWS.COM


on

karnataka weather Forecast
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain alert) ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಉತ್ತರ ಒಳನಾಡಿನಲ್ಲಿ ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ.

ಇದನ್ನೂ ಓದಿ: Electric shock : ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಬೆಂಗಳೂರಿನಲ್ಲಿ ಸಾಧಾರಣ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ ಬಾಗಲಕೋಟೆ, ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ, ಬಳ್ಳಾರಿ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain: ಗಂಗಾವತಿಯಲ್ಲಿ ಭಾರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು; ಭತ್ತದ ಗದ್ದೆಗಳಿಗೆ ಹಾನಿ

Karnataka Rain: ಗಂಗಾವತಿಯಲ್ಲಿ ಬುಧವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಗೆ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾದರೆ, ಮಳೆ ನೀರಿನಿಂದ ಅಪಾರ ಪ್ರಮಾಣದ ಭತ್ತದ ಗದ್ದೆಗಳಿಗೆ ಹಾನಿಯಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Karnataka Rain
Koo

ಗಂಗಾವತಿ: ಬುಧವಾರ ಮಧ್ಯರಾತ್ರಿ ಸುರಿದ ಭಾರೀ ಮಳೆಗೆ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾದರೆ, ಮಳೆ (Karnataka Rain) ನೀರಿನಿಂದ ಅಪಾರ ಪ್ರಮಾಣದ ಭತ್ತದ ಗದ್ದೆಗಳಿಗೆ ಹಾನಿಯಾಗಿದೆ.

ತಾಲೂಕಿನ ಗ್ರಾಮೀಣ ಭಾಗದಲ್ಲಿ ಈಗಷ್ಟೆ ಭತ್ತ ನಾಟಿ ಮಾಡಲಾಗಿದ್ದ ಸಾವಿರಾರು ಎಕರೆ ಪ್ರದೇಶದಲ್ಲಿ ಹೊಲ-ಗದ್ದೆಗಳಲ್ಲಿ ಅಪಾರ ಪ್ರಮಾಣ ಮಳೆ ನೀರು ನಿಂತು ಹಾನಿಯಾಗಿದೆ. ಸಸಿಮಡಿಗಳು ಮಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ.

ಆನೆಗೊಂದಿ, ಮಲ್ಲಾಪುರ, ಸಣಾಪುರ, ರಾಂಪುರ, ಸಂಗಾಪುರ, ಕಣಿವೆ ಆಂಜನೇಯ ದೇಗುಲ, ಗಂಗಾವತಿ, ಅಯೋಧ್ಯೆ, ಢಣಾಪುರ, ಚಿಕ್ಕಜಂತಕಲ್, ಬಸವಪಟ್ಟಣ, ವಡ್ಡರಹಟ್ಟಿ, ಮರಳಿ, ಕಲ್ಗುಡಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಭತ್ತದ ಗದ್ದೆಗಳು ನಾಶವಾಗಿವೆ.

ಇದನ್ನೂ ಓದಿ: Karnataka Weather : ಇಂದು ಧ್ವಜಾರೋಹಣ ಆಯ್ತು, ನಾಳೆ ವರಮಹಾಲಕ್ಷ್ಮಿ ಹಬ್ಬಕ್ಕೂ ಮಳೆ ಅಡ್ಡಿ; ಬೆಂಗಳೂರು ಸೇರಿ ಕರಾವಳಿ, ಮಲೆನಾಡಿಗೆ ಅಲರ್ಟ್‌

ಬುಧವಾರ ರಾತ್ರಿಯಿಂದ ಆರಂಭವಾದ ಮಳೆ ಬೆಳಗಿನ ಜಾವದವರೆಗೂ ನಿರಂತರ ಸುರಿದಿದೆ. ಹೀಗಾಗಿ ಗಂಗಾವತಿ ನಗರದ ಸುತ್ತಲೂ ಇರುವ ಬೆಟ್ಟದ ಪ್ರದೇಶದಿಂದ ಅಪಾರ ಪ್ರಮಾಣ ಮಳೆ ನೀರು ಜನವಸತಿ ಪ್ರದೇಶಕ್ಕೆ ಹರಿದು ಹಾನಿ ಸಂಭವಿಸಿದೆ.

ನಗರದ ಕಿಲ್ಲಾ ಏರಿಯಾ, ಹಿರೇಜಂತಕಲ್, ಮಹೆಬೂಬನಗರ, ಅಂಗಡಿಸಂಗಣ್ಣ ಕ್ಯಾಂಪ್, ರಾಮಲಿಂಗೇಶ್ವರ ಕ್ಯಾಂಪ್, ನೀಲಕಂಠೇಶ್ವರ ಕ್ಯಾಂಪ್, ಎಚ್ಆರ್‌ಎಸ್‌ ಕಾಲೋನಿ, ಗೌಸೀಯಾ ಕಾಲೋನಿ ಸೇರಿದಂತೆ ಕೊಳಚೆ ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿ ದವಸ-ಧಾನ್ಯ ಹಾನಿಯಾಗಿವೆ ಎಂದು ತಿಳಿದುಬಂದಿದೆ.

ಇದರ ಜತೆ ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್ ನಂಬರ್ 19 ಕಿತ್ತು ಹೋಗಿರುವ ಕಾರಣಕ್ಕೆ ಜಲಾಶಯದ ಭದ್ರತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಎಸ್ಕೇಪ್ ಛಾನಲ್ ಮೂಲಕ ಹರಿಸಿದ್ದರ ಪರಿಣಾಮ ಅಪಾರ ಪ್ರಮಾಣದ ನೀರು ಗಂಗಾವತಿ ನಗರ ಪ್ರದೇಶಕ್ಕೆ ನುಗ್ಗಿದೆ. ಪರಿಣಾಮ ನಗರದ ದುರುಗಮ್ಮನ ಹಳ್ಳ ತುಂಬಿ ಹರಿಯುತ್ತಿದ್ದು, ಸಮೀಪದ ರಸ್ತೆಗಳು ಕೂಡ ಜಲಾವೃತವಾಗಿವೆ. ಇನ್ನು ಕಣಿವೆ ಆಂಜನೇಯ ದೇವಸ್ಥಾನದ ಸುತ್ತಲಿನ ಹೊಲಗಳಲ್ಲಿ ಅಪಾರ ಪ್ರಮಾಣ ಮಳೆ ನೀರು ರಭಸವಾಗಿ ಹರಿದ ಪರಿಣಾಮ ಭೂಮಿಯ ಸಾರ ಉಳ್ಳ ಮೇಲ್ಮೈ ಸಂಪೂರ್ಣ ಕೊಚ್ಚಿಕೊಂಡು ಹೋಗಿದ್ದು, ಕೇವಲ ಮರಳು, ಕಲ್ಲು ಬಂಡೆಯ ಅವಶೇಷಗಳು ಉಳಿದುಕೊಂಡಿದೆ.

72 ಎಂ.ಎಂ. ಮಳೆ

ಬುಧವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯ ಪ್ರಮಾಣ ದಾಖಲೆ ನಿರ್ಮಿಸಿದೆ. ಗಂಗಾವತಿ ಮಳೆ ಮಾಪನ ಕೇಂದ್ರದಲ್ಲಿ ದಾಖಲಾದ ಮಾಹಿತಿ ಪ್ರಕಾರ ಗಂಗಾವತಿಯಲ್ಲಿ ಒಂದೇ ದಿನ ರಾತ್ರಿ ಒಟ್ಟು 72.5 ಮಿ.ಮೀ. ಪ್ರಮಾಣದಷ್ಟು ಮಳೆಯಾಗಿದೆ.

ಇತ್ತೀಚಿನ ವರ್ಷದಲ್ಲಿ ಒಂದೇ ದಿನ ಇಷ್ಟು ಮಳೆಯಾಗಿದ್ದು ಐತಿಹಾಸಿಕ ದಾಖಲೆ ಎಂದು ಕಂದಾಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಮರಳಿ ಮಳೆ ಮಾಪನ ಕೇಂದ್ರದಲ್ಲಿ 26.3 ಮಿ.ಮೀ. ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Job Alert: ಹೆಸ್ಕಾಂನ 338 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬುಧವಾರ ರಾತ್ರಿ ಸುರಿದ ಅಪಾರ ಪ್ರಮಾಣ ಮಳೆಗೆ ಮನೆ, ಮತ್ತು ಹೊಲ-ಗದ್ದೆಗಳಿಗೆ ಹಾನಿಯಾಗಿರುವ ಪ್ರಾಥಮಿಕ ಮಾಹಿತಿ ಇದೆ. ಹಾನಿಯ ಕುರಿತು ಮತ್ತಷ್ಟು ಮಾಹಿತಿ ಸಂಗ್ರಹಿಸಲಾಗುವುದು ಎಂದು ತಹಸೀಲ್ದಾರ್ ಯು. ನಾಗರಾಜ್ ತಿಳಿಸಿದ್ದಾರೆ.

Continue Reading

ಮಳೆ

Karnataka Weather : ಇಂದು ಧ್ವಜಾರೋಹಣ ಆಯ್ತು, ನಾಳೆ ವರಮಹಾಲಕ್ಷ್ಮಿ ಹಬ್ಬಕ್ಕೂ ಮಳೆ ಅಡ್ಡಿ; ಬೆಂಗಳೂರು ಸೇರಿ ಕರಾವಳಿ, ಮಲೆನಾಡಿಗೆ ಅಲರ್ಟ್‌

Karnataka Weather Forecast: ವರಮಹಾಲಕ್ಷ್ಮಿ ಹಬ್ಬದ (Varamahalakshim Fest) ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಎಲ್ಲ ಸಾಧ್ಯತೆಯೂ ಇದೆ. ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
ಜಲಾವೃತಗೊಂಡ ಸರ್ಕಾರಿ ಪ್ರಾಥಮಿಕ ಶಾಲೆ.. ನಿಂತ ನೀರಲ್ಲೇ ಧ್ವಜಾರೋಹಣ ಮಾಡಿದ ಮಕ್ಕಳು
Koo

ಚಿಕ್ಕೋಡಿ: ಗುರುವಾರ ಸಂಜೆ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮಳೆ (Rain news) ಅಬ್ಬರ ಜೋರಾಗಿತ್ತು. ಚಿಕ್ಕೋಡಿ, ನಿಪ್ಪಾಣಿ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಕಳೆದ ಒಂದು ವಾರದಿಂದ ವಿರಾಮ ನೀಡಿದ್ದ ಮಳೆ (karnataka weather Forecast) ಅಬ್ಬರಿಸಿತ್ತು.

ಶಾಲಾ ಆವರಣದಲ್ಲಿ ನಿಂತ ನೀರು

ರಾತ್ರಿ ಸುರಿದ ಮಳೆಯು ಅವಾಂತರವೇ ಸೃಷ್ಟಿಯಾಗಿದೆ. ಶಾಲಾ ಆವರಣದಲ್ಲಿ ನಿಂತ ನೀರಲ್ಲೇ ವಿದ್ಯಾರ್ಥಿಗಳು ಧ್ವಜಾರೋಹಣ ನೆರವೇರಿಸಿದರು. ಬಾಗಲಕೋಟೆಯ ಜಮಖಂಡಿಯ ಲಿಂಗದಕಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ.

ಇತ್ತ ನಿನ್ನೆ ಬುಧವಾರ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಳೆಗಳು ಜಲಾವೃತಗೊಂಡಿತ್ತು. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗುಂಡಾ ಗ್ರಾಮ ಹೊಲಗಳಿಗೆ ಹಳ್ಳದ ನೀರು ನುಗ್ಗಿತ್ತು. ರೈತ ಬಸವರಾಜ್ ಎಂಬುವವರಿಗೆ ಸೇರಿದ ನಾಲ್ಕೈದು ಎಕರೆ ಜಮೀನು ಜಲಾವೃತಗೊಂಡಿದೆ. ಹಿರೆಹಳ್ಳ ಒಡೆದು ಜಮೀನಿಗೆ ನೀರು ನುಗ್ಗಿದ ಪರಿಣಾಮ ಬೋರ್ ವೆಲ್ ಪೈಪ್ ಗಳು ಸೇರಿ ಮೆಕ್ಕೆಜೋಳ ಬೆಳೆ ಕೊಚ್ಚಿ ಹೋಗಿದೆ. ಮಳೆಗಾಲದಲ್ಲಿ ಹಳ್ಳದ ಮೂಲಕ ಗಣಿ ತ್ಯಾಜ್ಯ ಸಹ ಹರಿದು ಬಂದು ಜಮೀನುಗಳಲ್ಲಿ ಶೇಕರಣೆ ಆಗುತ್ತಿದೆ. ಇದರಿಂದಾಗಿ ಭೂಮಿ ಬೆಳೆ ಬೆಳೆಯಲು ಯೋಗ್ಯ ಇಲ್ಲದಂತಾಗಿದೆ.

ಇತ್ತ ಭಾರಿ ಮಳೆಯಿಂದ ನಾಗಲಾಪುರ ಹಳ್ಳ ಮೈದುಂಬಿ ಹರಿಯುತ್ತಿದ್ದು, ನಾಗಲಾಪೂರ- ಬ್ಯಾಲಕುಂದಿ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದ 5 ಹಳ್ಳಿಗಳ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಸೇತುವೆ ಮೇಲ್ಭಾಗದಲ್ಲಿ 7 ಅಡಿಗಳಷ್ಟು ಹರಿಯುತ್ತಿರುವ ನೀರಿನಿಂದಾಗಿ ನಾಗಲಾಪುರ, ನಾಗಲಾಪುರ ತಾಂಡಾ, ಬ್ಯಾಲಕುಂದಿ, ಗೊಲ್ಲರಹಳ್ಳಿ ಹಾಗೂ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ: Electric shock : ಕರೆಂಟ್‌ ಶಾಕ್‌ನಿಂದ ಎಂಜಿನಿಯರ್‌ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಈ ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆ

ಶುಕ್ರವಾರದಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾಸನ, ಬಳ್ಳಾರಿ, ತುಮಕೂರು, ಮೈಸೂರು, ಕೊಡಗು ಜಿಲ್ಲೆಗಳಲ್ಲೂ ಪ್ರತ್ಯೇಕವಾಗಿ ಭಾರಿ ವರ್ಷಾಧಾರೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ

Karnataka Weather: ಆ.16ರಂದು ಕೂಡ ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮಳೆಯಾಗುವ ಸಾಧ್ಯತೆ ಇದೆ.

VISTARANEWS.COM


on

Karnataka Weather
Koo

ಬೆಂಗಳೂರು: ಆಗಸ್ಟ್ 15ರಂದು ಗುರುವಾರ ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಮೈಸೂರು, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ.

ಇನ್ನು ಉತ್ತರ ಕನ್ನಡ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಮತ್ತು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಅದೇ ರೀತಿ ಆ.16ರಂದು ಕೂಡ ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಹಾವೇರಿ, ಕಲಬುರ್ಗಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆ.17ರವರೆಗೆ ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಹವಾಮಾನ ಇರಲಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿ.ಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದನ್ನೂ ಓದಿ | Multivitamins: ನಮಗೆ ವಿಟಮಿನ್‌ ಪೂರಕಗಳು ಅಗತ್ಯವೆಂದು ತಿಳಿಯುವುದು ಹೇಗೆ?

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಸಾಧಾರಣ ಮಳೆಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 22° C ಆಗಿರಬಹುದು.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಅಬ್ಬರಿಸಲಿದೆ ಗುಡುಗು ಸಹಿತ ಮಳೆ

Rain News : ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಒಳನಾಡಿನಲ್ಲಿ ಸಾಮಾನ್ಯವಾಗಿದ್ದು, ಕರಾವಳಿ ಭಾಗದಲ್ಲಿ ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ತಿಳಿಸಿದೆ. ಈ ದಿನ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದ ಸುತ್ತಮುತ್ತಲೂ ಮಧ್ಯಮ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಬಳ್ಳಾರಿ, ಚಾಮರಾಜನಗರ, ದಾವಣಗೆರೆ, ಕೋಲಾರ, ವಿಜಯನಗರದ ಒಂದೆರಡು ಕಡಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಕೊಪ್ಪಳ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರಿನಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿಯಂದು ಸಾಧಾರಣದೊಂದಿಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಕೆಲವೊಮ್ಮೆ ಬಿಸಿಲ ಧಗೆಯು ಹೆಚ್ಚಿರಲಿದೆ.

ಇದನ್ನೂ ಓದಿ: Physical Abuse : ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

ಹುಡುಗಿಯರ ಮಾನ್ಸೂನ್‌ ಡ್ರೆಸ್‌ ಹೇಗಿರಬೇಕು? ಹೇಗಿರಬಾರದು?

ಮಾನ್ಸೂನ್‌ನಲ್ಲಿ ಹುಡುಗಿಯರು ಧರಿಸುವ (Monsoon Fashion do’s & don’ts) ಉಡುಪುಗಳು ನೋಡಲು ಆಕರ್ಷಕವಾಗಿದ್ದರಷ್ಟೇ ಸಾಲದು, ಧರಿಸಿದಾಗ ಕಂಫರ್ಟಬಲ್‌ ಆಗಿರಬೇಕು, ಎಲ್ಲದಕ್ಕಿಂತ ಹೆಚ್ಚಾಗಿ ಸೀಸನ್‌ಗೆ ತಕ್ಕಂತಿರಬೇಕು ಎನ್ನುತ್ತಾರೆ ಫ್ಯಾಷನಿಸ್ಟ್‌ಗಳು. ಸಮೀಕ್ಷೆಯೊಂದರ ಪ್ರಕಾರ, ಸಾಕಷ್ಟು ಹುಡುಗಿಯರು ಸ್ಟೈಲಿಶ್‌ ಆಗಿ ಕಾಣಿಸಲು ಮಾನ್ಸೂನ್‌ನಲ್ಲೂ ಸಮ್ಮರ್‌ ಫ್ಯಾಷನ್‌ವೇರ್‌ಗಳನ್ನು ಧರಿಸುತ್ತಾರಂತೆ. ಇನ್ನು, ಕೆಲವು ಯುವತಿಯರು ಮಾನ್ಸೂನ್‌ ಸೀಸನ್‌ನಲ್ಲಿ ಹೊದ್ದುಕೊಂಡಂತಿರುವ ಉಡುಪುಗಳನ್ನು ಧರಿಸುತ್ತಾರಂತೆ. ಆದರೆ, ಫ್ಯಾಷನಿಸ್ಟ್‌ಗಳ ಪ್ರಕಾರ, ಆಯಾ ವರ್ಗದ ಅನುಗುಣವಾಗಿ ಹುಡುಗಿಯರು ಧರಿಸುವ ಉಡುಪುಗಳು ಬದಲಾಗುತ್ತವಂತೆ. ಅದರಲ್ಲೂ, ಜೆನ್‌ ಜಿ ಹುಡುಗಿಯರು, ಯಾವುದೇ ಸೀಸನ್‌ ಟ್ರೆಂಡ್‌ ಫಾಲೋ ಮಾಡುವುದಿಲ್ಲ, ಬದಲಾಗಿ ತಮ್ಮದೇ ಆದ ಸ್ಟೈಲಿಶ್‌ ಮಾರ್ಗವನ್ನು ಹಿಡಿಯುತ್ತಾರಂತೆ. ಅಂದ ಹಾಗೆ, ಇದೆಲ್ಲಾ ಓಕೆ, ಹಾಗೆಂದು ಸೀಸನ್‌ಗೆ ವಿರುದ್ಧವಾಗಿ ಕಾಣಿಸುವುದು ದಿನಚರಿಯಾಗಬಾರದು! ಇದು ಆರೋಗ್ಯಕ್ಕೂ ಮಾರಕ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಹಾಗಾದಲ್ಲಿ, ಈ ಸೀಸನ್‌ನಲ್ಲಿ ಯಾವ ರೀತಿಯ ಡ್ರೆಸ್‌ಗಳು ಬೆಸ್ಟ್? ಯಾವುದು ನಾಟ್‌ ಓಕೆ ! ಎಂಬುದನ್ನು ಫ್ಯಾಷನಿಸ್ಟ್‌ಗಳು ಸಿಂಪಲ್ಲಾಗಿ ತಿಳಿಸಿದ್ದಾರೆ.

Monsoon Fashion

ಮಾನ್ಸೂನ್‌ ಡ್ರೆಸ್‌ಗಳು

ಮಳೆಗಾಲದಲ್ಲಿ ಟ್ರೆಂಡಿಯಾಗುವ ಜಾಕೆಟ್‌ ಡ್ರೆಸ್‌, ಕೋಟ್‌ ಡ್ರೆಸ್‌-ಫ್ರಾಕ್ಸ್, ಸ್ಕೆಟರ್‌ ಡ್ರೆಸ್, ಮಿಡಿ ಡ್ರೆಸ್‌, ಹೈ ವೇಸ್ಟ್ ಶಾಟ್ಸ್ ಆಯ್ಕೆ ಮಾಡಬಹುದು. ಇವು ಸ್ಟೈಲಿಶ್‌ ಆಗಿ ಕಾಣಿಸುವುದರ ಜೊತೆಗೆ ಟ್ರೆಂಡಿಯಾಗಿಯೂ ಬಿಂಬಿಸುತ್ತವೆ.

Monsoon Fashion

ಗಿಡ್ಡ ಪ್ಯಾಂಟ್‌ಗೆ ಓಕೆ ಹೇಳಿ

ಆಂಕೆಲ್‌ ಲೆಂಥ್‌, ಕ್ರಾಪ್ಡ್ ಪ್ಯಾಂಟ್‌, ಲೆಗ್ಗಿಂಗ್ಸ್, ಜೆಗ್ಗಿಂಗ್ಸ್, ಪುಶ್‌ ಬ್ಯಾಕ್‌ನಂತಹ ಪ್ಯಾಂಟ್‌ಗಳನ್ನು ಧರಿಸಬಹುದು. ಆದರೆ, ಯಾವುದೇ ಕಾರಣಕ್ಕೂ ಪಲ್ಹಾಜೋ, ಪ್ಯಾರಲಲ್‌, ಬೂಟ್‌ ಕಟ್‌, ಶರರಾ, ಘರಾರದಂತಹ ಅಗಲವಾದ ನೆಲಹಾಸುವಂತಹ ಪ್ಯಾಂಟ್‌ಗಳನ್ನು ಧರಿಸಬೇಡಿ.

Monsoon Fashion

ನೆಲ ಮುಟ್ಟುವ ಗೌನ್‌ಗಳನ್ನು ದೂರವಿಡಿ

ನಡೆಯುವಾಗ ನೆಲವನ್ನು ಮುಟ್ಟುವಂತಹ ಉದ್ದುದ್ದ ಮ್ಯಾಕ್ಸಿ, ಗೌನ್‌ಗಳಿಗೆ ಸದ್ಯಕ್ಕೆ ಬೈ ಹೇಳಿ. ಇವು ನೋಡಲು ಮಾತ್ರ ಆಕರ್ಷಕವಾಗಿ ಕಾಣಿಸುತ್ತವೆ. ಇವನ್ನು ನಿರ್ವಹಣೆ ಮಾಡುವುದು ಕಷ್ಟ.

Monsoon Fashion

ಭಾರವಿಲ್ಲದ ಲೈಟ್‌ವೈಟ್‌ ಉಡುಗೆ ಧರಿಸಿ

ಲೇಯರಿಂಗ್‌ ಹೆಸರಲ್ಲಿ ದಪ್ಪನೆಯ ಫ್ಯಾಬ್ರಿಕ್‌ನ ಉಡುಗೆಗಳು ಉಸಿರುಕಟ್ಟಿಸಬಹುದು. ಮಳೆಯಲ್ಲಿ ಒದ್ದೆಯಾದರಂತೂ ಕಿರಿಕಿರಿ ಎನಿಸಬಹುದು. ಇದನ್ನು ಅವಾಯ್ಡ್ ಮಾಡಲು, ಬೇಗನೇ ಒಣಗುವ ಲೈಟ್‌ವೈಟ್‌ ಡ್ರೆಸ್‌ಗಳಿಗೆ ಸೈ ಎನ್ನಿ.

ಹೆವಿ ಎಥ್ನಿಕ್‌ ಡಿಸೈನರ್‌ವೇರ್‌ ಅವಾಯ್ಡ್ ಮಾಡಿ

ಹೆವಿ ಎಥ್ನಿಕ್‌ವೇರ್‌ಗಳನ್ನು ಆವಾಯ್ಡ್ ಮಾಡಿ. ಎಥ್ನಿಕ್‌ವೇರ್‌ ಧರಿಸಲೇ ಬೇಕಿದ್ದಲ್ಲಿ ಆದಷ್ಟೂ ಆಂಕೆಲ್‌ ಲೆಂಥ್‌ ಡಿಸೈನರ್‌ವೇರ್ಸ್ ಸೆಲೆಕ್ಟ್ ಮಾಡಿ ಶಾರ್ಟ್ ಕುರ್ತಾ, ಆಂಕೆಲ್‌ ಲೆಂಥ್‌ ಚೂಡಿದಾರ್‌, ಸಲ್ವಾರ್‌ಗಳನ್ನು ಧರಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Shocking Incident
ಪ್ರಮುಖ ಸುದ್ದಿ6 mins ago

Shocking Incident : ಮಹಿಳೆಯನ್ನು ನಗ್ನಗೊಳಿಸಿ ಶಸ್ತ್ರ ಚಿಕಿತ್ಸೆ ನಡೆಸಿದ ವಾರ್ಡ್​ ಬಾಯ್​! ವಿಡಿಯೊ ವೈರಲ್​

teacher murder case
ಕೋಲಾರ10 mins ago

Murder Case: ಶಿಕ್ಷಕಿಯ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ, ಹಂತಕರಿಂದ ಪುತ್ರಿ ಪಾರು

ITBP Recruitment 2024
ಉದ್ಯೋಗ39 mins ago

ITBP Recruitment 2024: ITBPಯಲ್ಲಿದೆ ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಉದ್ಯೋಗ; 69,100 ರೂ.ವರೆಗೂ ಸಂಬಳ

Indian Medical Association
ಪ್ರಮುಖ ಸುದ್ದಿ43 mins ago

Indian Medical Association : ವೈದ್ಯರ ಪ್ರತಿಭಟನೆ; ಶನಿವಾರದಿಂದ 24 ಗಂಟೆ ಕಾಲ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ

Mahabharat Story
ಧಾರ್ಮಿಕ1 hour ago

Mahabharat Story: ಕೌರವರೊಂದಿಗೆ ಸಂಧಾನಕ್ಕೆ ಹೋದ ಶ್ರೀ ಕೃಷ್ಣ ಪಾಂಡವರಿಗಾಗಿ ಕೇಳಿದ 5 ಗ್ರಾಮಗಳು ಈಗ ಎಲ್ಲಿವೆ ಗೊತ್ತೆ?

lakshya sen ರಾಜಮಾರ್ಗ ಅಂಕಣ
ಅಂಕಣ1 hour ago

ರಾಜಮಾರ್ಗ ಅಂಕಣ: ಪದಕವೊಂದೇ ಲಕ್ಷ್ಯ – ಲಕ್ಷ್ಯ ಸೇನ್!

Benefits of weight training for women
ಆರೋಗ್ಯ2 hours ago

Benefits of weight training for women: ತೂಕ ಎತ್ತುವ ವ್ಯಾಯಾಮ ಮಹಿಳೆಯರಿಗೆ ಏಕೆ ಬೇಕು?

Varamahalakshmi Festival 2024
ಪ್ರಮುಖ ಸುದ್ದಿ2 hours ago

Varamahalakshmi Festival 2024 : ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಏನು? ಹೆಚ್ಚಿನ ಫಲ ಪಡೆಯಲು ಪೂಜೆ ಹೇಗೆ ಮಾಡಬೇಕು?

karnataka weather Forecast
ಮಳೆ2 hours ago

Karnataka Weather : ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; ಆರೆಂಜ್‌ ಅಲರ್ಟ್‌ ಘೋಷಣೆ

Dina bhavishya
ಭವಿಷ್ಯ3 hours ago

Dina Bhavishya :ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌