Site icon Vistara News

Karnataka Weather : ಕರಾವಳಿ, ಮಲೆನಾಡಲ್ಲಿ ಜೋರು ಮಳೆ; ದಕ್ಷಿಣ ಒಳನಾಡಿನಲ್ಲೂ ಇರಲಿದೆ ಅಬ್ಬರ

karnataka Weather

ಬೆಂಗಳೂರು: ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather forecast) ನೀಡಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಚದುರಿದಂತೆ ಶುರುವಾಗಿ ಭಾರಿ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯ (Rain Alert) ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಮಂಡ್ಯ, ತುಮಕೂರು, ರಾಮನಗರದಲ್ಲಿ ಮಧ್ಯಮ ಮಳೆಯಾದರೆ, ಮೈಸೂರು, ಚಾಮರಾಜನಗರ, ದಾವಣಗೆರೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರಿಗೆ ಯಾವುದೇ ಮಳೆ ಸೂಚನೆ ಇಲ್ಲ. ಬದಲಿಗೆ ಶುಷ್ಕವಾತಾವರಣ ಮುಂದುವರಿಯಲಿದೆ.

ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳ ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗಲಿದೆ. ಕೆಲವೆಡೆ ಭಾಗಶಃ ಮೋಡದೊಂದಿಗೆ ಒಣ ಹವೆ ಮುಂದುವರಿಯಲಿದೆ.

ಇದನ್ನೂ ಓದಿ:Summer Skincare: ಬೇಸಿಗೆಯಲ್ಲಿ ನಿಮ್ಮ ಚರ್ಮ ಕಪ್ಪಾಗದಂತೆ ತಡೆಯಲು ಹೀಗೆ ಮಾಡಿ

ಕೊಡಗಿನಲ್ಲಿ ಮುಂದುವರಿಯಲಿದೆ ಧಾರಾಕಾರ ಮಳೆ

ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಚದುರಿದಂತೆ ವ್ಯಾಪಕ ಮಳೆಯಾದರೆ, ಇತ್ತ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಕೆಲವೊಮ್ಮೆ ವ್ಯಾಪಕವಾಗಿ ಗುಡುಗು ಸಹಿತ ಮಳೆ ಸುರಿಯಬಹುದು. ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮಧ್ಯಮ ಮಳೆಯಾಗಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 33 ಡಿ.ಸೆ – 21 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 22 ಡಿ.ಸೆ
ಗದಗ: 36 ಡಿ.ಸೆ – 21 ಡಿ.ಸೆ
ಹೊನ್ನಾವರ: 34 ಡಿ.ಸೆ- 24 ಡಿ.ಸೆ
ಕಲಬುರಗಿ: 39 ಡಿ.ಸೆ – 26 ಡಿ.ಸೆ
ಬೆಳಗಾವಿ: 36 ಡಿ.ಸೆ – 21 ಡಿ.ಸೆ
ಕಾರವಾರ: 37 ಡಿ.ಸೆ – 25 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version