Site icon Vistara News

Karnataka Weather : ಬೆಂಗಳೂರು ಸೇರಿ 7 ಜಿಲ್ಲೆಗಳಲ್ಲಿ ಏರಿಕೆ ಆಗಲಿದೆ ಗರಿಷ್ಠ ಉಷ್ಣಾಂಶ

Maximum temperature likely to rise in 7 districts including Bengaluru

ಬೆಂಗಳೂರು: ಮುಂದಿನ ಒಂದು ವಾರವು ರಾಜ್ಯದಲ್ಲಿ ಒಣಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಉಷ್ಣಾಂಶದಲ್ಲಿ ಏರಿಳಿತ ಇರಲಿದೆ.

ಪ್ರಮುಖವಾಗಿ ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯದಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಿರಲಿದೆ. ಹಾಗೇ ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ವಿಜಯಪುರದ ಕೆಲವೆಡೆ ವಾಡಿಕೆಗಿಂತ ಕಡಿಮೆ ಇರಲಿದೆ. ಉಳಿದಂತೆ ರಾಜ್ಯಾದ್ಯಂತ ಗರಿಷ್ಠ ಉಷ್ಣಾಂಶ ಸಾಮಾನ್ಯವಾಗಿರಲಿದೆ.

ಇನ್ನೂ ಕನಿಷ್ಠ ಉಷ್ಣಾಂಶವು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಕೋಲಾರ, ಮಂಡ್ಯದಲ್ಲಿ ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಉಡುಪಿ , ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಭಾಗದಲ್ಲಿ ಒಣಹವೆ ಇರಲಿದೆ.

ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ

ಬೆಂಗಳೂರಿನ ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ ಬಿಸಿಲ ಧಗೆ ಹೆಚ್ಚಿರಲಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಎಚ್‌ಎಎಲ್‌ ಸೇರಿ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಹಾಗೂ ಕನಿಷ್ಠ ಉಷ್ಣಾಂಶ 19 ಡಿ.ಸೆ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 31 ಡಿ.ಸೆ -19 ಡಿ.ಸೆ
ಮಂಗಳೂರು: 33 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 18 ಡಿ.ಸೆ
ಗದಗ: 34 ಡಿ.ಸೆ – 16 ಡಿ.ಸೆ
ಹೊನ್ನಾವರ: 32 ಡಿ.ಸೆ- 18 ಡಿ.ಸೆ
ಕಲಬುರಗಿ: 34 ಡಿ.ಸೆ – 21 ಡಿ.ಸೆ
ಬೆಳಗಾವಿ: 32 ಡಿ.ಸೆ – 14 ಡಿ.ಸೆ
ಕಾರವಾರ: 34 ಡಿ.ಸೆ – 19 ಡಿ.ಸೆ

ಪ್ರಮುಖ ನಗರಗಳ ಪೈಕಿ ಬೆಂಗಳೂರಲ್ಲಿ ಮಾತ್ರ ಮಂಜು ಮುಸುಕುವ ವಾತಾವರಣ ಇರಲಿದೆ,. ಉಳಿದಂತೆ ಮಂಗಳೂರು, ಚಿತ್ರದುರ್ಗ, ಗದಗ, ಹೊನ್ನಾವರ ಹಾಗೂ ಕಲಬುರಗಿ, ಬೆಳಗಾವಿ, ಕಾರವಾರದಲ್ಲಿ ಆಕಾಶವು ನಿರ್ಮಲವಾಗಿರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version