Site icon Vistara News

Karnataka weather : ಧರ್ಮಸ್ಥಳದಲ್ಲಿ ಅಬ್ಬರಿಸಿರುವ ಮಳೆ; ನಾಳೆಯೂ ಭಾರಿ ವರ್ಷಧಾರೆ!

Rain alert

ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಬ್ಬರದ (Rain News) ಮಳೆಯಾಗುತ್ತಿದೆ. ನಿನ್ನೆ ಭಾನುವಾರ ಕರಾವಳಿಯ ಕೆಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ (Karnataka weather Forecast) ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ (Dry weather) ಇತ್ತು. ದಕ್ಷಿಣ ಕನ್ನಡದ ಧರ್ಮಸ್ಥಳದಲ್ಲಿ 10 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ಉಳಿದಂತೆ ಬೆಳ್ತಂಗಡಿಯಲ್ಲಿ 4 ಸೆಂ.ಮೀ, ಮಣಿ, ಪಣಂಬೂರು,ಮೂಡಿಗೆರೆಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ 2 , ಮಂಗಳೂರು, ಸಿದ್ದಾಪುರ, ಹರದನಹಳ್ಳಿ ಕೆವಿಕೆ, ಕುಶಾಲನಗರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ವಿಜಯಪುರ ಹಾಗೂ ಬೀದರ್‌ನಲ್ಲಿ ಕಡಿಮೆ ಉಷ್ಣಾಂಶ 14 ಡಿ.ಸೆ ದಾಖಲಾಗಿದೆ.

ಮುಂದಿನ 48 ಗಂಟೆಯಲ್ಲಿ ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಲ್ಲಿ ಒಣಹವೆಯೇ ಮುಂದುವರಿಯಲಿದೆ. ಬೆಂಗಳೂರಲ್ಲಿ ಘಳಿಗೆಗೊಂದು ವಾತಾವರಣ ಇರಲಿದೆ. ಒಮ್ಮೆ ಬಿಸಿಲಿನಿಂದ ಕೂಡಿದ್ದರೆ ಮರುಕ್ಷಣ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 29 ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Bulletproof Coffee: ಬಂದಿದೆ ಹೊಸ ಬುಲೆಟ್‌ ಪ್ರೂಫ್‌ ಕಾಫಿ! ತೂಕ ಇಳಿಸುವವರ ಹೊಸ ಟ್ರೆಂಡ್‌!

ಇಲ್ಲೆಲ್ಲ ಮಳೆ ಸೂಚನೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರಲ್ಲಿ ಭಾರಿ ವರ್ಷಧಾರೆ ಇರಲಿದೆ.

ಮುಕ್ಕಾಲು ಜಿಲ್ಲೆಗಳಲ್ಲಿ ಒಣಹವೆ

ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆ ಸೂಚನೆ ಇಲ್ಲ. ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಜತೆಗೆ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version