Karnataka Weather : ಬೆಂಗಳೂರಿನಲ್ಲಿಂದು ಗುಡುಗು ಸಹಿತ ಸಾಧಾರಣ ಮಳೆ ಎಚ್ಚರಿಕೆ - Vistara News

ಮಳೆ

Karnataka Weather : ಬೆಂಗಳೂರಿನಲ್ಲಿಂದು ಗುಡುಗು ಸಹಿತ ಸಾಧಾರಣ ಮಳೆ ಎಚ್ಚರಿಕೆ

karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ತಗ್ಗಿದ್ದರೂ ಕೆಲವು ಆಯ್ದ ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಇದೆ. ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗಬಹುದು.

VISTARANEWS.COM


on

Karnataka weather Forecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನೈರುತ್ಯ ಮಾನ್ಸೂನ್‌ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದೆ. ದಕ್ಷಿಣ ಒಳನಾಡಿನಲ್ಲಿ (Karnataka weather Forecast) ಸಾಮಾನ್ಯವಾಗಿತ್ತು. ಆಗಸ್ಟ್‌ 11ರಂದು ಬೆಂಗಳೂರು ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ (Rain News) ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರದ ಒಂದೆರಡು ಕಡಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಕರಾವಳಿ ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣವಾಗಿರಲಿದೆ.

ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಜತೆಗೆ ಥಂಡಿ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28ºC ಮತ್ತು 21ºC ಇರಲಿದೆ.

ಇದನ್ನೂ ಓದಿ: KEA: ಸಹಾಯ ಎಂಜಿನಿಯರ್ ಹುದ್ದೆಗಳಿಗೆ ನಾಳೆ ನೇಮಕ ಪರೀಕ್ಷೆ; ವೆಬ್ ಕಾಸ್ಟಿಂಗ್ ಮೂಲಕ 28 ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ

ಮಾನ್ಸೂನ್‌‌‌ಗೆ ಲಗ್ಗೆ ಇಟ್ಟಿದೆ ಚಿಣ್ಣರ ಕಲರ್‌ ಫುಲ್‌ ರೈನ್‌ ಕೋಟ್ಸ್

ಮಾನ್ಸೂನ್‌ ಫ್ಯಾಷನ್‌ನಲ್ಲಿ ಆಕರ್ಷಕವಾದ ಕಿಡ್ಸ್ ರೈನ್‌ಕೋಟ್‌ಗಳು (Kids Raincoats) ಲಗ್ಗೆ ಇಟ್ಟಿವೆ. ಹೌದು, ಮಾನ್ಸೂನ್‌ ಸೀಸನ್‌ನಲ್ಲಿ ಎಲ್ಲಾ ವಯಸ್ಸಿನ ಮಕ್ಕಳಿಗೆ ಇಷ್ಟವಾಗುವಂತಹ ಬಗೆಬಗೆಯ ಕಾರ್ಟೂನ್‌ ಚಿತ್ತಾರವಿರುವಂತಹ ನಾನಾ ಬಗೆಯ ಆಕರ್ಷಕ ಬಣ್ಣ ಬಣ್ಣದ ರೈನ್‌ಕೋಟ್‌ಗಳು ಬಿಡುಗಡೆಗೊಂಡಿವೆ.

Kids Raincoats

ಮಕ್ಕಳನ್ನು ಉಲ್ಲಾಸಿತಗೊಳಿಸುವ ರೈನ್‌ಕೋಟ್ಸ್

“ ಪ್ರತಿ ಬಾರಿಯೂ ಮಾನ್ಸೂನ್‌ನಲ್ಲಿ ಮಕ್ಕಳಿಗೆ ನಾನಾ ವೆರೈಟಿ ವಿನ್ಯಾಸದ ರೈನ್‌ಕೋಟ್‌ಗಳು ಬಿಡುಗಡೆಗೊಳ್ಳುತ್ತಿರುತ್ತವೆ. ಮಕ್ಕಳು ಇಷ್ಟಪಟ್ಟು ಧರಿಸುವಂತಹ ಕಲರ್‌ ಹಾಗೂ ಚಿತ್ತಾರಗಳಿರುವಂತವು ಹೆಚ್ಚಾಗಿ ಬಿಕರಿಯಾಗುತ್ತವೆ. ಇದಕ್ಕೆ ಪೂರಕ ಎಂಬಂತೆ, ಮಳೆಗಾಲದಲ್ಲಿ ಔಟಿಂಗ್‌ ಅಥವಾ ಹೊರಗಡೆ ಹೋದಾಗ ಆಕರ್ಷಕವಾಗಿ ಕಾಣಿಸುವಂತಹ ಕಲರ್‌ಫುಲ್‌ ಡಿಸೈನ್‌ನ ರೈನ್‌ಕೋಟ್‌ಗಳು ಲೆಕ್ಕವಿಲ್ಲದಷ್ಟು ಡಿಸೈನ್‌ನಲ್ಲಿ ಆಗಮಿಸಿವೆ. ಉತ್ತಮ ಗುಣ ಮಟ್ಟದ ಬ್ರಾಂಡ್‌ಗಳಿಂದಿಡಿದು, ರಸ್ತೆ ಬದಿ ಮಾರುವಂತಹ ಲೋಕಲ್‌ ಡಿಸೈನ್‌ನಲ್ಲೂ ದೊರೆಯುತ್ತಿವೆ. ಆದರೆ, ಇವನ್ನು ಕೊಳ್ಳುವಾಗ ಮೆಟಿರಿಯಲ್‌ ಪರಿಶೀಲಿಸಿ ಕೊಳ್ಳುವುದು ಮುಖ್ಯ “ ಎನ್ನುತ್ತಾರೆ ಕಿಡ್ಸ್ ಸ್ಟೈಲಿಸ್ಟ್‌‌ಗಳು.

Kids Raincoats

ಟ್ರೆಂಡ್‌ನಲ್ಲಿರುವ ಚಿಣ್ಣರ ರೈನ್‌ಕೋಟ್ಸ್

ವಾಟರ್‌ ಪ್ರೂಫ್‌ನ ಹೂಡಿ ರೈನ್‌ಕೋಟ್ಸ್, ಯೂನಿಸೆಕ್ಸ್ ರೈನ್‌ಕೋಟ್ಸ್, ಅನಿಮಲ್‌ ಪ್ರಿಂಟ್‌, ಕಾರ್ಟೂನ್‌ ಪ್ರಿಂಟ್, ಗ್ರಾಫಿಕ್ ಪ್ರಿಂಟ್‌, ಪಾಲಿಸ್ಟರ್‌, ತ್ರಿ ಡಿ ಕಲರ್‌, ಹೆಣ್ಣುಮಕ್ಕಳ ಬಾರ್ಬಿ ಪ್ರಿಂಟ್ಸ್, ಕೊರಿಯನ್‌ ಸ್ಟೈಲ್‌, ಕೇಪ್‌ ಸ್ಟೈಲ್‌, ಟ್ರೆಂಚ್‌ ಕೋಟ್‌ ಸ್ಟೈಲ್‌, ಬ್ಯಾಕ್‌ಪ್ಯಾಕ್‌ ಕವರ್‌ ರೈನ್‌ಕೋಟ್‌ಗಳು ಈ ಸೀಸನ್‌ನಲ್ಲಿ ಸಾಕಷ್ಟು ಟ್ರೆಂಡಿಯಾಗಿವೆ. ಎಲ್ಲರೂ ಅವರವರ ಮಕ್ಕಳಿಗೆ ಮ್ಯಾಚ್‌ ಆಗುವಂತಹ ರೈನ್‌ಕೋಟ್‌ಗಳನ್ನು ಪೋಷಕರು ಖರೀದಿಸುವುದು ಕೂಡ ಇಂದು ಹೆಚ್ಚಾಗಿದೆ ಎನ್ನುತ್ತಾರೆ ರೈನ್‌ಕೋಟ್‌ ವ್ಯಾಪಾರಿಗಳು.

Kids Raincoats
Kids Raincoats

ಆನ್‌ಲೈನ್‌ನಲ್ಲಿ ರೈನ್‌ಕೋಟ್‌ ಅಬ್ಬರ

ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗೆಂದೇ ಈಗಾಗಲೇ ಕಿಡ್ಸ್ ಕೆಟಗರಿಯಲ್ಲಿ ಲೆಕ್ಕವಿಲ್ಲದಷ್ಟು ಬಗೆಯ ರೈನ್‌ಕೋಟ್‌ಗಳು ಲಗ್ಗೆ ಇಟ್ಟಿವೆ. ಕೆಲವು ಆನ್‌ಲೈನ್‌ ಶಾಪ್‌ಗಳು ಮಾನ್ಸೂನ್‌ ಆಫರ್‌ನಲ್ಲಿ ಕಡಿಮೆ ಬೆಲೆ ನಿಗಧಿಪಡಿಸಿದ್ದರೇ, ಇನ್ನು ಕೆಲವು ನ್ಯೂ ಅರೈವಲ್‌ ಕೆಟಗರಿಯಲ್ಲಿ ದರ ಹೆಚ್ಚಿಸಿವೆ ಎನ್ನುತ್ತಾರೆ ಕಿಡ್ಸ್ ಸ್ಟೈಲಿಸ್ಟ್‌ಗಳು.

ಇದನ್ನೂ ಓದಿ: Blazer Saree Fashion: ಮಾನ್ಸೂನ್‌ ಸೀಸನ್‌ ಬ್ಲೇಜರ್‌ ಸೀರೆಯಲ್ಲಿ ಶ್ವೇತಾ ಚಂಗಪ್ಪ ಕಮಾಲ್‌

ಹೀಗಿರಲಿ ಮಕ್ಕಳ ರೈನ್‌ಕೋಟ್‌ ಆಯ್ಕೆ

  • ವಾಟರ್‌ಪ್ರೂಫ್‌ ರೈನ್‌ಕೋಟ್‌ಗೆ ಆದ್ಯತೆ ನೀಡಿ.
  • ಆದಷ್ಟೂ ಮಂಡಿ ಕೆಳಗಿನ ತನಕ ಉದ್ದವಿರುವ ರೈನ್‌ಕೋಟ್‌ ಖರೀದಿಸಿ.
  • ಮನೆಯಲ್ಲಿ ಇಬ್ಬರಿಗಿಂತ ಮಕ್ಕಳು ಹೆಚ್ಚಿದ್ದಲ್ಲಿ ಯೂನಿಸೆಕ್ಸ್ ರೈನ್‌ಕೋಟ್‌ ಬಳಸಬಹುದು.
  • ಟ್ರೆಂಡ್‌ಗೆ ತಕ್ಕಂತೆ ಬಿಡುಗಡೆಗೊಂಡಿರುವ ರೈನ್‌ಕೋಟ್‌ ಕೊಳ್ಳಿ.
  • ಮಕ್ಕಳನ್ನು ಉಲ್ಲಾಸಿತಗೊಳಿಸುವಂತಹ ಪ್ರಿಂಟ್ಸ್ ಇರುವಂತಹ ಕಲರ್‌ಫುಲ್‌ ರೈನ್‌ಕೋಟ್‌ ಚೂಸ್‌ ಮಾಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವೀಕೆಂಡ್‌ ಮೋಜಿಗೆ ಮಳೆ ಅಡ್ಡಿ; ಬೆಂಗಳೂರು ಸೇರಿ ಇಲ್ಲೆಲ್ಲ ನಾಳೆ ವರ್ಷಧಾರೆ

Karnataka weather Forecast : ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮಳೆಯು ಅಬ್ಬರಿಸಿದ್ದು, ಭಾನುವಾರಕ್ಕೂ ಹಲವೆಡೆ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Koo

ಬೆಂಗಳೂರು: ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆ ಜಿಟಿ ಜಿಟಿ ಮಳೆಯಿಂದ (Rain News) ಶುರುವಾಗಿ ಸಂಜೆ ವೇಳೆಗೆ ಹಲವೆಡೆ ಸಾಧಾರಣ (Karnataka weather Forecast) ಮಳೆಯಾಗಿದೆ. ಮುಂಜಾವಿನ ಮಳೆಯಿಂದ ಜಾಗಿಂಗ್, ರನ್ನಿಂಗ್ ಹೋಗುವವರಿಗೆ ತೊಂದರೆ ಆಯಿತು.

ನಗರದ ಕೆ.ಆರ್.ಮಾರುಕಟ್ಟೆ, ಶಾಂತಿನಗರ, ಕೋರಮಂಗಲ, ಶಿವಾಜಿನಗರ, ಮಲೇಶ್ವರಂ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದೆ. ಮಲ್ಲೇಶ್ವರಂ, ಶೇಷಾದ್ರಿಪುರಂ, ವಿಧಾನಸೌಧದಲ್ಲೂ ಮಳೆಯ ಸಿಂಚನವಾಗಿದೆ.

ಭಾರಿ ಮಳೆಗೆ ಕಾಳಿ ಸೇತುವೆ ಕುಸಿತದಿಂದಾಗಿ ಹೊಸ ಸೇತುವೆಯಲ್ಲಿ ಹೆಚ್ಚಾದ ವಾಹನ ದಟ್ಟಣೆ

ಉತ್ತರ ಕನ್ನಡದ ಕಾರವಾರದ ಕಾಳಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಸೇತುವೆ ಮೇಲೆ ವಾಹನ ದಟ್ಟಣೆ ಹೆಚ್ಚಿದೆ. ಕಾರವಾರದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ನಿರ್ಮಿಸಲಾದ ಹೊಸ ಸೇತುವೆಯು ಕಾರವಾರ-ಗೋವಾ ಸಂಪರ್ಕಿಸಲಿದೆ.

ಒಂದೇ ಸೇತುವೆ ಮೇಲೆ ದ್ವಿಮುಖ ಸಂಚಾರದಿಂದ ವಾಹನ ದಟ್ಟಣೆ ಎದುರಾಗಿದ್ದು, ಒಂದರ ಹಿಂದೆ ಒಂದರಂತೆ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗೋವಾ-ಮಂಗಳೂರು ನಡುವಿನ ಸರಕು ಸಾಗಾಟಕ್ಕೆ ತೊಡಕು ಉಂಟಾಗಿದೆ. ಹೊಸ ಸೇತುವೆಗೆ ಬೀದಿದೀಪ ಅಳವಡಿಸದೇ ಐಆರ್‌ಬಿ ನಿರ್ಲಕ್ಷ್ಯ ವಹಿಸಿದ್ದು, ರಾತ್ರಿ ವೇಳೆ ವಾಹನ ಸಂಚಾರದಿಂದ ಅಪಘಾತಗಳು ಸಂಭವಿಸುವ ಆತಂಕ ಎದುರಾಗಿದೆ. ಹೊಸ ಸೇತುವೆಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸವಾರರು ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ: Building Collapsed: ಬೆಂಗಳೂರಲ್ಲಿ ನಿರ್ಮಾಣ ಹಂತ ಕಟ್ಟಡ ಕುಸಿತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

ಸಾಧಾರಣ ಮಳೆ ಸಾಧ್ಯತೆ

ನಾಳೆ ಭಾನುವಾರ ಕರಾವಳಿಯ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡು ಜಿಲ್ಲೆಗಳ ಮೇಲೆ ಒಂದೆರಡು ಕಡೆಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ ನೀಡಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆ ಸೂಚನೆ; ಕರಾವಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather Forecast : ಈ ದಿನ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಲೆನಾಡು ಹಾಗೂ ಒಳನಾಡಿನಲ್ಲಿ ವಾತಾವರಣ ಹೇಗಿರಲಿದೆ? ಇಲ್ಲಿದೆ ಮಾಹಿತಿ

VISTARANEWS.COM


on

By

karnataka weather Forecast
Koo

ಬೆಂಗಳೂರು: ಆಗಸ್ಟ್‌ 10ರಂದು ಕರ್ನಾಟಕದ ಕರಾವಳಿಯಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಮೈಸೂರು-ಮಂಡ್ಯದಲ್ಲೂ ಭಾರಿ ಮಳೆ

ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಸುರಿಯಲಿದೆ.

ಇದನ್ನೂ ಓದಿ: Theft Case : ಬೆಂಗಳೂರಿನಲ್ಲಿ ಪ್ರೇಯಸಿಗಾಗಿ ಕಳ್ಳತನಕ್ಕೆ ಇಳಿದ ಪ್ರಿಯತಮ! ಮದುವೆಯಾಗಲು ಹೊರಟವರು ಜೈಲುಪಾಲು

ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಸನ ಜಿಲ್ಲೆಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣವಾಗಿರಲಿದೆ.

ಬೆಂಗಳೂರಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28ºC ಮತ್ತು 21ºC ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ವಿಜಯಪುರದ ಹಲವೆಡೆ ಸುರಿದ ಭಾರಿ ಮಳೆ; ನಾಳೆಗೂ ಇದೆ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ವಾರಾಂತ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಇತ್ತ ಮಳೆ ಇಲ್ಲದೆ ಕಂಗಲಾಗಿದ್ದ ವಿಜಯಪುರದಲ್ಲಿ ಮಳೆಯಾದರೆ, ಕಲಬುರಗಿಯಲ್ಲಿ ನೀರು ನುಗ್ಗಿ ಜಮೀನುಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka weather Forecast
Koo

ವಿಜಯಪುರ: ಮಳೆ ಬಾರದೆ (Rain News) ಕಂಗಾಲಾಗಿದ್ದ ವಿಜಯಪುರ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಶುಕ್ರವಾರ ವಿಜಯಪುರ ಜಿಲ್ಲೆಯ ಹಲವೆಡೆ ಭಾರಿ ಮಳೆ ಸುರಿದಿದೆ. ಮಳೆ ಇಲ್ಲದೆ ತೊಗರಿ, ಮೆಕ್ಕೆಜೋಳ ಬೆಳೆ ಒಣಗುತ್ತಿತ್ತು. ವಿಜಯಪುರ ಜಿಲ್ಲೆಯ ಸಿಂದಗಿ, ಕೋರವಾರ, ಕೊಂಡಗೂಳಿ, ಜಾಲವಾದ, ಹಂಚಲಿ, ಸೇರಿದಂತರ ಹಲವೆಡೆ (Karnataka Weather Forecast) ಮಳೆಯಾಗಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಉಜನಿ ಜಲಾಶಯದಿಂದ ಭೀಮಾನದಿಗೆ ಬಾರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಕಲಬುರಗಿ ತಾಲೂಕಿನ ಹಾಗರಗುಂಡಗಿ, ಕೌಲಗಾ ಗ್ರಾಮದ ಸುತ್ತಲ್ಲಿ‌ಭಾರಿ ಪ್ರಮಾಣದ ಬೆಳೆ ಹಾನಿಯಾಗಿದೆ. ಹಾಗರಗುಂಡಗಿ ಗ್ರಾಮದ ಜಮೀನಿಗೆ ನೀರು ನುಗ್ಗಿದೆ. ಸರಿ ‌ಸುಮಾರು 500 ಹೆಚ್ಚು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕಬ್ಬು, ತೊಗರಿ , ಹೆಸರು ಬೆಳೆ ಭೀಮಾ ನೀರು ಪಾಲಾಗಿದ್ದು, ಮತ್ತಷ್ಟು ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಇದನ್ನೂ ಓದಿ: Love Case : ಮದುವೆಗೆ ಪೋಷಕರ ವಿರೋಧ; ಮರಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ

ವಾರಾಂತ್ಯದಲ್ಲಿ ಹಗುರ ಮಳೆ ಸಾಧ್ಯತೆ

ವಾರಾಂತ್ಯದಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 21° C ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರ

Rain News : ರಾಜ್ಯಾದ್ಯಂತ ಮಳೆ ಅಬ್ಬರ ತಗ್ಗಿದೆ. ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನಲ್ಲಿ ಕೆಲವೊಮ್ಮೆ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ (Karnataka Weather Forecast) ಇದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ವ್ಯಾಪಕ ಸ್ಥಳಗಳಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು ಮತ್ತು ರಾಮನಗರ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಲಿದೆ.

ಉತ್ತರ ಒಳನಾಡಿನ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

ಮಾನ್ಸೂನ್‌‌‌ನಲ್ಲಿ ಟ್ರೆಂಡಿಯಾದ ಫ್ರೆಂಡ್‌‌‌ಶಿಪ್‌ ಡೇ ಫ್ಯಾಷನ್‌ ಥೀಮ್‌

ಮಾನ್ಸೂನ್‌ನಲ್ಲಿ ಫ್ರೆಂಡ್‌ಶಿಪ್‌ ಡೇ ಫ್ಯಾಷನ್‌ (Friendshipday Fashion) ಥೀಮ್‌ ಟ್ರೆಂಡಿಯಾಗಿದೆ. ಹೌದು, ಪ್ರತಿ ವರ್ಷದಂತೆ ಈ ವರ್ಷವೂ ಅಗಸ್ಟ್ ನ ಮೊದಲ ಭಾನುವಾರ ಸೆಲೆಬ್ರೇಟ್‌ ಫ್ರೆಂಡ್‌ ಶಿಪ್‌ ಡೇ ಫ್ಯಾಷನ್‌ನ ಕಾನ್ಸೆಪ್ಟ್ ಒಂದೇ ಎಂದೆನಿಸಿದರೂ ಥೀಮ್‌ ಹಾಗೂ ಸ್ಟೈಲಿಂಗ್‌ ಪ್ರತಿ ವರ್ಷ ಬದಲಾಗುತ್ತದೆ. ಫ್ರೆಂಡ್ಸ್ ಗ್ರೂಪ್‌ನಲ್ಲಿ ಒಮ್ಮೆ ಕಾಣಿಸಿಕೊಂಡ ಫ್ಯಾಷನ್‌ ಮುಂಬರುವ ವರ್ಷ ಕಾಣಿಸುವುದಿಲ್ಲ! ಎನ್ನುತ್ತಾರೆ ಫ್ಯಾಷನಿಸ್ಟಾಗಳು. ಹಾಗಾದಲ್ಲಿ ಈ ಬಾರಿಯ ಫ್ರೆಂಡ್‌ಶಿಪ್‌ ಡೇ ಫ್ಯಾಷನ್‌ ಏನು? ಹೇಗೆಲ್ಲಾ ಕಾಣಿಸಿಕೊಳ್ಳಬಹುದು? ಮಾನ್ಸೂನ್‌ ಫ್ರೆಂಡ್‌ಶಿಪ್‌ ಡೇ ಲುಕ್‌ ಹೇಗೆ? ಎಂಬುದರ ಬಗ್ಗೆ ಸ್ಟೈಲಿಸ್ಟ್‌ಗಳು ಒಂದಿಷ್ಟು ಸಲಹೆ ನೀಡಿದ್ದಾರೆ.

Friendshipday Fashion

ಫ್ರೆಂಡ್‌ಶಿಪ್‌ ಡೇಗೂ ಬಂತು ಫ್ಯಾಷನ್‌ ಥೀಮ್‌

ಫ್ರೆಂಡ್‌ಶಿಪ್‌ ಡೇ ಆಚರಿಸುವ ಸ್ನೇಹಿತರು ಹಾಗೂ ಅವರ ಗ್ರೂಪ್‌ಗಳು, ತಮ್ಮದೇ ಆದ ಥೀಮ್‌ ಫ್ಯಾಷನ್‌ ಫಾಲೋ ಮಾಡಲಾರಂಭಿಸಿದ್ದಾರೆ. ಇದಕ್ಕೆ ಪೂರಕ ಎಂಬಂತೆ, ಮಾಲ್‌-ಶಾಪ್‌ಗಳಲ್ಲಿ ಬಲ್ಕ್‌ ಆರ್ಡರ್ನಲ್ಲಿ ಫ್ಯಾಷನ್‌ವೇರ್‌ಗಳೂ ದೊರೆಯುತ್ತಿವೆ. ಕಾರ್ಪೋರೇಟ್‌ ಕಚೇರಿಯ ಉದ್ಯೋಗಿಗಳಾಗಿರಬಹುದು ಅಥವಾ ಕಾಲೇಜು ಹುಡುಗ-ಹುಡುಗಿಯರಾಗಿರಬಹುದು. ಅವರವರ ಗ್ರೂಪ್‌ನ ಅಭಿರುಚಿಗೆ ತಕ್ಕಂತೆ ಫ್ಯಾಷನ್‌ ಥೀಮ್‌ಗಳನ್ನು ರೂಪಿಸಿಕೊಂಡು ಫ್ಯಾಷನ್‌ವೇರ್‌ಗಳನ್ನು ಧರಿಸುವುದು ಟ್ರೆಂಡಿಯಾಗಿದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು. ಇನ್ನು, ಥೀಮ್‌ ಎಂದಾಕ್ಷಣಾ ಗುಂಪಿನ ಎಲ್ಲರ ಔಟ್‌ಫಿಟ್‌ಗಳು ಒಂದೇ ಆಗಿರಬೇಕೆಂದಿಲ್ಲ! ಒಟ್ಟಿನಲ್ಲಿ ಅವರೆಲ್ಲರೂ ಧರಿಸುವ ಯಾವುದೇ ಉಡುಪು ಅಥವಾ ಆಕ್ಸೆಸರೀಸ್‌ ಇಲ್ಲವೇ ಸ್ಟೈಲಿಂಗ್‌ ಒಂದೇ ಬಗೆಯದ್ದಾಗಿರಬಹುದು. ಅದು ಔಟಿಂಗ್‌ನದ್ದಾಗಿರಬಹುದು, ಪಾರ್ಟಿವೇರ್‌ನದ್ದಾಗಿರಬಹುದು ಅಥವಾ ಕೆಫೆ ಅಥವಾ ರೆಸ್ಟೋರೆಂಟ್‌ನಲ್ಲಿ ಕಾಲ ಕಳೆಯುವಂತದ್ದಾಗಿರಬಹುದು. ಆಯಾ ಗ್ರೂಪ್‌ನ ಐಡೆಂಟಿಟಿಗೆ ತಕ್ಕಂತೆ ಥೀಮ್‌ ಫ್ಯಾಷನ್‌ ಬದಲಿಸಿಕೊಳ್ಳಬಹುದು ಎನ್ನುತ್ತಾರೆ ಡಿಸೈನರ್‌ ರಿಯಾಜ್‌ ಹಾಗೂ ರಕ್ಷ್.

Friendshipday Fashion

ಗ್ರೂಪ್‌ನ ಚಟುವಟಿಕೆಗಳಿಗೆ ತಕ್ಕಂತೆ ಸ್ಟೈಲಿಂಗ್‌

ಸ್ನೇಹಿತರ ಗ್ರೂಪ್‌ಗಳು ಕೇವಲ ಜೆನ್‌ ಜಿ, ಮಿಲೆನಿಯಲ್‌ ಜನರಿಂದ ಕೂಡಿರಬೇಕೆಂದಿಲ್ಲ, ಗ್ರೂಪ್‌ಗಳು ವಯಸ್ಸಾಗಿರುವ ಹಿರಿಯರದ್ದು ಆಗಿರಬಹುದು ಅಥವಾ ಸಮಾನ ಮನಸ್ಕರ ವಿಭಿನ್ನ ಗ್ರೂಪ್‌ಗಳಾಗಬಹುದು. ಆಯಾ ಗ್ರೂಪ್‌ನ ಚಟುವಟಿಕೆಗಳಿಗೆ ತಕ್ಕಂತೆ ಡ್ರೆಸ್ಸಿಂಗ್‌ ಹಾಗೂ ಸ್ಟೈಲಿಂಗ್‌ ಬದಲಾಗುತ್ತದೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು.

ಫ್ರೆಂಡ್‌ಶಿಪ್‌ ಡೇ ಸ್ಟೈಲಿಂಗ್‌ಗೆ ಸಿಂಪಲ್‌ ಟಿಪ್ಸ್

  • ಫ್ರೆಂಡ್ಸ್ ಗ್ರೂಪ್‌ಗೆ ತಕ್ಕಂತೆ ಸ್ಟೈಲಿಂಗ್‌ ಮಾಡಿ.
  • ಎಥ್ನಿಕ್‌, ವೆಸ್ಟರ್ನ್‌, ಸೆಮಿ ಎಥ್ನಿಕ್‌, ಬಿಂದಾಸ್‌ ಯಾವುದಾದರೂ ಸರಿಯೇ ಕಂಫರ್ಟಬಲ್‌ ಸ್ಟೈಲಿಂಗ್‌ ಚೂಸ್‌ ಮಾಡಿ.
  • ಔಟಿಂಗ್‌ ಆದಲ್ಲಿ ಮಾನ್ಸೂನ್‌ ಸೀಸನ್‌ಗೆ ತಕ್ಕಂತೆ ಸ್ಟೈಲಿಂಗ್‌ ಮಾಡಿ.
  • ಆದಷ್ಟೂ ಯಂಗ್‌ ಲುಕ್‌ ನೀಡುವ ಸ್ಟೈಲಿಂಗ್‌ ಅಳವಡಿಸಿಕೊಳ್ಳಿ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Paris Olympics
ಕ್ರೀಡೆ3 mins ago

Paris Olympics: “ಇಂಡಿಯಾ ಹೌಸ್‌”ನಲ್ಲಿ ನೀರಜ್​ ಚೋಪ್ರಾ ಸೇರಿ ಪದಕ ವಿಜೇತರನ್ನು ಗೌರವಿಸಿದ ನೀತಾ ಅಂಬಾನಿ

Vinay Rajkumar KRG will distribute 'Pepe' movie
ಸ್ಯಾಂಡಲ್ ವುಡ್14 mins ago

Vinay Rajkumar: ವಿನಯ್ ರಾಜ್ ಕುಮಾರ್ ‘ಪೆಪೆ’ ಸಿನಿಮಾ ವಿತರಣೆ ಮಾಡಲಿದೆ ಕೆ ಆರ್ ಜಿ!

Munich Massacre
ವಿದೇಶ18 mins ago

Munich Massacre: 11 ಇಸ್ರೇಲಿ ಅಥ್ಲೀಟ್‌ಗಳ ಹತ್ಯೆಯ ಪ್ರತಿಕಾರ ರೋಚಕ! ʼಮೊಸಾದ್‌ʼ ಏಜೆಂಟರ ಆಪರೇಷನ್‌ ಹೀಗಿತ್ತು

Varamahalakshmi Festival 2024
ಧಾರ್ಮಿಕ23 mins ago

Varamahalakshmi Festival 2024: ವರಮಹಾಲಕ್ಷ್ಮಿ ಪೂಜೆಗೆ ಮನೆಯನ್ನು ಸುಂದರವಾಗಿ ಅಲಂಕರಿಸಲು ಇಲ್ಲಿದೆ ಟಿಪ್ಸ್‌

Tungabhadra Dam
ಕರ್ನಾಟಕ43 mins ago

Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

Independence day Fashion 2024
ಫ್ಯಾಷನ್53 mins ago

Independence day Fashion 2024: ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್‌ಗೆ ಕಾಲಿಟ್ಟ ಸಿಂಪಲ್‌ ಎಥ್ನಿಕ್‌ ವೇರ್‌ಗಳಿವು

MNS v/s Shiv Sena
ದೇಶ55 mins ago

MNS v/s Shiv Sena: MNS ಕಾರ್ಯಕರ್ತರ ಪುಂಡಾಟ; ಉದ್ಧವ್‌ ಠಾಕ್ರೆ ಬೆಂಗಾವಲು ವಾಹನದ ಮೇಲೆ ದಾಳಿ

Almonds
ಆರೋಗ್ಯ2 hours ago

Almonds Benefits: ಈ 9 ಕಾರಣಗಳಿಗಾಗಿ ನೆನೆಸಿದ ಬಾದಾಮಿಯನ್ನು ಖಾಲಿ ಹೊಟ್ಟೆಯಲ್ಲಿ ನಿತ್ಯ ಸೇವಿಸಬೇಕು!

Vastu Tips
ಧಾರ್ಮಿಕ3 hours ago

Vastu Tips: ವಿದ್ಯುತ್ ಕಂಬದಿಂದ ಮನೆಗೆ ನಕಾರಾತ್ಮಕ ಶಕ್ತಿ ತಟ್ಟಬಹುದು ಎನ್ನುತ್ತಾರೆ ವಾಸ್ತು ಪರಿಣತರು!

Dog meat
ಕರ್ನಾಟಕ3 hours ago

Dog Meat: ಅಬ್ದುಲ್‌ ರಜಾಕ್‌ ಬಾಕ್ಸ್‌ನಲ್ಲಿದ್ದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ; ಹೈದರಾಬಾದ್‌ ಲ್ಯಾಬ್‌ ವರದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ7 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌