Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು - Vistara News

ಮಳೆ

Karnataka Weather : ಬಿರುಗಾಳಿ ಮಳೆಗೆ ಜನರು ತತ್ತರ; ಸಿಡಿಲಿಗೆ ಎತ್ತುಗಳು ಬಲಿ, ನೆಲಕಚ್ಚಿದ ಬೆಳೆಗಳು

Karnataka Weather Forecast : ಬಿರುಗಾಳಿ ಸಹಿತ ಸುರಿದ ಮಳೆಗೆ (Rain News) ಬೀದರ್‌, ವಿಜಯನಗರ, ದಾವಣಗೆರೆ ರೈತರು ತತ್ತರಿಸಿ ಹೋಗಿದ್ದಾರೆ. ಸಾಲಸೋಲ ಮಾಡಿ ಖರೀದಿಸಿದ್ದ ಎತ್ತುಗಳು ಸಿಡಿಲಿಗೆ ಬಲಿಯಾದರೆ, ನೀರಿಲ್ಲದಿದ್ದರೂ ಟ್ಯಾಂಕರ್‌ ಮೂಲಕ ಕಷ್ಟ ಪಟ್ಟು ಬೆಳೆದಿದ್ದ ಬೆಳೆಯು ನೆಲಕಚ್ಚಿದೆ. ಸದ್ಯ ಬುಧವಾರದಂದು ಎಲ್ಲೆಲ್ಲಿ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Karnataka Weather Forecast
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರಕ್ಕೆ ಜನ-ಜೀವನ ಅಸ್ತವ್ಯಸ್ತವಾಗಿದೆ. ಮುಂದಿನ 24 ಗಂಟೆಯಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಧ್ಯ‌ ಮಹಾರಾಷ್ಟ್ರದಿಂದ ಕರ್ನಾಟಕ ಸೇರಿ ಕೇರಳದವರೆಗೆ ಸುಳಿಗಾಳಿಯ ಚಲನೆಯಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಇನ್ನೆರಡು ದಿನಗಳು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ.

ಪ್ರಮುಖವಾಗಿ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಸೇರಿ ದಕ್ಷಿಣ ಒಳನಾಡಿನ ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಇನ್ನೂ 30-40 ಕಿಮೀ ವೇಗದಲ್ಲಿ ಬಿರುಸಿನ ಗಾಳಿ ಬೀಸಲಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ:Murder Case : ಕೊಲೆಯಾದ ಮಹಿಳೆಗೆ 20 ಹುಡುಗರ ಸಹವಾಸ! ಅವರಿಗೆ ಆಕೆ ಇಟ್ಟಿದ್ದ ಹೆಸರು ಆರೆಂಜ್, ಆ್ಯಪಲ್, ಬನಾನಾ ಇತ್ಯಾದಿ!

ಸಿಡಿಲಿಗೆ ಎತ್ತುಗಳು ಬಲಿ

ಬೀದರ್‌ನ ಔರಾದ್ ತಾಲೂಕಿನ ಕೊಳ್ಳೂರ ಗ್ರಾಮದಲ್ಲಿ ಸಿಡಿಲು ಬಡಿದು 2 ಎತ್ತುಗಳು ಮೃತಪಟ್ಟಿರುವ ಘಟನೆ ನಡೆದಿದೆ. ಸೋಮವಾರ ತಡರಾತ್ರಿಯಲ್ಲಿ ಭಾರಿ ಮಳೆಯೊಂದಿಗೆ ಸಿಡಿಲು ಬಡಿದಿದೆ. ಪರಿಣಾಮ ಸಾಗರ ಬಸವರಾಜ ಪಾಟೀಲ ಎಂಬುವವರಿಗೆ ಸೇರಿದ ಎತ್ತುಗಳು ಮೃತಪಟ್ಟಿವೆ.

ವಿಜಯನಗರದಲ್ಲಿ ಗಾಳಿ-ಮಳೆಗೆ ಹಾರಿದ ಶಾಮಿಯಾನ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡಾದ ಗ್ರಾಮದ ಬಳಿಯ ಆಂಜನೇಯ ದೇಗುಲದಲ್ಲಿ ಹನುಮ ಜಯಂತಿ ನಿಮಿತ್ತ ಶಾಮಿಯಾನ, ಲೈಟಿಂಗ್ ಹಾಕಲಾಗಿತ್ತು. ಆದರೆ ಜೋರಾಗಿ ಬೀಸಿದ ಗಾಳಿ, ಮಳೆಗೆ ಶಾಮಿಯಾನ, ಲೈಟಿಂಗ್ಸ್‌ ಹಾರಿ ಹೋಗಿತ್ತು. ಇದರಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿತ್ತು.

ತಡರಾತ್ರಿ ಬಿರುಗಾಳಿ ಸಹಿತ ಮಳೆಗೆ ಹತ್ತಾರು ಎಕರೆ ಪಪ್ಪಾಯಿ ಬೆಳೆ ನೆಲಕ್ಕೆ ಉರುಳಿದೆ. ಹಗರಿಬೊಮ್ಮನಹಳ್ಳಿ ತಾಲೂಕಿನ ವಟ್ಟಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ವಟ್ಟಮ್ಮನಹಳ್ಳಿ ಗ್ರಾಮದ ಮೂಗಪ್ಪ ಎಂಬುವರಿಗೆ ಸೇರಿದ 5 ಎಕರೆ ಪಪ್ಪಾಯಿ ಬೆಳೆ ಹಾಳಾಗಿದೆ. ಇದರಿಂದ ಅಂದಾಜು 5 ರಿಂದ 7 ಲಕ್ಷ ರೂಪಾಯಿ ಬೆಲೆ ಬಾಳುವ ಪಪ್ಪಾಯಿ ಬೆಳೆಗೆ ಹಾನಿಯಾಗಿದೆ. ಇದೇ ಗ್ರಾಮದ ಪತ್ರಿಗೌಡ ಹೊನ್ನೆಹಳ್ಳಿ ಎನ್ನುವವರ 3 ಎಕರೆ, ಕುಸುಮ ಅವರ 4 ಎಕರೆ ಪಪ್ಪಾಯಿ ಬೆಳೆ ನಷ್ಟವಾಗಿದೆ. ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ಪರಿಹಾರಕ್ಕೆ ರೈತರು ಆಗ್ರಹಿಸಿದ್ದಾರೆ.

ದಾವಣಗೆರೆಯಲ್ಲಿ ಬಾಳೆ ಬೆಳೆ ನಾಶ

ಸೋಮವಾರ ಸಂಜೆ ಸುರಿದ ಗಾಳಿ ಮಳೆಗೆ ಅಪಾರ ಪ್ರಮಾಣದ ಬಾಳೆ ಬೆಳೆ ನಾಶವಾಗಿವೆ. ದಾವಣಗೆರೆಯ ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ, ಜಮ್ಮಪುರ, ಹರಿಶಿನಗುಂಡಿ ಸೇರಿದಂತೆ ಹಲವು ಕಡೆ ಬೆಳೆ ನಾಶವಾಗಿದೆ. ಕಟ್ಟಿಗೆಹಳ್ಳಿ ಗ್ರಾಮದ ಸಿದ್ದಮ್ಮ, ಬಸವರಾಜಪ್ಪ ಎಂಬುವರಿಗೆ ಸೇರಿದ 20 ಎಕರೆ ಬಾಳೆ ತೋಟ ನೆಲಕಚ್ಚಿದೆ. ಬರಗಾಲದಲ್ಲಿ ಟ್ಯಾಂಕರ್ ನೀರು ಖರೀದಿ ಮಾಡಿ ಬಾಳೆ ಬೆಳೆಸಿದ್ದರು. ಆದರೆ ಗಾಳಿ ಮಳೆಗೆ ಬಾಳೆಯು ನೆಲಸಮವಾಗಿದೆ. ಕೂಡಲೇ ಹಾನಿಗೊಂಡ ಬೆಳೆಗೆ ಸರ್ಕಾರ ಪರಿಹಾರ ‌ನೀಡುವಂತೆ ಒತ್ತಾಯಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ನವ ವಿವಾಹಿತ ಸಾವು, ಕಾರ್ಮಿಕನ ಸ್ಥಿತಿ ಗಂಭೀರ

Rain News: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಸಿಡಿಲು ಬಡಿದು ನವವಿವಾಹಿತ ಮೃತಪಟ್ಟಿದ್ದು, ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಬೆಟ್ಟಗೇರಿಯಲ್ಲಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ.

VISTARANEWS.COM


on

Rain News
ಕಡಬ ತಾಲೂಕಿನ ಸುಬ್ರಹ್ಮಣ್ಯದ ಗ್ರಾಮದ ಪರ್ವತಮುಖಿಯಲ್ಲಿ ಸಿಡಿಲು ಬಡಿದು‌ ಮೃತಪಟ್ಟ ಸೋಮಸುಂದರ್.
Koo

ಮಂಗಳೂರು/ ಕೊಡಗು: ಪ್ರತ್ಯೇಕ ಮಳೆ (Rain News) ಅವಘಡಗಳಲ್ಲಿ ಸಿಡಿಲು ಬಡಿದು (lightning strike) ನವ ವಿವಾಹಿತ ಮೃತಪಟ್ಟು, ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನವವಿವಾಹಿತ ಮೃತಪಟ್ಟಿದ್ದರೆ, ಕೊಡಗು ಜಿಲ್ಲೆಯ ಮಡಿಕೇರಿ ಸಮೀಪದ ಬೆಟ್ಟಗೇರಿಯಲ್ಲಿ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಸುಬ್ರಹ್ಮಣ್ಯದಲ್ಲಿ ನವ ವಿವಾಹಿತ ಮೃತ್ಯು

ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸುಬ್ರಹ್ಮಣ್ಯದ ಗ್ರಾಮದ ಪರ್ವತಮುಖಿಯಲ್ಲಿ ಸಿಡಿಲು ಬಡಿದು ಸೋಮಸುಂದರ್ (34) ಸಾವು ಮೃತಪಟ್ಟಿದ್ದಾನೆ. ಈತ ಹತ್ತು ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ. ಸಂಜೆ ವೇಳೆ ಸುಬ್ರಮಣ್ಯ ಭಾಗದಲ್ಲಿ ಗುಡುಗು ಸಿಡಿಲು ಸಹಿತ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮನೆ ಅಂಗಳದಲ್ಲಿ ಅಡಿಕೆಯನ್ನು ಯುವಕ ರಾಶಿ ಮಾಡುತ್ತಿದ್ದ. ಈ ವೇಳೆ ಸೋಮ ಸುಂದರ್‌ಗೆ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾನೆ.

ಮಡಿಕೇರಿಯಲ್ಲಿ ಕಾರ್ಮಿಕನ ಸ್ಥಿತಿ ಗಂಭೀರ

ಕೊಡಗು: ಸಿಡಿಲು ಬಡಿದು ಅಸ್ಸಾಂ ಮೂಲದ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಮಡಿಕೇರಿ ಸಮೀಪದ ಬೆಟ್ಟಗೇರಿಯಲ್ಲಿ ನಡೆದಿದೆ. ಕಾರ್ಮಿಕ ಪ್ರಮಾತ್ ಗರ್ಮಾನಿ (37) ಗಾಯಾಳು. ಮನೆಯ ಹೊರಭಾಗದಲ್ಲಿ ನಿಂತಿದ್ದಾಗ ಕಾರ್ಮಿಕನಿಗೆ ಸಿಡಿಲು ಬಡಿದಿದೆ. ಕಾರ್ಮಿಕನಿಗೆ ಮಡಿಕೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಬ್ಬಬ್ಬಾ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Bengaluru Rains

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ (Karnataka Rains) ಬಿರುಗಾಳಿ ಸಹಿತ ಮಳೆ ಬಂದು ಹೋಯಿತು. ಆದರೆ ರಾಜಧಾನಿ ಬೆಂಗಳೂರಲ್ಲಿ ಒಂದು ಸಣ್ಣ ಹನಿಯು (Karnataka weather Forecast) ಬೀಳಲಿಲ್ಲ. ಬೆಂಗಳೂರು ಕರಗ ಸಮಯದಲ್ಲಿ ಸಣ್ಣ ಪ್ರಮಾಣದಲ್ಲಿ ಆದರೂ ಮಳೆ ಬಂದೇ ಬರುತ್ತೆ ಎಂಬ ನಂಬಿಕೆ ಇದೆ. ಆದರೆ ಆಗಲೂ ಮಳೆಯು ಕಾಣಲಿಲ್ಲ. ಇದೀಗ ಬಿಸಿಲ ಧಗೆಯಿಂದ ಸುಸ್ತಾಗಿದ್ದ ಮಂದಿಗೆ ಮಳೆಯು ತನ್ನ ಭರ್ಜರಿ ಪ್ರದರ್ಶನ (Bengaluru Rains) ತೋರಿದೆ.

ಲೇಟ್‌ ಆದರೂ ಲೇಟೆಸ್ಟ್‌ ಆಗಿ ಮಳೆರಾಯ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾನೆ. ಇದರಿಂದಾಗಿ ಸೋಶಿಯಲ್‌ ಮೀಡಿಯಾದಲ್ಲಿ ನೆಟ್ಟಿಗರು ಅಬ್ಬಬ್ಬಾ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್ ಎಂದು ಬೆಂಗಳೂರಿಗರಿಗೆ ವಿಷ್‌ ಮಾಡಿದ್ದಾರೆ. ಜತೆಗೆ ಟ್ವಿಟರ್‌, ಇನ್ಸ್ಟಾಗ್ರಾಂನಲ್ಲಿ Bengaluru rains ಹ್ಯಾಶ್‌ ಟ್ಯಾಗ್‌ ಹಾಕಿ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ. ಅಂತೂ-ಇಂತೂ ಬೆಂಗಳೂರಲ್ಲಿ ಮಳೆ ಬಂತಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ಶಿವಾಜಿನಗರ, ಮಲ್ಲೇಶ್ವರಂ, ವಿಧಾನಸೌಧ, ರಾಜಾಜಿನಗರ, ರೇಸ್ ಕೋರ್ಸ್, ಮೆಜೆಸ್ಟಿಕ್, ಮಹಾರಾಣಿ ಕಾಲೇಜು, ಸಿಐಡಿ ಆಫೀಸ್, ಪ್ಯಾಲೇಸ್ ರಸ್ತೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಮಧ್ಯಾಹ್ನ ಮೂರು ಗಂಟೆ ಸಮಯವು ರಾತ್ರಿಯಂತೆ ಕತ್ತಲೆ ಆವರಿಸಿತ್ತು. ದಿಢೀರ್ ಮಳೆಗೆ ದ್ವಿಚಕ್ರ ವಾಹನ ಸವಾರರು ಸೇತುವೆ ಕೆಳಗೆ ಹಾಗೂ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ

ಇನ್ನೂ ಬೆಂಗಳೂರಿನ ಆರ್‌.ಟಿ‌ ನಗರದಲ್ಲಿ ಮರವು ಉರುಳಿ ಬಿದ್ದಿತ್ತು. ಇನೋವಾ ಹಾಗೂ ಓಮಿನಿ ಕಾರು ಜಖಂಗೊಂಡಿತ್ತು. ರವೀಂದ್ರನಾಥ್ ಠಾಗೋರ್ ಸರ್ಕಲ್‌ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿತ್ತು. ಅದೃಷ್ಟವಶಾತ್‌ ಕಾರಿನಲ್ಲಿ ಇದ್ದವರಿಗೆ ಯಾವುದೇ ತೊಂದರೆ ಆಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಿಬಿಎಂಪಿ ಸಿಬ್ಬಂದಿ ದೌಡಾಯಿಸಿದ್ದು, ಮರ ತೆರವು ಮಾಡುತ್ತಿದ್ದಾರೆ. ಇತ್ತ ಕೊತ್ತನೂರು ಬಳಿ ಕಾರಿನ ಮೇಲೆ ವಿದ್ಯುತ್‌ ಕಂಬ ಬಿದ್ದು ಕಾರಿನ ಬ್ಯಾನೆಟ್ ಹಾಳಾಗಿತ್ತು. ವಿದ್ಯುತ್‌ ಕಂಬ ಕಳಚಿ ಬಿದ್ದ ಕಾರಣ ಕರೆಂಟ್‌ ಕಟ್ಟ್‌ ಆಗಿತ್ತು.

Bengaluru Rains

ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ

ಮಂಡ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗುತ್ತಿದೆ. ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ಮಂಡ್ಯ ಜನರು ಖುಷಿಯಾಗಿದ್ದಾರೆ. ಭಾರಿ ಶಬ್ಧದೊಂದಿಗೆ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದೆ. ಮೈಸೂರಿನಲ್ಲಿ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನರಿಗೆ ವರುಣ ಸಿಂಚನವಾಗಿದೆ. ತಿ.ನರಸೀಪುರ ತಾಲೂಕಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಜೋರು ಗಾಳಿ ನಡುವೆ ಆಲಿಕಲ್ಲು ಮಳೆಯಾಗಿದೆ.

ಟ್ರಾನ್ಸ್ ಫಾರ್ಮರ್ ಸ್ಫೋಟ

ಬೆಂಗಳೂರಿನ ಐಟಿಐ ಲೇಔಟ್‌ನಲ್ಲಿ ಮಳೆಗೆ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಗಾಳಿ ಮಳೆಗೆ ಮರಗಳ ಎಲೆ ತಾಗಿ ಟ್ರಾನ್ಸ್ ಫಾರ್ಮನರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬ್ಲಾಸ್ಟ್‌ ಆಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟ್ರಾನ್ಸ್‌ಫಾರ್ಮನರ್‌ ಸ್ಫೋಟದಿಂದಾಗಿ ವಿದ್ಯುತ್‌ ಕಡಿತವಾಗಿದೆ.

ಹೊಸಕೋಟೆಯಲ್ಲೂ ಬಿರುಗಾಳಿ ಮಳೆ

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗಿದೆ. ವರ್ಷದ ಮೊದಲ ಮಳೆ ಕಂಡು ಜನರು ಸಂತಸಗೊಂಡಿದ್ದಾರೆ. ಇನ್ನೂ ಗಾಳಿ ಸಹಿತ ಮಳೆಯಿಂದಾಗಿ ದೇವಸ್ಥಾನ ಜೀರ್ಣೋದ್ಧಾರದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಎಲ್ಲಾ ಚೆಲ್ಲಾಪಿಲ್ಲಿಯಾಗಿದ್ದವು. ಊಟ ಮಾಡುತ್ತಿದ್ದವರೆಲ್ಲೂ ಎಲೆ ಬಿಟ್ಟು, ಓಡಿ ಹೋದರು. ಟೇಬಲ್ ಮೇಲಿನ ಊಟವೆಲ್ಲ ನೀರುಪಾಲಾಗಿತ್ತು‌. ಹೊಸಕೋಟೆ ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಾಮರಾಜನಗರದಲ್ಲೂ ಮಳೆಯ ಸಿಂಚನ

ಚಾಮರಾಜನಗರದಲ್ಲೂ ವರುಣ ಭೂ ಸ್ಪರ್ಶಿಸಿದ್ದಾನೆ. ಚಾಮರಾಜನಗರ ತಾಲೂಕಿನ ಅಂಕಶೆಟ್ಟಿಪುರ, ಚೆನ್ನಪ್ಪಪುರ, ಅರಕಲವಾಡಿ ವೆಂಕಟಯ್ಯನ ಛತ್ರ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಬೇಸಿಗೆಯಿಂದ ಬೇಸತ್ತಿದ್ದ ರೈತರ ಮುಖದಲ್ಲಿ ಕೊಂಚ ಮಂದಹಾಸ ಮೂಡಿದೆ. ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿ, ಉಡಿಗಾಲ, ಕೆಂಗಾಕಿ, ಕುಮಚಹಳ್ಳಿ ಗ್ರಾಮದಲ್ಲಿ ಗಾಳಿಯ ಅಬ್ಬರದೊಂದಿಗೆ ಮಳೆಯಾಗಿದೆ.

ರಾಮನಗರದಲ್ಲೂ ತಂಪೆರೆದ ಮಳೆ

ಬರಗಾಲದಿಂದ ಬೇಸತ್ತಿದ್ದ ರೇಷ್ಮೆನಾಡು ರಾಮನಗರ ಜಿಲ್ಲೆಯಲ್ಲೂ ಹಲವೆಡೆ ವರುಣ ದರ್ಶನ ಕೊಟ್ಟಿದ್ದಾನೆ. ಗುಡುಗು ಸಹಿತ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಪೂರ್ವಜರ ನಂಬಿಕೆಯಂತೆ ಭರಣಿ ಮಳೆ ಆಗಮಿಸಿದೆ. ಭರಣಿ ಮಳೆ ಬಂದರೆ ರೈತರ ಕೃಷಿ ಚುಟುವಟಿಕೆ ಆರಂಭಿಸಲು ಯಶಸ್ವಿ ಎಂಬ ನಂಬಿಕೆ ಇದೆ. ಸದ್ಯ ಭರಣಿ ಮಳೆಯ ಸಿಂಚನದಿಂದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ.

ಆಲಿಕಲ್ಲು ಸಹಿತ ಮಳೆಯಾರ್ಭಟ

ಇನ್ನೂ ರಾಜ್ಯ ಗಡಿ ಡೆಂಕಣಿಕೋಟೆ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ತಮಿಳುನಾಡಿನ ಡೆಂಕಣಿಕೋಟೆ, ಹೊಸೂರು, ಸೂಲಗಿರಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ ಸೇರಿದಂತೆ ಜೋರು ಮಳೆಯಾಗುತ್ತಿದೆ.

Bengaluru rains

ಬ್ಯಾರಿಕೇಡ್ ಹಾಕಿ ಅಂಡರ್‌ಪಾಸ್‌ ಕ್ಲೋಸ್‌

ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಯಿಂದಾಗಿ ಬೆಂಗಳೂರಿನ ರಸ್ತೆಗಳು ನದಿಯಂತಾಗಿತ್ತು. ವಿಧಾನಸೌಧ ಪಕ್ಕದಲ್ಲಿರುವ ಎಂ.ಎಸ್ ಬಿಲ್ಡಿಂಗ್ ಸುತ್ತಮುತ್ತಲಿನ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಎಂಎಸ್‌ ಬಿಲ್ಡಿಂಗ್‌ ಸಮೀಪವೇ ಇರುವ ಅಂಡರ್ ಪಾಸ್‌ಗಳಿಗೆ ಬ್ಯಾರಿಕೇಟ್ ಹಾಕಿ ಕ್ಲೋಸ್ ಮಾಡಲಾಗಿದೆ.

ಧರೆಗೆ ಬಿದ್ದ ಮರಗಳು

ಮಳೆಯಿಂದ ಬೆಂಗಳೂರು ನಗರದಲ್ಲಿ ಮೂರು ಕಡೆ ಬೃಹತ್ ಗಾತ್ರದ ಮರ ಧರೆಗೆ ಬಿದ್ದಿದೆ. ಕೆ.ಆರ್.ಪುರಂನ ಕಸ್ತೂರಿ ನಗರ, ಆರ್‌ಟಿ ನಗರದಲ್ಲಿ ಮಳೆಗೆ ಮರ ಬಿದ್ದಿದೆ. ಇನ್ನೂ ನಾರಾಯಣಪುರದಲ್ಲಿ ಮರ ಬಿದ್ದು, ಕಾರು, ಬೈಕ್ ಜಖಂಗೊಂಡಿದೆ. ಸದ್ಯ ರಸ್ತೆಗೆ ಬಿದ್ದಿದ ಮರವನ್ನು ಬಿಬಿಎಂಪಿ ಸಿಬ್ಬಂದಿ ತೆರವು ಮಾಡಿದ್ದಾರೆ. ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದ ಎಟಿಎಂ ಕೊಠಡಿಗೆ ಮಳೆ ನೀರು ನುಗ್ಗಿತ್ತು.

Continue Reading

ಮಳೆ

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Bengaluru Rains: ಬೆಂಗಳೂರು ಸುತ್ತಮುತ್ತ ಗಾಳಿ ಜತೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ದೇವಸ್ಥಾನ ಜೀರ್ಣೋದ್ಧಾರದಲ್ಲಿ ಊಟ ಮಾಡುತ್ತಿದ್ದಾಗ ದಿಢೀರ್‌ ಮಳೆಯಿಂದ ಜನರು ಊಟ ಬಿಟ್ಟು ಓಡಿ ಹೋದರು. ಟೇಬಲ್ ಮೇಲಿನ ಊಟವೆಲ್ಲ ನೀರುಪಾಲಾಗಿತ್ತು‌. ಕೆಲವೆಡೆ ಮಳೆ ಅನಾಹುತಗಳು ಸಂಭವಿಸಿವೆ.

VISTARANEWS.COM


on

By

Bengaluru Rains
Koo

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ (Karnataka Rains) ಬಿರುಗಾಳಿ ಸಹಿತ ಮಳೆ ಬಂದು ಹೋಯಿತು. ಆದರೆ ರಾಜಧಾನಿ ಬೆಂಗಳೂರಲ್ಲಿ ಒಂದು ಸಣ್ಣ ಹನಿಯು (Karnataka weather Forecast) ಬೀಳಲಿಲ್ಲ. ಬೆಂಗಳೂರು ಕರಗ ಸಮಯದಲ್ಲಿ ಸಣ್ಣ ಪ್ರಮಾಣದಲ್ಲಿ ಆದರೂ ಮಳೆ ಬಂದೇ ಬರುತ್ತೆ ಎಂಬ ನಂಬಿಕೆ ಇದೆ. ಆದರೆ ಆಗಲೂ ಮಳೆಯು ಕಾಣಲಿಲ್ಲ. ಇದೀಗ ಬಿಸಿಲ ಧಗೆಯಿಂದ ಸುಸ್ತಾಗಿದ್ದ ಮಂದಿಗೆ ಮಳೆಯು ತನ್ನ ಭರ್ಜರಿ ಪ್ರದರ್ಶನ (Bengaluru Rains) ತೋರಿದೆ.

ಲೇಟ್‌ ಆದರೂ ಲೇಟೆಸ್ಟ್‌ ಆಗಿ ಮಳೆರಾಯ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾನೆ. ಇದರಿಂದಾಗಿ ಸೋಶಿಯಲ್‌ ಮೀಡಿಯಾದಲ್ಲಿ ನೆಟ್ಟಿಗರು ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್ ಎಂದು ಬೆಂಗಳೂರಿಗರಿಗೆ ವಿಷ್‌ ಮಾಡಿದ್ದಾರೆ. ಜತೆಗೆ ಟ್ವಿಟರ್‌, ಇನ್ಸ್ಟಾಗ್ರಾಂನಲ್ಲಿ Bengaluru rains ಹ್ಯಾಶ್‌ ಟ್ಯಾಗ್‌ ಹಾಕಿ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ. ಅಂತೂ-ಇಂತೂ ಬೆಂಗಳೂರಲ್ಲಿ ಮಳೆ ಬಂತಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ಶಿವಾಜಿನಗರ, ಮಲ್ಲೇಶ್ವರಂ, ವಿಧಾನಸೌಧ, ರಾಜಾಜಿನಗರ, ರೇಸ್ ಕೋರ್ಸ್, ಮೆಜೆಸ್ಟಿಕ್, ಮಹಾರಾಣಿ ಕಾಲೇಜು, ಸಿಐಡಿ ಆಫೀಸ್, ಪ್ಯಾಲೇಸ್ ರಸ್ತೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಮಧ್ಯಾಹ್ನ ಮೂರು ಗಂಟೆ ಸಮಯವು ರಾತ್ರಿಯಂತೆ ಕತ್ತಲೆ ಆವರಿಸಿತ್ತು. ದಿಢೀರ್ ಮಳೆಗೆ ದ್ವಿಚಕ್ರ ವಾಹನ ಸವಾರರು ಸೇತುವೆ ಕೆಳಗೆ ಹಾಗೂ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

Bengaluru Rains

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ

ಇನ್ನೂ ಬೆಂಗಳೂರಿನ ಆರ್‌.ಟಿ‌ ನಗರದಲ್ಲಿ ಮರವು ಉರುಳಿ ಬಿದ್ದಿತ್ತು. ಇನೋವಾ ಹಾಗೂ ಓಮಿನಿ ಕಾರು ಜಖಂಗೊಂಡಿತ್ತು. ರವೀಂದ್ರನಾಥ್ ಠಾಗೋರ್ ಸರ್ಕಲ್‌ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿತ್ತು. ಅದೃಷ್ಟವಶಾತ್‌ ಕಾರಿನಲ್ಲಿ ಇದ್ದವರಿಗೆ ಯಾವುದೇ ತೊಂದರೆ ಆಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಿಬಿಎಂಪಿ ಸಿಬ್ಬಂದಿ ದೌಡಾಯಿಸಿದ್ದು, ಮರ ತೆರವು ಮಾಡುತ್ತಿದ್ದಾರೆ. ಇತ್ತ ಕೊತ್ತನೂರು ಬಳಿ ಕಾರಿನ ಮೇಲೆ ವಿದ್ಯುತ್‌ ಕಂಬ ಬಿದ್ದು ಕಾರಿನ ಬ್ಯಾನೆಟ್ ಹಾಳಾಗಿತ್ತು. ವಿದ್ಯುತ್‌ ಕಂಬ ಕಳಚಿ ಬಿದ್ದ ಕಾರಣ ಕರೆಂಟ್‌ ಕಟ್ಟ್‌ ಆಗಿತ್ತು.

Bengaluru Rains

ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ

ಮಂಡ್ಯದಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗುತ್ತಿದೆ. ಹಲವು ದಿನಗಳಿಂದ ಮಳೆ ಇಲ್ಲದೆ ಕಂಗಾಲಾಗಿದ್ದ ಮಂಡ್ಯ ಜನರು ಖುಷಿಯಾಗಿದ್ದಾರೆ. ಭಾರಿ ಶಬ್ಧದೊಂದಿಗೆ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದೆ. ಮೈಸೂರಿನಲ್ಲಿ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನರಿಗೆ ವರುಣ ಸಿಂಚನವಾಗಿದೆ. ತಿ.ನರಸೀಪುರ ತಾಲೂಕಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಜೋರು ಗಾಳಿ ನಡುವೆ ಆಲಿಕಲ್ಲು ಮಳೆಯಾಗಿದೆ.

ಟ್ರಾನ್ಸ್ ಫಾರ್ಮರ್ ಸ್ಫೋಟ

ಬೆಂಗಳೂರಿನ ಐಟಿಐ ಲೇಔಟ್‌ನಲ್ಲಿ ಮಳೆಗೆ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಗಾಳಿ ಮಳೆಗೆ ಮರಗಳ ಎಲೆ ತಾಗಿ ಟ್ರಾನ್ಸ್ ಫಾರ್ಮನರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬ್ಲಾಸ್ಟ್‌ ಆಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟ್ರಾನ್ಸ್‌ಫಾರ್ಮನರ್‌ ಸ್ಫೋಟದಿಂದಾಗಿ ವಿದ್ಯುತ್‌ ಕಡಿತವಾಗಿದೆ.

ಹೊಸಕೋಟೆಯಲ್ಲೂ ಬಿರುಗಾಳಿ ಮಳೆ

ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗಿದೆ. ವರ್ಷದ ಮೊದಲ ಮಳೆ ಕಂಡು ಜನರು ಸಂತಸಗೊಂಡಿದ್ದಾರೆ. ಇನ್ನೂ ಗಾಳಿ ಸಹಿತ ಮಳೆಯಿಂದಾಗಿ ದೇವಸ್ಥಾನ ಜೀರ್ಣೋದ್ಧಾರದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಎಲ್ಲಾ ಚೆಲ್ಲಾಪಿಲ್ಲಿಯಾಗಿದ್ದವು. ಊಟ ಮಾಡುತ್ತಿದ್ದವರೆಲ್ಲೂ ಎಲೆ ಬಿಟ್ಟು, ಓಡಿ ಹೋದರು. ಟೇಬಲ್ ಮೇಲಿನ ಊಟವೆಲ್ಲ ನೀರುಪಾಲಾಗಿತ್ತು‌. ಹೊಸಕೋಟೆ ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಾಮರಾಜನಗರದಲ್ಲೂ ಮಳೆಯ ಸಿಂಚನ

ಚಾಮರಾಜನಗರದಲ್ಲೂ ವರುಣ ಭೂ ಸ್ಪರ್ಶಿಸಿದ್ದಾನೆ. ಚಾಮರಾಜನಗರ ತಾಲೂಕಿನ ಅಂಕಶೆಟ್ಟಿಪುರ, ಚೆನ್ನಪ್ಪಪುರ, ಅರಕಲವಾಡಿ ವೆಂಕಟಯ್ಯನ ಛತ್ರ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಬೇಸಿಗೆಯಿಂದ ಬೇಸತ್ತಿದ್ದ ರೈತರ ಮುಖದಲ್ಲಿ ಕೊಂಚ ಮಂದಹಾಸ ಮೂಡಿದೆ. ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿ, ಉಡಿಗಾಲ, ಕೆಂಗಾಕಿ, ಕುಮಚಹಳ್ಳಿ ಗ್ರಾಮದಲ್ಲಿ ಗಾಳಿಯ ಅಬ್ಬರದೊಂದಿಗೆ ಮಳೆಯಾಗಿದೆ.

ರಾಮನಗರದಲ್ಲೂ ತಂಪೆರೆದ ಮಳೆ

ಬರಗಾಲದಿಂದ ಬೇಸತ್ತಿದ್ದ ರೇಷ್ಮೆನಾಡು ರಾಮನಗರ ಜಿಲ್ಲೆಯಲ್ಲೂ ಹಲವೆಡೆ ವರುಣ ದರ್ಶನ ಕೊಟ್ಟಿದ್ದಾನೆ. ಗುಡುಗು ಸಹಿತ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಪೂರ್ವಜರ ನಂಬಿಕೆಯಂತೆ ಭರಣಿ ಮಳೆ ಆಗಮಿಸಿದೆ. ಭರಣಿ ಮಳೆ ಬಂದರೆ ರೈತರ ಕೃಷಿ ಚುಟುವಟಿಕೆ ಆರಂಭಿಸಲು ಯಶಸ್ವಿ ಎಂಬ ನಂಬಿಕೆ ಇದೆ. ಸದ್ಯ ಭರಣಿ ಮಳೆಯ ಸಿಂಚನದಿಂದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ.

ಆಲಿಕಲ್ಲು ಸಹಿತ ಮಳೆಯಾರ್ಭಟ

ಇನ್ನೂ ರಾಜ್ಯ ಗಡಿ ಡೆಂಕಣಿಕೋಟೆ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ತಮಿಳುನಾಡಿನ ಡೆಂಕಣಿಕೋಟೆ, ಹೊಸೂರು, ಸೂಲಗಿರಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ ಸೇರಿದಂತೆ ಜೋರು ಮಳೆಯಾಗುತ್ತಿದೆ.

Bengaluru rains

ಬ್ಯಾರಿಕೇಟ್‌ ಹಾಕಿ ಅಂಡರ್‌ಪಾಸ್‌ ಕ್ಲೋಸ್‌

ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಯಿಂದಾಗಿ ಬೆಂಗಳೂರಿನ ರಸ್ತೆಗಳು ನದಿಯಂತಾಗಿತ್ತು. ವಿಧಾನಸೌಧ ಪಕ್ಕದಲ್ಲಿರುವ ಎಂ.ಎಸ್ ಬಿಲ್ಡಿಂಗ್ ಸುತ್ತಮುತ್ತಲಿನ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಎಂಎಸ್‌ ಬಿಲ್ಡಿಂಗ್‌ ಸಮೀಪವೇ ಇರುವ ಅಂಡರ್ ಪಾಸ್‌ಗಳಿಗೆ ಬ್ಯಾರಿಕೇಟ್ ಹಾಕಿ ಕ್ಲೋಸ್ ಮಾಡಲಾಗಿದೆ.

ಧರೆಗೆ ಬಿದ್ದ ಮರಗಳು

ಮಳೆಯಿಂದ ಬೆಂಗಳೂರು ನಗರದಲ್ಲಿ ಮೂರು ಕಡೆ ಬೃಹತ್ ಗಾತ್ರದ ಮರ ಧರೆಗೆ ಬಿದ್ದಿದೆ. ಕೆ.ಆರ್.ಪುರಂನ ಕಸ್ತೂರಿ ನಗರ, ಆರ್‌ಟಿ ನಗರದಲ್ಲಿ ಮಳೆಗೆ ಮರ ಬಿದ್ದಿದೆ. ಇನ್ನೂ ನಾರಾಯಣಪುರದಲ್ಲಿ ಮರ ಬಿದ್ದು, ಕಾರು, ಬೈಕ್ ಜಖಂಗೊಂಡಿದೆ. ಸದ್ಯ ರಸ್ತೆಗೆ ಬಿದ್ದಿದ ಮರವನ್ನು ಬಿಬಿಎಂಪಿ ಸಿಬ್ಬಂದಿ ತೆರವು ಮಾಡಿದ್ದಾರೆ. ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದ ಎಟಿಎಂ (ATM) ಕೊಠಡಿಗೆ ಮಳೆ ನೀರು ನುಗ್ಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Bengaluru Rains : ಬೆಂಗಳೂರಲ್ಲಿ ಶುರುವಾಯ್ತು ಮಳೆಗಾಲ; ಕವಿದ ಕಾರ್ಮೋಡ, ಭಯಂಕರ ವರ್ಷಧಾರೆ

Bengaluru Rains : ಮಳೆಯಿಲ್ಲದೆ ಸೊರಗಿದ್ದ ಬೆಂಗಳೂರಿಗರಿಗೆ ವರುಣ ಅಂತೂ ಪ್ರವೇಶಿಸಿದ್ದಾನೆ. ನಿನ್ನೆ ಸಂಜೆ ಗುರುವಾರದಿಂದ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಮಳೆಯಾಗಿದ್ದು, ಶುಕ್ರವಾರ ಮಧ್ಯಾಹ್ನವೇ ಕಾರ್ಮೋಡ (Karnataka weather Forecast) ಕವಿದಿತ್ತು. ನೋಡನೋಡುತ್ತಿದ್ದಂತೆ ವರ್ಷಧಾರೆಗೆ ಸಿಟಿ ಜನರು ಖುಷ್‌ ಆದರು..

VISTARANEWS.COM


on

By

Bengaluru Rains
Koo

ಬೆಂಗಳೂರು: ಬಿಸಿಲ ಬೇಗೆಯಿಂದ ತತ್ತರಿಸಿದ್ದ ಬೆಂಗಳೂರು ಜನರಿಗೆ ಶುಕ್ರವಾರದಂದು ಮಳೆಯು (Bengaluru Rains) ಧರೆಗಿಳಿದು ಬಂದಿತ್ತು. ಶುಕ್ರವಾರ ಬೆಳಗ್ಗೆ ರಣ ಬಿಸಿಲು, ಧಗೆಯಿಂದ ಜನರು ಕಂಗಲಾಗಿದ್ದರು. ಮಧ್ಯಾಹ್ನದ ಊಟ ಮುಗಿಸಿ ಹೊರಗೆ ಬಂದವರಿಗೆ ಕಾರ್ಮೋಡ ಕವಿದಿತ್ತು. ನೋಡನೋಡುತ್ತಿದ್ದ ಗುಡುಗು, ಸಿಡಿಲು ಸಹಿತ ಭರ್ಜರಿ ಮಳೆ ಸುರಿದಿದೆ.

ಶಿವಾಜಿನಗರ, ಮಲ್ಲೇಶ್ವರಂ, ವಿಧಾನಸೌಧ, ರಾಜಾಜಿನಗರ, ರೇಸ್ ಕೋರ್ಸ್, ಮೆಜೆಸ್ಟಿಕ್, ಮಹಾರಾಣಿ ಕಾಲೇಜು, ಸಿಐಡಿ ಆಫೀಸ್, ಪ್ಯಾಲೇಸ್ ರಸ್ತೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಮಧ್ಯಾಹ್ನ ಮೂರು ಗಂಟೆ ಸಮಯವು ರಾತ್ರಿಯಂತೆ ಕತ್ತಲೆ ಆವರಿಸಿತ್ತು. ದಿಢೀರ್ ಮಳೆಗೆ ದ್ವಿಚಕ್ರ ವಾಹನ ಸವಾರರು ಸೇತುವೆ ಕೆಳಗೆ ಹಾಗೂ ಬಸ್‌ ನಿಲ್ದಾಣದಲ್ಲಿ ಆಶ್ರಯ ಪಡೆದರು.

ಆಲಿಕಲ್ಲು ಸಹಿತ ಮಳೆಯಾರ್ಭಟ

ಇನ್ನೂ ರಾಜ್ಯ ಗಡಿ ಡೆಂಕಣಿಕೋಟೆ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ತಮಿಳುನಾಡಿನ ಡೆಂಕಣಿಕೋಟೆ, ಹೊಸೂರು, ಸೂಲಗಿರಿ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿ ಸೇರಿದಂತೆ ಜೋರು ಮಳೆಯಾಗುತ್ತಿದೆ.

Bengaluru rains

ಬ್ಯಾರಿಕೇಟ್‌ ಹಾಕಿ ಅಂಡರ್‌ಪಾಸ್‌ ಕ್ಲೋಸ್‌

ಅರ್ಧ ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಯಿಂದಾಗಿ ಬೆಂಗಳೂರಿನ ರಸ್ತೆಗಳು ನದಿಯಂತಾಗಿತ್ತು. ವಿಧಾನಸೌಧ ಪಕ್ಕದಲ್ಲಿರುವ ಎಂ.ಎಸ್ ಬಿಲ್ಡಿಂಗ್ ಸುತ್ತಮುತ್ತಲಿನ ರಸ್ತೆಯಲ್ಲಿ ನೀರು ಹರಿಯುತ್ತಿದೆ. ಎಂಎಸ್‌ ಬಿಲ್ಡಿಂಗ್‌ ಸಮೀಪವೇ ಇರುವ ಅಂಡರ್ ಪಾಸ್‌ಗಳಿಗೆ ಬ್ಯಾರಿಕೇಟ್ ಹಾಕಿ ಕ್ಲೋಸ್ ಮಾಡಲಾಗಿದೆ.

ಧರೆಗೆ ಬಿದ್ದ ಮರಗಳು

ಮಳೆಯಿಂದ ಬೆಂಗಳೂರು ನಗರದಲ್ಲಿ ಮೂರು ಕಡೆ ಬೃಹತ್ ಗಾತ್ರದ ಮರ ಧರೆಗೆ ಬಿದ್ದಿದೆ. ಕೆ.ಆರ್.ಪುರಂನ ಕಸ್ತೂರಿ ನಗರ, ಆರ್‌ಟಿ ನಗರದಲ್ಲಿ ಮಳೆಗೆ ಮರ ಬಿದ್ದಿದೆ. ಇನ್ನೂ ನಾರಾಯಣಪುರದಲ್ಲಿ ಮರ ಬಿದ್ದು, ಕಾರು, ಬೈಕ್ ಜಖಂಗೊಂಡಿದೆ. ಸದ್ಯ ರಸ್ತೆಗೆ ಬಿದ್ದಿದ ಮರವನ್ನು ಬಿಬಿಎಂಪಿ ಸಿಬ್ಬಂದಿ ತೆರವು ಮಾಡಿದ್ದಾರೆ. ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದ ಎಟಿಎಂ (ATM) ಕೊಠಡಿಗೆ ನೀರು ನುಗ್ಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather Forecast : ರಾಯಚೂರಲ್ಲಿ ಬಿಸಿಲಾಜ್ಞೆ; ಮಧ್ಯಾಹ್ನ 12-4ರ ವರೆಗೆ ಹೊರಬರದಂತೆ ಡಿಸಿ ಕಟ್ಟಾಜ್ಞೆ!

Karnataka Weather Forecast : ದಿನೇದಿನೆ ಸುಡುತ್ತಿರುವ ಬಿಸಿಲಿಗೆ ಜನರು ಬೆಂದು ಹೋಗುತ್ತಿದ್ದಾರೆ. ಸದ್ಯ ರಾಯಚೂರಲ್ಲಿ ಗರಿಷ್ಟ ತಾಪಮಾನದ ಕಾರಣಕ್ಕೆ ಮಧ್ಯಾಹ್ನದ ನಂತರ ಜನರು ಹೊರಬರದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇತ್ತ ಚಿಕ್ಕಬಳ್ಳಾಪುರದಲ್ಲಿ ಮಧ್ಯಾಹ್ನದ ನಂತರ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿದೆ.

VISTARANEWS.COM


on

By

Karnataka Weather Forecast
Koo

ರಾಯಚೂರು/ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಉರಿ ಬಿಸಿಲು ಜನರನ್ನು ಸುಸ್ತು (Karnataka Weather Forecast) ಮಾಡಿದೆ. ಅದರಲ್ಲೂ ಉತ್ತರ ಕರ್ನಾಟಕದ ಮಂದಿ ಕುಂತರೂ ನಿಂತರೂ ಬೆವರು ಸುರಿಸುವಂತಾಗಿದೆ. ಬಿಸಿಲಿನ ಆಜ್ಞೆಗೆ ಜನರು ಹೊರಬರಲು ಆಗದೆ ಅಘೋಷಿತ ಬಂದ್‌ ನಿರ್ಮಾಣವಾಗಿದೆ. ಸದ್ಯ ಅತಿಯಾದ ಬಿಸಿಲಿಗೆ ತತ್ತರಿಸಿದ ರಾಯಚೂರು ಜನರು ಮಧ್ಯಾಹ್ನ ಹೊರಗೆ ಬಾರದಂತೆ ರಾಯಚೂರು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.

ಮುಂದಿನ ಒಂದು ವಾರ ಮತ್ತಷ್ಟು ಗರಿಷ್ಠ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ 44 ರಿಂದ 46 ಡಿ.ಸೆ ನಷ್ಟು ತಾಪಮಾನ ದಾಖಲಾಗುತ್ತಿದೆ. ಇದರಿಂದ ಅನಾರೋಗ್ಯ ಸಮಸ್ಯೆ ಜತೆಗೆ ಬಿಸಿಲಾಘಾತಕ್ಕೆ ಸಾವು ಸಂಭವಿಸಬಹುದು. ಹಾಗಾಗಿ ಮಧ್ಯಾಹ್ನ 12 ರಿಂದ 4 ಗಂಟೆವರೆಗೂ ಹೊರಗೆ ಹೋಗದಿರಿ ಎಂದು ಡಿಸಿ ಎಲ್ ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹೊರಗೆ ಹೋಗಲೇಬೇಕಾದ ಅವಶ್ಯಕತೆ ಇದ್ದರೆ ಶುದ್ಧ ಕುಡಿಯುವ ನೀರಿನ ಬಾಟಲ್ ಕೊಂಡೊಯ್ಯಿರಿ. ಟೋಪಿ ಅಥವಾ ಛತ್ರಿ ಬಳಸಿ, ಆದಷ್ಟು ನೆರಳಿನ ಪ್ರದೇಶಗಳಲ್ಲಿ ಓಡಾಡಿ. ಬಾಯಾರಿಕೆ ಆಗದಿದ್ದರೂ ಆಗಾಗ ನೀರು ಕುಡಿಬೇಕು. ಯಾವಾಗಲೂ ನಿಮ್ಮ ಬಳಿ ನೀರು ಇಟ್ಟುಕೊಂಡಿರಿ ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹಾಗೆಯೇ ಮನೆ- ಕಚೇರಿಗಳಲ್ಲಿ ಪಕ್ಷಿಗಳಿಗೂ ನೀರನ್ನು ತುಂಬಿ ಇಡಿ ಎಂದಿದ್ದಾರೆ.

karnataka weather forecast

ತುಮಕೂರಲ್ಲಿ ಬಿಸಿ ಗಾಳಿ; ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ

ತುಮಕೂರು ಜಿಲ್ಲೆಯಲ್ಲೂ ಬಿಸಿ ಗಾಳಿಯು ಆತಂಕವನ್ನು ಹೆಚ್ಚಿಸಿದೆ. ಪಾವಗಡ ತಾಲೂಕಿನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಬಿಸಿಲ ಬೇಗೆಗೆ ಪ್ರಾಣಿ ಪಕ್ಷಿಗಳೂ ಹೈರಾಣಾಗಿವೆ. ಇತ್ತ ರೈತರು ದನ ಕರುಗಳಿಗೆ ಒದ್ದೆ ಮಾಡಿದ ಗೋಣಿಚೀಲ ಹಾಕುತ್ತಿದ್ದಾರೆ. ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ ಹಾಕಿ, ತಂಪು ಮಾಡುತ್ತಿದ್ದಾರೆ.

ಬಿಸಿಲಿನ ಹೊಡೆತ- ಚಿಕ್ಕಬಳ್ಳಾಪುರ ಪ್ರವಾಸಿತಾಣ ಖಾಲಿ ಖಾಲಿ

ಇತ್ತ ಚಿಕ್ಕಬಳ್ಳಾಪುರದಲ್ಲೂ ಅತಿಯಾದ ತಾಪಮಾನದಿಂದಾಗಿ ಪ್ರವಾಸಿ ತಾಣಗಳು ಪ್ರವಾಸಿಗರು ಇಲ್ಲದೆ ಬಣಗುಡುತ್ತಿದೆ. ನಂದಿ ಬೆಟ್ಟ, ಈಶಾ ಫೌಂಡೇಶನ್ ಜನರಿಲ್ಲದೆ ಖಾಲಿ ಖಾಲಿಯಾಗಿದೆ. ಬಿಸಿಲಿನ ತಾಪಕ್ಕೆ ಜನರು ಮನೆ ಬಿಟ್ಟು‌ ಕದಲದ ಕಾರಣಕ್ಕೆ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಬಳ್ಳಾಪುರದಲ್ಲಿ ಆಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಪ್ರತಿನಿತ್ಯ ಪ್ರವಾಸಿಗರಿಂದ ಗಿಜುಗುಡುತಿದ್ದ ನಂದಿಬೆಟ್ಟ ಖಾಲಿಯಾಗಿದೆ.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ಮತ್ತೆ ಇಳಿಕೆ; 10 ಗ್ರಾಂ 22 ಕ್ಯಾರಟ್‌ ಬಂಗಾರದ ಬೆಲೆಯಲ್ಲಿ ₹500 ಕಡಿತ

ಸೆಕೆಗೆ ಕಾವೇರಿ ನದಿಗಿಳಿದ ಜನ

ಮಂಡ್ಯ ಜಿಲ್ಲೆಯಲ್ಲೂ ಬಿಸಿಲ ಬೇಗೆ ಹೆಚ್ಚಾಗಿದೆ. ಬಿಸಿಲಿನ ಸೆಕೆ ತಾಳಲಾರದೆ ಜನರು ನದಿಗಿಳಿದು ತಾಪವನ್ನು ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ಕುಟುಂಬ ಸಮೇತವಾಗಿ ಬಂದು ಮಂಡ್ಯದ ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಇಳಿಯುತ್ತಿದ್ದಾರೆ. ಬಿಸಿಲಿನ ಕಾವಿನಿಂದಾಗಿ ಕಾವೇರಿ ನದಿ ದಂಡೆಯಲ್ಲಿ ಜನರ ದಂಡು ಹೆಚ್ಚಾಗಿದೆ.

ಬೆಂಗಳೂರಲ್ಲಿ ಸುರಿದ ಮಳೆಗೆ ಧರೆಗುರುಳಿದ ಮರಗಳು

ಬೆಂಗಳೂರಿನಲ್ಲಿ ನಿನ್ನೆ ಗುರುವಾರ ಸಂಜೆ ಸುರಿದ ಮಳೆಗೆ ಮರಗಳು ಧರೆಗುರುಳಿವೆ. ಕೆಲವು ಕಡೆ ಅರ್ಧ ಗಂಟೆ, ಮತ್ತೆ ಕೆಲವು ಭಾಗದಲ್ಲಿ ಒಂದು ಗಂಟೆ ಕಾಲ ಮಳೆಯಾಗಿದೆ. ಬನಶಂಕರಿ, ಹಂಪಿನಗರ, ವಿಜಯನರ, ರಾಜರಾಜೇಶ್ವರಿನಗರ ಹಾಗೂ ನಾಯಂಡಹಳ್ಳಿ ಸೇರಿ ಮೆಜೆಸ್ಟಿಕ್‌ ಸುತ್ತಮುತ್ತ ಉತ್ತಮ ಮಳೆಯಾಗಿದೆ. ನಗರದ ಬಹುತೇಕ ಪ್ರದೇಶಗಳಲ್ಲಿ ಸುಮಾರು 10 ನಿಮಿಷಗಳ ಸಾಧಾರಣ ಮಳೆಯಾಗಿದೆ.

ಎಲ್ಲೆಲ್ಲಿ ಎಷ್ಟು ಮಳೆ (ಮಿ.ಮೀ)
ವಿದ್ಯಾಪೀಠ – 20, ಹಂಪಿನಗರ – 12.5, ಮಾರುತಿ ಮಂದಿರ – 12, ರಾಜರಾಜೇಶ್ವರಿನಗರ – 7.5, ನಾಯಂಡಹಳ್ಳಿ – 7.5, ಬಸವನಪುರ – 5.5, ದೊಡ್ಡನೆಕ್ಕುಂದಿ – 5, ಎಚ್‌ಎಸ್‌ಆರ್‌ ಲೇಔಟ್‌- 5, ಉತ್ತರಹಳ್ಳಿ – 5 ಹಾಗೂ ಮಹದೇವಪುರ – 4, ರಾಮಮೂರ್ತಿ ನಗರ – 4, ಹೆಮ್ಮಿಗೆಪುರ – 4.5, ಕೆಂಗೇರಿ – 4.5 ಸೇರಿದಂತೆ ಯಲಹಂಕ ಉಪನಗರ – 3.5, ಹೊರಮಾವು – 3.5ಮಿ.ಮೀ ಮಳೆಯಾಗಿದೆ. ಬೆಂಗಳೂರು ದಕ್ಷಿಣದಲ್ಲಿ 10-15 ಮರಗಳು ಧರೆಗೆ ಉರುಳಿರುವ ಬಗ್ಗೆ ಬಿಬಿಎಂಪಿ ಮಾಹಿತಿ ನೀಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rain News
ಕರ್ನಾಟಕ4 hours ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ನವ ವಿವಾಹಿತ ಸಾವು, ಕಾರ್ಮಿಕನ ಸ್ಥಿತಿ ಗಂಭೀರ

ಪ್ರಮುಖ ಸುದ್ದಿ4 hours ago

IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

Nijjar Killing
ವಿದೇಶ4 hours ago

Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

Rohith Vemula
ದೇಶ5 hours ago

Rohith Vemula: ರೋಹಿತ್‌ ವೇಮುಲ ದಲಿತನಲ್ಲ ಎಂದ ಪೊಲೀಸರು; ಮರು ತನಿಖೆಗೆ ‘ಕೈ’ ಸರ್ಕಾರ ಆದೇಶ!

Rinku Singh
ಪ್ರಮುಖ ಸುದ್ದಿ5 hours ago

Rinku Singh : ಕೊಹ್ಲಿಯ ಬ್ಯಾಟ್​ನಲ್ಲಿ ರಿಂಕು ಚೆನ್ನಾಗಿ ಆಡುತ್ತಿಲ್ಲ; ನೆಟ್ಟಿಗರಿಂದ ಟ್ರೋಲ್​!

honour killing
ವಿಜಯಪುರ5 hours ago

Honor Killing: ಮರ್ಯಾದೆಗಾಗಿ ಗರ್ಭಿಣಿಯನ್ನು ಸುಟ್ಟು ಕೊಂದ ಇಬ್ಬರಿಗೆ ಗಲ್ಲು ಶಿಕ್ಷೆ, 6 ಮಂದಿಗೆ ಜೀವಾವಧಿ‌ ಶಿಕ್ಷೆ

Pakistan
ವಿದೇಶ5 hours ago

ಚೀನಾ ದಯೆಯಿಂದ ಮೊದಲ ಚಂದ್ರಯಾನ ಕೈಗೊಂಡ ಪಾಕಿಸ್ತಾನ; ಆದರೂ ಭಾರತಕ್ಕಿಂತ 16 ವರ್ಷ ಹಿಂದೆ!

T20 World Cup
ಪ್ರಮುಖ ಸುದ್ದಿ5 hours ago

T20 World Cup : ಉನ್ಮುಕ್ತ್​ ಚಾಂದ್​ಗೆ ತೆರೆಯದ ಭಾಗ್ಯದ ಬಾಗಿಲು; ಯುಎಸ್​ ತಂಡದಲ್ಲಿ ಇಲ್ಲ ಚಾನ್ಸ್​!

Health Tips Kannada
ಆರೋಗ್ಯ6 hours ago

Health Tips Kannada : ಉತ್ತಮ ಆರೋಗ್ಯಕ್ಕಾಗಿ ಎಷ್ಟು ಗಂಟೆ ಕುಳಿತುಕೊಳ್ಳಬೇಕು, ನಿಂತುಕೊಳ್ಳಬೇಕು, ಮಲಗಬೇಕು?

Meeting with representatives of various political parties about MLC election in Hosapete
ವಿಜಯನಗರ6 hours ago

Vijayanagara News: ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆ; ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ12 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ23 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20246 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌