Karnataka Weather: ಕರುನಾಡಲ್ಲಿ ಬಿಸಿಲಿನ ಏಟು; ಕಲಬುರಗಿಯಲ್ಲಿ ತುಂಬಾ ಹೀಟು! - Vistara News

ಮಳೆ

Karnataka Weather: ಕರುನಾಡಲ್ಲಿ ಬಿಸಿಲಿನ ಏಟು; ಕಲಬುರಗಿಯಲ್ಲಿ ತುಂಬಾ ಹೀಟು!

Karnataka Weather: ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು ಸೇರಿದಂತೆ ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಾಗಲಿದೆ. ರಾತ್ರಿ ವೇಳೆಯೂ ಇಲ್ಲಿ ಸೆಕೆಯ ಪ್ರಮಾಣ ತೀವ್ರವಾಗಿರಲಿದೆ ಎಂದು ಅಂದಾಜಿಸಲಾಗಿದೆ.

VISTARANEWS.COM


on

Hot girl under sunshine. Karnataka Weather temperature is very high in Kalubaragi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಈಗ ಬಿಸಿಲಿನದ್ದೇ ಕಾರುಬಾರು. ಬಿಸಿಲು ಜೋರಾಗಿದೆ, ಸೆಕೆ ಹೆಚ್ಚಾಗಿದೆ. ಬೆಳಗ್ಗೆ ಹೊತ್ತು ಹೊರಗೆ ಕಾಲಿಟ್ಟರೆ ನೆತ್ತಿ ಸುಡುತ್ತಿದೆ. ಅಷ್ಟರ ಮಟ್ಟಿಗೆ ಬೇಸಿಗೆಯ ಪ್ರಭಾವ ಇದೆ. ಕಲಬುರಗಿಯಲ್ಲಿ ಬುಧವಾರ 37.4 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದ್ದು, ರಾಜ್ಯದಲ್ಲಿಯೇ ಅತಿ ಹೆಚ್ಚು ತಾಪಮಾನ ಇದಾಗಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ 17.4 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನಗಳಲ್ಲಿ (ಗುರುವಾರ ಮತ್ತು ಶುಕ್ರವಾರ) ಕರಾವಳಿ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Karnataka Weather) ಉಲ್ಲೇಖಿಸಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು ಸೇರಿದಂತೆ ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಾಗಲಿದೆ. ರಾತ್ರಿ ವೇಳೆಯೂ ಇಲ್ಲಿ ಸೆಕೆಯ ಪ್ರಮಾಣ ತೀವ್ರವಾಗಿರಲಿದೆ ಎಂದು ಅಂದಾಜಿಸಲಾಗಿದೆ.

ಕಲಬುರಗಿಯಲ್ಲಿ ಹೆಚ್ಚಿನ ತಾಪಮಾನ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿ.ಸೆ ಏರಿಕೆ ಆಗಲಿದೆ. ಇದರ ಅನುಸಾರ ಕಲಬುರಗಿಯಲ್ಲಿ 37ರಿಂದ 38 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದೆ.

ಇಲ್ಲಿ ಕನಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ?

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಸೇರಿದಂತೆ ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ.

ಇದನ್ನೂ ಓದಿ: Homemade Protein Smoothie: ಬೇಸಿಗೆಗೆ ಬೇಕು ತಂಪಾದ ಪ್ರೊಟೀನ್‌ ಸ್ಮೂದಿಗಳು

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 34 ಡಿ.ಸೆ – 20 ಡಿ.ಸೆ
ಮಂಗಳೂರು: 33 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 21 ಡಿ.ಸೆ
ಗದಗ: 37 ಡಿ.ಸೆ – 21 ಡಿ.ಸೆ
ಹೊನ್ನಾವರ: 32 ಡಿ.ಸೆ- 22 ಡಿ.ಸೆ
ಕಲಬುರಗಿ: 37 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Rain News : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಗಾಳಿಯೊಟ್ಟಿಗೆ ಧಾರಾಕಾರ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಭಾನುವಾರದಂದು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿರುವ (Rain News) ವರದಿ ಆಗಿದೆ. ಅತಿ ಹೆಚ್ಚು ಮಳೆಯು ಪುತ್ತೂರು ಹಾಗೂ ರಾಯಚೂರಿನಲ್ಲಿ ತಲಾ 10 ಸೆಂ.ಮೀ (Karnataka Weather Forecast) ಮಳೆಯಾಗಿದೆ. ಉಳಿದಂತೆ ಉಪ್ಪಿನಂಗಡಿ 9, ಸಿರಾ ಮತ್ತು ಕೊಟ್ಟಿಗೆಹಾರದಲ್ಲಿ ತಲಾ 8 ಸೆಂ.ಮೀ, ಗಬ್ಬೂರು, ಬೆಳಗಾವಿಯಲ್ಲಿ 7 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಗರಿಷ್ಠ ಉಷ್ಣಾಂಶ ರಾಯಚೂರಿನಲ್ಲಿ 39.4 ಡಿ. ಸೆ ದಾಖಲಾಗಿದೆ.

ಕಾಸರಗೋಡಿನಲ್ಲಿ ಗಾಳಿ ಮಳೆಗೆ ನೆಲಕ್ಕುರುಳಿದ ಬೃಹತ್ ಹೋರ್ಡಿಂಗ್‌

ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೇರಳದ ಕಾಸರಗೋಡಿನ ಬಸ್ ನಿಲ್ದಾಣ ಬಳಿ ಗಾಳಿ ಸಹಿತ ಮಳೆಯಾಗುತ್ತಿದೆ. ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್‌ ನೆಲಕ್ಕುರುಳಿದ ಘಟನೆ ನಡೆದಿದೆ. ಹೋರ್ಡಿಂಗ್‌ ಬೀಳುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇನ್ನೂ ಹೋರ್ಡಿಂಗ್‌ ಬಿದ್ದು ಕೆಳಗಡೆ ಪಾರ್ಕ್ ಮಾಡಿದ್ದ ವಾಹನಗಳಿಗೆ ಹಾನಿಯಾಗಿದೆ. ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪಾರ್ಕಿಂಗ್‌ ಜಾಗದಲ್ಲಿ ಜನರು ಇರಲಿಲ್ಲ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

ಹಾಸನದಲ್ಲಿ ಉರುಳಿ ಬಿದ್ದ ಮರ

ಹಾಸನ ಜಿಲ್ಲೆಯ ವಿವಿಧೆಡೆ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮರವೊಂದು ಉರುಳಿ ಬಿದ್ದಿತ್ತು. ಪರಿಣಾಮ ಎರಡು ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್‌ ರಸ್ತೆಯಲ್ಲಿ ಘಟನೆ ನಡೆದಿದೆ.

ಮಂಗಳೂರು-ಬೆಂಗಳೂರು ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಗೆ ಮರ ಬಿದ್ದಿತ್ತು. ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು. ಸ್ಥಳಕ್ಕಾಗಮಿಸಿ ಟ್ರಾಫಿಕ್‌ ಪೊಲೀಸರು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತ ಮಾಡಿದರು.

ಇದನ್ನೂ ಓದಿ: Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಮಳೆ ಜತೆಗೆ 60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಬಿರುಗಾಳಿ

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದ್ದು, ಮೇ 14ರಂದು ಭಾರಿ ಮಳೆಯೊಂದಿಗೆ ಗಾಳಿ ವೇಗವು 50-60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಚಿಕ್ಕಮಗಳೂರು, ಹಾಸನ, ಮಂಡ್ಯ,ಮೈಸೂರು ಸೇರಿ ಕಲಬುರಗಿ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ವಿಜಯಪುರ, ಬಾಗಲಕೋಟೆ, ಬೀದರ್‌, ಧಾರವಾಡ,ಗದಗದಲ್ಲಿ ಗುಡುಗು, ಸಿಡಿಲಿನೊಂದಿಗೆ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ. ಉಳಿದೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ನಂತರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಹಾಗೂ ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

Karnataka Rain: ಯಾದಗಿರಿ ಹಾಗೂ ವಿಜಯನಗರದಲ್ಲಿ ಸಿಡಿಲ ಹೊಡೆತಕ್ಕೆ ಇಬ್ಬರು ಕುರಿಗಾಹಿ ಮೃತಪಟ್ಟರೆ, ಜತೆಗಿದ್ದ ಹತ್ತಾರು ಕುರಿಗಳು ದಾರುಣವಾಗಿ ಪ್ರಾಣ ಕಳೆದುಕೊಂಡಿವೆ. ತಡರಾತ್ರಿ ಸುರಿದ ಭಾರಿ ಮಳೆಯು (Heavy Rain) ಅವಾಂತರವನ್ನೇ ಸೃಷ್ಟಿಸಿದೆ. ಮಳೆಯಿಲ್ಲದೆ ಕಂಗಲಾಗಿದ್ದ ಜನತೆಗೆ ಮಳೆಯಿಂದಲೇ ಭೀತಿ ಪಡುವಂತಾಗಿದೆ.

VISTARANEWS.COM


on

By

Karnataka Rain
Koo

ಯಾದಗಿರಿ: ಗುಡುಗು ಸಹಿತ ಬಿರುಗಾಳಿ ಮಳೆಗೆ (Heavy Rain) ಸಾವು-ನೋವು ಸಂಭವಿಸಿದೆ. ಯಾದಗಿರಿಯಲ್ಲಿ ಸುರಿದ ಭಾರಿ ಮಳೆಗೆ (Karnataka Rain) ಜನರು ಬೆಚ್ಚಿ ಬಿದ್ದಿದ್ದಾರೆ. ಯಾದಗಿರಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಿಡಿಲಿಗೆ ಕುರಿಗಾಹಿ ಸೇರಿ 20ಕ್ಕೂ ಹೆಚ್ಚು ಕುರಿಗಳು ಪ್ರಾಣ ಕಳೆದುಕೊಂಡಿವೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಹೊರಭಾಗದಲ್ಲಿ ಸಿಡಿಲು ಬಡಿದು ಕುರಿಗಾಹಿ ಮೃತಪಟ್ಟಿದ್ದಾರೆ. ಭಾನುವಾರ ತಡರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿತ್ತು. ಈ ವೇಳೆ ಸಿಡಿಲು ಬಡಿದು ಕುರಿಗಾಹಿ ಬುಯೆಪ್ಪ (22) ಎಂಬುವವರು ಮೃತಪಟ್ಟಿದ್ದಾರೆ. ಕುರಿಗಾಹಿ ಜತೆಗೆ ಸ್ಥಳದಲ್ಲೇ 7 ಕುರಿಗಳು ಮೃತಪಟ್ಟಿವೆ. ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಐಕೂರು ಗ್ರಾಮದಲ್ಲೂ ಸಿಡಿಲು ಬಡಿದು ಕುರಿಗಳು ಮೃತಪಟ್ಟಿವೆ. ಸಿಡಿಲು ಬಡಿದು ಐಕೂರು ಗ್ರಾಮದಲ್ಲಿ 10 ಕುರಿಗಳು ಸಾವನ್ನಪ್ಪಿವೆ. ಐಕೂರು ಗ್ರಾಮದ ರಾಯಪ್ಪ ಎಂಬ ಕುರಿಗಾಹಿಗೆ ಸೇರಿದ ಕುರಿಗಳನ್ನು ಜಮೀನಿನಲ್ಲಿರುವ ಕುರಿ ಹಟ್ಟಿಯಲ್ಲಿ ಬಿಡಲಾಗಿತ್ತು. ನಿನ್ನೆ ತಡರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆ ವೇಳೆ ಸಿಡಿಲು ಬಡಿದಿದೆ. ಪರಿಣಾಮ ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ. ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Murder Case: ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ವಿಜಯನಗರದಲ್ಲೂ ಸಿಡಿಲಿಗೆ ರೈತ ಸಾವು

ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ. ಚೌಡಪ್ಪ( 33) ಮೃತ ದುರ್ದೈವಿ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅಡವಿ ಮಲ್ಲಾಪುರದಲ್ಲಿ ಘಟನೆ ನಡೆದಿದೆ. ಮೇವಿನ ಬಣವೆಗೆ ಹೋದಿಗೆ ಹಾಕುತ್ತಿದ್ದಾಗ ಸಿಡಿಲು ಬಡಿದು ಚೌಡಪ್ಪ ಮೃತಪಟ್ಟಿದ್ದಾರೆ. ಹರಪನಹಳ್ಳಿ ತಾಲೂಕಾಡಳಿತ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿಯಲ್ಲಿ ಪಿಡಬ್ಲೂಡಿ ಕಚೇರಿಗೆ ನುಗ್ಗಿದ ನೀರು

ಯಾದಗಿರಿ ಜಿಲ್ಲೆಯಲ್ಲಿ ನಸುಕಿನ ಜಾವ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಪಿಡಬ್ಲೂಡಿ ಕಚೇರಿ ಆವರಣ ಹಾಗೂ ಮನೆಗೆ ಮಳೆ ನೀರು ನುಗ್ಗಿದೆ. ಯಾದಗಿರಿ ನಗರದ ಸುಭಾಷ್ ವೃತ್ತದ ಸಮೀಪದಲ್ಲಿರುವ ಪಿಡಬ್ಲೂಡಿ ಕಚೇರಿ ಹಾಗೂ ಮನೆಯೊಳಗೆ ನೀರು ನುಗ್ಗಿದ ಕಾರಣಕ್ಕೆ ಪರದಾಡಬೇಕಾಯಿತು. ಸೋಮವಾರ ಬೆಳಗಿನಿಂದ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಬಿಸಿಲಿಗೆ ತತ್ತರಿಸಿದ ಜನರಿಗೆ ವರುಣ ತಂಪೆರೆದಿದ್ದಾನೆ.

ರಾಯಚೂರಿನಲ್ಲಿ ರಾತ್ರಿ ಇಡೀ ಮಳೆ ಅಬ್ಬರ

ರಾಯಚೂರಿನಲ್ಲಿ ರಾತ್ರಿ ಇಡೀ ಗುಡುಗು ಸಹಿತ ಭಾರೀ ಮಳೆಯಾಗಿದೆ. ನಗರದಲ್ಲಿ ಈ ಬೇಸಿಗೆಯಲ್ಲೇ ಮೊದಲ ಬಾರಿಗೆ ವರುಣ ದರ್ಶನ ಕೊಟ್ಟಿದ್ದಾನೆ. ಬಿಸಿಲಿನ ಸೆಕೆಯಿಂದ ಕಂಗೆಟ್ಟ ಜನರಿಗೆ ಸುಮಾರು 5 ಗಂಟೆಗಳ ಕಾಲ ಧಾರಾಕಾರವಾಗಿ ಮಳೆ ಸುರಿದಿದೆ. ಮಳೆಯಿಂದಾಗಿ ಇಡೀ ರಾಯಚೂರು ನಗರದಾದ್ಯಂತ ವಿದ್ಯುತ್ ವ್ಯತ್ಯಯವಾಗಿತ್ತು.

ಚಿಕ್ಕಮಗಳೂರಲ್ಲಿ ಮಳೆಯಲ್ಲಿ ರಸ್ತೆ ಕಾಣದೆ ಅಪಘಾತ

ಮಳೆಯಲ್ಲಿ ರಸ್ತೆ ಕಾಣದೆ ಟಿಟಿ ವಾಹನವೊಂದು ವಿದ್ಯುತ್ ಕಂಬಕ್ಕೆ ಗುದ್ದಿದೆ. ಟಿಟಿ ವಾಹನ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿತ್ತು. ಭಾರಿ ಮಳೆ ಹಿನ್ನೆಲೆಯಲ್ಲಿ ವಿದ್ಯುತ್‌ ಸಂಪರ್ಕ ಸ್ಥಗಿತಗೊಂಡಿತ್ತು. ಇದರಿಂದಾಗಿ ಅದೃಷ್ಟವಶಾತ್ ವಾಹನದಲ್ಲಿದ್ದ 9ಕ್ಕೂ ಹೆಚ್ಚು ಪ್ರಯಾಣಿಕರು ಪಾರಾಗಿದ್ದರು. ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕುಂಚೆ ಬೈಲು ಗ್ರಾಮದ ಬಳಿ ಘಟನೆ ನಡೆದಿದೆ. ಪ್ರಯಾಣಿಕರು ಟಿಟಿ ವಾಹನದಲ್ಲಿ ಹಾಸನದಿಂದ ಶೃಂಗೇರಿ ಕಡೆಗೆ ತೆರಳುತ್ತಿದ್ದರು.

ವಿಜಯನಗರದಲ್ಲಿ ಮಳೆಗೆ ಕ್ಷಣಾರ್ಧದಲ್ಲೇ ಕೊಚ್ಚಿ ಹೋಯ್ತು ಫಸಲು

ಬಿರುಗಾಳಿ ಸಹಿತ ಭಾರಿ ಮಳೆಗೆ ನೂರಾರು ಎಕರೆ ಬಾಳೆ ಬೆಳೆ ಧರೆಗೆ ಉರುಳಿವೆ. ವಿಜಯನಗರದ ಹೊಸೂರು, ಇಪ್ಪಿತೇರಿ, ನರಸಾಪುರ, ಮಾಗಾಣಿಗಳು, ಕಮಲಾಪುರ ಗ್ರಾಮ ಸೇರಿ ಹತ್ತಾರು ಗ್ರಾಮದ ರೈತ ಬದುಕು ಅಯೋಮಯವಾಗಿದೆ. ಮಕ್ಕಳಂತೆ ಜೋಪಾನ ಮಾಡಿದ್ದ ಬಾಳೆ ಬೆಳೆ ಮೇಲೆ ಪ್ರಕೃತಿಯ ಮುನಿಸಿಗೆ ಸಂಪೂರ್ಣ ನಾಶವಾಗಿದೆ.

ಕಳೆದ ಒಂದು ವಾರದಲ್ಲಿ ಎರಡು ಬಾರಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಬಾಳೆ ಬೆಳೆ ನೆಲಕಚ್ಚಿದೆ. ಎಕರೆ ಹೊಲದಲ್ಲಿ ಬಾಳೆ ಬೆಳೆಯೋದಕ್ಕೆ ರೈತರು ಲಕ್ಷದವರೆಗೆ ಖರ್ಚು ಮಾಡಿದ್ದರು. ಇನ್ನೇನು ಒಂದು ತಿಂಗಳಲ್ಲಿ ಬಾಳೆ ಮಾರಾಟಕ್ಕೆ ರೆಡಿ ಮಾಡಿಕೊಂಡಿದ್ದ ರೈತರಿಗೆ ಮಳೆಯು ಆಘಾತವನ್ನುಂಟು ಮಾಡಿದೆ. ಮಳೆಯು ನಮ್ಮ ಬದುಕನ್ನು ಕಸಿದುಕೊಂಡಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಅಂತ ಬಾಳೆ ಬೆಳೆಗಾರರು ಅಳಲು ತೊಡಿಕೊಂಡಿದ್ದಾರೆ.

ಈ ಬಾರಿ ಮಳೆಯಿಲ್ಲದೇ ತುಂಗಭದ್ರಾ ಜಲಾನಯದ ಪ್ರದೇಶದ ರೈತರು ಕಂಗಾಲಾಗಿದ್ದಾರೆ. ವಿಜಯನಗರ ಕಾಲದ ಕಾಲುವೆಗಳನ್ನು ನಂಬಿ ತಿಂಗಳಿಗೊಮ್ಮೆ ಬಂದ ನೀರಲ್ಲೇ ಬದುಕು, ಬವಣೆ ನಡೆಯುತ್ತಿದ್ದೇವೆ. 2 ಟಿಎಂಸಿ ನೀರಲ್ಲಿ ಆಗೊಮ್ಮೆ, ಈಗೊಮ್ಮೆ ಬಂದ ನೀರಲ್ಲೇ ಬಾಳೆ ಬೆಳೆದಿದ್ದರು. ಇನ್ನೂ 15 ದಿನ ಮುಗಿದಿದ್ದರೆ ಬಾಳೆ ಗೊಣೆಗಳು ಕೈಗೆ ಬರುತ್ತಿದ್ದವು. ಕೈಗೆ ಬಂದ ಬಾಳೆ ಈಗ ನೆಲಕ್ಕೆ ಬಿದ್ದಿದೆ. ಮಳೆರಾಯ ಬಡವರ ಬದುಕನ್ನು ಮೂರಾಬಟ್ಟೆ ಮಾಡಿದ್ದಾನೆ ಎಂದು ಕಿಡಿಕಾರಿದರು.

ಕೊಡಗು, ಕೊಪ್ಪಳದಲ್ಲೂ ಮಳೆಯ ಸಿಂಚನ

ಕಳೆದ ಮೂರು ತಿಂಗಳಿಂದ‌ ಬಿಸಿಲಿನ ತಾಪಕ್ಕೆ ಕೊಪ್ಪಳದ ಜನತೆ ಹೈರಾಣಾಗಿದ್ದರು. ಭಾನುವಾರ ರಾತ್ರಿ ಸುರಿದ ಗುಡುಗು ಸಹಿತ ಮಳೆಗೆ ವಾತಾವರಣ ತಂಪಾಗಿದೆ. ಕಳೆದ ಎರಡು ದಿನಗಳಿಂದ‌ ಸುರಿಯುತ್ತಿರುವ ಮಳೆಗೆ ಜನರು ಸಂತಸಗೊಂಡಿದ್ದಾರೆ. ಇತ್ತ ಕೊಡಗು‌ ಜಿಲ್ಲೆಯ ವಿವಿಧೆಡೆ ಮಳೆಯ ಸಿಂಚನವಾಗಿದೆ. ಹಲವು‌ ದಿನಗಳಿಂದ ಮಳೆಗಾಗಿ‌ ಕಾದಿದ್ದ ಜನರಿಗೆ ಸೋಮವಾರ ಮುಂಜಾನೆಯಿಂದಲೆ ತುಂತುರು ಮಳೆಯಾಗಿದೆ. ಮಳೆಯಿಂದ ಕೊಡಗಿನ‌ ಜನರ ಮೊಗದಲ್ಲಿ ಮಂದಹಾಸ ಮೂಡಿದೆ.

ರಾಯಚೂರಲ್ಲಿ ಭತ್ತದ ರಾಶಿಗೆ ನುಗ್ಗಿದ ನೀರು

ಇನ್ನೂ ರಾಯಚೂರಿನಲ್ಲಿ ವರುಣನ ಆರ್ಭಟಕ್ಕೆ ರೈತರು ಸಂಕಷ್ಟಕ್ಕೆ ಸಿಲುಕಿದರು. ಎರಡು ಗಂಟೆಗಳ ಕಾಲ ಸುರಿದ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮಳೆಗೆ ನಗರದ ರಸ್ತೆಗಳು ಹಳ್ಳದಂತಾದರೆ, ನಗರದ ಎಪಿಎಂಸಿಗೆ ನೀರು ನುಗ್ಗಿತ್ತು. ತೆಲಂಗಾಣದ ಮಕ್ತಲ್‌ನಿಂದ ಸಾಕಷ್ಟು ರೈತರು ಭತ್ತ ತಂದು ರಾಶಿ ಮಾಡಿದರು.ಆದರೆ ಮಳೆ ಸುರಿದ ಕಾರಣ ಭತ್ತದ ರಾಶಿ ನೀರುಪಾಲಾಗಿತ್ತು. ಎಪಿಎಂಸಿ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ರೈತರು ಅಸಮಾಧಾನ ಹೊರಹಾಕಿದ್ದರು.

ಇತ್ತ ರಾಯಚೂರು ನಗರದ ವಾರ್ಡ್‌ನ 34ರಲ್ಲಿ ಸುಮಾರು 25ಕ್ಕೂ ಹೆಚ್ಚು ಮನೆಗಳು ಮತ್ತು ದೇವಸ್ಥಾನವು ಜಲಾವೃತಗೊಂಡಿತ್ತು. ಚಿಕ್ಕ ಕಾಲುವೆ ಬ್ಲಾಕ್ ಆಗಿದ್ದರಿಂದ ಈ ಆವಾಂತರಗಳು ಸೃಷ್ಟಿಯಾಗಿತ್ತು. ಮಳೆ ನೀರು ನುಗ್ಗಿದ್ದರಿಂದ ರಾತ್ರಿಯಿಡೀ ಜನರು ಜಾಗರಣೆ ಮಾಡುವಂತಾಯಿತು. ಬೆಳಗ್ಗೆಯಿಂದ ಮಳೆ ನೀರು ಹೊರ ಹಾಕಲು ಜನರು ಹರಸಾಹಸ ಪಟ್ಟರು. ನಗರಸಭೆ ಮತ್ತು ಜನ ಪ್ರತಿನಿಧಿಗಳ ವಿರುದ್ಧ ವಾರ್ಡ್‌ನ ಜನರು ಆಕ್ರೋಶ ಹೊರಹಾಕಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Karnataka Weather Forecast : ವಾಯುಭಾರ ಕುಸಿತದಿಂದಾಗಿ ಕೇರಳ ಕರಾವಳಿಯಲ್ಲಿ ಚಂಡಮಾರುತ ಎದ್ದಿದೆ. ಇದರ ಪ್ರಭಾವದಿಂದಾಗಿ ಕರ್ನಾಟಕದಲ್ಲಿ (Karnataka Rains) ಗಾಳಿಯೊಂದಿಗೆ ಗುಡುಗು ಸಹಿತ ವಿಪರೀತ ಮಳೆಯಾಗುವ (Rain News) ಮುನ್ಸೂಚನೆ ಇದೆ.

VISTARANEWS.COM


on

By

karnataka weather forecast karnataka rains
Koo

ಬೆಂಗಳೂರು: ಮರಾಠಾವಾಡದಿಂದ ಕೊಮೊರಿನ್ ಪ್ರದೇಶದವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಇದು ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ (Karnataka Weather Forecast) ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ (Karnataka Rains) ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಗಾಳಿ ವೇಗವು 40-50 ಕಿ.ಮೀನಲ್ಲಿ ಇರಲಿದ್ದು, ಇದರೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆಯಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಜತೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಬಾಗಲಕೋಟೆ, ಗದಗ, ಕೊಪ್ಪಳ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ವಿಜಯನಗರದಲ್ಲೂ ಇದೇ ಪರಿಸ್ಥಿತಿ ಇರಲಿದೆ.

ಇದನ್ನೂ ಓದಿ: Road Accident : ತಂದೆ ಜತೆಗೆ ಕಾರ್‌ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

ಚಿಕ್ಕಮಗಳೂರಲ್ಲಿ ಮಳೆಗೆ ಮರ ಬಿದ್ದು ಮಹಿಳೆ ಸಾವು

ನಿನ್ನೆ ಭಾನುವಾರ ಚಿಕ್ಕಮಗಳೂರಲ್ಲಿ ಸುರಿದ ಭಾರಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮರವೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮರದ ಅಡಿ ಸಿಲುಕಿದ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸವಿತಾ (48) ಮೃತ ದುರ್ದೈವಿ. ಚಿಕ್ಕಮಗಳೂರಿನ ಎನ್‌ಆರ್‌ ಪುರ ‌ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ ಘಟನೆ ನಡೆದಿದೆ.

ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ‌ಕಾರಿನ ಮೇಲೂ ಮರ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ‌ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದರು. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.

Karnataka Weather Forecast

ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ ಬೈಕ್‌ಗಳಿಗೆ ಹಾನಿ

ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿದ್ದ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಬೇಸ್ಮೇಂಟ್‌ನಲ್ಲಿ ಮಳೆ ನೀರು ನುಗ್ಗಿದ್ದು, ತಡೆಗೋಡೆ ಕುಸಿದು ಕೆಲವು ಬೈಕ್‌ಗಳಿಗೆ ಹಾನಿಯಾಗಿದೆ. ಕಾಂಪ್ಲೆಕ್ಸ್‌ ಸಿಬ್ಬಂದಿ ಮೆಕ್ಯಾನಿಕಲ್ ಕರೆದುಕೊಂಡು ಬಂದು ಬೈಕ್ ರೀಪೇರಿ ಮಾಡಿಸುತ್ತಿದ್ದಾರೆ.

Karnataka Weather Forecast

ಚಿಕ್ಕಬಳ್ಳಾಪುರ‌ದಲ್ಲಿ ನೆಲಕಚ್ಚಿದ ಪಪ್ಪಾಯಿ ಬೆಳೆ

ಮಳೆಯ ಆರ್ಭಟಕ್ಕೆ ಎರಡು ಎಕರೆ ಪಪ್ಪಾಯಿ ಬೆಳೆ ನೆಲಕಚ್ಚಿದೆ. ಕಟಾವಿಗೆ ಬಂದಿದ್ದ ಪಪ್ಪಾಯಿ‌ ಬೆಳೆ ಮಣ್ಣುಪಾಲಾಗಿದೆ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೇವರಗುಡಿಪಲ್ಲಿ ಗ್ರಾಮದ ವೆಂಕಟಶಿವಪ್ಪ ಎಂಬುವರಿಗೆ ಸೇರಿದ ಪಪ್ಪಾಯಿ ಬೆಳೆ ಕೊಯ್ಲಿಗೆ ಬಂದಿತ್ತು. ಇದೀಗ ಗುಡುಗು‌ ಸಿಡಿಲು ಸಮೇತ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ರೈತ ಕಂಗಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.

ತರೀಕೆರೆ, ಅಜ್ಜಂಪುರ ತಾಲೂಕಿನ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿತ್ತು. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಧಾರಾಕಾರ ಮಳೆಯಾಗಿತ್ತು. ಕಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Rain News: ಬಾಗಲಕೋಟೆಯಲ್ಲಿ ಸಿಡಿಲಿಗೆ ಬಾಲಕ ಬಲಿ; ಬೆಳಗಾವಿಯ ಮನೆಗಳಿಗೆ ನುಗ್ಗಿದ ಮಳೆ ನೀರು

Rain News: ಬಾಗಲಕೋಟೆ ತಾಲೂಕಿನಲ್ಲಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಬೆಳಗಾವಿ ತಾಲೂಕಿನ ಮಜಗಾಂವ ಗ್ರಾಮದಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದರಿಂದ ಜನ ಪರದಾಡುವಂತಾಗಿದೆ.

VISTARANEWS.COM


on

Rain News
Koo

ಬಾಗಲಕೋಟೆ/ಬಾಗಲಕೋಟೆ: ರಾಜ್ಯದ ವಿವಿಧೆಡೆ ಭಾನುವಾರವೂ ಭರ್ಜರಿ ಮಳೆ ಸುರಿದಿದೆ. ಇದರಿಂದ ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಬಾಗಲಕೋಟೆ ತಾಲೂಕಿನಲ್ಲಿ ನಡೆದಿದೆ. ಇನ್ನು ಬೆಳಗಾವಿಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನ ಪರದಾಡುತ್ತಿದ್ದಾರೆ.

ಸಿಡಿಲು ಬಡಿದು ಬಾಲಕ ಸಾವು

ಬಾಗಲಕೋಟೆ: ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಬಾಗಲಕೋಟೆ ತಾಲೂಕಿನ ಹಳ್ಳೂರು ಸಮೀಪ ನಡೆದಿದೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೊನ್ಯಾಳ ನಿವಾಸಿ ಪ್ರಕಾಶ್ ವಗ್ಗರ್ (17) ಮೃತ.

ನಾಲ್ಕೈದು ದಿನಗಳ ಹಿಂದೆ ಬೇವೂರಿನ ಸಂಬಂಧಿಕರ ಮನೆಗೆ ಬಾಲಕ ಬಂದಿದ್ದ. ಬಾಗಲಕೋಟೆಯಿಂದ ಬೇವೂರು ಗ್ರಾಮಕ್ಕೆ ಭಾನುವಾರ ಬೈಕ್ ಮೇಲೆ ಹೊರಟಿದ್ದಾಗ ಮಳೆ ಬಂತೆಂದು ಹಳ್ಳೂರು ಸಮೀಪ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿದೆ. ಈ ವೇಳೆ ಬಾಲಕ ಮೃತಪಟ್ಟಿದ್ದು, ಆತನ ಜೊತೆಗಿದ್ದ ಶ್ರೀಶೈಲ್ ಬನ್ನೆಪ್ಪನವರ್‌ಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗಾವಿಯಲ್ಲಿ ಹಲವು ಮನೆಗಳಿಗೆ ನುಗ್ಗಿದ ನೀರು

ಬೆಳಗಾವಿ: ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡಿದ ಘಟನೆ ಬೆಳಗಾವಿ ತಾಲೂಕಿನ ಮಜಗಾಂವ ಗ್ರಾಮದಲ್ಲಿ ನಡೆದಿದೆ. ಬೆಳಗಾವಿಯ ದಕ್ಷಿಣ ಮತಕ್ಷೇತ್ರದ ಗ್ರಾಮದಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಜಿಲ್ಲಾಧಿಕಾರಿ ಮತ್ತು ಶಾಸಕ ಅಭಯ ಪಾಟೀಲ ವಿರುದ್ಧ ಸ್ಥಳೀಯ ಮಹಿಳೆಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಲ್ಕು ವರ್ಷಗಳಿಂದ ಚರಂಡಿ ಸರಿಪಡಿಸಿಲ್ಲ, ಹೀಗಾಗಿ ಅವ್ಯವಸ್ಥೆ ಉಂಟಾಗಿದೆ ಎಂದು ಮಹಿಳೆಯರು ಕಿಡಿಕಾರಿದ್ದಾರೆ. ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮನೆಗಳಿಗೆ ನೀರು ನುಗ್ಗಿದೆ. ಸತತ ಗಂಟೆ ಕಾಲ ಸುರಿದ ಭಾರಿ ಮಳೆಗೆ ಜನರು ಕಂಗಾಲಾಗಿದ್ದಾರೆ.

ಇದನ್ನೂ ಓದಿ | Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಸಿಡಿಲಿನ ಹೊಡೆತಕ್ಕೆ ಧಗ ಧಗಿಸಿದ ತೆಂಗಿನಮರ

ಸಿಡಿಲಿನ ಹೊಡೆತಕ್ಕೆ ತೆಂಗಿನಮರ ಹೊತ್ತಿ ಉರಿದ ಘಟನೆ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದ ವೆಂಕಟೇಶ್ವರ್ ನಗರದಲ್ಲಿ ನಡೆದಿದೆ. ಮಂಜುನಾಥ್ ಪಾಟೀಲ್ ಎಂಬುವವರ ತೆಂಗಿನಮರಕ್ಕೆ ಸಿಡಿಲು ಬಡಿದಿದೆ. ತೆಂಗಿನಮರ ಧಗ ಧಗಿಸುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

Continue Reading
Advertisement
IPL 2024
ಪ್ರಮುಖ ಸುದ್ದಿ5 hours ago

IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

Prajwal Revanna Case
ಕರ್ನಾಟಕ5 hours ago

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Hoarding
ಸಂಪಾದಕೀಯ5 hours ago

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

Sushil Kumar Modi
ಪ್ರಮುಖ ಸುದ್ದಿ5 hours ago

Sushil Kumar Modi : ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ

Tejasvi Surya
ದೇಶ5 hours ago

Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

IPL 2024
ಪ್ರಮುಖ ಸುದ್ದಿ6 hours ago

IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

Vidyarthi Vidyarthiniyare Movie
ಕರ್ನಾಟಕ6 hours ago

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Road Accident Head on collision between bikes One person died on the spot
ಉತ್ತರ ಕನ್ನಡ6 hours ago

Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Lok Sabha Election
ದೇಶ7 hours ago

Lok Sabha Election: 28 ವರ್ಷಗಳಲ್ಲೇ ಶ್ರೀನಗರದಲ್ಲಿ ಅಧಿಕ ಮತದಾನ; 370ನೇ ವಿಧಿ ರದ್ದು ಎಫೆಕ್ಟ್?

Award Ceremony
ಬೆಂಗಳೂರು7 hours ago

Award Ceremony: ಬೆಂಗಳೂರಿನಲ್ಲಿ ಮೇ 19ರಂದು ಕಾದಂಬರಿ ಸಾರ್ವಭೌಮ ಅ.ನ.ಕೃ. ಪ್ರಶಸ್ತಿ ಪ್ರದಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ10 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ10 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ10 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ11 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ11 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ18 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ22 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ24 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌