Site icon Vistara News

Karnataka Weather: ಬೆಂಗಳೂರು ಸೇರಿ ಯಾವ ಜಿಲ್ಲೆಗಳಲ್ಲಿ ಚಳಿ ಹೆಚ್ಚು?

Karnataka Weather very cold

ಬೆಂಗಳೂರು: ರಾಜ್ಯದ ಕೆಲವು ಶನಿವಾರ ಮತ್ತು ಭಾನುವಾರ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ತನ್ನ ಮುನ್ಸೂಚನಾ ವರದಿಯಲ್ಲಿ ಹೇಳಿದೆ. ಆದರೆ, ಬೆಂಗಳೂರು, ಚಿತ್ರದುರ್ಗ, ಗದಗ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿಯಲ್ಲಿ ಭಾರಿ ಚಳಿ ಇರಲಿದೆ ಎಂದು ಉಲ್ಲೇಖಿಸಿದೆ.

ಬೆಂಗಳೂರು, ಚಿತ್ರದುರ್ಗ, ಗದಗ ಜಿಲ್ಲೆಗಳ ಕೆಲವು ಕಡೆ ಗರಿಷ್ಠ ಉಷ್ಣಾಂಶವು ಅನುಕ್ರಮವಾಗಿ 30, 31, 32 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶವು 17 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಅದೇ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಳಗಾವಿಯಲ್ಲಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಭಾರಿ ಚಳಿ ಇರಲಿದೆ. ಆದರೆ, ಗರಿಷ್ಠ ಉಷ್ಣಾಂಶವು 27-31 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದೆ. ಆದರೆ, ಸ್ವಲ್ಪ ಪ್ರಮಾಣದಲ್ಲಿ ಈ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣವೂ ಹೆಚ್ಚಿರಲಿದೆ ಎಂದು ಅಂದಾಜಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಒಣ ಹವೆ

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಧಾರವಾಡ ಹಾಗೂ ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣ ಹವೆ ಮುಂದುವರಿಯಲಿದೆ. ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ದಕ್ಷಿಣ ಕನ್ನಡದಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್!

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಚಳಿ ಪ್ರಮಾಣ ಕಡಿಮೆ ಇದ್ದು, ಬೆಳಗ್ಗೆ ಬಿಸಿಲಿನ ತೀವ್ರತೆ ಇರಲಿದೆ. ದಕ್ಷಿಣ ಕನ್ನಡದಲ್ಲಿ ಇನ್ನೆರಡು ದಿನ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಆದರೆ, ಬೆಳಗಾವಿ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 11 ಡಿಗ್ರಿ ಸೆಲ್ಸಿಯಸ್‌ ಇರಲಿದೆ

ಈ ಜಿಲ್ಲೆಗಳಲ್ಲಿ ಒಣ ಹವೆ

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ ಅಲ್ಪ ಮಟ್ಟಿಗೆ ಚಳಿ ಇರಲಿದೆ. ಕೋಲಾರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ. ಇನ್ನು ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಚಳಿಯ ವಾತಾವರಣ ಇರಲಿದೆ.

ಇದನ್ನೂ ಓದಿ: Ear Pain During Winter: ಚಳಿಗೆ ಕಿವಿನೋವೇ? ಇಲ್ಲಿ ಕೇಳಿ!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 30 ಡಿ.ಸೆ -17 ಡಿ.ಸೆ
ಮಂಗಳೂರು: 32 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 17 ಡಿ.ಸೆ
ಗದಗ: 32 ಡಿ.ಸೆ – 17 ಡಿ.ಸೆ
ಹೊನ್ನಾವರ: 31 ಡಿ.ಸೆ- 18 ಡಿ.ಸೆ
ಕಲಬುರಗಿ: 33 ಡಿ.ಸೆ – 20 ಡಿ.ಸೆ
ಬೆಳಗಾವಿ: 31 ಡಿ.ಸೆ – 16 ಡಿ.ಸೆ
ಕಾರವಾರ: 34 ಡಿ.ಸೆ – 20 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version