Karnataka Weather : ಬೆಂಗಳೂರಲ್ಲಿ ಮರೆಯಾಗುವ ಸೂರ್ಯ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ - Vistara News

ಮಳೆ

Karnataka Weather : ಬೆಂಗಳೂರಲ್ಲಿ ಮರೆಯಾಗುವ ಸೂರ್ಯ; ಕರಾವಳಿ, ಮಲೆನಾಡಿನಲ್ಲಿ ವರುಣಾರ್ಭಟ

Karnataka Weather Forecast: ಬೆಂಗಳೂರಲ್ಲಿ ಸೂರ್ಯ ಮರೆಯಾಗಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯು (Rain news) ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ

VISTARANEWS.COM


on

karnataka weather Forecast
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬುಧವಾರ ಕರ್ನಾಟಕದ ಕರಾವಳಿಯಲ್ಲಿ ಮಳೆಯು (Heavy rain) ಅಬ್ಬರಿಸಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (karnataka weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಗೆ ಯಾವುದೇ ಮಳೆ ಸೂಚನೆ ಇಲ್ಲ.

ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಲಘುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲೂ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಹಾಗೂ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

40 ಕಿ.ಮೀ ವೇಗದಲ್ಲಿ ಬೀಸಲಿದೆ ಗಾಳಿ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Wild Animals Attack : ಕರೆಯದೆ ಬಂದ ಅತಿಥಿ; ವರನ ಪಕ್ಕ ಕುಳಿತು ಮದುವೆಗೆ ಅಡ್ಡಿಪಡಿಸಿದ ಕೋತಿ!ಮುಂದೇನಾಯ್ತು?

ಮಳೆಗಾಲದಲ್ಲಿ ಭೇಟಿ ನೀಡಬಹುದಾದ ಕರ್ನಾಟಕದ 15 ರಮಣೀಯ ತಾಣಗಳು

ಕರ್ನಾಟದಲ್ಲಿ ಮಳೆಗಾಲ ಆರಂಭವಾಗಿದೆ. ಕೆಲವು ಪ್ರವಾಸಿ (Karnataka Tour) ತಾಣಗಳಂತೂ ನಯನ ಮನೋಹರವಾಗಿ ಕಂಗೊಳಿಸುತ್ತಿವೆ. ಮಾಂತ್ರಿಕವಾಗಿ ಸಿಂಗಾರಗೊಂಡಂತಿವೆ. ದೂರದೂರದ ಪ್ರವಾಸಿಗರನ್ನು (tourists) ತನ್ನತ್ತ ಆಕರ್ಷಿಸುತ್ತಿವೆ. ಒಂದೆಡೆ ಪಶ್ಚಿಮ ಘಟ್ಟಗಳು (Western Ghats), ಇನ್ನೊಂದೆಡೆ ಅರಬ್ಬಿ ಸಮುದ್ರದ (arabian sea) ಸಮೀಪವಿರುವ ಕರಾವಳಿ ಪ್ರದೇಶಗಳು ಮಳೆಯ ಧಾರೆಯಲ್ಲಿ ತೋಯ್ದು ತನ್ನನ್ನು ತಾನು ಸ್ವಚ್ಛ, ಸುಂದರ ಮತ್ತಷ್ಟು ಸಿಂಗಾರಗೊಳಿಸಿದಂತೆ ಭಾಸವಾಗುತ್ತಿದೆ.

ಭಾರೀ ಮಳೆಯ ಆರಂಭದ ದಿನಗಳಲ್ಲಿ ಕರ್ನಾಟಕದ ಹವಾಮಾನವು ಆರ್ದ್ರವಾಗಿರುತ್ತದೆ ಮತ್ತು ಆಹ್ಲಾದಕರವಾಗಿರುತ್ತದೆ. ಕರ್ನಾಟಕದ ಕರಾವಳಿ ಪ್ರದೇಶಗಳು ಮತ್ತು ದಕ್ಷಿಣ ಪ್ರದೇಶಗಳಲ್ಲಿ ಹಸಿರಿನಿಂದ ಚಿತ್ರಿಸಲ್ಪಟ್ಟಂತೆ ಭಾಸವಾಗುತ್ತದೆ. ಪಶ್ಚಿಮ ಘಟ್ಟಗಳಂತೂ ಆಕರ್ಷಣೆಯ ಕೇಂದ್ರವಾಗುತ್ತದೆ.

ಹಗಲಿನಲ್ಲಿ ತಾಪಮಾನವು 28 ಡಿಗ್ರಿ ಸೆಲ್ಸಿಯಸ್‌ಗೆ ಇಳಿದರೆ ರಾತ್ರಿಯಲ್ಲಿ ತಾಪಮಾನವು 20 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವುದು. ಹಗಲು ಸುರಿಯುವ ಮಳೆಯಲ್ಲೂ ಹೊರಗೆ ಸುತ್ತಾಡಲು ಮನ ಬಯಸಿದರೆ, ರಾತ್ರಿ ತಂಪನೆಯ ವಾತಾವರಣ ಬೆಚ್ಚನೆ ಹೊದಿಕೆ ಹೊದ್ದು ಮಲಗಲು ಪ್ರೇರೇಪಿಸುತ್ತದೆ.

ಜಲಪಾತ, ಗಿರಿಧಾಮ, ಕಡಲ ತೀರಗಳು ಮಳೆಗಾಲದಲ್ಲಿ ಅನ್ವೇಷಿಸಬಹುದಾದ ಸಾಕಷ್ಟು ಆಕರ್ಷಣೆಗಳು ಕರ್ನಾಟಕದಲ್ಲಿವೆ. ಮಾನ್ಸೂನ್ ನಲ್ಲಿ ಈ ಸ್ಥಳಗಳ ಮಾಂತ್ರಿಕ ಮೋಡಿಯನ್ನು ಮಾಡುವುದು. ಮಳೆಗಾಲದಲ್ಲಿ ಕರ್ನಾಟಕದಲ್ಲಿ ನೋಡಲೇ ಬೇಕಾದ 15 ಪ್ರಮುಖ ಸ್ಥಳಗಳಿವೆ. ಇದರ ಸೌಂದರ್ಯವನ್ನು ಈ ಮಳೆಗಾಲದಲ್ಲಿ ಅನುಭವಿಸದೇ ಇದ್ದರೆ ಮುಂದಿನ ಮಳೆಗಾಲದವರೆಗೂ ಕಾಯಬೇಕಾಗುವುದು.


1. ಹಂಪಿ

ಹಂಪಿ ಕರ್ನಾಟಕದ ಅತ್ಯುತ್ತಮ ಮಾನ್ಸೂನ್ ಸ್ಥಳಗಳಲ್ಲಿ ಒಂದಾಗಿದೆ. ಇದ್ದಕ್ಕಿದ್ದಂತೆ, ಹಂಪಿಯ ಶುಷ್ಕ ಪ್ರದೇಶಗಳು ಹಸಿರು ವಿಸ್ತಾರವಾದ ಹುಲ್ಲುಗಾವಲುಗಳಾಗಿ ಬದಲಾಗುತ್ತವೆ. ಹಂಪಿಯ ರಮಣೀಯ ಭೂದೃಶ್ಯವನ್ನು ಹೊಂದಿರುವ ಹೇರಳವಾದ ದೇವಾಲಯಗಳು ಮಳೆಯಲ್ಲಿ ರುದ್ರರಮಣೀಯವಾಗಿ ಕಾಣುತ್ತವೆ. ಇಲ್ಲಿನ ಆಹ್ಲಾದಕರ ವಾತಾವರಣವು ಅದ್ಭುತವಾದ ಫೋಟೋಗಳನ್ನು ಒದಗಿಸುವುದು. ಮೋಡ ಕವಿದ ಆಕಾಶವು ದೇವಾಲಯಗಳ ಫೋಟೋಗಳಿಗೆ ಅದ್ಭುತವಾದ ಹಿನ್ನೆಲೆಯನ್ನು ಉಂಟು ಮಾಡುತ್ತದೆ. ಪ್ರಬಲವಾದ ಹಂಪಿ ನದಿಯಲ್ಲಿ ಕೊರಾಕಲ್ ದೋಣಿ ಸವಾರಿ ಮತ್ತು ರಾಕ್ ಕ್ಲೈಂಬಿಂಗ್ ಹೆಚ್ಚು ರೋಮಾಂಚನಕಾರಿಯಾಗಿರುತ್ತದೆ.


2. ಮರವಂತೆ

ಕರ್ನಾಟಕದ ಎನ್ ಹೆಚ್ 66ರಲ್ಲಿರುವ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಒಂದು ಸಣ್ಣ ಹಳ್ಳಿ ಮರವಂತೆಯಲ್ಲಿ ಸಮುದ್ರ ಮತ್ತು ನದಿ ಒಟ್ಟಿಗೆ ಸೇರುವ ದೃಶ್ಯ ನಯನಮನೋಹರವಾಗಿರುತ್ತದೆ. ಒಂದು ಕಡೆ ಗ್ರಾಮವು ಅರಬ್ಬೀ ಸಮುದ್ರದಿಂದ ಆವೃತವಾಗಿದ್ದರೆ ಇನ್ನೊಂದು ಬದಿಯಲ್ಲಿ ಸೌಪರ್ಣಿಕಾ ನದಿಯು ಶಾಂತವಾಗಿ ಹರಿಯುತ್ತಿರುತ್ತದೆ. ಮಾನ್ಸೂನ್ ಸಮಯದಲ್ಲಿ ಮರವಂತೆಯ ಬೀಚ್ ರಸ್ತೆಯಲ್ಲಿ ನಡೆಯುವುದು ಅತ್ಯುತ್ತಮ ಅನುಭವವನ್ನು ಕೊಡುವುದು.


3. ಆಗುಂಬೆ

ಆಗುಂಬೆಯು ಹಲವಾರು ಜಲಪಾತಗಳು, ನೈಸರ್ಗಿಕ ವೈಭವ ಮತ್ತು ಶ್ರೀಮಂತ ಜೀವವೈವಿಧ್ಯಕ್ಕೆ ಹೆಸರುವಾಸಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಎತ್ತರದ ಗ್ರಾಮವನ್ನು ‘ದಕ್ಷಿಣದ ಚಿರಾಪುಂಜಿ’ ಎಂದೂ ಕರೆಯುತ್ತಾರೆ. ಯಾಕೆಂದರೆ ಇದು ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆ ಬೀಳುವ ಸ್ಥಳವಾಗಿದೆ. ಅನೇಕ ಜಲಪಾತಗಳಾದ ಒನಕೆ ಅಬ್ಬಿ, ಜೋಗಿ ಗುಂಡಿ ಜಲಪಾತ ಮತ್ತು ಬರ್ಕಾನ ಜಲಪಾತಗಳು ಕರ್ನಾಟಕದಲ್ಲಿ ಮಾನ್ಸೂನ್ ಸಮಯದಲ್ಲಿ ಅದ್ಭುತಗಳಾಗಿ ರೂಪಾಂತರಗೊಳ್ಳುತ್ತವೆ. ಹಚ್ಚ ಹಸಿರಿನ ಮಳೆಕಾಡುಗಳಲ್ಲಿನ ಹಲವಾರು ಟ್ರೆಕ್ಕಿಂಗ್ ಟ್ರೇಲ್‌ಗಳು ಈ ಸ್ಥಳವನ್ನು ಒದಗಿಸುವ ಇತರ ಆಹ್ಲಾದಕರ ಸಂಗತಿಯಾಗಿದೆ.


4. ಬೀದರ್ ಕೋಟೆ

ಒಂದು ಕಾಲದಲ್ಲಿ ದಕ್ಷಿಣದ ರಾಜಧಾನಿಯಾಗಿದ್ದು 98 ಸ್ಮಾರಕಗಳನ್ನು ಹೊಂದಿರುವ ಜನಪ್ರಿಯ ತಾಣವಾಗಿದೆ. ಬೆಟ್ಟದ ತುದಿಯಲ್ಲಿ ನೆಲೆಸಿರುವ ‘ಸಿಟಿ ಆಫ್ ವಿಸ್ಪರಿಂಗ್ ಸ್ಮಾರಕಗಳು’ ಕರ್ನಾಟಕದಲ್ಲಿ ಮಾನ್ಸೂನ್ ಸಮಯದಲ್ಲಿ ಭೇಟಿ ನೀಡಲು ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದೆ. 500 ವರ್ಷಗಳಷ್ಟು ಹಳೆಯದಾದ ಬೀದರ್ ಕೋಟೆಯು ಭಾರತದ ಪುರಾತತ್ತ್ವ ಭೂಪಟದಲ್ಲಿ ಪ್ರಮುಖ ಸ್ಥಾನವನ್ನು ಗಳಿಸಿದೆ.


5. ಕೊಡಗು

ಮಳೆಗಾಲದಲ್ಲಿ ಭೇಟಿ ನೀಡಲು ಅತ್ಯುತ್ತಮ ತಾಣ ಕೊಡಗು. ದಟ್ಟವಾದ ಮಂಜಿನ ವಾತಾವರಣದಲ್ಲಿ ಹಸಿರು ಕಾಫಿ ತೋಟಗಳು ತುಂಬಾ ಆಕರ್ಷಣೀಯವಾಗಿ ಕಾಣುತ್ತದೆ. ಮಡಿಕೇರಿ ಪಟ್ಟಣದ ಅತ್ಯುನ್ನತ ಸ್ಥಳವಾದ ರಾಜಾ ಸೀಟ್‌ನಿಂದ ಮಳೆಯಲ್ಲಿ ಮುಳುಗಿರುವ ನಗರ ಸೌಂದರ್ಯವನ್ನು ವೀಕ್ಷಿಸುವುದು ರೋಮಾಂಚಕ ಅನುಭವವನ್ನು ಕೊಡುತ್ತದೆ.

ಕೂರ್ಗ್‌ನ ಮತ್ತೊಂದು ಪ್ರಸಿದ್ಧ ಪ್ರವಾಸಿ ಆಕರ್ಷಣೆಯಾಗಿರುವ ಅಬ್ಬೆ ಜಲಪಾತ. ಜಲಪಾತದ ಸೌಂದರ್ಯ ಸವಿಯುತ್ತಾ ಬಿಸಿಬಿಸಿ ಕಪ್ ಕಾಫಿ ಸೇವನೆ ಮಾಡುತ್ತ ಕೂರ್ಗ್‌ ನಲ್ಲಿ ಬೈಕ್ ಸವಾರಿ ಮಾಡುವುದು ಅತ್ಯಂತ ಅದ್ಭುತವಾದ ಅನುಭವವನ್ನು ಕೊಡುತ್ತದೆ.


6. ದಾಂಡೇಲಿ

ಕರ್ನಾಟಕದಲ್ಲಿ ಮಾನ್ಸೂನ್ ಸಮಯದಲ್ಲಿ ಸಸ್ಯ ಮತ್ತು ಪ್ರಾಣಿಗಳ ಸೌಂದರ್ಯ ಸವಿಯಲು ದಾಂಡೇಲಿಯ ಕಾಡುಗಳು ಅತ್ಯುತ್ತಮ ಸ್ಥಳಗಳಲ್ಲಿ ಒಂದಾಗಿದೆ. ದಾಂಡೇಲಿ ವನ್ಯಜೀವಿ ಅಭಯಾರಣ್ಯವು ಕರ್ನಾಟಕದ ಎರಡನೇ ಅತಿ ದೊಡ್ಡ ವನ್ಯಜೀವಿ ಅಭಯಾರಣ್ಯವಾಗಿದೆ. ಮಳೆಗಾಲದಲ್ಲಿ ಅನೇಕ ಸರೀಸೃಪಗಳು, ಪಕ್ಷಿಗಳು ಮತ್ತು ಕಾಡು ಪ್ರಾಣಿಗಳ ಆವಾಸಸ್ಥಾನವಾಗಿದೆ. ಕಪ್ಪು ಪ್ಯಾಂಥರ್, ಚಿರತೆ ಅಥವಾ ಆನೆಯನ್ನು ಇಲ್ಲಿ ಕಾಣಬಹುದು.


7. ಮೈಸೂರು

ಮಳೆಗಾಲದಲ್ಲಿ ಪ್ರವಾಸ ಹೊರಡುವ ಯೋಚನೆ ಇದ್ದರೆ ಮೈಸೂರನ್ನು ಆಯ್ಕೆ ಮಾಡಬಹುದು. ವಾರಾಂತ್ಯವನ್ನು ಮೈಸೂರಿನ ಐಷಾರಾಮಿ ರೆಸಾರ್ಟ್‌ನಲ್ಲಿ ಕಳೆಯುವುದು ಅದ್ಭುತ ಆಯ್ಕೆಯಾಗಿದೆ. ಹೊರಗೆ ಮಳೆ ಸುರಿಯುವಾಗ ಬಲಿನೀಸ್, ಸ್ವೀಡಿಷ್ ಮತ್ತು ಆಯುರ್ವೇದಿಕ್ ಸ್ಪಾ ಚಿಕಿತ್ಸೆಗಳ ಆನಂದ ಸವಿಯಬಹುದು.


8. ನಂದಿ ಹಿಲ್‌

ಮಾನ್ಸೂನ್ ಸಮಯದಲ್ಲಿ ನಂದಿ ಬೆಟ್ಟದಲ್ಲಿ ಮಂತ್ರಮುಗ್ಧಗೊಳಿಸುವ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದು. ನಯನಮನೋಹರ ಸೂರ್ಯಾಸ್ತ, ಸೂರ್ಯೋದಯದ ದೃಶ್ಯಾವಳಿಗಳು ಮನದಲ್ಲಿ ವರ್ಣಚಿತ್ರದಂತೆ ಅಚ್ಚಳಿಯದೆ ಉಳಿಯುವುದು. ಮಳೆಗಾಲದಲ್ಲಿ ಬೈಕ್ ಸವಾರರು ಬೆಟ್ಟಗಳ ಮೇಲೆ ಹೋಗಿ ಪ್ರಕೃತಿಯ ಸೌಂದರ್ಯ ಸವಿಯಬಹುದು.


9. ಸ್ಕಂದಗಿರಿ ಬೆಟ್ಟ

ಸ್ಕಂದಗಿರಿ ಬೆಟ್ಟಗಳ ಶಿಖರದಲ್ಲಿ ನಿಂತಿರುವಾಗ ಮೋಡಗಳ ಮೇಲೆ ಏರಿದಂತ ಅನುಭವ ಕೊಡುತ್ತದೆ. ಆಗಸ್ಟ್‌ನಲ್ಲಿ ಇಲ್ಲಿ ಚಾರಣಕ್ಕೆ ಹೋಗಲು ಸೂಕ್ತ ಸಮಯ. ಹತ್ತಿಯಂತೆ ಕಾಣುವ ಮೋಡಗಳು ಅಲೌಕಿಕವಾಗಿ ಕಾಣುತ್ತವೆ. ಸ್ಕಂದಗಿರಿಯಿಂದ ಸೂರ್ಯೋದಯದ ಸುಂದರ ದೃಶ್ಯವನ್ನು ಕಣ್ತುಂಬಿಕೊಳ್ಳಬಹುದು. ರಾತ್ರಿ ಆಕಾಶದ ಅದ್ಭುತಗಳ ಅಡಿಯಲ್ಲಿ ಕ್ಯಾಂಪಿಂಗ್ ಮಾಡುವುದು ಉತ್ತಮ ಅನುಭವವನ್ನು ನೀಡುತ್ತದೆ.


10. ಗೋಕರ್ಣ

ಹಿಪ್ಪಿಗಳ ಸ್ವರ್ಗ ಗೋಕರ್ಣದ ಕಡಲತೀರಗಳು ರಮಣೀಯ ದೃಶ್ಯಗಳಿಗೆ ಹೆಸರುವಾಸಿಯಾಗಿದೆ. ಒಂದು ಕಡೆ ಕಲ್ಲಿನ ಪರ್ವತ ಮತ್ತು ಇನ್ನೊಂದು ಕಡೆ ಅರೇಬಿಯನ್ ಸಮುದ್ರದೊಂದಿಗೆ ಇರುವ ಧಾರ್ಮಿಕ ಪಟ್ಟಣವು ಅತ್ಯಂತ ಸುಂದರವಾದ ಭೂದೃಶ್ಯಗಳನ್ನು ನೀಡುತ್ತದೆ.

11. ಜೋಗ ಜಲಪಾತ

ಮಳೆಗಾಲದಲ್ಲಿ ತುಂಬಿ ಹರಿಯುವ ಜೋಗ ಜಲಪಾತವು ಕನಸಿನ ಪ್ರಪಂಚವನ್ನು ಮಳೆಗಾಲದಲ್ಲಿ ತೋರಿಸುತ್ತದೆ. ಮಾನ್ಸೂನ್ ಸಮಯದಲ್ಲಿ ಆಗೊಮ್ಮೆ ಈಗೊಮ್ಮೆ ಮಳೆಬಿಲ್ಲುಗಳೊಂದಿಗೆ ಭವ್ಯವಾದ ಪ್ರಕೃತಿಯನ್ನು ಇಲ್ಲಿ ಆನಂದಿಸಬಹುದು. ಶರಾವತಿ ನದಿಯಿಂದ ರೂಪುಗೊಂಡಿರುವ ಜಲಪಾತವು ಕರ್ನಾಟಕದ ಅತ್ಯಂತ ಪ್ರಸಿದ್ಧವಾದ ಜಲಪಾತಗಳಲ್ಲಿ ಒಂದಾಗಿದೆ ಮತ್ತು ಭಾರತದ ಅತಿ ಎತ್ತರದ ಜಲಪಾತಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: Assam Tour: ಅಸ್ಸಾಂನ ಪೆಲ್ಲಿಂಗ್‌ನಲ್ಲಿ ಮೋಡಿ ಮಾಡುವ 8 ಆಕರ್ಷಕ ಸಂಗತಿಗಳಿವು


12. ಕೆಮ್ಮಣ್ಣುಗುಂಡಿ

ಕರ್ನಾಟಕದ ಪ್ರಸಿದ್ಧ ಗಿರಿಧಾಮಗಳಲ್ಲಿ ಒಂದಾಗಿರುವ ಕೆಮ್ಮಣ್ಣುಗುಂಡಿ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಇಲ್ಲಿ ನೋಡುವಂತ ಹಲವಾರು ಭೂದೃಶ್ಯಗಳು ಮತ್ತು ಸೊಂಪಾದ ಪ್ರದೇಶಗಳಿವೆ. ಕೆಮ್ಮನಗುಂಡಿಯಲ್ಲಿರುವ ಇತರ ಕೆಲವು ಪ್ರಮುಖ ಆಕರ್ಷಣೆಗಳೆಂದರೆ ಹೆಬ್ಬೆ ಜಲಪಾತ, ಶಾಂತಿ ಜಲಪಾತ, ಝೆಡ್ ಪಾಯಿಂಟ್ ಮತ್ತು ಅತ್ಯಂತ ಪ್ರಸಿದ್ಧವಾದ ಬಾಬಾ ಬುಡನ್ ಗಿರಿ ಮತ್ತು ಮುಳ್ಳಯ್ಯನಗಿರಿ ಬೆಟ್ಟಗಳು.


13. ಕುದುರೆಮುಖ

ಕುದುರೆಮುಖ ಗಿರಿಧಾಮ ಮಾನ್ಸೂನ್ ಸಮಯದಲ್ಲಿ ಉತ್ತಮ ಅನುಭವವನ್ನು ನೀಡುತ್ತದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿರುವ ಶೋಲಾ ಹುಲ್ಲುಗಾವಲು ಮತ್ತು ಕಾಡುಗಳು ಮಾನ್ಸೂನ್ ಸಮಯದಲ್ಲಿ ಭೇಟಿ ನೀಡಲು ಅತ್ಯಂತ ಆಸಕ್ತಿದಾಯಕ ತಾಣಗಳಾಗಿವೆ. ಹನುಮಾನ್ ಗುಂಡಿ ಮತ್ತು ಕದಂಬಿ ಜಲಪಾತ ಇಲ್ಲಿನ ಎರಡು ಪ್ರಮುಖ ತಾಣಗಳಾಗಿವೆ. ಮಾನ್ಸೂನ್ ಸಮಯದಲ್ಲಿ ಕರ್ನಾಟಕದಲ್ಲಿ ಭೇಟಿ ನೀಡಲು ಇದು ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದಾಗಿದೆ.


14. ಬಾಲೂರು

ಚಿಕ್ಕಮಗಳೂರು ಜಿಲ್ಲೆಯ ಒಂದು ಗ್ರಾಮವಾದ ಬಾಲೂರು ಮಾನ್ಸೂನ್ ಋತುವಿನಲ್ಲಿ ಭೇಟಿ ನೀಡಲು ಅತ್ಯುತ್ತಮ ತಾಣವಾಗಿದೆ. ವಿಶಾಲವಾದ ಕಾಫಿ ಎಸ್ಟೇಟ್ ಗಳು ಭೂಮಿಯ ಮೇಲಿನ ಅತ್ಯಂತ ಪರಿಶುದ್ಧ ಸ್ಥಳ ಎಂಬಂತೆ ಭಾಸವಾಗುತ್ತದೆ. ಚಾರ್ಮಾಡಿ ಘಾಟ್, ಚಾರ್ಮಾಡಿ ಜಲಪಾತ ಮತ್ತು ಕೊಡೆ ಕಲ್ಲು ಇಲ್ಲಿನ ಅದ್ಭುತ ಸ್ಥಳಗಳಾಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

Karnataka Weather Forecast : ರಾಜ್ಯಾದ್ಯಂತ ಕಳೆದೊಂದು ವಾರದಿಂದ ಮಳೆಯು (Rain news) ಅಬ್ಬರಿಸುತ್ತಿದ್ದು, ಏಳು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಬೆಂಗಳೂರಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

VISTARANEWS.COM


on

By

karnataka Weather Forecast Rain
Koo

ಬೆಂಗಳೂರು: ಜು.5ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದ್ದು, ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಮಧ್ಯಮ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇತ್ತ ಉತ್ತರ ಒಳನಾಡಿನದಲ್ಲಿ ಸಾಕಷ್ಟು ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಆದರೆ ಬೀದರ್, ಕಲಬುರಗಿ, ಬೆಳಗಾವಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಸಹಿತ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Drowned In Water: ಕಾಲು ಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋದ ಮಹಿಳೆ!

Drowned In Water: ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಕಾಲು ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಹೊಸನಗರದಲ್ಲಿ ಗುರುವಾರ ಜರುಗಿದೆ. ಹೊಸನಗರ ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ.

VISTARANEWS.COM


on

Drowned In Water A woman died while crossing the kalu sanka
Koo

ಹೊಸನಗರ: ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಕಾಲು ಸಂಕ ದಾಟಲು ಹೋದಾಗ ಕೊಚ್ಚಿಕೊಂಡು (Drowned In Water) ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ.

ಇದನ್ನೂ ಓದಿ: Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

ಮೃತ ಮಹಿಳೆ ಶಶಿಕಲಾ ಬೆಳಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ ಸಂದರ್ಭದಲ್ಲಿ ಜಮೀನಿನ ಹತ್ತಿರದ ಸಂಕದಿಂದ ಒಂದು ಕಿಮೀ ದೂರದ ದುಮುಕದ ಗದ್ಧೆ ಕಾಲು ಸೇತುವೆ ಹತ್ತಿರ ಹಳ್ಳದಲ್ಲಿ ಮೃತದೇಹವೊಂದು ಮರಕ್ಕೆ ಸಿಕ್ಕಿ ಹಾಕಿರುವುದು ಕಂಡು ಬಂದಿದೆ. ಪರಿಶೀಲಿಸಿದಾಗ ಮೃತ ಶಶಿಕಲಾರ ಮೃತದೇಹ ಎಂದು ಗೊತ್ತಾಗಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

ಉಡುಪಿ: ಕರಾವಳಿಯಲ್ಲಿ ಭಾರಿ ಮಳೆಗೆ (Karnataka Weather) ಮೊದಲ (Rain News) ಬಲಿಯಾಗಿದೆ. ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.

ಇದನ್ನೂ ಓದಿ: Viral Video: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading

ಉತ್ತರ ಕನ್ನಡ

Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

Uttara Kannada News: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳು ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಗೆ ರಾಜ್ಯ ಸರ್ಕಾರದಿಂದ 2 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಕಳುಹಿಸುವಂತೆ ಸೂಚಿಸಲಾಗಿದೆ ಎಂದು ಡಿಸಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

VISTARANEWS.COM


on

Heavy rain in Uttara Kannada district district NDRF team for rescue says DC Gangubai Manakar
Koo

ಕಾರವಾರ: ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ತಗ್ಗು ಪ್ರದೇಶದಲ್ಲಿರುವವರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಲ್ಲಿನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ, ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು, ಜಿಲ್ಲೆಯಲ್ಲಿ ಇನ್ನೂ 3 ರಿಂದ 4 ದಿನಗಳು ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಗೆ ರಾಜ್ಯ ಸರ್ಕಾರದಿಂದ 2 ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡಗಳನ್ನು ಕಳುಹಿಸುವಂತೆ ಕೋರಿದ್ದು, ಈಗಾಗಲೇ ಈ ತಂಡಗಳು ಬೆಂಗಳೂರಿನಿಂದ ಹೊರಟ್ಟಿದ್ದು ಶುಕ್ರವಾರ ಈ ತಂಡಗಳು ಜಿಲ್ಲೆಗೆ (Uttara Kannada News) ಆಗಮಿಸಲಿವೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

ಈ ಎನ್.ಡಿ.ಆರ್.ಎಫ್‌. ನ ಪ್ರತಿ ತಂಡದಲ್ಲಿ ತಲಾ 25 ಮಂದಿ ರಕ್ಷಣಾ ಸಿಬ್ಬಂದಿಗಳಿರಲಿದ್ದು, ಯಾವುದೇ ರೀತಿಯ ತುರ್ತು ಕಾರ್ಯಚರಣೆಯನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ಅಗತ್ಯ ರಕ್ಷಣಾ ಸಾಧನಗಳೊಂದಿಗೆ ಬರುವ ಈ ತಂಡವನ್ನು ಕಾರವಾರ, ಕುಮಟಾ ಮತ್ತು ಅಂಕೋಲಾ ಭಾಗದಲ್ಲಿ ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ಹೊನ್ನಾವರ, ಕುಮಟಾ ಮತ್ತು ಅಂಕೋಲಾ ತಾಲೂಕು ವ್ಯಾಪ್ತಿಯಲ್ಲಿನ ವಿವಿಧ ಗ್ರಾಮಗಳ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದು, ಅವರಿಗೆ ಸಮೀಪದ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿದೆ. ಜಿಲ್ಲೆಯಲ್ಲಿ ಹೊನ್ನಾವರದಲ್ಲಿ 4, ಕುಮಟಾದಲ್ಲಿ 2 ಮತ್ತು ಅಂಕೋಲಾದಲ್ಲಿ 1 ಸೇರಿದಂತೆ ಒಟ್ಟು 7 ಕಾಳಜಿ ಕೆಂದ್ರಗಳನ್ನು ತೆರೆದಿದ್ದು ಈ ಕೇಂದ್ರಗಳಲ್ಲಿ 230ಕ್ಕೂ ಅಧಿಕ ಮಂದಿಗೆ ಆಶ್ರಯ ನೀಡಲಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ತಾಲೂಕುಗಳ ತಹಸೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ ಊಟದ ವ್ಯವಸ್ಥೆ ಮತ್ತು ರಾತ್ರಿ ತಂಗಲು ಅಗತ್ಯವಿರುವ ಎಲ್ಲಾ ಸೌಕರ್ಯಗಳನ್ನು ಒದಗಿಸಲಾಗಿದ್ದು, ವೈದ್ಯರ ತಂಡದಿಂದ ಆರೋಗ್ಯ ಪರಿಶೀಲನೆ ಮತ್ತು ಅಗತ್ಯವಿರುವ ಔಷಧ ಸೌಲಭ್ಯವನ್ನು ಒದಗಿಸಲಾಗಿದೆ. ವ್ಯಾಪಕ ಮಳೆಯಾಗುತ್ತಿರುವ ಪ್ರದೇಶಗಳು ಸೇರಿದಂತೆ ಜಿಲ್ಲೆಯಾದ್ಯಂತ ಕಂದಾಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು 24*7 ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯ ನೆರವು ಒದಗಿಸುವಂತೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅಘನಾಶಿನಿ ಮತ್ತು ಶರಾವತಿ ನದಿಗಳು ತುಂಬಿ ಹರಿಯುತ್ತಿದ್ದು ಈ ಭಾಗದಲ್ಲಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿದ್ದು, ಈ ಪ್ರದೇಶಗಳ ಮೇಲೆ ನಿರಂತರ ನಿಗಾ ವಹಿಸಲಾಗಿದೆ. ಕಾಳಿ ನದಿಯಲ್ಲಿನ ಅಪ್ಪರ್ ಕಾನೇರಿ ಅಣೆಕಟ್ಟೆಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಈಗಾಗಲೇ ಸೂಚಿಸಲಾಗಿದೆ.

ಇದನ್ನೂ ಓದಿ: Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಜಾನುವಾರು ಪ್ರಾಣ ಹಾನಿ ತಡೆಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077ಗೆ ಹಾಗೂ ಮೊಬೈಲ್ ಸಂಖ್ಯೆ 94835 11015 ಕರೆ, ಮೆಸೇಜ್, ವಾಟ್ಸಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.

Continue Reading

ಮಳೆ

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

Karnataka Weather Forecast: ಭಾರಿ ಮಳೆಗೆ (Rain News) ಗುಡ್ಡ ಕುಸಿದಿದೆ. ಪರಿಣಾಮ ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಮೂಲಕ ಕರಾವಳಿಯಲ್ಲಿ ಮಳೆಗೆ ಮೊದಲ ಬಲಿಯಾಗಿದೆ.

VISTARANEWS.COM


on

By

karnataka Weather Forecast
Koo

ಉಡುಪಿ: ಕರಾವಳಿಯಲ್ಲಿ ಭಾರಿ ಮಳೆಗೆ (Karnataka Weather) ಮೊದಲ (Rain News) ಬಲಿಯಾಗಿದೆ. ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.

ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಆಗುಂಬೆಯಲ್ಲಿ 25 ಸೆಂ.ಮೀ ಮಳೆ ದಾಖಲು

ನೈರುತ್ಯ ಮಾನ್ಸೂನ್ ಕರಾವಳಿಯಲ್ಲಿ ಸಕ್ರಿಯವಾಗಿದ್ದರೆ, ಒಳಭಾಗದಲ್ಲಿ ಸಾಮಾನ್ಯವಾಗಿತ್ತು. ಆಗುಂಬೆ (ಶಿವಮೊಗ್ಗ ಜಿಲ್ಲೆ) 25, ಗೇರ್ಸೊಪ್ಪ (ಉತ್ತರ ಕನ್ನಡ ಜಿಲ್ಲೆ) 24, ಸಿದ್ದಾಪುರ (ಉಡುಪಿ ಜಿಲ್ಲೆ) 23, ಕಮ್ಮರಡಿ (ಚಿಕ್ಕಮಗಳೂರು) 20 ಸೆಂ.ಮೀ ಮಳೆಯಾಗಿತ್ತು. ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ) 19, ಕದ್ರಾ (ಉತ್ತರ ಕನ್ನಡ ಜಿಲ್ಲೆ) 15, ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ) 15, ಶೃಂಗೇರಿ (ಜಿಲ್ಲೆ ಚಿಕ್ಕಮಗಳೂರು) 15, ಕುಂದಾಪುರ (ಉಡುಪಿ ಜಿಲ್ಲೆ) 13, ಮಂಕಿ (ಉತ್ತರ ಕನ್ನಡ ಜಿಲ್ಲೆ) 12 ಸೆಂ.ಮೀ ಮಳೆಯಾಗಿತ್ತು.

ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು

ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತ ರಾತ್ರಿಯಿಡೀ ಸುರಿದ ಮಳೆಗೆ ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಾಳೆ ಗದ್ದೆ ಬಿಳ್ಳೂರು ಗ್ರಾಮದಲ್ಲಿ ಬಿಳ್ಳೂರು- ಮುಲ್ಲರ ಹಳ್ಳಿ ಸೇರಿ ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ನೀರು ನದಿಯಂತೆ ಉಕ್ಕಿ ಹರಿಯುತ್ತಿದೆ. ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಗ್ರಾಮಸ್ಥರು ಪರದಾಟ ಅನುಭವಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.

ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಶೃಂಗೇರಿ ಶಾರದಾಂಭೆ ತಟದಲ್ಲಿ ತುಂಗಾ ನದಿ ದೊಡ್ಡ ಪ್ರಮಾಣದಲ್ಲಿ ಹರಿಯುತ್ತಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗುವ ಸಾಧ್ಯತೆ ಇದೆ. ಇತ್ತ ಅಪಾಯದ ಮಟ್ಟ ಮೀರಿದ ಭದ್ರಾ ನದಿಯಿಂದಾಗಿ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತ ತಲುಪಿದೆ.

ಹೆಬ್ಬಾಳೆ ಸೇತುವೆಯ ಮೇಲ್ಪದರಕ್ಕೆ ಭದ್ರಾ ನೀರು ಅಪ್ಪಳಿಸುತ್ತಿದೆ. ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗಲಿದೆ. ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಪ್ರವಾಸಿಗರು ಹಾಗೂ ಸ್ಥಳೀಯರ ಓಡಾಟಕ್ಕೆ ತಡೆಹಿಡಿಯಲಾಗಿದೆ. ಯಾವುದೇ ಕ್ಷಣದಲ್ಲಾದರೂ ಸೇತುವೆ ಮೇಲೆ ನೀರು ಉಕ್ಕುವ ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿಯೇ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ಉದ್ಯೋಗ2 mins ago

Job Alert: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 2,700 ಅಪ್ರೆಂಟಿಸ್ ಶಿಪ್ ಹುದ್ದೆ; ಆಯ್ಕೆಯಾಗಲು ಏನು ಮಾಡಬೇಕು? ವಿಸ್ತೃತ ಮಾಹಿತಿ

Actor Darshan SIM Secret Revealed investigation start
ಸ್ಯಾಂಡಲ್ ವುಡ್3 mins ago

Actor Darshan: ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್; ಆಪ್ತರಿಗೆ ತಟ್ಟಿದೆ ವಿಚಾರಣೆ ಬಿಸಿ!

Brain-Eating Mmoeba
ಆರೋಗ್ಯ10 mins ago

Brain-Eating Amoeba: ಮೆದುಳು ತಿನ್ನುವ ಅಮೀಬಾಕ್ಕೆ ಮತ್ತೊಂದು ಬಲಿ; 2 ತಿಂಗಳ ಅಂತರದಲ್ಲಿ 3ನೇ ಪ್ರಕರಣ

Self Harming in bengaluru
ಬೆಂಗಳೂರು23 mins ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

salary hike cm siddaramaiah
ಪ್ರಮುಖ ಸುದ್ದಿ24 mins ago

Salary Hike: ಸರ್ಕಾರಿ ನೌಕರರ ವೇತನ ಏರಿಕೆ ಸದ್ಯಕ್ಕಿಲ್ಲ: ನೌಕರರ ಸಂಬಳ ನುಂಗಿದ ʼಗ್ಯಾರಂಟಿʼ!

Chaithra J Achar Kittale Roopanthara Raj B Shetty out
ಸ್ಯಾಂಡಲ್ ವುಡ್44 mins ago

Chaithra J Achar: ʻರೂಪಾಂತರʼ ಸಿನಿಮಾದ ಹಾಡು ರಿಲೀಸ್‌; ಇಳಕಲ್‌ ಸೀರೆಯಲ್ಲಿ ಮಿಂಚಿದ ಚೈತ್ರಾ ಆಚಾರ್!

UK Election
ವಿದೇಶ47 mins ago

UK Election: ಯುಕೆ ಎಲೆಕ್ಷನ್‌ನಲ್ಲಿ ಹೀನಾಯ ಸೋಲು; ರಿಶಿ ಸುನಕ್‌ ಫಸ್ಟ್‌ ರಿಯಾಕ್ಷನ್‌

Team India
ಕ್ರೀಡೆ1 hour ago

Team India: ಟೀಮ್​ ಇಂಡಿಯಾ ಬಳಿ ಇರುವುದು ನಕಲಿ ವಿಶ್ವಕಪ್​ ಟ್ರೋಫಿ; ಅಸಲಿ ಟ್ರೋಫಿ ಎಲ್ಲಿದೆ?

Actor Darshan very simple person Yamuna Srinidhi
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್‌ ಅತ್ಯಂತ ಸರಳ, ದೇವತಾ ಮನುಷ್ಯ; ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದ ಖ್ಯಾತ ನಟಿ!  

Job Alert
ಉದ್ಯೋಗ1 hour ago

Job Alert: ಇಂಡಿಯನ್‌ ಹೈವೇ ಮ್ಯಾನೇಜ್‌ಮೆಂಟ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಇಂದೇ ಅಪ್ಲೈ ಮಾಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast Rain
ಮಳೆ5 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ17 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ18 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ19 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ21 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ22 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ23 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ24 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ3 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ4 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌