Rain News : ವಿಜಯವಾಡದಲ್ಲಿ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ; ಕಲಬುರಗಿಯಲ್ಲೂ ಅಬ್ಬರ - Vistara News

ಮಳೆ

Rain News : ವಿಜಯವಾಡದಲ್ಲಿ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ; ಕಲಬುರಗಿಯಲ್ಲೂ ಅಬ್ಬರ

Rain News : ಪಕ್ಕದ ವಿಜಯವಾಡದಲ್ಲಿ ಮಳೆಯು ಅಬ್ಬರಿಸುತ್ತಿದೆ. ಕಲಬುರಗಿ, ಯಾದಗಿರಿಯಲ್ಲೂ ಮಳೆಯಾಗುತ್ತಿದ್ದು ಅವಾಂತರವೇ ಸೃಷ್ಟಿಯಾಗಿದೆ. ರಸ್ತೆ ಸಂಪರ್ಕ ಕಡಿತಗೊಂಡು, ಮನೆಯೊಳಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು.

VISTARANEWS.COM


on

Rain News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ಆಂಧ್ರಪ್ರದೇಶದ ವಿಜಯವಾಡದಲ್ಲಿ (Rain News) ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಗಳೆಲ್ಲ ಜಲಾವೃತಗೊಂಡಿದೆ. ವ್ಯಾಪಕ ಮಳೆಯಿಂದ ರಸ್ತೆಗಳಲ್ಲಿ ರಭಸವಾಗಿ ನೀರು ತುಂಬಿ ಹರಿಯುತ್ತಿದ್ದು, ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆ. ಕೂಡಲೇ ಸ್ಥಳದಲ್ಲಿದ್ದವರು ಹಗ್ಗ ಕೊಟ್ಟು ಯುವಕನನ್ನು ಬಚವ್‌ ಮಾಡಿದ್ದಾರೆ.

ಕೆಲ ಗಂಟೆಗಳ ಕಾಲ ದ್ವಿಚಕ್ರ ವಾಹನಗಳು ರಸ್ತೆಗೆ ಬರದಂತೆ, ಜನರು ರಸ್ತೆಗಿಳಿಯದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ನಗರದ ಎಲ್ಲಾ ಪ್ರಮುಖ ರಸ್ತೆಗಳು ಜಲಾವೃತವಾಗಿವೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ದ್ವಿಚಕ್ರ ವಾಹನಗಳನ್ನು ಓಡಿಸದಂತೆ ಪೊಲೀಸರು ಆದೇಶಿಸಿದ್ದು, ರಾಷ್ಟ್ರೀಯ ಹೆದ್ದಾರಿಗಳಿಂದ ಸರ್ವಿಸ್ ರಸ್ತೆಗಳಲ್ಲಿ ವಾಹನಗಳು ಓಡಾಡುತ್ತಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ಮೊಣಕಾಲಿನಷ್ಟು ನೀರು ನಿಂತು ಅವಾಂತರವೇ ಸೃಷ್ಟಿಯಾಗಿದೆ.

ನಗರ ಪ್ರವೇಶಿಸುವ ಎಲ್ಲ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಪೂರ್ವಾನುಮತಿ ಇಲ್ಲದೆ ನಗರದೊಳಗೆ ಬೆಂಗಾವಲು ವಾಹನಗಳನ್ನು ಬಿಡದಂತೆ ಸೂಚನೆ ನೀಡಲಾಗಿದೆ. ಮೊಘಲ್ ರಾಜ್ ಪುರಂನಲ್ಲಿ ಬಂಡೆಗಳು ಮುರಿದು ಬಿದ್ದಿವೆ. ಪ್ರಮುಖ ಬೀದಿಗಳಲ್ಲಿ ಅಗ್ನಿಶಾಮಕ ವಾಹನಗಳ ಮೂಲಕ ನೀರು ತೆಗೆಯುವ ಪ್ರಯತ್ನ ಮಾಡುತ್ತಿದೆ. ಹಳೇ ಪೇಟೆಯಲ್ಲಿನ ಹೊರಹರಿವಿನ ಚರಂಡಿ ತುಂಬಿ ಹರಿಯುತ್ತಿರುವುದರಿಂದ ಮನೆಗಳಿಗೆ ನೀರು ನುಗ್ಗಿದೆ. ನಿಡಮನೂರಿನಿಂದ ಟ್ಯಾಂಕ್ಸಾಳದವರೆಗಿನ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಮುಳುಗಡೆಯಾಗಿದೆ.

ಇದನ್ನೂ ಓದಿ: Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ

ಕಲಬುರಗಿಯಲ್ಲಿ ಮಳೆ ಅಬ್ಬರಕ್ಕೆ ಜನರು ಕಂಗಾಲು

ಇತ್ತ ಕಲಬುರಗಿಯಲ್ಲಿ ರಾತ್ರಿಯಿಡಿ ಸುರಿದ ಧಾರಾಕರ ಮಳೆಗೆ ಸೇಡಂ ತಾಲೂಕಿನ ಹೊಸಳ್ಳಿ ಗ್ರಾಮ ಸಂಪರ್ಕ ಕಡಿತಗೊಂಡಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಹಲವು ಭಾಗದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಪಿಡಿಎ ಕಾಲೇಜು ಬಳಿ ಇರುವ 10ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿತ್ತು.

ಚಿಂಚೊಳ್ಳಿ ತಾಲೂಕಿನಾದ್ಯಂತವು ವರ್ಷಧಾರೆಯಿಂದಾಗಿ ಚಂದ್ರಂಪಳ್ಳಿ ಜಲಾಶಯ ತುಂಬಿ ಹರಿಯುತ್ತಿದೆ. ಚಂದ್ರಂಪಳ್ಳಿ ಜಲಾಶಯದಿಂದ ನೀರು ಬಿಡುಗಡೆಯಿಂದಾಗಿ ಮಿರಿಯಾಣ ಹಾಗೂ ತೆಲಂಗಾಣದ ತಾಂಡೂರು ರಸ್ತೆ ಜಲಾವೃತಗೊಂಡು, ಸಂಪರ್ಕ ಕಡಿತಗೊಂಡಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ದಿಗ್ಗಾವ್ ಗ್ರಾಮಕ್ಕೆ ಜಲದಿಗ್ಬಂಧನ ಹಾಕಲಾಗಿದೆ.

ಮಳೆಯ ಆರ್ಭಟಕ್ಕೆ ಹಲವು ಹಳ್ಳಕೊಳ್ಳಗಳು ಭರ್ತಿಯಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ‌ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಇರುವ ಚಿಕ್ಕನಿಂಗದಳ್ಳಿ ಗ್ರಾಮದ ಕೆರೆಭರ್ತಿಯಾಗಿದೆ. ಕುಂಚಾವರಂ ವನ್ಯಜೀವಿ ಧಾಮದ ಕೆರೆ ತುಂಬಿ ಹರಿಯುತ್ತಿದೆ. ಇನ್ನು ತುಂಬಿ ಹರಿಯುತ್ತಿರುವ ಕಾಗಿಣ ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರಿ ಪ್ರಮಾಣ ಹೆಚ್ಚುತ್ತಿದೆ. ತುಂಬಿ ಹರಿಯುತ್ತಿರುವ ನದಿ ದಡದಲ್ಲೆ ಚಾಲಕರು ಲಾರಿ ತೊಳೆಯುತ್ತಿರುವ ದೃಶ್ಯ ಕಂಡು ಬಂತು. ಮುಂಜಾಗ್ರತಾ ಕ್ರಮವಾಗಿ ಸೇತುವೆ ಬಳಿ ಪೋಲಿಸ್ ಭದ್ರತೆ ವಹಿಸಲಾಗಿದೆ.

ಕಲಬುರಗಿ ಸುರಿಯುತ್ತಿರುವ ಭಾರಿ ಮಳೆಗೆ ಬೋಗಾವತಿ ನದಿ ತುಂಬಿ ಹರಿದಿದೆ. ಪರಿಣಾಮ ಚಿಂಚೋಳಿ ತಾಲ್ಲೂಕಿನ ಪೋಲಕಪಳ್ಳಿ, ಗಂಗನಪಳ್ಳಿ ಗ್ರಾಮದ ಸೇತುವೆ ಜಲಾವೃತವಾಗಿದೆ. ಸೇತುವೆ ಜಲಾವೃತ ಪರಿಣಾಮ ಪೋಲಕಪಳ್ಳಿ, ಗಂಗನಪಳ್ಳಿ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ ಬೋಗಾವತಿ ನದಿ ನೀರಿನ ಅರ್ಭಟಕ್ಕೆ ಗಂಗನಪಳ್ಳಿ ಗ್ರಾಮದ ಗಂಗಾ ಮಾತೆ ದೇವಿಯ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ಚಿಂಚೋಳಿ ತಾಲ್ಲೂಕಿನ ತಾಜಲಾಪೂರ, ಗಾರಂಪಳ್ಳಿ, ಗರಗಪಳ್ಳಿ, ಇರಕಪಳ್ಳಿ ಸೇತುವೆಗಳು ಜಲಾವೃತ. ವಿವಿಧ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಇದನ್ನೂ ಓದಿ: Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

ಯಾದಗಿರಿಯಲ್ಲಿ ಮನೆಯೊಳಗೆ ನುಗ್ಗಿದ ನೀರು

ಯಾದಗಿರಿ ಜಿಲ್ಲೆಯಲ್ಲಿ ನಿನ್ನೆ ಶನಿವಾರ ರಾತ್ರಿಯಿಂದ ಸುರಿದ ವರುಣನ ಅಬ್ಬರಕ್ಕೆ ಮನೆಯೊಳಗೆ ನೀರು ನುಗ್ಗಿದೆ. ನೀರು ಹೊರಹಾಕಲು ದೋರನಹಳ್ಳಿ ಗ್ರಾಮದ ಜನರು ಸಂಕಷ್ಟ ಎದುರಿಸಿದರು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಮಾಪಮ್ಮಳ ಮನೆಯಲ್ಲಿ ನವಜಾತ ಶಿಶುವೊಂದಿಗೆ ಬಾಣಂತಿ ಪರದಾಡಿದರು. ಅದೆ ರೀತಿ ಪಗಲಾಪುರನ ತಾತ್ಕಾಲಿಕ ಸೇತುವೆ ಜಲಾವೃತವಾಗಿದೆ. ಸೇತುವೆ ಹಾಳಾದ ಹಿನ್ನಲೆ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಲಾಗಿತ್ತು. ಮಳೆ ಅಬ್ಬರದಿಂದ ತಾತ್ಕಾಲಿಕ ಪಗಲಾಪುರ ಸೇತುವೆಯೂ ಜಲಾವೃತ ಸಂಪರ್ಕ ಕಡಿತಗೊಂಡಿದೆ. ಯಾದಗಿರಿ ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆ ಅಬ್ಬರಕ್ಕೆ ವಂಕಸಂಬ್ರದ ರಸ್ತೆ ಜಲಾವೃತಗೊಂಡಿದೆ. ವಂಕಸಂಬ್ರದಿಂದ ತೋರಣತಿಪ್ಪಗೆ ಸಂಪರ್ಕದ ರಸ್ತೆಯಲ್ಲಿ ಉಕ್ಕಿ ಹರಿಯುವ ನೀರಿನಲ್ಲೇ ಜನರು ಓಡಾಡುವಂತಾಗಿದೆ. ಮತ್ತೊಂದೆಡೆ ಮನೆ ಗೋಡೆಗಳು ಕುಸಿದ ಬಿದ್ದಿದೆ. ನಿರಂತರ ಮಳೆಯಿಂದ ಬೊರಬಂಡಾ ಗ್ರಾಮದ ಎರಡು ಮನೆಗೋಡೆಗಳು ಕುಸಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆ ಎಚ್ಚರಿಕೆ

Karnataka Weather Forecast : ಭಾನುವಾರ 17 ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಪ್ರತ್ಯೇಕವಾಗಿ (Heavy Rain News) ಭಾರಿ ಮಳೆಯಾಗಲಿದೆ. ಮಲೆನಾಡು ಸುತ್ತಮುತ್ತ ವ್ಯಾಪಕ ಮಳೆಯೊಂದಿಗೆ, ಕೆಲವೆಡೆ ಚದುರಿದಂತೆ ಅತಿ ಲಘುವಾಗಿ ಮಳೆಯಾಗಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲೂ ವರುಣ (Karnataka Weather Forecast) ಅಬ್ಬರಿಸಲಿದ್ದಾನೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಭಾರೀ ಮಳೆಯಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದಂತೆ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಗದಗ , ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಜಿಲ್ಲೆಯಾದ್ಯಂತ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 20 ಡಿ.ಸೆ ಇರಲಿದೆ.

ಇದನ್ನೂ ಓದಿ: Amla For Your Hair: ತಲೆಗೂದಲ ಆರೈಕೆಯಲ್ಲಿ ನೆಲ್ಲಿಕಾಯಿಯ ಬಳಕೆ ಹೇಗೆ?

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸಲಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹಾಗೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕಲಬುರಗಿ, ರಾಯಚೂರು ಹಾಗೂ ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಮೂರು ದಿನ ಮೀನುಗಾರರಿಗೆ ಎಚ್ಚರಿಕೆಯನ್ನು ಕೊಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕಲಬುರಗಿಯಲ್ಲಿ ಮಳೆ ಅಬ್ಬರ; ರಾಯಚೂರಿನಲ್ಲಿ ಕೊಚ್ಚಿ ಹೋದ ಸೇತುವೆ

Karnataka Weather Forecast : ಕಲಬುರಗಿಯಲ್ಲಿ ಮಳೆ (Rain News) ಅಬ್ಬರ ಜೋರಾಗಿದ್ದರೆ, ಇತ್ತ ರಾಯಚೂರಿನಲ್ಲಿ ಸುರಿದ ಮಳೆಗೆ ಸೇತುವೆ ಕೊಚ್ಚಿಹೋಗಿದೆ. ಬಾಗಲಕೋಟೆಯಲ್ಲಿ ಢವಳೇಶ್ವರ ಸೇತುವೆ ಮುಳುಗಡೆಯಾಗಿದೆ.

VISTARANEWS.COM


on

By

karnataka weather Forecast
Koo

ಕಲಬುರಗಿ: ಕಲಬುರಗಿಯಲ್ಲಿ ಶನಿವಾರ ವರುಣನ (Rain News) ಅಬ್ಬರ ಜೋರಾಗಿತ್ತು. ಒಂದು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿತ್ತು. ನಾಳೆ ಭಾನುವಾರ ಕಲಬುರಗಿಯಾದ್ಯಂತ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ಇನ್ನು ರಾತ್ರಿ ಸುರಿದ ಧಾರಾಕಾರ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಜಾಲಹಳ್ಳಿ ಮೊರಾರ್ಜಿ ಸ್ಕೂಲ್ ಪಕ್ಕದಲ್ಲಿ ಘಟನೆ ನಡೆದಿದೆ. ಸೇತುವೆ ಸಂಪೂರ್ಣವಾಗಿ ಕೊಚ್ಚಿ ಹೋಗಿದ್ದರಿಂದ ಸಂಚಾರಕ್ಕೆ ಜನರು ಪರದಾಡಿದರು. ಶಾಲಾ ಮಕ್ಕಳು, ಶಿಕ್ಷಕರಿಗೆ ರಸ್ತೆ ಸಂಪರ್ಕ ಕಡಿತದಿಂದಾಗಿ ಅನಾನುಕೂಲ ಉಂಟಾಯಿತು.

ಮಕ್ಕಳಿಗೆ ಪಡಿತರ ಧಾನ್ಯ, ತರಕಾರಿ ಸಾಗಿಸಲು ಶಾಲಾ ಸಿಬ್ಬಂದಿ ಹೈರಾಣಾರಾದರು. ಸೇತುವೆ ಕುಸಿತದ ಕುರಿತು ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಕ್ಯಾರೆ ಅನ್ನುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ ಎಂದು ಸ್ಥಳೀಯರು ಆರೋಪಿಸಿದರು. ತಕ್ಷಣ ತಾತ್ಕಾಲಿಕ ಸೇತುವೆ ನಿರ್ಮಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದರು.

ಬೆಳಗಾವಿ, ಮಹಾರಾಷ್ಟ್ರದಲ್ಲಿ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲ್ಲೂಕಿನ ಢವಳೇಶ್ವರ ಸೇತುವೆ ಮುಳುಗಡೆಯಾಗಿದೆ. ಬ್ರಿಡ್ಜ್ ಮೇಲೆ ಒಂದು ಅಡಿಯಷ್ಟು ನೀರು ಹರಿವು ಹೆಚ್ಚಿದೆ. ಘಟಪ್ರಭಾ ನದಿಗೆ ಢವಳೇಶ್ವರ ಸೇತುವೆ ನದಿ ನಿರ್ಮಿಸಲಾಗಿದೆ. ಇತ್ತ ನೀರಲ್ಲೇ ಮಹಾಲಿಂಗಪುರ ಪಟ್ಟಣಕ್ಕೆ ಜನರು ಸಂಚಾರಿಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಒಂದೊಂದೆ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತಗೊಳ್ಳುತ್ತಿದೆ.

ಇದನ್ನೂ ಓದಿ: Pavitra Gowda : ರೇಣುಕಾ ಸ್ವಾಮಿ ಕೊಲೆ ಕೇಸ್‌; ಪವಿತ್ರಾಗೌಡ ಸಲ್ಲಿಸಿದ ಜಾಮೀನು ಅರ್ಜಿ ವಜಾ

ತಗ್ಗಿದ ಮಳೆ ಅಬ್ಬರ

ನಾಳೆ ಭಾನುವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳು ಭಾರೀ ಮಳೆಅಥವಾ ಅದಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಗಾಳಿ ವೇಗ 40ಕಿ.ಮೀ

ಇನ್ನು ಸಾಮಾನ್ಯವಾಗಿ ಬೆಂಗಳೂರಿನಲ್ಲಿ ಆಗಾಗ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಗಾಳಿಯ ವೇಗ 30-40 ಕಿ.ಮೀ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವೀಕೆಂಡ್‌ನಲ್ಲಿ ಮುಂದುವರಿಯಲಿದೆ ಮಳೆಯಾಟ; ಗುಡುಗು, ಗಾಳಿ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 13 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ (Rain News) ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾದರೆ, ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ (Rain News) ಮಳೆಯಾಗಲಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಮತ್ತು ರಾಮನಗರ ಸುತ್ತಮುತ್ತ ಸಾಧಾರಣ ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿರಲಿದೆ. ಉತ್ತರ ಒಳನಾಡಿನಲ್ಲಿ ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸಾಕಷ್ಟು ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಉಳಿದಂತೆ ಹಗುರದಿಂದ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ 27 ಮತ್ತು 20 ಡಿ.ಸೆ ಇರಲಿದೆ.

ಗುಡುಗು ಸಹಿತ ಮಳೆ ಎಚ್ಚರಿಕೆ

ಭಾರಿ ಮಳೆಯೊಂದಿಗೆ ಗುಡುಗು ಇರಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಳಗಾವಿ, ವಿಜಯಪುರ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ. ಸೆಪ್ಟೆಂಬರ್‌ 2 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಸಂಜೆ ಸುರಿದ ಭಾರಿ ಮಳೆಗೆ ನೆಲಕ್ಕುರುಳಿದ ಬೃಹತ್‌ ಮರ; ಕಾರು, ಶೆಡ್‌ ಜಖಂ

Karnataka Weather Forecast : ವಿಜಯನಗರ ಹಾಗು ಬೆಂಗಳೂರಿನಲ್ಲಿ ಭಾರಿ ಮಳೆಯಾಗಿದ್ದು, ಅವಾಂತರವೇ ಸೃಷ್ಟಿಯಾಗಿದೆ. ಮಳೆಗೆ (Rain News) ಮರ ಬಿದ್ದು ಕಾರು ಸಹಿತ ಶೆಡ್‌ವೊಂದು ಜಖಂಗೊಂಡಿದೆ.

VISTARANEWS.COM


on

By

Karnataka Weather Forecast
Koo

ವಿಜಯನಗರ: ರಾಜ್ಯದ ಹಲವೆಡೆ ಶುಕ್ರವಾರ ಸಂಜೆ ವೇಳೆಗೆ ಭಾರಿ (Rain News) ಮಳೆಯಾಗಿದೆ. ವಿಜಯನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್‌ ಮರವೊಂದು (Karnataka Weather Forecast) ನೆಲಕ್ಕುರುಳಿದೆ. ಪರಿಣಾಮ ಕಾರು ಹಾಗೂ ತಾತ್ಕಾಲಿಕ ಶೆಡ್‌ವೊಂದು ಜಖಂಗೊಂಡಿದೆ. ಜತೆಗೆ ವಿದ್ಯುತ್‌ ಕಂಬಗಳು ಧರೆಗುರುಳಿವೆ. ವಿಜಯನಗರದ ಹೊಸಪೇಟೆಯ ಪಟೇಲ್ ನಗರದಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅರ್ಧ ಗಂಟೆಗೂ ಅಧಿಕ ಕಾಲ ಮಳೆಯಾಗಿದೆ.

ಇನ್ನು ಬೆಂಗಳೂರಿನಲ್ಲೂ ಮತ್ತೆ ವರುಣನ ಸಿಂಚನವಾಗಿದೆ. ಸಂಜೆ ಆಗುತ್ತಿದ್ದಂತೆ ನಗರದ ಹಲವು ಭಾಗಗಳಲ್ಲಿ ಮಳೆಯಾಗಿದೆ. ಜಯಮಹಲ್, ಶಿವಾಜಿ ನಗರ, ಮೆಕ್ರಿ ಸರ್ಕಲ್ ಸುತ್ತಮುತ್ತ ಮಳೆಯಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಅನಾನುಕೂಲ ಉಂಟಾಯಿತು.

ಮತ್ತೆ ಪ್ರವಾಹ ಭೀತಿ

ಮಹಾರಾಷ್ಟ್ರದ ಮಹಾಮಳೆಗೆ ಭೀಮಾನದಿ ತೀರದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಅಪಾಯದ ಮಟ್ಟ ಮೀರಿ ಭೀಮಾನದಿ ಹರಿಯುತ್ತಿದ್ದು, 1 ಲಕ್ಷ ಕ್ಯೂಸೆಕ್ ನೀರು ಗುರುಸಣಗಿ ಬ್ಯಾರೇಜ್‌ನಿಂದ ಬಿಡುಗಡೆ ಮಾಡಲಾಗಿದೆ. ಭೀಮಾನದಿ ಅಬ್ಬರಕ್ಕೆ ದೇಗುಲಗಳು ಜಲಾವೃತಗೊಂಡಿದೆ. ಭೀಮಾನದಿ ತೀರದ ವಿರಾಂಜನೇಯ ಹಾಗೂ ಕಂಗಳೇಶ್ವರ ಎರಡು ದೇಗುಲುಗಳು ಮುಳುಗಡೆಯಾಗಿದೆ. ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಿದ್ದರೂ ಜಿಲ್ಲಾಡಳಿತದ ಆದೇಶಕ್ಕೆ ಡೋಂಟ್ ಕೇರ್ ಎಂದು ಬ್ಯಾರೇಜ್ ಮುಂಭಾಗದ ನದಿ ತೀರದಲ್ಲಿ ಮೀನು ಹಿಡಿಯುವ ಹುಚ್ಚು ಸಾಹಸ ಮಾಡುತ್ತಿದ್ದಾರೆ.

ಬೆಳಗಾವಿ ಜಲಾನಯನ ಪ್ರದೇಶದಲ್ಲಿ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ. ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ 22 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಹೊಳೆ ಬಸವೇಶ್ವರ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ. ಮಾಚಕನೂರು ಗ್ರಾಮದ ಮನೆಗಳ ಸಮೀಪ ನೀರು ಹರಿದಿದೆ. ಮಾಚಕನೂರು-ಚಿಕ್ಕೂರು ಸಂಪರ್ಕ ಸೇತುವೆ ಮುಳುಗಡೆಯಾಗಿದೆ.

ಇದನ್ನೂ ಓದಿ: KJ George: ಬಿಜೆಪಿಯವರು ಸುಳ್ಳನ್ನು‌ ನೂರು ಬಾರಿ ಹೇಳಿ ನಿಜ ಮಾಡುತ್ತಾರೆ ಎಂದ ಸಚಿವ ಕೆ.ಜೆ. ಜಾರ್ಜ್

ವಿಕೆಂಡ್‌ನಲ್ಲಿ ಭಾರಿ ಮಳೆ ಅಬ್ಬರ

ಶನಿವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 35-45 ಕಿ.ಮೀ ತಲುಪುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ವೇಗ 35-45 ಕಿ.ಮೀ ಆಗುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಯಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ 35-45 ಕಿ.ಮೀ ಸಹಿತ ನಿರಂತರ ಗಾಳಿಯು ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 20 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Yettinahole project lift work to be inaugurated on September 6 Gowri festival
ಬೆಂಗಳೂರು2 mins ago

Yettinahole Project: ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ; ಪಕ್ಷಬೇಧ ಮರೆತು ಎಲ್ಲರಿಗೂ ಆಹ್ವಾನ- ಡಿಸಿಎಂ

Rain News
ಮಳೆ17 mins ago

Rain News : ವಿಜಯವಾಡದಲ್ಲಿ ಭಾರಿ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ; ಕಲಬುರಗಿಯಲ್ಲೂ ಅಬ್ಬರ

Bike rider in deadly accident Elderly woman dies of electric shock
ಬೆಂಗಳೂರು54 mins ago

Road Accident : ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಬೈಕ್‌ ಸವಾರ ಸ್ಪಾಟ್‌ ಡೆತ್‌; ಕರೆಂಟ್‌ ಶಾಕ್‌ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ

Girl commits suicide after being fed up with rumours of love
ಮಂಡ್ಯ1 hour ago

Mandya News : ನಾಲ್ವರು ಬಾಲಕರ ಪ್ರೀತಿ-ಪ್ರೇಮದ ಅಪಪ್ರಚಾರ; ಗಾಳಿ ಸುದ್ದಿಗೆ ಬಾಲಕಿ ಆತ್ಮಹತ್ಯೆ

Do you know when Darshan got royalty in Central Jail
ಸಿನಿಮಾ2 hours ago

Actor Darshan : ಸೆಂಟ್ರಲ್‌ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ಸಿಕ್ಕಿದ್ದು ಯಾವಾಗಿನಿಂದ ಗೊತ್ತಾ? ಬಿಸ್ಕತ್‌ ಹಾಕಿಲ್ವಾ ಸುಮ್ಮಿನಿರು ಅಂದ್ರಾ ಕರಿಯಾ!

Actor Darshan shifted back to Bengaluru from Ballari
ಬಳ್ಳಾರಿ2 hours ago

Actor Darshan : ಬಳ್ಳಾರಿಯಿಂದ ನಟ ದರ್ಶನ್‌ ಮತ್ತೆ ಬೆಂಗಳೂರಿಗೆ ಶಿಫ್ಟ್‌! ಪತ್ನಿ ಬಂದು ಹೋದ್ಮೆಲೆ ಫುಲ್ ಆಕ್ಟೀವ್

police Firing
ಕಲಬುರಗಿ3 hours ago

Police Firing: ಪೊಲೀಸರ ಮೇಲೆ ಚಾಕುಯಿಂದ ದಾಳಿ ಮಾಡಿದ ದರೋಡೆಕೋರ; ಆರೋಪಿ ಕಾಲಿಗೆ ಫೈರಿಂಗ್‌ ಮಾಡಿದ ಖಾಕಿ

karnataka weather Forecast
ಮಳೆ9 hours ago

Karnataka Weather : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ವ್ಯಾಪಕ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

Rishab Shetty And NTR
ಸಿನಿಮಾ17 hours ago

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್24 hours ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 days ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 week ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌