Weather Report : ಬೆಂಗಳೂರಲ್ಲಿ ಕವಿದ ಮೋಡ; ಅಲ್ಲಲ್ಲಿ ಧಾರಾಕಾರ ಮಳೆ Vistara News

ಕರ್ನಾಟಕ

Weather Report : ಬೆಂಗಳೂರಲ್ಲಿ ಕವಿದ ಮೋಡ; ಅಲ್ಲಲ್ಲಿ ಧಾರಾಕಾರ ಮಳೆ

Rain News : ಬೆಂಗಳೂರಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. 4 ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಐಎಂಡಿ ಯೆಲ್ಲೊ ಅಲರ್ಟ್ (Weather report) ನೀಡಿದೆ.

VISTARANEWS.COM


on

Rain in Beach
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಹಲವೆಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ದಕ್ಷಿಣ ಕನ್ನಡ, ಬೀದರ್, ಕಲಬುರಗಿ ಮತ್ತು ರಾಮನಗರದಲ್ಲಿ ಪ್ರತ್ಯೇಕ ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ರಾಯಚೂರಲ್ಲೂ ಲಘು ಮಳೆಯಾಗಲಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ತಕ್ಕಮಟ್ಟಿಗೆ ಹಗುರ ಮಳೆಯಾಗಲಿದೆ. ಹಾಸನ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆ ಇರಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಲ್ಲಿ ಎಡಬಿಡದೆ ಸುರಿಯುವ ಮಳೆ

ಕರಾವಳಿಯ ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡಿನ ವಿಜಯನಗರದಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಗುಡುಗು, ಬಿರುಗಾಳಿಯ ಮುನ್ನೆಚ್ಚರಿಕೆ

ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.

ಇದನ್ನೂ ಓದಿ:Farmers problem : ಸೇವಂತಿಗೆ ಹೂವಿನ ದರ ಕುಸಿತ ಹಿನ್ನೆಲೆ; ಟ್ರ್ಯಾಕ್ಟರ್‌ ಓಡಿಸಿ ಬೆಳೆಯನ್ನೇ ನಾಶ ಮಾಡಿದ ಹತಾಶ ರೈತ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 22 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 31 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ

ಸೆಪ್ಟೆಂಬರ್‌ 25ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಜಲಾಶಯಗರಿಷ್ಠ ಮಟ್ಟ (ಅಡಿಗಳಲ್ಲಿ)ಇಂದಿನ ಮಟ್ಟ (ಅಡಿಗಳಲ್ಲಿ)ಒಳ ಹರಿವು (ಕ್ಯೂಸೆಕ್)ಹೊರ ಹರಿವು (ಕ್ಯೂಸೆಕ್)
ಕೆಆರ್‌ಎಸ್ ಜಲಾಶಯ (KRS Dam)38.0420.6160165735
ಆಲಮಟ್ಟಿ ಜಲಾಶಯ
(Almatti Dam)
519.6114.73405405
ಮಲಪ್ರಭಾ ಜಲಾಶಯ (Malaprabha Dam)633.8021.440194
ಘಟಪ್ರಭಾ ಜಲಾಶಯ
(Ghataprabha Dam)
662.9142.402311181
ತುಂಗಾಭದ್ರಾ ಜಲಾಶಯ (Tungabhadra Dam)497.7162.92437810316
ಭದ್ರಾ ಜಲಾಶಯ (Bhadra Dam)657.7343.23290290
ಕಬಿನಿ ಜಲಾಶಯ (Kabini Dam)696.1314.8031664390
ಹಾರಂಗಿ
(Harangi Dam)
871.388.0613352791
ಲಿಂಗನಮಕ್ಕಿ (Linganamakki Dam) 554.4468.3054935393
ಹೇಮಾವತಿ
(Hemavathi Dam)
890.5817.6649861300

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Suspicious Death:‌ ಚರಂಡಿಯಲ್ಲಿ ತೇಲಿ ಬಂತು ಮಗುವಿನ ಶವ; ಕೋಲಾರದಲ್ಲಿ ಮೃತದೇಹಗಳು ಪತ್ತೆ!

Suspicious Death: ಕೋಲಾರದಲ್ಲಿ ಅಪರಿಚಿತ ಶವಗಳೆರಡು ಪತ್ತೆಯಾಗಿದ್ದರೆ, ಇತ್ತ ದೊಡ್ಡಬಳ್ಳಾಪುರದಲ್ಲಿ ಚರಂಡಿಯಲ್ಲಿ 2 ವರ್ಷದ ಹೆಣ್ಣು ಮಗುವಿನ ಮೃತದೇಹ ಸಿಕ್ಕಿದೆ.

VISTARANEWS.COM


on

By

Dead bodies found
Koo

ದೊಡ್ಡಬಳ್ಳಾಪುರ/ಕೋಲಾರ: ಚರಂಡಿ ಮೋರಿಯಲ್ಲಿ 2 ವರ್ಷದ ಹೆಣ್ಣು ಮಗುವಿನ ಮೃತದೇಹ (Suspicious Death) ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಬಳಿಯ ಮೋರಿಯಲ್ಲಿ ಪತ್ತೆಯಾಗಿದೆ. ಚಾಪೆ ಹಾಕಿ ಮಗುವನ್ನು ಮಲಗಿಸಿದ ರೀತಿಯಲ್ಲಿ ಮಗು ಪತ್ತೆಯಾಗಿದೆ. ಆದರೆ ಮಗುವಿನ ದೇಹದ ಮೇಲೆ ಯಾವುದೇ ಗಾಯದ ಗುರುತು ಕಂಡು ಬಂದಿಲ್ಲ. ಇದು ಕೊಲೆಯೊ ಅಥವಾ ಸಹಜ ಸಾವುವೋ ತಿಳಿದು ಬಂದಿಲ್ಲ. ಮಗುವಿನ ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ರೈಲ್ವೆ ನಿಲ್ದಾಣದಲ್ಲಿ ಶವ ಪತ್ತೆ

ಕೋಲಾರದ ಮಾಲೂರು ತಾಲೂಕು ಟೇಕಲ್ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಮಲಗಿದ ರೀತಿಯಲ್ಲೇ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ವ್ಯಕ್ತಿಯ ವಿವರವನ್ನು ಕಲೆ ಹಾಕುತ್ತಿದ್ದು, ಇದು ಕೊಲೆಯೋ ಅಥವಾ ಸಹಜವೋ ಎಂದು ತಿಳಿಯಲು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಠಾಣಾ ವ್ಯಾಪ್ತಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದು ಮೃತಪಟ್ಟಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತ ಪಟ್ಟು ಒಂದು ತಿಂಗಳು ಕಳೆದಿರಬಹುದು ಎಂದು ಅಂದಾಜಿಸಲಾಗಿದೆ. ಟೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Teachers Recruitment: ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕ; ಒಟ್ಟು ಎಷ್ಟು ಹುದ್ದೆ ನಿರೀಕ್ಷೆ?

Teachers Recruitment : ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸ್ತುತ ಖಾಲಿ ಇರುವ ಪೈಕಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

VISTARANEWS.COM


on

Teachers Recruitment
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಸತತ 15 ವರ್ಷದಿಂದ ನೇಮಕಾತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಿಗೆ (Recruitment of Physical Education Teachers) ಈ ಸರ್ಕಾರದ ಅವಧಿಯಲ್ಲಿ ಗುಡ್‌ ನ್ಯೂಸ್‌ ಸಿಗಲಿದೆಯೇ? ಹೌದು ಎನ್ನುತ್ತದೆ ಶಿಕ್ಷಣ ಸಚಿವರ ಉತ್ತರ! ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸ್ತುತ ಖಾಲಿ ಇರುವ ಪೈಕಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು (Teachers Recruitment) ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Education Minister Madhu Bangarappa) ಹೇಳಿದ್ದಾರೆ. ಅಲ್ಲದೆ, ಪ್ರೌಢಶಾಲೆಯಲ್ಲಿ ನೇಮಕ ಮಾಡಿಕೊಳ್ಳಲು ಅವಶ್ಯಕ ಇರುವ ಹುದ್ದೆಗಳ ಬಗ್ಗೆಯೂ ಸದನದಲ್ಲಿ ಉತ್ತರಿಸಲಾಗಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಪದವೀಧರ ಕ್ಷೇತ್ರದ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೇಳಲಾದ ಚುಕ್ಕೆ ಗುರುತಿನ ಪ್ರಶ್ನೆಗೆ ಶಿಕ್ಷಣ ಸಚಿವರು ಈ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: Karnataka Live News : ಪಿಎಸ್‌ಐ ಪರೀಕ್ಷೆ ಮುಂದೂಡಿಕೆ; ಜ. 23ಕ್ಕೆ ಎಕ್ಸಾಂ ಎಂದ ಗೃಹ ಸಚಿವ ಪರಮೇಶ್ವರ್‌

ರಾಜ್ಯದಲ್ಲಿ ಸುಮಾರು 17 ವರ್ಷಗಳಿಂದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕಾತಿ ಮಾಡಿಲ್ಲ ಎಂದು ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆಯವರು ಆರೋಪ ಮಾಡುತ್ತಿದ್ದಾರೆ. ಇದು ನಿಜವೇ ಎಂದು ಎಸ್‌.ವಿ. ಸಂಕನೂರ ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದ ಸರ್ಕಾರಿ ಪ್ರಾಥಮಿಕ ಶಾಲೆಗೆ ಸಂಬಂಧಿಸಿದಂತೆ 2008ನೇ ಸಾಲಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಿಸಿದಂತೆ 2014-15ನೇ ಸಾಲಿಗೆ 148 ಹುದ್ದೆಗಳಿಗೆ ನೇಮಿಸಿಕೊಳ್ಳಲಾಗಿದೆ ಎಂದು ಉತ್ತರಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 41913 ಪ್ರಾಥಮಿಕ ಶಾಲೆಗಳಿದ್ದು, ಅವುಗಳಲ್ಲಿ ಮಂಜೂರಾದ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 6772 ಆಗಿದೆ. ಆದರೆ, ಕಾರ್ಯನಿರತ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 4127 ಆಗಿದೆ. ಹೀಗಾಗಿ ಇದರಲ್ಲಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಪ್ರೌಢಶಾಲೆಯಲ್ಲಿ ನೇಮಕಕ್ಕೆ ಸಚಿವರು ಹೇಳಿದ್ದೇನು?

ಇನ್ನು ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಪಟ್ಟಂತೆ ರಾಜ್ಯದಲ್ಲಿ 4844 ಸರ್ಕಾರಿ ಪ್ರೌಢ ಶಾಲೆಗಳು ಇವೆ. ಇದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಮಂಜೂರಾದ ಹುದ್ದೆ 5210 ಆಗಿದೆ. ರಾಜ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿರುವ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್‌ 1 ಶಿಕ್ಷಕರ ಕಾರ್ಯನಿರತ ಹುದ್ದೆಗಳ ಸಂಖ್ಯೆ 3589 ಆಗಿದೆ.

ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ವಿವಿಧ ವೃಂದದ ದೈಹಿಕ ಶಿಕ್ಷಣ ಶಿಕ್ಷಕರ 200 ಹುದ್ದೆಗಳು ಸೇರಿ ಒಟ್ಟು 2500 ಶಿಕ್ಷಕರುಗಳ ಹುದ್ದೆಗಳನ್ನು 15000 ಪದವೀಧರ ಪ್ರಾಥಮಿಕ ಶಾಲಾ ನೇಮಕಾತಿಯಲ್ಲಿ ಭರ್ತಿಯಾಗದೇ ಖಾಲಿ ಉಳಿದ ಹುದ್ದೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿರುತ್ತದೆ.

ಆದರೆ, ಸದರಿ 15000 ಹುದ್ದೆಗಳಲ್ಲಿ ಪ್ರೌಢಶಾಲಾ ಶಿಕ್ಷಕರುಗಳ ನೇಮಕಾತಿಗೆ 1648 ಹುದ್ದೆಗಳು ಮಾತ್ರ ಉಳಿದಿರುವ ಪ್ರಯುಕ್ತ ಪ್ರಸ್ತುತ ಸಾಲಿನಲ್ಲಿ 200 ದೈಹಿಕ ಶಿಕ್ಷಕರ ಹುದ್ದೆಯು ಸೇರಿದ್ದು ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಪ್ರಸ್ತಾವನೆಯ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿಯಿಂದ ತೆರವಾಗಿರುವ ದೈಹಿಕ ಶಿಕ್ಷಣ ಉಪನ್ಯಾಸಕರನ್ನು ಮಾಡಿಕೊಳ್ಳದಂತೆ ನೇಮಕಾತಿ ಆರ್ಥಿಕ ಇಲಾಖೆಯಿಂದ ಟಿಪ್ಪಣಿ ರೂಪದಲ್ಲಿ ಆದೇಶ ಬಂದಿದೆಯೇ? ಹಾಗಿದ್ದಲ್ಲಿ, ಈ ಕುರಿತು ಸರ್ಕಾರ ಕೈಗೊಂಡ ಕ್ರಮವೇನು? ಎಂದು ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: Belagavi Winter Session: ಹಕ್ಕುಚ್ಯುತಿ ಮಂಡಿಸಿದ ಶಾಸಕ ಹರೀಶ್ ಪೂಂಜಾ; ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ರೆಫರ್

ಇಲ್ಲಿ ಪಿಡಿಎಫ್‌ ಪ್ರತಿಯನ್ನು ಲಗತ್ತಿಸಿದ್ದು, ಡೌನ್‌ಲೋಡ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಪಡೆದುಕೊಳ್ಳಬಹುದು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದೈಹಿಕ ಶಿಕ್ಷಣ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದಂತೆ ಆರ್ಥಿಕ ಇಲಾಖೆಯು ಯಾವುದೇ ನಿರ್ಬಂಧವನ್ನು ವಿಧಿಸಿರುವುದಿಲ್ಲ. ಆದರೆ, ಆರ್ಥಿಕ ಇಲಾಖೆಯು ದಿನಾಂಕ:14/06/2023ರಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆಗೆ ಪ್ರಸ್ತುತ ಇರುವ 120 ವಿದ್ಯಾರ್ಥಿಗಳ ಕಾರ್ಯಭಾರದ ಮಾನದಂಡವನ್ನು 500 ವಿದ್ಯಾರ್ಥಿಗಳಿಗೆ ಹೆಚ್ಚಿಸಲು ನಿರ್ಣಯಿಸುವಂತೆ ಆರ್ಥಿಕ ಇಲಾಖೆಯು ಸಲಹೆ ನೀಡಿದ್ದು, ಈ ಬಗ್ಗೆ ಸರ್ಕಾರದಲ್ಲಿ ಪರಿಶೀಲನೆಯಲ್ಲಿರುತ್ತದೆ ಎಂದು ಹೇಳಿದ್ದಾರೆ.

Continue Reading

ಉತ್ತರ ಕನ್ನಡ

Fishermen Rescued: ಅರಬ್ಬಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಬೋಟ್‌ ಪತ್ತೆ; 27 ಮೀನುಗಾರರ ರಕ್ಷಣೆ

Fishermen Rescued: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬೇಲಿಕೇರಿ ಬಂದರಿನಿಂದ 30 ನಾಟಿಕಲ್ ಮೈಲ್ ದೂರದಲ್ಲಿ ಮೀನುಗಾರರನ್ನು ರಕ್ಷಿಸಲಾಗಿದೆ.

VISTARANEWS.COM


on

Boat
Koo

ಕಾರವಾರ: ಅರಬ್ಬಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಬೋಟ್‌ ಪತ್ತೆಯಾಗಿದ್ದು, 27 ಮೀನುಗಾರರನ್ನು ರಕ್ಷಣೆ (Fishermen Rescued) ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬೇಲಿಕೇರಿ ಬಂದರಿನಿಂದ 30 ನಾಟಿಕಲ್ ಮೈಲ್ ದೂರದಲ್ಲಿ ಮೀನುಗಾರರನ್ನು ರಕ್ಷಿಸಲಾಗಿದೆ.

ಗೋವಾದ ಪಣಜಿ ಮೂಲದ ಕ್ರಿಸ್ಟೋ ರೇ ಹೆಸರಿನ ಮೀನುಗಾರಿಕಾ ಬೋಟ್‌ ಹವಾಮಾನ ವೈಪರೀತ್ಯದಿಂದ ಎಂಜಿನ್‌ನಲ್ಲಿ ಸಮಸ್ಯೆಯಾಗಿ ದಾರಿ ತಪ್ಪಿತ್ತು. ಗೋವಾದಿಂದ ಬೇಲೆಕೇರಿಗೆ ಆಗಮಿಸುತ್ತಿದ್ದ ಮೀನುಗಾರಿಕಾ ಬೋಟ್‌ಗಾಗಿ ಕೋಸ್ಟ್‌ಗಾರ್ಡ್ ಸಿಬ್ಬಂದಿ ಹುಡುಕಾಟ ನಡೆಸಿದ್ದು, 30 ನಾಟಿಕಲ್ ಮೈಲ್ ದೂರದಲ್ಲಿ ಬೋಟ್ ಪತ್ತೆಯಾಗಿದೆ. ಬೋಟಿನಲ್ಲಿದ್ದ 27 ಮಂದಿ ಮೀನುಗಾರರೂ ಸುರಕ್ಷಿತವಾಗಿದ್ದು, ಅವರನ್ನು ಬೇಲಿಕೇರಿ ಬಂದರಿನತ್ತ ರಕ್ಷಣಾ ಪಡೆ ಕರೆತರುತ್ತಿದೆ.

ಇದನ್ನೂ ಓದಿ | Lokayukta Raid : 13 ಭ್ರಷ್ಟ ಅಧಿಕಾರಿಗಳಿಗೆ ಲೋಕಾ ಶಾಕ್;‌ ಕೋಟಿ ಕೋಟಿ ಹಣ ಲಾಕ್!

ನಾಯಿ ಬೊಗಳಿದ್ದಕ್ಕೆ ಮಾಲೀಕನಿಗೆ ಆ್ಯಸಿಡ್‌ ಎರಚಿದ ದುರುಳ

Man throws acid on owner for barking dog

ಚಿಕ್ಕಮಗಳೂರು: ಸಾಕು ನಾಯಿಯೊಂದು ಒಂದೇ ಸಮನೇ ಬೊಗಳತ್ತಿತ್ತು. ಶ್ವಾನದ ಮಾಲೀಕರು ಹಲವಾರು ಬಾರಿ ಗದರಿಸಿದರೂ ಸುಮ್ಮನಾಗಲಿಲ್ಲ. ಇದರಿಂದ ಸಿಟ್ಟಿಗೆದ್ದ ಶ್ವಾನದ ಮಾಲೀಕರು ಬೈಯಲು ಶುರು ಮಾಡಿದ್ದರು. ಇದೇ ವೇಳೆ ಅಲ್ಲಿದ್ದ ಪಕ್ಕದ ಮನೆಯವ ತನಗೆ ಬೈಯುತ್ತಿದ್ದಾರೆ ಎಂದು ಭಾವಿಸಿ, ಏಕಾಏಕಿ ಆ್ಯಸಿಡ್‌ (Acid attack) ಅನ್ನು ಮುಖಕ್ಕೆ ಎರಚಿದ್ದಾನೆ.

ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜೇಮ್ಸ್ ಎಂಬಾತ ಸುಂದರ್‌ ರಾಜ್‌ ಅವರಿಗೆ ಆ್ಯಸಿಡ್‌ ದಾಳಿ ನಡೆಸಿದವನು. ಈ ಜೇಮ್ಸ್‌ ಹಾಗೂ ಸುಂದರ್‌ ರಾಜ್‌ ನೆರೆಮನೆಯವರಾದರೂ ಇವರ ಬಾಂಧವ್ಯ ಅಷ್ಟಕಷ್ಟೇ ಇತ್ತು. ಸುಂದರ್‌ ರಾಜ್‌ ಅವರ ಮನೆಯ ಆವರಣಲ್ಲಿ ಕಟ್ಟಿಹಾಕಿದ್ದ ಶ್ವಾನವು ಬೊಗಳುತ್ತಿತ್ತು, ಹೀಗಾಗಿ ಶ್ವಾನಕ್ಕೆ ಬೈಯುತ್ತಿದ್ದರು. ಆಗ ಎದುರಿಗೆ ಬಂದ ಜೇಮ್ಸ್‌ ನಾಯಿ ಹೆಸರಿನಲ್ಲಿ ತನಗೆ ಬೈಯುತ್ತಿದ್ದಾರೆ ಎಂದು ಭಾವಿಸಿದ್ದ. ಸುಂದರಾಜ್‌ ಮೇಲಿನ ಸಿಟ್ಟಿಗೆ ಆ್ಯಸಿಡ್‌ ದಾಳಿ ಮಾಡಿದ್ದಾನೆ.

ಆ್ಯಸಿಡ್‌ ದಾಳಿಗೊಳಗಾಗಿರುವ ಸುಂದರರಾಜ್ ಪರಿಸ್ಥಿತಿ ಗಂಭೀರವಾಗಿದೆ. ಎಡಗಣ್ಣಿಗೆ ಗಂಭೀರ ಗಾಯವಾಗಿದ್ದು, ಕಣ್ಣಿನ ಪದರ ಬದಲಿಸುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ಗಾಯಾಳು ಸುಂದರ್ ರಾಜ್ ಶಿವಮೊಗ್ಗದ ಮೆಗ್ಹಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಜೇಮ್ಸ್ ವಿರುದ್ಧ ಎನ್.ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Belagavi Winter Session: ಹಕ್ಕುಚ್ಯುತಿ ಮಂಡಿಸಿದ ಶಾಸಕ ಹರೀಶ್ ಪೂಂಜಾ; ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ರೆಫರ್

Belagavi Winter Session : ಬೆಳ್ತಂಗಡಿಯ ಕಳೆಂಜ ಗ್ರಾಮದ ಅಮ್ಮಿನಡ್ಕದಲ್ಲಿ ರೈತರೊಬ್ಬರ ಮನೆಯನ್ನು ಕಿತ್ತುಹಾಕುತ್ತಿರುವ ವೇಳೆ ರೈತರ ಪರ ನಿಂತಿದ್ದ ಶಾಸಕ ಹರೀಶ್‌ ಪೂಂಜಾ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದರು. ಇದಕ್ಕೆ ಆಕ್ರೋಶವನ್ನು ಹೊರಹಾಕಿರುವ ಹರೀಶ್‌, ತಮ್ಮ ಹಕ್ಕಿಗೆ ಚ್ಯುತಿ ತರಲಾಗಿದೆ. ಎಫ್‌ಐಆರ್‌ ದಾಖಲು ಮಾಡಿದ ಅಧಿಕಾರಿಗಳ ವಿರುದ್ಧ ಹಕ್ಕು ಚ್ಯುತಿ ಮಂಡಿಸುವುದಾಗಿ ಶಾಸಕ ಹರೀಶ್‌ ಪೂಂಜಾ ಒತ್ತಾಯಿಸಿದ್ದಾರೆ.

VISTARANEWS.COM


on

harish poonja in Belagavi Winter Session
Koo

ಬೆಳಗಾವಿ: ತಮ್ಮ ಮೇಲೆ ಎಫ್‌ಐಆರ್‌ ಹಾಕಿದ ಅರಣ್ಯಾಧಿಕಾರಿಗಳ ಮೇಲೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ (Belthangady MLA Harish Poonja) ಅವರು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ (Belagavi Winter Session) ಹಕ್ಕು ಚ್ಯುತಿ ಮಂಡಿಸಿದ್ದಾರೆ, ಇದನ್ನು ಸ್ಪೀಕರ್‌ ಯು.ಟಿ. ಖಾದರ್‌ (Speaker UT Khader) ಅವರು ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ರವಾನಿಸಿದ್ದಾರೆ.

ಅರಣ್ಯೇತರ ಉದ್ದೇಶಗಳಿಗೆ ಪರಿವರ್ತಿಸಲಾಗಿದ್ದಂತಹ ಅರಣ್ಯ ಭೂಮಿಯ (Forest Land) ಪೈಕಿ ಶೇಕಡಾ 40ರಷ್ಟು ಭೂಮಿಯನ್ನು ಮರಳಿ ಮೀಸಲು ಅರಣ್ಯವಾಗಿ (Reserve Forest) ಪರಿವರ್ತನೆ ಮಾಡುವ ರಾಜ್ಯ ಸರ್ಕಾರದ (State Government) ನಿರ್ಧಾರದಿಂದ ರೈತರು ಹಾಗೂ ಅರಣ್ಯ ಇಲಾಖೆ ನಡುವೆ ಸಂಘರ್ಷ ನಡೆದಿತ್ತು. ಬೆಳ್ತಂಗಡಿಯ ಕಳೆಂಜ ಗ್ರಾಮದ ಅಮ್ಮಿನಡ್ಕದಲ್ಲಿ ರೈತರೊಬ್ಬರ ಮನೆಯನ್ನು ಕಿತ್ತುಹಾಕುತ್ತಿರುವ ವೇಳೆ ರೈತರ ಪರ ನಿಂತಿದ್ದ ಶಾಸಕ ಹರೀಶ್‌ ಪೂಂಜಾ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದರು. ಇದಕ್ಕೆ ಆಕ್ರೋಶವನ್ನು ಹೊರಹಾಕಿರುವ ಹರೀಶ್‌, ತಮ್ಮ ಹಕ್ಕಿಗೆ ಚ್ಯುತಿ ತರಲಾಗಿದೆ. ಎಫ್‌ಐಆರ್‌ ದಾಖಲು ಮಾಡಿದ ಅಧಿಕಾರಿಗಳ ವಿರುದ್ಧ ಹಕ್ಕು ಚ್ಯುತಿ ಮಂಡಿಸುವುದಾಗಿ ಶಾಸಕ ಹರೀಶ್‌ ಪೂಂಜಾ ಒತ್ತಾಯಿಸಿದ್ದಾರೆ. ಇದಕ್ಕೆ ಪಕ್ಷಾತೀತವಾಗಿ ಸದನ ಸದಸ್ಯರು ಬೆಂಬಲ ಸೂಚಿಸಲಾಗಿದೆ. ಇದೇ ವೇಳೆ ಸ್ಪೀಕರ್‌ ಯು.ಟಿ. ಖಾದರ್‌, ಅವರು ಇದನ್ನು ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ರವಾನಿಸಿದ್ದಾರೆ.

ಇದನ್ನೂ ಓದಿ: HD Kumaraswamy: ಕೆಲವು ವರ್ಗಗಳ ಓಲೈಕೆ ಸಿಎಂ ಅಜೆಂಡಾ: ಎಚ್.ಡಿ. ಕುಮಾರಸ್ವಾಮಿ ಕಿಡಿ

ಭೋಜನ ವಿರಾಮದ ಬಳಿಕ ವಿಧಾನಸಭೆ ಕಲಾಪ ಆರಂಭವಾದರೂ ಸದನದಲ್ಲಿ ಗದ್ದಲ ಮುಂದುವರಿದಿತ್ತು. ಸದನದ ಬಾವಿಗಿಳಿದಿದ್ದ ವಿರೋಧ ಪಕ್ಷದ ಸದಸ್ಯರು ಹಕ್ಕು ಚ್ಯುತಿ ಮಂಡಿಸಲು ಅವಕಾಶ ನೀಡುವಂತೆ ಆಗ್ರಹಿಸಿದ್ದರು. ಇದಕ್ಕೆ ಜೆಡಿಎಸ್ ಸದಸ್ಯರು ಸಾಥ್‌ ನೀಡಿದ್ದರು.

ಬೆಳ್ತಂಗಡಿ ಶಾಸಕರ ಹಕ್ಕುಚ್ಯುತಿ ಮಂಡನೆ ಮಾಡಬೇಕಿದೆ. ಅರಣ್ಯ ಇಲಾಖೆಯವರು ಮನೆ ತೆರವು ಮಾಡಲು‌ ಹೋಗಿದ್ದರು. ಈ ವೇಳೆ ಶಾಸಕರಿಗೆ ಹಕ್ಕುಚ್ಯುತಿ ಆಗಿದೆ. ಸದನದಲ್ಲಿ ಮಾತನಾಡಲು ಅವಕಾಶ ನೀಡಬೇಕು ಎಂದು ಸುನೀಲ್ ಕುಮಾರ್ ಮನವಿ ಮಾಡಿದರು. ಆದರೆ, ಅವಕಾಶ ಕೊಡದಿದ್ದಕ್ಕೆ ಸದನದಲ್ಲಿ ಗದ್ದಲ ಮುಂದುವರಿದಿತ್ತು. ಈ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ಮಧ್ಯ ಪ್ರವೇಶ ಮಾಡಿ, ನಾನು ಬರಗಾಲ ಬಗ್ಗೆ ತಡವಾಗಿ ಚರ್ಚೆ ಮಾಡುತ್ತೇನೆ. ಈಗ ಶಾಸಕರಿಗೆ ಹಕ್ಕುಚ್ಯುತಿ ಮಂಡನೆ ಮಾಡಲು ಅವಕಾಶ ನೀಡಿ ಎಂದು ಮನವಿ ಮಾಡಿದರು.

ಈ ಮನವಿಯನ್ನು ನಿರಾಕರಿಸಿದ ಸ್ಪೀಕರ್‌ ಯು.ಟಿ. ಖಾದರ್‌, ನಾಳೆ ಬೆಳಗ್ಗೆ ಅವಕಾಶ ‌ನೀಡುತ್ತೇನೆ. ಈಗ ಬರಗಾಲ ಬಗ್ಗೆ ಚರ್ಚೆ ನಡೆಯಲಿ ಎಂದು ಮನವಿ ಮಾಡಿದರು. ಆದರೂ ಬಿಜೆಪಿ ಸದಸ್ಯರು ಪಟ್ಟು ಬಿಡದೆ ಈಗಲೇ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು. ಶಾಸಕನ ರಕ್ಷಣೆ ನಿಮ್ಮ ಜವಾಬ್ದಾರಿಯಾಗಿದೆ. ಹಕ್ಕು ಚ್ಯುತಿ ಪಡೆದುಕೊಂಡು ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಈಗಲೇ ಹಕ್ಕುಚ್ಯುತಿ ಸಮಿತಿಗೆ ರೆಫರ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕ್ಯಾಬಿನೆಟ್‌ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧದ ಕೇಸ್‌ ಅನ್ನು ವಾಪಸ್ ತೆಗೆದುಕೊಳ್ಳುತ್ತೀರಿ. ಹರೀಶ್ ಪೂಂಜಾ ವಿರುದ್ಧ ಕೇಸ್ ದಾಖಲು ಮಾಡಿಕೊಳ್ಳುತ್ತೀರಿ. ಇದು ಯಾವ ನ್ಯಾಯ ಎಂದು ಶಾಸಕ ಸುನೀಲ್ ಕುಮಾರ್ ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಶಾಸಕರ ಬಿಗಿಪಟ್ಟಿಗೆ ಮಣಿದ ಸ್ಪೀಕರ್ ಯು.ಟಿ. ಖಾದರ್, ಹಕ್ಕುಚ್ಯುತಿ ಮಂಡನೆ ಪ್ರಸ್ತಾಪಕ್ಕೆ ಅವಕಾಶ ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಧರಣಿ ವಾಪಸ್ ಪಡೆದುಕೊಂಡರು.

ಕಾಂಗ್ರೆಸ್‌ ಆಕ್ಷೇಪ

ಹಕ್ಕುಚ್ಯುತಿಗೆ ಪ್ರಸ್ತಾಪಕ್ಕೆ ಅವಕಾಶ ಕೊಟ್ಟಿದ್ದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಬರದ ಚರ್ಚೆ ನಡುವೆ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಅವಕಾಶ‌ ಏಕೆ ಎಂದು ಪ್ರಶ್ನೆ ಮಾಡಿದರು. ಶಾಸಕ ಬೇಳೂರು ಗೋಪಾಲಕೃಷ್ಣ, ಶಿವಲಿಂಗೇಗೌಡ ಆಕ್ಷೇಪ ವ್ಯಕ್ತಪಡಿಸಿದರು.

ಇದು ಅಧಿಕಾರಿಗಳ ರಾಜ್ಯವೇ? ಆರ್. ಅಶೋಕ್‌

ಈ ವೇಳೆ ಶಾಸಕರ ಹಕ್ಕಿಗೆ ಚ್ಯುತಿ ಮಾಡಲು ಬಿಜೆಪಿ ಮುಂದಾದಾಗ ಅಧಿಕಾರಿಗಳ ಸಮರ್ಥನೆಗೆ ಈಶ್ವರ್ ಖಂಡ್ರೆ ನಿಂತುಕೊಂಡರು. ಇದರಿಂದ ಬಿಜೆಪಿ ಶಾಸಕರು ಕೆರಳಿ ಕೆಂಡವಾದರು. “ಇದು ಅಧಿಕಾರಿಗಳ ರಾಜ್ಯವೇ?
ಒಬ್ಬ ಶಾಸಕನ ಬಳಿ ಡಿಎಫ್‌ಒ ಮುಚ್ಚಳಿಕೆ ಬರಿಸಿಕೊಳ್ಳುತ್ತಾನೆ ಎಂದರೆ ಈ ವಿಧಾನಸಭೆ, ಶಾಸಕರು ಯಾಕೆ ಇರಬೇಕು? ಇದು ಅಧಿಕಾರಿಗಳ ರಾಜ್ಯವೇ?” ಎಂದು ಆರ್‌. ಅಶೋಕ್‌ ಆಕ್ರೋಶ ಹೊರಹಾಕಿದರು.

ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ಮಾನವ – ಕಾಡು ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದೆ. ನಗರಕ್ಕೆ ಕಾಡು ಪ್ರಾಣಿಗಳು ಬರುತ್ತಿವೆ. ಇದಕ್ಕೆ ಯಾರು ಹೊಣೆ? ಅರಣ್ಯ ಅತಿಕ್ರಮಣವಾದರೆ ಈ ಸಮಸ್ಯೆ ಸೃಷ್ಟಿಯಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಅತಿಕ್ರಮಣ ಸಮರ್ಥನೆ ಮಾಡಿದರೆ ಅರಣ್ಯ ನಾಶವಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Elephant Arjuna: ಮಾವುತರಿಗೆ ಪ್ರತಿ ವರ್ಷ ಅರ್ಜುನ ಹೆಸರಲ್ಲಿ ಪ್ರಶಸ್ತಿ ನೀಡಿ: ದಿನೇಶ್‌ ಗೂಳಿಗೌಡ ಒತ್ತಾಯ

ಇದಕ್ಕೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಆರ್.‌ ಅಶೋಕ್, ಅರಣ್ಯ ರಕ್ಷಣೆ ಮಾಡುವುದರ ಪರವಾಗಿ ನಾವೂ ಇದ್ದೇವೆ. ಮಾನವ ಕಾಡು ಪ್ರಾಣಿ ಸಂಘರ್ಷ ಸಾಮಾನ್ಯವಾಗಿದೆ. ಅರಣ್ಯ ಒತ್ತುವರಿ ಜಮೀನು ರೈತರಿಗೆ ಕೊಡಬೇಕು ಎಂದು ಸಾಕಷ್ಟು ಹೋರಾಟ ನಡೆದಿದೆ. ಸಂಗಮೇಶ್ ವಿರುದ್ಧ ಹಕ್ಕುಚ್ಯುತಿ ಆಗಿದೆ ಎಂದು ಆರೋಪ ಬಂದಿತ್ತು. ನಾವು ಕೂಡಲೇ ಹಕ್ಕು ಬಾಧ್ಯತಾ ಸಮಿತಿಗೆ ನೀಡಿದ್ದೇವೆ. ಅಧಿಕಾರಿಗಳನ್ನು ಕೇಳುವವರು ಹೇಳುವವರು ಯಾರೂ ಇಲ್ಲದಂತಾಗಿದೆ. ಶಾಸಕರ ಮೇಲೆ ಎಫ್ಐಆರ್ ಹಾಕುತ್ತಾರೆ ಎಂದರೆ ಏನು ಅರ್ಥ ಬರುತ್ತದೆ? ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಹಾಗೂ ಕೇಸ್ ವಾಪಸ್ ಪಡೆಯಿರಿ ಎಂದು ಆಗ್ರಹಿಸಿದರು. ಬಳಿಕ ಸ್ಪೀಕರ್‌ ಯು.ಟಿ. ಖಾದರ್‌, ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ನಿರ್ಣಯವನ್ನು ರವಾನಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
Dead bodies found
ಕರ್ನಾಟಕ9 mins ago

Suspicious Death:‌ ಚರಂಡಿಯಲ್ಲಿ ತೇಲಿ ಬಂತು ಮಗುವಿನ ಶವ; ಕೋಲಾರದಲ್ಲಿ ಮೃತದೇಹಗಳು ಪತ್ತೆ!

Sukhdev SIngh
ದೇಶ12 mins ago

Sukhdev Singh: ಆತ್ಮೀಯವಾಗಿ ಮಾತನಾಡುತ್ತಲೇ ಸುಖ್​ದೇವ್ ಮೇಲೆ ಹಾರಿಸಿದ್ರು 5 ಗುಂಡು; ಇಲ್ಲಿದೆ ವಿಡಿಯೊ!

Election Results 2023, Bengaluru businessman is now mla in Rajasthan
ದೇಶ17 mins ago

ಬೆಂಗಳೂರಿನ ಜವಳಿ ವ್ಯಾಪಾರಿ ಈಗ ರಾಜಸ್ಥಾನದಲ್ಲಿ ಶಾಸಕ!

Teachers Recruitment
ಕರ್ನಾಟಕ19 mins ago

Teachers Recruitment: ಪ್ರಾಥಮಿಕ, ಪ್ರೌಢ ಶಾಲೆ ಶಿಕ್ಷಕರ ನೇಮಕ; ಒಟ್ಟು ಎಷ್ಟು ಹುದ್ದೆ ನಿರೀಕ್ಷೆ?

Boat
ಉತ್ತರ ಕನ್ನಡ28 mins ago

Fishermen Rescued: ಅರಬ್ಬಿ ಸಮುದ್ರದಲ್ಲಿ ನಾಪತ್ತೆಯಾಗಿದ್ದ ಬೋಟ್‌ ಪತ್ತೆ; 27 ಮೀನುಗಾರರ ರಕ್ಷಣೆ

harish poonja in Belagavi Winter Session
ಕರ್ನಾಟಕ53 mins ago

Belagavi Winter Session: ಹಕ್ಕುಚ್ಯುತಿ ಮಂಡಿಸಿದ ಶಾಸಕ ಹರೀಶ್ ಪೂಂಜಾ; ಹಕ್ಕು ಬಾಧ್ಯತಾ ಸಲಹಾ ಸಮಿತಿಗೆ ರೆಫರ್

Pakistan girl will marry indian man in kolkata, West bengal
ದೇಶ53 mins ago

ಭಾರತದ ಹುಡುಗನನ್ನು ವರಿಸಲಿದ್ದಾಳೆ ಪಾಕಿಸ್ತಾನದ ಹುಡುಗಿ! ಸಿಕ್ತು 45 ದಿನಗಳ ವೀಸಾ

Rohit Sharma
ಕ್ರಿಕೆಟ್56 mins ago

IPL 2024 : ರೋಹಿತ್​, ಪಾಂಡ್ಯ ಅಲ್ಲ; ಮುಂಬಯಿ ಇಂಡಿಯನ್ಸ್​ ತಂಡಕ್ಕೆ ಈ ಬಾರಿ ಹೊಸ ನಾಯಕ?

karnataka weather Forecast
ಕರ್ನಾಟಕ59 mins ago

karnataka Weather :‌ ಮುಂದಿನ 24 ಗಂಟೆಯಲ್ಲಿ 18 ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

snake bite in vijayanagar
ಕರ್ನಾಟಕ1 hour ago

Snake Bite : ವಿಜಯನಗರದಲ್ಲಿ ಹಾವು ಕಡಿತದಿಂದ ಮಹಿಳೆ ಸಾವು!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ13 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌