Breastfeeding Week 2022 | ಅಮ್ಮನ ಹಾಲೇ ಅಮೃತ! - Vistara News

ಪ್ರಮುಖ ಸುದ್ದಿ

Breastfeeding Week 2022 | ಅಮ್ಮನ ಹಾಲೇ ಅಮೃತ!

ಮಗು ಆರೋಗ್ಯವಾಗಿ, ರೋಗ ರುಜಿನಗಳ ಬಾಧೆಯಿಲ್ಲದೆ ಬೆಳೆಯುವುದು ಅಮ್ಮನ ಎದೆಹಾಲಿನಿಂದ. ಈ ಅಮೃತ ಕೇವಲ ಹೊಟ್ಟೆತುಂಬಿಸುವ ಆಹಾರವಷ್ಟೇ ಅಲ್ಲ. Breastfeeding Week ಇದು, ಸ್ತನ್ಯಪಾನದ ಮಹತ್ವ ತಿಳಿಯೋಣ.

VISTARANEWS.COM


on

breastfeed
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಮ್ಮ ಮತ್ತು ಮಗುವಿನ ಸಂಬಂಧವೇ ಹಾಗೆ. ಭೂಮಿಯ ಮೇಲೆ ಸಿಗುವ ಅಪರೂಪದ ಬಂಧವಿದು. ನವಮಾಸ ಹೊತ್ತು ಹೆತ್ತ ಜೀವಕ್ಕೂ ಕರುಳ ಬಳ್ಳಿಗೂ ಇರುವ ಸಂಬಂಧ ಮತ್ತೆ ಎದೆಹಾಲಿನ ಮೂಲಕ ಇನ್ನೂ ಗಟ್ಟಿಯಾಗುತ್ತದೆ. ಅಮ್ಮನ ಮಡಿಲಲ್ಲಿ ಬೆಚ್ಚಗೆ ಕೂತು ಹಾಲು ಕುಡಿವ ಮಗು ಅನುಭವಿಸುವ ಲೋಕವೇ ದಿವ್ಯವಾದದ್ದು. ಅದಕ್ಕೇ ಅಮ್ಮನೆಂಬ ಭಾವವೇ ಪರಮ ಪವಿತ್ರವಾದದ್ದು!

ಗರ್ಭಾವಸ್ಥೆಯಿಂದಲೇ ಆರಂಭವಾಗುವ ಅಮ್ಮ ಮಗುವಿನ ಸಂಬಂಧಕ್ಕೆ ಭಾಷ್ಯ ಬರೆಯುವುದು ಈ ಸ್ತನ್ಯಪಾನ. ಬಹುತೇಕ ಸಕಲ ಜೀವ ಜಂತುಗಳಲ್ಲೂ ಇರುವ ಈ ಅಮ್ಮನೆಂಬ ಭಾವ, ಪ್ರೀತಿ, ಪಾತ್ಸಲ್ಯ ಅನುಪಮವಾದದ್ದು. ಗರ್ಭದಿಂದ ಹೊರ ಪ್ರಪಂಚಕ್ಕೆ ಕಾಲಿಟ್ಟರೂ ಮಗು ಆರೋಗ್ಯವಾಗಿ, ರೋಗ ರುಜಿನಗಳ ಬಾಧೆಯಿಲ್ಲದೆ ಬೆಳೆಯುವುದು ಇದೇ ಅಮ್ಮನ ಎದೆಹಾಲಿನಿಂದ. ಈ ಎದೆಹಾಲೆಂಬ ಅಮೃತ ಕೇವಲ ಹೊಟ್ಟೆತುಂಬಿಸುವ ಆಹಾರವಷ್ಟೇ ಅಲ್ಲ. ಇಬ್ಬರ ನಡುವಿನ ಜೀವ-ಭಾವದ ತಂತುವೂ ಹೌದು. ಎಷ್ಟೇ ಪ್ರಪಂಚ ಮುಂದುವರಿದರೂ, ಅಮ್ಮ ಮಗುವಿನ ಸಂಬಂಧ ಏರ್ಪಡುವ ಈ ಅಪರೂಪದ ನಿಸರ್ಗದತ್ತ ಗಳಿಗೆಯನ್ನು ಮಾತ್ರ ಯಾರೂ ಕಸಿದುಕೊಳ್ಳಲಾರರು. ಹಾಗಾಗಿಯೇ, ಆರೋಗ್ಯಕರ ಲಾಭಗಳ ಹೊರತಾಗಿಯೂ ಸ್ತನ್ಯಪಾನವೆಂಬ ಕ್ರಿಯೆ ಎತ್ತರಕ್ಕೇರುವುದು.

ಈ ಸ್ತನ್ಯಪಾನ ಸಪ್ತಾಹ ಮಾಡುವ ಉದ್ದೇಶವೇನು? ಜನರಲ್ಲಿ ಈ ಬಗ್ಗೆ ಅರಿವು ಮೂಡಿಸುವ ಅಗತ್ಯ ಇನ್ನೂ ಇರುವುದ್ಯಾಕೆ ಎಂದು ನೋಡಿದರೆ, ಪ್ರಪಂಚದಾದ್ಯಂತ ಸಿಗುವ ಅಂಕಿ ಅಂಶಗಳು ಇನ್ನೂ, ಜನರು ಈ ಬಗ್ಗೆ ಅರಿತುಕೊಳ್ಳುವುದು ಬಾಕಿ ಇದೆ ಎಂದೇ ಹೇಳುತ್ತದೆ. ಅದಕ್ಕಾಗಿಯೇ, ಪ್ರತಿ ವರ್ಷ ಆಗಸ್ಟ್‌ ೧ರಿಂದ ೭ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ ೧೭೦ ದೇಶಗಳಲ್ಲಿ ಆಚರಿಸಲ್ಪಡುತ್ತದೆ. ಈ ವರ್ಷ, ʻಸ್ತನ್ಯಪಾನದತ್ತ ಒಂದು ಹೆಜ್ಜೆ ಮುಂದೆ; ಸುಶಿಕ್ಷಿತರನ್ನಾಗಿಸಿ ಮತ್ತು ಬೆಂಬಲಿಸಿʼ ಎಂಬ ಧ್ಯೇಯವಾಕ್ಯದಡಿ ಎದೆಹಾಲಿನ ಮಹತ್ವವನ್ನು ಲೋಕಕ್ಕೆ ಸಾರಲಾಗುತ್ತಿದೆ.

ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಮೊದಲ ಬಾರಿಗೆ ೧೯೯೨ರಲ್ಲಿ ಮೊದಲ ಬಾರಿಗೆ ಆಚರಿಸಲಾಯಿತು. ಆಗ ಸುಮಾರು ೭೦ ದೇಶಗಳು ಈ ಸಪ್ತಾಹದ ಅಗತ್ಯತೆಯನ್ನು ಅರ್ಥ ಮಾಡಿಕೊಂಡು ಆಚರಿಸಲು ಆರಂಭಿಸಿದರೆ, ಇದು ಇದರ ಸಂಖ್ಯೆ ೧೭೦ಕ್ಕೇರಿದೆ. ಅಂಕಿಅಂಶಗಳ ವರದಿಯ ಪ್ರಕಾರ, ಹುಟ್ಟುವ ಪ್ರತಿ ಮೂರು ಮಕ್ಕಳಲ್ಲಿ ಇಬ್ಬರು ಎದೆಹಾಲು ಕುಡಿಯುತ್ತಿಲ್ಲ. ಆಧುನಿಕ ಜಗತ್ತಿನ ಪ್ರಭಾವವೂ ಸೇರಿದಂತೆ ಹಲವು ಕಾರಣಗಳಿಂದ ಇಂದು ಮಹಿಳೆಯರು ಎದೆಹಾಲನ್ನು ಮಕ್ಕಳಿಗೆ ಉಣಿಸುವ ಪ್ರಕ್ರಿಯೆ ಕಡಿಮೆಯಾಗುತ್ತಿದ್ದು, ಅದಕ್ಕಾಗಿಯೇ, ಜನರಲ್ಲಿ ಈ ಬಗ್ಗೆ ತಿಳುವಳಿಕೆ ಮೂಡಿಸಿ, ಮಗುವಿಗೂ, ಹೆತ್ತ ಅಮ್ಮನಿಗೂ ಎದೆಹಾಲು ಉಣಿಸುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಸಿ ಹೇಳಲು ಸಾಮೂಹಿಕವಾಗಿ ಈ ಪ್ರಯತ್ನ ಮಾಡಲಾಗುತ್ತಿದೆ.

Breastfeed

ವಿಶ್ವ ಆರೋಗ್ಯ ಸಂಸ್ಥೆ, ಸಪ್ತಾಹದ ಸಂದರ್ಭ ಸ್ತನ್ಯಪಾನ ಯಾಕೆ ಮಗುವಿಗೆ ಅತ್ಯಗತ್ಯ ಎಂದು ವಿವರಿಸುವುದು ಹೀಗೆ. ತಾಯಿಯ ಎದೆಹಾಲಿನಷ್ಟು ಸಮೃದ್ಧವಾದ ಆಹಾರ ಶಿಶುವಿಗೆ ಇನ್ನೊಂದಿಲ್ಲ. ಮೊದಲ ಆರು ತಿಂಗಳು ಮಗುವಿಗೆ ಅಮ್ಮನ ಹಾಲೇ ಮುಖ್ಯ ಆಹಾರ. ಸಂದರ್ಭ ಬೇರೆ ಆಹಾರದ ಅಗತ್ಯವೇ ಇರುವುದಿಲ್ಲ. ಆದರೆ ಅಂಕಿಅಂಶಗಳು ಬೇರೆಯದೇ ಕಥೆ ಹೇಳುತ್ತಿವೆ. ಪ್ರಪಂಚದಲ್ಲಿ, ಮೊದಲ ಆರು ತಿಂಗಳು ಕೇವಲ ಶೇ.೪೦ರಷ್ಟು ಶಿಶುಗಳು ಮಾತ್ರ ತಾಯಿಯ ಎದೆಹಾಲನ್ನು ಪ್ರಮುಖ ಆಹಾರವಾಗಿ ತೆಗೆದುಕೊಳ್ಳುತ್ತವೆ. ಸ್ತನ್ಯಪಾನವನ್ನು ಜಾಗತಿಕ ಮಟ್ಟದಲ್ಲಿ ಸಾರ್ವತ್ರೀಕರಣಗೊಳಿಸಿದರೆ, ೮,೨೦,೦೦೦ ಮಕ್ಕಳು ಪ್ರತಿವರ್ಷ ಬದುಕಬಹುದು ಎನ್ನುತ್ತದೆ ಈ ಕುರಿತ ಒಂದು ವರದಿ.

ಭಾರತದಲ್ಲಿ ಮಗುವಿನ ಜನನವಾದ ತಕ್ಷಣ ಒಂದು ಗಂಟೆಯೊಳಗೆ ಎದೆಹಾಲು ಕುಡಿಸುವ ಪ್ರಮಾಣದಲ್ಲಿಯೂ ಭಾರೀ ಇಳಿಕೆಯಾಗಿದೆ. ರಾಷ್ಟ್ರೀಯ ಕುಟುಂಬ ಆರೋಗ್ಯ ವರದಿಯ ಪ್ರಕಾರ, ಪ್ರತಿ ೨೨ ರಾಜ್ಯಗಳ ಪೈಕಿ, ಸಿಕ್ಕಿಂನಲ್ಲಿ ಶೇ.೩೩.೫ರಷ್ಟು ಪ್ರಮಾಣದಲ್ಲಿ ಇದು ಇಳಿಕೆ ಕಂಡಿದೆ. ಲಕ್ಷದ್ವೀಪ, ಮೇಘಾಲಯಗಳಲ್ಲಿ ಶೇ.೧೮ರಷ್ಟು ಕಡಿಮೆಯಾಗಿದೆ.

ಮೊದಲ ಆರು ತಿಂಗಳ ಸ್ತನ್ಯಪಾನ ಯಾಕೆ ಬಹುಮುಖ್ಯ ಎಂಬುದನ್ನು ವಿಶ್ವ ಆರೋಗ್ಯ ಸಂಸ್ಥೆ ಹೀಗೆ ಎಳೆಎಳೆಯಾಗಿ ವಿವರಿಸುತ್ತದೆ.

೧. ಮಗು ಹುಟ್ಟಿದ ಒಂದು ಗಂಟೆಯಲ್ಲಿ ತಾಯಂದಿರು ಮಕ್ಕಳಿಗೆ ಹಾಲುಣಿಸುವ ಕ್ರಿಯೆಗೆ ತಯಾರಾಗಬೇಕು. ಮೊದಲ ಮೂರು ದಿನ ಉತ್ಪತ್ತಿಯಾಗುವ ಹಳದಿ ಬಣ್ಣದ ಗಟ್ಟಿ ದ್ರವವನ್ನು ಯಾವುದೇ ಕಾರಣಕ್ಕೂ ಹಿಂಡಿ ಚೆಲ್ಲಬಾರದು. ಇದು ಮಕ್ಕಳಿಗೆ ಅಗತ್ಯವಾಗಿ ಬೇಕಾದ ರೋಗನಿರೋಧಕ ಶಕ್ತಿಯನ್ನು ನೀಡುತ್ತದೆ. ಇದರಲ್ಲಿ, ಮಗುವಿನ ಸರ್ವತೋಮುಖ ಬೆಳವಣಿಗೆಗೆ ಬೇಕಾದ ಪೋಷಕಾಂಶ, ಜೀವಸತ್ವಗಳು ಹಾಗೂ ಖನಿಜಾಂಶಗಳು ಹೇರಳವಾಗಿರುತ್ತವೆ. ಮಗುವಿನ ಬುದ್ಧಿಮತ್ತೆಎ ತೀಕ್ಷ್ಣವಾಗುತ್ತದೆ.

೨. ಆರು ತಿಂಗಳ ಕಾಲ ಕೇವಲ ತಾಯಿಯ ಎದೆಹಾಲಿನಲ್ಲೇ ಬೆಳೆದ ಮಕ್ಕಳು ಉತ್ತಮ ಬೆಳವಣಿಗೆ ಹೊಂದುತ್ತಾರೆ. ಶಾರೀರಿಕವಾಗಿ, ಬೌದ್ಧಿಕವಾಗಿ, ಮಾನಸಿಕವಾಗಿ ಅವರ ಬೆಳವಣಿಗೆ ಚೆನ್ನಾಗಿ ಆಗುತ್ತದೆ. ಮಕ್ಕಳಿಗೆ ಸಿಗಬೇಕಾದ ಎಲ್ಲ ಪೋಷಕಾಂಶಗಳೂ ಎದೆಹಾಲಿನಲ್ಲಿ ಸಮೃದ್ಧವಾಗಿರುವುದರಿಂದ ಆರು ತಿಂಗಳ ಕಾಲ ಮಗುವಿಗೆ ಇತರೆ ಆಹಾರಗಳ ಅಗತ್ಯ ಕಂಡುಬರುವುದಿಲ್ಲ. ವೈದ್ಯರ ಸಲಹೆಯ ಮೇರೆಗೆ ಪೂರಕ ಆಹಾರಗಳನ್ನು ಆರಂಭಿಸಬಹುದು.

ಇದನ್ನೂ ಓದಿ: ಮಕ್ಕಳ ಹೆತ್ತವರಿಗೆ ದಕ್ಕುವ ಉಚಿತ ಸಲಹೆಗಳು ಮತ್ತು ಕಟು ಸತ್ಯಗಳು!

೩. ಮಗುವಿಗೆ ಆರು ತಿಂಗಳ ನಂತರವೂ ಎದೆಹಾಲನ್ನು ಮುಂದುವರಿಸಿ, ಎರಡು ವರ್ಷಗಳವರೆಗೆ ಹಾಲುಣಿಸಬಹುದು. ಹಾಗೂ ಅಗತ್ಯವಿದ್ದಲ್ಲಿ ಆಮೇಲೆಯೂ ಆರು ತಿಂಗಳ ಕಾಲ ಮುಂದುವರಿಸಬಹುದು.

೪. ಬಾಲ್ಯಕಾಲದಲ್ಲಿ ಬರುವ ಯಾವುದೇ ಆರೋಗ್ಯ ಸಮಸ್ಯೆಗಳಿಗೂ ತಾಯಿಯ ಎದೆಹಾಲೇ ಪರಿಹಾರ. ಎದೆಹಾಲಿನಲ್ಲಿರುವ ರೋಗನಿರೋಧಕಗಳು ಹಾಗೂ ಪೋಷಕಾಂಶಗಳು ಮಗುವಿಗೆ ಎಲ್ಲ ರೀತಿಯ ರೋಗಗಳಿಂದಲೂ ರಕ್ಷಣಾ ಕವಚದಂತೆ ವರ್ತಿಸುವುದಲ್ಲದೆ, ಮಗುವನ್ನು ಗಟ್ಟಿಮುಟ್ಟಾಗಿಸುತ್ತದೆ. ತಾಯಿ ಹಾಲನ್ನು ಪೂರ್ಣಾಹಾರವಾಗಿ ಕುಡಿವ ಮಗು ರೋಗರುಜಿನಗಳಿಂದಲೇ ದೂರವಿರುತ್ತದೆ.

೫. ಎದೆಹಾಲು ಉಣಿಸುವುದು ಕೇವಲ ಮಗುವಿಗಷ್ಟೇ ಅಲ್ಲ ತಾಯಿಗೂ ಉಪಯೋಗವಿದೆ. ಇದು ತಾಯಿಗೆ ಮುಂದಿನ ಆರು ತಿಂಗಳ ಕಾಲ ನೈಸರ್ಗಿಕ ವಿಧಾನದಲ್ಲಿ ಜನನ ನಿಯಂತ್ರಣವನ್ನೂ ಮಾಡುತ್ತದೆ. ಇದರಿಂದ ತಾಯಿಗೆ ಶೇ.೯೮ರಷ್ಟು ರಕ್ಷಣೆ ಸಿಗುತ್ತದೆ.

೬. ಎದೆಹಾಲು ಕುಡಿಸುವುದು ತಾಯಂದಿರಿಗೆ ಸ್ತನ ಕ್ಯಾನ್ಸರ್‌ ಹಾಗೂ ಗರ್ಭಕೋಶದ ಕ್ಯಾನ್ಸರ್‌ ಬರುವುದನ್ನು ತಡೆಯುತ್ತದೆ. ಮಧುಮೇಹ, ಬಾಣಂತಿ ಸನ್ನಿ ಹೆಸರಿನ ಖಿನ್ನತೆಯಂತಹ ಮಾನಸಿಕ ಸಮಸ್ಯೆಗಳು ಬರುವುದರಿಂದಲೂ ದೂರವಿರಿಸುತ್ತದೆ.

೭. ಮಕ್ಕಳಿಗೆ ದೀರ್ಘಕಾಲಿಕ ಲಾಭಗಳೂ ಇವೆ. ಎದೆಹಾಲು ಕುಡಿದ ಮಕ್ಕಳು ಕಿಶೋರಾವಸ್ಥೆಯಲ್ಲಿ ಬೊಜ್ಜು ಹಾಗೂ ತೂಕದ ಸಮಸ್ಯೆಗಳಗೆ ಅಷ್ಟಾಗಿ ತುತ್ತಾಗುವುದಿಲ್ಲ. ಇಷ್ಟೇ ಅಲ್ಲ, ಎದೆಹಾಲು ಕುಡಿದು ಬೆಳೆದ ಮಕ್ಕಳಿಗೆ ಮಧುಮೇಹದಂಥ ತೊಂದರೆಗಳಿಂದಲೂ ದೂರ ಇರುತ್ತಾರೆ.

ಇದನ್ನೂ ಓದಿ: ಸದಾ ನಗುತ್ತಿರುವಂತೆ ಕಾಣುವ ಈ ಮಗು ಇಂಟರ್‌ನೆಟ್‌ ಸ್ಟಾರ್‌; ಅಪರೂಪದ ಕಾಯಿಲೆಗೆ ಹೆದರಿದ ಪಾಲಕರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಭಾರತದ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ ಖಂಡನೀಯ

ಅಮೆರಿಕದ ಹಿತಾಸಕ್ತಿ ಭಾರತದಲ್ಲಿ ಬಹಳಷ್ಟಿದೆ. ಅಲ್ಲಿನ ಮೆಡಿಕಲ್ ಲಾಬಿ, ಸೋಯಾ ಲಾಬಿ, ತೈಲ ಲಾಬಿ, ಶಸ್ತ್ರಾಸ್ತ್ರ ಲಾಬಿ ಇತ್ಯಾದಿಗಳು ಇಲ್ಲಿ ಪ್ರಭಾವ ಬೀರಲು ಯತ್ನಿಸುತ್ತಲೇ ಇರುತ್ತವೆ. ಉದಾಹರಣೆಗೆ, ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳಬೇಡಿ ಎಂದು ಇತ್ತೀಚೆಗೆ ಬೆದರಿಕೆ ಒಡ್ಡಿತ್ತು. ಶಸ್ತ್ರಾಸ್ತ್ರಗಳಲ್ಲಿ ಸ್ವಾವಲಂಬನೆ, ಬಾಹ್ಯಾಕಾಶ ವಿಜ್ಞಾನದಲ್ಲಿ ಬೆಳವಣಿಗೆ, ಸುಸ್ಥಿರ ಇಂಧನದಲ್ಲಿ ಮುನ್ನಡೆ, ರಾಷ್ಟ್ರೀಯವಾದಿ ಚಿಂತನೆಯ ಆಡಳಿತ ಇತ್ಯಾದಿಗಳು ಅಮೆರಿಕದ ಕಣ್ಣು ಕುಕ್ಕಿರಲೂಬಹುದು.

VISTARANEWS.COM


on

Joe Biden
Koo

ಅಮೆರಿಕದಲ್ಲಿ ಖಲಿಸ್ತಾನಿ ನಾಯಕ (Khalistan Leader) ಗುರುಪತ್‌ವಂತ್ ಸಿಂಗ್ ಪನ್ನುನ್ (Gurpatwant Singh Pannun) ಹತ್ಯೆಯ ಸಂಚಿನಲ್ಲಿ (Murder plot) ಭಾರತದ ʼರಾʼ (RAW) ಅಧಿಕಾರಿಯ ಕೈವಾಡದ ಕುರಿತು ಅಮೆರಿಕ(America)ದ ಆರೋಪಕ್ಕೆ ತಿರುಗೇಟು ನೀಡಿದ್ದ ರಷ್ಯಾ(America v/s Russia), ಅಮೆರಿಕವು ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ಯತ್ನಿಸುತ್ತಿದೆ ಎಂದು ಹೇಳಿತ್ತು. ಪನ್ನುನ್ ಹತ್ಯೆ ಪ್ರಕರಣದಲ್ಲಿ ಭಾರತದ ಕೈವಾಡ ಇದೆ ಎಂದು ಆರೋಪಿಸಿದ್ದ ಅಮೆರಿಕಕ್ಕೆ ಟಾಂಗ್‌ ನೀಡಿದ್ದ ರಷ್ಯಾ, ಭಾರತದಲ್ಲಿ ಆಂತರಿಕ ರಾಜಕೀಯ ಸ್ಥಿತಿಗತಿಯನ್ನು ಅಲ್ಲೋಲ ಕಲ್ಲೋಲ ಮಾಡಲು ಅಮೆರಿಕ ಯತ್ನಿಸುತ್ತಿದೆ. ಭಾರತೀಯ ರಾಷ್ಟ್ರೀಯತೆ ಮನಸ್ಥಿತಿ ಮತ್ತು ಇತಿಹಾಸವನ್ನು ಅರ್ಥಮಾಡಿಕೊಳ್ಳದ ಅಮೆರಿಕ ಸುಖಾಸುಮ್ಮನೆ ಭಾರತದ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಆರೋಪ ಮಾಡುತ್ತಿದೆ. ಭಾರತದ ಆಂತರಿಕ ವಿಚಾರದಲ್ಲಿ ಅಮೆರಿಕ ನಿರಂತರವಾಗಿ ಮೂಗು ತೂರಿಸುವ ಪ್ರಯತ್ನ ನಡೆಸುತ್ತಲೇ ಇದೆ. ಭಾರತವನ್ನು ಗೌರವಿಸುವ ಮನಸ್ಸು ಅಮೆರಿಕಕ್ಕೆ ಇಲ್ಲ. ಅಮೆರಿಕದ ಆರೋಪಗಳು ಸುಳ್ಳು ಮತ್ತು ನಿರಾಧಾರವಾಗಿದ್ದು, ಅದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಖಡಕ್ಕಾಗಿ ಹೇಳಿದೆ.

ರಷ್ಯಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅಮೆರಿಕ, ಭಾರತದ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ಅಮೆರಿಕ ಎಂದಿಗೂ ಬಯಸುವುದಿಲ್ಲ. ಭಾರತ ಮಾತ್ರ ಅಲ್ಲ ಬೇರೆ ಯಾವುದೇ ರಾಷ್ಟ್ರಗಳ ಆಂತರಿಕ ವಿಚಾರದಲ್ಲಿ ಅಮೆರಿಕ ಮೂಗು ತೂರಿಸುವುದಿಲ್ಲ ಎಂದು ಹೇಳಿದೆ. ಈ ಮಾತಿನಲ್ಲಿ ಸತ್ಯವೆಷ್ಟಿದೆ, ಸುಳ್ಳೆಷ್ಟು ಎಂಬುದು ಇಡೀ ಜಗತ್ತಿಗೇ ಗೊತ್ತು. ಈ ಭೂಮಿಯಲ್ಲಿ ಎಲ್ಲ ದೇಶಗಳ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ದೇಶ ಒಂದಿದ್ದರೆ ಅದು ಅಮೆರಿಕ. ರಷ್ಯ ಕೂಡ ಸುಮ್ಮಸುಮ್ಮನೇ ಆರೋಪ‌ ಮಾಡಲಾರದು. ಅದರ ಬೇಹುಗಾರಿಕೆ ಶಕ್ತಿ ಕೂಡ ಬಲವಾಗಿಯೇ ಇದೆ. ಹೀಗಾಗಿ ಅದು ಹಂಚಿಕೊಂಡಿರುವ ಮಾಹಿತಿ ಪೂರ್ತಿ ಸುಳ್ಳು ಎನ್ನಲಾಗುವುದಿಲ್ಲ. ರಷ್ಯ ಹಾಗೂ ಅಮೆರಿಕ ಸಾಂಪ್ರದಾಯಿಕ ವೈರಿಗಳಾಗಿರುವುದರಿಂದ, ಆ ಅಂಶವೂ ರಷ್ಯದ ಹೇಳಿಕೆಯ ಹಿಂದೆ ಸ್ವಲ್ಪ ಕೆಲಸ ಮಾಡಿರಬಹುದು ಅನ್ನೋಣ.

ಅನ್ಯ ದೇಶಗಳ ವಿಚಾರದಲ್ಲಿ ಮೂಗು ತೂರಿಸುವ ಅಮೆರಿಕದ ಚಾಳಿಗೆ ಸಾಕಷ್ಟು ಇತಿಹಾಸವಿದೆ. ಅದು ಕ್ಯೂಬಾದ, ರಷ್ಯದ ಅಧ್ಯಕ್ಷರ ಹತ್ಯೆಗೆ ಯತ್ನಿಸಿದೆ; ಅಫ್ಘಾನಿಸ್ತಾನವನ್ನು ಭಯೋತ್ಪಾದಕರನ್ನು ಬೆಳೆಸಿ ಪೂರ್ತಿ ನಾಶ ಮಾಡಿದೆ. ಪಾಕ್ ಅದೇ ಹಾದಿಯಲ್ಲಿದೆ. ಗಲ್ಫ್ ದೇಶಗಳಲ್ಲಿ ಅಮೆರಿಕದ ಮೂಗಿನ ನೇರಕ್ಕೆ ಕುಣಿಯದ ಇರಾನ್, ಟರ್ಕಿ, ಮುಂತಾದ ದೇಶಗಳನ್ನು ಬೆದರಿಸುತ್ತದೆ. ನ್ಯಾಟೋ ಮೂಲಕ ಯುರೋಪ್ ದೇಶಗಳನ್ನು ಕುಣಿಸುತ್ತಿದೆ. ಲ್ಯಾಟಿನ್ ಅಮೆರಿಕದ ಡ್ರಗ್ಸ್ ಜಾಲವನ್ನು ಗುಮ್ಮನಗುಸಕನಂತೆ ಪೋಷಿಸಿದೆ. ವಿಯೆಟ್ನಾಂ ಮೊದಲಾದ ದೇಶಗಳನ್ನು ನೇರ ಮಿಲಿಟರಿ ದಾಳಿ ಮೂಲಕ ಬಗ್ಗುಬಡಿಯಲು ಯತ್ನಿಸಿದೆ. ಅಮೆರಿಕ ಎಸಗದ ಕುಕೃತ್ಯವೇ ಇಲ್ಲ. ಇಂಥ ದೇಶದ ಮಿಲಿಟರಿ ಮತ್ತು ಬೇಹುಗಾರಿಕೆ ನಮ್ಮ ದೇಶದ ಚುನಾವಣೆಯಲ್ಲಿ ಕರಾಮತ್ತಿಗೆ ಮುಂದಾದರೆ ಆಶ್ಚರ್ಯವಿಲ್ಲ.

ಅಮೆರಿಕದ ಹಿತಾಸಕ್ತಿ ಭಾರತದಲ್ಲಿ ಬಹಳಷ್ಟಿದೆ. ಅಲ್ಲಿನ ಮೆಡಿಕಲ್ ಲಾಬಿ, ಸೋಯಾ ಲಾಬಿ, ತೈಲ ಲಾಬಿ, ಶಸ್ತ್ರಾಸ್ತ್ರ ಲಾಬಿ ಇತ್ಯಾದಿಗಳು ಇಲ್ಲಿ ಪ್ರಭಾವ ಬೀರಲು ಯತ್ನಿಸುತ್ತಲೇ ಇರುತ್ತವೆ. ಉದಾಹರಣೆಗೆ, ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳಬೇಡಿ ಎಂದು ಇತ್ತೀಚೆಗೆ ಬೆದರಿಕೆ ಒಡ್ಡಿತ್ತು. ಭಾರತದ ರಸಗೊಬ್ಬರ ಸಬ್ಸಿಡಿ, ಭತ್ತದ ಇಳುವರಿಯ ಹೆಚ್ಚಳ ಇತ್ಯಾದಿಗಳ ಬಗ್ಗೆ ಅದರ ಕೊಂಕು ಇದೆ. ಶಸ್ತ್ರಾಸ್ತ್ರಗಳಲ್ಲಿ ಸ್ವಾವಲಂಬನೆ, ಬಾಹ್ಯಾಕಾಶ ವಿಜ್ಞಾನದಲ್ಲಿ ಬೆಳವಣಿಗೆ, ಸುಸ್ಥಿರ ಇಂಧನದಲ್ಲಿ ಮುನ್ನಡೆ, ರಾಷ್ಟ್ರೀಯವಾದಿ ಚಿಂತನೆಯ ಆಡಳಿತ ಇತ್ಯಾದಿಗಳು ಅಮೆರಿಕದ ಕಣ್ಣು ಕುಕ್ಕಿರಲೂಬಹುದು. ಸದ್ಯ ಅದು ಪನ್ನುನ್ ಹತ್ಯೆ ಸಂಚಿನ ನೆಪ ಹಿಡಿದುಕೊಂಡು ಭಾರತಕ್ಕೆ ಮುಜುಗರ ಸೃಷ್ಟಿಸುವ ಯತ್ನದಲ್ಲಿದೆ. ಆದರೆ ಪನ್ನುನ್ ಭಾರತಕ್ಕೆ ಪೀಡಕನಾದ ಒಬ್ಬ ಭಯೋತ್ಪಾದಕ ಎಂಬುದನ್ನು ಒಪ್ಪಿಕೊಳ್ಳಲು ಅದು ಸಿದ್ಧವಿಲ್ಲ.

ಆದರೆ ಭಾರತ ಇದನ್ನೆಲ್ಲ ಅರ್ಥ ಮಾಡಿಕೊಳ್ಳಲು ಆಗದ ದಡ್ಡ ದೇಶವಲ್ಲ. ನಮಗೆ ನಮ್ಮದೇ ರಾಜನೀತಿಯಿದೆ, ಸಂವಿಧಾನವಿದೆ. ನಮ್ಮ ಸಾರ್ವಭೌಮತ್ವವನ್ನು ಯಾರೂ ಪ್ರಶ್ನೆ ಮಾಡಲು ಸಾಧ್ಯವಿಲ್ಲ. ನಮ್ಮ ಚುನಾವಣೆಗಳು ಪಾರದರ್ಶಕ ಹಾಗೂ ಪ್ರಜಾಸತ್ತಾತ್ಮಕ. ಅಮೆರಿಕದ ಕೈವಾಡವನ್ನು ಪತ್ತೆ ಹಚ್ಚುವಷ್ಟು, ಅದನ್ನು ಮೊಳಕೆಯಲ್ಲೇ ನಿಗ್ರಹಿಸುವಷ್ಟು ಶಕ್ತವಾಗಿದೆ ನಮ್ಮ ಬೇಹುಗಾರಿಕೆ ಶಕ್ತಿ.

ಇದನ್ನೂ ಓದಿ: China Missile : ಪಾಕಿಸ್ತಾನಕ್ಕೆ ಗುಟ್ಟಾಗಿ ಕ್ಷಿಪಣಿ ಕಳುಹಿಸಿದ ಚೀನಾದ ಎರಡು ಕಂಪನಿಗಳಿಗೆ ಅಮೆರಿಕದ ನಿರ್ಬಂಧ

Continue Reading

ಭವಿಷ್ಯ

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ಚೌತಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರವೂ ಕಟಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ಅತಿರೇಕದ ಮಾತುಗಳು ಜಗಳವನ್ನುಂಟು ಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಇರಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರು ಉಂಟಾಗುವ ಸಾಧ್ಯತೆ ಇದೆ. ವೃಷಭ ರಾಶಿಯವರು ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (11-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ಚೌತಿ 26:03 ವಾರ: ಶನಿವಾರ
ನಕ್ಷತ್ರ: ಮೃಗಶಿರಾ 10:14 ಯೋಗ: ಸುಕರ್ಮ 10:01
ಕರಣ: ವಣಿಜ 14:20 ಅಮೃತಕಾಲ: ಮಧ್ಯರಾತ್ರಿ 12:22 ರಿಂದ 01:59

ಸೂರ್ಯೋದಯ : 05:55   ಸೂರ್ಯಾಸ್ತ : 06:37

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಅತಿರೇಕದ ಮಾತುಗಳು ಜಗಳವನ್ನುಂಟು ಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ ಇರಲಿದೆ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರು ಉಂಟಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ದಿನದ ಮಟ್ಟಿಗೆ ಖರ್ಚು ಇರಲಿದೆ. ಕುಟುಂಬದ ಆಪ್ತರಿಂದ ಆಮಂತ್ರಣ ಸಿಗಲಿದೆ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಸಾಧ್ಯತೆ ಕಡಿಮೆ ಮಾಡಿಕೊಳ್ಳಿ. ಆಹ್ಲಾದಕಾರಿ ಮನಸ್ಥಿತಿಯಲ್ಲಿರುತ್ತೀರಿ. ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಮಧ್ಯಮವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ .ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅತಿರೇಕದಲ್ಲಿ ಯಾವುದೇ ಮಾತುಗಳು ಅಪಾಯ ತರಬಹುದು. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ:ಕೋಪದಿಂದ ಕಾರ್ಯದಲ್ಲಿ ಹಾನಿಯಾಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಹೇಳಿಕೆಯ ಮಾತುಗಳು ಕುಟುಂಬದ ವಾತಾವರಣ ಕೆಡಿಸುವುದು ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿಯಾಗಲಿದೆ. ಆರೋಗ್ಯದ ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆ ಇರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿಯಾಗಲಿದೆ. ನಂಬಿದ ವ್ಯಕ್ತಿಗಳು ನಿಮ್ಮನ್ನು ಮೋಸಗೊಳಿಸಬಹುದು. ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ:ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು.ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ:ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭೂಮಿ ಸಂಬಂಧದ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ ಇರಲಿದೆ. ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ ಕುಡಿಬರಲಿದೆ. ಕುಟುಂಬದಲ್ಲಿ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ, ಆರ್ಥಿಕವಾಗಿ ಪ್ರಗತಿ ಇರಲಿದೆ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ:ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವುದು. ಅವಶ್ಯಕ ವಸ್ತುಗಳ ಖರೀದಿ ಮಾಡುವಿರಿ. ಅಷ್ಟೇ ಆರ್ಥಿಕ ಲಾಭ ಇರಲಿದೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ, ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಹಳೆಯ ನೋವು ಉಲ್ಬಣಗೊಳ್ಳವ ಸಾಧ್ಯತೆ ಇದೆ. ಆರೋಗ್ಯದ ಕಡೆಗೆ ಗಮನ ಇರಲಿ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು ಇರಲಿದೆ. ಸಂಬಂಧಿಗಳೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

Narendra Modi: ಶಿಂಧೆ, ಅಜಿತ್‌ ಬಣಕ್ಕೆ ನೀವೇ ಸೇರಿಬಿಡಿ; ಠಾಕ್ರೆ, ಶರದ್‌ ಪವಾರ್‌ಗೆ ಮೋದಿ ಸಲಹೆ!

Narendra Modi: “ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡು, ಚುನಾವಣೆ ಫಲಿತಾಂಶದ ಬಳಿಕ ನರಳುವ ಬದಲು ಏಕನಾಥ್‌ ಶಿಂಧೆ ಬಣದ ಶಿವಸೇನೆ ಹಾಗೂ ಅಜಿತ್‌ ಪವಾರ್‌ ಬಣದ ಎನ್‌ಸಿಪಿ ಜತೆ ವಿಲೀನ ಘೋಷಿಸುವುದು ಉತ್ತಮ” ಎಂಬುದಾಗಿ ಪರೋಕ್ಷವಾಗಿ ಉದ್ಧವ್‌ ಠಾಕ್ರೆ ಹಾಗೂ ಶರದ್‌ ಪವಾರ್‌ ಅವರಿಗೆ ಸಲಹೆ ನೀಡಿದರು. ಹಾಗೆಯೇ, ನಕಲಿ ಎನ್‌ಸಿಪಿ, ನಕಲಿ ಶಿವಸೇನೆ ಎಂದು ಕೂಡ ಚಾಟಿ ಬೀಸಿದರು.

VISTARANEWS.COM


on

Narendra Modi
Koo

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಪಕ್ಷಗಳು ಹರಿದು ಹಂಚಿ ಹೋಗಿರುವ ಕಾರಣ ಈ ಬಾರಿಯ ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶವು ತೀವ್ರ ಕುತೂಹಲ ಕೆರಳಿಸಿದೆ. ಶಿವಸೇನೆಯನ್ನು ಇಬ್ಭಾಗ ಮಾಡಿದ ಏಕನಾಥ್‌ ಶಿಂಧೆ ಈಗ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಶರದ್‌ ಪವಾರ್‌ (Sharad Pawar) ನೇತೃತ್ವದ ಎನ್‌ಸಿಪಿಯನ್ನು ಒಡೆದ ಅಜಿತ್‌ ಪವಾರ್‌ (Ajit Pawar) ಈಗ ಉಪ ಮುಖ್ಯಮಂತ್ರಿಯಾಗಿದ್ದಾರೆ. ಹಾಗಾಗಿ, ರಾಜ್ಯದ ಎರಡು ಪ್ರಮುಖ ಪಕ್ಷಗಳೀಗ ಹರಿದು ಹಂಚಿ ಹೋಗಿವೆ. ಇದರ ಮಧ್ಯೆಯೇ, ಉದ್ಧವ್‌ ಠಾಕ್ರೆ (Uddhav Thackeray) ಬಣದ ಶಿವಸೇನೆಗೆ ಹಾಗೂ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಗೆ ನರೇಂದ್ರ ಮೋದಿ (Narendra Modi) ಹೊಸ ಸಲಹೆ ನೀಡಿದ್ದಾರೆ.

ಮಹಾರಾಷ್ಟ್ರದ ನಂದುರ್‌ಬರ್‌ನಲ್ಲಿ ನಡೆದ ಚುನಾವಣೆ ಸಮಾವೇಶದಲ್ಲಿ ಮಾತನಾಡಿದ ಮೋದಿ, ಎನ್‌ಸಿಪಿ ಹಾಗೂ ಶಿವಸೇನೆಗೆ ಪರೋಕ್ಷವಾಗಿ ಚಾಟಿ ಬೀಸಿದರು. ಹಾಗೆಯೇ ಸಲಹೆಯನ್ನೂ ನೀಡಿದರು. “ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡು, ಚುನಾವಣೆ ಫಲಿತಾಂಶದ ಬಳಿಕ ನರಳುವ ಬದಲು ಏಕನಾಥ್‌ ಶಿಂಧೆ ಬಣದ ಶಿವಸೇನೆ ಹಾಗೂ ಅಜಿತ್‌ ಪವಾರ್‌ ಬಣದ ಎನ್‌ಸಿಪಿ ಜತೆ ವಿಲೀನ ಘೋಷಿಸುವುದು ಉತ್ತಮ” ಎಂಬುದಾಗಿ ಪರೋಕ್ಷವಾಗಿ ಉದ್ಧವ್‌ ಠಾಕ್ರೆ ಹಾಗೂ ಶರದ್‌ ಪವಾರ್‌ ಅವರಿಗೆ ಸಲಹೆ ನೀಡಿದರು.

ನಕಲಿ ಪಕ್ಷಗಳು ಎಂದು ವಾಗ್ದಾಳಿ

ಶರದ್‌ ಪವಾರ್‌ ಅವರ ಎನ್‌ಸಿಪಿ ಹಾಗೂ ಉದ್ಧವ್‌ ಠಾಕ್ರೆ ಅವರ ಶಿವಸೇನೆಯನ್ನು ನರೇಂದ್ರ ಮೋದಿ ಅವರು ನಕಲಿ ಪಕ್ಷಗಳು ಎಂದು ಜರಿದರು. “ರಾಜ್ಯದಲ್ಲಿ ಕಳೆದ 40-50 ವರ್ಷದಿಂದ ರಾಜಕೀಯ ಮಾಡುತ್ತಿರುವ ಪ್ರಮುಖ ನಾಯಕರೊಬ್ಬರು ಬಾರಾಮತಿ ಲೋಕಸಭೆ ಕ್ಷೇತ್ರದ ಬಗ್ಗೆ ಹೆಚ್ಚು ಚಿಂತಿತರಾಗಿದ್ದಾರೆ. ಜೂನ್‌ 4ರ ನಂತರ ಸಣ್ಣ ಪಕ್ಷಗಳು ಕಾಂಗ್ರೆಸ್‌ ಜತೆ ವಿಲೀನವಾಗಲಿವೆ ಎಂಬುದಾಗಿ ಹೇಳಿದ್ದಾರೆ. ಇದರ ಅರ್ಥವು ನಕಲಿ ಎನ್‌ಸಿಪಿ ಹಾಗೂ ನಕಲಿ ಶಿವಸೇನೆಯು ಕಾಂಗ್ರೆಸ್‌ ಜತೆ ವಿಲೀನ ಮಾಡಿಕೊಳ್ಳುತ್ತವೆ ಎಂಬುದಾಗಿದೆ. ಇದರ ಬದಲು ಅಜಿತ್‌ ಹಾಗೂ ಶಿಂಧೆ ಬಣಗಳೊಂದಿಗೆ ವಿಲೀನಗೊಳಿಸುವುದು ಉತ್ತಮ” ಎಂದು ಹೇಳಿದರು.

ಶರದ್‌ ಪವಾರ್‌ ಹೇಳಿದ್ದೇನು?

ಮಹಾರಾಷ್ಟ್ರದ ಸಣ್ಣ ಪಕ್ಷಗಳು ಕಾಂಗ್ರೆಸ್‌ ಜತೆ ವಿಲೀನಗೊಳ್ಳಲಿವೆ ಎಂಬುದಾಗಿ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದ ವೇಳೆ ಎನ್‌ಸಿಪಿ ವರಿಷ್ಠ ನಾಯಕ ಶರದ್‌ ಪವಾರ್‌ ಹೇಳಿದ್ದರು. “ಮುಂದಿನ ಎರಡು ವರ್ಷಗಳಲ್ಲಿ ಹಲವು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ ಜತೆ ವಿಲೀನಗೊಳ್ಳಲಿವೆ ಇಲ್ಲವೇ ವಿಲೀನಗೊಳಿಸಲು ಚಿಂತನೆ ನಡೆಸಲಿವೆ. ಪ್ರಾದೇಶಿಕ ಪಕ್ಷಗಳು ಅಸ್ತಿತ್ವಕ್ಕಾಗಿ ಇಂತಹ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ” ಎಂದು ಹೇಳಿದ್ದರು. ಹಾಗಾಗಿ, ಮೋದಿ ಅವರು ಶರದ್‌ ಪವಾರ್‌ ಹಾಗೂ ಉದ್ಧವ್‌ ಠಾಕ್ರೆ ಅವರಿಗೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Rahul Gandhi: “ಅದಾನಿ-ಅಂಬಾನಿ… ಕಾಪಾಡಿ..ಕಾಪಾಡಿ ಅಂತಿದ್ದಾರೆ ಪ್ರಧಾನಿ ಮೋದಿ” ; ರಾಹುಲ್‌ ಗಾಂಧಿ ವ್ಯಂಗ್ಯ

Continue Reading

ಕ್ರೀಡೆ

IPL 2024 : ಚೆನ್ನೈ ವಿರುದ್ಧ ಗುಜರಾತ್​ಗೆ 35 ರನ್ ವಿಜಯ, ಆರ್​​ಸಿಬಿ ಪ್ಲೇಆಫ್​ ಪ್ರವೇಶಕ್ಕೆ ಮತ್ತೊಂದು ಸವಾಲು

IPL 2024: ಟಾಸ್ ಗೆದ್ದ ಚೆನ್ನೈ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಗುಜರಾತ್ ತಂಡ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 231 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​​ಗೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

IPL 2024
Koo

ಅಹಮದಾಬಾದ್​: ಆರಂಭಿಕ ಜೋಡಿ ಸಾಯಿ ಸುದರ್ಶನ್​​ (103 ರನ್​, 5 ಫೋರ್​, 7 ಸಿಕ್ಸರ್​) ಶುಭ್​ಮನ್​ ಗಿಲ್​​ (104 ರನ್​, 9 ಪೋರ್​, 6 ಸಿಕ್ಸರ್​) ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಮಿಂಚಿದ ಗುಜರಾತ್ ಜೈಂಟ್ಸ್​ ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 59ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ 35 ರನ್​ಗಳ ಗೆಲುವು ಸಾಧಿಸಿದೆ. ಇದರೊಂದಿಗೆ ಆರ್​ಸಿಬಿಯ ಪ್ಲೇಆಫ್​ ಪ್ರವೇಶಕ್ಕೆ ಮತ್ತೊಂದು ಸವಾಲು ಎದುರಾಗಿದೆ. ಗುಜರಾತ್​ ಜೈಂಟ್ಸ್ ಕೂಡ 10 ಅಂಕಗಳನ್ನು ಪಡೆದಿದ್ದು ಆರ್​ಸಿಬಿಯ ಸಮಾನವಾಗಿ ನಿಂತಿದೆ. ಹೀಗಾಗಿ ಪ್ಲೇಆಫ್​ಗೆ ಪೈಪೋಟಿ ಅಧಿಕವಾಗಿದೆ. ಈ ಗೆಲುವಿನೊಂದಿಗೆ ಗುಜರಾತ್ ತಂಡ ಎರಡು ಸ್ಥಾನ ಮೇಲಕ್ಕೇರಿ 8ನೇ ಸ್ಥಾನಕ್ಕೆ ಬಂದಿದೆ. ಮುಂಬಯಿ 9 ರಲ್ಲಿ ಇದ್ದರೆ ಪಂಜಾಬ್​ 10ರಲ್ಲಿದೆ. ಚೆನ್ನೈ ನಾಲ್ಕನೇ ಸ್ಥಾನದಲ್ಲಿಯೇ ಇದೆ.

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟ್ ಮಾಡಲು ಆಹ್ವಾನ ಪಡೆದ ಗುಜರಾತ್ ತಂಡ ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 231 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​​ಗೆ 196 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡ ಅಬ್ಬರ ಪ್ರದರ್ಶನ ನೀಡಿತು. ಆರಂಭಿಕರಾದ ಸಾಯಿ ಸುದರ್ಶನ್​ ಹಾಗೂ ನಾಯಕ ಗಿಲ್ ಭರ್ಜರಿ ಪ್ರದರ್ಶ ನೀಡಿದರು. ಅವರಿಬ್ಬರೂ ಶತಕ ಬಾರಿಸುವ ಮೂಲಕ ಭರ್ಜರಿ ಪ್ರದರ್ಶನ ನೀಡಿದರು. ಗಿಲ್ ಹಾಗೂ ಸಾಯಿ ಸುದರ್ಶನ್​ ತಲಾ 50 ಎಸೆತಗಳಲ್ಲಿ ಶತಕ ಬಾರಿಸಿದರು. ಹೀಗಾಗಿ ಮೊದಲ ವಿಕೆಟ್​ಗೆ ಚೆನ್ನೈ ತಂಡ 210 ರನ್ ಬಾರಿಸಿತು. ಬಳಿಕ ಡೇವಿಲ್​ ಮಿಲ್ಲರ್ 16 ರನ್ ಬಾರಿಸಿದರೆ ಶಾರುಖ್ ಖಾನ್ 3 ರನ್ ಗಳಿಸಿದರು.

ಇದನ್ನೂ ಓದಿ: Mr. & Mrs. Mahi : ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ ನಟನೆಯ ಮಿಸ್ಟರ್& ಮಿಸೆಸ್​ ಮಹಿ’ ಬಿಡುಗಡೆ ದಿನಾಂಕ ಪ್ರಕಟ

ಬ್ಯಾಟಿಂಗ್ ವೈಫಲ್ಯ

ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಚೆನ್ನೈ ತಂಡ ಆರಂಭದಲ್ಲೇ ಸತತವಾಗಿ ವಿಕೆಟ್​ಗಳನ್ನು ಕಳೆದುಕೊಂಡಿತು. ಅಜಿಂಕ್ಯ ರಹಾನೆ 1 ರನ್​ಗೆ ಔಟಾದರೆ, ರಚಿನ್ ರವೀಂದ್ರ ಕೂಡ ಅದೇ ಮೊತ್ತಕ್ಕೆ ಔಟಾದರು. ಅವರು ಡೇವಿಡ್​ ಮಿಲ್ಲರ್ ಮಾಡಿರುವ ಅಮೋಘ ರನ್​ಔಟ್​ಗೆ ಬಲಿಯಾದರು. ನಾಯ್ಕ ಋತುರಾಜ್ ಕೊಡುಗೆ ಕೂಡ ಶೂನ್ಯ. ಆದರೆ, ಮಧ್ಯಮ ಕ್ರಮಾಂಕದಲ್ಲಿ ಡ್ಯಾರಿಲ್​ ಮಿಚೆಲ್ (34 ಎಸೆತಕ್ಕೆ 63 ರನ್ ) ಅರ್ಧ ಶತಕ ಬಾರಿಸಿದರೆ ಮೊಯಿಲ್ ಅಲಿ ಕೂಡ 56 ರನ್ ಬಾರಿಸಿದರು. ಇವರಿಬ್ಬರೂ ನಾಲ್ಕನೇ ವಿಕೆಟ್​ಗೆ 109 ರನ್ ಬಾರಿಸಿದರು. ಆದರೆ ಇವರ ಜತೆಯಾಟ ಮುರಿದ ಬಳಿಕ ಒಂದೊಂದೆ ವಿಕೆಟ್​ಗಳು ಉರುಳಿದವು. ಶಿವಂ ದುಬೆ 21 ರನ್ ಹೊಡೆದರೆ, ರವೀಂದ್ರ ಜಡೇಜಾ 18 ರನ್​ಗೆ ಸೀಮಿತಗೊಂಡರು. ಕೊನೆಯಲ್ಲಿ ಧೋನಿ 11 ಎಸೆತಕ್ಕೆ 26 ರನ್ ಬಾರಿಸಿದರೂ ತಂಡಕ್ಕೆ ಅದರಿಂದ ಗೆಲವು ಪಡೆಯಲು ಸಾಧ್ಯವಾಗಲಿಲ್ಲ.

ಮೋಹಿತ್ ಶರ್ಮಾ 31 ರನ್​ ಗೆ 3 ವಿಕೆಟ್ ಪಡೆದರೆ ರಶೀದ್ ಖಾನ್​ 3 ರನ್ ನೀಡಿ 2 ವಿಕೆಟ್ ಪಡೆದರು.

Continue Reading
Advertisement
SSLC Student missing In Kopala
ಕೊಪ್ಪಳ19 mins ago

SSLC Student Missing : ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌ ಆದ ಬಾಲಕ ನಾಪತ್ತೆ!

Rahul Gandhi
ದೇಶ25 mins ago

Rahul Gandhi: ನರೇಂದ್ರ ಮೋದಿ ಪ್ರಧಾನಿಯಲ್ಲ, ಮಹಾರಾಜ ಎಂದ ರಾಹುಲ್ ಗಾಂಧಿ

Murder Case in Bengaluru
ಬೆಂಗಳೂರು37 mins ago

Murder case : ಕೊಟ್ಟ ಹಣ ಕೇಳಿದ್ದಕ್ಕೆ ಗೆಳೆಯನನ್ನೇ ಕೊಂದಿದ್ದ ದ್ರೋಹಿ ಅರೆಸ್ಟ್‌

Prajwal Revanna Case
ಕರ್ನಾಟಕ52 mins ago

Prajwal Revanna Case: ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ!

Food Poisoning
ಚಿತ್ರದುರ್ಗ1 hour ago

Food Poisoning: ಮದುವೆ ಮನೆ ಊಟ ತಿಂದವರಿಗೆ ವಾಂತಿ, ಭೇದಿ; ನೂರಾರು ಮಂದಿ ಅಸ್ವಸ್ಥ

Gold Rate Today
ಕರ್ನಾಟಕ1 hour ago

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

Heavy Rain
ಕರ್ನಾಟಕ1 hour ago

Heavy Rain: ಧಾರಾಕಾರ ಮಳೆಯಿಂದ ಮನೆಗೆ ನುಗ್ಗಿದ ನೀರು; ಮರ ಉರುಳಿ ವಾಹನಗಳು ಜಖಂ

Murder case in Bengaluru rural
ಬೆಂಗಳೂರು ಗ್ರಾಮಾಂತರ2 hours ago

Murder case : ತಡರಾತ್ರಿ ಹರಿದ ನೆತ್ತರು; ಕತ್ತು ಸೀಳಿ ಯುವಕನ ಬರ್ಬರ ಹತ್ಯೆ

Narendra Modi
ದೇಶ2 hours ago

Narendra Modi: “ದಿವ್ಯಾಂಗ ಸಹೋದರಿಯರಿಗೆ ವ್ಯವಸ್ಥೆ ಮಾಡಿ.. ಅಲ್ಲಿವರೆಗೆ ಭಾಷಣ ಮುಂದುವರೆಸಲ್ಲ”; ಪ್ರಧಾನಿ ಮೋದಿ ವಿಡಿಯೋ ವೈರಲ್

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಎಸ್‌ಐಟಿಯ ವಿಶೇಷ ತಂಡ ರಚನೆ; ಶೀಘ್ರ ರೆಡ್‌ ಕಾರ್ನರ್ ನೋಟಿಸ್‌ ಜಾರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ22 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ23 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌