Detox Drinks: ಮೊಡವೆ, ಕಲೆಯಿಂದ ದೂರವಿರಲು ಇಲ್ಲಿವೆ ಡಿಟಾಕ್ಸ್‌ ಡ್ರಿಂಕ್ಸ್‌! - Vistara News

ಆರೋಗ್ಯ

Detox Drinks: ಮೊಡವೆ, ಕಲೆಯಿಂದ ದೂರವಿರಲು ಇಲ್ಲಿವೆ ಡಿಟಾಕ್ಸ್‌ ಡ್ರಿಂಕ್ಸ್‌!

ಮೊಡವೆಯ ತೊಂದರೆಯಿಂದ ಶಾಶ್ವತವಾಗಿ ದೂರ ಇರಬೇಕೆಂದು ಬಯಸುವವರು ಈ ಡಿಟಾಕ್ಸ್‌ ಪಾನೀಯಗಳನ್ನು (detox drinks) ನಿತ್ಯ ಸೇವಿಸಬಹುದು. ಜೊತೆಗೆ ಕಾರ್ಬೋನೇಟೆಡ್‌ ಡ್ರಿಂಕ್‌ಗಳು, ಪ್ಯಾಕ್ಡ್‌ ಜ್ಯೂಸ್‌ಗಳಿಂದ ದೂರವಿದ್ದು ಇಂತಹವುಗಳನ್ನೇ ಅಭ್ಯಾಸ ಮಾಡಿಕೊಂಡರೆ ಚರ್ಮ ಒಳಗಿನಿಂದಲೇ ಕಲೆರಹಿತವಾಗಿ ಕಳೆಕಳೆಯಾಗಿ ನಳನಳಿಸುತ್ತದೆ.

VISTARANEWS.COM


on

detox drinks
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹದಿಹರೆಯದಿಂದ ಆರಂಭವಾಗುವ ಮೊಡವೆಯ ಸಮಸ್ಯೆ ಬಹುತೇಕರಿಗೆ ಬಹಳ ಕಾಲದವರೆಗೆ ಕಾಡುವ ಚರ್ಮದ ಸಮಸ್ಯೆ (Skin care). ಏನೇ ಮಾಡಿದರೂ ಮೊಡವೆಯನ್ನು ಹೊಡೆದೋಡಿಸಲು, ಮೊಡವೆಯಿಂದಾದ ಕಲೆಗಳ ವಿರುದ್ಧ ಹೋರಾಡಲು ಶ್ರಮ, ಸಮಯ ತೆಗೆದುಕೊಂಡಷ್ಟು ಬಹುಶಃ ಬೇರೆ ಸಣ್ಣಪುಟ್ಟ ಸಮಸ್ಯೆಗಳಿಗೆ ತಲೆಕೆಡಿಸಿಕೊಂಡವರು ಇರಲಿಕ್ಕಿಲ್ಲ. ಸಮಸ್ಯೆ ಸಣ್ಣದಾಗಿ ಕಂಡರೂ ಸೌಂದರ್ಯ ಸಮಸ್ಯೆಯಾದ್ದರಿಂದ, ಎಲ್ಲರಿಗೂ ತಾವು ಸುಂದರವಾಗಿ ಕಾಣಬೇಕೆಂಬ ಬಯಕೆ ಇರುವುದರಿಂದ ನಾನಾ ಪ್ರಯೋಗಗಳನ್ನು ಮನೆಮದ್ದುಗಳ ಮೂಲಕ, ವೈದ್ಯರ ಮೂಲಕ ಮಾಡುವವರೇ. ಬ್ಯೂಟಿಪಾರ್ಲರುಗಳಿಗೆ ಎಡತಾಕುವವರೇ. ಚರ್ಮದ ವೈದ್ಯರನ್ನೂ ಕಾಣುವವರೇ. ಆದರೂ, ಇದೊಂದು ಸಮಸ್ಯೆಗೆ ಸರಿಯಾದ ತೃಪ್ತಿಕರ ಪರಿಹಾರ ಕಂಡುಕೊಂಡವರೇ ಇಲ್ಲ!

ರೆಟಿನಾಲ್, ಸ್ಯಾಲಿಸಿಲಿಕ್‌ ಆಸಿಡ್‌ ಇರುವ ಕ್ರೀಮು ಸೀರಂಗಳು ವೈದ್ಯಕೀಯವಾಗಿ ಮೊಡವೆಯನ್ನು ಹೊಡೆದೋಡಿಸುವಲ್ಲಿ ಸಾಕಷ್ಟು ಪ್ರಯೋಜನ ನೀಡಿದರೂ, ದೇಹದೊಳಗಿನ ಆರೋಗ್ಯಕ್ಕೆ ಗಮನ ಕೊಡುವ ಮೂಲಕವೂ (health tips) ಹೊರಗಿನ ಚರ್ಮವನ್ನು ಸುಂದರವಾಗಿ ಕಾಣುವಂತೆ ಮಾಡಬಹುದು. ಹೊರಗಿನ ಲೇಪಗಳು ಎಷ್ಟೇ ಇದ್ದರೂ ಒಳಗಿನ ಆರೋಗ್ಯ ಇಲ್ಲಿ ಬಹುಮುಖ್ಯವಾಗುತ್ತದೆ. ಚರ್ಮದ ಆರೋಗ್ಯಕ್ಕೆ ಸಂಬಂಧಿಸಿ ನಮ್ಮನ್ನು ಮೊಡವೆ, ಕಪ್ಪುಕಲೆಗಳಿಂದ ದೂರವಿರಿಸಬಲ್ಲ, ದಿನನಿತ್ಯ ಉಣ್ಣುವ ಹಣ್ಣು ತರಕಾರಿಗಳ ಡಿಟಾಕ್ಸ್‌ ಡ್ರಿಂಕ್‌ಗಳಿಂದಲೂ (Detox drinks) ಮುಖದ ಸೌಂದರ್ಯ ಇಮ್ಮಡಿಗೊಳಿಸಬೇಕೆಂಬ ಬಯಕೆಯಿದ್ದವರು, ಮೊಡವೆಯ ತೊಂದರೆಯಿಂದ ಶಾಶ್ವತವಾಗಿ ದೂರ ಇರಬೇಕೆಂದು ಬಯಸುವವರು ಈ ಡಿಟಾಕ್ಸ್‌ ಪಾನೀಯಗಳನ್ನು ನಿತ್ಯ ಸೇವಿಸಬಹುದು. ಜೊತೆಗೆ ಕಾರ್ಬೋನೇಟೆಡ್‌ ಡ್ರಿಂಕ್‌ಗಳು, ಪ್ಯಾಕ್ಡ್‌ ಜ್ಯೂಸ್‌ಗಳಿಂದ ದೂರವಿದ್ದು ಇಂತಹವುಗಳನ್ನೇ ಅಭ್ಯಾಸ ಮಾಡಿಕೊಂಡರೆ ಚರ್ಮ ಒಳಗಿನಿಂದಲೇ ಕಲೆರಹಿತವಾಗಿ ಕಳೆಕಳೆಯಾಗಿ ನಳನಳಿಸುತ್ತದೆ.

1. ಗ್ರೀನ್‌ ಟೀ: ಅತ್ಯಂತ ಪ್ರಖ್ಯಾತ ಬೆಳಗ್ಗಿನ ಪೇಯಗಳಲ್ಲಿ ಇದೂ ಒಂದು. ಹಾಗೆಯೇ ಅತ್ಯಂತ ಪರಿಣಾಮಕಾರಿ ಕೂಡಾ. ಇದರಲ್ಲಿ ನೈಸರ್ಗಿಕ ಆಂಟಿಓಕ್ಸಿಡೆಂಟ್‌ಗಳು ಇರುವುದರಿಂದ ಇದು ಚರ್ಮದ ಬಾವು, ಯುವಿ ರೇಡಿಯೇಷನ್‌ ಪರಿಣಾಮಗಳು ಹಾಗೂ ಕೆಂಪಾಗುವಿಕೆ ಮತ್ತಿತರ ತೊಂದರೆಗಳನ್ನು ನಿವಾರಿಸುತ್ತದೆ. ಗ್ರೀನ್‌ ಟೀ ನಮ್ಮ ಚರ್ಮಕ್ಕೆ ಬೇಕಾದ ನೀರನ್ನೂ ಪೂರೈಸುವ ಮೂಲಕ ಮುಖವನ್ನು ತಾಜಾ ಆಗಿಯೂ ಕಾಣುವಂತೆ ಮಾಡುತ್ತದೆ.

beauty

2. ಎಳನೀರು: ಎಳನೀರಿನಷ್ಟು ಉತ್ತಮ ನೈಸರ್ಗಿಕ ಪಾನೀಯ ಮತ್ತೊಂದಿಲ್ಲ. ಇದರಲ್ಲಿರುವ ವಿಟಮಿನ್‌ ಸಿ, ಆಂಟಿ ಓಕ್ಸಿಡೆಂಟ್‌ಗಳು, ವಿಟಮಿನ್‌ ಬಿ2, ಬಿ3, ಕ್ಯಾಲ್ಶಿಯಂ ಹಾಗೂ ಖನಿಜಾಂಶಗಳು ಚರ್ಮದ ಆರೋಗ್ಯಕ್ಕೆ ಬಹಳ ಮುಖ್ಯವಾದವುಗಳು. ಇದು ಚರ್ಮದ ಕೊಲಾಜೆನ್‌ ಉತ್ಪಾದನೆಯನ್ನು ಉದ್ದೀಪನಗೊಳಿಸುವ ಮೂಲಕ ಮುಖದ ನಿರಿಗೆಗಳನ್ನೂ ಕಡಿಮೆ ಮಾಡಿ ಯೌವನದ ಕಳೆಯನ್ನು ಜಿನುಗಿಸುತ್ತದೆ.

3. ನಿಂಬೆ ಹಾಗೂ ಜೇನುತುಪ್ಪ: ಉಗುರು ಬೆಚ್ಚಗಿನ ಬಿಸಿನೀರಿಗೆ ನಿಂಬೆಹಣ್ಣಿನ ರಸ ಹಾಗೂ ಜೇನುತುಪ್ಪ ಸೇರಿಸಿ ಕುಡಿಯುವುದು ತೂಕ ಇಳಿಸುವಲ್ಲಿ ಮುಖ್ಯ ಪಾತ್ರ ವಹಿಸುವಂತೆಯೇ ಚರ್ಮದ ಆರೋಗ್ಯಕ್ಕೂ ಉತ್ತಮ ಟಾನಿಕ್.‌ ಇದರಲ್ಲಿರುವ ವಿಟಮಿನ್‌ ಸಿ ಮುಖದ ಚರ್ಮವನ್ನು ತಾಜಾ ಹಾಗೂ ಕೋಮಲವಾಗಿರಿಸುವುದಲ್ಲದೆ, ಜೇನುತುಪ್ಪವು ಮುಖದ ಚರ್ಮದಲ್ಲಿರುವ ಹೆಚ್ಚುವರಿ ತೈಲವನ್ನು ಹೊಡೆದೋಡಿಸುತ್ತದೆ.

4. ಕ್ಯಾರೆಟ್‌ ಹಾಗೂ ಬೀಟ್‌ರೂಟ್‌ ಜ್ಯೂಸ್:‌ ಇವೆರಡೂ ಪೋಷಕಾಂಶಗಳ ಪವರ್‌ಹೌಸ್‌ಗಳು. ಪ್ರತಿದಿನವೂ ಇವೆರಡರ ಜ್ಯೂಸ್‌ ಕುಡಿದರೆ, ದೇಹದಲ್ಲಿ ನಿಜವಾದ ಬದಲಾವಣೆ ಖಂಡಿತವಾಗಿಯೂ ಗೋಚರಿಸಲಾರಂಭಿಸುತ್ತದೆ. ದೇಹದ ಕಶ್ಮಲಗಳನ್ನು ಇದು ಹೊಡೆದೋಡಿಸುವುದಲ್ಲದೆ, ಲಿವರ್‌ ಸರಿಯಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತದೆ. ಮುಖದ ಚರ್ಮದಲ್ಲೂ ಸಾಕಷ್ಟು ಬದಲಾವಣೆ ಕಾಣುತ್ತದೆ. ಮುಖವು ಹೆಚ್ಚು ಕೋಮಲ, ತಾಜಾ ಹಾಗೂ ಕಲೆರಹಿತವಾಗಿ, ಒಳಗಿನಿಂದ ಚರ್ಮಕ್ಕೆ ಹೊಳಪು ನೀಡಲು ಇದೊಂದು ಅದ್ಭುತ ಪೇಯ.

juice

5. ದಾಳಿಂಬೆ ಜ್ಯೂಸ್:‌ ದಾಳಿಂಬೆ ಚರ್ಮದ ಆರೋಗ್ಯಕ್ಕೆ ಅತ್ಯುತ್ತಮವಾದ ಹಣ್ಣು. ಚರ್ಮದ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್‌ ಎ, ಇ ಹಾಗೂ ಸಿ ಮೂರೂ ಅಂಶಗಳೂ ಈ ಹಣ್ಣಿನಲ್ಲಿ ಇರುವುದರಿಂದ ಮುಖದಲ್ಲಿ ಕಪ್ಪು ಕಲೆಗಳಾಗುವುದನ್ನು ಇದು ತಡೆಯುತ್ತದೆ. ಚರ್ಮದಲ್ಲಿ ಆರೋಗ್ಯಕರ ಹೊಳಪು ಒಳಗಿನಿಂದಲೇ ಪ್ರತಿಫಲಿಸುತ್ತದೆ. ದಾಳಿಂಬೆ ಒಗರಿನಂತಾಗಿ ಇಷ್ಟವಾಗದಿದ್ದರೆ, ಕಿತ್ತಳೆಹಣ್ಣಿನ ಜ್ಯೂಸ್‌ ಕೂಡಾ ಕುಡಿಯಬಹುದು. ಇದೂ ದಾಳಿಂಬೆಯಂಥದ್ದೇ ಉಪಯೋಗವನ್ನು ನೀಡುವ ಇನ್ನೊಂದು ಹಣ್ಣು.

ಇದನ್ನೂ ಓದಿ: Health Tips: ಸಿಪ್ಪೆ ಎಂಬ ಪೋಷಕಾಂಶಗಳ ಪ್ಯಾಕೇಜ್:‌ ತರಕಾರಿ ಹಣ್ಣುಗಳ ಸಿಪ್ಪೆಯನ್ನು ತಿಪ್ಪೆಗೆ ಎಸೆಯದಿರಿ!

6. ಅರಿಶಿನ ಹಾಲು: ಅರಿಶಿನವನ್ನು ಮೊಡವೆಯ ತೊಂದರೆಗಳಿಗೆ ಮುಖಕ್ಕೆ ಹಚ್ಚುವುದು ಭಾರತದಲ್ಲಿ ತಲೆತಲಾಂತರದಿಂದ ನಡೆದುಕೊಂಡು ಬಂದ ಮನೆಮದ್ದು. ಅರಿಶಿನದಲ್ಲಿರುವ ರೋಗನಿರೋಧಕ ಶಕ್ತಿ ಎಲ್ಲರಿಗೂ ತಿಳಿದಿರುವಂಥದ್ದೇ. ಬಿಸಿಹಾಲಿಗೆ ಅರಿಶಿನ ಹಾಕಿ ಕುಡಿಯುವುದು ದೇಹಾರೋಗ್ಯಕ್ಕೆ, ಶಕ್ತಿ ಚೈತನ್ಯಕ್ಕಷ್ಟೇ ಅಲ್ಲ, ಚರ್ಮದ ಆರೋಗ್ಯಕ್ಕೂ ಬಹಳ ಒಳ್ಳೆಯದು.

7. ಆಲೋವೆರಾ ಜ್ಯೂಸ್‌: ಮೊಡವೆ, ಕಪ್ಪುಕಲೆ, ಸುಕ್ಕು ಮೊದಲಾದ ತೊಂದರೆಗಳಿಗೆ ರಾಮಬಾಣವಾಗಿರುವ ಆಲೋವೆರಾ ಚರ್ಮದ ಆರೋಗ್ಯ ಕ್ಷೇತ್ರದಲ್ಲಿ ವ್ಯಾಹಕವಾಗಿ ಬಳಕೆಯಾಗುತ್ತದೆ. ಸೂರ್ಯ ಝಳದಿಂದ ಚರ್ಮವನ್ನು ರಕ್ಷಿಸುವ ಗುಣವನ್ನೂ ಇದು ಹೊಂದಿದ್ದು ಇದರ ಜ್ಯೂಸ್‌ ನಿತ್ಯ ಕುಡಿಯುವ ಮೂಲಕ ಹಲವಾರು ಚರ್ಮದ ತೊಂದರೆಗಳಿಗೆ ಪರಿಹಾರ ಕಂಡುಕೊಳ್ಳಬಹುದು.

8. ಹಸಿರು ಜ್ಯೂಸ್‌: ಪಾಲಕ್‌, ಪುದಿನ, ಸೌತೆಕಾಯಿ ಮತ್ತಿತರ ಹಸಿರು ತರಕಾರಿ ಹಾಗೂ ಸೊಪ್ಪುಗಳ ಜ್ಯೂಸ್‌ ಕೂಡಾ ಒಳ್ಳೆಯದು, ತೂಕ ಕಡಿಮೆ ಮಾಡುವ ಡ್ರಿಂಕ್‌ಗಳಾಗಿ ಇವು ಕೆಲಸ ಮಾಡುವುದಲ್ಲದೆ, ಇವುಗಳಲ್ಲಿರುವ ಪೋಷಕಾಂಶಗಳು ಚರ್ಮವನ್ನು ಒಳಗಿನಿಂದಲೇ ಆರೋಗ್ಯವಾಗಿರಿಸುವ ಮೂಲಕ ನವ ಚೈತನ್ಯ ಚಿಮ್ಮಿಸುತ್ತವೆ.

ಇದನ್ನೂ ಓದಿ: Health tips: ಬಾಯಿಯ ದುರ್ವಾಸನೆಯೇ? ನಿಮ್ಮಲ್ಲೇ ಇವೆ ಪರಿಹಾರಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

ಮೊಬೈಲ್ ಫೋನ್‌ಗಳು, ಟ್ಯಾಬ್‌ಗಳು, ಗೇಮಿಂಗ್ ಸಾಧನಗಳು ಮತ್ತು ಪರದೆಯ ಬಳಕೆಯಂತಹ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳ ಬಳಕೆಯಿಂದಾಗಿ ಮಕ್ಕಳಲ್ಲಿ ವಿಳಂಬ ಚಟುವಟಿಕೆಗಳು ಮಾತ್ರವಲ್ಲದೇ 15 ರಿಂದ 30 ವರ್ಷದೊಳಗಿನವರಲ್ಲಿ ಶ್ರವಣ ದೋಷ ಹೆಚ್ಚಾಗಿ ಕಂಡು ಬರುತ್ತಿದೆ ಎಂಬುದು ಸಂಶೋಧನೆಯಿಂದ ತಿಳಿದು ಬಂದಿದೆ. ಈ ಕುರಿತು ನಡೆದ ಸಂಶೋಧನೆಯ ಮಾಹಿತಿ (Mobile Side Effect)ಇಲ್ಲಿದೆ.

VISTARANEWS.COM


on

By

Mobile Side Effect
Koo

ಕೋವಿಡ್ (covid) ಬಳಿಕ ಕಳೆದ ಮೂರು ನಾಲ್ಕು ವರ್ಷಗಳಿಂದ ಮಕ್ಕಳು (Mobile Side Effect) ತಡವಾಗಿ ಮಾತನಾಡುವ ಪ್ರಕರಣಗಳು, ಸೀಮಿತ ಭಾಷೆಯೊಂದಿಗೆ ಮತ್ತು ಸ್ವಲೀನತೆಯ (autism) ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಮೊಬೈಲ್ ಫೋನ್ ಗಳ (phone) ಸುದೀರ್ಘ ಬಳಕೆಯಿಂದ ಶ್ರವಣ ದೋಷ (Hearing Disorder) ಉಂಟಾಗುತ್ತದೆ ಎಂದು ಚಂಡೀಗಢ (Chandigarh) ಪಿಜಿಐನ (PGI) ಓಟೋಲರಿಂಗೋಲಜಿ ವಿಭಾಗದ ಪ್ರೊ. ಸಂಜಯ್ ಮುಂಜಾಲ್ ತಿಳಿಸಿದ್ದಾರೆ.


ಪಿಜಿಐನ ಓಟೋಲರಿಂಗೋಲಜಿ (ಇಎನ್‌ಟಿ) ವಿಭಾಗವು ಐಸಿಎಂಆರ್‌ಗೆ ಸಲ್ಲಿಸಿದ ಹೊಸ ಸಂಶೋಧನೆ ವರದಿಯಲ್ಲಿ ಮೊಬೈಲ್ ಫೋನ್‌ಗಳು, ಟ್ಯಾಬ್‌ಗಳು, ಗೇಮಿಂಗ್ ಸಾಧನಗಳು ಮತ್ತು ಪರದೆಯ ಬಳಕೆಯಂತಹ ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳ ಬಳಕೆಯಿಂದಾಗಿ ಮಕ್ಕಳಲ್ಲಿ ವಿಳಂಬ ಚಟುವಟಿಕೆಗಳು ಮಾತ್ರವಲ್ಲದೇ 15 ರಿಂದ 30 ವರ್ಷದೊಳಗಿನವರಲ್ಲಿ ಶ್ರವಣ ದೋಷ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಹೇಳಿದೆ. ಕೋವಿಡ್ ಅನಂತರ ಮಕ್ಕಳಲ್ಲಿ ಏಕಮುಖ ಸಂವಹನ ಹೆಚ್ಚಾಗಿದೆ. ಮೊಬೈಲ್ ನಲ್ಲಿ ಆಟಗಳನ್ನು ಆಡುವುದು, ಫೋನ್‌ ಪರದೆಯನ್ನು ವೀಕ್ಷಿಸುವುದು, ಟ್ಯಾಬ್‌ಗಳಲ್ಲಿ ಏಕಮುಖ ಸಂವಹನ ನಡೆಸುವುದು ಅತ್ಯಧಿಕವಾಗಿದೆ. ಮಾತು ದ್ವಿಮುಖವಾಗಿರುತ್ತದೆ. ಇದನ್ನು ಮಕ್ಕಳಲ್ಲಿ ಅಭಿವೃದ್ಧಿಪಡಿಸುತ್ತಿಲ್ಲ ಎಂದು ತಿಳಿಸಿದರು.

ಮಕ್ಕಳಿಗೆ ಪ್ರಾರಂಭದ ಎರಡು ವರ್ಷಗಳಲ್ಲಿ ಸಾಕಷ್ಟು ಸಾಮಾಜಿಕ ಸಂವಹನದ ಅವಶ್ಯಕವಿರುತ್ತದೆ. ಆದರೆ ಈ ಸಂದರ್ಭದಲ್ಲಿ ಅವರು ತಮ್ಮದೇ ಆದ ಜಗತ್ತಿನಲ್ಲಿ ವಾಸಿಸುವುದು, ಕೇವಲ ನೋಡುವುದು ಮತ್ತು ಆಲಿಸುವುದನ್ನು ಮಾಡುತ್ತಾರೆ. ಆದರೆ ಗ್ಯಾಜೆಟ್ ಗಳು ಮೊದಲ ಎರಡು ವರ್ಷಗಳಲ್ಲಿ ಅಗತ್ಯವಿರುವ ಸಾಕಷ್ಟು ಪ್ರಚೋದನೆಯನ್ನು ಒದಗಿಸುವುದಿಲ್ಲ. ಅಂತಹ ಚಿಕ್ಕ ಮಕ್ಕಳು ಗಂಟೆಗಟ್ಟಲೆ ಗ್ಯಾಜೆಟ್‌ಗಳನ್ನು ಬಳಸುವುದರಿಂದ ಅದು ಅವರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

ಕಳೆದ ಒಂದು ತಿಂಗಳಲ್ಲಿ ಆಟಿಸಂ ನ ಅನೇಕ ಪ್ರಕರಣಗಳು ಕಂಡು ಬರುತ್ತಿದೆ. ಮಕ್ಕಳ ಮತ್ತು ಮನೋವೈದ್ಯಕೀಯ ವಿಭಾಗಗಳಿಂದ ಪ್ರಾಥಮಿಕ ರೋಗನಿರ್ಣಯದ ಅನಂತರ ಮಕ್ಕಳನ್ನು ಆಟಿಸಂ ನ ವಿಭಾಗಕ್ಕೆ ಕಳುಹಿಸಲಾಗುತ್ತಿದೆ ಎನ್ನುತ್ತಾರೆ ಡಾ. ಮುಂಜಾಲ್ ಹೇಳಿದ್ದಾರೆ.


ಆಟಿಸಂನ ಚಿಹ್ನೆಗಳು ಹೆಚ್ಚುತ್ತಿರುವುದು ಯಾಕೆ?


ಪೋಷಕರು ಆಟಿಸಂನ ಚಿಹ್ನೆಗಳು ಮತ್ತು ರೋಗಲಕ್ಷಣಗಳ ಬಗ್ಗೆ ತಿಳಿದಿರಬೇಕು. ಮಕ್ಕಳಿಗೆ ಒಂದರಿಂದ ಆರು ವರ್ಷಗಳ ನಡುವಿನ ವಯಸ್ಸು ಅತ್ಯಂತ ಮುಖ್ಯವಾಗಿದೆ.‌ ಈ ವಯಸ್ಸಿನ ಮಕ್ಕಳು ಸಂವಾದಿಸಲು ಹೆಚ್ಚು ಸನ್ನೆ ಮತ್ತು ಚಿಹ್ನೆಗಳನ್ನು ಬಳಸುತ್ತಿದ್ದಾರೆ. ಅವರ ಭಾವನೆಗಳನ್ನು ವ್ಯಕ್ತಪಡಿಸಲು ಮೂಲಭೂತ ಅಗತ್ಯಗಳನ್ನು ಸನ್ನೆಗಳ ಮೂಲಕ ಪ್ರಯತ್ನಿಸುತ್ತಾರೆ. ಇವರಲ್ಲಿ ಭಾಷೆಯ ಬಳಕೆಯ ಕೊರತೆಯಿದೆ ಎಂದರು.

ಕಡಿಮೆ ಮಾನವ ಸಂವಹನ, ಅವಿಭಕ್ತ ಕುಟುಂಬ ವ್ಯವಸ್ಥೆಯ ವಿಘಟನೆ ಹೀಗೆ ಈಗಿನ ಸಮಸ್ಯೆಗಳು ಹಲವಾರು ಮಕ್ಕಳ ಸರಿಯಾದ ಬೆಳವಣಿಗೆಗೆ ಅಡ್ಡಿಯಾಗುತ್ತಿದೆ. ಮಕ್ಕಳು ಯಾವುದೇ ಗ್ಯಾಜೆಟ್‌ಗೆ ಒಂದು ಗಂಟೆಗಿಂತ ಹೆಚ್ಚು ಅಥವಾ ಕಡಿಮೆ ಕಾಲ ಒಡ್ಡಿಕೊಳ್ಳಬಾರದು ಎಂದು ನಮಗೆ ತಿಳಿದಿದೆ ಆದರೂ ಮಕ್ಕಳ ಮೇಲೆ ಅವುಗಳ ಪರಿಣಾಮವನ್ನು ಉಂಟು ಮಾಡುವುದನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ವಾಕ್ ಪ್ರಚೋದನೆ ಸೇರಿದಂತೆ ಹಲವಾರು ಚಿಕಿತ್ಸೆಗಳನ್ನು ನೀಡುತ್ತೇವೆ. ಇದಕ್ಕಾಗಿ ಪೂರ್ಣ ಪ್ರಮಾಣದ ಅಧ್ಯಯನವನ್ನು ಮಾಡಲು ಯೋಜಿಸುತ್ತಿದ್ದೇವೆ. ಈ ಕುರಿತು ಯೋಜನೆಯನ್ನು ಐಸಿಎಂಆರ್ ಗೆ ಸಲ್ಲಿಸಿದ್ದೇವೆ ಎಂದರು.

ಯಾರಲ್ಲಿ ಹೆಚ್ಚು?

ಇಲಾಖೆಯಲ್ಲಿ ಪ್ರತಿದಿನ ಎರಡು ಅಥವಾ ಮೂರು ಶ್ರವಣ ದೋಷದ ಪ್ರಕರಣಗಳು ಕಂಡುಬರುತ್ತಿವೆ. ಇವರಲ್ಲ 15ರಿಂದ 30 ವರ್ಷ ವಯಸ್ಸಿನವರು ಹೆಚ್ಚಾಗುತ್ತಿದ್ದಾರೆ. ಮೊಬೈಲ್ ಫೋನ್‌ಗಳಲ್ಲಿ ಹೆಚ್ಚು ಗಂಟೆಗಳ ಕಾಲ ಮಾತನಾಡುವುದು, ಹೆಡ್‌ಫೋನ್‌ಗಳ ಅತಿಯಾದ ಬಳಕೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಹೇಳಿದರು.
ಎರಡು ಗಂಟೆಗಳಿಗಿಂತ ಹೆಚ್ಚು ಕಾಲ ಮೊಬೈಲ್ ಫೋನ್ ಗಳನ್ನು ಬಳಕೆ ಮಾಡುವುದರಿಂದ ಶ್ರವಣದೋಷವು ಹೆಚ್ಚಾಗುತ್ತಿದೆ. ಈಗಾಗಲೇ ಸಾಕಷ್ಟು ಹಾನಿಯಾಗಿದೆ. ಶ್ರವಣ ಸಾಧನಗಳ ಮೇಲೆ ಅತಿಯಾದ ಅವಲಂಬನೆಯನ್ನು ತಡೆಯಬೇಕು ಎಂದು ಡಾ. ಮುಂಜಾಲ್ ವಿವರಿಸುತ್ತಾರೆ.


ಶ್ರವಣ ದೋಷಕ್ಕೆ ಕಾರಣ

ಹೆಡ್‌ಫೋನ್‌ಗಳ ಅತಿಯಾದ ದೈನಂದಿನ ಬಳಕೆಯು ಶ್ರವಣ ನಷ್ಟದ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಏಕೆಂದರೆ ಇದು ನೇರವಾದ ಧ್ವನಿಯಾಗಿದೆ ಮತ್ತು ನಮ್ಮ ಕಿವಿಗಳು 85 ಡೆಸಿಬಲ್‌ಗಳ (dB) ವರೆಗಿನ ಶಬ್ದಗಳನ್ನು ಮಾತ್ರ ಕೇಳಲು ವಿನ್ಯಾಸಗೊಳಿಸಲಾಗಿದೆ, ಆದರೆ ಇಯರ್‌ಫೋನ್‌ಗಳು ಅಥವಾ ಹೆಡ್‌ಫೋನ್‌ಗಳು ಇದಕ್ಕಿಂತ ಹೆಚ್ಚಿನ ಶಬ್ದಗಳನ್ನು ಹೊರಸೂಸುತ್ತವೆ.

ಇದನ್ನೂ ಓದಿ; Tips For Healthy Skin: ಕಡಲೆಹಿಟ್ಟೆಂಬ ಶತಮಾನಗಳ ಹಳೆಯ ಸೌಂದರ್ಯವರ್ಧಕ!

ಏನು ಮಾಡಬಹುದು ?

ಡೆಸಿಬಲ್ ಹೆಚ್ಚಾದರೆ, ಬಳಕೆಯನ್ನು ಕಡಿಮೆ ಮಾಡಬೇಕು. ಅಂದರೆ 90 ಡಿಬಿ ನಾಲ್ಕು ಗಂಟೆಗಳಿಗಿಂತ ಹೆಚ್ಚಿರಬಾರದು. ಎರಡು ಗಂಟೆಗೆ 95 ಡಿಬಿ ಮತ್ತು ಒಂದು ಗಂಟೆಗೆ 100 ಡಿಬಿ ಇರಬಾರದು. ಈಗಿನ ಪೀಳಿಗೆಯು ಚಿಕ್ಕ ವಯಸ್ಸಿನಿಂದಲೇ ಗ್ಯಾಜೆಟ್‌ಗಳಿಗೆ ಒಡ್ಡಿಕೊಳ್ಳುವುದರಿಂದ ಹಾನಿಯು ಆರಂಭಿಕ ಹಂತದಲ್ಲಿ ಕಂಡುಬರುತ್ತದೆ ಮತ್ತು ಮೊದಲ ಲಕ್ಷಣವೆಂದರೆ ಕಿವಿ ಅಥವಾ ಟಿನ್ನಿಟಸ್‌ನಲ್ಲಿ ರಿಂಗಿಂಗ್ ಶಬ್ದ. ದೀರ್ಘ ಕರೆಗಳನ್ನು ತಪ್ಪಿಸಿ, ಸ್ಪೀಕರ್ ಫೋನ್ ಬಳಸಿ. ದೀರ್ಘಾವಧಿಯವರೆಗೆ ಜೋರಾಗಿ ಧ್ವನಿಯಲ್ಲಿ ಸಂಗೀತವನ್ನು ಕೇಳಬೇಡಿ ಮತ್ತು ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ, ಯಾವುದೇ ರೋಗಲಕ್ಷಣದ ಸಂದರ್ಭದಲ್ಲಿ ವೈದ್ಯರನ್ನು ಸಂಪರ್ಕಿಸಿ ಎನ್ನುತ್ತಾರೆ ಡಾ. ಮುಂಜಾಲ್ ತಿಳಿಸಿದ್ದಾರೆ.

Continue Reading

ಬೆಂಗಳೂರು

Covishield vaccine: ಕೋವಿಶೀಲ್ಡ್‌ ಲಸಿಕೆಯಿಂದ ಸೈಡ್‌ ಎಫೆಕ್ಟ್‌ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಭಾರತ ಸೇರಿದಂತೆ ಎಲ್ಲೆಡೆ ಕೊರೊನಾ ವೈರಸ್‌ (Corona Virus) ಎದುರಿಸಲು ಪಡೆದಿದ್ದ ಕೋವಿಶೀಲ್ಡ್‌ ಲಸಿಕೆ (Covishield vaccine) ಕುರಿತು ಚರ್ಚೆಗಳು ನಡೆಯುತ್ತಿವೆ. ಕೋವಿಶೀಲ್ಡ್‌ ಲಸಿಕೆ ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ (blood clotting) ಅಡ್ಡ ಪರಿಣಾಮ ಕುರಿತು ಆತಂಕ ಹೆಚ್ಚಿದೆ. ಈ ಮಧ್ಯೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೋವಿಶೀಲ್ಡ್‌ನಿಂದ ಸ್ವಲ್ಪ ಪ್ರಮಾಣದ ಎಫೆಕ್ಟ್ ಆಗಿದೆ ಎಂದಿದ್ದಾರೆ.

VISTARANEWS.COM


on

By

Covishield Vaccine
ಸಾಂದರ್ಭಿಕ ಚಿತ್ರ
Koo

ಹುಬ್ಬಳ್ಳಿ: ಕೋವಿಡ್‌ ವಿರುದ್ಧ ಹೋರಾಡಲು ಭಾರತದಲ್ಲಿ ವ್ಯಾಪಕವಾಗಿ ಕೋವಿಶೀಲ್ಡ್ ಲಸಿಕೆ (Covishield vaccine) ಬಳಸಲಾಗಿತ್ತು. ಇದೀಗ ಇದರ ಸೈಡ್‌ ಎಫೆಕ್ಟ್‌ (Side Effect) ಕುರಿತು ಆತಂಕ ಹೆಚ್ಚಾಗುತ್ತಿದೆ. ಕೋವಿಡ್‌ ನಂತರದ ದಿನಗಳಲ್ಲಿ ಯುವಜನರಲ್ಲಿಯೂ ವಿವರಿಸಲಾಗದ ತೀವ್ರ ಅಸ್ವಸ್ಥತೆ, ಹೃದಯಸ್ತಂಭನ ಮುಂತಾದವುಗಳು ಕಂಡುಬಂದಿವೆ. ಭಾರತದಲ್ಲಿಯೂ ಹಲವಾರು ಪ್ರಕರಣಗಳು ನಡೆದಿದ್ದು, ಕೋವಿಡ್‌ ಹಾಗೂ ಅದರ ಲಸಿಕೆಯ ಬಗ್ಗೆ ಅನುಮಾನ ಮೂಡಿಸಿದ್ದವು. ರಾಜ್ಯದಲ್ಲಿ ಕೋವಿಶೀಲ್ಡ್ ಲಸಿಕೆಯ ಸೈಡ್‌ ಎಫೆಕ್ಟ್ ಆತಂಕ ಹೆಚ್ಚು ಮಾಡಿದ್ದು, ಈ ಬಗ್ಗೆ ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಸ್ತಾರ ನ್ಯೂಸ್‌ ಜತೆಗೆ ಮಾತನಾಡಿದ್ದಾರೆ.

ಯಾವುದೇ ಔಷಧವನ್ನು ತೆಗೆದುಕೊಂಡಾಗ ಅಲ್ಪ ಪ್ರಮಾಣದ ಸೈಡ್‌ ಎಫೆಕ್ಟ್‌ ಇದ್ದೆ ಇರುತ್ತದೆ. ಆದರೆ ಈ ಕೋವಿಶೀಲ್ಡ್‌ನಿಂದ ಸ್ವಲ್ಪ ಪ್ರಮಾಣದ ಎಫೆಕ್ಟ್ ಆಗಿದೆ. ಹಾಗಂತ ಭಯ, ಆತಂಕಪಡುವ ಅವಶ್ಯಕತೆಯಿಲ್ಲ. ಏನೋ ಆಗಿ ಬಿಡುತ್ತೆ ಎಂಬ ಗಾಬರಿ ಪಡುವಂತಿಲ್ಲ. ಕೋವಿಶೀಲ್ಡ್ ತಯಾರಿಸುವ ಸಿರಮ್ ಇನ್ಸ್‌ಟಿಟ್ಯೂಟ್ ಬಗ್ಗೆ ಸಾಕಷ್ಟು‌ ಆರೋಪಗಳಿವೆ. ಕೇಂದ್ರ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಎಲೆಕ್ಟೋರಲ್ ಬಾಂಡ್ ಕೊಟ್ಟಿದ್ದಾರೆ. ಸಿರಮ್ ಬಗ್ಗೆ ಸಾಕಷ್ಟು ಕಾಂಟ್ರವರ್ಸಿಗಳಿವೆ, ಆದರೆ ಕೋವಿಶಿಲ್ಡ್‌ ಲಸಿಕೆ ಬಗ್ಗೆ ಆತಂಕ ಬೇಡ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇನ್ನೂ ಕರ್ನಾಟಕದಲ್ಲಿ ದೊಡ್ಡ ಪ್ರಮಾಣದ ಎಫೆಕ್ಟ್ ಏನೂ ಆಗಿಲ್ಲ. ವ್ಯಾಕ್ಸಿನ್ ಕೊಟ್ಟು ಎರಡು ವರ್ಷ ಅಯಿತು. ಕೋಟ್ಯಂತರ ಜನರಿಗೆ ಲಸಿಕೆ ಕೊಡಲಾಗಿದೆ, ನಾಲ್ಕೈದು ಪ್ರಕರಣಗಳಲ್ಲಿ ಸೈಡ್ ಎಫೆಕ್ಟ್ ಆಗಿದೆ. ವ್ಯಾಕ್ಸಿನ್‌ನಿಂದಲೇ ಆಗಿದೆಯಾ ಎನ್ನುವುದು ಕೂಡ ಇನ್ನೂ ಗೊತ್ತಾಗಬೇಕಿದೆ. ಕೇಂದ್ರ ಆರೋಗ್ಯ ಇಲಾಖೆಯಿಂದ ಏನೆಲ್ಲ ಮಾರ್ಗಸೂಚಿ ಬರುತ್ತದೆಯೋ ಅದನ್ನು ಪಾಲಿಸುತ್ತೇವೆ ಎಂದರು.

ಇದನ್ನೂ ಓದಿ: Covishield vaccine: ಕೋವಿಶೀಲ್ಡ್‌ ‌ ತಗೋಬೇಡಿ, ಒಳ್ಳೆಯದಲ್ಲ ಎಂದು ಅಪ್ಪುಗೆ ಮನವಿ ಮಾಡಿದ್ದ ಅಭಿಮಾನಿ: ಪೋಸ್ಟ್‌ ವೈರಲ್‌!

ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವಿಕೆ!

ಕೊರೊನಾ ಸೋಂಕು (coronavirus, Covid 19) ಎದುರಿಸಲು ನಾವು ನೀವೆಲ್ಲ ತೆಗೆದುಕೊಂಡ ಕೋವಿಶೀಲ್ಡ್‌ ಲಸಿಕೆ (Covishield Vaccine) ಅಡ್ಡ ಪರಿಣಾಮವನ್ನು (Side effects) ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿಯೇ ಇದೀಗ ಒಪ್ಪಿಕೊಂಡಿತ್ತು. ಇದರೊಂದಿಗೆ, ಕೊರೊನಾ ನಂತರದ ದಿನಗಳ ಅಸ್ವಸ್ಥತೆ, ಹೃದಯಾಘಾತಗಳ ಬಗ್ಗೆ ಮೂಡಿದ್ದ ಆತಂಕಕ್ಕೆ ಇನ್ನಷ್ಟು ಆಧಾರ ದೊರೆತಿತ್ತು. ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ತನ್ನ ಕೋವಿಡ್ ಲಸಿಕೆ ಕೋವಿಶೀಲ್ಡ್‌ ಅಪರೂಪವಾಗಿ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ನ್ಯಾಯಾಲಯದಲ್ಲಿ ಒಪ್ಪಿಕೊಂಡಿತ್ತು. ರಕ್ತ ಹೆಪ್ಪುಗಟ್ಟುವಿಕೆ ಮತ್ತು ರಕ್ತದಲ್ಲಿ ಪ್ಲೇಟ್‌ಲೆಟ್ ಕಡಿಮೆಯಾಗುವ ಪರಿಸ್ಥಿತಿಯನ್ನು ಉಂಟುಮಾಡಬಹುದು ಎಂದು ಲಸಿಕೆ ತಯಾರಕರು ಹೇಳಿದ್ದರು. ಆದರೆ ಇದು ಅಪರೂಪದ ಸಂದರ್ಭಗಳಲ್ಲಿ ಆಗಬಹುದು ಎಂದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಲೈಫ್‌ಸ್ಟೈಲ್

Food Cleaning Tips Kannada: ಹಣ್ಣು, ತರಕಾರಿಗಳಿಂದ ರಾಸಾಯನಿಕ ಅಂಶ ಸ್ವಚ್ಛಗೊಳಿಸುವ 5 ವಿಧಾನಗಳಿವು

ಮಾರುಕಟ್ಟೆಯಿಂದ ತರುವ ಹಣ್ಣು, ತರಕಾರಿಗಳು ಕೀಟನಾಶಕ ಮುಕ್ತವಾಗಿದೆಯೇ ಎಂಬುದನ್ನು ಪರಿಶೀಲಿಸಲು ಸಾಧ್ಯವಿಲ್ಲ. ಆದರೆ ಮನೆಗೆ ತಂದು ಅವುಗಳನ್ನು ಸ್ವಚ್ಛಗೊಳಿಸುವ ಮೂಲಕ (Food Cleaning Tips Kannada) ಅವುಗಳಿಂದ ಕೀಟನಾಶಕಗಳನ್ನು ಸಂಪೂರ್ಣವಾಗಿ ತೆಗೆದುಹಾಕಿ ತಿನ್ನಲು ಯೋಗ್ಯವನ್ನಾಗಿ ಮಾಡಬಹುದು. ಈ ಕುರಿತ (Food Cleaning Tips) ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Food Cleaning Tips Kannada
Koo

ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಿಂದ ತರುವ ಪ್ರತಿಯೊಂದು ಸಾಮಗ್ರಿಯೂ ಆತಂಕ ಹುಟ್ಟಿಸುತ್ತದೆ. ಅದು ತರಕಾರಿ (vegetables) ಆಗಿರಬಹುದು, ಹಣ್ಣು ಹಂಪಲು (fruits), ಧಾನ್ಯಗಳಾಗಿರಬಹುದು (grain). ಕೃಷಿಯಲ್ಲಿ ಕೀಟನಾಶಕಗಳ ಬಳಕೆಯು ವ್ಯಾಪಕವಾಗಿರುವುದರಿಂದ ನಾವು ಸೇವಿಸುವ ಆಹಾರದ ಸುರಕ್ಷತೆಯನ್ನು (Food Cleaning Tips Kannada) ಖಚಿತಪಡಿಸಿಕೊಳ್ಳುವುದು ಹೆಚ್ಚು ಅಗತ್ಯವಾಗಿದೆ. ಕೀಟಗಳು ಮತ್ತು ರೋಗಗಳಿಂದ ಬೆಳೆಗಳನ್ನು ರಕ್ಷಿಸಲು ಕೀಟನಾಶಕಗಳು ಅಗತ್ಯವಾದಾಗ, ಹಣ್ಣು ಮತ್ತು ತರಕಾರಿಗಳ ಮೇಲೆ ಅದರ ಅವಶೇಷಗಳನ್ನು ಬೀಳುತ್ತವೆ. ಇದನ್ನು ಕಾಲಾನಂತರದಲ್ಲಿ ನಾವು ಸೇವಿಸಿದರೆ ಆರೋಗ್ಯದ ಅಪಾಯವನ್ನು ಉಂಟು ಮಾಡುತ್ತದೆ. ಆದರೆ ಈ ಕೀಟನಾಶಕಗಳ ತೆಗೆದು ಹಾಕಲು ಮನೆಯಲ್ಲೇ ಇರುವ ಕೆಲವು ಸಾಮಗ್ರಿಗಳು ನಮಗೆ ಸಹಾಯ ಮಾಡುತ್ತದೆ. ತರಕಾರಿ, ಹಣ್ಣುಗಳಿಂದ ಕೀಟನಾಶಕಗಳನ್ನು ತೆಗೆದುಹಾಕಲು ಮನೆಯಲ್ಲಿ ಬಳಸಬಹುದಾದ (Food Cleaning Tips) ಐದು ಪ್ರಮುಖ ವಿಧಾನಗಳಿವೆ.

Apple cider vinegar for Fungal Infection Home Remedies

ವಿನೆಗರ್ ದ್ರಾವಣ

ಹಣ್ಣುಗಳು ಮತ್ತು ತರಕಾರಿಗಳಿಂದ ಕೀಟನಾಶಕಗಳನ್ನು ತೆಗೆದುಹಾಕಲು ಸರಳ ಮತ್ತು ಅತ್ಯಂತ ಪರಿಣಾಮಕಾರಿ ಮಾರ್ಗವೆಂದರೆ ಅವುಗಳನ್ನು ವಿನೆಗರ್ ದ್ರಾವಣದಿಂದ ತೊಳೆಯುವುದು. ಒಂದು ಬೌಲ್ ಅಥವಾ ಸಿಂಕ್‌ನಲ್ಲಿ ಮೂರು ಭಾಗಗಳ ನೀರಿನೊಂದಿಗೆ ಒಂದು ಭಾಗ ಬಿಳಿ ವಿನೆಗರ್ ಮಿಶ್ರಣ ಮಾಡಿ. ಉತ್ಪನ್ನವನ್ನು ಈ ದ್ರಾವಣದಲ್ಲಿ 5- 10 ನಿಮಿಷಗಳ ಕಾಲ ನೆನೆಸಿ, ಅನಂತರ ಶುದ್ಧ ನೀರಿನಿಂದ ಚೆನ್ನಾಗಿ ತೊಳೆಯಿರಿ. ವಿನೆಗರ್ ಕೀಟನಾಶಕಗಳ ಅವಶೇಷಗಳನ್ನು ಸಂಪೂರ್ಣವಾಗಿ ತೆಗೆದು ಹಾಕುತ್ತದೆ. ಹಣ್ಣುಗಳು ಮತ್ತು ತರಕಾರಿಗಳನ್ನು ಸ್ವಚ್ಛಗೊಳಿಸಲು ಮತ್ತು ತಿನ್ನಲು ಹೆಚ್ಚು ಸುರಕ್ಷಿತ ಮಾಡುತ್ತದೆ.

peeling

ಸಿಪ್ಪೆ ಸುಲಿಯುವುದು

ಹಣ್ಣು ಮತ್ತು ತರಕಾರಿಗಳ ಸಿಪ್ಪೆ ಸುಲಿದು ಸೇವಿಸುವುದು ಕೀಟನಾಶಕಗಳನ್ನು ತೆಗೆದು ಹಾಕುತ್ತದೆ. ಅನೇಕ ಕೀಟನಾಶಕಗಳು ಉತ್ಪನ್ನದ ಮೇಲ್ಮೈಯಲ್ಲಿ ಕೇಂದ್ರೀಕೃತವಾಗಿರುತ್ತವೆ. ಆದ್ದರಿಂದ ಹೊರ ಪದರವನ್ನು ತೆಗೆದುಹಾಕುವುದರಿಂದ ಈ ಅವಶೇಷಗಳ ಹೆಚ್ಚಿನ ಭಾಗವನ್ನು ತೆಗೆದುಹಾಕಬಹುದು. ಆದಾಗ್ಯೂ ಸಿಪ್ಪೆಸುಲಿಯುವಿಕೆಯು ಹಣ್ಣು, ತರಕಾರಿಯಲ್ಲಿರುವ ಕೆಲವು ಪೋಷಕಾಂಶಗಳು ಮತ್ತು ಫೈಬರ್ ಅನ್ನು ತೆಗೆದುಹಾಕುತ್ತದೆ ಎಂಬುದನ್ನು ನೆನಪಿನಲ್ಲಿಡಿ, ಆದ್ದರಿಂದ ಪೋಷಕಾಂಶಗಳ ನಷ್ಟದೊಂದಿಗೆ ಪ್ರಯೋಜನಗಳನ್ನು ಸಮತೋಲನಗೊಳಿಸುವುದು ಅತ್ಯಗತ್ಯ.

Baking soda for Fungal Infection Home Remedies

ಅಡುಗೆ ಸೋಡಾ

ಸೋಡಿಯಂ ಬೈಕಾರ್ಬನೇಟ್ ಎಂದೂ ಕರೆಯಲ್ಪಡುವ ಅಡುಗೆ ಸೋಡಾ, ಕೀಟನಾಶಕಗಳ ಅವಶೇಷಗಳನ್ನು ತೆಗೆದುಹಾಕಲು ಮತ್ತೊಂದು ಪರಿಣಾಮಕಾರಿ ವಸ್ತು. ಒಂದು ಚಮಚ ಅಡುಗೆ ಸೋಡಾವನ್ನು ಒಂದು ಕಪ್ ನೀರಿನಲ್ಲಿ ಬೆರೆಸಿ, ಹಣ್ಣು ಮತ್ತು ತರಕಾರಿಗಳನ್ನು 15-20 ನಿಮಿಷಗಳ ಕಾಲ ನೆನೆಸಿಡಿ. ಅನಂತರ ಅವುಗಳನ್ನು ಹರಿಯುವ ನೀರಿನ ಅಡಿಯಲ್ಲಿ ಚೆನ್ನಾಗಿ ತೊಳೆಯಿರಿ. ಬೇಕಿಂಗ್ ಸೋಡಾ ಕೀಟನಾಶಕ ಅಣುಗಳನ್ನು ಇದು ತೆಗೆದು ಹಾಕುತ್ತದೆ.

ಇದನ್ನೂ ಓದಿ: Eating Bread: ನಿತ್ಯವೂ ಬ್ರೆಡ್‌ ತಿನ್ನುತ್ತೀರಾ? ಹಾಗಿದ್ದರೆ ಖರೀದಿಸುವ ಮುನ್ನ ಇವಿಷ್ಟು ತಿಳಿದಿರಲಿ

ಬ್ರಷ್‌ನಿಂದ ಸ್ಕ್ರಬ್ಬಿಂಗ್

ಆಲೂಗಡ್ಡೆ, ಕ್ಯಾರೆಟ್ ಅಥವಾ ಸೌತೆಕಾಯಿಗಳಂತಹ ದಪ್ಪವಾದ ಚರ್ಮ ಅಥವಾ ಮೇಲ್ಮೈ ಹೊಂದಿರುವ ಹಣ್ಣು ಮತ್ತು ತರಕಾರಿಗಳಿಗೆ ಹರಿಯುವ ನೀರಿನ ಅಡಿಯಲ್ಲಿ ಅವುಗಳನ್ನು ಸ್ಕ್ರಬ್ ಮಾಡಲು ಬ್ರಷ್ ಅನ್ನು ಬಳಸುವುದು ಹೆಚ್ಚು ಪರಿಣಾಮಕಾರಿ. ಮೃದುವಾದ ಸ್ಕ್ರಬ್ಬಿಂಗ್ ಕ್ರಿಯೆಯು ಮೇಲ್ಮೈಗೆ ಅಂಟಿಕೊಂಡಿರುವ ಕೀಟನಾಶಕಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದಕ್ಕಾಗಿ ಕ್ಲೀನ್ ಬ್ರಷ್ ಅನ್ನು ಬಳಸಲು ಮರೆಯದಿರಿ.

Vegetables and Fruits

ಉಪ್ಪು ನೀರಿನಲ್ಲಿ ನೆನೆಸುವುದು

ಹಣ್ಣು, ತರಕಾರಿಗಳನ್ನು ಸಂಪೂರ್ಣವಾಗಿ ತೆಗೆದುಹಾಕಲು ಉಪ್ಪುನೀರನ್ನು ಸಹ ಬಳಸಬಹುದು. ಎರಡು ಚಮಚ ಉಪ್ಪನ್ನು ನಾಲ್ಕು ಕಪ್ ನೀರಿನಲ್ಲಿ ಕರಗಿಸಿ ಹಣ್ಣು ಮತ್ತು ತರಕಾರಿಗಳನ್ನು 10- 15 ನಿಮಿಷಗಳ ಕಾಲ ಅದರಲ್ಲಿ ನೆನೆಸಿಡಿ. ಅನಂತರ ಅವುಗಳನ್ನು ಶುದ್ಧ ನೀರಿನಿಂದ ಚೆನ್ನಾಗಿ ತೊಳೆಯಿರಿ.

Continue Reading

ಆರೋಗ್ಯ

Weight Loss Tips: ಸುಸ್ಥಿರವಾಗಿ ತೂಕ ಇಳಿಸಬೇಕೆ?; ಇಲ್ಲಿದೆ ದಾರಿ!

ಚುಟುಕು ಡಯೆಟ್‌ಗಳಿಂದ ಕೆಲವೇ ದಿನಗಳಲ್ಲಿ ಕರಗುವ ತೂಕ ಮತ್ತೆ ಕೆಲವೇ ದಿನಗಳಲ್ಲಿ ಮರಳಿ ಬರುತ್ತದೆ. ಬದಲಿಗೆ, ಹಲವಾರು ತಿಂಗಳುಗಳ ಪ್ರಯತ್ನದಿಂದ ಕೊಬ್ಬು ಕರಗಿಸಿದರೆ, ಅದರಿಂದ ಸ್ನಾಯುಗಳನ್ನು ಹುರಿಗಟ್ಟಿಸಲು, ದೇಹವನ್ನು ಸಶಕ್ತವಾಗಿಸಲು ಸಾಧ್ಯವಿದೆ. ಹೇಗೆ, ಏನು ಎಂಬಿತ್ಯಾದಿ (Weight Loss Tips) ಮಾಹಿತಿ ಇಲ್ಲಿದೆ.

VISTARANEWS.COM


on

Weight Loss Tips
Koo

ಇಡೀ ಲೋಕವೆಲ್ಲ ಒಂದೇ ಮಂತ್ರವನ್ನು ಜಪಿಸಬೇಕು ಎಂದಾದರೆ, ಎಲ್ಲರೂ ಜಪಿಸುವುದೇನು? ʻತೂಕ ಇಳಿಸುವುದು (Weight Loss Tips) ಹೇಗೆ?ʼ ಎನ್ನುವ ಮಂತ್ರವೇ ಎಲ್ಲೆಡೆಯಿಂದ ಕೇಳಿಬರಬಹುದು. ಹಾಗೆ ತೂಕ ಇಳಿಸುವ ಪ್ರಯತ್ನದಲ್ಲಿರುವವರು ಸುತ್ತೆಲ್ಲ ಕಾಣುತ್ತಿದ್ದರೂ, ಫಲಿತಾಂಶ ಕಾಣದೆ ನಿರಾಶರಾದವರೇ ಹೆಚ್ಚು. ಹೊಸವರ್ಷಕ್ಕೆ, ಹುಟ್ಟಿದ ದಿನಕ್ಕೆ ಎಂದೆಲ್ಲ ಹೊಸ ನಿರ್ಣಯಗಳನ್ನು ತೆಗೆದುಕೊಳ್ಳುವವರಲ್ಲಿ ತೂಕ ಇಳಿಸುವ ಶಪಥಗಳೇ ಹೆಚ್ಚಾಗಿರುತ್ತವೆ. ಮುಂದಿನ ವರ್ಷಕ್ಕೆ ಮತ್ತದೇ ಶಪಥ ಹೊಸದಾಗಿ ಸ್ವೀಕಾರವಾಗುತ್ತದೆ. ಹಾಗಾದರೆ ಏರಿದ್ದು ಇಳಿಯಲೇ ಬೇಕು ಎಂಬ ನಿರ್ಣಯ ತೂಕದ ವಿಷಯದಲ್ಲಿ ಇಲ್ಲ; ಬಂದಿದ್ದು ಹೋಗಲೇಬೇಕು ಎನ್ನುವ ನಿಯಮ ಹೊಟ್ಟೆಯ ವಿಷಯದಲ್ಲೂ ಇಲ್ಲ ಎಂದರ್ಥವೇ? ಹಾಗೇನಿಲ್ಲ. ಸಮಾಧಾನವೇ ಇಲ್ಲದಂಥ ಸಮಸ್ಯೆಗಳೇನಲ್ಲ ಇದು. ಆದರೆ ತೂಕ ಇಳಿಸುವುದು ಅಂದುಕೊಂಡಷ್ಟು ಸುಲಭವಲ್ಲ ಎನ್ನುವುದು ನಿಜ. ಕಾರಣ, ಹೆಚ್ಚು ಬಾರಿ ತೂಕ ಕರಗಿಸುವ ಬಗ್ಗೆ ಗಮನ ನೀಡುವು ಭರದಲ್ಲಿ ಚುಟುಕು ಡಯೆಟ್‌ಗಳ ಮೊರೆ ಹೋಗುತ್ತೇವೆ. ಆಗದಿರುವಂಥ ಸರ್ಕಸ್‌ಗಳಲ್ಲಿ ತೊಡಗಿಸಿಕೊಳ್ಳುತ್ತೇವೆ. ಇದರ ಪರಿಣಾಮವೇನೆಂದರೆ ದೇಹದಲ್ಲಿ ಕೊಬ್ಬು ಕರಗುವ ಬದಲು, ನೀರಿನಿಂದ ಇರುವಂಥ ತೂಕ ಮಾತ್ರವೇ ಕ್ಷಿಪ್ರವಾಗಿ ಕರಗುತ್ತದೆ. ಅದೂ ಇಲ್ಲದಿದ್ದರೆ ಸ್ನಾಯುಗಳು ಮಾಯವಾಗಿ ದೇಹ ತೊಂದರೆಗೆ ಸಿಲುಕುತ್ತದೆ. ಇದರ ಜೊತೆಗೆ ತಪ್ಪಾಗಿ ವ್ಯಾಯಾಮಗಳನ್ನೂ ಮಾಡಿದರೆ, ಗಾಯಗಳ ಸಮಸ್ಯೆ ತಲೆದೋರುತ್ತದೆ. ಹಾಗಾಗಿ ತೂಕ ಕರಗಿಸುವ ಗುರಿಯನ್ನು ಕೊಬ್ಬು ಕರಗಿಸುವ ಗುರಿಯನ್ನಾಗಿ ಮಾರ್ಪಾಡು ಮಾಡಿಕೊಂಡರೆ, ಫಲಿತಾಂಶ ದೊರೆಯುತ್ತದೆ. ಇದರಲ್ಲೂ ಸೂಕ್ಷ್ಮವಿದೆ. ಕೆಲವೇ ದಿನಗಳಲ್ಲಿ ಕರಗುವ ತೂಕ ಮತ್ತೆ ಕೆಲವೇ ದಿನಗಳಲ್ಲಿ ಮರಳಿ ಬರುತ್ತದೆ. ಬದಲಿಗೆ, ಹಲವಾರು ತಿಂಗಳುಗಳ ಪ್ರಯತ್ನದಿಂದ ಕೊಬ್ಬು ಕರಗಿಸಿದರೆ, ಅದರಿಂದ ಸ್ನಾಯುಗಳನ್ನು ಹುರಿಗಟ್ಟಿಸಲು, ದೇಹವನ್ನು ಸಶಕ್ತವಾಗಿಸಲು ಸಾಧ್ಯವಿದೆ. ಡಯೆಟ್‌ ಮಾಡುವ ಭರದಲ್ಲಿ, ಅಗತ್ಯ ಪೋಷಕಾಂಶಗಳಿಂದ ಶರೀರವನ್ನು ವಂಚಿಸಬಾರದು. ಆದರೆ ಕ್ಯಾಲರಿಗಳ ಕೊರತೆಯನ್ನು ಸೃಷ್ಟಿಸಬೇಕಷ್ಟೆ. ದೇಹಕ್ಕೆ ಒದಗಿಸುವ ಕ್ಯಾಲರಿಗಳನ್ನು ಪಿಷ್ಟ, ಪ್ರೊಟೀನ್‌, ನಾರು, ಖನಿಜಗಳು ಸಾಂದ್ರವಾಗಿರಬೇಕು. ಜೊತೆಗೆ ಸರಿಯಾದ ವ್ಯಾಯಾಮ. ಆಗ ದೇಹದ ಕೊಬ್ಬು ಕರಗಿಸಿ, ಆ ಮೂಲಕ ತೂಕ ಇಳಿಸಬಹುದು. ಶರೀರ ಕೃಶವಾಗಿ ಕಾಣುವ ಬದಲು ಆರೋಗ್ಯಪೂರ್ಣ ಕಳೆಯನ್ನು ಹೊಂದಿರುತ್ತದೆ.

Weight Loss

ಏನು ಮಾಡಬೇಕು?

ಇದಕ್ಕಾಗಿ ಪೋಷಕಾಂಶ ತಜ್ಞರು ಕೆಲವು ನಿಯಮಗಳನ್ನು ಒಪ್ಪುತ್ತಾರೆ. ಮೊದಲನೆಯದಾಗಿ, ಬೆಳಗಿನ ಉಪಹಾರದಲ್ಲಿ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪ್ರೊಟೀನ್‌ ಒದಗಿಸುವುದು. ಆದರೆ ನಿಮಗೆ ಬೆಳಗ್ಗೆ 1200 ಕ್ಯಾಲರಿಯ ಆಹಾರ ಬೇಕು ಎಂದಿದ್ದರೆ, ಅದನ್ನು ಅಂದಾಜು 900 ಕ್ಯಾಲರಿಗಳಿಗೆ ಇಳಿಸುವುದು. ಈ ಆಹಾರದಲ್ಲಿ ಪ್ರೊಟೀನ್‌ ಮತ್ತು ಸಂಕೀರ್ಣ ಪಿಷ್ಟಗಳು ಭರಿತವಾಗಿ ಇರಬೇಕು. ಇದರಿಂದ ಶರೀರ ಸೊರಗುವುದಿಲ್ಲ ಮತ್ತು ಹಸಿವೂ ಆಗುವುದಿಲ್ಲ. ದೇಹಕ್ಕೆ ಬೇಕಾದ ಉಳಿದ 300 ಕ್ಯಾಲರಿಯನ್ನು ಶರೀರ ತನ್ನ ಕೊಬ್ಬಿನ ದಾಸ್ತಾನಿನಿಂದ ತೆಗೆದುಕೊಳ್ಳುತ್ತದೆ. ಇದನ್ನು ಎಲ್ಲಾ ಹೊತ್ತಿನ ಆಹಾರಗಳಲ್ಲೂ ಕ್ರಮೇಣ ಅಳವಡಿಸಿಕೊಳ್ಳಬಹುದು.

30-30-30

ಇದೊಂದು ಸುಸ್ಥಿರವಾದ ತೂಕ ಇಳಿಕೆಯ ಕ್ರಮ. ಬೆಳಗಿನ ಉಪಾಹಾರಕ್ಕೆ, ದೊಡ್ಡ ಮಟ್ಟದಲ್ಲಿ ಅಂದರೆ, 30 ಗ್ರಾಂನಷ್ಟು ಪ್ರೊಟೀನ್‌ ತಿನ್ನುವುದು. ದಿನಕ್ಕೆ 30 ನಿಮಿಷಗಳ ಕಡಿಮೆ ತೀವ್ರತೆಯ ವ್ಯಾಯಾಮವನ್ನು ತಪ್ಪದೆ ಮಾಡುವುದು, ತಿಂಗಳಿನ 30 ದಿನಗಳು ಏನು-ಎಷ್ಟು ಎಂಬ ಲಕ್ಷ್ಯ ಇರಿಸಿಕೊಂಡೇ ತಿನ್ನುವುದು. ೩೧ನೇ ದಿನವೆಂಬುದು ಇದ್ದರೆ ಬೇಕಾದ್ದು ತಿನ್ನಿ! ಇದರಿಂದ ದೇಹಸ್ವಾಸ್ಥ್ಯ ಸುಧಾರಿಸಲು ಸಾಕಷ್ಟು ಅವಕಾಶ ದೊರೆಯುತ್ತದೆ.

ಪ್ರೊಟೀನ್‌ ಲೆಕ್ಕ ಎಂದರೆ?

ಹೆಚ್ಚಿನ ಪ್ರಮಾಣದಲ್ಲಿ ಪ್ರೊಟೀನ್‌ ತಿನ್ನಬೇಕು ಎನ್ನುವುದು ನಿಜ. ಆದರೆ 30 ಗ್ರಾಂ ಲೆಕ್ಕ ಮಾಡುವುದು ಹೇಗೆ? ಒಂದು ದೊಡ್ಡ ಮೊಟ್ಟೆಯ ಬಿಳಿ ಭಾಗದಲ್ಲಿ ಅಂದಾಜು 6 ಗ್ರಾಂ ಪ್ರೊಟೀನ್‌ ದೊರೆಯುತ್ತದೆ. ಒಂದು ಹಾಳೆ ಚೀಸ್‌ನಿಂದ ೪-೫ ಗ್ರಾಂ ಪ್ರೊಟೀನ್‌ ದೊರೆಯಬಹುದು. ಇಂಥ ಲೆಕ್ಕಗಳ ಆಧಾರದ ಮೇಲೆ ಹಾಲು, ಮೊಸರು, ಕಾಯಿ-ಬೀಜಗಳು, ಮೊಟ್ಟೆ, ಚಿಕನ್‌, ಸೋಯಾಬೀನ್‌, ಮೊಳಕೆ ಕಾಳುಗಳು- ಇಂಥವೆಲ್ಲ ಅಗತ್ಯವಾದ ಪ್ರೊಟೀನನ್ನು ದೇಹಕ್ಕೆ ಒದಗಿಸುವ ಹಲವಾರು ದಾರಿಗಳು. ಅದೇ ರೀತಿಯಲ್ಲಿ ತೌಡು, ಸಿಪ್ಪೆಗಳಿರುವ ಧಾನ್ಯಗಳು, ಸಿರಿ ಧಾನ್ಯಗಳನ್ನು ತಿನ್ನುವ ಮೂಲಕ ಸಂಕೀರ್ಣ ಪಿಷ್ಟಗಳನ್ನು ದೊರಕಿಸಿಕೊಡಬಹುದು.

Have enough fiber in the diet Eat plenty of whole grains fruits and raw vegetables Simple Steps to Preventing Diabetes

ನಾರು ಬೇಕಲ್ಲವೇ?

ಇದಕ್ಕಾಗಿ ಋತುಮಾನದ ಸೊಪ್ಪು-ಹಣ್ಣು-ತರಕಾರಿಗಳು ಊಟದಲ್ಲಿ ಸಾಕಷ್ಟಿರಲಿ. ಖನಿಜಗಳು ಕೊರತೆಯಾಗದಂತೆ ನೋಡಿಕೊಳ್ಳಲು ಇದಿಷ್ಟು ಆಹಾರಗಳು ಸಾಕಾಗುತ್ತವೆ. ಜೊತೆಗೆ ಚೆನ್ನಾಗಿ ನೀರು ಕುಡಿಯಿರಿ. ಇನ್ನೊಂದು ನೆನಪಿನಿಂದ ಮಾಡಬೇಕಾದ ಕೆಲಸವೆಂದರೆ ಗುಣಮಟ್ಟದ ನಿದ್ದೆ. ಉಳಿದೆಲ್ಲ ಮಾಡಿ, ಸರಿಯಾಗಿ ನಿದ್ದೆ ಮಾಡದಿದ್ದರೆ ಸರ್ವಬಣ್ಣ ಮಸಿ ನುಂಗಿತು ಎಂಬಂತಾಗುತ್ತದೆ. ಇಷ್ಟಾದ ಮೇಲೆ ದೇಹದ ಕೊಬ್ಬು ಕರಗದೆ ಎಲ್ಲಿ ಹೋಗುತ್ತದೆ!

ಇದನ್ನೂ ಓದಿ: Health Tips Kannada: ಕಣ್ಣಿನ ಕೆಳಗೆ ಕಪ್ಪಾಗಿದೆಯೇ? ಇಲ್ಲಿದೆ ಸರಳ ಮನೆಮದ್ದು

Continue Reading
Advertisement
IPL 2024
ಕ್ರೀಡೆ52 seconds ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ7 mins ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ29 mins ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Prajwal Revanna Case
ಕರ್ನಾಟಕ50 mins ago

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Bangalore To Belagavi Train
ಕರ್ನಾಟಕ55 mins ago

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

IPL 2024
Latest59 mins ago

IPL 2024 : ಪುತ್ರ ಅಕಾಯ್​ ಹುಟ್ಟಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ

Jai Shri Ram Slogan
ಕರ್ನಾಟಕ2 hours ago

Jai Shri Ram Slogan: ಜೈ ಶ್ರೀರಾಮ್ ಘೋಷಣೆ ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದಿದ್ದ ಕೈ ಮುಖಂಡ ಅಮಾನತು

Paytm
ಪ್ರಮುಖ ಸುದ್ದಿ2 hours ago

Paytm : ಪೇಟಿಎಂ ಸಿಒಒ ಭವೇಶ್ ಗುಪ್ತಾ ಏಕಾಏಕಿ ರಾಜೀನಾಮೆ

Ballari DC Prashanth kumar Mishra pressmeet about MLC election
ಬಳ್ಳಾರಿ2 hours ago

MLC Election: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ; ಮೇ 9ಕ್ಕೆ ಅಧಿಸೂಚನೆ ಪ್ರಕಟ

HD Revanna
ಕರ್ನಾಟಕ2 hours ago

HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ18 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌