Women's Day 2023 : ಎಲ್ಲರಿಗೂ ಮುಟ್ಟಿನ ರಜೆಯ ಅಗತ್ಯ ಇಲ್ಲ - Vistara News

ಮಹಿಳೆ

Women’s Day 2023 : ಎಲ್ಲರಿಗೂ ಮುಟ್ಟಿನ ರಜೆಯ ಅಗತ್ಯ ಇಲ್ಲ

ಇದೊಂದು ನೈಸರ್ಗಿಕ ಕ್ರಿಯೆ ಅಷ್ಟೆ. ಆ ದಿನಗಳಲ್ಲಿ ತುಂಬಾ ಕಷ್ಟ ಅನುಭವಿಸೋರು ತಮಗಿರುವ ರಜೆ ಸೌಲಭ್ಯವನ್ನ ಉಪಯೋಗಿಸ್ಕೊಂಡ್ರೆ ಆಯ್ತು…

VISTARANEWS.COM


on

Not everyone needs menstrual leave
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಂಜನಾ, ಗೃಹಿಣಿ

ಹೆಣ್ಣುಮಕ್ಕಳಿಗೆ ಮುಟ್ಟಿನ ರಜೆ ಬೇಕಾ ಬೇಡ್ವಾ ಅನ್ನೋದಕ್ಕಿಂತ ಯಾರಿಗೆ ಅಂತ ಮೊದಲು ಕೇಳ್ಬೇಕಾಗುತ್ತೆ. ಯಾಕಂದ್ರೆ ರಜೆ ಅನ್ನೊ ಸೌಲಭ್ಯ ಎಲ್ರಿಗೂ ಎಲ್ಲಿ ಸಿಗುತ್ತೆ? ಯಾವುದೋ ಉನ್ನತ ಕಂಪನಿಯಲ್ಲಿರೋರು, ಸರ್ಕಾರಿ ನೌಕ್ರಿಲಿರೋರು ರಜೆ ಬೇಕೂಂತ ಹೋರಾಟ ಮಾಡಬಹುದು. ಹೋರಾಟದಲ್ಲಿ ಯಶಸ್ವಿಯಾಗಿ ರಜೆ ಪಡ್ಕೋತಾರೆ ಅಂತ್ಲೂ ಇಟ್ಕೊಳ್ಳಿ, ನನ್ನ ಪ್ರಶ್ನೆ ಏನಂದ್ರೆ ಅಸಂಖ್ಯಾತ ಕೂಲಿ ಮಾಡೋ ಮಹಿಳೆಯರು, ಬಟ್ಟೆ ಅಂಗಡಿಗಳಲ್ಲಿ ಕೆಲ್ಸ ಮಾಡೋ ಹೆಣ್ಮಕ್ಳು, ಮನೆ ಕೆಲ್ಸ ಮಾಡೋ ಹೆಣ್ಮಕ್ಳಿಗೆ ಈ ಸೌಲಭ್ಯ ಸಿಗುತ್ತಾ? ಹೊರಗೆ ದುಡಿಯೋರ ಕಥೆ ಬಿಡಿ ಮನೇಲಿ ಕೆಲ್ಸದವ್ರಿಗಿಂತ ಕಡೆಯಾಗಿ ಶ್ರಮಿಸೋ ಗೃಹಿಣಿಯರು ಇವ್ರಿಗೆಲ್ಲ ಯಾರ್ ಸ್ವಾಮಿ ಮುಟ್ಟಿನ ರಜೆ ಕೊಡೋರು?

ಸಂಬಳ ಬಿಟ್ರೆ ಬೇರೆ ಯಾವ ಸವಲತ್ತೂ ಇಲ್ಲದ ಮಹಿಳೆಯರು ಮುಟ್ಟಿನ ರಜೆ ಬೇಕು ಅಂದ್ರೆ ‘ಪ್ರತಿ ತಿಂಗ್ಳು ಮುಟ್ಟಾಗೋವ್ರಿಗೆ ರಜೆ ಕೊಡೋಕಾಗಲ್ಲ’ ಅಂತಾರೆ ಅಥವಾ ‘ಶಾಶ್ವತ ರಜೆ’ ಕೊಟ್ಟೂ ಕಳಿಸಬಹುದು. ಇನ್ನು ನಾವು ಗೃಹಿಣಿಯರು ಮುಟ್ಟಿನ ರಜೆಯನ್ನು ನಾವೇ ನಮ್ಮ ಕೈಯಾರೆ ಹಾಳ್ಮಾಡ್ಕೊಂಡಿದ್ದೀವಿ. ಹಿಂದೆ ಮುಟ್ಟಿನ ದಿನಗಳಲ್ಲಿ ‘ಮೈಲಿಗೆ’ ಅಂತ ಮೂಲೇಲಿ ಕೂರ್ಸೋರು, ಆಗ ನಾವು ‘ಮೂಢನಂಬಿಕೆ ‘ ಅಂತ ತಳ್ಳಿ ಹಾಕಿ (ಎಷ್ಟೋ ಜನ ಹೋರಾಟ ಮಾಡಿ) ಆ ಪದ್ಧತಿಯನ್ನು ನಿಲ್ಲಿಸಿದ್ರು. ಈಗ ಆ ದಿನಗಳಲ್ಲಿ ಆಗೋ ಹಿಂಸೆ ನೋವುಗಳನ್ನು ಮೌನವಾಗಿ ಸಹಿಸೋ ಅನಿವಾರ್ಯಕ್ಕೊಳಗಾಗಿದ್ದೀವಿ. ಮೊನ್ನೆ ಯಾರದೋ ಮನೆಗ್ಹೋಗಿದ್ದೆ, ಆ ಮನೆ ಸೊಸೆ ತೀರಾ ಸಂಕಟ ಪಟ್ಕೊಂಡು ಅಡುಗೆ ಮಾಡ್ತಾ ಇದ್ರು, ‘ಯಾಕಿಷ್ಟು ಒದ್ದಾಡ್ತಾ ಇದ್ದೀರಾ ‘ ಅಂದಾಗ ಆಕೆ ಕೊಟ್ಟ ಉತ್ತರ ಕೇಳಿ ತುಂಬಾ ನೋವಾಯ್ತು. ಅವತ್ತು ಆಕೆಯ ಮುಟ್ಟಿನ ದಿನವಾದ್ರಿಂದ ಅಡುಗೆ ಮಾಡೋಕೆ ನಿರಾಕರಿಸಿದ್ದಾರೆ, ಅಷ್ಟಕ್ಕೇ ಮನೇಲಿ ರಂಪ. ‘ ಹೆಂಗ್ಸು ಅಂದ್ಮೇಲೆ ಮುಟ್ಟು ಇದ್ದಿದ್ದೆ, ಮುಟ್ಟು ಅಂದ್ಮೇಲೆ ನೋವು ಇದ್ದಿದ್ದೆ ಅಷ್ಟಕ್ಕೇ ಹಿಂಗಾಡ್ತೀಯ ಎದ್ಹೋಗಿ ಅಡ್ಗೆ ಮಾಡು’ ಅನ್ನೊ ಅಪ್ಪಣೆ ಮಾಡಿದ್ದಾರೆ. ಇಂಥಾವ್ರಿಗೆ ಹೆಂಗ್ ಮುಟ್ಟಿನ ರಜೆ ಕೊಡಿಸ್ತೀರಾ? ಇದೇನಿದ್ರೂ ಸರ್ಕಾರಿ ನೌಕರಿ ಅಥವಾ ಇನ್ನಿತರ ಅನುಕೂಲ, ಸೌಲಭ್ಯ ಇರೋವ್ರಿಗಷ್ಟೇ ಸೀಮಿತವಾಗತ್ತೆ. ಈಗಾಗಲೇ ನಮ್ಮಲ್ಲಿ ಆ ಈ ಜಯಂತಿಗಳು, ರಾಷ್ಟ್ರೀಯ ಹಬ್ಬಗಳು, ಧಾರ್ಮಿಕ ಆಚರಣೆಗಳು, ಈಎಲ್ಲು, ಸೀಯೆಲ್ಲು, ಆರ್ಹೆಚ್ಚು ಸಿಕ್ ಲೀವು ಹಿಂಗೆ ಬೇಕಾದಷ್ಟು ರಜೆಗಳ ಸಾಲುಸಾಲೇ ಇದೆ. ಇದರ ಮಧ್ಯೆ ಮುಟ್ಟಿನ ರಜೆಯ ಅಗತ್ಯವಿಲ್ಲ ಅನ್ನೋದು ನನ್ನ ವೈಯುಕ್ತಿಕ ಅನಿಸಿಕೆ.

ಇದನ್ನೂ ಓದಿ : Women’s Day Offer: ಮಹಿಳಾ ದಿನದ ನಿಮಿತ್ತ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಮಹಿಳೆಯರಿಗೆ ಭರ್ಜರಿ ಕೊಡುಗೆ!

ಇಷ್ಟಕ್ಕೂ ಮುಟ್ಟಿನ ದಿನಗಳ ಕಷ್ಟ ಎಲ್ರಿಗೂ ಒಂದೇ ರೀತಿ ಇರಲ್ಲಾ. ಎಲ್ರಿಗೂ ಕಷ್ಟದ ದಿನಗಳಾಗಿರೊಲ್ಲ. ಕೆಲವ್ರಿಗೆ ತುಂಬಾ ಕಷ್ಟವಾಗುತ್ತೆ, ಕೆಲವ್ರಿಗೆ ತಕ್ಕ ಮಟ್ಟಿನ ಸಮಸ್ಯೆ ಇರುತ್ತೆ, ಇನ್ನು ಕೆಲವ್ರಿಗೆ ಸಹಿಸ್ಕೊಂಡು ಅಂದಿನ ದಿನಚರಿ ನಿಭಾಯಿಸ್ಕೊಂಡು ಹೋಗಬಹುದಷ್ಟಾಗಿರುತ್ತದೆ. ಮತ್ತೂ ಕೆಲವರಿಗೆ ಏನೂ ತೊಂದರೆ ಇಲ್ಲದೆ ಎಂದಿನ ದಿನದಂತೆ ಆ ದಿನಗಳಲ್ಲೂ ಸಹಜವಾಗಿರ್ತಾರೆ. ಹೀಗಿರೋವಾಗ ಎಲ್ರಿಗೂ ಮುಟ್ಟಿನ ರಜೆ ಅಗತ್ಯವಿರಲ್ಲ. ಒಂದು ಹೆಣ್ಣು ತಾಯಿಯಾಗಲು ಅರ್ಹತೆ ಪಡೆಯೋ ಮುಟ್ಟು ಅದೊಂದು ನೈಸರ್ಗಿಕ ಕ್ರಿಯೆ ಅಷ್ಟೆ. ಆ ದಿನಗಳಲ್ಲಿ ತುಂಬಾ ಕಷ್ಟ ಅನುಭವಿಸೋರು ತಮಗಿರುವ ರಜೆ ಸೌಲಭ್ಯವನ್ನ ಉಪಯೋಗಿಸ್ಕೊಂಡ್ರೆ ಆಯ್ತು. ಇನ್ನು ಕೆಲವು ಕಡೆ ಮೇಲಾಧಿಕಾರಿಗಳು ಆ ದಿನಗಳಲ್ಲಿ ಮಾನವೀಯತೆಯಿಂದ ರಜೆ ಕೊಡಬೇಕು.

ಇದೆಲ್ಲಕ್ಕಿಂತ ನಂಗೆ ಮುಖ್ಯ ಅನಿಸಿದ್ದು ಅಕಸ್ಮಾತ್ ಮುಟ್ಟಿನ ರಜೆ ಕೊಟ್ರು ಅಂತ್ಲೇ ಇಟ್ಕೊಳ್ಳೋಣ, ನಮ್ಮ ಜನ ಆ ರಜೆಯನ್ನು ಪ್ರಾಮಾಣಿಕವಾಗಿ ಉಪಯೋಗಿಸಿಕೊಳ್ತಾರಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru News: ಮಹಿಳೆಯರು ಸೋಷಿಯಲ್‌ ಮೀಡಿಯಾ ಬಳಸುವಾಗ ಎಚ್ಚರ ವಹಿಸಬೇಕು ಎಂದ ಮಹಿಳಾ ಆಯೋಗದ ಅಧ್ಯಕ್ಷೆ

Bengaluru News: ಬೆಂಗಳೂರಿನ ಎಎಂಸಿ ಸಂಸ್ಥೆಯ ಕ್ಯಾಂಪಸ್‌ನಲ್ಲಿ ಪ್ರತಿಷ್ಠಿತ ಸೈಬರ್‌ ಸೆಕ್ಯುರಿಟಿ ಸಂಸ್ಥೆಯಾದ ಜೆಸ್ಕೇಲರ್‌ ಪ್ರಾಯೋಜಕತ್ವದೊಂದಿಗೆ ಸೈಬರ್‌ ದಾಳಿಗಳಿಂದ ಪಾರಾಗಲು ವಿಶಿಷ್ಟ ತಂತ್ರಜ್ಞಾನದೊಂದಿಗೆ ರೂಪಿಸಿರುವ ದೇಶದಲ್ಲೇ ಮೊಟ್ಟಮೊದಲ ವ್ಯವಸ್ಥೆಯಾದ ಕಾಪ್‌ಕನೆಕ್ಟ್‌ (ಮಾಹಿತಿ ಹಂಚಿಕೆ ಮತ್ತು ವಿಶ್ಲೇಷಣೆ ಕೇಂದ್ರ) ಎಂಬ ಸೈಬರ್‌ ಸೆಕ್ಯುರಿಟಿ ಕೆಫೆಯನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಉದ್ಘಾಟಿಸಿದರು.

VISTARANEWS.COM


on

CopConnect cyber security caffe inauguration by Dr Nagalakshmi Chaudhary at bengaluru
Koo

ಬೆಂಗಳೂರು: ಮಹಿಳೆಯರಿಗೆ ತಂತ್ರಜ್ಞಾನದ (Technology) ಕುರಿತು ಸಾಕಷ್ಟು ಅರಿವು ಮೂಡಿಸಬೇಕು ಮತ್ತು ಬದಲಾಗುತ್ತಿರುವ ಸನ್ನಿವೇಶದಲ್ಲಿ ಅವರೂ ಕೂಡ ತಾಂತ್ರಿಕವಾಗಿ ಸಾಕಷ್ಟು ತಿಳುವಳಿಕೆ ಹೊಂದಬೇಕು. ಇಲ್ಲವಾದಲ್ಲಿ ಅನಗತ್ಯ ಸಂಕಷ್ಟಗಳಿಗೆ ಸಿಕ್ಕಿ ಹಾಕಿಕೊಳ್ಳುವ ಪ್ರಸಂಗ ಎದುರಾಗಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ (Bengaluru News) ಎಚ್ಚರಿಸಿದರು.

ನಗರದ ಎಎಂಸಿ ಸಂಸ್ಥೆಯ ಕ್ಯಾಂಪಸ್‌ನಲ್ಲಿ ಪ್ರತಿಷ್ಠಿತ ಸೈಬರ್‌ ಸೆಕ್ಯುರಿಟಿ ಸಂಸ್ಥೆಯಾದ ಜೆಸ್ಕೇಲರ್‌ ಪ್ರಾಯೋಜಕತ್ವದೊಂದಿಗೆ ಸೈಬರ್‌ ದಾಳಿಗಳಿಂದ ಪಾರಾಗಲು ವಿಶಿಷ್ಟ ತಂತ್ರಜ್ಞಾನದೊಂದಿಗೆ ರೂಪಿಸಿರುವ ದೇಶದಲ್ಲೇ ಮೊಟ್ಟಮೊದಲ ವ್ಯವಸ್ಥೆಯಾದ ಕಾಪ್‌ಕನೆಕ್ಟ್‌ (ಮಾಹಿತಿ ಹಂಚಿಕೆ ಮತ್ತು ವಿಶ್ಲೇಷಣೆ ಕೇಂದ್ರ) ಎಂಬ ಸೈಬರ್‌ ಸೆಕ್ಯುರಿಟಿ ಕೆಫೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ:Yadgiri News: ಬರಡು ಭೂಮಿಯಲ್ಲಿ ಈ ರೈತ ಬಂಪರ್ ಮಾವು ಬೆಳೆದಿದ್ದು ಹೇಗೆ?

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರು ವೈಯಕ್ತಿಕ ವಿವರ, ಪೋಟೋಗಳನ್ನು ಹಂಚಿಕೊಳ್ಳುವ ಮೊದಲು ಗಂಭೀರವಾಗಿ ಯೋಚಿಸಬೇಕು. ಇಂದು ಅಂತರ್ಜಾಲವನ್ನು ದುರ್ಬಳಕೆ ಮಾಡಿಕೊಂಡು ಅನೇಕ ಮಹಿಳೆಯರು ಹಾಗೂ ಮಕ್ಕಳನ್ನು ಗುರಿ ಮಾಡಿಕೊಳ್ಳುವ ಜಾಲವೇ ಬೆಳೆದುಬಿಟ್ಟಿದೆ. ಈ ಕಾರಣದಿಂದ ಸೈಬರ್‌ ಕ್ರೈಂಗೆ ಗುರಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಮಹಿಳೆಯರು ಇದನ್ನೆಲ್ಲಾ ಸಹಿಸಿಕೊಂಡು ಸುಮ್ಮನೆ ಕುಳಿತುಕೊಳ್ಳಬೇಕಿಲ್ಲ. ಮಹಿಳಾ ಆಯೋಗ ನಿಮ್ಮ ನೆರವಿಗಿದೆ. ಪೊಲೀಸರು ಕೂಡಾ ನೆರವು ನೀಡುತ್ತಾರೆ. ಅದೆಲ್ಲಕ್ಕಿಂತ ಹೆಚ್ಚಾಗಿ ಕಾಪ್‌ ಕನೆಕ್ಟ್‌ ನಂತಹ ಈ ಉಪಕ್ರಮ ಕೂಡಾ ನಿಮ್ಮನ್ನು ಎಚ್ಚರಿಸುವಲ್ಲಿ ಸಹಾಯ ಮಾಡಲಿದೆ. ಇಂತಹ ಪ್ರಯತ್ನಗಳು ಸಮಾಜದಲ್ಲಿ ಹೆಚ್ಚಾಗಬೇಕು ಎಂದು ಅವರು ತಿಳಿಸಿದರು.

ಎಎಂಸಿ ಸಂಸ್ಥೆಯ ನಿರ್ದೇಶಕ ಡಾ. ಜಿ.ಎನ್‌. ಮೋಹನ್‌ ಬಾಬು ಮಾತನಾಡಿ, ದಿನದಿಂದ ದಿನಕ್ಕೆ ಸೈಬರ್‌ ದಾಳಿಗಳು ಹೆಚ್ಚಾಗುತ್ತಿವೆ. ಜಾಗತಿಕವಾಗಿ ನೋಡಿದಾಗ ಕಳೆದ ಐದಾರು ವರ್ಷಗಳಲ್ಲಿ ಸೈಬರ್‌ ಅಪರಾಧಗಳ ಸಂಖ್ಯೆಯೇ ಅತಿ ಹೆಚ್ಚಿರುವುದು. ಮುಂದಿನ ಇನ್ನೂ ಎರಡು ದಶಕಗಳ ಕಾಲ ಸೈಬರ್‌ ಕ್ರೈಂಗಳೇ ಅಪರಾಧಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುತ್ತವೆ. ಪ್ರಸ್ತುತ ಸರಿ ಸುಮಾರು 40 ಬಿಲಿಯನ್‌ ಉಪಕರಣಗಳು ಇಂಟರ್‌ನೆಟ್‌ಗೆ ಕನೆಕ್ಟ್‌ ಆಗಿವೆ. ಖಂಡ, ಖಂಡಗಳ ನಡುವೆಯೇ ಸೂಪರ್ ಇಂಟರ್‌ನೆಟ್‌ ರಹದಾರಿ ನಿರ್ಮಿಸಿದೆ. ಇಂತಹ ಸನ್ನಿವೇಶದಲ್ಲಿ ಸೈಬರ್‌ ದಾಳಿಯಿಂದ ತಪ್ಪಿಸಿಕೊಳ್ಳಲು ಎಐ ಅಪ್ಲಿಕೇಶನ್‌ಗಳ ಮೊರೆ ಹೋಗುವ ತುರ್ತು ಅಗತ್ಯವಿದೆ ಎಂದರು.

ಇದನ್ನೂ ಓದಿ: Song Release: ‘ಇದು ನಮ್ ಶಾಲೆ’ ಚಿತ್ರದ ಹಾಡಿನ ಅನಾವರಣ

ಕಾಪ್‌ ಕನೆಕ್ಟ್‌ ಉಪಕ್ರಮದ ಕುರಿತಂತೆ ಮಾಹಿತಿ ಹಂಚಿಕೊಂಡ ಸಂಸ್ಥೆಯ ಪ್ರಾಂಶುಪಾಲ ಡಾ ಕೆ. ಕುಮಾರ್‌ ಮಾತನಾಡಿ, ಇದೊಂದು ಸೈಬರ್‌ ಕುರಿತಾದ ಉಚಿತ ಕಾರ್ಯಕ್ರಮವಾಗಿದ್ದು, ಸೈಬರ್‌ ದಾಳಿಗಳ ಕುರಿತಂತೆ ಸಮಾಜದಲ್ಲಿ ಜಾಗೃತಿ ಮೂಡಿಸುವುದಾಗಿದೆ. ಸೈಬರ್‌ ಕ್ರೈಂ ತಡೆಗಟ್ಟುವ ನಿಟ್ಟಿನಲ್ಲಿ ಆಪ್‌ವೊಂದನ್ನು ಅಭಿವೃದ್ಧಿ ಪಡಿಸಲಾಗಿದ್ದು, ಇದನ್ನು ಇನ್‌ಸ್ಟಾಲ್‌ ಮಾಡಿಕೊಂಡಲ್ಲಿ ನಿಮ್ಮ ಮೊಬೈಲ್‌ಗೆ ಯಾವುದಾದರು ಸೈಬರ್‌ ದಾಳಿಗಳಾದರೆ, ಅಪಾಯಕಾರಿ ಆಪ್‌ಗಳನ್ನು ಇನ್‌ಸ್ಟಾಲ್‌ ಮಾಡಲು ಪ್ರಯತ್ನಿಸಿದರೆ ಅದರಿಂದ ಇದು ರಕ್ಷಣೆ ನೀಡುತ್ತದೆ. ಈ ಆಪ್‌ ನೇರವಾಗಿ ಹಾಂಕ್‌ ಮಷೀನ್‌ಗೆ ಕನೆಕ್ಟ್‌ ಆಗಿದ್ದು, ಅದೇ ರೀತಿಯಲ್ಲಿ ಈ ತಂತ್ರಜ್ಞಾನವು ಕೂಡಾ ಅನಿರೀಕ್ಷಿತ ಸೈಬರ್‌ ದಾಳಿಗಳಿಂದ ಜನರನ್ನು ರಕ್ಷಿಸುತ್ತದೆ.

ಹಣ ಪಾವತಿಸುವುದು, ಗೊತ್ತಿರದ ಆಪ್‌ಗಳ ಬಳಕೆಗೆ ಅನುಮತಿ ನೀಡುವುದು ಸೇರಿದಂತೆ ಅನೇಕ ವಿಷಯಗಳನ್ನ ಎಚ್ಚರಿಸುವ ಕೆಲಸವನ್ನು ಮಾಡುತ್ತದೆ. ಮುಖ್ಯವಾಗಿ ಜನ ಐಟಿ ಕಾಯ್ದೆಗಳ ಮೊರೆ ಹೋಗಬೇಕಾದದ್ದು ಅಗತ್ಯ. ಐಟಿ ಕಾಯ್ದೆ 2000ರ 66ಎ ಅನಿರೀಕ್ಷಿತ ಸೈಬರ್‌ ದಾಳಿಗಳಿಗೆ ನೆರವಾಗುವುದಲ್ಲದೆ, ಸೈಬರ್‌ ಅಪರಾಧಿಗಳನ್ನು ಶಿಕ್ಷಿಸುವಲ್ಲಿಯೂ ಸಹಾಯಕ್ಕೆ ಬರಲಿದೆ. ಒಟ್ಟಾರೆಯಾಗಿ ಎಎಂಸಿ ಸಂಸ್ಥೆಯು ಇಂಥದ್ದೊಂದು ವಿಶೇಷ ಉಪಕ್ರಮ ಆರಂಭಿಸಿದ್ದು, ಇದರ ಕಾರಣೀಕರ್ತರಾದ ಸಂಸ್ಥೆಯ ಸಂಸ್ಥಾಪಕ ಡಾ ಕೆ.ಆರ್.‌ ಪರಮಹಂಸ ಮತ್ತು ಎಎಂಸಿ ಸಂಸ್ಥೆಗಳ ಕಾರ್ಯನಿರ್ವಾಹಕ ಉಪಾಧ್ಯಕ್ಷ ರಾಹುಲ್ ಕಲ್ಲೂರಿ ಅವರ ಪ್ರಯತ್ನ ನೆನೆಯಲೇಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಕರ್ನಾಟಕ ಡಿಜಿಟಲ್‌ ಎಕಾನಮಿ ಸಿಇಒ ಸಂಜೀವ್‌ ಗುಪ್ತಾ, ಕಾಪ್‌ಕನೆಕ್ಟ್‌ನ ಸಂಸ್ಥಾಪಕ ನಿರ್ದೇಶಕ ಪಿ. ಆನಂದ ನಾಯ್ಡು, ಜೆಸ್ಕೇಲರ್‌ನ ಮಾರ್ಕೆಟಿಂಗ್‌ ವಿಭಾಗದ ಪ್ರಾದೇಶಿಕ ನಿರ್ದೇಶಕ ಕಾರ್ತಿಕ್‌ ಕಿಶೋರ್ ಉಪಸ್ಥಿತರಿದ್ದರು.

Continue Reading

ಮಹಿಳೆ

French Yoga Teacher: ಹಸಿರು ಸೀರೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ 101 ವರ್ಷದ ವಿದೇಶಿ ಯೋಗ ಶಿಕ್ಷಕಿ!

ಫ್ರಾನ್ಸ್ ನ 101 ವರ್ಷದ ಯೋಗ ಶಿಕ್ಷಕಿಯೊಬ್ಬರು (French Yoga Teacher) ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮಶ್ರೀ ಪುರಸ್ಕಾರ ಪಡೆದಿದ್ದಾರೆ. ಈ ಕುರಿತು ರಾಷ್ಟ್ರಪತಿ ಭವನದಿಂದ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ.

VISTARANEWS.COM


on

By

French Yoga Teacher
Koo

ನವದೆಹಲಿ: ವಯಸ್ಸು ಕೇವಲ ಒಂದು ಸಂಖ್ಯೆ ಮಾತ್ರ ಎಂಬುದನ್ನು ಇದೀಗ 101 ವರ್ಷದ ಫ್ರೆಂಚ್ ಯೋಗ ಶಿಕ್ಷಕಿ (French Yoga Teacher) ಸಾಬೀತು ಪಡಿಸಿದ್ದಾರೆ. ವಯಸ್ಸಿನ ಮಿತಿ ನಿಯಮಗಳನ್ನು ಮೀರಿ ಸುಮಾರು ನಾಲ್ಕು ದಶಕಗಳ ಕಾಲ ಯೋಗಕ್ಕೆ ಅವರು ನೀಡಿರುವ ಅಸಾಧಾರಣ ಕೊಡುಗೆಯನ್ನು ಗೌರವಿಸಿ ಶಾರ್ಲೆಟ್ ಚಾಪಿನ್ (Charlotte Chopin) ಅವರಿಗೆ ಭಾರತದ (India) ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಶ್ರೀ ( Padma Shri award) ಅನ್ನು ನೀಡಿ ಗೌರವಿಸಲಾಯಿತು.

ನವದೆಹಲಿಯ (new delhi) ರಾಷ್ಟ್ರಪತಿ ಭವನದಲ್ಲಿ ( Rashtrapati Bhawan) ಗುರುವಾರ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಹಸಿರು ಸೀರೆಯನ್ನು ಧರಿಸಿದ ಶಾರ್ಲೆಟ್ ಚಾಪಿನ್ ವೇದಿಕೆಯತ್ತ ನಡೆದು ರಾಷ್ಟ್ರಪತಿ ದ್ರೌಪದಿ ಮುರ್ಮು (President Droupadi Murmu) ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಯೋಗ ಕ್ಷೇತ್ರದಲ್ಲಿ ಶಾರ್ಲೆಟ್ ಚಾಪಿನ್ ಅವರ ಪ್ರಯತ್ನವನ್ನು ಶ್ಲಾಘಿಸಿ ರಾಷ್ಟ್ರಪತಿಯವರ ಕಚೇರಿಯು ಎಕ್ಸ್ ನಲ್ಲಿ ಟ್ವೀಟ್ ಮಾಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಯೋಗ ಕ್ಷೇತ್ರದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಶಾರ್ಲೆಟ್ ಚಾಪಿನ್ ಅವರಿಗೆ ಪ್ರದಾನ ಮಾಡಿದರು. ಅವರು ಪ್ರಸಿದ್ಧ ಫ್ರೆಂಚ್ ಯೋಗ ಶಿಕ್ಷಕಿಯಾಗಿದ್ದಾರೆ. ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಯೋಗವನ್ನು ಕಲಿಸುತ್ತಿದ್ದಾರೆ ಮತ್ತು 101ನೇ ವಯಸ್ಸಿನಲ್ಲಿ ಯೋಗ ಶಿಕ್ಷಕರಾಗಿ ಸಕ್ರಿಯರಾಗಿದ್ದಾರೆ ಎಂದು ಟ್ವೀಟ್ ನಲ್ಲಿ ತಿಳಿಸಲಾಗಿದೆ.


ಶಾರ್ಲೆಟ್ ಚಾಪಿನ್ ಯಾರು?

ಚಾಪಿನ್ ಫ್ರಾನ್ಸ್ ಮೂಲದವರಾಗಿದ್ದು, ಪ್ರಸ್ತುತ ಯೋಗ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲಾ ವಯಸ್ಸಿನ ಮಿತಿಯ ಮಾನದಂಡಗಳನ್ನು ಮೀರಿ ಚಾಪಿನ್ ಅವರು 50 ವರ್ಷ ವಯಸ್ಸಿನ ಅನಂತರ ಯೋಗವನ್ನು ಕಲಿತರು. 1982 ರಲ್ಲಿ ಫ್ರಾನ್ಸ್ ನಲ್ಲಿ ಕಲಿಸಲು ಪ್ರಾರಂಭಿಸಿದರು. ಅವರು ದೇಶದಲ್ಲಿ ಯೋಗದ ಅಲೆಯನ್ನು ಸೃಷ್ಟಿಸಿದರು. ಇದು ಪ್ರಸಿದ್ಧ ಫಿಟ್ನೆಸ್ ಅಭ್ಯಾಸವನ್ನು ಮಾಡಿದರು. ಅವರು ಫ್ರೆಂಚ್ ಟಿವಿ ಶೋ, ‘ಫ್ರಾನ್ಸ್ ಗಾಟ್ ಇನ್‌ಕ್ರೆಡಿಬಲ್ ಟ್ಯಾಲೆಂಟ್’ ನಲ್ಲಿ ಕಾಣಿಸಿಕೊಂಡರು.

ಇದನ್ನೂ ಓದಿ: K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

2023ರ ಜುಲೈನಲ್ಲಿ ಅವರು ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪಾಲ್ಗೊಳ್ಳಲು ಫ್ರೆಂಚ್ ಪ್ರವಾಸದಲ್ಲಿದ್ದಾಗ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೊದಲ ಬಾರಿಗೆ ಪ್ಯಾರಿಸ್‌ನಲ್ಲಿ ಭೇಟಿಯಾದರು. ಯೋಗ ಕ್ಷೇತ್ರದಲ್ಲಿ ಅವರ ಅಸಾಧಾರಣ ಕೆಲಸದಿಂದ ಪ್ರಭಾವಿತರಾದ ಪ್ರಧಾನಿ, ಯೋಗದಲ್ಲಿ ಚಾಪಿನ್ ಅವರ ಆಳವಾದ ನಂಬಿಕೆ ಮತ್ತು ಫ್ರಾನ್ಸ್‌ನಲ್ಲಿ ಯೋಗವನ್ನು ಉತ್ತೇಜಿಸಲು ಅವರ ಪ್ರಯತ್ನಗಳನ್ನು ಶ್ಲಾಘಿಸಿದರು.

ಯೋಗವು ಸಂತೋಷವನ್ನು ತರುತ್ತದೆ ಮತ್ತು ಸಮಗ್ರ ಯೋಗಕ್ಷೇಮವನ್ನು ಉತ್ತೇಜಿಸುತ್ತದೆ ಎಂದು ಜುಲೈನಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದಾಗ ಚಾಪಿನ್ ಹೇಳಿದ್ದರು.

Continue Reading

ಮಹಿಳೆ

Mother’s Day: ಆಕೆಗಾಗಿ ಕೊಂಚ ಸಮಯ ನೀಡೋಣ; ತಾಯಂದಿರ ದಿನ ಅರ್ಥಪೂರ್ಣವಾಗಿ ಆಚರಿಸೋಣ

ಎಲ್ಲರ ಬದುಕಿನಲ್ಲಿ ತಾಯಿಯಾಗಿ ಒಬ್ಬಳು ಇದ್ದೇ ಇರುತ್ತಾಳೆ. ಅದು ಹೆಂಡತಿಯಾಗಿರಬಹುದು, ಸಹೋದರಿಯಾಗಿರಬಹುದು ಅಥವಾ ಜನ್ಮವಿತ್ತ, ಸಾಕಿ ಸಲಹಿದ ತಾಯಿಯಾಗಿರಬಹುದು. ಇಲ್ಲಿ ಅವರ ಸ್ಥಾನಕ್ಕಿಂತ ಅವರು ಮಾಡುವ ಕರ್ತವ್ಯಕ್ಕೆ ಗೌರವ ಕೊಡಲೇಬೇಕು. ಇದಕ್ಕಾಗಿ ವರ್ಷದಲ್ಲೊಮ್ಮೆ ತಾಯಂದಿರ ದಿನವನ್ನು (Mother’s Day) ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಈ ಬಾರಿ ಇಂದು ಈ ದಿನ ವಿಶೇಷವಾಗಿದೆ.

VISTARANEWS.COM


on

By

Mother's Day
Koo

ತಾಳ್ಮೆ, ಸಹನೆ, ಶಾಂತಿ, ಪರಸ್ಪರ ಹೊಂದಾಣಿಕೆ ಇವನ್ನೆಲ್ಲ ಹೆಣ್ಣು (girl) ಮಕ್ಕಳಿಗೆ (child) ಯಾರೂ ಕಲಿಸಬೇಕಾಗಿಲ್ಲ. ಅದು ಅವರಿಗೆ ಹುಟ್ಟಿನಿಂದಲೇ ಬಂದಿರುತ್ತದೆ. ಎಂತಹ ಕಠಿಣ ಪರಿಸ್ಥಿತಿಯಾಗಿರಲಿ ತಾಯಿ (Mother’s Day) ಅದನ್ನು ಎದುರಿಸಲು ಕ್ಷಣ ಮಾತ್ರದಲ್ಲಿ ಸಜ್ಜಾಗುತ್ತಾಳೆ. ತಮ್ಮ ಮಕ್ಕಳ ವಿಚಾರಕ್ಕೆ ಬಂದರೆ ಆಕೆ ಯಾವುದೇ ತ್ಯಾಗಕ್ಕೂ ಸಜ್ಜಾಗುತ್ತಾಳೆ, ತನ್ನ ಪ್ರಾಣವನ್ನು ಒತ್ತೆ ಇಟ್ಟಾದರೂ ಸರಿ ಮಕ್ಕಳನ್ನು ಎಲ್ಲ ರೀತಿಯ ಸಂಕಷ್ಟದಿಂದ ಪಾರು ಮಾಡುತ್ತಾಳೆ.

ಎಲ್ಲರಿಗೂ ತಮ್ಮ ತಾಯಿಯ ಬಗ್ಗೆ ಹೇಳಬೇಕಾದ ಸಾವಿರಾರು ವಿಷಯಗಳಿರುತ್ತವೆ. ಇದಕ್ಕೆ ತಾಯಂದಿರ ದಿನಕ್ಕಿಂತ ಉತ್ತಮ ದಿನ ಬೇರೆ ಯಾವುದಿದೆ. ಹೆಣ್ಣು ತಾಯಿಯಾಗಿ, ಅಕ್ಕನಾಗಿ, ಅಜ್ಜಿಯಾಗಿ, ಮಗಳಾಗಿ, ಸ್ನೇಹಿತೆಯಾಗಿ ತನ್ನ ಕರ್ತವ್ಯವನ್ನು ಚೆನ್ನಾಗಿ ನಿಭಾಯಿಸುತ್ತಾಳೆ. ಹೀಗಾಗಿಯೇ ತಾಯಂದಿರ ದಿನದ ಈ ಶುಭ ಸಂದರ್ಭದಲ್ಲಿ ಆಕೆಗೊಂದು ಶುಭ ಸಂದೇಶ ಕಳುಹಿಸಲು ಮರೆಯದಿರಿ.

ಸಿಹಿ ಶುಭಾಶಯಗಳೊಂದಿಗೆ ಆಕೆಯನ್ನು ಗೌರವಿಸುವ ಜೊತೆಗೆ ಸುಂದರವಾದ ಹೂಗೊಂಚಲು, ಅರ್ಥಪೂರ್ಣವಾದ ಉಡುಗೊರೆ ಅಥವಾ ಅವಳೊಂದಿಗೆ ಸಮಯ ಕಳೆಯುವ ಮೂಲಕ ಮೆಚ್ಚುಗೆಯನ್ನು ತೋರಿಸಿ. ಇದು ಯಾವಾಗಲೂ ಆಕೆಯನ್ನು ಸಂತೋಷದಲ್ಲಿ ಇರುವಂತೆ ಮಾಡುತ್ತದೆ ಮತ್ತು ಸದಾ ಆಕೆಯ ನೆನಪಿನಲ್ಲಿ ಇರುವಂತೆ ಮಾಡುತ್ತದೆ.

ತಾಯಂದಿರ ದಿನದ ವಿಶೇಷವಾಗಿ ತಾಯಿಗೆ ವಿಶೇಷ ಅಡುಗೆ ಮಾಡಿ ಬಡಿಸಿ, ಇಲ್ಲವಾದರೆ ಅವರ ನೆಚ್ಚಿನ ರೆಸ್ಟೋರೆಂಟ್ ಗೆ ಹೋಗಿ ಊಟ ಮಾಡಿಸಿ. ಇದರಿಂದ ಸಾಕಷ್ಟು ಸಮಯವನ್ನು ಆಕೆಗೆ ನೀವು ಕೊಟ್ಟಂತಾಗುತ್ತದೆ.


ತಾಯಂದಿರ ದಿನ ಯಾವಾಗ?

ತಾಯಂದಿರ ದಿನವನ್ನು ಪ್ರತಿ ವರ್ಷ ಮೇ ತಿಂಗಳ ಎರಡನೇ ಭಾನುವಾರ ಆಚರಿಸಲಾಗುತ್ತದೆ. ರಜಾ ದಿನದಲ್ಲಿ ಇದು ಬರುವುದರಿಂದ ಈ ದಿನವನ್ನು ಹೆಚ್ಚು ವಿಶೇಷವಾಗಿ ಆಚರಿಸಬಹುದಾಗಿದೆ.

ತಾಯಿಯಂದಿರ ದಿನವು ಈ ಬಾರಿ ಮೇ 12ರಂದು ಭಾನುವಾರ ಆಚರಿಸಲಾಗುತ್ತಿದೆ. ಪ್ರಪಂಚದಾದ್ಯಂತ ಈ ದಿನವನ್ನು ಬೇರೆಬೇರೆ ದಿನಗಳಂದು ಆಚರಿಸಲಾಗುತ್ತಿದೆ.

ಆಸ್ಟ್ರೇಲಿಯಾ, ಕೆನಡಾ, ಡೆನ್ಮಾರ್ಕ್, ಇಟಲಿ, ಫಿನ್‌ಲ್ಯಾಂಡ್, ಸ್ವಿಟ್ಜರ್ಲೆಂಡ್ ಮತ್ತು ಟರ್ಕಿ ಯಲ್ಲಿ ಈ ಬಾರಿ ಮೇ 12ರಂದು ಅಮ್ಮಂದಿರನ್ನು ಗೌರವಿಸಲಾಗುತ್ತಿದೆ. ಯುಕೆಯಲ್ಲಿ ಮಾರ್ಚ್‌ನಲ್ಲಿ ತಾಯಂದಿರ ದಿನವನ್ನು ಆಚರಿಸಲಾಗುತ್ತದೆ. ಮೆಕ್ಸಿಕೋ ಈ ವರ್ಷ ಮೇ 10 ರಂದು ತಾಯಂದಿರ ದಿನವನ್ನು ಆಚರಿಸಲಾಗಿದೆ. ಥೈಲ್ಯಾಂಡ್ ಆಗಸ್ಟ್ 12 ರಂದು ಈ ದಿನವನ್ನು ಆಚರಿಸಲಾಗುತ್ತದೆ. ಯಾಕೆಂದರೆ ಈ ದಿನ ಇಲ್ಲಿ ರಾಣಿ ಸಿರಿಕಿಟ್ ಅವರ ಜನ್ಮದಿನವಾಗಿದೆ.

ಯಾಕೆ ಆಚರಣೆ ?

ತಾಯಂದಿರ ದಿನದ ಆಚರಣೆಯು 1800 ರ ದಶಕದ ಅಂತ್ಯದಲ್ಲಿ ಪ್ರಾರಂಭಿಸಲಾಯಿತು. ಹಲವಾರು ವಿಭಿನ್ನ ಘಟನೆಗಳ ಸಂಯೋಜನೆಯಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಸಾಮಾಜಿಕ ಕಾರ್ಯಕರ್ತೆ ಮತ್ತು ಸಮುದಾಯ ಸಂಘಟಕಿ ಅನ್ನಾ ಮಾರಿಯಾ ರೀವ್ಸ್ ಜಾರ್ವಿಸ್ ಅವರು ಮೊದಲ ಬಾರಿಗೆ ತಾಯಂದಿರ ದಿನದ ಪ್ರಸ್ತಾಪವನ್ನು ಮುಂದಿಟ್ಟರು.

ತಾಯಂದಿರು ತಮ್ಮ ಮಕ್ಕಳನ್ನು ನೋಡಿಕೊಳ್ಳಲು ಸಹಾಯ ಮಾಡುವ ಮಹಿಳಾ ಕ್ಲಬ್‌ಗಳ ಸ್ಥಾಪಕರಾದ ಜಾರ್ವಿಸ್ ಅವರು 1868 ರಲ್ಲಿ ತಾಯಂದಿರ ಸ್ನೇಹ ದಿನವನ್ನು ಆಯೋಜಿಸಿದರು, ಇದು ಅಂತರ್ಯುದ್ಧದ ಅನಂತರ ಒಕ್ಕೂಟ ಮತ್ತು ಒಕ್ಕೂಟದ ಸೈನಿಕರ ತಾಯಂದಿರನ್ನು ಸಾಮರಸ್ಯದಿಂದ ಒಟ್ಟುಗೂಡಿಸುವ ಉದ್ದೇಶವನ್ನು ಹೊಂದಿತ್ತು.

ಬಳಿಕ ಎರಡು ವರ್ಷಗಳ ಅನಂತರ 1870 ರಲ್ಲಿ ಜೂಲಿಯಾ ವಾರ್ಡ್ ಹೋವ್ ಅವರು ವಿಶ್ವ ಶಾಂತಿಯನ್ನು ಉತ್ತೇಜಿಸುವ ಪ್ರಯತ್ನದಲ್ಲಿ ತಾಯಿಯ ದಿನದ ಘೋಷಣೆಯನ್ನು ಮಾಡಿ ಜೂನ್‌ನಲ್ಲಿ ತಾಯಿಯ ದಿನವನ್ನು ಆಚರಿಸಲು ಒತ್ತಾಯಿಸಿದರು. ಆ ಸಮಯದಲ್ಲಿಯೇ ತಾಯಂದಿರನ್ನು ಗೌರವಿಸಲು ಕೆಲವು ರೀತಿಯ ಕಲ್ಪನೆಯನ್ನು ಅವರು ಮಂಡಿಸಿದ್ದರು. ಆದರೆ ಅದು ಸುಮಾರು 35 ವರ್ಷಗಳವರೆಗೆ ಸಾಧ್ಯವಾಗಲಿಲ್ಲ.

1905 ರಲ್ಲಿ ಜಾರ್ವಿಸ್ ಅವರ ಮರಣದ ಅನಂತರ ಅವರ ಮಗಳು ಅನ್ನಾ ಪತ್ರ ಬರೆಯುವ ಅಭಿಯಾನವನ್ನು ಪ್ರಾರಂಭಿಸಿದರು. ತನ್ನ ತಾಯಿಯ ಕೆಲಸವನ್ನು ಮಾತ್ರವಲ್ಲದೆ ಎಲ್ಲಾ ತಾಯಂದಿರಿಗೆ ಮತ್ತು ಅವರ ಮಕ್ಕಳ ಪರವಾಗಿ ಅವರು ಮಾಡುವ ತ್ಯಾಗವನ್ನು ಗೌರವಿಸಲು ತಾಯಂದಿರ ದಿನಾಚರಣೆಗೆ ಕರೆ ನೀಡಿದರು.

ತಾಯಂದಿರ ದಣಿವರಿಯದ ಕೆಲಸವನ್ನು ಗೌರವಿಸುವ ಸಲುವಾಗಿ ಅಧ್ಯಕ್ಷ ವುಡ್ರೊ ವಿಲ್ಸನ್ ಅವರು 1914 ರಲ್ಲಿ ಘೋಷಣೆಗೆ ಸಹಿ ಹಾಕಿ ಅಧಿಕೃತವಾಗಿ ಮೇ ತಿಂಗಳ ಎರಡನೇ ಭಾನುವಾರವನ್ನು ತಾಯಂದಿರ ದಿನವೆಂದು ಘೋಷಿಸಿದರು.

ಇದನ್ನೂ ಓದಿ: Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

ಪ್ರಾರಂಭದಲ್ಲಿ ತಾಯಂದಿರ ದಿನಚರಣೆಯ ಉದ್ದೇಶವೇ ಬೇರೆಯಾಗಿತ್ತು. ಆದರೆ ಇವತ್ತು ವ್ಯಾಪಾರೀಕರಣವಾಗಿದೆ. ಹೀಗಾಗಿ ರಜಾ ದಿನದಂದೇ ಎಲ್ಲರೂ ತಮ್ಮ ತಾಯೊಂದಿಗೆ ಸ್ವಲ್ಪ ಸಮಯ ಕಳೆಯಲಿ ಎನ್ನುವ ಉದ್ದೇಶದಿಂದ ಎಲ್ಲರೂ ಮೇ ತಿಂಗಳ ಎರಡನೇ ಭಾನುವಾರ ಈ ದಿನಾಚರಣೆಗೆ ಇಷ್ಟಪಡುತ್ತಾರೆ. ಹೀಗಾಗಿ ಇಂದು ವಿಶ್ವದಾದ್ಯಂತ ತಾಯಂದಿರ ದಿನ ಆಚರಿಸಲಾಗುತ್ತಿದೆ.

ನಿತ್ಯದ ಕೆಲಸದ ಜಂಜಾಟದಲ್ಲಿರುವ ಎಲ್ಲರಿಗೂ ಇವತ್ತು ತಾಯಂದಿರ ದಿನ ಆಚರಿಸುವುದು ಅನಿವಾರ್ಯವಾಗಿರುವುದರಿಂದ ಈ ದಿನ ಅಮೂಲ್ಯವಾದ ದಿನವಾಗಿ ಉಳಿದಿದೆ. ಹೀಗಾಗಿ ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸೋಣ. ಎಲ್ಲ ತಾಯಂದಿರಿಗೂ ಶುಭ ಹಾರೈಸೋಣ.

Continue Reading

ಆರೋಗ್ಯ

National Safe Motherhood Day: 35 ವರ್ಷ ನಂತರದ ತಾಯ್ತನದಲ್ಲಿ ಯಾವೆಲ್ಲ ಎಚ್ಚರಿಕೆ ಅಗತ್ಯ?

ಗರ್ಭಾವಸ್ಥೆಯಲ್ಲಿ ಮತ್ತು ಹೆರಿಗೆಯ ನಂತರ ಅಗತ್ಯವಾಗಿ ಬೇಕಾದ ಆರೈಕೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ರಾಷ್ಟ್ರೀಯ ಸುರಕ್ಷಿತ ತಾಯ್ತನದ ದಿನವನ್ನು ಏಪ್ರಿಲ್‌ ತಿಂಗಳ 11ನೇ ತಾರೀಕು (National Safe Motherhood Day) ಆಚರಿಸಲಾಗುತ್ತದೆ. ಈ‌ ಹಿನ್ನೆಲೆಯಲ್ಲಿ ಸುರಕ್ಷಿತ ತಾಯ್ತನ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

National Safe Motherhood Day
Koo

ತಾಯ್ತನವೆಂಬುದು ಬದುಕಿನ ಆಹ್ಲಾದಕರ ಅನುಭವಗಳಲ್ಲಿ ಒಂದು. ಬರಲಿರುವ ಪುಟ್ಟ ಜೀವವನ್ನೇ ನೆನಸುತ್ತಾ ನವಮಾಸಗಳನ್ನು ಕಳೆಯುವುದು ಎಷ್ಟು ಆನಂದದಾಯಕವೋ ಕೆಲವೊಮ್ಮೆ ಅಷ್ಟೇ ತ್ರಾಸದಾಯಕವೂ ಆಗಬಹುದು. ಈ ದಿನಗಳಲ್ಲಿ ಮತ್ತು ಹೆರಿಗೆಯ ನಂತರ ಅಗತ್ಯವಾದ ಆರೈಕೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ರಾಷ್ಟ್ರೀಯ ಸುರಕ್ಷಿತ ತಾಯ್ತನದ ದಿನವನ್ನು ಏಪ್ರಿಲ್‌ ತಿಂಗಳ 11ನೇ ತಾರೀಕು (National Safe Motherhood Day)ಆಚರಿಸಲಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ 30 ಅಥವಾ 35 ವರ್ಷಗಳ ನಂತರ ತಾಯ್ತನಕ್ಕೆ ಸಿದ್ಧವಾಗುವ ಮಹಿಳೆಯರ ಸಂಖ್ಯೆ ತೀವ್ರವಾಗಿ ಹೆಚ್ಚಿದೆ. ಕುಟುಂಬವನ್ನು ಬೆಳೆಸುವ ಯೋಜನೆಗಳು ಆಯಾ ದಂಪತಿಗಳ ವೈಯಕ್ತಿಕ ವಿಚಾರ ಹೌದಾದರೂ, ವಯಸ್ಸು ಹೆಚ್ಚಿದಂತೆ ಭಾವೀ ತಾಯಿಯ ಆರೋಗ್ಯದಲ್ಲಿ ಸಮಸ್ಯೆಗಳು ಹೆಚ್ಚುವುದನ್ನು ವೈದ್ಯರೂ ಒಪ್ಪುತ್ತಾರೆ. ಕೆಲವೊಮ್ಮೆ ಫಲವಂತಿಕೆಯೂ ಕುಸಿದಿರುತ್ತದೆ. ಹಾಗಾಗಿ ಇಪ್ಪತ್ತರ ಹರೆಯದಲ್ಲೇ ʻಎಗ್‌ ಫ್ರೀಜಿಂಗ್ʼ ತಂತ್ರಜ್ಞಾನದ ಮೊರೆ ಹೋಗುವವರೂ ಇದ್ದಾರೆ. ಈ ಎಲ್ಲವುಗಳ ಹಿನ್ನೆಲೆಯಲ್ಲಿ, 35ರ ನಂತರ ಮಾತೃತ್ವಕ್ಕೆ ಅಣಿಯಾಗುವ ತಾಯಂದಿರು ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳೇನು?

Indication of pregnancy

ಮೊದಲೇ ಮಾತಾಡಿ

ತಾಯ್ತನವನ್ನು ತಡವಾಗಿ ಒಪ್ಪಿಕೊಳ್ಳುವ ಬಗ್ಗೆ ಗರ್ಭ ಧರಿಸುವ ಮೊದಲೇ ವೈದ್ಯರಲ್ಲಿ ಮಾತಾಡಿ. ಇದಕ್ಕೆ ಬೇಕಾದ ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳಿ. ಮಾತ್ರವಲ್ಲ, ನಿಮಗಿರುವ ಆರೋಗ್ಯ ಸಮಸ್ಯೆಗಳು, ಅದಕ್ಕಾಗಿ ಯಾವುದಾದರೂ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದರೆ, ಇಂಥ ಎಲ್ಲವನ್ನೂ ವೈದ್ಯರಲ್ಲಿ ತಿಳಿಸಿ. ಸಣ್ಣ ಪ್ರಾಯದವರಿಗೂ ಮಧುಮೇಹ, ಥೈರಾಯ್ಡ್‌ ಸಮಸ್ಯೆಗಳು ವಕ್ಕರಿಸುತ್ತಿರುವುದರಿಂದ ಇದನ್ನೆಲ್ಲ ಮೊದಲೇ ವೈದ್ಯರಲ್ಲಿ ಮಾತಾಡಿಕೊಳ್ಳಿ.
ಒತ್ತಡ ನಿರ್ವಹಣೆ: ೩೫ರ ನಂತರ ವೃತ್ತಿಯಲ್ಲಿ ಮತ್ತು ಬಾಂಧವ್ಯಗಳಲ್ಲಿ ಹೆಚ್ಚಿನ ಸ್ಥಿರತೆ ಇರುತ್ತದೆ. ಆಗಲೇ ತಾಯ್ತನ ಒಪ್ಪಿಕೊಳ್ಳುವುದು ಸೂಕ್ತ ಎಂಬುದು ಒಂದು ವಾದ. ಆದರೆ ವಯಸ್ಸು ಏರುತ್ತಿದ್ದಂತೆ ಒತ್ತಡ ಧಾರಣಾ ಸಾಮರ್ಥ್ಯವೂ ತೀಕ್ಷ್ಣವಾಗಿ ಕುಸಿಯುತ್ತದೆ. ಜೊತೆಗೆ ವೃತ್ತಿಯಲ್ಲಿ ಮೇಲೇರುತ್ತಿದ್ದಂತೆ ಹೊಣೆಗಾರಿಕೆಯೂ ಹೆಚ್ಚಿರುತ್ತದೆ. ಹಾಗಾಗಿ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವ ಬಗ್ಗೆ ಪರಿಣತರಲ್ಲಿ ಮಾತಾಡಿ, ಅವರ ಸಲಹೆಗಳನ್ನು ಅಳವಡಿಸಿಕೊಳ್ಳಿ. ಪ್ರಿನೇಟಲ್‌ ಯೋಗ, ಧ್ಯಾನ ಮುಂತಾದವು ಖಂಡಿತವಾಗಿ ಸಹಾಯ ಮಾಡುತ್ತವೆ. ಈ ಬಗ್ಗೆ ಗಮನ ಕೊಡದಿದ್ದರೆ ಗರ್ಭಾವಸ್ಥೆಯಲ್ಲಿ ರಕ್ತದೊತ್ತಡ, ಮಧುಮೇಹಗಳು ಕಾಡುವ ಸಾಧ್ಯತೆ ಹೆಚ್ಚುತ್ತದೆ.

pregnancy exercise

ವ್ಯಾಯಾಮ

ನಿಯಮಿತವಾದ ವ್ಯಾಯಾಮಗಳು ಗರ್ಭಿಣಿಯರಿಗೆ ಅಗತ್ಯವಾಗಿ ಬೇಕಾದವು. ಯಾವುದನ್ನೆಲ್ಲ ಮಾಡಬಹುದು ಎಂಬ ಬಗ್ಗೆ ವೈದ್ಯರಲ್ಲೆ ಚರ್ಚಿಸುವುದು ಒಳಿತು. ಆದರೆ ನಡಿಗೆ, ಈಜು, ಪ್ರಿನೇಟಲ್‌ ಯೋಗ, ಕಡಿಮೆ ತೀವ್ರತೆಯ ಏರೋಬಿಕ್‌ ವ್ಯಾಯಾಮಗಳು ಗರ್ಭಿಣಿಯರಿಗೆ ಹಿತವಾಗುವಂಥವು. ಇದರಿಂದ ಶರೀರ ಹಗುರವಾಗಿದ್ದು, ಹೆರಿಗೆಗೆ ಬೇಕಾದ ಸಿದ್ಧತೆಗಳನ್ನು ದೇಹ ತಂತಾನೇ ಮಾಡಿಕೊಳ್ಳಲು ಅನುಕೂಲವಾಗುತ್ತದೆ.

pregnancy sleep

ನಿದ್ದೆ, ವಿಶ್ರಾಂತಿ

ಎಷ್ಟೋ ಗರ್ಭಿಣಿಯರಿಗೆ ರಾತ್ರಿಯ ನಿದ್ದೆ ಕಷ್ಟವಾಗುತ್ತದೆ. ಕಡೆಯ ಮೂರು ತಿಂಗಳಲ್ಲಂತೂ ಹೇಗೆ ಮಲಗಿದರೂ ಸರಿಯಾಗುವುದಿಲ್ಲ ಎನ್ನುವಂಥ ಸಮಸ್ಯೆ ಅವರದ್ದು. ಅಂಥ ದಿನಗಳಲ್ಲಿ ರೆಕ್ಲೈನರ್‌ ಮಾದರಿಯ ಹಾಸಿಗೆಗಳು ವಿಶ್ರಾಂತಿಗೆ ನೆರವಾಗುತ್ತವೆ. ದಿನದಲ್ಲೂ ಕೆಲಕಾಲ ನಿದ್ದೆಯಲ್ಲದಿದ್ದರೆ, ವಿಶ್ರಾಂತಿಯನ್ನಂತೂ ತೆಗೆದುಕೊಳ್ಳಬೇಕು. ದಿನಕ್ಕೆ ಹತ್ತು ತಾಸುಗಳ ನಿದ್ದೆಯಿಂದ ಮಗುವಿನ ಬೆಳವಣಿಗೆಗೂ ಸಹಾಯ ದೊರೆಯುತ್ತದೆ. ಈ ಬಗ್ಗೆ ಪ್ರತಿಯೊಬ್ಬರ ದೇಹವೂ ತನ್ನ ಅಗತ್ಯಗಳನ್ನು ತಾನೇ ಸೂಚಿಸುತ್ತದೆ, ಅದನ್ನು ಕೇಳಿ.

pregnancy food

ಆಹಾರ

ಮೊದಲನೆಯದಾಗಿ, ಗರ್ಭಾವಸ್ಥೆಯಲ್ಲಿ ಇಬ್ಬರಿಗಾಗಿ ತಿನ್ನುವ ಅಗತ್ಯವಿಲ್ಲ. ನಿತ್ಯದ ಆಹಾರಕ್ಕಿಂತ ೩೦೦ ಕ್ಯಾಲರಿಯಷ್ಟು ಮಾತ್ರವೇ ಹೆಚ್ಚಿಗೆ ಆಹಾರ ತೆಗೆದುಕೊಂಡರೆ ಸಾಕಾಗುತ್ತದೆ. ಅತಿಯಾಗಿ ತಿನ್ನುವುದು, ಸಿಹಿ, ಖಾರ, ಕರಿದಿದ್ದು, ಐಸ್‌ಕ್ರೀಂನಂಥವು, ಚಿಪ್ಸ್‌, ಸೋಡಾ ಮುಂತಾದ ಯಾವುದೇ ಗುಜರಿ ಆಹಾರಗಳು ಭ್ರೂಣದ ಬೆಳವಣಿಗೆಗೆ ಪೂರಕವಲ್ಲ. ಆಹಾರದಲ್ಲಿ ಋತುಮಾನದ ಹಣ್ಣು-ತರಕಾರಿಗಳು, ಧಾರಾಳವಾಗಿ ನೀರು, ಡೇರಿ ಉತ್ಪನ್ನಗಳು, ಹಸಿರು ಸೊಪ್ಪುಗಳು, ಇಡೀ ಧಾನ್ಯಗಳು, ಕಾಯಿ-ಬೀಜಗಳು, ಮೊಟ್ಟೆ-ಮೀನಿನಂಥವು ಇರಬೇಕು. ಕೆಫೇನ್‌ ಸೇವನೆಯನ್ನು ಕಡಿಮೆ ಮಾಡಿ. ಇದರಿಂದ ಇಬ್ಬರ ಸ್ವಾಸ್ಥ್ಯಕ್ಕೂ ಹಿತ.

pregnancy doctor test

ತಪಾಸಣೆ

35ರ ನಂತರದ ಗರ್ಭಧಾರಣೆಯಲ್ಲಿ ಮಧುಮೇಹ, ಬಿಪಿ, ಅವಧಿಪೂರ್ವ ಪ್ರಸವ, ಕಡಿಮೆ ತೂಕ ಶಿಶು ಜನಿಸುವುದು, ಶಿಶುವಿಗೆ ಡೌನ್ಸ್‌ ಸಿಂಡ್ರೋಮ್‌ನಂಥ ಆನುವಂಶಿನ ಕಾಯಿಲೆಗಳು ಬರುವಂಥ ಎಷ್ಟೋ ಸಮಸ್ಯೆಗಳು ಎದುರಾಗುತ್ತವೆ. ಹಾಗಾಗಿ ತಜ್ಞ ವೈದ್ಯರಿಂದ ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯ. ಅವಶ್ಯವಾದಂಥ ರಕ್ತಪರೀಕ್ಷೆಗಳು ಸಹ ಈ ತಪಾಸಣೆಯ ಭಾಗವೇ ಆಗಿದೆ. ಭ್ರೂಣದ ಬೆಳವಣಿಗೆ ಮತ್ತು ಗರ್ಭಿಣಿಯ ಆರೋಗ್ಯ ಒಂದಕ್ಕೊಂದು ತೀರಾ ಭಿನ್ನವಲ್ಲ; ಯಾವುದು ಸರಿಯಿಲ್ಲದಿದ್ದರೂ ಇಬ್ಬರಿಗೂ ಅಪಾಯ.

ಇದನ್ನೂ ಓದಿ: Balancing Hormones Naturally: ಹಾರ್ಮೋನು ಸಮತೋಲನಕ್ಕೆ ಬೇಕು ಇಂಥ ಆಹಾರಗಳು

Continue Reading
Advertisement
Job News
ಉದ್ಯೋಗ14 mins ago

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

kurkure divorce viral news
ವೈರಲ್ ನ್ಯೂಸ್15 mins ago

Viral News: ಕುರ್ಕುರೆ ಪ್ಯಾಕ್‌ ತರದೇ ಹೋದ ಗಂಡನಿಗೆ ಡೈವೋರ್ಸ್!‌

Supriya Sule
ದೇಶ24 mins ago

Supriya Sule: ಇವಿಎಂ ಇದ್ದ ಸ್ಟ್ರಾಂಗ್‌ ರೂಂ ಸಿಸಿಟಿವಿ ಕ್ಯಾಮೆರಾ ಸ್ವಿಚ್‌ ಆಫ್‌; ಸುಪ್ರಿಯಾ ಸುಳೆ ಗಂಭೀರ ಆರೋಪ, EC ರಿಯಾಕ್ಟ್‌

Road Accident
ಕ್ರೈಂ36 mins ago

Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

HD Revanna released from jail Revanna Go straight to HD Deve Gowda house
ಕ್ರೈಂ50 mins ago

HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

Viral video
ವೈರಲ್ ನ್ಯೂಸ್58 mins ago

Viral video: ರಿಂಕು ಸಿಂಗ್​ ಜೆರ್ಸಿ ತೊಟ್ಟು ಚೆಂಡು ಕದಿಯಲು ಯತ್ನಿಸಿ ಸಿಕ್ಕಿ ಬಿದ್ದ ಭೂಪ!; ಪೊಲೀಸರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ

Vaishnavi Gowda
ಕಿರುತೆರೆ1 hour ago

Vaishnavi Gowda: ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 hour ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

pm narendra modi nomination
ಪ್ರಮುಖ ಸುದ್ದಿ1 hour ago

PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Viral Video
Latest1 hour ago

Viral Video: ಇಲ್ಲಿ ಸಿಗೋದು ಡಿಸೇಲ್ ಪರಾಠಾ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 hour ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು3 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ10 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ20 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ20 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ20 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ21 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ21 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌