Pre Menstrual Syndrome: ಮುಟ್ಟಿನ ಸಂದರ್ಭದ ಮಾನಸಿಕ ತುಮುಲಗಳಿಗೆ ಸರಳ ಪರಿಹಾರಗಳು! - Vistara News

ಆರೋಗ್ಯ

Pre Menstrual Syndrome: ಮುಟ್ಟಿನ ಸಂದರ್ಭದ ಮಾನಸಿಕ ತುಮುಲಗಳಿಗೆ ಸರಳ ಪರಿಹಾರಗಳು!

VISTARANEWS.COM


on

periods
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರಿ-ಮೆನ್‌ಸ್ಟ್ರುವಲ್‌ ಸಿಂಡ್ರೋಮ್‌ ಬಹಳಷ್ಟು ಮಹಿಳೆಯರನ್ನು ಕಾಡುವ ಸಮಸ್ಯೆ. ಮುಟ್ಟಿನ ಅಥವಾ ಋತುಚಕ್ರದ ಮೊದಲು ಭಾವನೆಗಳ ಏರಿಳಿತ ಇದು. ಬಹಳಷ್ಟು ಮಹಿಳೆಯರಲ್ಲಿ ಮುಟ್ಟಿನ ದಿನಗಳಲ್ಲಿ ಮಾನಸಿಕ ತುಮುಲಗಳು, ಕೋಪ, ಅಸಹನೆ ಜಾಸ್ತಿಯಾದರೆ, ಇನ್ನೂ ಕೆಲವರಲ್ಲಿ ಮುಟ್ಟಿಗೂ ಸುಮಾರು 10-12 ದಿನಗಳ ಮೊದಲೇ ಈ ಭಾವನೆಗಳ ವೈಪರೀತ್ಯ (Pre Menstrual Syndrome) ಆರಂಭವಾಗುತ್ತದೆ. ಸಣ್ಣ ಸಣ್ಣ ವಿಷಯಗಳಿಗೂ ಒತ್ತಡ ಹೆಚ್ಚಾಗುವುದು, ರೇಗುವುದು, ಕಿರಿಕಿರಿ ಎನಿಸಿವುದು, ಕೆಲಸದಲ್ಲಿ ಆಲಸ್ಯ ಇತ್ಯಾದಿ ತೊಂದರೆಗಳನ್ನು ಬಿಟ್ಟೂ ಬಿಡದಂತೆ ಕಾಡುತ್ತವೆ. ಇದು ಸಾಮಾನ್ಯ ಸಮಸ್ಯೆಯೇ ಆದರೂ, ಮಹಿಳೆಯರ ನಿತ್ಯ ಆಗುಹೋಗುಗಳ ಮೇಲೆ ಬಹಳಷ್ಟು ಪರಿಣಾಮ ಬೀರುವ ಅಂಶವಾಗಿದೆ. ಸ್ತನದಲ್ಲಿ ನೋವು, ಕೆಳಹೊಟ್ಟೆ ಹಾಗೂ ಸೊಂಟದ ಸುತ್ತ ಸೆಳೆತ, ನೋವು, ಹೊಟ್ಟೆ ಉಬ್ಬರಿಸಿದಂತಾಗುವುದು, ತಲೆಸುತ್ತು, ವಿಪರೀತ ಸುಸ್ತು ಇತ್ಯಾದಿಗಳೆಲ್ಲ ಮುಟ್ಟಿನ ಸಂದರ್ಭ ಸಾಮಾನ್ಯ ಕೂಡಾ.

ಆದರೆ, ಈ ಸಮಸ್ಯೆಗೆ ಪರಿಹಾರ ಕಂಡು ಹುಡುಕಿಕೊಳ್ಳದಿದ್ದರೆ, ಪ್ರತೀ ತಿಂಗಳ ಆಸುಪಾಸಿನಲ್ಲೂ ಕಷ್ಟಪಡುವುದನ್ನೇ ಕಣ್ಣಿಗೊತ್ತಿಕೊಂಡು ಬದುಕುವುದು ಕಷ್ಟ. ಅದರ ಪರಿಹಾರಕ್ಕೆ ಪ್ರಯತ್ನ ಬಹಳ ಮುಖ್ಯ. ನಾವು ನಿತ್ಯ ಉಣ್ಣುವ ಆಹಾರದಲ್ಲೇ ಹಲವು ತಪ್ಪುಗಳನ್ನು, ನಮ್ಮ ದೇಹಕ್ಕೆ ಹೊಂದಿಕೊಳ್ಳದ ವಿಚಾರಗಳೂ ಘಟಿಸುತ್ತಿರುತ್ತದೆ. ಅವುಗಳನ್ನು ಸೂಕ್ಷ್ಮವಾಗಿ ಗಮನಿಸಿ ಕಂಡು ಹುಡುಕಿಕೊಂಡು ಆಹಾರದಲ್ ಕೊಂಚ ಬದಲಾವಣೆ ಮಾಡಿಕೊಂಡರೂ ಕೂಡಾ ಗಮನಾರ್ಹ ಸುಧಾರಣೆ ಕಂಡುಬರುವುದುಂಟು. ಹಾಗಾಗಿ ಸೂಕ್ಷ್ಮವಾಗಿ ನಮ್ಮ ದೇಹವನ್ನು ನಾವು ಗಮನಿಸುವುದೂ ಮುಖ್ಯವೇ ಆಗಿದೆ.

menstrual leave for students

ಮುಟ್ಟಿನ ದಿನಗಳು ಹತ್ತಿರ ಬಂದಂತೆ ಅತಿಯಾಗಿ ಕುರುಕಲು, ಚಿಪ್ಸ್‌ ತಿನ್ನಬೇಕೆಂಬ ಬಯಕೆ ಕೆಲವರಿಗೆ ಆಗುವುದುಂಟು. ಚಿಪ್ಸ್‌ನಲ್ಲಿರುವ ಅತಿಯಾದ ಉಪ್ಪು, ದೇಹದಲ್ಲಿ ನೀರು ಸಂಗ್ರಹವಾಗುವಂತೆ ಮಾಡುತ್ತದೆ. ಹಾಗಾಗಿ, ಮುಟ್ಟು ಹತ್ತಿರ ಬರುತ್ತಿದ್ದಂತೆ ಉಪ್ಪಿನಂಶವನ್ನು ಕಡಿಮೆ ಮಾಡಿಕೊಳ್ಳುವುದರಿಂದ ಇಂತಹ ತೊಂದರೆಗಳಲ್ಲಿ ಕೊಂಚ ಬದಲಾವಣೆ ಕಾಣಬಹುದು.

ಕೇವಲ ಇಷ್ಟೇ ಅಲ್ಲ. ಇನ್ನೂ ಕೆಲವು ವಿಚಾರಗಳನ್ನು ನಾವು ನಮ್ಮ ದೇಹಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಪರಿಗಣಿಸಿದರೆ, ಈ ತೊಂದರೆಯಿಂದ ಕೊಂಚ ನೆಮ್ಮದಿ ಕಾಣಬಹುದು. ಹಾಗಾಗಿ ಮಹಿಳೆಯರು, ತಮ್ಮ ಭಾವನೆಗಳಲ್ಲಿ ಹತೋಟಿ ಹೊಂದಲು, ನೋವುಗಳಿಂದ ಮುಕ್ತರಾಗಲು, ಕೆಲವು ಸರಳ ಸೂತ್ರಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ಒಳ್ಳೆಯದು. ಮಹಿಳೆಯರ ಆರೋಗ್ಯಕ್ಕೆ ಇವು ಅಗತ್ಯ ಕೂಡಾ. ಅವುಗಳ ವಿವರ ಇಲ್ಲಿದೆ.

1 ಮಹಿಳೆಯರು ಕ್ಯಾಲ್ಶಿಯಂನಿಂದ ಶ್ರೀಮಂತವಾಗಿರುವ ಆಹಾರವನ್ನು ಹಾಗೂ ವಿಟಮಿನ್‌ ಡಿಯನ್ನು ತೆಗೆದುಕೊಳ್ಳುವುದರಿಂದ ಮುಟ್ಟಿನ ಸಮಯದ ಭಾವನಾತ್ಮಕ ಏರುಪೇರುಗಳು ಸಮತೋಲನಕ್ಕೆ ಬರುತ್ತವೆ ಎನ್ನುತ್ತದೆ ಬಹಳಷ್ಟು ಅಧ್ಯಯನಗಳು. ಪ್ರತಿದಿನವೂ ಮಹಿಳೆಯರು, ಕೊಬ್ಬು ಕಡಿಮೆಯಿರುವ ಹಾಲು, ಮೊಸರು, ಪನೀರ್‌ ಸೋಯಾ ಹಾಲನ್ನು ಮಹಿಳೆಯರು ಸೇವಿಸಬೇಕು.

Menstrual Hygiene Day

ಇದನ್ನೂ ಓದಿ: ಮೊದಲ ಬಾರಿಗೆ ಮುಟ್ಟಿನ ಬಗ್ಗೆ ತಿಳಿದುಕೊಂಡ ಕ್ಷಣ ವಿವರಿಸಿದ ದೀಪಿಕಾ ಪಡುಕೋಣೆ

2. ಸಮತೋಲನವಾದ ಆಹಾರ ಬಹಳ ಮುಖ್ಯ. ಎಲ್ಲ ಬಣ್ಣದ ತರಕಾರಿಗಳು, ನಾರಿನಂಶ ಹೆಚ್ಚಿರುವ ಆಹಾರ, ಹಣ್ಣುಗಳು, ಧಾನ್ಯಗಳು, ಮೊಳಕೆ ಕಾಳುಗಳು ಸೇರಿದಂಥ ಪೋಷಕಾಂಶಯುಕ್ತ ಆಹಾರವನ್ನು ಈ ಸಮಸ್ಯೆ ಇರುವ ಮಂದಿ ಸೇವಿಸಬೇಕು. ಪ್ರತಿನಿತ್ಯ ಆರೋಗ್ಯಕರ ಆಹಾರ ಸೇವನೆ ಬಹಳ ಮುಖ್ಯ ಪಾತ್ರ ವಹಿಸುತ್ತದೆ.

3. ಸಕ್ಕರೆಯ ಬಳಕೆಯನ್ನು ಕಡಿಮೆ ಮಾಡಿ. ಇಸ್ಟ್ರೋಜನ್‌ ಹಾಗೂ ಪ್ರೊಜೆಸ್ಟೆರಾನ್‌ ಹಾರ್ಮೋನಿನ ಮಟ್ಟ ಏರುಪೇರಾಗುವುದರಿಂದಲೇ ಮಹಿಳೆಯರಲ್ಲಿ ಬಾವನೆಯ ಏರಿಳಿತಗಳೂ ತೀವ್ರವಾಗುತ್ತದೆ. ಇದು ಸಿಹಿತಿಂಡಿಯನ್ನು ಹೆಚ್ಚು ಹೆಚ್ಚು ತಿನ್ನಬೇಕೆಂಬ ಬಯಕೆಯನ್ನು ಹೆಚ್ಚು ಮಾಡುತ್ತದೆ. ಆದ್ದರಿಂದ ಆದಷ್ಟೂ ಸಕ್ಕರೆಯಿಂದ ದೂರವಿರಿ.

4. ಎಂದಿಗೂ ಬೆಳಗಿನ ಉಪಹಾರವನ್ನು ಬಿಡಬೇಡಿ. ಹಾರ್ಮೋನಿನ ಏರುಪೇರು ಹಸಿವನ್ನೂ ಏರುಪೇರಾಗಿಸುತ್ತದೆ. ಆದರೆ, ಎಂದಿಗೂ ಬೆಳಗಿನ ಉಪಹಾರವನ್ನು ಬಿಡಬೇಡಿ. ಉಪಹಾರ ಬಿಟ್ಟರೆ ರಕ್ತದಲ್ಲಿನ ಸಕ್ಕರೆಯ ಮಟ್ಟವೂ ಏರುಪೇರಾಗುತ್ತದೆ.

ಇದನ್ನೂ ಓದಿ: Menstrual Hygiene day: ಮುಟ್ಟು ಕಳಂಕವಲ್ಲ, ಕೊಳಕೂ ಅಲ್ಲ; ಮೌಢ್ಯ ಬಿಟ್ಟು ಸ್ವಚ್ಛತೆಯತ್ತ ಗಮನಕೊಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Health Tips Kannada: ಕೂತಲ್ಲೇ ತೂಕಡಿಸುತ್ತೀರಾ? ಇದು ಒಳ್ಳೆಯದು!

ಇದ್ದಲ್ಲೇ ನಿದ್ದೆ ಮಾಡುವವರಿಗೆ (Health Tips Kannada) ಸುಖ ಹೆಚ್ಚು, ಚಿಂತೆ ಇಲ್ಲ ಎಂದೆಲ್ಲ ಹೇಳುವುದು ಸಾಮಾನ್ಯ. ಆದರೆ ಹೀಗೆ ಕೋಳಿಗಳಂತೆ ಕೂತಲ್ಲೇ ಚುಟುಕು ನಿದ್ದೆ ಮಾಡುವುದು ಒಳ್ಳೆಯದು ಎಂಬುದು ಗೊತ್ತೇ? ಎಲ್ಲೆಂದರಲ್ಲಿ ನಿದ್ದೆ ತೆಗೆಯುವವರನ್ನು ಕಂಡು ʻಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆʼ ಎಂದೆಲ್ಲಾ ಗಾದೆ ಸೃಷ್ಟಿಯಾಗಿರುವುದುಂಟು. ಹಾಗೆ ಕೂತಲ್ಲಿ ತೂಕಡಿಸುವವರೆಲ್ಲರೂ ಸುಖವಾಗಿದ್ದಾರೆ ಎಂದು ಅರ್ಥವೇ? ಚಿಂತೆ ಇಲ್ಲದವರೆಂದು ತಿಳಿಯಬಹುದೇ? ಸುಸ್ತಾದಾಗಲೂ ಸಣ್ಣದೊಂದು ನಿದ್ದೆ ಮಾಡಿದರೆ ಆರಾಮ ಎನಿಸುತ್ತದಲ್ಲ, ಏನಿದರ ಮರ್ಮ? ಇಲ್ಲಿದೆ ವಿವರ.

VISTARANEWS.COM


on

Health Tips Kannada sleepy is good
Koo

ಕೂತಲ್ಲೇ (Health Tips Kannada) ತೂಕಡಿಸುವವರು, ಬಸ್ಸಲ್ಲಿ, ರೈಲಲ್ಲಿ ಓಡಾಡುವಾಗ ಗೊರಕೆ ಹೊಡೆಯುವವರು, ಕಾರಲ್ಲಿ ಹಿಂದೆ ಕೂತಾಗ ನಿದ್ದೆ ಮಾಡುವವರು…ಹೀಗೆ ಎಲ್ಲೆಂದರಲ್ಲಿ ನಿದ್ದೆ ತೆಗೆಯುವವರನ್ನು ಕಂಡು ʻಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆʼ ಎಂದೆಲ್ಲಾ ಗಾದೆ ಸೃಷ್ಟಿಯಾಗಿರುವುದುಂಟು. ಹಾಗೆ ಕೂತಲ್ಲಿ ತೂಕಡಿಸುವವರೆಲ್ಲರೂ ಸುಖವಾಗಿದ್ದಾರೆ ಎಂದು ಅರ್ಥವೇ? ಚಿಂತೆ ಇಲ್ಲದವರೆಂದು ತಿಳಿಯಬಹುದೇ? ಸುಸ್ತಾದಾಗಲೂ ಸಣ್ಣದೊಂದು ನಿದ್ದೆ ಮಾಡಿದರೆ ಆರಾಮ ಎನಿಸುತ್ತದಲ್ಲ, ಏನಿದರ ಮರ್ಮ? ಹಾಗೆ ಹಗಲಿನಲ್ಲಿ ನಿದ್ದೆ ಮಾಡಿದರೆ ರಾತ್ರಿಯ ನಿದ್ದೆಗೆ ತೊಂದರೆ ಆಗುವುದಿಲ್ಲವೇ? ಇಂಥ ಹಲವು ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಚುಟುಕು ನಿದ್ದೆ

ಈ ಹೆಸರಿನಲ್ಲೇ ಸಾಮಾನ್ಯವಾಗಿ ಕರೆಸಿಕೊಳ್ಳುವ ಹಗಲಿನ ನಿದ್ದೆ ದೀರ್ಘವಾದರೆ ʻಪವರ್‌ ನ್ಯಾಪ್‌ʼ ಎನಿಸಿಕೊಳ್ಳುವುದಿಲ್ಲ. ತೀರಾ ಆಯಾಸವಾದಾಗ 20 ನಿಮಿಷ ನಿದ್ದೆ ಮಾಡಿದರೆ, ಎಚ್ಚರಾದಮೇಲೆ ದೇಹದ ಚೈತನ್ಯ ಹೆಚ್ಚಿದಂತೆ ಭಾಸವಾಗುತ್ತದೆ. ಇದು ಹೌದೇ ಎಂಬುದನ್ನು ತಿಳಿಯಲು ಯೂನಿವರ್ಸಿಟಿ ಕಾಲೇಜ್‌ ಲಂಡನ್‌ನ ವಿಜ್ಞಾನಿಗಳು ಅಧ್ಯಯನವೊಂದನ್ನು ನಡೆಸಿದ್ದರು. ಇದಕ್ಕಾಗಿ 40ರಿಂದ 69 ವರ್ಷ ವಯಸ್ಸಿನ ನಡುವಿನ ಸುಮಾರು ೩೫ ಸಾವಿರ ಮಂದಿಯನ್ನ್ ಅ‍ಧ್ಯಯನಕ್ಕೆ ಒಳಪಡಿಸಿದ್ದರು. ಇದರಲ್ಲಿ ಗಮನಿಸಿದಾಗ, ನಿಯಮಿತವಾಗಿ ಹಗಲಿಗೆ ಚುಟುಕು ನಿದ್ದೆ ಮಾಡುವವರ ಮೆದುಳು, ಪವರ್‌ ನ್ಯಾಪ್‌ ಮಾಡದವರ ಮೆದುಳಿಗಿಂತ ದೊಡ್ಡದಾಗಿತ್ತು. ಏನಿದರರ್ಥ?
ಮೆದುಳಿನ ಗಾತ್ರ ಕಿರಿದಾಗುವುದಕ್ಕೂ ಮೆದುಳಿಗೆ ವಯಸ್ಸಾಗುವುದಕ್ಕೂ ಸಂಬಂಧವಿದೆ. ಹಾಗಾಗಿ ನಿಯಮಿತವಾಗಿ ಚುಟುಕು ನಿದ್ದೆ ಮಾಡುವವರಲ್ಲಿ ಮೆದುಳು ಕುಗ್ಗಿಲ್ಲ ಎಂದರೆ, ಮೆದುಳಿಗೆ ಬೇಗ ವಯಸ್ಸಾಗುವುದನ್ನು ಪವರ್‌ ನ್ಯಾಪ್‌ ಮುಂದೂಡುತ್ತದೆ ಎನ್ನುತ್ತಾರೆ ಅಧ್ಯಯನಕಾರರು. ಅಂದರೆ, ಅಲ್‌ಜೈಮರ್ಸ್‌ನಂಥ ಮೆದುಳು ಸಂಬಂಧಿ ರೋಗಗಳು, ಹೃದಯದ ತೊಂದರೆಗಳನ್ನು ಮುಂತಾದವು ಬರುವುದನ್ನು ಮುಂದೂಡಲು ಸಾಧ್ಯವಾಗಬಹುದು ಎಂಬುದು ಅವರ ಅನಿಸಿಕೆ.

ಇದನ್ನೂ ಓದಿ: Health Tips Kannada: ಅನಾರೋಗ್ಯದ ಮೂಲ ಕೊಲೆಸ್ಟ್ರಾಲ್‌ ತಗ್ಗಿಸಬೇಕೆ? ಬೆಳಗ್ಗೆ ಈ ಪೇಯ ಕುಡಿಯಿರಿ

ಕೋಳಿ ನಿದ್ದೆಯ ಮ್ಯಾಜಿಕ್!

ಇಷ್ಟು ಮಾತ್ರವಲ್ಲ, 5ರಿಂದ 20 ನಿಮಿಷಗಳವರೆಗಿನ ಕೋಳಿ ನಿದ್ದೆಯಿಂದ ತಕ್ಷಣಕ್ಕೆ ಮೆದುಳಿನ ಕ್ಷಮತೆಯನ್ನು ಹೆಚ್ಚಿಸಬಹುದು. ತೀರಾ ಆಯಾಸವಾಗಿ ಕೆಲಸ ಮಾಡಲೇ ಆಗುತ್ತಿಲ್ಲ, ಓದಿದರೆ ತಲೆಗೇ ಹೋಗುತ್ತಿಲ್ಲ ಎಂಬಂಥ ಸಂದರ್ಭದಲ್ಲಿ, ಹತ್ತಿಪ್ಪತ್ತು ನಿಮಿಷಗಳ ಕೋಳಿ ನಿದ್ದೆ ನಿಜಕ್ಕೂ ಮ್ಯಾಜಿಕ್‌ ಮಾಡಬಲ್ಲದು. ನಿದ್ದೆ ಮುಗಿಸಿ ಎದ್ದ ಸುಮಾರು ಮೂರು ತಾಸುಗಳವರೆಗೆ ದೇಹ-ಮನಸ್ಸುಗಳು ಚೈತನ್ಯಪೂರ್ಣವಾಗಿ ಇರುತ್ತವೆ ಎಂಬುದು ಖಚಿತವಾಗಿದೆ. ಕ್ರೀಡಾಳುಗಳ ಸಹ ತಮ್ಮ ತರಬೇತಿಯ ನಡುವಿನಲ್ಲಿ ಚುಟುಕು ನಿದ್ದೆಗಾಗಿಯೇ ಸಮಯ ನಿಗದಿ ಮಾಡಿಕೊಂಡಿದ್ದರೆ, ದೇಹ ಬಳಲುವುದನ್ನು ತಪ್ಪಿಸಬಹುದು. ಹಲವು ಅಥ್ಲೀಟ್‌ಗಳು ಇದನ್ನು ತಮ್ಮ ಕ್ರೀಡಾ ಜೀವನದ ಭಾಗವೆಂದೇ ಭಾವಿಸುತ್ತಾರೆ.

ಇನ್ನಷ್ಟು ಲಾಭಗಳು

ದೇಹ-ಮನಸ್ಸು ಚೈತನ್ಯಪೂರ್ಣ ಆಗುವುದು ಮಾತ್ರವೇ ಅಲ್ಲದೆ ಹೆಚ್ಚಿನ ಲಾಭಗಳಿವೆ ಇದರಿಂದ. ಮೂಡ್‌ ಸುಧಾರಿಸಿ, ಮನಸ್ಸಿನ ಉಲ್ಲಾಸ ಹೆಚ್ಚಿಸುತ್ತದೆ. ನೆನಪಿನ ಶಕ್ತಿ ವೃದ್ಧಿಸುತ್ತದೆ, ಸೃಜನಶೀಲತೆ ವರ್ಧಿಸುತ್ತದೆ. ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿರುವಾಗ ಇಂಥ ನಿದ್ದೆಗಳು ದೇಹದ ದುರಸ್ತಿಗೆ ಗಣನೀಯ ಕೊಡುಗೆ ನೀಡುತ್ತವೆ.

ರಾತ್ರಿ ನಿದ್ದೆಗೆ ಬದಲಲ್ಲ

ಇದಕ್ಕಾಗಿ ರಾತ್ರಿಯೆಲ್ಲ ನಿದ್ದೆಗೆಟ್ಟು ಮೊಬೈಲು ಗೀರುತ್ತಾ, ಸಿನೆಮ ನೋಡುತ್ತಾ ಕೂತು, ಹಗಲಿಗೆ ನಿದ್ದೆ ಮಾಡಿ, ಮೆದುಳನ್ನು ಚುರುಕಾಗಿ ಇಟ್ಟುಕೊಳ್ಳುತ್ತೇವೆ ಎಂದು ಬೀಗುವುದಲ್ಲ. ಮಾತ್ರವಲ್ಲ, ಹಗಲಿನ ನಿದ್ದೆ ಚುಟುಕಾಗದೆ ತೀರಾ ದೀರ್ಘವಾದರೆ, ರಾತ್ರಿಯ ಪಾಲಿಗೆ ಕುಟುಕು ನಿದ್ದೆಯಾಗಬಹುದು. ಹಾಗಾಗಿ ಹಗಲಿಗೆ ಮಾಡುವ ನಿದ್ದೆಯಿಂದ ರಾತ್ರಿಯ ನಿದ್ದೆಯ ಗುಣಮಟ್ಟದಲ್ಲಿ ವ್ಯತ್ಯಾಸವಾಗುತ್ತಿದೆ ಎಂದಾದರೆ, ಹಗಲಿನ ನಿದ್ದೆಯ ಪ್ರಮಾಣವನ್ನು ಕಡಿಮೆ ಮಾಡಬೇಕು. ರಾತ್ರಿಯ ನಿದ್ರಾಹೀನತೆಗೆ ಚುಟುಕು ನಿದ್ದೆ ಮದ್ದೂ ಅಲ್ಲ. ರಾತ್ರಿಗೆ 7-8 ತಾಸಿನ ನಿದ್ದೆಯ ಅವಧಿಯಲ್ಲಿ ತೊಂದರೆಯಾದರೆ, ಅದನ್ನು ಪ್ರತ್ಯೇಕವಾಗಿಯೇ ಸರಿ ಪಡಿಸಿಕೊಳ್ಳುವುದು ಸೂಕ್ತ. ಹಗಲಿನ ಸುಸ್ತು, ಒತ್ತಡ, ಆಯಾಸಗಳ ನಡುವೆ ಕೆಲಸ ಮಾಡುವುದಕ್ಕೆ ತೊಂದರೆಯಾಗದಂತೆ ಮಾತ್ರವೇ ಕೋಳಿ ನಿದ್ದೆಯನ್ನು ಉಪಯೋಗಿಸಿಕೊಳ್ಳುವುದು ಜಾಣತನ.

ಎಷ್ಟು ಹೊತ್ತು?

ಮಧ್ಯಾಹ್ನದ 1 ಗಂಟೆಯಿಂದ 4 ಗಂಟೆಯ ನಡುವೆ, 20 ನಿಮಿಷಕ್ಕಿಂತ ಕಡಿಮೆ ಸಮಯದ ನಿದ್ದೆ ಎಲ್ಲ ರೀತಿಯಲ್ಲೂ ಒಳ್ಳೆಯ ಪರಿಣಾಮವನ್ನು ನೀಡುತ್ತದೆ. ಇನ್ನೂ ದೀರ್ಘ ಕಾಲ ನಿದ್ದೆ ಮಾಡಿದರೆ, ಎದ್ದಾಗ ಮಂಕು ಕವಿದಂತೆ, ದೇಹವೆಲ್ಲ ಜಡವಾದಂತೆ ಭಾಸವಾಗುತ್ತದೆ. ಇದಕ್ಕೆ ಕಾರಣ, ಗಾಢ ನಿದ್ದೆಯ ಆವರ್ತನವನ್ನು ದೇಹ ಪ್ರವೇಶಿಸುವುದು. ವ್ಯಾಯಾಮ ಅಥವಾ ಕ್ರೀಡಾ ಚಟುವಟಿಕೆಗಳಿಂದ ದೇಹಕ್ಕೆ ತೀವ್ರ ಆಯಾಸವಾದಾಗಲೂ ನಿದ್ದೆಯ ಅವಧಿ 30 ನಿಮಿಷ ಮೀರದಿದ್ದರೆ ಒಳ್ಳೆಯದು.

Continue Reading

ಆರೋಗ್ಯ

Ambulance Booking : ಬೆಂಗಳೂರಿನಲ್ಲಿ ಆ್ಯಪ್ ​ಮೂಲಕವೇ ಮಾಡಬಹುದು ಆಂಬ್ಯುಲೆನ್ಸ್​ ಬುಕಿಂಗ್

Ambulance Booking: ಈ ಸೇವೆಯನ್ನು ನೀಡವುದಕ್ಕಾಗಿ ಬಳಸಲಾದ ಆಕ್ಕೊದ ಅತ್ಯಾಧುನಿಕ ತಂತ್ರಜ್ಞಾನವು, ಜನರು ಆಂಬುಲೆನ್ಸ್‌ಅನ್ನು ಶೀಘ್ರವಾಗಿಯೂ ತಡೆರಹಿತವಾಗಿಯೂ ಪಡೆದುಕೊಳ್ಳಲು ನೆರವು ನೀಡುತ್ತದೆ. 3000 ವಾಹನಗಳ ಪ್ರಬಲ ಕಾರ್ಯಜಾಲದಿಂದ ಹತ್ತಿರದ ಆಂಬುಲೆನ್ಸ್ ಪಡೆದುಕೊಳ್ಳಲು ನೆರವಾಗುವ ಈ ಆ್ಯಪ್, ಕೇವಲ ಮೂರು ನಿಮಿಷಗಳೊಳಗೆ ಚಾಲಕರ ವಿವರಗಳನ್ನು ತಿಳಿಸುತ್ತದೆ. ಮೇಲಾಗಿ, ರಿಯಲ್ ಟೈಮ್​ ಟ್ರ್ಯಾಕಿಂಗ್​ನ ವಿಶಿಷ್ಟ ಅನುಕೂಲವನ್ನು ನೀಡಿದೆ.

VISTARANEWS.COM


on

ambulance-booking
Koo

ಬೆಂಗಳೂರು: ತಂತ್ರಜ್ಞಾನ ಆಧಾರಿತ ವಿಮಾ ಸಂಸ್ಥೆಯಾದ ಆಕ್ಕೊ (ACKO), ತನ್ನ ಅನೇಕ ಕೊಡುಗೆಗಳ ಪೋರ್ಟ್‌ಫೋಲಿಯೋಗೆ ತನ್ನ ಮೊಬೈಲ್ ಆ್ಯಪ್‌ನಲ್ಲಿ ಆಂಬುಲೆನ್ಸ್ ಬುಕ್ ಮಾಡುವ ಹೊಸ ಸೇವೆಯೊಂದನ್ನು ಸೇರಿಸಿದೆ. ತನ್ನ ಸೇವೆಗಳನ್ನು ವಿಮಾ ಪರಿಹಾರಗಳಾಚೆ ವಿಸ್ತರಿಸುವ ಮೂಲಕ ಎಲ್ಲಾ ಆರೋಗ್ಯ ಸುರಕ್ಷತಾ ಅಗತ್ಯಗಳಿಗೆ ಒಂದೇ ಸೂರಿನಡಿ ಸೇವೆ ಸಲ್ಲಿಸುವ ದೂರದೃಷ್ಟಿಯನ್ನು ಹೊಂದಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಲಭ್ಯವಿರುವ ಸೇವೆಯು ಮುಂಬರುವ ವಾರಗಳಲ್ಲಿ ಚೆನ್ನೈ, ಮುಂಬೈ, ಹೈದರಾಬಾದ್, ದೆಹಲಿ ಮತ್ತು ಕೋಲ್ಕತ್ತಾದಲ್ಲೂ ಸಿಗಲಿದೆ ಎಂದು ಕಂಪನಿ ಹೇಳಿದೆ.

ದೇಶದ ಮುಂಚೂಣಿ ತುರ್ತು ಸೇವಾ ಸಂಸ್ಥೆಗಳ ಪೈಕಿ ಒಂದಾದ Red.Healthನ ಸಹಭಾಗಿತ್ವದೊಂದಿಗೆ ಈ ಸೇವೆಯನ್ನು ಆರಂಭಿಸಲಾಗಿದ್ದು ವೈದ್ಯಕೀಯ ತುರ್ತುಸ್ಥಿತಿಗಳಲ್ಲಿ ಎಲ್ಲರಿಗೂ ನೆರವು ಒದಗಿಸುವ ಗುರಿ ಹೊಂದಿದೆ. ಈ ಸೇವೆಯನ್ನು ನೀಡವುದಕ್ಕಾಗಿ ಬಳಸಲಾದ ಆಕ್ಕೊದ ಅತ್ಯಾಧುನಿಕ ತಂತ್ರಜ್ಞಾನವು, ಜನರು ಆಂಬುಲೆನ್ಸ್‌ಅನ್ನು ಶೀಘ್ರವಾಗಿಯೂ ತಡೆರಹಿತವಾಗಿಯೂ ಪಡೆದುಕೊಳ್ಳಲು ನೆರವು ನೀಡುತ್ತದೆ. 3000 ವಾಹನಗಳ ಪ್ರಬಲ ಕಾರ್ಯಜಾಲದಿಂದ ಹತ್ತಿರದ ಆಂಬುಲೆನ್ಸ್ ಪಡೆದುಕೊಳ್ಳಲು ನೆರವಾಗುವ ಈ ಆ್ಯಪ್, ಕೇವಲ ಮೂರು ನಿಮಿಷಗಳೊಳಗೆ ಚಾಲಕರ ವಿವರಗಳನ್ನು ತಿಳಿಸುತ್ತದೆ. ಮೇಲಾಗಿ, ರಿಯಲ್ ಟೈಮ್​ ಟ್ರ್ಯಾಕಿಂಗ್​ನ ವಿಶಿಷ್ಟ ಅನುಕೂಲವನ್ನು ನೀಡಿದೆ. ಗ್ರಾಹಕರು ಆಂಬುಲೆನ್ಸ್‌ನ ನಿಖರ ಲೊಕೇಶನ್‌ಅನ್ನು ಮ್ಯಾಪ್ ಮೇಲೆ ನೋಡಿ ಅದರ ಆಗಮನದ ಅಂದಾಜು ಸಮಯವನ್ನು ಲೆಕ್ಕ ಹಾಕಬಹುದು. ಆತಂಕದ ಸಮಯದಲ್ಲಿ ಅವರಿಗೆ ಅದು ನೆಮ್ಮದಿ ಒದಗಿಸಬಹುದು. ತಮ್ಮ ಪ್ರೀತಿಪಾತ್ರರ ಯೋಗಕ್ಷೇಮದ ಮೇಲೆ ಗಮನ ಕೇಂದ್ರೀಕರಿಸಬಹುದಾಗಿದೆ. ಈ ಆವಿಷ್ಕಾರವು ತುರ್ತುಸ್ಥಿತಿಗಳಲ್ಲಿ ತಡೆಯಿಲ್ಲದ ಮತ್ತು ತೊಂದರೆಯಿಲ್ಲದ ಅನುಭವ ಒದಗಿಸುತ್ತದೆ.

ಆಕ್ಕೊದ ಸಮಗ್ರ ವೇದಿಕೆಯ ಮೇಲಿರುವ ಆಂಬುಲೆನ್ಸ್ ಬುಕಿಂಗ್ ಆರೋಗ್ಯ ಸೇವಾ ಪರಿಹಾರಗಳನ್ನು ಒದಗಿಸುವ ಮೂಲಕ ಬಳಕೆದಾರ-ಸುರಕ್ಷತೆ ಹಾಗೂ ಕ್ಷೇಮಾಭಿವೃದ್ಧಿಯನ್ನು ಖಾತರಿಪಡಿಸುತ್ತದೆ. ಈ ಕ್ರಮವು, ಹೊಸ ಯುಗದಲ್ಲಿ ತುರ್ತುಸ್ಥಿತಿ ಆರೋಗ್ಯ ಶುಶ್ರೂಷೆಯನ್ನು ಪರಿವರ್ತಿಸುವ ಗುರಿ ಹೊಂದಿದೆ.

ಆಕ್ಕೊದ ಆಂಬುಲೆನ್ಸ್ ಬುಕಿಂಗ್ ಸೇವೆಯ ವಿಶೇಷತೆಗಳು

● ವ್ಯಾಪಕ ಕಾರ್ಯಜಾಲ: ಈ ಯೋಜನೆಯಡಿ ಐದು ನಗರಗಳಾದ್ಯಂತ 3000 ಆಂಬುಲೆನ್ಸ್‌ಗಳು ಲಭ್ಯವಿರುತ್ತವೆ.
● ತಡೆರಹಿತ ಬುಕಿಂಗ್: ACKO ಆಪ್ ಮೂಲಕ ಫೋನ್‌ನಲ್ಲಿ ಕೆಲವೇ ಕ್ಲಿಕ್‌ಗಳೊಂದಿಗೆ ಆಂಬುಲೆನ್ಸ್ ಪಡೆದುಕೊಳ್ಳಬಹುದು
● ನೈಜ -ಸಮಯ ಟ್ರ್ಯಾಕಿಂಗ್: ಗಂಭೀರ ಪರಿಸ್ಥಿತಿಗಳಲ್ಲಿ ನೆಮ್ಮದಿನೀಡುವಂಥ ಆಂಬುಲೆನ್ಸ್‌ನ ಆಗಮನದ ನೈಜ ಸಮಯವನ್ನು ಟ್ರ್ಯಾಕ್ ಮಾಡಬಹುದು.
● ಬಳಕೆದಾರ-ಕೇಂದ್ರಿತ ವಿನ್ಯಾಸ: ಸುಲಭವಾಗಿ ಬಳಸುವುದಕ್ಕಾಗಿಯೇ ಆಕ್ಕೊ ಆಪ್ ವಿನ್ಯಾಸಗೊಂಡಿದೆ.

ಇದನ್ನೂ ಓದಿ: Narayana Murthy: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳಿಗೆ ಕತ್ತರಿ? ನಾರಾಯಣ ಮೂರ್ತಿ ಶಾಕಿಂಗ್‌ ಹೇಳಿಕೆ

ವೈದ್ಯಕೀಯ ತುರ್ತುಸ್ಥಿತಿಗಳು ತಕ್ಷಣ ಪ್ರತಿಕ್ರಿಯೆಯನ್ನು ಬೇಡುತ್ತದೆ. ಆದರೆ ಅದು ಎಲ್ಲರಿಗೂ ಪೂರಕವಾಗಿಲ್ಲ ಎಲ್ಲಕ್ಕಿಂತ ಮಿಗಿಲಾಗಿ, ಆಂಬುಲೆನ್ಸ್ ಸೇವೆಗಳು, ನಿರ್ಲಕ್ಷಿತ ಕ್ಷೇತ್ರವಾಗಿಯೇ ಉಳಿದು ಪರಿಸ್ಥಿತಿಗಳನ್ನು ಮೀರಲು ಜನರು ಬಹಳ ಕಷ್ಟಪಡಬೇಕಾಗುತ್ತದೆ. ತುರ್ತುಸ್ಥಿತಿಗಳಲ್ಲಿ ಗಂಭೀರ ನೆರವು ಒದಗಿಸಲು ತಂತ್ರಜ್ಞಾನವನ್ನು ವರ್ಧಿಸುವ ಮೂಲಕ ಆಕ್ಕೊ, ಬಳಕೆದಾರ ಸುರಕ್ಷತೆ ಹಾಗೂ ಸಂತೃಪ್ತಿಗೆ ತನ್ನ ಅಚಲ ಬದ್ಧತೆಯನ್ನು ಪ್ರದರ್ಶಿಸಿದೆ.

ಆಂಬುಲೆನ್ಸ್-ಬುಕಿಂಗ್ ಅಂಶವು, ನಿಜಜೀವನದ ಸಮಸ್ಯೆಗಳಿಗೆ ವಾಸ್ತವ ಪರಿಹಾರ ಒದಗಿಸುತ್ತದೆ.

Continue Reading

ವಿಜಯನಗರ

Vijayanagara News: ಹೊಸಪೇಟೆಯಲ್ಲಿ ಡೆಂಗ್ಯು ಜಾಗೃತಿ ಜಾಥಾ

Vijayanagara News: ರಾಷ್ಟ್ರೀಯ ಡೆಂಗ್ಯು ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ಸಹಯೋಗದಲ್ಲಿ ‘ಸಮುದಾಯದೊಂದಿಗೆ ಸೇರಿ ಡೆಂಗ್ಯು ನಿಯಂತ್ರಿಸೋಣ’ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ಹೊಸಪೇಟೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಅವರಣದಲ್ಲಿ ಜಾಗೃತಿ ಜಾಥಾ ಕಾರ್ಯಾಕ್ರಮಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ. ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

VISTARANEWS.COM


on

Dengue awareness rally in Hosapete
Koo

ಹೊಸಪೇಟೆ: ರಾಷ್ಟ್ರೀಯ ಡೆಂಗ್ಯು (Dengue) ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ಸಹಯೋಗದಲ್ಲಿ ‘ಸಮುದಾಯದೊಂದಿಗೆ ಸೇರಿ ಡೆಂಗ್ಯು ನಿಯಂತ್ರಿಸೋಣ’ ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಜಾಥಾ ಕಾರ್ಯಕ್ರಮ (Vijayanagara News) ಜರುಗಿತು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಅವರಣದಲ್ಲಿ ಜಾಗೃತಿ ಜಾಥಾ ಕಾರ್ಯಾಕ್ರಮಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಡೆಂಗ್ಯು ಜ್ವರವನ್ನು ಜನರು ನಿರ್ಲಕ್ಷಿಸದೆ ಸೂಕ್ತವಾದ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಡೆಂಗ್ಯು ಜ್ವರದ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಮಾರಣಾಂತಿಕವಾಗಬಹುದು. ಮುಂಗಾರು ಪೂರ್ವ, ಮುಂಗಾರು ಮತ್ತು ಮುಂಗಾರಿನ ನಂತರದ ಸಮಯದಲ್ಲಿ ಡೆಂಗ್ಯು ಸೊಳ್ಳೆಗಳ ಸಂತತಿಯು ತೀವ್ರ ಪ್ರಮಾಣದಲ್ಲಿದ್ದು, ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಶಂಕರನಾಯ್ಕ ಮಾತನಾಡಿ, ರೋಗಗಳು ಬಂದ ಮೇಲೆ ಚಿಕಿತ್ಸೆ ನೀಡುವ ಬದಲಿಗೆ ಬರುವ ಮುಂಚೆ ಅದರ ಮುಂಜಾಗ್ರತೆ ವಹಿಸುವುದು ಸೂಕ್ತ. ಜನರು ಮನೆಯಲ್ಲಿ ಶೇಖರಿಸಿದ ನೀರನ್ನು ಆಗಾಗ ಬದಲಾಯಿಸುತ್ತಿರಬೇಕು. ಈ ಬಗ್ಗೆ ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಪಂಚಾಯಿತಿ ಮಟ್ಟದ ಅಧಿಕಾರಿಗಳು ಹೆಚ್ಚಿನ ಕ್ರಮ ವಹಿಸಬೇಕು ಹಾಗೂ ಡೆಂಗ್ಯು ತಡೆಯಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ ದೊಡ್ಡಮನಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಮಲಮ್ಮ, ಬೆಳಗಾವಿಯ ಡಾ. ಸಿದ್ದಲಿಂಗಯ್ಯ, ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು, ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇದನ್ನೂ ಓದಿ: Virat Kohli: ಮಗಳು ವಮಿಕಾ ಕೂಡ ಕ್ರಿಕೆಟ್​ ಪ್ರಿಯೆ; ಬ್ಯಾಟಿಂಗ್​ ಅಚ್ಚುಮೆಚ್ಚು ಎಂದ ಕೊಹ್ಲಿ​

ಕರಪತ್ರ ವಿತರಣೆ

ಈಡೀಸ್ ಈಜಿಪ್ಟೆ ಸೊಳ್ಳೆಯ ಕಚ್ಚುವಿಕೆಯಿಂದ ಡೆಂಗ್ಯು ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಚ ನೀರಿನಲ್ಲಿ ಸಂತಾನಭಿವೃದ್ಧಿ ಮಾಡುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ. ಮೂರಕ್ಕಿಂತ ಹೆಚ್ಚು ದಿನಗಳಿಂದ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಂಡಲ್ಲಿ ತಕ್ಷಣವೇ ಆಶಾ, ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಿರಿ ಎನ್ನುವ ಮಾಹಿತಿಯ ಕರಪತ್ರಗಳನ್ನು ಇದೇ ವೇಳೆ ಸಾರ್ವಜನಿಕರಿಗೆ ವಿತರಿಸಲಾಯಿತು.

Continue Reading

ವಿದೇಶ

MDH, Everest Spices: ಸಿಂಗಾಪುರ, ಹಾಂಕಾಂಗ್‌ ಬಳಿಕ ಇದೀಗ ನೇಪಾಳದಲ್ಲಿಯೂ ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ

MDH, Everest Spices: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇದೀಗ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳನ್ನು ನೇಪಾಳ ನಿಷೇಧಿಸಿದೆ. ʼʼಈ ಮಸಲಾ ಪದಾರ್ಥಗಳಲ್ಲಿ ಹಾನಿಕಾರಕ ರಾಸಾಯನಿಕಗಳಿವೆ ಬಗ್ಗೆ ಸುದ್ದಿ ಬಂದ ನಂತರ ಒಂದು ವಾರದ ಹಿಂದೆ ಆಮದನ್ನು ನಿಷೇಧಿಸಲಾಗಿದೆ. ಜತೆಗೆ ನಾವು ಮಾರುಕಟ್ಟೆಯಲ್ಲಿ ಅದರ ಮಾರಾಟವನ್ನು ನಿಲ್ಲಿಸಿದ್ದೇವೆ” ಎಂದು ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯ ವಕ್ತಾರ ಮೋಹನ್ ಕೃಷ್ಣ ಮಹರ್ಜನ್ ತಿಳಿಸಿದ್ದಾರೆ.

VISTARANEWS.COM


on

MDH, Everest Spices
Koo

ಕಾಠ್ಮಂಡುಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇದೀಗ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನ (MDH, Everest Spices)ಗಳನ್ನು ನೇಪಾಳ ನಿಷೇಧಿಸಿದೆ. ಈ ಹಿಂದೆ ಇದೇ ಕಾರಣಕ್ಕೆ ಈ ಉತ್ಪನ್ನಗಳನ್ನು ಸಿಂಗಾಪುರ, ಹಾಂಕಾಂಗ್‌ ಮುಂತಾದೆಡೆ ಬ್ಯಾನ್‌ ಮಾಡಲಾಗಿತ್ತು. ಕ್ಯಾನ್ಸರ್‌ಗೆ ಕಾರಣವಾಗಬಹುದಾದ ಎಥಿಲೀನ್ ಆಕ್ಸೈಡ್ (Ethylene Oxide) ಅಂಶ ಇದೆ ಎನ್ನುವ ದೂರು ಕೇಳಿ ಬಂದ ಕಾರಣಕ್ಕೆ ಈ ಉತ್ಪನ್ನಗಳ ಆಮದು, ಮಾರಾಟ ಮತ್ತು ಬಳಕೆಯನ್ನು ನೇಪಾಳದಲ್ಲಿ ನಿಷೇಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಎರಡು ನಿರ್ದಿಷ್ಟ ಬ್ರ್ಯಾಂಡ್‌ಗಳ ಮಸಾಲೆಗಳಲ್ಲಿನ ರಾಸಾಯನಿಕಗಳ ಬಗ್ಗೆ ಪರೀಕ್ಷೆಗಳು ನಡೆಯುತ್ತಿವೆ. ಅಂತಿಮ ವರದಿ ಬರುವವರೆಗೆ ನಿಷೇಧವು ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ʼʼಈ ಮಸಲಾ ಪದಾರ್ಥಗಳಲ್ಲಿ ಹಾನಿಕಾರಕ ರಾಸಾಯನಿಕಗಳಿವೆ ಬಗ್ಗೆ ಸುದ್ದಿ ಬಂದ ನಂತರ ಒಂದು ವಾರದ ಹಿಂದೆ ಆಮದನ್ನು ನಿಷೇಧಿಸಲಾಗಿದೆ. ಜತೆಗೆ ನಾವು ಮಾರುಕಟ್ಟೆಯಲ್ಲಿ ಅದರ ಮಾರಾಟವನ್ನು ನಿಲ್ಲಿಸಿದ್ದೇವೆ” ಎಂದು ನೇಪಾಳದ ಆಹಾರ ತಂತ್ರಜ್ಞಾನ ಮತ್ತು ಗುಣಮಟ್ಟ ನಿಯಂತ್ರಣ ಇಲಾಖೆಯ ವಕ್ತಾರ ಮೋಹನ್ ಕೃಷ್ಣ ಮಹರ್ಜನ್ ತಿಳಿಸಿದ್ದಾರೆ.

“ಹಾಂಗ್‌ಕಾಂಗ್ ಮತ್ತು ಸಿಂಗಾಪುರ್ ಈಗಾಗಲೇ ಈ ಉತ್ಪನ್ನಗಳಿಗೆ ನಿಷೇಧ ಹೇರಿವೆ. ಅಮೆರಿಕ ಹಾಗೂ ಆಸ್ಟ್ರೇಲಿಯಾ ಕೂಡ ಈ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಹೀಗಾಗಿ ನಾವು ಕೂಡ ಪರೀಕ್ಷೆ ನಡೆಸಲು ಮುಂದಾಗಿದ್ದೇವೆʼʼ ಎಂದು ಅವರು ವಿವರಿಸಿದ್ದಾರೆ. ಈ ಮಧ್ಯೆ ರಫ್ತಾಗುವ ಭಾರತೀಯ ಮಸಾಲೆಗಳ ಸುರಕ್ಷತೆ ಮತ್ತು ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಸ್ಪೈಸ್ ಮಂಡಳಿ ಕ್ರಮ ಕೈಗೊಂಡಿದೆ. ಮಂಡಳಿ ಟೆಕ್ನೋ-ಸೈಂಟಿಫಿಕ್ ಸಮಿತಿಯ ಶಿಫಾರಸುಗಳನ್ನು ಜಾರಿಗೆ ತಂದಿದೆ. ಜತೆಗೆ ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸಿದೆ.

ಅಖಿಲ ಭಾರತ ಸಾಂಬಾರ ಪದಾರ್ಥಗಳ ರಫ್ತುದಾರರ ವೇದಿಕೆ ಮತ್ತು ಭಾರತೀಯ ಮಸಾಲೆ ಮತ್ತು ಆಹಾರ ಪದಾರ್ಥ ರಫ್ತುದಾರರ ಸಂಘದಂತಹ 130ಕ್ಕೂ ಹೆಚ್ಚು ಸಂಘಗಳೊಂದಿಗೆ ಭಾರತೀಯ ಸ್ಪೈಸ್ ಮಂಡಳಿ ಸಮಾಲೋಚನೆಯನ್ನೂ ನಡೆಸಿದೆ. ಮಂಡಳಿಯು ಎಲ್ಲ ರಫ್ತುದಾರರಿಗೆ ಎಥಿಲೀನ್ ಆಕ್ಸೈಡ್ ಬಳಕೆ ಬಗ್ಗೆ ಎಚ್ಚರಿಕೆ ನೀಡಿದೆ.

ಕೆಲವು ದಿನಗಳ ಹಿಂದೆ ಎಂಡಿಎಚ್‌, ಎವರೆಸ್ಟ್‌ ಮಸಾಲೆ ಸೇರಿದಂತೆ ಭಾರತದ ಒಟ್ಟು 527 ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲಿನ್‌ ಆಕ್ಸೈಡ್‌ ಹೆಚ್ಚಿನ ಪ್ರಮಾಣದಲ್ಲಿದೆ ಎಂಬುದನ್ನು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಬಹಿರಂಗಪಡಿಸಿದ್ದರು. ಹೀಗಾಗಿ 572 ಉತ್ಪನ್ನಗಳ ಪೈಕಿ 87 ಉತ್ಪನ್ನಗಳ ರಫ್ತನ್ನು ಈಗಾಗಲೇ ಗಡಿಯಲ್ಲಿ ರದ್ದುಗೊಳಿಸಲಾಗಿದೆ.

ಇನ್ನು ಅಪಾಯಕಾರಿ ರಾಸಾಯನಿಕಗಳು ಎಳ್ಳು ಬೀಜಗಳು, ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಇತರ ಆಹಾರ ಪದಾರ್ಥಗಳಲ್ಲೂ ಕಂಡು ಬಂದಿವೆ. ಇನ್ನು ಎಥಿಲೀನ್ ಆಕ್ಸೈಡ್ ಅನ್ನು ಮೂಲತಃ ವೈದ್ಯಕೀಯ ಸಾಧನಗಳನ್ನು ಸ್ವಚ್ಛಗೊಳಿಸ ಬಳಸುವ ಕ್ರಿಮಿನಾಶಕವಾಗಿ ಬಳಸಲಾಗುತ್ತದೆ. ಈ ರಾಸಾಯನಿಕ ದೇಹಕ್ಕೆ ಸೇರಿದರೆ ಲಿಂಫೋಮಾ ಮತ್ತು ಲ್ಯುಕೇಮಿಯಾ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳು ಬರು ಸಾಧ್ಯತೆ ಅತಿ ಹೆಚ್ಚಿದೆ.

ಇದನ್ನೂ ಓದಿ: MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಗುಣಮಟ್ಟ ತಪಾಸಣೆಗೆ ಸೂಚನೆ

Continue Reading
Advertisement
theft Case
ಕ್ರೈಂ17 mins ago

Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

7 books release programme on May 19 in Bengaluru
ಬೆಂಗಳೂರು25 mins ago

Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

Pension and NAREGA money credited to farmers loans CM Siddaramaiah slams bank
ರಾಜಕೀಯ30 mins ago

CM Siddaramaiah: ಪಿಂಚಣಿ, ನರೇಗಾ ಹಣ ರೈತರ ಸಾಲಕ್ಕೆ ಜಮೆ; ಬ್ಯಾಂಕ್‌ ವಿರುದ್ಧ ಸಿಎಂ ಗರಂ! ಕೂಡಲೇ ನಿಲ್ಲಿಸಲು ಸೂಚನೆ

Canne Film Festival 2024
ಪ್ರಮುಖ ಸುದ್ದಿ33 mins ago

Canne Film Festival 2024: ಕಾನ್‌ ಫಿಲ್ಮ್ ಫೆಸ್ಟಿವಲ್‌ನ ರೆಡ್‌ ಕಾರ್ಪೆಟ್‌ನಲ್ಲಿ ತಾರೆಯರ ಫ್ಯಾಷನ್ ಕಲರವ!

Konkani Book Release
ಕಲೆ/ಸಾಹಿತ್ಯ38 mins ago

Konkani Book Release: ಇಟಾಲಿಯನ್-ಬ್ರಿಟಿಷ್ ಲೇಖಕ ರಚಿಸಿರುವ ಜಿಎಸ್‌ಬಿ ಕೊಂಕಣಿ ಮಾರ್ಗದರ್ಶಿ ಕೃತಿ ಬಿಡುಗಡೆ

MLC Meeting
ರಾಜಕೀಯ46 mins ago

MLC Election: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ; ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಗೆಲುವಿಗೆ ರಣತಂತ್ರ

Arvind Kejriwal
ದೇಶ51 mins ago

Arvind Kejriwal: ಅಬಕಾರಿ ಕೇಸ್‌: ಕೇಜ್ರಿವಾಲ್‌ಗೆ ಬಿಗ್ ಶಾಕ್; ಇ.ಡಿ ಚಾರ್ಜ್‌ಶೀಟ್‌ನಲ್ಲಿ ಇವರೇ ಆರೋಪಿ!

HD Revanna case Hearing in Holenarasipura sexual assault case adjourned to Monday
ಹಾಸನ1 hour ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ; ರೇವಣ್ಣಗೆ ಜೈಲಾ? ಬೇಲಾ?

Kanguva Film Suriya-Bobby Deol's war scene with 10,000 people
ಕಾಲಿವುಡ್1 hour ago

Kanguva Film: 10,000 ಜನರನ್ನು ಒಳಗೊಂಡಿತ್ತು ʻಕಂಗುವʼ ಚಿತ್ರದ ಸೂರ್ಯ-ಬಾಬಿ ಡಿಯೋಲ್‌ರ ಈ ದೃಶ್ಯ!

karnataka weather Forecast
ಮಳೆ2 hours ago

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ12 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌